Connect with us

ದಿನದ ಸುದ್ದಿ

ಗ್ಯಾರಂಟಿಗಳಿಂದ ಆರ್ಥಿಕಾಭಿವೃದ್ದಿ ; ಯೋಜನೆ ಟೀಕೆ ಮಾಡುತ್ತಿದ್ದವರು ಅನುಷ್ಟಾನದ ಅಧ್ಯಯನ ಮಾಡುವಂತಾಗಿದೆ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕಾಭಿವೃದ್ದಿಯಾಗುತ್ತಿದ್ದು ಯೋಜನೆಗಳ ಅನುಷ್ಟಾನಕ್ಕೆ ಅಪಸ್ವರವೆತ್ತಿದವರು ರಾಜ್ಯಕ್ಕೆ ಬಂದು ಗ್ಯಾರಂಟಿ ಯೋಜನೆಗಳ ಅಧ್ಯಯನ ಮಾಡುವಂತಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಇಂಧನ, ಸಾರಿಗೆ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳಿಂದ ಏರ್ಪಡಿಸಲಾದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕಚೇರಿ ಉದ್ಘಾಟನೆ ನೆರವೇರಿಸಿ ಸಮಾರಂಭದಲ್ಲಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಕಷ್ಟ, ಇದರಿಂದ ಆರ್ಥಿಕ ನಷ್ಟವಾಗಿ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿದ್ದರು. ಆದರೆ ಯೋಜನೆಗಳನ್ನು ಕಳೆದೆರಡು ವರ್ಷಗಳಿಂದ ಯಶಸ್ವಿಯಾಗಿ ಅನುಷ್ಟಾನ ಮಾಡಲಾಗಿದೆ. ಯಶಸ್ವಿಯಾದ ಯೋಜನೆಗಳ ಕುರಿತು ವಿವಿಧ ರಾಜ್ಯಗಳು ಕರ್ನಾಟಕಕ್ಕೆ ಬಂದು ಅಧ್ಯಯನ ಮಾಡುವಂತಾಗಿದೆ. ಪ್ರತಿ ಕುಟುಂಬಕ್ಕೆ 4 ರಿಂದ 6 ಸಾವಿರದಷ್ಟು ಯೋಜನೆಗಳ ಲಾಭ ಸಿಗುತ್ತಿರುವುದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದ್ದು ಪರೋಕ್ಷವಾಗಿ ಆರ್ಥಿಕಾಭಿವೃದ್ದಿಯಾಗಿ ಜೀವನ ನಿರ್ವಹಣಾ ಮಟ್ಟ ಹೆಚ್ಚಳವಾಗಿದೆ ಎಂದರು.

ಪಂಚ ಗ್ಯಾರಂಟಿ ನೇರವಾಗಿ ಜನರಿಗೆ ತಲುಪುವುದರಿಂದ ಇನ್ನೂ ಪಾರದರ್ಶಕವಾಗಿ ಯೋಜನೆಗಳನ್ನು ಅನುಷ್ಟಾನ ಮಾಡಿ ಜನರಿಗೆ ತಲುಪಿಸುವ ಕೆಲಸವನ್ನು ಸಮಿತಿಯಿಂದ ಮಾಡಬೇಕಾಗಿದೆ. ಆರ್ಥಿಕ ಸೌಲಭ್ಯ ನೀಡುವ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳನ್ನು ಪ್ರತಿ ತಿಂಗಳು 1 ರಿಂದ 5 ನೇ ತಾರೀಖಿನೊಳಗೆ ತಲುಪಿಸುವಂತೆ ಮಾಡಬೇಕೆಂದರು.

ಶಕ್ತಿ ಯೋಜನೆಯಡಿ ದಾವಣಗೆರೆ ಕೆಎಸ್‍ಆರ್‍ಟಿಸಿಗೆ ರೂ.213.48 ಕೋಟಿ, ಅನ್ನಭಾಗ್ಯ ಯೋಜನೆಯಡಿ 3.44 ಲಕ್ಷ ಕಾರ್ಡ್‍ದಾರರು ಹಾಗೂ 12.42 ಲಕ್ಷ ಫಲಾನುಭವಿಗಳಿಗೆ ರೂ.346 ಕೋಟಿ, ಗೃಹಜ್ಯೋತಿ ಯೋಜನೆಯಡಿ 5.03 ಲಕ್ಷ ಆರ್.ಆರ್.ಸಂಖ್ಯೆ ಹೊಂದಿದ ಕುಟುಂಬಗಳಿಗೆ ರೂ.409 ಕೋಟಿ ವಿದ್ಯುತ್ ಸಬ್ಸಿಡಿ, ಗೃಹಲಕ್ಷ್ಮಿಯಡಿ 3.6 ಲಕ್ಷ ಯಜಮಾನಿಯರಿಗೆ ರೂ.1255 ಕೋಟಿ ಮತ್ತು ಯುವನಿಧಿಯಡಿ 9094 ವಿದ್ಯಾರ್ಥಿಗಳಿಗೆ ರೂ.13 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ನೂತನ ಕಚೇರಿ ಉದ್ಘಾಟನೆಯಲ್ಲಿ ಭಾಗಿಯಾಗಿ ಸಮಾರಂಭದಲ್ಲಿ ಮಾತನಾಡಿ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಕಳೆದೆರಡು ವರ್ಷಗಳಲ್ಲಿ ರೂ.82 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರ ಯೋಜನೆಗಳನ್ನು ಬರೀ ಚುನಾವಣೆಗಾಗಿ ರೂಪಿಸಿಲ್ಲ, ಜನರ ಕಲ್ಯಾಣಕ್ಕಾಗಿ ಅನುಷ್ಟಾನ ಮಾಡುತ್ತಿದೆ.

ಉಳುವವನೇ ಭೂ ಒಡೆಯ, ಪದವೀಧರರಿಗೆ ಸ್ಟೈಫಂಡ್, ಸಿಇಟಿ ಮೂಲಕ ಉನ್ನತ ವ್ಯಾಸಂಗಕ್ಕೆ ಆಯ್ಕೆ, ರೈತರಿಗೆ ಉಚಿತ ವಿದ್ಯುತ್, ಬೆಂಗಳೂರು ಐಟಿ, ಬಿಟಿ ನಗರವನ್ನಾಗಿ ಅಭಿವೃದ್ದಿ, ಕಳೆದ ಸರ್ಕಾರದ ಅವಧಿಯಲ್ಲಿ ನೀಡಿದ 165 ಭರವಸೆಗಳಲ್ಲಿ ಎಲ್ಲವನ್ನು ಈಡೇರಿಸಲಾಗಿದೆ. ಈಗ ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನ ಮಾಡಿದ್ದು ಈ ಯೋಜನೆಗಳು ಮನೆ ಮಾತಾಗಿವೆ ಎಂದರು.

ಹಿಂದೆ ಗುಜರಾತ್ ಮಾದರಿ ಎಂದು ಹೇಳಲಾಗುತ್ತಿತ್ತು, ಆದರೆ ಈಗ ಕರ್ನಾಟಕ ಮಾದರಿ ಎಂದು ಹೇಳುವಂತಾಗಿದ್ದು ಅನೇಕ ರಾಜ್ಯಗಳು ನಮ್ಮ ಪಂಚ ಗ್ಯಾರಂಟಿಗಳನ್ನು ಅನುಕರಣೆ ಮಾಡುವ ನಿಟ್ಟಿನಲ್ಲಿ ಸಾಗಿವೆ. ಪಂಚ ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 450 ಕೋಟಿಯಷ್ಟು ಮಹಿಳೆಯರು ಎಲ್ಲಾ ಜಿಲ್ಲೆಗಳಿಂದ ಪ್ರಯಾಣಿಸಿದ್ದು ಇದಕ್ಕಾಗಿ ರೂ.11188 ಕೋಟಿ ವೆಚ್ಚ ಭರಿಸಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಕಾರ್ಡ್‍ದಾರರಿಗೆ ರೂ.11821 ಕೋಟಿ, ಗೃಹಜ್ಯೋತಿಯಡಿ 1.63 ಕೋಟಿ ಕುಟುಂಬಗಳಿಗೆ ರೂ.14950 ಕೋಟಿ, ಗೃಹಲಕ್ಷ್ಮಿಯಡಿ 1.22 ಕೋಟಿ ಯಜಮಾನಿಯರಿಗೆ ರೂ.42552 ಕೋಟಿ ಮತ್ತು ಯುವನಿಧಿಯಡಿ 2.74 ಲಕ್ಷ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ರೂ.326.95 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದ್ದು ಪಂಚ ಗ್ಯಾರಂಟಿ ಯೋಜನೆಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ರೂ.82000 ಕೋಟಿಯಷ್ಟು ವೆಚ್ಚ ಮಾಡಲಾಗಿದೆ. ಇದರಿಂದ ಮಹಿಳೆಯರ ಆದಾಯ ಹೆಚ್ಚಳವಾಗಿ ಕೊಡು, ಕೊಳ್ಳುವಿಕೆ ಸಾಮಥ್ರ್ಯ ಹೆಚ್ಚಿದೆ. ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದರು.

ಮಾಯಕೊಂಡ ಕ್ಷೇತ್ರದ ಶಾಸಕ ಕೆ,ಎಸ್.ಬಸವಂತಪ್ಪ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಜೆಗಳ ಹಿತಕ್ಕಾಗಿ ಜಾರಿಗೊಳಿಸಲಾಗಿದ್ದು, ನಿರಂತರ 2 ವರ್ಷಗಳಿಂದ ಈ ಯೋಜನೆಯ ನೀಡುತ್ತಾ ಬಂದಿದೆ. ಇಂತಹ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವ ಸಲುವಾಗಿ ಗ್ಯಾರಂಟಿ ಯೋಜನಾ ಸಮಿತಿ ಸ್ಥಾಪಿಸಲಾಗಿದೆ. ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯಡಿ ನೀಡುವ ಹಣವನ್ನು ಯಾವುದೇ ಬ್ಯಾಂಕ್‍ಗಳು ಇತರೆ ಸಾಲಗಳಿಗೆ ಜಮಾ ಮಾಡದಂತೆ ಜಿಲ್ಲಾಧಿಕಾರಿಗಳಿಗೆ ಕ್ರಮ ವಹಿಸಬೇಕೆಂದರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿ, ಗ್ಯಾರಂಟಿ ಅನುಷ್ಠಾನ ಸಮತಿಯಿಂದ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಯೋಜನೆಗಳನ್ನು ತಲುಪಿಸುವ ಕಾರ್ಯ ಮಾಡಲಾಗುತ್ತದೆ. ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಪ್ರತಿ ಕುಟುಂಬವೂ ಪ್ರೀತಿ, ಸಹಬಾಳ್ವೆ, ಸಾಮರಸ್ಯದಿಂದ ನೆಮ್ಮದಿಯಾಗಿ ಜೀವನ ಸಾಗಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ. ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ. ಸಿಇಓ ಸುರೇಶ್ ಬಿ.ಇಟ್ನಾಳ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್, ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವನಾಯ್ಕ, ಮಾಜಿ ಮೇಯರ್ ಚಮನ್ ಸಾಬ್, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending