ಲೈಫ್ ಸ್ಟೈಲ್
‘ಗುಲ್ಕನ್’ ಮಹಿಮೆ ಅಪಾರ..!

ಗುಲ್ಕನ್ ಇದು ಗುಲಾಬಿ ಹೂವಿನ ಎಸಳುಗಳಿಂದ ಮಾಡಿದ ಒಂದು ಆರೋಗ್ಯದಾಯಕ ಜಾಮ್. ಗುಲ್ಕನ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯದಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು.ಇದರಲ್ಲಿ ವಿವಿಧ ಬಗ್ಗೆಯ ಗುಲ್ಕನ್ ಇದೇ.
ಗುಲ್ಕನ್ ಅನ್ನು ಹಲವು ರೀತಿಯಲ್ಲಿ ಬಳಸಬಹುದು
- ಕೆಲವರು ಇದನ್ನು ಬಾಯಿಯ ಅಲ್ಸರ್ ನಿವಾರಿಸಲು ಬಳಸುತ್ತಾರೆ.
- ರಕ್ತ ಶುದ್ಧಿ ಮಾಡಿ, ಚರ್ಮದಲ್ಲಿ ಸುಕ್ಕು, ಮೊಡವೆ ಮತ್ತು ಕಪ್ಪು ಕಲೆಗಳು ಮೂಡದ ಹಾಗೆ ನೋಡಿಕೊಳ್ಳುತ್ತೆ.
- ಆರಿಸಿದ ತಾಜಾ ಗುಲಾಬಿ ಎಲೆಗಳನ್ನು ತೆಗೆದುಕೊಂಡು ಅದಕ್ಕೆ ಬೆಲ್ಲ ಇಲ್ಲವೇ ಸಕ್ಕರೆ ಸೇರಿಸುತ್ತಾರೆ. ಗುಲ್ಕನ್ ತಯಾರಿಕೆಯಲ್ಲಿ ಶುಂಠಿಯನ್ನು ಬಳಸುತ್ತಾರೆ.
- ಇಂತಹ ಗುಲ್ಕನ್ ಅನ್ನು ಪ್ರತಿನಿತ್ಯ ಸೇವಿಸಿದರೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ದೂರವಿರಬಹುದು. ಜೊತೆಗೆ ದೇಹವನ್ನು ತಂಪಾಗಿಸುತ್ತದೆ.
- ಇದೊಂದು ಒಳ್ಳೆ ಆಂಟಿಆಕ್ಸಿಡೆಂಟ್. ಹಾಗಾಗಿ ನಮ್ಮ ದೇಹದಲ್ಲಿ ಶಕ್ತಿ ಉತ್ಪತ್ತಿ ಮಾಡೋಕೆ ಸಹಾಯ ಮಾಡುತ್ತದೆ.
- ಗುಲ್ಕನ್ ಶೀತ ಪದಾರ್ಥ, ಆದುದರಿಂದ ಇದು ಕೈಕಾಲು ಉರಿ,ನಿಶ್ಯಕ್ತಿ, ಇತರೆ ನೋವನ್ನು ಕಮ್ಮಿ ಮಾಡುತ್ತೆ.
- ಮಹಿಳೆಯರಿಗೆ ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆನೋವನ್ನು ಶಮನ ಮಾಡುತ್ತದೆ. ಗರ್ಭಿಣಿಯರು ಗುಲ್ಕನ್ ಸೇವಿಸಿದರೆ ಹೆಚ್ಚು ಉತ್ತಮ.
- ಗುಲ್ಕನ್ ದೇಹದ ರಕ್ತವನ್ನು ಶುದ್ದೀಕರಿಸುತ್ತದೆ. ನಿಶಕ್ತಿಯನ್ನು ದೂರ ಮಾಡುವ ಗುಣ ಹೊಂದಿರುವ ಗುಲ್ಕನ್ ದೇಹದಲ್ಲಿನ ಅನಗತ್ಯ ಅಂಶಗಳನ್ನು ಹೊರಹಾಕುತ್ತದೆ.
- ಬೇಸಿಗೆ ಕಾಲದಲ್ಲಿ ಗುಲ್ಕನ್ ಅನ್ನು ಹೆಚ್ಚಾಗಿ ಸೇವಿಸುವುದರಿಂದ ಉಷ್ಣಾಘಾತ ಮತ್ತು ಮೂಗಿನಲ್ಲಿ ರಕ್ತ ಬರುವುದನ್ನು ತಡೆಗಟ್ಟುತ್ತದೆ.
- ಫೈಬರ್ ಅಂಶ ಹೆಚ್ಚು ಪ್ರಮಾಣದಲ್ಲಿ ಹೊಂದಿರುವ ಗುಲ್ಕನ್ ಅನ್ನು ಮಕ್ಕಳಿಗೆ ಪ್ರತಿನಿತ್ಯ ನೀಡುವುದರಿಂದ ಮಲಬದ್ಧತೆ ದೂರಾಗುತ್ತದೆ.
- ನರಮಂಡಲಾನ ಒಳ್ಳೆಯ ಸ್ಥಿತೀಲಿಟ್ಟು ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.
- ಮನೆಯಿಂದ ಹೊರಗೆ ಹೋಗುವ ಮುಂಚೆ 2 ಚಮಚ ಗುಲ್ಕನ್ ತಿಂದು ಹೊರಟರೆ ಸನ್ ಸ್ಟ್ರೋಕ್ ಆಗೋದನ್ನೂ ತಪ್ಪಿಸಬಹುದು.
ಒಟ್ಟಿನಲ್ಲಿ ದೇಹವನ್ನು ತಂಪಾಗಿಡುವ ಗುಲ್ಕನ್ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉಪಯೋಗವಾಗಿದೆ.
ಬೇಕಾಗುವ ಸಾಮಾಗ್ರಿಗಳು: 500 ಗ್ರಾಂ ಒಣಗಿದ ಗುಲಾಬಿಯ ಪಕಳೆಗಳು 500 ಗ್ರಾಂ ನಟ್ಸ್, ಅಂಜೂರ (ಫಿಗ್), ಒಣಗಿದ ಕರ್ಜೂರ * 500 ಗ್ರಾಂ ಸಕ್ಕರೆ ಮತ್ತು 1/2 ಲೋಟ ನೀರು (100ml)
ತಯಾರಿಸುವ ವಿಧಾನ
- ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಸಕ್ಕರೆ ನೀರು ಗಟ್ಟಿಯಾಗುವರೆಗೆ ಕುದಿಸಬೇಕು.
- ನಂತರ ಈ ಸಕ್ಕರೆ ಪಾನಕವನ್ನು ತಣ್ಣಗಾಗಲು ಬಿಡಬೇಕು. ನಂತರ ಉಳಿದ ಸಾಮಾಗ್ರಿಗಳನ್ನು ಅದರಲ್ಲಿ ಹಾಕಿ ಮಿಶ್ರ ಮಾಡಬೇಕು.
- ಈ ಗುಲ್ಕನ್ ತುಂಬಾ ಗಟ್ಟಿಯಾಗುವುದನ್ನು ತಡೆಯಲು ಫ್ರಿಜ್ನಲ್ಲಿ ಇಡಬಾರದು. ಇದನ್ನು ಡಬ್ಬಿಯಲ್ಲಿ ಶೇಖರಿಸಿಟ್ಟುಕೊಳ್ಳಬೇಕು.
ಪ್ರತಿದಿನ ಹಾಗೇ ತಿನ್ನಬಹುದು, ದೋಸೆ ,ಚಪಾತಿ,ರೋಟಿ, ಮುಖ್ಯವಾಗಿ ಬ್ರೆಡ್, ಬನ್ ಗಳಿಗೆ ಬೆಣ್ಣೆ ಗುಲ್ಕನ್ ಸೇರಿಸಿ ಜೊತೆ ತಿನ್ನಬಹುದು ಅಥವಾ ಹಾಲಿನಲ್ಲಿ ಮಿಶ್ರ ಮಾಡಿ ಕುಡಿಯಬಹುದು.
ಸೌಮ್ಯ ಅಶೋಕ್
ಬೆಂಗಳೂರು

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ3 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ17 hours ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ3 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ2 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ