ರಾಜಕೀಯ
ಹೆಚ್.ಬಿ. ಮಂಜಪ್ಪ ಮತ್ತು ಲೋಕಸಭಾ ಚುನಾವಣೆ
ಮಾನ್ಯರೆ,
2019 ರ ಲೋಕಸಭಾ ಚುನಾವಣೆ ಇದು ಗ್ರಾಮ ಪಂಚಾಯತಿ ಚುನಾವಣೆಯಲ್ಲ, ರಾಷ್ಟ್ರೀಯ ಹಿತಾಸಕ್ತಿಯ ಮೇಲೆ ನಡೆಯುವ ಈ ಚುನಾವಣೆ ಭಾರತದ ಅಭಿವೃದ್ಧಿಯ ದೃಷ್ಟಿಯಲ್ಲಿ ಮಹತ್ತರವಾದ ಚುನಾವಣೆ ಅನ್ನುವಂತದ್ದು.
ಈ ಚುನಾವಣೆಯಲ್ಲಿ ಕುರುಬರಿಗೆ ಟಿಕೆಟ್ ಕೊಟ್ಟಿದ್ದಾರೆ,ಲಿಗಾಯತರಿಗೆ ಟಿಕೆಟ್ ಕೊಟ್ಟಿದ್ದಾರೆ ಅನ್ನೋದು ಮುಖ್ಯ ಅಲ್ಲ, ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಅಡಿಯಲ್ಲಿ ಇವತ್ತು ಅಭ್ಯರ್ಥಿಗಳನ್ನ ಆಯ್ಕೆ ಮಾಡಿದ್ದು ಬೇರ ಬೇರೆ ಕ್ಷೇತ್ತಗಳಲ್ಲಿ ಲಿಂಗಾಯತರಿಗೆ,ನಾಯಕರಿಗೆ,
ದಲಿತರಿಗೆ ಬೇರೆ ಬೇರೆ ಸಮುದಾಯದವರಿಗೆ ಅವಕಾಶ ಸಿಕ್ಕಿರುವಂತದ್ದು ನಮಗೆಲ್ಲಾ ತಿಳಿದಿರುವಂತದ್ದು..
ಜಾತಿ ವ್ಯವಸ್ಥೆ ಅದೊಂದು ಭಾರತೀಯ ಸಮಾಜಕ್ಕೆ ಅಂಟಿದ ಶಾಪ
- ಹೆಚ್ ಬಿ ಮಂಜಪ್ಟ ನಮ್ಮ ಪಕ್ಷದ ಅಭ್ಯರ್ಥಿಯೇನು ಕುರುಬರಲ್ಲೇ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟಿದವರೇನಲ್ಲ, ಜಾತಿ ವ್ಯವಸ್ಥೆ ಇದೆ ಅನಿವಾರ್ಯವಾಗಿ ಒಂದು ಜಾತಿಯಲ್ಲಿ ಹುಟ್ಟಿದ್ದಾರೆ.
- ಹೆಚ್ ಬಿ ಮಂಜಪ್ಪ ಒಳ್ಳೆಯ ಮಾತುಗಾರ,ಪ್ರಗತಿ ಪರವಾಗಿ ಚಿಂತನೆ ಮಾಡುವಂತ ನಾಯಕ ದೇಶದ ರೈತರ ಉಳಿವಿಗಾಗಿ,ಅಭಿವೃದ್ಧಿಗಾಗಿ ಇಂತವರ ಆಯ್ಕೆ ಸೂಕ್ತವಾಗಿರುವಂತದ್ದು.ಬಿಜೆಪಿ ಅಭ್ಯರ್ಥಿ ಮಾನ್ಯ ಸಿದ್ದೇಶ್ ರವರ ಚಿಂತನೆ,ವೈಫಲ್ಯಗಳನ್ನ ನಾವು ಜನರಿಗೆ ತಿಳಿಸಬೇಕಾಗುತ್ತದೆ.
- ಬಿಜೆಪಿ ಹೇಳಿ ಕೇಳಿ ವೈದಿಕರ ಪಕ್ಷ, ಸಂವಿಧಾನವನ್ನ ನಾಶ ಮಾಡ್ಲಿಕ್ಕಾಗೀನೆ ಹುಟ್ಟಿದಂತ ಪಕ್ಷ, ಇವತ್ತು ಸಂವಿಧಾನದ ನಾಶ ಅಂದರೆ ಭಾರತದ ಪರಂಪರೆಯ ನಾಶ, ಭಾರತದ ಸಂಸ್ಕೃತಿಯ ನಾಶ,ಲಿಂಗಾಯತರೂ ಸೇರಿದಂತೆ ಎಲ್ಲಾ ಹಿಂದುಳಿದ ದಲಿತ ಅಲ್ಪಸಂಖ್ಯಾತರ ನಾಶ, ಭಾರತದ ದ್ರಾವಿಡ ಸಂಸ್ಕೃತಿಯ ನಾಶ ಅನ್ನುವಂತದ್ದು.
- ಬಿಜೆಪಿಯಲ್ಲಿ ಯಾವ ಲಿಂಗಾಯತರಿಗೂ ಗೌರವ ಇಲ್ಲ,ಕರ್ನಾಟಕದಲ್ಲಿ ಬಿಜೆಪಿಯ ಬಲ ಅಂದರೇ ಲಿಂಗಾಯತರು,ಆರು ಜನ ಸಂಸದರಿದ್ದರೂ ಕೂಡ ಒಬ್ಬರಿಗೂ ಮಂತ್ರಿ ಸ್ಥಾನ ಇಲ್ಲ, ಸ್ವತಃ ಮಾನ್ಯ ಸಿದ್ದೇಶ್ ರವರಿಗೇ ಮಂತ್ರಿ ಸ್ಥಾನ ಕೊಟ್ಟು ಸಡನ್ ಆಗಿ ಕಸಿದ್ಕೊಂಡಂತವರು ಕಾರಣ ಮಾನ್ಯ ಸಿದ್ದೇಶ್ ವೈದಿಕ ಅಲ್ಲ, ಒಬ್ಬ ಶೂದ್ರ ಆ ಕಾರಣಕ್ಕೆ ಅವರಿಗೆ ಬಿಜೆಪಿ ಅವಮಾನಿಸಿದ್ದು.
- ಸ್ವತಃ ಬಿಜೆಪಿಯಲ್ಲಿ ಯಡಿಯೂರಪ್ಪನವರಿಗೇ ಗೌರವ ಇಲ್ಲ, ಯಡಿಯೂರಪ್ಪ ಲಿಂಗಾಯತ ನಾಯಕನಾಗಿದ್ದಕ್ಕೇ ಬಿಜೆಪಿಯಲ್ಲಿ ಮುಖ್ಯಮಂತ್ರಿಯಿಂದ ಕೆಳಗಿಳಿಸಿದ್ದು,ಮತ್ತೆ ಮುಖ್ಯಮಂತ್ರಿಯಾಗದಂತೆ ತಂತ್ರಗಳನ್ನ ರೂಪಿಸಿದ್ದು. ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದಾರೆ ಅನ್ನಬಹುದು, ಅದಕ್ಕಿಂತ ಭ್ರಷ್ಟಾಚಾರಿಗಳು ಬಿಜೆಪಿಯಲ್ಲಿ ಇದ್ದಾರೆ ಅನ್ನುವಂತದ್ದು.
- ನಮಗೆ ಸಿದ್ದೇಶ್ ಅಭ್ಯರ್ಥಿ ಇರಬಹುದು, ನಮ್ಮ ಮತ ಸಿದ್ದೇಶ್ ವಿರುದ್ಧ ಅಲ್ಲ ಮಾನ್ಯ ನರೇಂದ್ರ ಮೋದಿಯ ವಿರುದ್ಧ,ಬಿಜೆಪಿಯ ವಿರುದ್ಧ ಸಂವಿಧಾನ ನಾಶ ಮಾಡುವವರ ವಿರುದ್ಧ,ಭಾರತೀಯರ ಸಾಂಸ್ಕೃತಿಕ ಬದುಕನ್ನ ನಾಶ ಮಾಡುವವರ ವಿರುದ್ಧ.
- ಸಿದ್ಧರಾಮಯ್ಯ ಕುರುಬ ಸಮುದಾಯದಲ್ಲಿ ಹುಟ್ಟಿದಂತವರು ಇವತ್ತು ಕೇವಲ ಕುರುಬರಿಗೆ ರೈತರ ಸಾಲ ಮನ್ನಾ ಮಾಡ್ಲಿಲ್ಲ,ಕೇವಲ ಕುರುಬರಿಗೆ ತಿಂಗಳಿಗೆ 30 ಕೆಜಿ ಅಕ್ಕಿ ಕೊಡ್ಲಿಲ್ಲ,ಕೇವಲ ಕುರುಬರ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ಕೊಡ್ಲಿಲ್ಲ,ಹಾಲು ಮೊಟ್ಟೆ,ಬಟ್ಟೆ ಪುಸ್ತಕ ಕೊಡ್ಲಿಲ್ಲ. ಮಾನ್ಯ ಸಿದ್ಧರಾಮಯ್ಯ ಬಸವ ಜಯಂತಿಯಂದು ನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಬಸವಣ್ಣ ಕಂಡ ಸಮ ಸಮಾಜದ ಉಳಿವಿಗಾಗಿ ಕಾರ್ಯಕ್ರಮ ರೂಪಿಸಿದಂತವರು, ನಾಡಿನದಲಿತರ,ಹಿಂದುಳಿದವರ(ಲಿಂಗಾಯತರೂ ಹಿಂದುಳಿದವರೆ,3rd B ) ಅಲ್ಪಸಂಖ್ಯಾತರ ರೈತರ ಪರವಾಗಿ ಕಾರ್ಯಕ್ರಮ ರುಪಿಸಿದಂತವರು,ರೈತರ ಪರವಾಗಿ,ಮಹಿಳೆಯರ ಪರವಾಗಿ,ವಿದ್ಯಾರ್ಥಿಗಳ ಪರವಾಗಿ ಕಾರ್ಯಕ್ರಮ ಕೊಟ್ಟಂಥವರು.
- ಮಾನ್ಯ ಸಿದ್ಧರಾಮಯ್ಯನಂತಹ ರಾಜಕಾರಣಿ ಕರ್ನಾಟಕದ,ಭಾರತದ ರಾಜಕಾರಣದಲ್ಲಿ ಹುಟ್ಟಿರೋದ್ರಿಂದ್ಲೆ ಇವತ್ತು ಮೋದಿಯಂತವರು,ಬಿಜೆಪಿ ಸಂವಿಧಾನವನ್ನ ಮುಟ್ಲಿಕ್ಕೂ ಕೂಡ ಹೆದರುತ್ತೆ. ಮಾನ್ಯ ಸಿದ್ಧರಾಮಯ್ಯ,ಮಾನ್ಯ ಮಲ್ಲಿಕಾರ್ಜುನ ಖರ್ಗೆ,ಮಾನ್ಯ ಸತೀಶ್ ಜಾರಕಿಹೊಳಿ,ಮಾನ್ಯ ಇಬ್ರಾಹಿಂ ರಂತವರು ಇವತ್ತು ಇರೋದ್ರಿಂದ್ಲೇ ಸಂವಿಧಾನ,ಪ್ರಜಾಪ್ರಭುತ್ವ ಉಳಿದಿರೋದು.
- ಮಾನ್ಯ ಮನ್ ಮೋಹನ್ ಸಿಂಗ್ ಭಾರತ ದೇಶದಲ್ಲಿ ಒಂದು ಕ್ರಾಂತಿಕಾರಿ ಸರ್ಕಾರವನ್ನು ಕೊಟ್ಟಂತವರು, ಭಾರತ ದೇಶದ ರೈತರ 72 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ಒಬ್ಬ ರೈತ ಪ್ರಧಾನಿಯಾದಂತವರು, ಆದರೆ ಮೋದಿ ಅದಾನಿ,ಅಂಬಾನಿಗಳ ಸಾಲ ಮನ್ನಾ ಮಾಡಿ ಶ್ರೀಮಂತರ,ಕಾರ್ಪೋರೇಟ್ ಕಂಪನಿಗಳ ಪರವಾದ ಪ್ರಧಾನಿಯಾದಂತವರು.
ಜಿ ಎಸ್ ಟಿ
- ಹಿಂದೆ ಬಿಜೆಪಿ, ಮನ್ ಮೋಹನ್ ಸರ್ಕಾರ ಇದ್ದಾಗ ಜಿಎಸ್ಟಿ ಬಡವರ ವಿರುದ್ಧ,ರೈತರ ವಿರುದ್ಧ ಅನ್ನೋ ಕಾರಣಕ್ಕೆ ವಿರೋಧಿಸಿತ್ತು, ಆದರೆ ಮೋದಿ,ಬಿಜೆಪಿ ತನ್ನ ಆಡಳಿತದಲ್ಲಿ ಜಿಎಸ್ಟಿ ಜಾರಿಗೆ ತಂದು ಸಂಪೂರ್ಣವಾಗಿ ಬಡವರ ವಿರುದ್ಧವಾಗಿದೆ, ತಿನ್ನುವ ಅನ್ನಕ್ಕೆ 18 ಪರ್ಸೆಂಟ್ ತೆರಿಗ, ಶ್ರೀಮಂತರು ಉಪಯೋಗಿಸುವ ಬಂಗಾರಕ್ಕೆ 5 ಪರ್ಸೆಂಟ್ ತೆರಿಗೆ.
- ನಮ್ಮ ರಾಹುಲ್ ಗಾಂಧಿ ಈಗಾಗ್ಲೆ ಜನರಿಗೆ ಭರವಸೆ ಕೊಟ್ಟಿದಾರೆ, ನನ್ನ ಸರ್ಕಾರ ಅಧಿಕಾರಕ್ಕೆ ಜಿಎಸ್ ಟಿ ಪರಾಮರ್ಶೆ ಮಾಡ್ತೇನೆ,ಬಡವರ ಪರವಾಗಿ ಜಿಎಸ್ ಟಿ ರೂಪಿಸ್ತೇನೆ ಅನ್ನುವಂತ ಮಾತು, ರೈತರಿಗೆ ಪ್ರತ್ಯೇಕ ಬಜೆಟ್,ಕಡು ಬಡವರ ಖಾತೆಗೆ ವರ್ಷಕ್ಕೆ 72000 ರೂ ಇದು ಕಾಂಗ್ರೆಸ್ ಬದ್ಧತೆ.
- 70 ವರ್ಷ ಕಾಂಗ್ರೆಸ್ ಏನು ಮಾಡಿದೆ ಅನ್ನುವ ಮೋದಿಯವರೆ, ನಿಮ್ಮವ್ವನ್ನ ಹೋಗಿ ಕೇಳಿ ಕಾಂಗ್ರೆಸ್ ಏನು ಮಾಡಿದೆ ಅಂತ ಆಗ ಅವರು ಹೇಳ್ತಾರೆ. ಹಸಿರು ಕ್ರಾಂತಿ,ಕ್ಷೀರ ಕ್ರಾಂತಿ,ಬ್ಯಾಂಕ್ ರಾಷ್ಟ್ರೀಕರಣ,ಗರೀಬಿ ಹಠಾವೋ, ವೈಜ್ಞಾನಿಕ ಕ್ರಾಂತಿ ಇವೆಲ್ಲಾ ನೀವು ಮಾಡಿದ್ದಾ.
- ನೀವು ಎಷ್ಟು ಡ್ಯಾಂ ಕಟ್ಸಿದೀರಿ,ಎಷ್ಟು ಶಾಲೆ ಕಟ್ಸಿದೀರಿ, ಎಷ್ಟು ಊರಿಗೆ ಕರೆಂಟು ಕೊಟ್ಟದೀರಿ, ಎಷ್ಟು ಬ್ಯಾಂಕ್,ಆಸ್ಪತ್ರೆ,ರೋಡು,ರೈಲು, ವಿಮಾನ ಸೆಟಲೈಟ್ ಬಿಟ್ಟಿದೀರಿ, ಯಾಕೆ ಬೊಗಳೆ ಬಿಡ್ತಾ ಇದೀರಾ, ಜನರೇನೂ ಮೂರ್ಖರಲ್ಲ, ನಿಮ್ಮ ಪ್ರತಿ ಸುಳ್ಳು,ಮೋಸವನ್ನ ಗಮನಿಸ್ತಾ ಇದ್ದಾರೆ.
- ಮಾತೆತ್ತಿದರೆ ನಾನು ಚೌಕೀದಾರ್ ಅಂತಿರ್ತೀರಾ, ಮಾನೊಯ ಮೋದಿಯವರೆ, ರಫೇಲ್ ಫೈಲ್ ಕಳ್ಳತನವಾದಾಗ, ನೀರವ್ ಮೋದಿ ದೇಶ ಬಿಟ್ಟು ಹೋಗುವಾಗ ನೀವೇನ್ ಮಾಡ್ತಿದ್ರಿ, ನಿದ್ದೆ ಮಾಡ್ತಿದ್ರಾ, ಅಥವ ಲಾಲಿಪಾಪ್ ತಿನ್ತಿದ್ರಾ.
- ಪುಲ್ವಾಮ ಧಾಳಿಗೆ, ಸೈನಿಕರ ಸಾವಿಗೆ ನೇರವಾಗಿ ನೀವೇ ಕಾರಣ,18 ಚೆಕ್ ಪೋಸ್ಟ್ ದಾಟಿ ಹೇಗೆ ಉಗ್ರಗಾಮಿಗಳು ನಿಮ್ಮಂತ ದಕ್ಷ,ನಿಷ್ಟಾವಂತ ಚೌಕೀದಾರ ಇದ್ದಾಗ ನುಗ್ತಾರೆ. ಗೋವಾದಿಂದ ಒಂದು ಬಿಯರ್ ಬಾಟಲ್ ತರ್ಲಿಕ್ಕೆ ಸಾಧ್ಯ ಆಗೋದಿಲ್ಲ ಅನ್ನೋದಾದ್ರೆ, ಅದು ಹೇಗೆ ಉಗ್ರಗಾಮಿಗಳು,ಅದು ಹೈಲೀ ಸೆಕ್ಯೂರಿಟಿ ಇರೋ ಏರಿಯಾಕ್ಕೆ ಬರ್ತಾರೆ. ನಾನ್ ಹೇಳ್ತೇನೆ ಕೇಳಿ ಮೋದಿಯವರೆ,ನೀವು ಐದು ವರ್ಷಗಳ ಕಾಲ ಜನರಿಗೆ ಏನೂ ಮಾಡ್ಲಿಲ್ಲ ಆದರೆ ಜನರ ಗಮನ ಬೇರೆಡೆಗೆ ಸೆಳೆದು ನಿಮ್ಮ ವೈಫಲ್ಯ ಮುಚ್ಕೋ ಬೇಕು, ಆ ಮೂಲಕ ಜನರ ಮನಸ್ಸಲ್ಲಿ ಕೋಮುವಾದವನ್ನ ಬಿತ್ತಿ ಮತ್ತೆ ಅಧಿಕಾರಕ್ಕೆ ಬರ್ಬೇಕು ಅನ್ನೋ ಮೋಸದ ಅಜೆಂಡಾ,ಕೋಮುವಾದಿ ಅಜೆಂಡಾ, ಹಿಡನ್ ಅಜೆಂಡಾ ನಿಮ್ದಲ್ವಾ ಮೋದಿ ಸಾಹೇಬ್ರಾ.
- ಅನೇಕ ವಿಷಯಗಳ ಬಗ್ಗೆ ಮಾತ್ನಾಡಬಹುದಾದರೂ ಇಲ್ಲಿ ಎಲ್ಲವನ್ನೂ ಹೇಳೋದಕ್ಕೆ ಸಾಧ್ಯ ಆಗಲಾರದು,ಕೊನೆಗೆ ಒಂದು ಮಾತು, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಬಿ ಮಂಜಪ್ಪ ಮುಖ್ಯ ಅಲ್ಲ ಪಕ್ಷ ಮುಖ್ಯ,ಜಾತಿ ಮುಖ್ಯ ಅಲ್ಲ ರಾಷ್ಟ್ರ ಮುಖ್ಯ, ಬಡವರು ರೈತರು ಮುಖ್ಯ ಆ ಕಾರಣಕ್ಕೆ ತಾವು ಭತದಾನ ಮಾಡಿ ಕಾಂಗ್ರೆಸ್ ಗೆ ವೋಟ್ ಕೊಡಿ ಅನ್ನೋ ವಿನಮ್ರ ಮನವಿ ನನ್ನದು.
ವಂದನೆಗಳೊಂದಿಗೆ
–ಉದಯಶಂಕರ ಮಾಗಾನಹಳ್ಳಿ
ಅಧ್ಯಕ್ಷರು
ರವಿ ಯುವಶಕ್ತಿ ಪಡೆ
ಹರಪನಹಳ್ಳಿ
9448649486
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



