Connect with us

ದಿನದ ಸುದ್ದಿ

ಹೊಸಕೆರೆಹಳ್ಳಿ ಕೆರೆಗೆ ವಿಷಪಾಷಾಣ : ಕೆರೆ ಉಳಿಸಲು ಬಂದರು ಹಸಿರು ಪಡ್ಡೆಗಳು

Published

on

ನಮ್ಮಹೊಸಕೆರೆಹಳ್ಳಿ ಕೆರೆ ಉಳಿಸಿ ಅಭಿಯಾನ

ಸುದ್ದಿದಿನ ವಿಶೇಷ : ಕೆಂಪೇಗೌಡರ ಆಳ್ವಿಕೆಯಲ್ಲಿ ನಿರ್ಮಾಣವಾದ ಬೆಂಗಳೂರಿನ ಹೊಸಕೆರೆಹಳ್ಳಿ ಗ್ರಾಮದ ಮೂಕಾಂಬಿಕಾ ನಗರದಲ್ಲಿರುವ ಕೆರೆ ಹೊಸಕೆರೆಹಳ್ಳಿ ಕೆರೆ ಎಂದೇ ಹೆಸರು ವಾಸಿ. ಆದರೀಗ ಈ ಕೆರೆ ಒಡಲಿಗೆ ಕೊಳಚೆ, ಕಸದ ವಿಷವಸ್ತುಗಳು ಸೇರುತ್ತಿವೆ.

ಸ್ವಚ್ಛ, ಸುಂದರ ಪರಿಸರದಲ್ಲಿರುವ ಈ ಕೆರೆ ಈಗ ಅಂದಾಜು 44 ಎಕರೆ ಪ್ರದೇಶವಿದೆ. ಪಶ್ಚಿಮದಲ್ಲಿ ನೈಸ್ ರಸ್ತೆ, ಪೂರ್ವದಲ್ಲಿ ವಸತಿ ಪ್ರದೇಶ ಹಾಗೂ ಉತ್ತರದಲ್ಲಿ ಕೆರೆಕೋಡಿ ಮುಖ್ಯರಸ್ತೆ ಮತ್ತು ದಕ್ಷಿಣ ದಿಕ್ಕಿನಲ್ಲಿ ಅರಣ್ಯ ಪ್ರದೇಶ ಜತೆಗೆ ಹನುಮಗಿರಿ ಗುಡ್ಡವಿದೆ. ಆದರೀಗ, ಈ ಸುಂದರ ಪ್ರವಾಸಿ ತಾಣದಂತಿರುವ ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ಉಂಟಾಗುತ್ತಿದೆ.

ಕೆರೆ ಅತಿಕ್ರಮಣ

ಹೊಸಕೆರೆಹಳ್ಳಿ ಕೆರೆ ಮೊದಲಿಗೆ 59.26 ಎಕರೆ ಪ್ರದೇಶ ಹೊಂದಿದ್ದ ಕೆರೆಯಾಗಿತ್ತೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ಮೇ 1, 2017ರಂದು ವರದಿ ಪ್ರಕಟಿಸಿತ್ತು. ಆದರೀಗ ಇದು ಹಲವಾರು ಕಾರಣಗಳಿಗಾಗಿ ಅತಿಜ್ರಮಣಗೊಂಡು 44 ಎಕರೆ ಪ್ರದೇಶ ಮಾತ್ರ ಉಳಿದಿದೆ.

ಈ ಕೆರೆಗೆ ಹೊಂದಿಕೊಂಡು ಕಿರುಅರಣ್ಯ ಪ್ರದೇಶ, ಇದರ ಅಂಗಳದಲ್ಲಿ ಹನುಮಗಿರಿ ಮತ್ತು ಯೇಸುಬೆಟ್ಟ ಎಂಬ ಎರಡು ಗುಡ್ಡಗಳಿದ್ದವು. ಪಕ್ಕದಲ್ಲಿದ್ದ ವಸತಿ ಪ್ರದೇಶದ ಕೊಳಚೆ ನೀರು ಹಾಗೂ ಹೊಸಕೆರೆಹಳ್ಳಿ ಮತ್ತಿತರ ಗ್ರಾಮಗಳ ಜನರು ಕಸದ ತಂದು ಸುರಿಯುತ್ತಿದ್ದಾರೆ. ಪಶ್ಚಿಮ ದಿಕ್ಕಿನಲ್ಲಿ ನೈಸ್ ರಸ್ತೆ ಕೆರೆಯನ್ನು ಇಬ್ಭಾಗಿಸಿದರೆ, ಇದರ ಹತ್ತಿರ ವಸತಿ ಪ್ರದೇಶ ಅಭಿವೃದ್ಧಿಗೊಳ್ಳುತ್ತಿದೆ. ಕೆರೆಯ ಸೌಂದರ್ಯ ಹೆಚ್ಚಿರುವ, ಕಣ್ಣುಗಳಿಗೆ ತಂಪು ನೀಡುವ ಹನುಮಗಿರಿ ಪ್ರದೇಶಕ್ಕೆ ಟಾಟಾ ಕಂಪನಿ ಟಾಟಾ ಹೇಳಿಸಿಬಿಟ್ಟಿದೆ. “ಹಿಲ್ ರೆಸಿಡೆಂಟ್ಸ್” ಎಂದು ಹೆಮ್ಮೆಯಿಂದ ಹೊಗಳಿಕೊಂಡಿದೆ.

ಕೆರೆ ಪರಿಸರ

ಸಾಮಾನ್ಯವಾಗಿ ಬೆಂಗಳೂರಿನ ಕೆರೆಗಳು ಪಾದಚಾರಿ ಪಥ (ವಾಕ್ ವೇ), ಸುತ್ತಲು ತಂತಿಬೇಲಿ ಹಾಗೂ ರಸ್ತೆ ಇರುತ್ತದೆ. ಆದರೆ, ಹೊಸಕೆರೆಹಳ್ಳಿ ಕಿರು ಪರಿಸರ ವ್ಯವಸ್ಥೆಯೇ ಇದೆ. ಇಲ್ಲಿ ಮ್ಯಾಂಗ್ರೋವ್ ಮರಗಳು, ಕಾಡು ನಾಯಿ, ಹಾವು, ಗ್ರೇಟ್ ಕಾರ್ಮೊರೆಂಟ್, ಹೆರನ್, ಶಿಕ್ರಾ, ವಿವಿಧ ಜಾತಿಯ ಚಿಟ್ಟೆಗಳು ಸೇರಿದಂತೆ ವೈವಿಧ್ಯಮಯ ಪ್ರಾಣಿ, ಪಕ್ಷಿ, ಸಸ್ಯ ಪ್ರಭೇದಗಳನ್ನು ಹೊಂದಿದೆ. ಕೆರೆಯ ಪಾತ್ರದಲ್ಲಿ ಔಷಧಿಯ ಸಸ್ಯಗಳು ಬೆಳೆದಿವೆ.

ಇಪ್ಪತ್ತು ವರ್ಷಗಳ ಹಿಂದೆ ಅನೇಕ ಗ್ರಾಮಗಳ ಜನರಿಗೆ ಈ ಕೆರೆಯ ನೀರೇ ಜೀವಜಲವಾಗಿತ್ತು. ಆದರೆ, ಇದೀಗ ಈ ನೀರನ್ನು ನೋಡುತ್ತಿದ್ದಂತೆ ದೂರ ಓಡುವ ದುಃಸ್ಥಿತಿ ಎದುರಾಗಿದೆ. ಶೀಘ್ರ ಕೆರೆ ಮಾಲಿನ್ಯ ಮುಕ್ತವಾದರೆ   ಜನರಿಗೆ ಅನುಕೂಲವಾಗುತ್ತದೆ ಎಂಬುದು ಪರಿಸರ ಪ್ರೇಮಿಗಳ ಆಶಯ.

ಕೆರೆ ಉಳಿಸಲು ಬಂದರು ಹಸಿರು ಪಡ್ಡೆಗಳು

ಬೆಂಗಳೂರಿನ ಕೆರೆಗಳನ್ನು ಹೇಳ ಹೆಸರಿಲ್ಲದಂತೆ ಮಾಡಿದ ಸರಕಾರಗಳು ಈಗ ತಪ್ಪನ್ನು ಒಬ್ಬರ ಮೇಲೊಬ್ಬರು ಹಾಕುತ್ತಿವೆ. ಕೆರೆ ಏಕೆ ಹಾಳಾಗುತ್ತಿದೆ ಎಂದು ಜನರಿಗೆ ಜಾಗೃತಿ ಬರುವಷ್ಟರಲ್ಲಿ ಆ ಕೆರೆ ಒತ್ತುವರೆ ಮಾಡಿ ಅಪಾರ್ಟ್‌ಮೆಂಟ್ ಕಟ್ಟಿರುವ ಉದಾಹರಣೆಗಳೂ ಇವೆ.

ಪರಿಸ್ಥಿತಿ ಕೈ ಮೀರುವ ಮುನ್ನವೇ ಕೆರೆ ಉಳಿಸಿಕೊಳ್ಳುವ ಸಲುವಾಗಿ ಬೆಂಗಳೂರು ಗ್ರೀನ್ ರೋಡೀಸ್ ಎಂಬ ಸಂಘಟನೆ ಹುಟ್ಟಿಕೊಂಡಿದೆ. ವಿಷಯದಲ್ಲಿ ತಪ್ಪು ನಿರ್ಧಾರಗಳ್ಳುವ ಅಧಿಕಾರಿಗಳಿಗೆ, ಕೆರೆಯೊಳಗೆ ಕಸ ಎಸೆಯುವ ಜನರನ್ನು ಧೈರ್ಯವಾಗಿ ಪ್ರಶ್ನಿಸುವವರು ಇವರು.

ಹಸಿರು ಕೈಗಾರಿಕಾ ಒಕ್ಕೂಟಗಳ (ಗ್ರೀನ್ ಇಂಡಸ್ಟ್ರೀಸ್) ನಿರ್ದೇಶಕ ಸುನೀಲ್ ಸೂದ್ ಅವರು ಕಳೆದ ಏಪ್ರಿಲ್ 28ಕ್ಕೆ ವಾಟ್ಸ್‌ಆ್ಯಪ್ ಗ್ರೂಪ್ ಮೂಲಕ ಗ್ರೀನ್ ರೌಡೀಸ್ ಎಂಬ ಸಂಘಟನೆಯನ್ನು ಹುಟ್ಟುಹಾಕಿದರು.

ಕೆರೆ ಸಂರಕ್ಷಣೆ, ಪರಿಸರ ಮಾಲಿನ್ಯ ನಿಯಂತ್ರ ಕುರಿತು ಜಾಗೃತಿ, ಸಸಿ ನೆಡುವುದು, ಕೆರೆಗಳಲ್ಲಿರುವ ಹೂಳು ತೆಗೆಯುವುದು, ಪ್ಲಾಸ್ಟಿಕ್ ಬಳಕೆಯಿಂದಾಗುವ ಪ್ರತಿಕೂಲ ಪರಿಣಾಮಗಳ ಕುರಿತು ಅಭಿಯಾನ ಹಮ್ಮಿಕೊಳ್ಳುವುದು ಮೊದಲಾದವು ಗ್ರೀನ್ ರೋಡೀಸ್ ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಪ್ರಾರಂಭವಾದ ಒಂದೇ ತಿಂಗಳಲ್ಲಿ 200ಕ್ಕೂ ಹೆಚ್ಚು ಸ್ವಯಂ ಸೇವಕರು ಸಂಘಟನೆಯನ್ನು ಸೇರಿದ್ದಾರೆ. ವಿಶೇಷವೆಂದರೆ ಏಳರಿಂದ 70ರ ವಯಸ್ಸಿನ ಸ್ವಯಂ ಸೇವಕರು ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಎಲ್ಲ ವರ್ಗಗಳ ಸ್ವಯಂ ಸೇವಕರು

ಗ್ರೀನ್ ರೋಡೀಸ್ ಸಂಘಟನೆಯಲ್ಲಿ ಎಲ್ಲ ವರ್ಗದವರಿಗೂ ಅವಕಾಶ ನೀಡುವ ಉದ್ದೇಶದಿಂದ ಐಟಿ, ಬಿಟಿ, ಸರಕಾರಿ ಅಧಿಕಾರಿಗಳು, ಪುಟ್ಟ ಮಕ್ಕಳು, ಹಿರಿಯರು, ಗಣ್ಯರು, ರಾಜಕಾರಣಿಗಳು ಮೊದಲಾದವರನ್ನು ಸಂಘಟನೆಯ ಸದಸ್ಯರನ್ನಾಗಿ ಮಾಡಲಾಗಿದೆ.

ಕಾರ‌್ಯಾಗಾರಗಳು

ಗ್ರೀನ್ ರೋಡೀಸ್ ಸಂಘಟನೆಯು ಪರಿಸರಕ್ಕೆ ಸಂಬಂಧಪಟ್ಟ ವಿಷಯಗಳ ಕುರಿತಂತೆ ಕಾರ‌್ಯಗಾರಗಳನ್ನು ಹಮ್ಮಿಕೊಳ್ಳುತ್ತದೆ. ಈ ಮೂಲಕ ಕಾರ‌್ಯಾಗಾರದಲ್ಲಿ ಪಾಲ್ಗೊಳ್ಳುವ ಜನರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಿದೆ.

ಪ್ರತಿ ಭಾನುವಾರ ಸಭೆ

ಬೆಂಗಳೂರು ಗ್ರೀನ್ ರೋಡೀಸ್ ಅಥವಾ ಬಿಜಿಆರ್ ಸಂಘಟನೆಯು ಪ್ರತಿ ಭಾನುವಾರ ಒಂದು ಸಭೆಯನ್ನು ಹಮ್ಮಿಕೊಳ್ಳುತ್ತದೆ. ಭವಿಷ್ಯದಲ್ಲಿ ಹಮ್ಮಿಕೊಳ್ಳಬೇಕಿರುವ ಕಾರ‌್ಯಕ್ರಮಗಳು, ನಿರ್ಧಾರಗಳ ಕುರಿತು ಚರ್ಚಿಸಲಾಗುತ್ತದೆ. ಮೇ. 2ರಂದು ಲಾಲ್‌ಬಾಗ್‌ನಲ್ಲಿ ಬಿಜಿಆರ್‌ನ ಮೊದಲ ಸಭೆ ನಡೆಯಿತು. ಸಂಘದ ಸದಸ್ಯರು ಲಾಲ್‌ಬಾಗ್‌ಅನ್ನು ಸಂಪೂರ್ಣ ಸ್ವಚ್ಛಗೊಳಿಸಿದರು.

ಹೊಸಕೆರೆ ಹಳ್ಳಿ ಕೆರೆಗೆ ಭೇಟಿ 

ಬೆಂಗಳೂರು ಗ್ರೀನ್ ರೋಡೀಸ್ ಸಂಘಟನೆಯು 2018 ಮೇ 2ರಂದು ಮೊದಲಬಾರಿಗೆ ಹೊಸಕೆರೆ ಹಳ್ಳಿ ಕೆರೆಗೆ ಭೇಟಿ ನೀಡಿತು. ಸಂಘದ ಸದಸ್ಯ ಪ್ರಶಾಂತ್ ಸೇಠ್ ಅವರು ಕೆರೆ ಮೇಲ್ಭಾಗದಿಂದ ಆರ್‌ಆರ್ ನಗರ ಸಂಪರ್ಕಿಸುವ ರಸ್ತೆಯ ಮೇಲೆ ಹಾದು ಬಂದಾಗ ಹೊಸಕೆರೆ ಹಳ್ಳಿ ಕೆರೆಯು ಯಾವ ಪರಿಸ್ಥಿತಿಯಲ್ಲಿದೆ ಎಂದು ಒಂದು ಅಂದಾಜು ಸಿಕ್ಕಿತು.

‘‘ಕೆರೆಯನ್ನು ಮೇಲ್ನೋಟದಿಂದಲೇ ಅಧ್ಯಯನ ಮಾಡಿದಾಗ ಕೆರೆ ಸ್ವಚ್ಛತಾ ಕಾರ‌್ಯವು ಅರ್ಧಕ್ಕೆ ನಿಂತಿರುವುದು ಗೊತ್ತಾಯಿತು. ಇಡೀ ಕೆರೆಯಲ್ಲಿ ನೀರಿರುವ ಪ್ರದೇಶ ಹೆಚ್ಚಾಗಿರುವುದೂ ಕೂಡ ಕಂಡುಬಂತು. ಹೊಸಕೆರೆ ಹಳ್ಳಿ ಕೆರೆಯನ್ನು ಉಳಿಸುವುದು ಬೆಂಗಳೂರನ್ನು ಉಳಿಸಲು ಇರುವ ಏಕೈಕ ಮಾರ್ಗ ಎಂದೂ ಅನ್ನಿಸಿತು. ಬೆಂಗಳೂರಿಗರು ಕುಡಿಯುವ ನೀರಿನ ತೊಂದರೆ ಎದುರಿಸಬೇಕಾಗುತ್ತದೆ ಎಂಬ ಭವಿಷ್ಯವಾಣಿ ನಿಜವಾಗುತ್ತದೆಯೇನೋ ಎಂಬ ಭಯವಿದೆ. ಈಗಾಗಲೇ ಕೆರೆಯ ಏರಿ ಜಾಗವನ್ನು ಹಲವು ಲೇಔಟ್‌ಗಳು ಒತ್ತರಿಸಿಕೊಂಡು ಬಂದಿವೆ. ಟಾಟಾ ಪ್ರೊಮೋಂಟ್ ಕಂಪನಿಯೂ ಸಹ ಕೆರೆ ಒತ್ತುವರಿ ಪ್ರದೇಶದಲ್ಲೇ ನೆಲೆ ನಿಂತಿದೆ. ಆದರೆ, ಈಗಾಗಲೇ ಒತ್ತುವರಿಯಾಗಿರುವ ಜಾಗವನ್ನು ಈಗ ಏನೂ ಮಾಡಲು ಸಾಧ್ಯವಿಲ್ಲ. ಆದರೆ, ಸದ್ಯ ಕೆರೆ ಎಂದು ಕಾಣುವ ಜಾಗವನ್ನಾದರೂ ಉಳಿಸಿಕೊಳ್ಳಬೇಕಿದೆ. ಇತ್ತೀಚೆಗೆ ಮತ್ತೊಮ್ಮೆ ಕೆರೆಗೆ ಭೇಟಿ ನೀಡಿದ್ದೆ. ಎಲ್ಲರೂ ಒಟ್ಟಾದರೆ ಕೆರೆಯನ್ನು ಸ್ವಚ್ಛಮಾಡಿ ಅದನ್ನು ಉಳಿಸಿಕೊಳ್ಳಬಹುದು,’’ ಎಂಬುದು ಪ್ರಶಾಂತ್ ಸೇಠ್ ಅವರ ಅಭಿಮತ.

ಕೆರೆ ಭೇಟಿಯ ಉದ್ದೇಶಗಳು ಏನೆಂದರೆ 

1. ಕೆರೆ ಪರಿಸರದ ಮೇಲ್ನೋಟ ಅಧ್ಯಯನ

2. ಕೆರೆ ಶುಚಿಗೊಳಿಸುವುದು

3. ನಮಗೆ ತಿಳಿದಿರುವ ವಿಷಯವನ್ನು ಹಂಚಿಕೊಳ್ಳುವುದು

ಈ ಎಲ್ಲ ಉದ್ದೇಶಗಳನ್ನಿಟ್ಟುಕೊಂಡು ಹೊಸಕೆರೆ ಹಳ್ಳಿ ಕೆರೆ ಅಧ್ಯಯನ ಮಾಡಿದಾಗ ನಮಗೆ ಅಚ್ಚರಿ ಎನಿಸುವ ಹಲವಾರು ವಿಷಯಗಳು ತಿಳಿದುಬಂದವು. ಅಷ್ಟಕ್ಕೂ ಕೆರೆಯು ಅದಾಗಲೇ ಅದೋಗತಿ ತಲುಪಿತ್ತು. ಫೇಸ್‌ಬುಕ್‌ನಲ್ಲಿ  #benglalurugreenrodies ಎಂಬ ಪುಟ ನೋಡಿದ ಪ್ರಶಾಂತ್ ಸೇಠ್ ಅವರು ಬೆಂಗಳೂರು ಗ್ರೀನ್ ರೋಡೀಸ್ ಸಂಸ್ಥೆಗೆ ಹಲವಾರು ವಿಷಯಗಳನ್ನು ತಿಳಿಸಿದರು. ಕೆಲವು ಸ್ಥಳೀಯರಿಂದ ಬಿಜಿಆರ್ ಸಂಘಟನೆಯು ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸಿತು.

ಬಿಜಿಆರ್ ಸಂಗ್ರಹಿಸಿದ ಮಾಹಿತಿಗಳು

1. ಹೊಸಕೆರೆ ಹಳ್ಳಿ ಕೆರೆಯು ಸಂಪೂರ್ಣ ಬತ್ತಿಹೋಗಿರುವುದು ಮೇಲ್ನೋಟದ ಅಧ್ಯಯನದಲ್ಲಿ ಕಂಡುಬಂತು. ಈ ಕೆರೆಯುನ್ನು ಸೀಳಿಕೊಂಡು ಹೋಗುವ ರಸ್ತೆಯ ಬಲ ಭಾಗವು ಸಂಪೂರ್ಣ ಬತ್ತಿಹೋಗಿದ್ದು, ಅಲ್ಲಿ ಪೊದೆಗಳು, ಮುಳ್ಳುಗಂಟಿಗಳು ಬೆಳೆದುಕೊಂಡಿದೆ. ಮತ್ತೊಂದು ಭಾಗದಲ್ಲಿ ಸ್ವಲ್ಪವೇ ನೀರಿದ್ದು, ಅದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು, ಬಾಟೆಲ್‌ಗಳು ಮೊದಲಾದ ತ್ಯಾಜ್ಯಗಳನ್ನು ಎಸೆಯಲಾಗಿದೆ.

2. ಕೆರೆಯಲ್ಲಿ ಅಪಾರ ಪ್ರಮಾಣದ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಅದು ಸುತ್ತಮುತ್ತಲಿನವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಟಾಟಾ ಪ್ರೊಮೊಂಟ್ ಸಂಸ್ಥೆಯು ಕೆರೆ ಸ್ವಚ್ಛಗೊಳಿಸುವ ಕಾರ‌್ಯ ಕೈಗೆತ್ತಿಕೊಂಡು, ಕೆರೆ ಕೋಡಿ ಹಳ್ಳಿಗೆ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಿದೆ. ಹೂಳೆತ್ತುವ ಕಾರ‌್ಯಕ್ಕೆ ಸರಕಾರದಿಂದ ಸಂಸ್ಥೆಯು ಅನುಮತಿ ಪಡೆದಿತ್ತಾದರೂ, ಮಳೆ ಪರಿಣಾಮವಾಗಿ ಅದು ನಿಂತುಹೋಗಿದೆ.

3. ಕೆರೆ ದಡದಿಂದ ಸ್ವಲ್ಪವೇ ದೂರದಲ್ಲಿ ಅರಣ್ಯ ಪ್ರದೇಶವೊಂದಿದೆ. ಅಲ್ಲಿ ಸಾಕಷ್ಟು ಪಕ್ಷಿಗಳು ವಾಸವಿವೆ. ಬಿಜಿಆರ್ ಸಂಘಟನೆಯ ಸದಸ್ಯ ರಾಮ್ ಕುಮಾರ್ ಅವರು ಇತ್ತೀಚೆಗೆ ಯಶುಬೆಟ್ಟಕ್ಕೆ ಭೇಟಿ ನೀಡಿದ್ದರು. ಇದು ವಾಯುವಿಹಾರಕ್ಕೆ ಹೇಳಿಮಾಡಿಸಿದ ಸ್ಥಳವಾಗಿದ್ದು, ಇದನ್ನು ಉಳಿಸಿಕೊಳ್ಳುವುದು ಅತಿ ಮುಖ್ಯ.

4. ಹೊಸಕೆರೆ ಹಳ್ಳಿ ಕೆರೆಯನ್ನು ಯೇಸು ಬೆಟ್ಟ ಹಾಗೂ ಹನುಮಗಿರಿ ಎಂಬ ಎರಡು ಬೆಟ್ಟಗಳು ಹೊಂದಿಕೊಂಡಿವೆ. ಟಾಟಾ ಪ್ರೊಮೊಂಟ್ ಸಂಸ್ಥೆಯು ಹನುಮಗಿರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ಇರುವ ನಾಲ್ಕು ಗಗನ ಚುಂಬಿ ಕಟ್ಟಡಗಳನ್ನು ಕಟ್ಟಿದ್ದು, ಇದಕ್ಕೆ ಹಿಲ್ ರೆಸಿಡೆನ್ಸ್ ಎಂದು ಹೆಸರಿಟ್ಟಿದೆ.

ಬೆಳವಣಿಗೆಗಳು

1. ಹೊಸಕೆರೆಹಳ್ಳಿ ಕುರಿತು ಬಿಜಿಆರ್ ಹಮ್ಮಿಕೊಂಡ ಆಂದೋಲನವು ರಾಜ್ಯವ್ಯಾಪಿ ಹಬ್ಬಿತು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಸಂಘಟನೆಯ ಶ್ರಮವನ್ನು ಹಾಡಿ ಹೊಗಳಿತು.

2. ಡಿಜಿಪಿ ಭಾಸ್ಕರ್ ರಾವ್ ಅವರು ಸುನೀಲ್ ಸೂದ್ ಅವರನ್ನು ಭೇಟಿಯಾಗಿ, ಭಾನುವಾರ ನಡೆಯಲಿರುವ ಕೆರೆ ಸ್ವಚ್ಛತಾ ಕಾರ‌್ಯಕ್ಕೆ 60 ಪೊಲೀಸ್ ಸಿಬ್ಬಂದಿ ನಿಯೋಜಿಸುವುದಾಗಿ ಭರವಸೆ ನೀಡಿದರು.

3. ಬಿಜಿಆರ್ ಸಂಘಟನೆಯ ಹಲವು ಸದಸ್ಯರು ಹೊಸಕೆರೆ ಹಳ್ಳಿ ಕೆರೆಯನ್ನು ಪ್ರತಿದಿನ ಭೇಟಿ ಮಾಡಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

4. ಹೊಸಕೆರೆ ಹಳ್ಳಿಯ ಈ ದುರ್ಗತಿಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದ ರುದ್ರಯ್ಯ ಎಂಬುವರೇ ಕಾರಣ ಎಂಬುದು ಗೊತ್ತಾಗಿದೆ. ಸಂಘದ ಸದಸ್ಯ ರಾಮ್ ಕುಮಾರ್ ಅವರು ಕೆರೆ ಅಭಿವೃದ್ಧಿ ಮಂಡಳಿಗೆ ಭೇಟಿ ನೀಡಿದ ನಂತರ ತಿಳಿದ ವಿಷಯವಿದು.

ಕಾರ‌್ಯಕ್ರಮಗಳೇನು?

ಭಾನುವಾರ ನಡೆಯಲಿರುವ ಹೊಸಕೆರೆ ಹಳ್ಳಿ ಕೆರೆ ಸ್ವಚ್ಛತಾ ಕಾರ‌್ಯಕ್ರಮದಲ್ಲಿ ಮೂರು ಕಾರ‌್ಯಗಳನ್ನು ಹಮ್ಮಿಕೊಳ್ಳಲಾಗಿದೆ.

1. ಕೆರೆ ಸ್ವಚ್ಛತೆ

2. ಸಸಿ ನೆಡುವುದು

3. ಜ್ಞಾನ ಹಂಚಿಕೊಳ್ಳುವುದು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading
Advertisement

Title

ದಿನದ ಸುದ್ದಿ3 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ4 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ4 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ4 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ4 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ4 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ4 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ4 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ4 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ4 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending