ಲೈಫ್ ಸ್ಟೈಲ್
ಸಾಂಕ್ರಾಮಿಕ ರೋಗವಾಗುತ್ತಿದೆ ಹೃದಯಾಘಾತ..!
ಭಾರತ ದೇಶದಲ್ಲಿ ಹೃದಯಾಘಾತಗಳು ಕೆಲವು ವರ್ಷಗಳಿಂದೀಚೆಗೆ ಒಂದು ಸಾಂಕ್ರಾಮಿಕ ರೋಗದಂತೆ ಕಂಡುಬರುತ್ತಿದೆ. ಭಾರತದೇಶದವರಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕಂಡುಬರುತ್ತಿರುವ ಹೃದಯಘಾತಗಳಿಗೆ (ಕರೋನರಿ ರಕ್ತನಾಳದ ರೋಗಕ್ಕೆ) (coronary artery disease) ಅನೇಕ ಕಾರಣಗಳನ್ನು ಮುಂದಿಡಲಾಗಿದೆ.
ಸುಧಾರಿಸುತ್ತಿರುವ ಜನರ ಆರ್ಥಿಕ ಮಟ್ಟ ಮತ್ತು ಸೌಕರ್ಯಗಳು, ಜನರ ಜೀವನಶೈಲಿಯಲ್ಲಿ ತೀವ್ರ ಬದಲಾವಣೆಗಳು, ದೈಹಿಕ ವ್ಯಾಯಾಮದ ಕೊರತೆ, ಧೂಮಪಾನ, ಹಳ್ಳಿಯಿಂದ ನಗರಗಳಗೆ ಜನರ ವಲಸೆ, ನಗರವಾಸಿಗಳ ಸಂಖ್ಯೆಯು ಹೆಚ್ಚುತ್ತಿರುವುದು, ಸಾಂಕ್ರಾಮಿಕ ರೋಗಗಳು ಹಿಮ್ಮೆಟ್ಟುತ್ತಿರುವುದು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ರೋಗಗಳು ನಾಗಲೋಟದಲ್ಲಿ ಮೇಲಕ್ಕೇರುತ್ತಿರುವುದು ಮತ್ತು ಜನರ ಸರಾಸರಿ ಆಯಸ್ಸು ಹೆಚ್ಚುತ್ತಿರುವುದು ಗುರುತಿಸಿರುವ ಕಾರಣಗಳು. ಭಾರತ ದೇಶದವರ ಸರಾಸರಿ ಆಯಸ್ಸು ಕ್ರಿ.ಶ.1951 ರಿಂದ ಕ್ರಿ.ಶ. 1991 ರ ಅವಧಿಯಲ್ಲಿ 41 ರಿಂದ 61 ವರ್ಷಕ್ಕೊ, ಕ್ರಿ.ಶ 2003 ರ ಸಾಲಿನಲ್ಲಿ 71 ವರ್ಷಗಳಿಗೂ ಮೇಲೇರಿರುವುದು.
ವಿದೇಶದಲ್ಲಿ ನೆಲೆಸಿರುವ ಭಾರತೀಯರಲ್ಲಿ ಹೃದಯಾಘಾತ ಆ ದೇಶದ ಪ್ರಜೆಗಳಿಗಿಂತ ನಾಲ್ಕು ಜಾಸ್ತಿಯಾಗಿರುವುದೆಂದು ಕಂಡುಬಂದಿದೆ. ಸಿಂಗಪುರ, ಕೆನಡ,ಅಮೆರಿಕಾ ಮತ್ತು ಯುರೋಪ್ ದೇಶಗಳಲ್ಲಿ ನೆಲೆಸಿರುವ ಭಾರತೀಯರಲ್ಲಿ ಹೃದಯಾಘಾತಗಳು ಆಯಾ ದೇಶದ ಪ್ರಜೆಗಳಿಗಿಂತ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವವು. ಇದು ಭಾರತೀಯ ಬುಡಕಟ್ಟಿನ ಪುರುಷರಿಗೂ , ಸ್ತ್ರೀಯರಿಗೂ ಮತ್ತು ಅಲ್ಲಯೇ ನೆಲೆನಿರುವ ಅವರ ಪೀಳಿಗೆಯವರಿಗೂ ಅನ್ವಯಿಸುವುದು.
ಕ್ರಿ.ಶ. 1996ರಲ್ಲಿ ನಡೆಸಿದ ಅಧ್ಯಯನದಲ್ಲಿ ಭಾರತದಿಂದ ವಲಸೆ ಹೋಗಿ ಅಮೆರಿಕೆಯಲ್ಲಿ ನೆಲೆಸಿರುವ 1688 ಮಂದಿ (ಸರಾಸರಿ 46.4 ವರ್ಷ ವಯಸ್ಸಿನ 1131 ಗಂಡಸರು ಮತ್ತು 557 ಹೆಂಗಸರು) ಮೊದಲನೇ ಪೀಳಿಗೆಯ ವೈದೈರು ಮತ್ತು ಅವರ ನಿಕಟ ಸಂಬಂಧಿಗಳಲ್ಲಿ ಹೃದಯಬೇನೆ ಮತ್ತು ಹೃದಯಾಘಾತಗಳು ಅಮೆರಿಕೆಯಲ್ಲಿರುವ ಇತರೆ ಪ್ರಜೆಗಳಿಗಿಂತ ಮೂರು ಪಾಲು ಹೆಚ್ಚಾಗಿರುವುದಾಗಿ ಕಂಡುಬಂದಿತು. ಭಾರತ ದೇಶದ ಜನರ ದೇಹದಲ್ಲಿ ಇನ್ಸುಲಿನ್ ಕ್ರಿಯೆಗೆ ಪ್ರತಿಬಂಧಕವು (insulin resistance) ಇದಕ್ಕೆ ಮುಖ್ಯವಾದ ಕಾರಣವೆಂದು ಹೇಳಲಾಗಿದೆ. ಕ್ರಿ.ಶ. 2000ರಲ್ಲಿ ಲಾನ್ಸಟ್ (Lancet) ವೈದ್ಯಕೀಯ ಪತ್ರಿಕೆಯು “ಅಮೆರಿಕೆಯಲ್ಲಿ ಕರೋನರಿ ರಕ್ತನಾಳಗಳ ರೋಗಕ್ಕೆ ಒಳಗಾದವರಲ್ಲಿ ಶೇಕಡ 10.7ರಷ್ಟು ಜನರು ದಕ್ಷಿಣ ಏಷ್ಯಾ ಖಂಡದ ಬುಡಕಟ್ಟಿನವರು, ಶೇಕಡ 4.6ರಷ್ಟು ಮಂದಿ ಯೂರೋಪ್ ಬುಡಕಟ್ಟಿನವರು ಮತ್ತು ಶೇಕಡ 1.7 ಅಮೆರಿಕದಲ್ಲಿ ನೆಲೆಸಿರುವ ಚೀನೀಯರು. ಹೃದಯಾಘಾತದಿಂದ ಗುಣ ಹೊಂದಿದ ಕುರುಹು ಶೇಕಡ 5.2 ರಷ್ಟು ದಕ್ಷಿಣ ಏಷ್ಯಾ ಬುಡಕಟ್ಟಿನವರಲ್ಲಿಯೂ ಕಂಡುಬಂದಿತು.
ಒಟ್ಟಿನಲ್ಲಿ ಕರೋನರಿ ರಕ್ತನಾಳಗಳ ಗಡಸಾಗುವಿಕೆಯು ಅಮೆರಿಕಾ ದೇಶಕ್ಕೆ ವಲಸೆ ಹೋಗಿರುವ ಭಾರತೀಯರಲ್ಲಿ ಆ ದೇಶದ ಪ್ರಜೆಗಳಿಗಿಂತ ಮೂರು ಪಾಲು ಹೆಚ್ಚಾಗಿ ಕಂಡುಬರುವುದು, ಅಮೆರಿಕದ ಜನರಿಗಿಂತ ಭಾರತೀಯರು ಕಡಿಮೆ ವರ್ಷ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗುವರು. ಹೃದಯಾಘಾತದಿಂದ ಸಾವಿಗೀಡಾಗುವವರ ಸಂಖ್ಯೆಯೂ ಎಲ್ಲಾ ವಯೋಮಾನದ ಭಾರತೀಯರಲ್ಲಿ ಬಹಳಷ್ಟು ಹೆಚ್ಚಾಗಿರುವುದು ” ಎಂದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಗಮನಾರ್ಹ ಸಂಗತಿಯೆಂದರೆ ಭಾರತ ದೇಶದಲ್ಲಿಯೇ ನೆಲೆಸಿರುವವರಿಗಿಂತ ಬೇರೆ ದೇಶಗಳಿಗೆ ವಲಸೆ ಹೋಗಿರುವ ಭಾರತೀಯರಲ್ಲಿ ಹೃದಯಾಘಾತಗಳು ಹೆಚ್ಚು ಸಂಖ್ಯೆಯಲ್ಲಿ ಕಂಡುಬರುತ್ತಿರುವುದು. “ಲಂಡನ್ ನಗರದಲ್ಲಿ ವಾಸಿಸುವ ಪಂಜಾಬಿಗಳಲ್ಲಿ ಅವರ ಹಳ್ಳಿಗಳಲ್ಲಿ (ಪಂಜಾಬಿನ) ವಾಸವಾಗಿರುವ ಮಂದಿಗಿಂತ ಎಲ್ಲಾ ಬಗೆಯ ಅಪಾಯಕಾರಿ ಕಾರಣಗಳೂ (ರಿಸ್ಕ್ ಫ್ಯಾಕ್ಟರ್ ಗಳೂ) ಅಧಿಕವಾಗಿರುವುದು. ಆದರೆ ಪಂಜಾಬಿನ ಹಳ್ಳಿಗಳಲ್ಲಿ ವಾಸಿಸುವವರಲ್ಲಿ ರಕ್ತದಲ್ಲಿನ ಸಕ್ಕರೆ (ಗ್ಲೂಕೋಸ್) ಮಟ್ಟವು ಹೆಚ್ಚಿನ ಮಟ್ಟದಲ್ಲಿರುವುದು” ಎಂದು ಒಂದು ಅಧ್ಯಯನವು ತಿಳಿಸಿದೆ.
ಹೃದಯಾಘಾತಗಳು ಅಮೆರಿಕಾ ದೇಶದ ಮಹಿಳೆಯರಿಗಿಂತ ಭಾರತೀಯ ಮಹಿಳೆಯರಲ್ಲಿ ಚಿಕ್ಕ ವಯಸ್ಸಿನಲ್ಲೇ ಕಂಡುಬರುವುದು. ಅಮೆರಿಕಾ ದೇಶದಲ್ಲಿ ನೆಲೆಸಿರುವ 50 ವರ್ಷಗಳಿಗೂ ಕಡಿಮೆ ವಯಸ್ಸಿನ ಭಾರತೀಯ ಮಹಿಳೆಯರಲ್ಲಿ ಹೃದಯಾಘಾತಗಳು ಕಂಡುಬರುವುದಲ್ಲದೆ ಹೃದಯಾಘಾತದ ತೊಡಕುಗಳೂ ತೀಕ್ಷ್ಣ ಮಟ್ಟದಲ್ಲಿರುವುವು. ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮಹಿಳೆಯರಲ್ಲಿ ಹೃದಯಾಘಾತದಿಂದ ಸಂಭವಿಸುವ ಮರಣಗಳ ಸಂಖ್ಯೆಯು ಆ ದೇಶದ ಮಹಿಳೆಯರಿಗಿಂತ ಶೇಕಡ 30ರಷ್ಟ ಅಧಿಕವಾಗಿರುವುದು. ಇತರೆ ರಾಷ್ಟ್ರಗಳ ಜನರಿಗಿಂತ ಭಾರತೀಯರ ದೇಹದಲ್ಲಿ ಬೊಜ್ಜು ಶೇಖರಣೆಯು ಹೆಚ್ಚಾಗಿ ಕಂಡುಬರುವುದು.
ಮುಂದುವರೆಯುತ್ತದೆ…
–ಸೌಮ್ಯ ಅಶೋಕ್
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ8 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


