Connect with us

ಲೈಫ್ ಸ್ಟೈಲ್

ಮಹಿಳೆಯರಲ್ಲಿ ಹೃದಯಾಘಾತ..!

Published

on

ಧುನಿಕ ಸಮಾಜದಲ್ಲಿ ಮಹಿಳೆಯರು ಪುರುಷರಿಗಿಂತ ಹತ್ತು ವರ್ಷ (ವಯಸ್ಸಿನಲ್ಲಿ) ಹೆಚ್ಚು ಕಾಲ ಬದುಕುತ್ತಿದ್ದಾರೆ. ಆದರೆ ವಯಸ್ಸು ಮುಂದುವರಿದಂತೆಲ್ಲಾ ಹೃದಯಾಘಾತಗಳು ಸ್ತ್ರೀ ಪುರುಷರಿಬ್ಬರಲೂ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವುದಾದರೂ, ಮಹಿಳೆಯರಲ್ಲಿ ಪುರುಷರಿಗಿಂತ 10 ವರ್ಷಗಳ ವಯಸ್ಸಿನ ನಂತರ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವುವು. ಇದಕ್ಕೆ ಕಾರಣ ಮಹಿಳೆಯರಲ್ಲಿನ ಸ್ತ್ರೀ ಹಾರ್ಮೋನುಗಳು ಹೃದಯಾಘಾತಗಳು ಉಂಟಾಗದಂತೆ ಮಾಡುವವು. ಮಹಿಳೆಯರು ಮಧುಮೇಹ ರೋಗ ಮತ್ತು ಮುಟ್ಟು ನಿಲ್ಲುವಿಕೆಯಂತಹ ನೈಸರ್ಗಿಕ ಕಾರಣಗಳಿಂದಲೂ, ಈ ಪ್ರಕೃತಿ ದತ್ತವಾದ ರಕ್ಷಣೆಯನ್ನು ಕಳೆದುಲಲಕೊಳ್ಳುವರು.

ಮಹಿಳೆಯರಲ್ಲಿಯೂ ಉದರ ಭಾಗದಲ್ಲಿ ಕೊಬ್ಬಿನ ಶೇಕರಣೆಯು ಹೃದಯಾಘಾತಗಳಿಗೆ ಮುಖ್ಯ ಕಾರಣವಾಗುವುದು 18 ರಿಂದ 20 ವರ್ಷವಯಸ್ಸು ದಾಟಿದ ಮಹಿಳೆಯರಲ್ಲಿ ದೇಹದ ತೂಕವು 7 ರಿಂದ 11 ರಷ್ಟು ಕಿಲೋಗ್ರಾಂ ಹೆಚ್ಚಿದಲ್ಲಿ ಅವರ ಮಧ್ಯವಯಸ್ಸಿನಲ್ಲಿ ಹೃದಯಾಘಾತಗಳು ಸಂಭವಿಸುವುದು ಅಂಜಿಕೆ ಸ್ವಭಾವದ ಖಿನ್ನ ಮಾನಸಿಕ ರೋಗದ ಮಹಿಳೆಯರಲ್ಲಿ ಮತ್ತು ಸಾಮಾಜಿಕ ಬೆಂಬಲ ದೊರಕದಿರುವ ಮಹಿಳೆಯರಲ್ಲಿ ಹೃದಯಾಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವುದು ಎಂದು ಇನ್ನೊಂದು ಅಧ್ಯಯನದಿಂದ ತಿಳಿದಿಬಂದದೆ.

45 ವರ್ಷ ವಯಸ್ಸಿನ ನಂತರ ಮಹಿಳೆಯರಲ್ಲಿ ರಕ್ತದೊತ್ತಡವು ಪುರುಷರಿಗಿಂತ ಹೆಚ್ಚು ತ್ವರಿತವಾಗಿ ಮೇಲಕ್ಕೇರುವುದು. ಅಧಿಕ ರಕ್ತದೊತ್ತಡವು ಪುರುಷರಲ್ಲಿ ಹೃದಯಾಘಾತಗಳನ್ನು 3 ಪಾಲು ಹೆಚ್ಚಿಸುವುದಾದರೆ ಮಹಿಳೆಯರಲ್ಲಿ 4 ಪಾಲು ಹೆಚ್ಚಿಸುವುದು, ಮಧುಮೇಹ ರೋಗವು ಪುರುಷರಲ್ಲಿ ಹೃದಯಾಘಾತಗಳನ್ನು 2 ರಿಂದ 3 ರಷ್ಟು ಹೆಚ್ಚಿಸುವುದಾದರೆ ಮಹಿಳೆಯರಲ್ಲಿ 3 ರಿಂದ 7ರಷ್ಟು ಹೃದಯಾಘಾತಗಳು ಮರುಕಳಿಸುವ ಸಂಭವಗಳೂ ಹೆಚ್ಚಾಗಿರುವುದು. 45 ವರ್ಷಗಳಿಗೂ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ರಕ್ತದ ಕೊಲೆಸ್ಟ್ರಾಲ್ ಕೊಬ್ಬಿನ ಮಟ್ಟವು ಅದೇ ವಯಸ್ಸಿನ ಪುರುಷರಿಗಿಂತ ಶೇಕಡ 10 ಮಿ.ಗ್ರಾಂ.ನಷ್ಟು ಕಡಿಮೆಯಾಗಿಯೂ, 65 ವರ್ಷ ವಯಸ್ಸಿನ ನಂತರ ಶೇಕಡ 10 ಮಿ.ಗ್ರಾಂ.ನಷ್ಟು ಹೆಚ್ಚಾಗಿಯೂ ಇರುವುದಾಗಿ ಕಂಡುಬಂದಿದೆ.

ರಕ್ತದಲ್ಲಿ ಹೆಚ್ಚಿನ ಮಟ್ಟದ ಎಲ್ ಡಿಎಲ್ ಕೊಲೆಸ್ಟ್ರಾಲ್ ಹೃದಯಾಘಾತಕ್ಕೊಂದು ಮುಖ್ಯ ಕಾರಣ. ಮಹಿಳೆಯರಲ್ಲಿ 40 ವರ್ಷ ವಯಸ್ಸಿನ ನಂತರ ಪ್ರತಿ ವರ್ಷವೊಂದರಲ್ಲಿ ಎಲ್ ಡಿಎಲ್ ಕೊಲೆಸ್ಟರಾಲ್ ಶೇಕಡ 2 ಮಿ.ಗ್ರಾಂ. ನಂತೆ 60 ವರ್ಷ ವಯಸ್ಸಿನವರೆಗೂ ಮೇಲೇರುವುದು. ಸಾಮಾನ್ಯವಾಗಿ ಮಹಿಳೆಯರಲ್ಲಿ ಮುಟ್ಟು ನಿಲ್ಲುವ ಮುನ್ನ ಎಚ್ ಡಿಎಲ್ ಕೊಲೆಸ್ಟ್ರಾಲ್ (ಉತ್ತಮ ಕೊಲೆಸ್ಟ್ರಾಲ್) ಮಟ್ಟವು ಪುರುಷರಿಗಿಂತ 10ಮಿ.ಗ್ರಾಂ. ಹೆಚ್ಚಾಗಿರುವುದು. ರಕ್ತದ ಎಚ್ ಡಿಎಲ್ ಮಟ್ಟವು ಒಂದು ಜನಾಂಗದಿಂದ ಇನ್ನೊಂದು ಜನಾಂಗದಲ್ಲಿ ಬಹಳಷ್ಟು ಭಿನ್ನವಾಗಿರುವುದು. ಭಾರತದೇಶದ ಬುಡಕಟ್ಟಿನ ಮಹಿಳೆಯರಲ್ಲಿ ಎಚ್ ಡಿಎಲ್ ಮಟ್ಟವು ಚೀನಾ ಮತ್ತು ಜಪಾನ್ ದೇಶದ ಜನರಿಗಿಂತ ಕಡಿಮೆ ಮಟ್ಟದಲ್ಲಿರುವುದು.

ಭಾರತೀಯ ಮಹಿಳೆಯರಲ್ಲಿ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಹೃದಯಾಘಾತಗಳಿಗೆ ಇದೂ ಒಂದು ಕಾರಣವೆಂದು ಹೇಳಲಾಗಿದೆ. ರಕ್ತದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವು ಹೃದಯಾಘಾತಗಳಿಗೆ ಕಾರಣವಾಗುವುದಾದರೂ ಕೊಲೆಸ್ಟ್ರಾಲ್ ಮತ್ತು ಎಚ್ ಡಿಎಲ್ ಅನುಪಾತದ ಸೂಚ್ಯಂಕವು ಹೆಚ್ಚು ಅರ್ಥಗರ್ಭಿತವಾದುದು. ಈ ಸೂಚ್ಯಂಕ ಸಂಖ್ಯೆಗೆ ಅನುಗುಣವಾಗಿ (ಹೆಚ್ಚಿದಂತೆ) ಹೃದಯಾಘಾತಗಳು ಮೇಲೇರುವುವು. ಭಾರತ ದೇಶದ ಮಹಿಳೆಯರಲ್ಲಿ ರಕ್ತದಲ್ಲಿ ಎಚ್ ಡಿಎಲ್ ಮಟ್ಟವು ಕಡಿಮೆಯಾಗಿರುವುದರಿಂದ ಈ ಅನುಪಾತದ ಸೂಚ್ಯಂಕವು ಹೆಚ್ಚಿರುವುದು. ಸಾಮಾನ್ಯವಾಗಿರಬೇಕಾದ ಕೊಲೆಸ್ಟ್ರಾಲ್ ಎಚ್ ಡಿಎಲ್ ಅನುಪಾತದ ಸೂಚ್ಯಂಕ 4. ಈ ಸಂಖ್ಯೆಗೂ ಕಡಿಮೆಯಿರುವುದು ಉತ್ತಮ.

ಮಹಿಳೆಯರಲ್ಲಿ ಹೃದಯಾಘಾತಗಳಿಗೆ ದೇಹದಲ್ಲಿನ ಲೈಪೊಪ್ರೋಟೀನ್-ಎ ಒಂದು ಮುಖ್ಯ ಕಾರಣವಾಗಿರುವುದು. ಸ್ತ್ರೀ ಹಾರ್ಮೋನ್ ಗಳು ದೇಹದಲ್ಲಿನ ಲೈಪೊಪ್ರೋಟೀನ್-ಎ ಮಟ್ಟವನ್ನು ತಗ್ಗಿಸುವುವು. ಮುಟ್ಟು ನಿಂತ ನಂತರ ದೇಹದಲ್ಲಿ ಲೈಪೊಪ್ರೋಟೀನ್-ಎ ಶೇಕಡ 10 ರಷ್ಟು ಹೆಚ್ಚುವುದು. ದೇಹದಲ್ಲಿ ಮೇಲಕ್ಕೇರಿದ ಹೋಮೊಸಿಸ್ಟೀನ್ ಹೃದಯಾಘಾತಗಳಿಗೆ ಕಾರಣವಾಗುವುದು. ಇದರ ಜೊತೆಗೆ ಲೈಪೊಪ್ರೋಟೀನ್-ಎ ಅಂಶವೂ ಜಾಸ್ತಿಯಾಗಿದ್ದಲ್ಲಿ ಹೃದಯಾಘಾತಗಳು ಅನೇಕ ಪುಟ್ಟು ಹೆಚ್ಚುವುವು.
ಮಹಿಳೆಯರಲ್ಲಿ ಹೃದಯಬೇನೆ ಮತ್ತು ಹೃದಯಾಘಾತಗಳಿಗೆ ಅಧಿಕ ರಕ್ತದೊತ್ತಡ, ಮಧುಮೇಹ ರೋಗ, ರಕ್ತದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್, ಕುಗ್ಗಿದ ಎಚ್ ಡಿಎಲ್ ಮಟ್ಟಗಳು ಮತ್ತು ಲೈಪೊಪ್ರೋಟೀನ್-ಎ ಕಾರಣವಾಗಿರುವುದಾದರೂ, ಭಾರತ ದೇಶದ ಮಹಿಳೆಯರಲ್ಲಿ ಪಾಶ್ಚಿಮಾತ್ಯ ದೇಶದ ಮಹಿಳೆಯರಿಗಿಂತ ಅಧಿಕ ರಕ್ತದೊತ್ತಡ, ರಕ್ತದಲ್ಲಿ ಹೆಚ್ಚದ ಕೊಲೆಸ್ಟ್ರಾಲ್ ಕೊಬ್ಬು ಅವರಲ್ಲಿ ಧೂಮಪಾನ ಚಟ ಇಲ್ಲದಿದ್ದರೂ, ಮಧುಮೇಹ ರೋಗ, ಬೊಜ್ಜುದೇಹ,ರಕ್ತದಲ್ಲಿ ಹೆಚ್ಚಿದ ಟ್ರೈಗ್ಲಿಸರೈಡ್ ಮಟ್ಟ ಮತ್ತು ತಗ್ಗಿದ ಎಚ್ ಡಿಎಲ್ ಮಟ್ಟ ಭಾರತ ದೇಶದ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವುವು. ಹೀಗಾಗಿ ಭಾರತೀಯರಾಗಿರುವುದೇ (ಅನುವಂಶೀಯತೆ) ಹೃದಯಾಘಾತಗಳಿಗೆ ಒಂದು ಮುಖ್ಯ ಕಾರಣ ಎಂದು ಹೇಳಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ ; ಯಾವೆಲ್ಲಾ ಚಿಕಿತ್ಸೆಗಳು ಉಚಿತ..? ಇಲ್ಲಿದೆ ಸಂಪೂರ್ಣ ಮಾಹಿತಿ

Published

on

ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ ಮಾಡುವ ಕಾರ್ಯಕ್ರಮ ಇದಾಗಿದ್ದು, ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಆರಂಭವಾಗಲಿರುವ ಗೃಹ ಆರೋಗ್ಯ ಯೋಜನೆ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹಾಗಾದ್ರೆ ಯಾವ ಯಾವ ಗೃಹ ಆರೋಗ್ಯ ಯೋಜನೆ, ಹೇಗೆ ಕಾರ್ಯ ನಿರ್ವಹಿಸಲಿದೆ ಎಂದು ನೋಡೊದಾದ್ರೆ.

ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.

2ವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿದ್ದಾರೆ.

ಯಾವೆಲ್ಲಾ ಚಿಕಿತ್ಸೆಗಳು

• ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಸೇರಿದಂತೆ ಬೇರೆ ರೋಗಗಳ ಬಗ್ಗೆ ಪರೀಕ್ಷಿಸಲಾಗುತ್ತದೆ.

• ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿಯಿಂದ ಸಲಹೆ ನೀಡಲಾಗುತ್ತದೆ.

• ರೋಗಿಗಳಿಗೆ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆಯನ್ನ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪ ರೇಷ ಸಿದ್ಧಪಡಿಸಲಾಗಿದೆ.

ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗುತ್ತಿದ್ದು, ಜನವರಿ ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

Published

on

  • ರುದ್ರಪ್ಪ ಹನಗವಾಡಿ

ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ ನೋಡಿಕೊಳ್ಳುತ್ತಿದ್ದರು.

ವಿಶೇಷ ತಹಸೀಲ್ದಾರರು ಸಾಮಾನ್ಯವಾಗಿ ಯಾವ ಉದ್ದೇಶಕ್ಕೆ ನಿಯೋಜಿಸಿದ್ದರೋ ಅದನ್ನು ಬಿಟ್ಟು ಇತರೆ ಸಾಮಾನ್ಯ ವಿಷಯಗಳಲ್ಲಿ ಅವರಿಗೆ ಸಂಬಂಧಿಸಿರುವುದಿಲ್ಲ. ಹಾಗಾಗಿ ನಾನು ನನ್ನ ಕೆಲಸಗಳನ್ನು ಬಿಟ್ಟು ತಾಲ್ಲೂಕು ಕಛೇರಿ ಕೆಲಸಗಳಲ್ಲಿ ತೊಡಗಿಕೊಂಡಿರಲಿಲ್ಲ. ಆದರೆ ಇದೇ ಸಮಯದಲ್ಲಿ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಜಾತ್ರೆಯ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ವಿಶೇಷ ಸಭೆ ನಡೆಸಿ ಅಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಆಚರಣೆಯನ್ನು ತಡೆಯಲು ಸೂಚನೆ ನೀಡಿತ್ತು.

ಬೆತ್ತಲೆಸೇವೆಯ ಈ ಅನಾಗರಿಕ ಆಚರಣೆಯ ಬಗ್ಗೆ ಪ್ರೊ. ಬಿ. ಕೃಷ್ಣಪ್ಪನವರು, ನಾನು ಸೊರಬಕ್ಕೆ ಬರುವ ಒಂದು ವರ್ಷ ಮುಂಚಿನಿAದ ಬೆತ್ತಲೆ ಸೇವೆಯ ಆಚರಣೆ ಒಂದು ಅನಾಗರಿಕ ಆಚರಣೆ ಎನ್ನುವ ಬಗ್ಗೆ ಅನೇಕ ಲೇಖನಗಳನ್ನು ಬರೆದು ಇದನ್ನು ತಡೆಗಟ್ಟಬೇಕೆಂದು ಅಂದಿನ ರಾಜ್ಯ ಸರ್ಕಾರಕ್ಕೆ ಆಗ್ರಹಿಸುವ ಪತ್ರ ಬರೆದು ಈ ವಿಷಯಗಳೆಲ್ಲಾ ದಿನಪತ್ರಿಕೆ ಮತ್ತು ಆಗ ಜಾಣಜಾಣೆಯರ ಪತ್ರಿಕೆ ಎಂದು ಹೇಳಿ ತರುತ್ತಿದ್ದ ಲಂಕೇಶ್ ಪತ್ರಿಕೆಯಲ್ಲೂ ಪ್ರಕಟಗೊಂಡಿತ್ತು.

1986ರ ಜಾತ್ರೆ ಸಮಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ತಂಗರಾಜ್ ಅವರು ಕಂದಾಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆ ನಡೆಸಿ ಬೆತ್ತಲೆ ಹೋಗುವ ಜನರನ್ನು ಜಾಗೃತಗೊಳಿಸಿ ತಡೆಯಬೇಕೆಂದು ಜಿಲ್ಲಾಡಳಿತ ತೀರ್ಮಾನಿಸಿತ್ತು. ಕೃಷ್ಣಪ್ಪನವರ ಡಿಎಸ್‌ಎಸ್ ಸಂಘಟನೆಯ ಹೋರಾಟದ ಜೊತೆಗೆ ಶಿವಮೊಗ್ಗ-ಸಾಗರ-ಸೊರಬದಲ್ಲಿನ ಎಲ್ಲ ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘ, ಪ್ರಗತಿಪರ ಮಹಿಳಾ ಲೇಖಕಿಯರ ಸಂಘಟನೆಗಳು ಕೈಜೋಡಿಸಿದ್ದವು. ಭದ್ರಾವತಿಯಿಂದ ಪ್ರೊ. ಚಂದ್ರಶೇಖರಯ್ಯ, ಡಿಎಸ್‌ಎಸ್ ಚಂದ್ರು, ತೋರಣಗಟ್ಟಿ ಚಂದ್ರಶೇಖರ್, ಬಿದರಳ್ಳಿ ನರಸಿಂಹಮೂರ್ತಿ, ಇನ್ನೂ ಅನೇಕ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

ನಾನು ಸರ್ಕಾರದ ಭಾಗವಾಗಿ ಸಂಜೆ ಹಳ್ಳಿಗಳಿಗೆ ಕರಪತ್ರಗಳನ್ನು ಹಂಚಿ, ‘ಯಾವ ದೇವರಿಗೂ ಬೆತ್ತಲೆ ಪೂಜೆ ಸಲ್ಲಿಸುವುದು ಇಷ್ಟವಾಗದು. ಇದೆಲ್ಲ ಹಿಂದುಳಿದವರನ್ನೂ, ದಲಿತರನ್ನೂ ಶೋಷಣೆ ಮಾಡುವ ಕ್ರೂರ ಪದ್ಧತಿ, ಇವನ್ನು ನಿವಾರಣೆಮಾಡಬೇಕೆಂದು ಭಾಷಣ ಮಾಡುತ್ತಾ ತಾಲ್ಲೂಕು ಕಛೇರಿಯ ಸಿಬ್ಬಂದಿಯನ್ನು ಹಲವು ತಂಡಗಳಾಗಿ ಮಾಡಿಕೊಂಡು ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದೆವು. ಸರ್ಕಾರದ ನಿರ್ದೇಶನವಿದ್ದುದರ ಜೊತೆಗೆ ಈ ವಿಷಯಗಳು ನನಗೆ ಇಷ್ಟವಾದ ಕೆಲಸವಾಗಿದ್ದರಿಂದ ಹೆಚ್ಚಿನ ಆಸಕ್ತಿಯಿಂದ ಬೆತ್ತಲೆ ಸೇವೆ ವಿರುದ್ಧ ಪ್ರಚಾರ ಮಾಡುತ್ತಿದ್ದೆವು. ಹೀಗೆ ಎಲ್ಲಾ ಕಡೆ ಪ್ರಚಾರ ಮಾಡಿದ ಮೇಲೆ ಪ್ರೊ.ಬಿ.ಕೆ ಮತ್ತು ಶಿವಪ್ಪ ಮಾಸ್ತರು ಇನ್ನು ಕೆಲವು ಗೆಳೆಯರು ನಮ್ಮಲ್ಲಿ ಊಟ ಉಪಚಾರ ಮಾಡಿ ಹೋಗುತ್ತಿದ್ದರು. ಇದರ ಸಂಪೂರ್ಣ ಘಟನೆಯ ವಿವರವನ್ನು ಈಗಾಗಲೇ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ 2010ರಲ್ಲಿ ಪ್ರಕಟಿಸಿರುವ ‘ಬಯಲು.. ಬೆತ್ತಲೆ..ಚಂದ್ರಗುತ್ತಿ’ ಎಂಬ ಪುಸ್ತಕದಲ್ಲಿನ ಮಾಹಿತಿಯನ್ನು ಇಲ್ಲಿ ಮುಂದುವರೆಸಲಾಗಿದೆ.

ಬೆತ್ತಲೆ ಸೇವೆ ನಡೆಯುವ ಒಂದು ವಾರ ಮುಂಚಿತವಾಗಿಯೇ ಕೃಷ್ಣಪ್ಪನವರ ನೇತೃತ್ವದಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳೊಡನೆ ಸಂಜೆ ಹಳ್ಳಿಗಳಿಗೆ ಹೋಗಿ ಭಾಷಣಗಳ ಮುಖಾಂತರ ಬೆತ್ತಲೆ ಸೇವೆಯನ್ನು ವಿರೋಧಿಸುವ ಪ್ರಚಾರದಲ್ಲಿ ನಾನೂ ತೊಡಗಿಸಿಕೊಂಡಿದ್ದೆ. ಚಂದ್ರಗುತ್ತಿ ದೇವಸ್ಥಾನ ಸಮಿತಿಯ ಸಂಚಾಲಕರಾಗಿದ್ದ ಈಡೂರು ಪರಶುರಾಮಪ್ಪ ಮತ್ತು ಅವರ ಸ್ನೇಹಿತರು ವೈಯಕ್ತಿಕವಾಗಿ ಬೆತ್ತಲೆ ಸೇವೆಯನ್ನು ವಿರೋಧಿಸುವ ಹೋರಾಟಕ್ಕೆ ನಮ್ಮ ಬಳಿ ಸಮ್ಮತಿಸಿದ್ದರೂ ಇದನ್ನು ವಿರೋಧಿಸುವುದು ಹೇಗೆ ಎಂಬುದರ ಬಗ್ಗೆ ಅವರಲ್ಲಿ ದುಗುಡ ತುಂಬಿತ್ತು. ಆಗಿನ ಜನಪ್ರತಿನಿಧಿಗಳು ಯಾರೂ ಈ ಬಗ್ಗೆ ಚಕಾರವೆತ್ತುತ್ತಿರಲಿಲ್ಲ. ಇದೊಂದು ಅತಿ ಸೂಕ್ಷ್ಮ ವಿಚಾರವೆಂದೂ- ಏನಾದರೂ ಮಾತನಾಡಿದರೆ ಜನರಿಂದ ದೂರ ಆಗುವ ಆತಂಕ ರಾಜಕಾರಣಿಗಳ ಒಳ ಇಂಗಿತವಾಗಿತ್ತು. ಚುನಾವಣಾ ರಾಜಕೀಯದ ದೃಷ್ಟಿಯಿಂದ ಅವರಿಗೆ ಇದೆಲ್ಲ ಬೇಡದ ವಿಚಾರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆತ್ತಲೆಸೇವೆ ನಡೆಸುವ ಮೊದಲ ದಿನ ಸರ್ಕಾರವು ಸೂಚಿಸಿದಂತೆ ಡಿ.ಎಸ್.ಎಸ್. ಮತ್ತು ಇತರೆ ಸಂಘಟನೆಯ ಕಾರ್ಯಕರ್ತರು- ಬೆತ್ತಲೆ ಹೋಗುತ್ತಿದ್ದವರನ್ನು ತಡೆದು ಅವರಿಗಾಗಿ ಹೊಸ ಬಟ್ಟೆ ತಂದಿದ್ದ ಮಹಿಳಾ ಕಾರ್ಯಕರ್ತರು ಅವರಿಗೆ ಸುತ್ತಿ- ಕಳುಹಿಸುತ್ತಿದ್ದರು. ಅವರು ಸುತ್ತಿಕೊಂಡು ಮುಂದೆ ಹೋಗುತ್ತಿದ್ದಾಗ ಮತ್ತೆ ಬಿಚ್ಚಿಕೊಂಡು ಓಡುತ್ತಿದ್ದುದು ನಡೆಯುತ್ತಲೂ ಇತ್ತು. ಮೊದಲ ದಿನದ ಈ ಕರ‍್ಯ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಸರ್ಕಾರ ಮತ್ತು ಡಿಎಸ್‌ಎಸ್ ಕರ‍್ಯಕರ್ತರು ಕೂಡ ಇದು ಸಂಪೂರ್ಣ ಯಶಸ್ವಿಯಾಯಿತೆಂದೇ ಭಾವಿಸಿದೆವು.

ಆದರೆ ಎರಡನೇ ದಿನ ಅಂದರೆ, 20-3-1986ರಂದು ಬೆಳಿಗ್ಗೆಯಿಂದಲೇ ಜನಸಾಗರ ವಿವಿಧ ಕಡೆಗಳಿಂದ ಹರಿದು ಬರುತ್ತಿತ್ತು. ನಾನು ನನ್ನ ಸಿಬ್ಬಂದಿಯೊಡನೆ ಮಾಮೂಲಿನಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಬೆತ್ತಲೆ ಸೇವೆ ಮಾಡೋ ಹೆಂಗಸಿನ ಫೋಟೋ ತೆಗೆಯುತ್ತಿದ್ದ ಇನ್ನೊಬ್ಬ ಮಹಿಳಾ ಫೋಟೋಗ್ರಾಫರ್‌ನನ್ನು ನಮ್ಮ ಎದುರಿಗೆ ಅಡ್ಡಹಾಕಿ ಅವಳು ತೆಗೆದಿದ್ದ ಫೋಟೋ ರೀಲುಗಳನ್ನು ಹೊರತೆಗೆದು ಅವಳನ್ನು ನಮ್ಮ ಎದುರಿಗೆ ಥಳಿಸಲು ಮುಂದಾಗಿ, ಅವಳನ್ನು ನಗ್ನಗೊಳಿಸಿದರು. ಆಗ ಜೋಗಿತಿಯರನ್ನು ನಾನು ತಡೆಯಲು ಹೋದಾಗ ವಾಗ್ವಾದ-ತಳ್ಳಾಟ ಪ್ರಾರಂಭವಾಯಿತು.

ಸರ್ಕಾರ ಮತ್ತು ವಿವಿಧ ಸಂಘಟನೆಗಳನ್ನು ಜೋಗತಿಯರು ಎದುರು ಹಾಕಿಕೊಳ್ಳುವುದನ್ನು ಊಹಿಸದಿದ್ದ ನಮಗೆ ಇದೆಲ್ಲ ಅನಿರೀಕ್ಷಿತ ಬೆಳವಣಿಗೆಯಾಗಿತ್ತು. ಜನರು ಅಲ್ಲಿ ಡಿ.ಎಸ್.ಎಸ್. ಕಾರ್ಯಕರ್ತರನ್ನ ಹೊಡೆದರಂತೆ. ಇಲ್ಲಿ ಬಟ್ಟೆ ಬಿಚ್ಚಿದರಂತೆ, ಎಂಬ ವದಂತಿಗಳನ್ನ ಹಬ್ಬಿಸಿ ಸರ್ಕಾರದ ವ್ಯವಸ್ಥೆಯಲ್ಲಾಗಲೀ, ಡಿಎಸ್ ಎಸ್ ಮತ್ತಿತರ ಹೋರಾಟಗಾರರಾಗಲೀ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಏನೂ ತಿಳಿಯದಂತಾಗಿದ್ದರು. ನನ್ನೊಡನೆ ಇದ್ದ ಸಿಬ್ಬಂದಿ ಚದುರಿ ಹೋಗಿ ನಾನು ರಕ್ಷಣೆಗಾಗಿ ಪೋಲೀಸ್ ವ್ಯಾನಿಗೆ ಹತ್ತಿಕೊಂಡಿದ್ದೆ. ನಾವು ತಂದಿದ್ದ ಜೀಪಿಗೆ ಬೆಂಕಿ ಹಚ್ಚಿಟ್ಟು ಜೋಗತಿಯರು ಅಟ್ಟಹಾಸ ಮೆರೆದಿದ್ದರು. ನಾವು ವ್ಯಾನಿನ ಒಳಗೆ ಇದ್ದು, ಇನ್ನು ಮುಂದೆ ಏನಾಗುವುದೋ ಅನ್ನೋ ಆತಂಕದಲ್ಲಿದ್ದಾಗ ನನಗೆ ಪರಿಚಿತ ವ್ಯಕ್ತಿಯೊಬ್ಬ ಓಡಿಬಂದು ನನ್ನ ಪರಿಚಯ ಗುರುತು ಸಿಗದಂತೆ ಭಂಡಾರ ಹಾಕಿ ಅಲ್ಲಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ತನ್ನ ಪಂಚೆ ನೀಡಿ ಪ್ಯಾಂಟ್ ಷರಟು ತೆಗೆಸಿ ನಾನು ಯಾರೋ ಅನ್ನೋ ರೀತಿ ಮಾಡಿಕೊಂಡು ತನ್ನ ರಾಜದೂತ್ ಮೋಟಾರ್‌ಬೈಕ್‌ನಲ್ಲಿ ಸೊರಬಕ್ಕೆ ತಂದುಬಿಟ್ಟರು.

ಅಲ್ಲಿಂದ ಎಲ್ಲರಿಗೂ ಫೋನ್ ಮಾಡಿ ಆಗಿದ್ದ ಅನಾಹುತವನ್ನು ತಿಳಿಸಿದೆ. ಇದು ಸುಮಾರು ಮಧ್ಯಾಹ್ನ 3.00 ಘಂಟೆಯ ತನಕ ಜೋಗತಿಯರ ಅಟ್ಟಹಾಸಕ್ಕೆ ಗುರಿಯಾದ ಡಿ.ಎಸ್.ಎಸ್. ಮತ್ತು ಇತರೆ ಕರ‍್ಯಕರ್ತರು ತಮಗೆ ಸಿಕ್ಕ ಸಿಕ್ಕ ಕಡೆ ಚದುರಿ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಪರಾರಿಯಾದರು. ಈ ಸಂದರ್ಭದಲ್ಲಿ ಕೃಷ್ಣಪ್ಪನವರೇನಾದರೂ ಈ ಜೋಗತಿಯರ ಕೈಗೆ ಸಿಕ್ಕಿದ್ದರೆ ಬಹುಶಃ ಅಂದೇ ಅವರ ಕೊಲೆ ಮಾಡಲು ಹೇಸುತ್ತಿರಲಿಲ್ಲ.

ಸುಮಾರು 4.00 ಘಂಟೆಯ ಸುಮಾರಿಗೆ ಹೆಚ್ಚಿನ ಪೋಲೀಸ್ ಬಂದು ಇಡೀ ಜೋಗತಿಯರ ಸಮೂಹವನ್ನು ಬೆತ್ತಲೆಯಾಗಿಯೇ ಅರೆಸ್ಟ್ ಮಾಡಿ ಸೊರಬ ಪೋಲೀಸ್ ಠಾಣೆಯಲ್ಲಿ ಕೂಡಿ ಹಾಕಿದ್ದರು. ಸುಮಾರು 5-6 ಘಂಟೆಯ ಸುಮಾರಿಗೆ ಪೋಲೀಸ್ ಬಂದು ಇವರಲ್ಲಿ ಯಾರು ನಿಮ್ಮ ಮೇಲೆ ಹಲ್ಲೆ ಮಾಡಿದರು ಗುರ್ತಿಸಿ ಎಂದು ಹೇಳಿದರು.

ಪೊಲೀಸರೊಡನೆ ಹೋಗಿ ನೋಡುತ್ತೇನೆ, ಅದೊಂದು ಭಯಂಕರ ದೃಶ್ಯ. ಪೀಚಲು ದೇಹಗಳ ಅನಾರೋಗ್ಯವೇ ಮೂರ್ತಿವೆತ್ತ- ಕುಡಿತದ ಅಮಲಿನಲ್ಲಿದ್ದ ಅವರಿಗೆ ತಾವೇನು ಮಾಡಿದ್ದೆವು ಅನ್ನುವುದೇ ಅವರಿಗೆ ಗೊತ್ತಿರಲಿಲ್ಲ. ಯಾವುದೋ ಕಾಡಿನ ಪ್ರಾಣಿಗಳಂತೆ ಪಿಳಿಪಿಳಿ ಕಣ್ಣು ಬಿಡುತ್ತಾ ಆ ರೂಮಿಗೆ ಬಂದವರನ್ನು ನೋಡುತ್ತಿದ್ದರು. ನನಗೆ `ಯಾರು ಏನು ಮಾಡಿದರು ಎನ್ನುವುದನ್ನ ಯಾರ ಮೇಲೆ ಹೇಳಲಿ’ ಎನ್ನುತ್ತಾ ಈಚೆಗೆ ಬಂದೆ. ಆದರೆ ಈ ಜೋಗತಿಯರು ಅಂತಹ ಸ್ಥಿತಿಯಲ್ಲೂ ತಮ್ಮ ಬಳಿ ಬೆಳಗಿನಿಂದ ದೋಚಿದ ಒಡವೆಗಳು ಮತ್ತು ಹಣ ಇರುವುದು ಸಣ್ಣ ಸಣ್ಣ ಚೀಲಗಳಲ್ಲಿರುವುದು ಪರಿಶೀಲಿಸಿದಾಗ ಕಂಡು ಬಂತು.

ಈ ಘಟನೆಯ ನಂತರ ಆದ ಮಾರನೇ ದಿನ ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಮುಖ ಸುದ್ದಿಯಾಗಿ ವರದಿಗಳು ಪ್ರಕಟಗೊಂಡವು. ನಾನು ಆತಂಕದಿAದ ನನ್ನ ಹೆಂಡತಿಗೆ ‘I ಚಿm Sಚಿಜಿe’ ಎಂದು ತಂತಿ ನೀಡಿದಾಗ ಅವಳು ಗಲಿಬಿಲಿಗೊಂಡು ಫೋನ್ ಮಾಡಿದಳು. ಇತ್ತ ನನ್ನ ಹಳ್ಳಿ ಹನಗವಾಡಿಯಿಂದ ಬಂದಿದ್ದ ಜೋಗತಿಯರಿಂದಲೇ ರೋಚಕವಾಗಿ ತಲುಪಿದ್ದ ಸುದ್ದಿಯಿಂದ, ವರದಿಗಳನ್ನು ಕೇಳಿಕೊಂಡ ನಮ್ಮ ಊರಿನ ಜನರು ಮತ್ತು ನಮ್ಮ ಅವ್ವ, ಅಣ್ಣ-ತಮ್ಮಂದಿರು ಮತ್ತು ಮಿತ್ರರ ದಂಡು ಸೊರಬಕ್ಕೆ ನನ್ನನ್ನು ನೋಡಲು ಬಂದಿದ್ದರು. ಅವರು ನಾನು ಮಾಮೂಲಿನಂತೆ ಇದ್ದುದನ್ನು ನೋಡಿ ನೆಮ್ಮದಿಗೊಂಡರು. ನನ್ನ ತಮ್ಮನೊಬ್ಬ ನಿನ್ನನ್ನು ಆಸ್ಪತ್ರೆಯಲ್ಲಿ ಬ್ಯಾಂಡೇಜ್ ಸಮೇತ ನೋಡುವ ಕಲ್ಪನೆಯಲ್ಲಿಯೆ ಓಡಿ ಬಂದೆವು ಎಂದಾಗ ನಾನು ಕೂದಲೆಳೆಯಲ್ಲಿ ಸಾವು ತಪ್ಪಿದ್ದನ್ನು ವಿವರಿಸಲಿಲ್ಲ.

ನಾನು ತಹಶೀಲ್ದಾರನಾಗಿ ಹೊಸದರಲ್ಲಿ ಆಗಿದ್ದ ಈ ಘಟನೆ ಇಂದಿಗೂ ನನಗೆ ಎಚ್ಚರಿಕೆಯ ಮಾರ್ಗ ಸೂಚಿಯಾಗಿದೆ. ಒಂದು ವಿಷಾದದ ಸಂಗತಿಯೆAದರೆ ನಮ್ಮ ಪೋಲೀಸರು ಇಂದಿಗೂ ಯಥಾಸ್ಥಿತಿಯ ರಕ್ಷಕರಾಗಿಯೇ ಉಳಿದಿದ್ದಾರೆ. ಅವರನ್ನು ಬದಲಾಗುತ್ತಿರುವ ಕಾಲಮಾನದ ಜೊತೆಗೆ ಬದಲಾವಣೆಯ ರೂವಾರಿಗಳಾಗುವಂತೆ ತರಬೇತಿ ನೀಡುವಲ್ಲಿ ಸರ್ಕಾರವು ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ.

ಈ ಘಟನೆಯ ನಂತರದ ಆದ ಬೆಳವಣಿಗೆಯ ಹಿನ್ನೆಲೆಯಲ್ಲಿ ಒಂದು ಮಹತ್ತರ ಬದಲಾವಣೆ ಆ ಪ್ರದೇಶದಲ್ಲಿ ಆಗಿದೆ. ಬೆತ್ತಲೆ ಸೇವೆಯನ್ನು ಸರ್ಕಾರ ನಿಷೇಧಿಸಿದೆ. ಅದರೊಟ್ಟಿಗೆ ಅನೇಕ ಸಾಮಾಜಿಕ ಅನಿಷ್ಟಗಳ ಬಗ್ಗೆ ಸಾಮಾನ್ಯ ಜನರ ಮಧ್ಯದಲ್ಲಿ ಚರ್ಚೆಗಳಾಗಿವೆ. ಕೃಷ್ಣಪ್ಪನವರ ಹೋರಾಟ ಹೊಸ ದಿಕ್ಕಿನೆಡೆಗೆ ಸಮಾಜವನ್ನು ಮುಖ ಮಾಡಿಸಿದೆ. ಇದು ಅವರ ಆತ್ಮಕ್ಕೆ ನೆಮ್ಮದಿಯನ್ನು ನೀಡಿದೆ ಎಂದರೆ ತಪ್ಪಾಗಲಾರದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ28 minutes ago

ದಾವಣಗೆರೆ | ಈ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ:ಕುಕ್ಕುವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ...

ದಿನದ ಸುದ್ದಿ8 hours ago

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆ : ಜೀವಿತ ಪ್ರಮಾಣ ಪತ್ರ ಸಲ್ಲಿಕೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು ಇದರಲ್ಲಿ 5577 ಪಿಂಚಣಿದಾರರು ಇದುವರೆಗೆ ತಮ್ಮ ಜೀವಿತ ಪ್ರಮಾಣ...

ದಿನದ ಸುದ್ದಿ8 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ ವಿದ್ಯುತ್ ಉತ್ಪಾದನೆಗೆ ಒತ್ತು; ಇಂಧನ ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ...

ದಿನದ ಸುದ್ದಿ8 hours ago

ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ...

ದಿನದ ಸುದ್ದಿ8 hours ago

ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ

ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ...

ದಿನದ ಸುದ್ದಿ23 hours ago

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್...

ದಿನದ ಸುದ್ದಿ2 days ago

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ದಿನದ ಸುದ್ದಿ2 days ago

ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ...

ದಿನದ ಸುದ್ದಿ2 days ago

ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ...

ದಿನದ ಸುದ್ದಿ3 days ago

ಕವಿತೆ | ನಾನೊಲಿದೆನಯ್ಯಾ

ರಮ್ಯ ಕೆ ಜಿ, ಮೂರ್ನಾಡು ಅಲೆಯುತ್ತಿದೆ ಈ ರೂಹು ನನ್ನೊಳಗಿಂದ ಚಿಗಿದು ನಿನ್ನ ತುದಿಬೆರಳಲಿ ಕುಣಿದು ಗಾಳಿತುಟಿಯ ಸೋಕಿದಾಕ್ಷಣ ಬೆವೆತು, ಮಳೆ ಹೊಯ್ಯಿಸಿ ಮಣ್ಣ ಘಮದೊಳಗೆ ಲೀನವಾಗುವಂತೆ....

Trending