ಲೈಫ್ ಸ್ಟೈಲ್
ಮಹಿಳೆಯರಲ್ಲಿ ಹೃದಯಾಘಾತ..!
ಅಧುನಿಕ ಸಮಾಜದಲ್ಲಿ ಮಹಿಳೆಯರು ಪುರುಷರಿಗಿಂತ ಹತ್ತು ವರ್ಷ (ವಯಸ್ಸಿನಲ್ಲಿ) ಹೆಚ್ಚು ಕಾಲ ಬದುಕುತ್ತಿದ್ದಾರೆ. ಆದರೆ ವಯಸ್ಸು ಮುಂದುವರಿದಂತೆಲ್ಲಾ ಹೃದಯಾಘಾತಗಳು ಸ್ತ್ರೀ ಪುರುಷರಿಬ್ಬರಲೂ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವುದಾದರೂ, ಮಹಿಳೆಯರಲ್ಲಿ ಪುರುಷರಿಗಿಂತ 10 ವರ್ಷಗಳ ವಯಸ್ಸಿನ ನಂತರ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವುವು. ಇದಕ್ಕೆ ಕಾರಣ ಮಹಿಳೆಯರಲ್ಲಿನ ಸ್ತ್ರೀ ಹಾರ್ಮೋನುಗಳು ಹೃದಯಾಘಾತಗಳು ಉಂಟಾಗದಂತೆ ಮಾಡುವವು. ಮಹಿಳೆಯರು ಮಧುಮೇಹ ರೋಗ ಮತ್ತು ಮುಟ್ಟು ನಿಲ್ಲುವಿಕೆಯಂತಹ ನೈಸರ್ಗಿಕ ಕಾರಣಗಳಿಂದಲೂ, ಈ ಪ್ರಕೃತಿ ದತ್ತವಾದ ರಕ್ಷಣೆಯನ್ನು ಕಳೆದುಲಲಕೊಳ್ಳುವರು.
ಮಹಿಳೆಯರಲ್ಲಿಯೂ ಉದರ ಭಾಗದಲ್ಲಿ ಕೊಬ್ಬಿನ ಶೇಕರಣೆಯು ಹೃದಯಾಘಾತಗಳಿಗೆ ಮುಖ್ಯ ಕಾರಣವಾಗುವುದು 18 ರಿಂದ 20 ವರ್ಷವಯಸ್ಸು ದಾಟಿದ ಮಹಿಳೆಯರಲ್ಲಿ ದೇಹದ ತೂಕವು 7 ರಿಂದ 11 ರಷ್ಟು ಕಿಲೋಗ್ರಾಂ ಹೆಚ್ಚಿದಲ್ಲಿ ಅವರ ಮಧ್ಯವಯಸ್ಸಿನಲ್ಲಿ ಹೃದಯಾಘಾತಗಳು ಸಂಭವಿಸುವುದು ಅಂಜಿಕೆ ಸ್ವಭಾವದ ಖಿನ್ನ ಮಾನಸಿಕ ರೋಗದ ಮಹಿಳೆಯರಲ್ಲಿ ಮತ್ತು ಸಾಮಾಜಿಕ ಬೆಂಬಲ ದೊರಕದಿರುವ ಮಹಿಳೆಯರಲ್ಲಿ ಹೃದಯಾಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವುದು ಎಂದು ಇನ್ನೊಂದು ಅಧ್ಯಯನದಿಂದ ತಿಳಿದಿಬಂದದೆ.
45 ವರ್ಷ ವಯಸ್ಸಿನ ನಂತರ ಮಹಿಳೆಯರಲ್ಲಿ ರಕ್ತದೊತ್ತಡವು ಪುರುಷರಿಗಿಂತ ಹೆಚ್ಚು ತ್ವರಿತವಾಗಿ ಮೇಲಕ್ಕೇರುವುದು. ಅಧಿಕ ರಕ್ತದೊತ್ತಡವು ಪುರುಷರಲ್ಲಿ ಹೃದಯಾಘಾತಗಳನ್ನು 3 ಪಾಲು ಹೆಚ್ಚಿಸುವುದಾದರೆ ಮಹಿಳೆಯರಲ್ಲಿ 4 ಪಾಲು ಹೆಚ್ಚಿಸುವುದು, ಮಧುಮೇಹ ರೋಗವು ಪುರುಷರಲ್ಲಿ ಹೃದಯಾಘಾತಗಳನ್ನು 2 ರಿಂದ 3 ರಷ್ಟು ಹೆಚ್ಚಿಸುವುದಾದರೆ ಮಹಿಳೆಯರಲ್ಲಿ 3 ರಿಂದ 7ರಷ್ಟು ಹೃದಯಾಘಾತಗಳು ಮರುಕಳಿಸುವ ಸಂಭವಗಳೂ ಹೆಚ್ಚಾಗಿರುವುದು. 45 ವರ್ಷಗಳಿಗೂ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ರಕ್ತದ ಕೊಲೆಸ್ಟ್ರಾಲ್ ಕೊಬ್ಬಿನ ಮಟ್ಟವು ಅದೇ ವಯಸ್ಸಿನ ಪುರುಷರಿಗಿಂತ ಶೇಕಡ 10 ಮಿ.ಗ್ರಾಂ.ನಷ್ಟು ಕಡಿಮೆಯಾಗಿಯೂ, 65 ವರ್ಷ ವಯಸ್ಸಿನ ನಂತರ ಶೇಕಡ 10 ಮಿ.ಗ್ರಾಂ.ನಷ್ಟು ಹೆಚ್ಚಾಗಿಯೂ ಇರುವುದಾಗಿ ಕಂಡುಬಂದಿದೆ.
ರಕ್ತದಲ್ಲಿ ಹೆಚ್ಚಿನ ಮಟ್ಟದ ಎಲ್ ಡಿಎಲ್ ಕೊಲೆಸ್ಟ್ರಾಲ್ ಹೃದಯಾಘಾತಕ್ಕೊಂದು ಮುಖ್ಯ ಕಾರಣ. ಮಹಿಳೆಯರಲ್ಲಿ 40 ವರ್ಷ ವಯಸ್ಸಿನ ನಂತರ ಪ್ರತಿ ವರ್ಷವೊಂದರಲ್ಲಿ ಎಲ್ ಡಿಎಲ್ ಕೊಲೆಸ್ಟರಾಲ್ ಶೇಕಡ 2 ಮಿ.ಗ್ರಾಂ. ನಂತೆ 60 ವರ್ಷ ವಯಸ್ಸಿನವರೆಗೂ ಮೇಲೇರುವುದು. ಸಾಮಾನ್ಯವಾಗಿ ಮಹಿಳೆಯರಲ್ಲಿ ಮುಟ್ಟು ನಿಲ್ಲುವ ಮುನ್ನ ಎಚ್ ಡಿಎಲ್ ಕೊಲೆಸ್ಟ್ರಾಲ್ (ಉತ್ತಮ ಕೊಲೆಸ್ಟ್ರಾಲ್) ಮಟ್ಟವು ಪುರುಷರಿಗಿಂತ 10ಮಿ.ಗ್ರಾಂ. ಹೆಚ್ಚಾಗಿರುವುದು. ರಕ್ತದ ಎಚ್ ಡಿಎಲ್ ಮಟ್ಟವು ಒಂದು ಜನಾಂಗದಿಂದ ಇನ್ನೊಂದು ಜನಾಂಗದಲ್ಲಿ ಬಹಳಷ್ಟು ಭಿನ್ನವಾಗಿರುವುದು. ಭಾರತದೇಶದ ಬುಡಕಟ್ಟಿನ ಮಹಿಳೆಯರಲ್ಲಿ ಎಚ್ ಡಿಎಲ್ ಮಟ್ಟವು ಚೀನಾ ಮತ್ತು ಜಪಾನ್ ದೇಶದ ಜನರಿಗಿಂತ ಕಡಿಮೆ ಮಟ್ಟದಲ್ಲಿರುವುದು.
ಭಾರತೀಯ ಮಹಿಳೆಯರಲ್ಲಿ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಹೃದಯಾಘಾತಗಳಿಗೆ ಇದೂ ಒಂದು ಕಾರಣವೆಂದು ಹೇಳಲಾಗಿದೆ. ರಕ್ತದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವು ಹೃದಯಾಘಾತಗಳಿಗೆ ಕಾರಣವಾಗುವುದಾದರೂ ಕೊಲೆಸ್ಟ್ರಾಲ್ ಮತ್ತು ಎಚ್ ಡಿಎಲ್ ಅನುಪಾತದ ಸೂಚ್ಯಂಕವು ಹೆಚ್ಚು ಅರ್ಥಗರ್ಭಿತವಾದುದು. ಈ ಸೂಚ್ಯಂಕ ಸಂಖ್ಯೆಗೆ ಅನುಗುಣವಾಗಿ (ಹೆಚ್ಚಿದಂತೆ) ಹೃದಯಾಘಾತಗಳು ಮೇಲೇರುವುವು. ಭಾರತ ದೇಶದ ಮಹಿಳೆಯರಲ್ಲಿ ರಕ್ತದಲ್ಲಿ ಎಚ್ ಡಿಎಲ್ ಮಟ್ಟವು ಕಡಿಮೆಯಾಗಿರುವುದರಿಂದ ಈ ಅನುಪಾತದ ಸೂಚ್ಯಂಕವು ಹೆಚ್ಚಿರುವುದು. ಸಾಮಾನ್ಯವಾಗಿರಬೇಕಾದ ಕೊಲೆಸ್ಟ್ರಾಲ್ ಎಚ್ ಡಿಎಲ್ ಅನುಪಾತದ ಸೂಚ್ಯಂಕ 4. ಈ ಸಂಖ್ಯೆಗೂ ಕಡಿಮೆಯಿರುವುದು ಉತ್ತಮ.
ಮಹಿಳೆಯರಲ್ಲಿ ಹೃದಯಾಘಾತಗಳಿಗೆ ದೇಹದಲ್ಲಿನ ಲೈಪೊಪ್ರೋಟೀನ್-ಎ ಒಂದು ಮುಖ್ಯ ಕಾರಣವಾಗಿರುವುದು. ಸ್ತ್ರೀ ಹಾರ್ಮೋನ್ ಗಳು ದೇಹದಲ್ಲಿನ ಲೈಪೊಪ್ರೋಟೀನ್-ಎ ಮಟ್ಟವನ್ನು ತಗ್ಗಿಸುವುವು. ಮುಟ್ಟು ನಿಂತ ನಂತರ ದೇಹದಲ್ಲಿ ಲೈಪೊಪ್ರೋಟೀನ್-ಎ ಶೇಕಡ 10 ರಷ್ಟು ಹೆಚ್ಚುವುದು. ದೇಹದಲ್ಲಿ ಮೇಲಕ್ಕೇರಿದ ಹೋಮೊಸಿಸ್ಟೀನ್ ಹೃದಯಾಘಾತಗಳಿಗೆ ಕಾರಣವಾಗುವುದು. ಇದರ ಜೊತೆಗೆ ಲೈಪೊಪ್ರೋಟೀನ್-ಎ ಅಂಶವೂ ಜಾಸ್ತಿಯಾಗಿದ್ದಲ್ಲಿ ಹೃದಯಾಘಾತಗಳು ಅನೇಕ ಪುಟ್ಟು ಹೆಚ್ಚುವುವು.
ಮಹಿಳೆಯರಲ್ಲಿ ಹೃದಯಬೇನೆ ಮತ್ತು ಹೃದಯಾಘಾತಗಳಿಗೆ ಅಧಿಕ ರಕ್ತದೊತ್ತಡ, ಮಧುಮೇಹ ರೋಗ, ರಕ್ತದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್, ಕುಗ್ಗಿದ ಎಚ್ ಡಿಎಲ್ ಮಟ್ಟಗಳು ಮತ್ತು ಲೈಪೊಪ್ರೋಟೀನ್-ಎ ಕಾರಣವಾಗಿರುವುದಾದರೂ, ಭಾರತ ದೇಶದ ಮಹಿಳೆಯರಲ್ಲಿ ಪಾಶ್ಚಿಮಾತ್ಯ ದೇಶದ ಮಹಿಳೆಯರಿಗಿಂತ ಅಧಿಕ ರಕ್ತದೊತ್ತಡ, ರಕ್ತದಲ್ಲಿ ಹೆಚ್ಚದ ಕೊಲೆಸ್ಟ್ರಾಲ್ ಕೊಬ್ಬು ಅವರಲ್ಲಿ ಧೂಮಪಾನ ಚಟ ಇಲ್ಲದಿದ್ದರೂ, ಮಧುಮೇಹ ರೋಗ, ಬೊಜ್ಜುದೇಹ,ರಕ್ತದಲ್ಲಿ ಹೆಚ್ಚಿದ ಟ್ರೈಗ್ಲಿಸರೈಡ್ ಮಟ್ಟ ಮತ್ತು ತಗ್ಗಿದ ಎಚ್ ಡಿಎಲ್ ಮಟ್ಟ ಭಾರತ ದೇಶದ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವುವು. ಹೀಗಾಗಿ ಭಾರತೀಯರಾಗಿರುವುದೇ (ಅನುವಂಶೀಯತೆ) ಹೃದಯಾಘಾತಗಳಿಗೆ ಒಂದು ಮುಖ್ಯ ಕಾರಣ ಎಂದು ಹೇಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ7 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


