Connect with us

ಲೈಫ್ ಸ್ಟೈಲ್

ಹೃದಯಾಘಾತ: ಸಮಯೋಚಿತವಾಗಿದ್ದರೆ ಸಾವನ್ನು ಗೆಲ್ಲಬಹುದು

Published

on

ಹೃದಯಘಾತವಾಗಬೇಕೆಂದರೆ ಕೇವಲ ಭಾವೋದ್ವೇಗಗಳೇ ಆಗಬೇಕಿಲ್ಲ, ವಯೋವೃದ್ಧರಿಗೇ ಆಗಬೇಕಿಲ್ಲ, ಅಧಿಕ ರಕ್ತದೊತ್ತಡವಿರುವವರಿಗೇ ಆಗಬೇಕಿಲ್ಲ ಅಥವಾ ಶ್ವಾಸಕೋಶದ ತೊಂದರೆಯಿರುವರಿಗೇ ಆಗಬೇಕಿಲ್ಲ. ಬದಲಾಗಿ, ಒಂದು ಸಣ್ಣ ಮಾನಸಿಕ ಒತ್ತಡ ಅಥವಾ ಎಂದೂ ಇಲ್ಲದ ಸಣ್ಣ ದೈಹಿಕ ಪರಿಶ್ರಮದಿಂದಲೂ ಹೃದಯಾಘಾತ ಸಂಭವಿಸಬಹುದು.

ಆದರೆ ಇದಾವುದರ ಬಗ್ಗೆ ಅರಿವಿಲ್ಲದೇ ಇದರ ಲಕ್ಷಣಗಳು ಕಂಡುಬಂದರೂ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ನಮ್ಮ ಸಾವಿಗೆ ಆಹ್ವಾನ ನೀಡಿದಂತಾಗುತ್ತದೆ. ನಮಗೆ ಅಥವಾ ನಮ್ಮೆದುರು ಯಾರಿಗೇ ಆಗಲಿ ಹೃದಯಾಘಾತದ ಗುಣಲಕ್ಷಣಗಳು ಕಂಡುಬಂದಲ್ಲಿ ಕೆಲ ಸೂಕ್ತ ಕೆಲಸದಿಂದ ಜೀವ ಸಾವಿನಿಂದ ಗೆಲ್ಲಬಹುದು. ಹೌದು, ಹೃದಯಾಘಾತವಾದ ನಂತರದ ಒಂದು ಗಂಟೆಯ ಸಮಯ ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಮೂಲ್ಯವಾಗಿರುತ್ತದೆ.

ಹೃದಯಾಘಾತ( Myocardial Infarction)ವೆಂದರೆ ಹೃದಯದ ಸ್ನಾಯುಗಳಿಗೆ ರಕ್ತಸಂಚಲನೆಯಲ್ಲಿ ಕೊರತೆಯುಂಟಾಗಿ ಹೃದಯದ ಜೀವಕೋಶಗಳು ಸಾಯುವುದು.

ಹೃದಯಾಘಾತ ಉಂಟು ಮಾಡುವ ಅಪಾಯಕಾರಿ ಅಂಶಗಳು

ಪುರುಷರಿಗಿಂತ ಮಹಿಳೆಯರಲ್ಲಿ, ಹಾಗೂ 45 ರಿಂದ 65ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಸಂಭವಿಸುವ ಸಾಧ್ಯತೆಗಳು ಇವೆ.

  • ಮಧುಮೇಹ
  • ಧೂಮಪಾನ
  • ಸ್ಥೂಲಕಾಯತೆ
  • ಮದ್ಯಪಾನ
  • ಅಧಿಕ ರಕ್ತದೊತ್ತಡ
  • ಮಾನಸಿಕ ಒತ್ತಡಗಳು
  • ವಂಶಪಾರಂಪರ್ಯತೆ
  • ಕಠಿಣ ದೈಹಿಕ ವ್ಯಾಯಾಮಗಳು

ಹೃದಯಾಘಾತ ಹೇಗೆ ಉಂಟಾಗುತ್ತದೆ?

ಹೃದಯದ ಜೀವಕಣಗಳಿಗೆ ರಕ್ತಸಂಚಾರ ಅಥವಾ ಆಮ್ಲಜನಕ ಪೂರೈಕೆಯಲ್ಲಿ ಕೊರತೆಯುಂಟಾಗುವ ಯಾವುದೇ ಸಂದರ್ಭವೂ ಹೃದಯಾಘಾತಕ್ಕೆ ಕಾರಣವಾಗಬಹುದು.

ಸಾಮಾನ್ಯವಾಗಿ ಹೃದಯಕ್ಕೆ ರಕ್ತಸಂಚಾರ ಒದಗಿಸುವ ಅಪಧಮನಿ(Coronary Artery) ಗಳಲ್ಲಿ ಕೊಬ್ಬಿನಾಂಶ ಅಥವಾ ಪ್ಲೇಟಲೆಟ್ಸ್ ಶೇಖರಣೆಗೊಳ್ಳುವುದರ ಪರಿಣಾಮ ಸಂಭವಿಸುವ ಹೃದಯಾಘಾತಗಳೇ ಹೆಚ್ಚು.ಈ ಮೊದಲು ತುಂಬಾ ದೀರ್ಘಕಾಲದಿಂದಲೂ ಹೃದಯ ರಕ್ತನಾಳಗಳಲ್ಲಿ ತೊಂದರೆ ಇರುವವರು ಯಾವುದಾದರೂ ಸಣ್ಣ ಮಾನಸಿಕ ಒತ್ತಡ, ದೈಹಿಕ ಒತ್ತಡ ಅಥವಾ ಭಾವೋದ್ವೇಗವು ಹೃದಯಾಘಾತಕ್ಕೆ ಕಾರಣವಾಗಬಹುದು. ಹೃದಯದ ಸ್ನಾಯುಗಳು ತಮ್ಮ ಕೆಲಸದೊತ್ತಡಕ್ಕೆ ಮಣಿದು ಮುಂದೊಂದು ದಿನ ಜೀವ ಕಳೆದುಕೊಳ್ಳುತ್ತವೆ, ಇದೇ ಹೃದಯಾಘಾತ.

ರೋಗ ಗುಣಲಕ್ಷಣಗಳು

ಎದೆ ನೋವು(ಎದೆಯನ್ನುಬಿಗಿಯಾಗಿ ಹಿಡಿದಂತೆ, ಒತ್ತಿದಂತೆ ಅಥವಾ ಹಿಸುಕಿದಂತೆ ಅನುಭವವಾಗುತ್ತದೆ)

ಸಾಮಾನ್ಯವಾಗಿ ಎದೆನೋವು ಎಡಬಾಹುವಿಗೆ ಹರಡುವುದುಂಟು(ಕೆಲವೊಮ್ಮೆ ಕತ್ತು, ದವಡೆ, ಬಲಬಾಹು, ಹೊಟ್ಟೆಯ ಮೇಲ್ಭಾಗಕ್ಕೂ ಹರಡುವುದುಂಟು)

  • ಉಸಿರಾಟದ ತೊಂದರೆ
  • ಬೆವರುವಿಕೆ
  • ತಲೆ ಸುತ್ತು
  • ನಿಶ್ಯಕ್ತಿಯಿಂದ ಕುಸಿದು ಬೀಳುವುದು

ರೋಗನಿರ್ಣಯ:ಇಸಿಜಿ(ECG)

ಆಸ್ಪತ್ರೆಗೆ ಪ್ರವೇಶ ಪಡೆದ ನಂತರ ಮಾಡುವ ಮೊಟ್ಟಮೊದಲ(ಪ್ರಾಥಮಿಕ) ಪರೀಕ್ಷೆ ಇದಾಗಿರುತ್ತದೆ. ಇದರಲ್ಲಿ ವಿವಿಧ ಎಲೆಕ್ಟ್ರೋಡ್ ಗಳ ಚಿತ್ರಣದ ಮೂಲಕ ಹೃದಯಾಘಾತದ ನಿರ್ಣಯವನ್ನು ಮಾಡಲಾಗುತ್ತದೆ.

ಟ್ರೊಪೊನಿನ್( Troponin I and T) ಮತ್ತು ಸಿರಮ್ ಕ್ರಿಯಾಟಿನ್ ಕೈನೇಸ್(CK-MB)

ಈ ಎರಡು ಅಂಶಗಳಲ್ಲಿ ಏರಿಕೆಯು ಇನ್ನೂ ಹೆಚ್ಚಿನ ಧನಾತ್ಮಕ ರೋಗನಿರ್ಣಯದಲ್ಲಿ ಸಹಕಾರಿಯಾಗುತ್ತದೆ
ಇನ್ನೂ ಹೆಚ್ಚಿನ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ 2ಡಿ ಎಕೋಕಾರರ್ಡಿಯೋಗ್ರಾಫಿ, ನ್ಯೂಕ್ಲಿಯರ್

ಸ್ಕ್ಯಾನಿಂಗ್ ನಂತಹ ಪರೀಕ್ಷೆಗಳನ್ನು ಮಾಡಲಾಗುತ್ತದೆ.
ಚಿಕಿತ್ಸೆ

  • ವ್ಯಕ್ತಿಯನ್ನು ಆದಷ್ಟು ಸಮಾಧಾನ ಚಿತ್ತವಾಗಿರಿಸಿಕೊಂಡು, ದೀರ್ಘ ಉಸಿರಾಟವನ್ನು ಪ್ರೋತ್ಸಾಹಿಸಬೇಕು.
  • ರಕ್ತದೊತ್ತಡ ಕುಸಿಯುವ ಸಾಧ್ಯತೆಗಳು ಹೆಚ್ಚಿರುವ ಕಾರಣ ಎರಡೂ ಕಾಲುಗಳನ್ನು ದೇಹ ಮಟ್ಟದಿಂದ ಮೇಲಕ್ಕೆ ಎತ್ತಿ ಹಿಡಿಯಬೇಕು.
  • ನಂತರ ತಕ್ಷಣ ಅಲ್ಲೇ ಇರುವ ಹತ್ತಿರದ ವೈದ್ಯರ ಬಳಿ ಕರೆದುಕೊಂಡು ಹೋಗಬೇಕು.
  • ಚಿಕಿತ್ಸೆಯಲ್ಲಿ ಮೊದಲು ಆಮ್ಲಜನಕ, ಆಸ್ಪಿರಿನ್ ಮತ್ತು/ಅಥವಾ ಕ್ಲಾಪಿಡಾಗ್ರೆಲ್ ಮತ್ತು ನೈಟ್ರೊಗ್ಲಿಸರಿನ್ ಎಂಬ ಮಾತ್ರೆಗಳನ್ನು ನೀಡಲಾಗುತ್ತದೆ. ಆದರೆ ಈ ಮಾತ್ರೆಗಳನ್ನು ಎಷ್ಟುಬೇಗ ನೀಡುತ್ತೇವೊ ಅಷ್ಟು ಬೇಗ ರೋಗಿಯ ಹೃದಯದ ಮೇಲೆ ತನ್ನ ಕೆಲಸದೊತ್ತಡ ಕಡಿಮೆಯಾಗಿ ರೋಗಿ ಗುಣಮುಖವಾಗುವ ಸಂದರ್ಭ ಹೆಚ್ಚಿರುತ್ತದೆ. ಆದ ಕಾರಣ ಹೃದಯಾಘಾತವಾದ ನಂತರದ 1 ಗಂಟೆಯ ಅವಧಿ ಅತ್ಯಮೂಲ್ಯವಾಗಿರುತ್ತದೆ.
  • ನಂತರ ಹೃದಯರೋಗ ತಜ್ಞರು ರೋಗಿಯನ್ನು ಪರಿಶೀಲಿಸಿ, ಕ್ಯಾತ್ ಲ್ಯಾಬ್‍ನಲ್ಲಿ ಏಂಜಿಯೋಗ್ರಾಮ್ ಮಾಡಿದ ನಂತರ ಹೃದಯ ರಕ್ತನಾಳಗಳು ಎಷ್ಟು ಪ್ರಮಾಣದಲ್ಲಿ ತೊಂದರೆಗೊಳಪಟ್ಟಿವೆ ಎಂದು ಪರಿಶೀಲಿಸುತ್ತಾರೆ. ನಂತರವಷ್ಟೇ ಅವಶ್ಯಕತೆಯಿದ್ದಲ್ಲಿ, ಏಂಜಿಯೋಪ್ಲಾಸ್ಟಿಯಂತಹ ಚಿಕಿತ್ಸೆಯನ್ನು ನೀಡಲಾಗುತ್ತದೆ.

ತಡೆಗಟ್ಟುವಿಕೆ

  • ಕೊಬ್ಬಿನಾಂಶವಿರುವ ಪದಾರ್ಥಗಳನ್ನು ಊಟದಲ್ಲಿ ಕಡಿಮೆ ಮಾಡುವುದು.
  • ಅಧಿಕ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ಬರದಂತೆ ತಡೆಗಟ್ಟುವುದು, ಮತ್ತು ಈಗಾಗಲೇ ಇದ್ದಲ್ಲಿ ಸೂಕ್ತ ಚಿಕಿತ್ಸೆಯನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದು.
  • ದಿನವಿಡೀ ಸದಾ ಚಟುವಟಿಕೆಯಿಂದಿರುವುದು, ಮತ್ತು ಪ್ರತಿ ದಿನ ಕನಿಷ್ಟ ಅರ್ಧ ಗಂಟೆಯ ಕಾಲ್ನಡಿಗೆ ಅವಶ್ಯವಾಗಿರುತ್ತದೆ.
  • ನಮ್ಮ ವಯಸ್ಸು ಹಾಗೂ ಎತ್ತರಕ್ಕೆ ತಕ್ಕಂತೆ ನಮ್ಮ ದೇಹ ತೂಕವನ್ನು ಕಾಪಾಡಿಕೊಳ್ಳಬೇಕು
    ಮಾನಸಿಕ ಒತ್ತಡ ಹಾಗೂ ಭಾವೋದ್ವೇಗಗಳನ್ನು ಕಡಿಮೆ ಮಾಡಿಕೊಳ್ಳಬೇಕು.
  • ವ್ಯಾಯಾಮಗಳನ್ನು ಮಾಡುವಾಗ ಮೊದಲು ವಾರ್ಮ್ ಅಪ್ ಅಥವಾ ಏರೋಬಿಕ್ ವ್ಯಾಯಾಮಗಳನ್ನು ಅಗತ್ಯವಾಗಿ ಮಾಡಿದ ನಂತರವಷ್ಟೇ ಹೆಚ್ಚಿನ ವ್ಯಾಯಾಮಗಳನ್ನು ಮಾಡಬೇಕು. ಇದರಿಂದ ಹೃದಯದ ಕಾರ್ಯಕ್ಷಮತೆ ಹೆಚ್ಚುವುದಲ್ಲದೇ ವ್ಯಾಯಾಮದ ಸಮಯದಲ್ಲಿ ಜೀವಕ್ಕೆ ಆಮ್ಲಜನಕದ ಕೊರತೆಯಿಂದಾಗಲೀ ಅಥವಾ ಹೃದಯದ ಕೆಲಸದೊತ್ತಡದಿಂದಾಗಲೀ ಯಾವುದೇ ಅಪಾಯ ಉಂಟಾಗುವುದಿಲ್ಲ.
  • ಪ್ರತಿ ಮೂರು ತಿಂಗಳಿಗೊಮ್ಮೆ (ಮಹಿಳೆಯರು ಪ್ರತಿ 4ತಿಂಗಳಿಗೊಮ್ಮೆ) ರಕ್ತದಾನ ಮಾಡುವುದರಿಂದ ಹೃದಯಾಘಾತದ ಸಂಭವ ಕಡಿಮೆಯಾಗುವುದೆಂದು ಅಭಿಪ್ರಾಯವಿದೆ.
  • ಒಂದು ಸಣ್ಣ ಎದೆನೋವು ಕಾಣಿಸಿಕೊಂಡರೂ ಅದನ್ನು ನಿರ್ಲಕ್ಷಿಸದೇ ವೈದ್ಯರ ಬಳಿ ಸಮಾಲೋಚನೆ ಪಡೆಯುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಡಾ.ಸಂತೋಷ್ ಕೆ.ಬಿ. ದಾವಣಗೆರೆಯಲ್ಲಿ ಎಂ.ಬಿ.ಬಿ.ಎಸ್. ಪದವಿ ಮುಗಿಸಿ ಸದ್ಯ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯ ವೃತ್ತಿಯ ಜತೆಗೆ ಬರವಣಿಗೆಯಲ್ಲೂ ಆಸಕ್ತಿ ಹೊಂದಿರುವ ಇವರು, 'ಕವಲೊಡೆದ ನದಿ' ಎಂಬ ಕವನ ಸಂಕಲನ ಹೊರತಂದಿದ್ದಾರೆ. ಅದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರೋತ್ಸಾಹಧನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಂದ ನಾ.ಕು.ದತ್ತಿ ಪ್ರಶಸ್ತಿ ಲಭಿಸಿವೆ. ಮೊ: 8971256894

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending