Connect with us

ದಿನದ ಸುದ್ದಿ

ಏನಿದು ‘ಹೆಲಿಕಾಪ್ಟರ್ ಮನಿ’..? ಮಿಸ್ ಮಾಡ್ದೆ ಓದಿ

Published

on

ಕೊರೊನಾ ಬಂದ ಮೇಲೆ ಬಿಸಿನೆಸ್‍ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ.

ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೆಸಿಆರ್ ಈ ಸಲಹೆ ನೀಡಿದ್ದೇ ತಡ ದೇಶವ್ಯಾಪಿ ‘ಹೆಲಿಕಾಪ್ಟರ್ ಮನಿ’ ಬಗ್ಗೆ ಚರ್ಚೆ ನಡೆಯುತ್ತಿದೆ.

ಏನಿದು ಹೆಲಿಕಾಪ್ಟರ್ ಮನಿ..?

ಹೆಲಿಕಾಪ್ಟರ್ ಮೂಲಕ ಹಣವನ್ನು ಉದುರಿಸುವ ಕಲ್ಪನೆಗೆ ಹೆಲಿಕಾಪ್ಟರ್ ಮನಿ ಎಂದು ಕರೆಯಲಾಗುತ್ತದೆ. ಸುಲಭವಾಗಿ ಜನರಿಗೆ ತನ್ನ ಆರ್ಥಿಕ ನೀತಿಯ ಕಲ್ಪನೆ ಅರ್ಥವಾಗಲೆಂದು ಅಮೆರಿಕಾದ ಅರ್ಥಶಾಸ್ತ್ರಜ್ಞ ಮಿಲ್ಟನ್ ಫ್ರೈಡ್‍ಮ್ಯಾನ್ ಈ ಹೆಸರನ್ನು ನೀಡಿದ್ದಾರೆ. ಹೆಲಿಕಾಪ್ಟರ್ ನಿಂದ ಹಣವನ್ನು ಉದುರಿಸುವುದು ಅಂದರೆ ನಿಜ ಅರ್ಥದಲ್ಲಿ ಮೇಲಿನಿಂದ ಹಣ ಹಾಕುವುದಲ್ಲ. ಹೆಚ್ಚಿನ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಮುದ್ರಿಸಿ ಜನರ ಕೈಗೆ ಸಿಗುವುಂತೆ ಮಾಡುವುದೇ ಈ ಕಲ್ಪನೆಯ ತಿರುಳು.

ಆರ್‌ಬಿಐ ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿ ಕೇಂದ್ರ ಸರ್ಕಾರಕ್ಕೆ ನೀಡಬೇಕು. ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಣ ನೀಡುವುದರ ಜೊತೆ ಜನರ/ ನೆಲಕಚ್ಚಿರುವ ಉದ್ಯಮಗಳಿಗೆ ಪ್ಯಾಕೇಜ್ ಘೋಷಣೆ ಮಾಡಿ ಹಣ ತಲುಪುವಂತೆ ಮಾಡಬೇಕು. ಈ ರೀತಿ ದಿಢೀರ್ ಆಗಿ ಹಣದ ಹೊಳೆ ಹರಿದಾಗ ವ್ಯವಹಾರ ಹೆಚ್ಚಾಗುತ್ತದೆ. ಹಣಕಾಸು ವ್ಯವಹಾರ ಹೆಚ್ಚಾಗುತ್ತಿದ್ದಂತೆ ಆರ್ಥಿಕತೆ ಮೇಲಕ್ಕೆ ಏರಬಹುದು ಎಂಬ ಲೆಕ್ಕಾಚಾರ ಇದರಲ್ಲಿ ಅಡಗಿದೆ. ದೇಶದ ಶೇ.5ರಷ್ಟು ಜಿಡಿಪಿಯ ನೆರವನ್ನು ಇದರಿಂದ ಪಡೆಯಬಹುದು ಎಂದು ಆರ್ಥಿಕ ತಜ್ಞರು ಸಲಹೆ ನೀಡಿದ್ದಾರೆ.

ಇದು ಸಾಧ್ಯವೇ..?

ಒಂದು ದೇಶ ಸಿಕ್ಕಪಟ್ಟೆ ಕರೆನ್ಸಿ ನೋಟುಗಳನ್ನು ಮುದ್ರಿಸುವಂತಿಲ್ಲ. ಅದಕ್ಕೂ ಒಂದು ಮಾನದಂಡವಿದೆ. ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ)ಯನ್ನು ಲೆಕ್ಕ ಹಾಕಲಾಗುತ್ತದೆ. ಇದರ ಜೊತೆ ಭದ್ರತೆಗಾಗಿ ಜೊತೆ ಚಿನ್ನವನ್ನು ಇಡಬೇಕಾಗುತ್ತದೆ. ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿದರೆ ವಸ್ತುವಿನ ಬೆಲೆ ದಿಢೀರ್ ಹೆಚ್ಚಾಗುತ್ತದೆ

ಹೆಲಿಕಾಪ್ಟರ್ ಮನಿ’ ಎಫೆಕ್ಟ್ ಏನು..?

ಬಹುತೇಕ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ದಿನನಿತ್ಯದ ಜೀವನ ದುಬಾರಿಯಾಗುತ್ತದೆ. ರೂಪಾಯಿ ಮೌಲ್ಯ ಕುಸಿಯುತ್ತದೆ ಹಣದುಬ್ಬರ ಉಂಟಾಗುತ್ತದೆ.

ಕೇಂದ್ರ ಸರ್ಕಾರ ಮಾಡಬಹುದೇ..?

ಮೋದಿ ಸರ್ಕಾರ ಭ್ರಷ್ಟಾಚಾರ, ಕಪ್ಪು ಹಣ, ಉಗ್ರಗಾಮಿ ಚಟುವಟಿಕೆಗಳನ್ನು ಮಟ್ಟ ಹಾಕಲು 2016ರ ನವೆಂಬರ್ ನಲ್ಲಿ 500, 1 ಸಾವಿರ ರೂ. ನೋಟುಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಬಿಡುಗಡೆಯಾದ 2 ಸಾವಿರ ರೂ. ನೋಟುಗಳ ಮುದ್ರಣವನ್ನು ಸಹ ಕಡಿಮೆ ಮಾಡಿದೆ. ಡಿಜಿಟಲ್ ವ್ಯವಹಾರಕ್ಕೆ ಸರ್ಕಾರ ಜಾಸ್ತಿ ಒತ್ತು ನೀಡುತ್ತಿರುವಾಗ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸುತ್ತಾ? ಇಲ್ಲವೋ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಹಿಂದೆ ಜಾರಿ ಆಗಿದ್ಯಾ..?

ಆಫ್ರಿಕಾ ಖಂಡದಲ್ಲಿರುವ ಜಿಂಬಾಬ್ವೆ ಮತ್ತು ದಕ್ಷಿಣ ಅಮೆರಿಕ ಖಂಡದಲ್ಲಿರುವ ವೆನೆಜುವೆಲಾ ದೇಶಗಳು ಭಾರೀ ಪ್ರಮಾಣದಲ್ಲಿ ಹಣವನ್ನು ಮುದ್ರಿಸಿತ್ತು. ಭಾರೀ ಪ್ರಮಾಣದಲ್ಲಿ ಮುದ್ರಿಸಿ ಪರಿಣಾಮ ಹಣಗಳು ಜನರ ಕೈಗೆ ಸೇರಿತ್ತು. ಪರಿಣಾಮ ವಸ್ತುಗಳ ಬೆಲೆ ಭಾರೀ ಏರಿಕೆ ಆಗಿತ್ತು. ಆಹಾರ ಪದಾರ್ಥಗಳನ್ನು ಖರೀದಿಸಲು ಮೂಟೆಗಟ್ಟಲೇ ಹಣವನ್ನು ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending