ಲೈಫ್ ಸ್ಟೈಲ್
ಮೂಲಿಕೆ ಮದ್ದುಗಳಿಗೂ ಬೇಕು ಸುರಕ್ಷತೆಯ ಅಗ್ನಿಪರೀಕ್ಷೆ..!
- ಡಾ.ಎನ್.ಬಿ.ಶ್ರೀಧರ
“ಈ ಇಂಗ್ಲಿಷ್ ಔಷಧಿಗಳಿಗೆಲ್ಲಾ ಸೈಡ್ ಇಫೆಕ್ಟ್ ಜಾಸ್ತಿ. ನಾನು ತಗೋಳ್ತಾ ಇರೋದು ಗಿಡಮೂಲಿಕೆ ಔಷಧಿ. ನಮ್ಮನೇ ದನಗಳಿಗೂ ನಾನು ನಾಟಿ ಔಷಧೀನೇ ಮಾಡಿಸೋದು” ಇದು ಕೆಲವು ರೈತರ ಅಭಿಪ್ರಾಯ. ಔಷಧಿ ಅಂದರೆ ಪರಿಣಾಮವಿರುವ ಔಷಧಿಗೆ ಅಡ್ಡಪರಿಣಾಮ ಇದ್ದೇ ಇರುತ್ತದೆ. ಅಡ್ಡಪರಿಣಾಮಗಳಿಲ್ಲ ಅಂದರೆ ಅದಕ್ಕೆ ಪರಿಣಾಮವೂ ಇಲ್ಲ.
ಇದು ಔಷಧಿಗಳಿಗೆಲ್ಲ ಇರುವ ಮಾತೃ ವೇದವಾಕ್ಯ!!. “ಔಷಧಿ ಎರಡೂ ಕರೆ ಕುಯ್ಯುವ ಗರಗಸ ಇದ್ದ ಹಾಗೇ. ಅದು ರೋಗವನ್ನು ವಾಸಿ ಮಾಡಬಲ್ಲದು. ಹಾಗೆಯೇ ಮನುಜನ ಶರೀರಕ್ಕೆ ಹಾನಿಯನ್ನೂ ಉಂಟು ಮಾಡಬಲ್ಲದು” ಎಂದು ಆಂಗ್ಲ ಗಾದೆಯಲ್ಲಿ ಹೇಳಲಾಗಿದೆ. ಹಾಗಿದ್ದರೆ ಈ ಗಿಡಮೂಲಿಕೆಗಳ ಸಾಧಕ ಬಾಧಕಗಳೇನು ಎಂಬುದು ಮುಖ್ಯವಲ್ಲವೇ? ತಿಳಿದುಕೊಳ್ಳೋಣ.
ಭಾರತವು ಪುರಾತನ ಪರಂಪರೆಯಿಂದ ಗಿಡಮೂಲಿಕೆ ಔಷಧಿಗಳನ್ನು ಉಪಯೋಗಿಸುತ್ತಾ ಬಂದಿದೆ. ಪ್ರಪಂಚದಾದ್ಯಂತದ ಜನರು ಪ್ರತಿ ವರ್ಷ ಸಾವಿರಾರು ವಿವಿಧ ಗಿಡಮೂಲಿಕೆ ಔಷಧಿಗಳನ್ನು ಬಳಸುತ್ತಾರೆ. ಇದರ ಫಲವಾಗಿ ಈ ಗಿಡಮೂಲಿಕೆ ಔಷಧಿಗಳ ಉದ್ಯಮವು ಎಷ್ಟು “ಲಾಭದಾಯಕ” ವೆನಿಸಿದೆಯೆಂದರೆ, ವಿಶ್ವದಾದ್ಯಂತ ಈ ಉದ್ಯಮದ ಮೌಲ್ಯವು 7000ರೂ ಕೋಟಿಗೂ ಹೆಚ್ಚಿದೆ. ಮೊದಲು ಮನೆ ಮದ್ದು ಎಂದು ಉಪಯೋಗಿಸಲ್ಪಡುತ್ತಿದ್ದ ಈ ಉತ್ಪನ್ನಗಳು ಇಂದು ಉದ್ಯಮಗಳ ಕಣ್ಮಣಿಯಾಗಿವೆ ಎಂದರೆ ಉತ್ಪ್ರೇಕ್ಷೆ ಅಲ್ಲ.
ಹೌದು! ಉಧ್ಯಮಗಳು ಲಾಭ ಮಾಡಲೆಂದೇ ಇರುವುದು. ಆದರೆ ಅತಂಕದ ವಿಷಯವೆಂದರೆ ಈ ಗಿಡ ಮೂಲಿಕೆ ಔಷಧಿಗಳ ತಯಾರಿಕೆ, ಮಾರಾಟ ಮತ್ತು ಮಾರಾಟೋತ್ತರ ನಡುವಳಿಕೆಗಳ ಬಗ್ಗೆ ಸಾಕಷ್ಟು ಕಾನೂನುಗಳಿದ್ದರೂ ಅವುಗಳ ಪಾಲನೆಯ ಬಗ್ಗೆ ಬಗ್ಗೆ ಕಟ್ಟು ನಿಟ್ಟಾದ ನಿಯಂತ್ರಣ ಇಲ್ಲದೇ ಇಲ್ಲದಿರುವುದು. ಇದರಿಂದಲೇ ಈ ಗಿಡಮೂಲಿಕೆ ಔಷಧಿಗಳ ಹೆಸರಿನಲ್ಲಿ ನಾಯಿ ಕೊಡೆಗಳಂತೆ ತಲೆಯೆತ್ತುತ್ತಿರುವ ಹೊಸ ಹೊಸ ಕಂಪನಿಗಳು !!.
ಈ ಉದ್ಯಮದ ವ್ಯಾಪಕತೆಯು ಕಣ್ಣಿಗೆ ಕಾಣದಂತೇನೂ ಇಲ್ಲ; ಇವುಗಳ ಜಾಹಿರಾತುಗಳಂತೂ ದಿನಬೆಳಗಾದರೆ ಪತ್ರಿಕೆಗಳು, ನಿಯತಕಾಲಿಕೆಗಳು,ಹಲವಾರು ದೃಶ್ಯ ಮಾಧ್ಯಮಗಳಲ್ಲಿ ಕಂಡು ಬರುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಈ ಮಾರುಕಟ್ಟೆಯು ಗಣನೀಯ ವೇಗವನ್ನು ಗಳಿಸಿದೆ. ಇದರ ಜೊತೆಗಿರುವ ಪ್ರಮುಖ ಅಪಾಯವೆಂದರೆ, ಗ್ರಾಹಕರು ತಮಗರಿವಿಲ್ಲದೇ ಪರಿಶೀಲಿಸದ ಅಥವಾ ಅಧಿಕೃತವಲ್ಲದ ಪೂರಕ ಆಹಾರ ಪದಾರ್ಥಗಳು ಮತ್ತು ಔಷಧಿಗಳನ್ನು ಸೇವಿಸುವ ಸಾಧ್ಯತೆ ಹೆಚ್ಚಾಗಿದೆ.ಮೂಲಿಕೆ ಮದ್ದುಗಳೆಲ್ಲಾ ಸುರಕ್ಷಿತ ಎಂಬ ಭ್ರಮೆ ಬೇಡವೇ ಬೇಡ. ಪರಿಣಾಮವಿರುವ ಯಾವುದೇ ಔಷಧಿಗೆ ಯಾವುದಾದರೊಂದು ಅಡ್ಡಪರಿಣಾಮ ಇದ್ದೇ ಇರುತ್ತದೆ ಎನ್ನುವುದು ಕಟು ಸತ್ಯ.
ಆಧುನಿಕ ವಿಜ್ಞಾನದಿಂದ ತುಲನಾತ್ಮಕವಾಗಿ ದೂರವಿರುವ ಗಿಡ ಮೂಲಿಕೆ ಮತ್ತು ಸಾಂಪ್ರದಾಯಿಕ ಔಷಧಿಗಳ ವಿಚಾರದಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಿದ್ದು, ಅವು ಮಾರುಕಟ್ಟೆ ಪ್ರವೇಶಿಸುವ ಮೊದಲು ಕಠಿಣ ತಪಾಸಣೆಗೆ ಒಳಪಡುವುದಿಲ್ಲ ಎಂಬುದು ಬೆಚ್ಚಿಬೀಳಿಸುವ ಸತ್ಯ. ಕೇವಲ “ಇವು ಪಾರಂಪರಿಕ ಔಷಧಗಳು, ಪುರಾತನ ಕಾಲದಿಂದ ಬಳಕೆಯಲ್ಲಿವೆ; ಇವುಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂಬದು ಒಂದು ಸುಳ್ಳಿನ ಕಂತೆ. ಕೇವಲ ಇವು ಸುರಕ್ಷಿತ ಎಂಬ ನಂಬಿಕೆಯ ಮೇಲೆ ನಡೆಯುತ್ತಿರುವುದು ಮತ್ತು ಮಾರಾಟವಾಗುತ್ತಿರುವುದು ಅಪ್ರಿಯವಾದ ಸತ್ಯ.
ಹಾಗಿದ್ದರೆ ಹೇಗೆ ಈ ಗಿಡಮೂಲಿಕೆಗಳ ಉತ್ಪನ್ನಗಳು ರಹದಾರಿ ಪಡೆಯುತ್ತವೆ ಎಂಬುದನ್ನು ನೋಡೋಣ. ಭಾರತದಲ್ಲಿ ಶೇ 80 ರಷ್ಟು ಹಳ್ಳಿಯ ಜನ ಗಿಡಮೂಲಿಕಾ ಔಷಧಿಗಳನ್ನು ಅವರ ವಿವಿಧ ಕಾಯಿಲೆಗಳ ಪ್ರಾಥಮಿಕ ಚಿಕಿತ್ಸೆಗೆ ಬಳಸುತ್ತಾರಂತೆ. ಆಯುಶ್ ಇಲಾಖೆಯ ಪ್ರಕಾರ ಸಧ್ಯ ಭಾರತದಲ್ಲಿ 10088 ಗಿಡಮೂಲಿಕೆ ಔಷಧಿ ತಯಾರಿಸುವ ರಹದಾರಿ ಪಡೆದಿರುವ ಕಂಪನಿಗಳಿದ್ದರೆ ಇವುಗಳಲ್ಲಿ ಉತ್ತಮ ತಯಾರಿಕಾ ವಿಧಾನ (ಜಿಎಮ್ ಪಿ) ದ ಬಗ್ಗೆ ಅನುಮತಿ ಪಡೆದಿರುವವರು5402 ಮಾತ್ರ.
ಈ ಔಷಧಿಗಳ ತಯಾರಿಕೆಗೆ ರಹದಾರಿ ಪಡೆಯಲು ಮೂರು ಕೊಠಡಿಗಳಿರುವ1200 ಚದರ ಅಡಿ ಕಟ್ಟಡ ಸಾಕು. ಇದರಲ್ಲಿ ಒಂದು ತಯಾರಿಕಾ ಕೊಠಡಿ, ಒಂದು ಸಂಗ್ರಹ ಕೊಠಡಿ ಮತ್ತು ಒಂದು ಕ್ವಾರಂಟೈನ್ ಕೊಠಡಿ ಇರಬೇಕು. ಒಂದು ಔಷಧಿ ತಯಾರಿಕೆಗೆ ಆಯುಶ್ ಮಂತ್ರಾಲಯದವರು ಸೂಚಿಸಿದ ಉಪಕರಣಗಳು, ಕೊಠಡಿಗಳು, ಸಂಬಂಧ ಪಟ್ಟ ವಿವಿಧ ದಾಖಲೆಗಳ ಸಮೇತ ಆಯಾ ರಾಜ್ಯದ ಆಯುಶ್ ಇಲಾಖೆಗೆ ಅರ್ಜಿ ಸಲ್ಲಿಸಿದ ನಂತರ ಅಲ್ಲಿನ ಪರೀಕ್ಷಕರ ವರದಿಯಾದ ನಂತರ ರಹದಾರಿ ದೊರೆಯುತ್ತದೆ. ಉತ್ತಮ ತಯಾರಿಕಾ ವಿಧಾನ (ಜಿಎಮ್ ಪಿ) ದ ಬಗ್ಗೆ ಮತ್ತೊಂದು ಅರ್ಜಿ ಸಲ್ಲಿಸಿ ಪ್ರಮಾಣ ಪತ್ರ ಪಡೆಯಬೇಕು. ಎಲ್ಲ ಕಡೆ ಇರುವಂತೆ ಇಲ್ಲಿಯೂ ಸಹ ಕೆಂಪು ಪಟ್ಟಿ ಅಧಿಕಾರಶಾಹಿ ಇತ್ಯಾದಿ ಅಡೆ ತಡೆ ಇದ್ದೇ ಇರುತ್ತದೆ.
ಉತ್ಪನ್ನ ತಯಾರಿಸುವ ಮೊದಲು ಅದರ ಬಗ್ಗೆ ಪುಸ್ತಕದಲ್ಲಿ ಪರಿಣಾಮದ ಬಗ್ಗೆ ಉಲ್ಲೇಖವಿರಬೇಕು. ಕಂಪನಿಯ ಏಕಮೇವ ಉತ್ಪನ್ನವಾಗಿದ್ದರೆ ಸರ್ಕಾರಿ ಆಸ್ಪತ್ರೆಗಳು ಅಥವಾ ಮಹಾವಿದ್ಯಾಲಯದಿಂದ ಆ ಉತ್ಪನ್ನದ ಬಗ್ಗೆ ಸಂಶೋಧನಾ ಲೇಖನಗಳು ಬೇಕು. ಆಗ ಈ ಔಷಧಿಯನ್ನು ಭಾರತಲ್ಲಿ ಮಾರಾಟ ಮಾಡಲು ತೊಂದರೆ ಇಲ್ಲ.
ಅಮೇರಿಕಾ ಮತ್ತಿತರ ದೇಶಗಳಲ್ಲಿ ಇದನ್ನು “ಅಹಾರ ಪೂರಕ” (ಡಯಟರಿ ಸಪ್ಲಿಮೆಂಟ್) ಎಂದು ಮಾರಾಟ ಮಾಡಬಹುದು. ಇದಕ್ಕೆ ಆ ದೇಶದ 1974 ರ ನಿಯಮದಡಿ ಅವಕಾಶ ನೀಡಲಾಗಿದೆ. ಇದಕ್ಕೆ ಉತ್ಪನ್ನದ ಪರಿಣಾಮ ಮತ್ತು ಅಡ್ಡ ಪರಿಣಾಮದ ಬಗ್ಗೆ ಮಾಹಿತಿ ನೀಡುವ ಅವಶ್ಯಕತೆ ಇಲ್ಲ. ಆದರೆ ಅದನ್ನು ಔಷಧಿ ಎಂದು ಯಾವ ಕಾರಣಕ್ಕೂ ಹೇಳುವ ಹಾಗಿಲ್ಲ. “ಔಷಧಿ” ಎಂದರೆ ಅಹಾರ ಮತ್ತು ಔಷಧ ನಿಯಂತ್ರಣ ಆಡಳಿತ ( ಎಫ಼್ ಡಿ ಏ) ದ ವ್ಯಾಪ್ತಿಯಲ್ಲಿ ಬಂದು ಅತ್ಯಂತ ಕಠಿಣ ನಿಯಮದಡಿ ಬರುತ್ತದೆ.
ಕಾರಣ ಅಮೇರಿಕಾಕ್ಕೆ ಬಹಳ ಗಿಡ ಮೂಲಿಕಾ ಉತ್ಪನ್ನಗಳು ರಪ್ತಾಗುತ್ತವೆ. ಚ್ಯವನ ಪ್ರಾಶದಂತ ಕೆಲವು ಉತ್ಪನ್ನಗಳು ಕೆನಡಾದಂತ ದೇಶದಲ್ಲಿ ಬ್ಯಾನಾಗಿದ್ದು ಅದರಲ್ಲಿ ಸತುವಿನಂತ ಹೆಚ್ಚಿನ ಭಾರ ಲೋಹಗಳಿವೆ ಎಂಬ ಅಂಶಗಳಿಗಾಗಿ. ಆದರೆ ಇದರ ಪರಿಸ್ಥಿತಿ ಯರೋಪ್ ಖಂಡದ ದೇಶದಲ್ಲಿ ಸ್ವಲ್ಪ ಭಿನ್ನವಾಗಿದೆ. ಭಾರತದ ಪಾರಂಪರಿಕ ಗಿಡಮೂಲಿಕಾ ಉತ್ಪನ್ನಗಳನ್ನು ಅಲ್ಲಿ ಅಮೇರಿಕಾದ ಹಾಗೇ ಸುಲಭದಲ್ಲಿ ಮಾರುವ ಹಾಗಿಲ್ಲ. ಇವುಗಳ ಪರಿಣಾಮ ಮತ್ತು ಅಡ್ಡಪರಿಣಾಮ ಇವೆಲ್ಲವುಗಳಿಗೆ ಪೂರಕವಾಗಿ ಹಲವಾರು ಸಂಶೋಧನಾ ಲೇಖನಗಳು ಇನ್ನಿತರ ದಾಖಲೆಗಳನ್ನು ನೀಡಬೇಕು.
ಅಲ್ಲದೇ ಉತ್ಪನ್ನದೊಳಗಿರುವ ಪ್ರತಿಯೊಂದು ಗಿಡಮೂಲಿಕಾ ಪದಾರ್ಥವು ಪ್ರಮಾಣೀಕರಣಗೊಂಡಿರಬೇಕು ಮತ್ತು ಯಾವ ಕಾಲದಲ್ಲಿಯಾದರೂ ಯಾವ ಮಾದರಿಯನ್ನಾದರೂ ತೆಗೆದುಕೊಂಡು ತಾಳೆಹಾಕಿದಾಗ ಅದು ಹೊಂದಾಣಿಕೆಯಾಗಲೇಬೇಕು. ಆ ದೇಶಗಳ ಕಾನೂನಿನಂತೆ ಹರ್ಬಲ್ ಮೆಡಿಸಿನಲ್ ಪ್ರೊಡಕ್ಟ್ ಡೈರೆಕ್ಟಿವ್2004 ರ ನಿಯಮಾನುಸಾರ ಉತ್ಪನ್ನಕ್ಕೆ ಅದರ ಉಪಯೋಗ, ಪ್ರಮಾಣ, ಅಡ್ಡ ಪರಿಣಾಮ, ನೀಡುವ ವಿಧಾನ ಈ ಎಲ್ಲವಕ್ಕೂ ದಾಖಲೆಗಳಿರಬೇಕು. ಅಲ್ಲದೇ ಯರೋಪ್ ದೇಶಗಳಲ್ಲ್ ಮ್ರು ರುಕಟ್ಟೆ ಮಾಡಬೇಕಾದರೆ15ವರ್ಷಗಳ ಮಾರುಕಟ್ಟೆ ಅನುಭವ ಇರಬೇಕು. ಇಷ್ಟೆಲ್ಲ ಕಟ್ಟಳೆಗಳಿರಬೇಕಾದರೆ ಅಲ್ಲಿ ಈ ಗಿಡಮೂಲಿಕಾ ಉತ್ಪನ್ನಗಳನ್ನು ಮಾರುವುದು ಅತ್ಯಂತ ಕಷ್ಠಕರ.
ಇನ್ನು ಆಫ್ರಿಕಾದಂತ ಹಿಂದುಳಿದ ದೇಶದಲ್ಲಿ ಮಾರುಕಟ್ಟೆ ಇದ್ದರೂ ಸಹ ಅಲ್ಲಿನ ನಿಯಮಗಳೇ ಬೇರೆ. ಹೀಗೆ ದೇಶದಿಂದ ದೇಶಕ್ಕೆ ಬದಲಾಗುವ ನಿಯಮಗಳು ಮಾರಾಟಗಾರರನ್ನು ಹೈರಾಣ ಮಾಡಿತು ಅಂದರೆ ತಪ್ಪಿಲ್ಲ. ಗಿಡ ಮೂಲಿಕೆ ಔಷಧಿಗಳಿಗೆ ಭಾರತದಲ್ಲಿ ಸದ್ಯಕ್ಕೆ ರಹದಾರಿ ಪಡೆಯುವುದರಿಂದ ಹಿಡಿದು ಗುಣಮಟ್ಟ ಕಾಪಾಡುವವರೆಗೆ ಹೆಚ್ಚಿನ ಕಟ್ಟು ಪಾಡುಗಳಿಲ್ಲ. ಭಾರತ ಸರ್ಕಾರದ ಅಧೀನದ ಆಯುಶ್ (ಆಯುರ್ವೇದ, ಸಿದ್ಧ, ಯುನಾನಿ, ಹೋಮಿಯೋಪತಿ ಇಲಾಖೆ) ಸಹ ಈ ಗಿಡಮೂಲಿಕೆ ಉತ್ಪನ್ನಗಳ ಬಗ್ಗೆ ಅವು ನಮ್ಮದೇ ದೇಶದ ಪರಂಪರೆಯಿಂದ ಬಂದ ಪದ್ಧತಿ ಎಂದು ಮೃದುದೋರಣೆ ತಳದಿರಬಹುದು.
ಅಲ್ಲದೇ ವನಸ್ಪತಿ ಉತ್ಪನ್ನಗಳ ತಯಾರಿಕೆಗೆ ಬೇಕಾಗುವ ಮೂಲ ಗಿಡಮೂಲಿಕೆಗಳ ಭಾಗ, ಯಾವ ಋತುವಿನಲ್ಲಿ ಇವುಗಳ ಕಟಾವಣೆ ಮಾಡಬೇಕು, ಅರಣ್ಯದ ಅವಲಂಭನೆ, ಇವುಗಳ ಕೃಷಿ ಪದ್ಧತಿ, ಬೆಲೆ ನಿಗದಿ ಮಾಡುವಿಕೆ, ಇವುಗಳ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಇವುಗಳಲ್ಲಿ ಕೀಟನಾಶಗಳು ಮತ್ತು ಭಾರಲೋಹದ ಮಟ್ಟ ಕಡಿಮೆ ಮಾಡುವುದು, ಮೂಲ ವಸ್ತುವಿನ ಗುರುತು ಮಾಡುವುದು ಇವುಗಳ ಬಗ್ಗೆ ಗೊಂದಲದ ಗೂಡೇ ಇದ್ದು ಇದು ಸದ್ಯಕ್ಕಂತೂ ಬಗೆಹರಿಯುವ ಲಕ್ಷಣಗಳಿಲ್ಲ. ಆಯುಶ್ ಇಲಾಖೆ ಅನೇಕ ಮಾನದಂಡಗಳನ್ನು ನಿಗದಿ ಮಾಡಿದರೂ ಅನೇಕ ತಯಾರಿಕರಿಗೆ ಲೈಸನ್ಸ್ ಪಡೆಯುವುದು ಮತ್ತು ಅದರ ನವೀಕರಣ ಹೊರತು ಪಡಿಸಿದರೆ ಉಳಿದ ಸಮಯದಲ್ಲಿ ಅದನ್ನು ಸಂಪರ್ಕಿಸುವ ಅವಶ್ಯಕತೆ ಕಂಡು ಬಂದಿಲ್ಲ.
ಆಯುಶ್ ಇಲಾಖೆಯ ಪ್ರಕಾರ 600 ವಿವಿಧ ಗಿಡಮೂಲಿಕೆಗಳು, 52 ಖನಿಜಗಳು, 50 ಪ್ರಾಣಿ ಉಪಪದಾರ್ಥಗಳು ಈ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲ್ಪಡುತ್ತವೆ. ಕಾರಣ ಯಾರು ಬೇಕಾದರೂ ಸುಲಭವಾಗಿ ರಹದಾರಿ ಪಡೆದು ಈ ಉತ್ಪನ್ನಗಳನ್ನು ತಯಾರಿಸಬಹುದು. ಅನೇಕ ಸಲ ಲೇಬಲ್ಲಿನ ಮೇಲೆ ಬರೆದ ಗಿಡ ಮೂಲಿಕೆ ಹಾಕಿರುವರೋ ಇಲ್ಲವೋ ಎಂಬುದೂ ಖಚಿತ ಪಡಿಸಿಕೊಳ್ಳಲು ಸಾಧ್ಯವಿಲ್ಲ.
ಅಲೋಪತಿ ಔಷಧಗಳ ತಯಾರಿಕೆ ವಿಷಯದಂತೆ ಉತ್ತಮ ತಯಾರಿಕಾ ವಿಧಾನ (ಜಿಎಮ್ ಪಿ)ದಲ್ಲಿ ಉತ್ಪನ್ನಗಳ ತಯಾರಿಕೆ ಕಡ್ಡಾಯವಲ್ಲ. ಉತ್ಪನ್ನ ಕಳಪೆಯೆಂದಾದರೆ ದೂರು ನೀಡಬಹುದಾದರೂ ಸಹ ಅನೇಕ ಪದಾರ್ಥಗಳು ಒಂದು ಉತ್ಪನ್ನದಲ್ಲಿ ಇರುವುದರಿಂದ ಮತ್ತು ಇವೆಲ್ಲವು ಅದರಲ್ಲಿ ಇದೆಯೇ ಎಂಬುದನ್ನು ಅಳೆಯಲು ಯಾವುದೇ ಪ್ರಮಾಣೀಕೃತ ಪ್ರಯೋಗ ಪದ್ದತಿಗಳಿಲ್ಲ. ಇದರಿಂದ ಬಹುತೇಕ ತಯಾರಿಕೆದಾರರಲ್ಲಿ ಈ ಕಾನೂನಲ್ಲಿರುವ ಈ ಎಲ್ಲ ಕಂದಕ ಗಮನಿಸಿ ಮೋಸ ಮಾಡಲು ದಾರಿ ಮಾಡಿಕೊಟ್ಟಿದೆ ಎಂದರೆ ತಪ್ಪಾಗಲಾರದು.
ಇತ್ತೀಚಿನ ದಿನಗಳಲ್ಲಿ ಅತ್ಯಂತ ಚರ್ಚೆಗೊಳಗಾದ ವಿಷಯವೆಂದರೆ ಈ ಗಿಡಮೂಲಿಕೆ ಉತ್ಪನ್ನಗಳನ್ನು ಔಷಧಿಯೆಂದು ಪರಿಗಣಿಸಬೇಕೆ ? ಅಥವಾ ಪರಂಪರಾಗತವಾಗಿ ಬಂದವೆಂಬ ಕಾರಣದಿಂದ ಅವುಗಳ ವಿಷಗುಣದ ಬಗ್ಗೆ ಪರೀಕ್ಷೆ ನಡೆಸುವುದು ಬೇಡವೇ? ಎಂಬ ಬಗ್ಗೆ. ಇದರ ಕುರಿತು ಚೈನ ಗಿಡಮೂಲಿಕೆ ಉತ್ಪನ್ನಗಳನ್ನು ಜಾಸ್ತಿ ಬಳಸುವ ಚೈನಾದ ವಿಜ್ಞಾನಿಗಳದ್ದು ಈ ನಿಟ್ಟಿನಲ್ಲಿ ಪ್ರತ್ಯೇಕ ಹೇಳಿಕೆ ನಮ್ಮ ಗಮನ ಸೆಳೆಯುತ್ತದೆ. ಅವರು “ ನಮ್ಮ ಗಿಡಮೂಲಿಕೆ ಉತ್ಪನ್ನಗಳನ್ನು ಔಷಧಿ ಎಂದುಕೊಂಡರೆ ಅವುಗಳನ್ನು ಪಾಶ್ಚಿಮಾತ್ಯ ಪದ್ದತಿಗಳ ಪ್ರಕಾರವೇ ಕಠಿಣ ಪರೀಕ್ಷೆಗೊಳಪಡಿಸಬೇಕು” ಎನ್ನುತ್ತಾರೆ.
ಇವುಗಳು ಸುರಕ್ಷಿತ ಎನ್ನುವುದು ಉತ್ಪ್ರೇಕ್ಷೆಯಿಂದ ಹೇಳುವ ಹೇಳಿಕೆ. ಗಿಡಮೂಲಿಕೆ ಉತ್ಪನ್ನಗಳು ಉತ್ಪನ್ನಗಳು ಎನ್ನುವುದಾದರೆ ಓಇಸಿಡಿ ನಿಯಮಗಳ ಪ್ರಕಾರವೇ ಅವುಗಳ ಪರೀಕ್ಷೆ ನಡೆಯುವುದರಲ್ಲಿ ತಪ್ಪೇನಿದೆ?” ಎಂಬುದು.ಎಲ್ಲಾ ಔಷಧಿಗಳೂ ಅವುಗಳದೇ ಆದ ಅಡ್ಡಪರಿಣಾಮ ಹೊಂದಿವೆ. “ಔಷಧಿ ಎರಡೂ ಕರೆ ಕುಯ್ಯುವ ಗರಗಸ ಇದ್ದ ಹಾಗೇ. ಅದು ರೋಗವನ್ನು ವಾಸಿ ಮಾಡಬಲ್ಲದು. ಹಾಗೆಯೇ ಮನುಜನ ಶರೀರಕ್ಕೆ ಹಾನಿಯನ್ನೂ ಉಂಟು ಮಾಡಬಲ್ಲದು” ಎಂದು ಆಂಗ್ಲ ಗಾದೆಯಲ್ಲಿ ಹೇಳಲಾಗಿದೆ.
ಆದರೆ ಭಾರತೀಯರಲ್ಲಿ ಇದಕ್ಕೆ ಭಿನ್ನಾಭಿಪ್ರಾಯವಿದೆ. “ನಮ್ಮ ಪದ್ಧತಿ ಬಹಳ ಪುರಾತನವಾದದ್ದು. ಇದಕ್ಕೆ 5000 ವರ್ಷಗಳ ಇತಿಹಾಸವಿದೆ. ಇದನ್ನು ಅಲೋಪತಿ ಪದ್ಧತಿಯಲ್ಲಿ ಪರೀಕ್ಷೆಗೆ ಒಳಪಡಿಸುವುದು ಸರಿಯಲ್ಲ” ಎಂಬುದು. ಇದಕ್ಕೆ ತದ್ವಿರುದ್ಧವಾಗಿ ಒಂದಷ್ಟು ಜನ. ನಮ್ಮದು ಪುರಾತನ ಪದ್ಧತಿ ಎನ್ನುವುದು ಸರಿ. ಆದರೆ ಪುರಾತನ ಪದ್ಧತಿಯಾಗಿ ಇದು ಈಗ ಉಳಿದಿಲ್ಲ. ಬಹುತೇಕ ವಾಣಿಜ್ಯೀಕರಣವಾಗಿದೆ. ಲಾಭಕ್ಕಾಗಿಯೇ ಕೆಲವು ಕಂಪನಿಗಳು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಅವುಗಳಿಗೆ ಕಠಿಣ ಪರೀಕ್ಷೆಗಳ ಕಡಿವಾಣ ಹಾಕಲೇಬೇಕು” ಎನ್ನುತ್ತಾರೆ ಅನೇಕರು.
ಇದಕ್ಕೆ ಅನೇಕ ಉದಾಹರಣೆಗಳನ್ನು ಅವರು ನೀಡುತ್ತಾರೆ. ಗಿಡಮೂಲಿಕೆಗಳನ್ನು ಹೊಂದಿದೆ ಎನ್ನಲಾಗುವ ಸೋಪುಗಳು, ಮುಲಾಮುಗಳು ಮೈಗೆ ಹಚ್ಚಿದ ಕೂಡಿದ ಕೂಡಲೇ ಅಲರ್ಜಿಯನ್ನುಂಟು ಮಾಡುವುದು, ಕೆಲವೊಂದು ಗಿಡಮೂಲಿಕೆಗಳ ಪ್ರಮಾಣ ಜಾಸ್ತಿಯಾದರೆ ಅದು ವಿಷಕಾರಿಯಾಗಬಲ್ಲದು ಎನ್ನುತ್ತಾರೆ. ಇವುಗಳಲ್ಲಿ ತಲೆನೋವು, ತಲೆ ತಿರುಗುವಿಕೆ, ಚರ್ಮದ ಮೇಲೇಳುವ ಸಣ್ಣ ಸಣ್ಣ ಕೆಂಪು ಗುಳ್ಳೆಗಳು ಸೇರಿರುತ್ತವೆ.
ಉದಾಹರಣೆಗೆ ಅಮೇರಿಕಾದ ಎಫ್ ಡಿ ಎ ಇದು2004 ರಲ್ಲಿ ಚೀನಾ ಮತ್ತು ಭಾರತದಿಂದ ಆಮದಾಗುವ ದೇಹತೂಕವನ್ನು ಕಡಿಮೆ ಮಾಡಲು ಬಳಸುವ ಎಫಿಡ್ರಾ ಗಿಡಮೂಲಿಕೆಯನ್ನು ಹೊಂದಿದ ಎಲ್ಲಾ ಉತ್ಪನ್ನಗಳನ್ನು ಬ್ಯಾನ್ ಮಾಡಿತು. ಕಾರಣ ಇಷ್ಟೇ. ಈ ಎಫಿಡ್ರಾ ಸಿನಿಕಾ ಎಂಬ ಗಿಡದ ಬಹುತೇಕ ಭಾಗಗಳಲ್ಲಿ ಎಫಿಡ್ರಿನ್ ಮತ್ತು ಅಂಫೆಟಮೈನ್ ಎಂಬ ಔಷಧಿ ಇದ್ದು ಇದು ನರಮಂಡಲದ ಉದ್ರೇಕಿಸಿ ವಿಷವನ್ನುಂಟು ಮಾಡಿ ಸುಮಾರು 155 ಜನರನ್ನು ಮುಗಿಸಿತು ಎಂದು ಎಫ್ ಡಿ ಏ ವಾದ.
ಒಂದು ಗಿಡಮೂಲಿಕೆ ಮೂಲದ ಉತ್ಪನ್ನಗಳು ಸುರಕ್ಷಿತವೆಂದು ಎಲ್ಲರಿಂದ ಪರಿಗಣಿಸಲ್ಪಡುವುದಾದರೂ, ಮುಂಜಾಗ್ರತೆಯು ಅಗತ್ಯವಾಗಿದೆ. ಒಂದು ವಸ್ತುವಿನ ಲೇಬಲ್ನಲ್ಲಿ “ನೈಸರ್ಗಿಕ” ಎಂದು ಬರೆಯಲ್ಪಟ್ಟಿದ್ದ ಮಾತ್ರಕ್ಕೆ ಮುಂಜಾಗ್ರತೆ ವಹಿಸುವುದನ್ನು ಅಲಕ್ಷಿಸಬಾರದು. “ಸುರಕ್ಷಿತ” ಎಂಬುದು ಈ ಉತ್ಪನ್ನಗಳ ವಿಷಯದಲ್ಲಿ ಒಂದು ನಂಬಿಕೆ ಅಷ್ಟೇ. ಯಾವುದೂ ವೈಜ್ಞಾನಿಕ ಪದ್ಧತಿಯಲ್ಲಿ ಸಿದ್ಧವಾಗಿಲ್ಲ. ಇದರಲ್ಲಿ ವನಸ್ಪತಿಗಳ ಪ್ರಮಾಣ ಬಹಳ ಕಡಿಮೆ ಇರುವುದರಿಂದ ಇವುಗಳು ತುಂಬಾ ಸುರಕ್ಷಿತ ಎಂಬುದು ಹಲವರ ನಂಬಿಕೆ.
ಕೆಲವು ಗಿಡಮೂಲಿಕೆಗಳ ಉತ್ಪನ್ನಗಳ ವಿಷಯದಲ್ಲಿ ಇದು ನಿಜ ಕೂಡಾ. ಆದರೆ ಜೀವನದಲ್ಲಿ ನಂಬಿಕೆ ಹೊರತು ನಂಬಿಕೆಯೇ ಜೀವನವಾಗಬಾರದು. ಈ ಗಿಡಮೂಲಕ ಉತ್ಪನ್ನಗಳನ್ನು ಪ್ರಿಕ್ಲಿನಿಕಲ್ ಅಡ್ಡಪರಿಣಾಮಗಳ ಪರೀಕ್ಷೆಗೆ ಒಡ್ಡಲೇಬೇಕೆನ್ನುವುದು ನಿಜ.
ಒಂದು ವಿಚಾರ. ಇಷ್ಟೆಲ್ಲಾ ಇದ್ದರೂ ಈ ಗಿಡಮೂಲಿಕೆ ಔಷಧಿಗಳ ದರ ಸಾಮಾನ್ಯ ಜನರ ಕೈಗೆಟಕುವ ಹಾಗೆ ಇವೆಯೇ? ಖಂಡಿತಾ ಇಲ್ಲ. ಬಹುತೇಕ ಕಂಪನಿಗಳು ತಯಾರಿಸುವ “ನೈಸರ್ಗಿಕ” ಉತ್ಪನ್ನಗಳ ಬೆಲೆ ಸಾಮಾನ್ಯರಿಗೆ ಗಗನ ಕುಸುಮ. ಅಲ್ಪ ಸ್ವಲ್ಪ ಸಂಶೋಧನೆಗಾಗಿ ಮತ್ತು ಧಾರಾಳವಾಗಿ ಜಾಹಿರಾತಿಗಾಗಿ ಹಣ ಖರ್ಚು ಮಾಡುವ ಪ್ರತೀಷ್ಠಿತ ಗಿಡಮೂಲಿಕಾ ಉತ್ಪನ್ನಗಳ ತಯಾರಿಕಾ ಕಂಪನಿಗಳ ಉತ್ಪನ್ನಗಳ ಬೆಲೆಯಂತೂ ಸಾಮಾನ್ಯರ ಪಾಲಿಗೆ ಮುಗಿಲ ಮಲ್ಲಿಗೆ. ಹಾಗಿದ್ದರೆ ಯಾವ ರೀತಿಯಲ್ಲಿ ಈ ಉತ್ಪನ್ನಗಳು ಒಳ್ಳೆಯವು? ಉಪಯೋಗಿಸುವವರೇ ಈ ಕುರಿತು ವಿಚಾರ ಮಾಡಬೇಕು.
ಒಂದು ದೇಶಕ್ಕೆ ಸೀಮಿತವಾಗಿರದೇ ಜಗತ್ತಿನ ಸುಮಾರು 56 ದೇಶಗಳಲ್ಲಿ ಜನರ ದೈನಂದಿನ ಬದುಕಿನಲ್ಲಿ ಉಪಯೋಗುತ್ತಿರುವ ವನಸ್ಪತಿ ಗಿಡಮೂಲಿಕೆಗಳ ಉತ್ಪನಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ಉತ್ಪನ್ನಗಳ ಬಗ್ಗೆ ವಿಶ್ವ ಮಟ್ಟದ ಮಾನದಂಡ, ಸಮಯೋಚಿತ ಉಪಯೋಗ, ಗುಣಮಟ್ಟ ಕಾಯ್ದುಕೊಳ್ಳುವಿಕೆ, ವನಸ್ಪತಿಗಳ ಉತ್ತಮ ತಳಿ ಬೀಜಗಳ ಲಭ್ಯತೆ, ಇವುಗಳ ಉತ್ತಮ ಕೃಷಿ ಪದ್ದತಿ, ಕಟಾವಣೆ ಪದ್ಧತಿ, ಶೇಖರಣಾ ಪದ್ಧತಿ, ಸಂಸ್ಕರಣೆ, ಕಚ್ಚಾ ವಸ್ತು ಮತ್ತು ವಾಣಿಜ್ಯ ಉತ್ಪನ್ನಗಳ ಕನಿಷ್ಠ ದರ ನಿಗದಿ ಮಾಡುವಿಕೆ, ವಾಣಿಜ್ಯ ಉತ್ಪಾದನೆ ಇವುಗಳ ಬಗ್ಗೆ ಗಮನ ಹರಿಸಿ ಜಾಗತಿಕ ಮಾನದಂಡ ರೂಪಿಸಬೇಕಾದ ಅವಶ್ಯಕತೆಯಿದೆ. “ವಿಶ್ವಗುರು” ಎಂದು ಕರೆಸಿಕೊಳ್ಳಲು ಉತ್ಸುಕವಾದ ಭಾರತವೇ ಈ ನಿಟ್ಟಿನಲ್ಲಿ ನಾಯಕತ್ವವಹಿಸಿ ಮೂಲಿಕೆ ಮದ್ದುಗಳನ್ನು ಮಾರಾಟಮಾಡಲು ಕಠಿಣ ನಿಯಮ ತಂದು ಅಗ್ನಿಪರೀಕ್ಷೆಗೆ ಒಡ್ಡಿ ಪುಟವಿಟ್ಟ ಬಂಗಾರದಂತೆ ಹೊರಬಂದು ಜನರ ಆರೋಗ್ಯದ ರಕ್ಷಣೆ ಮಾಡಲಿ ಎಂಬುದೇ ಈ ಲೇಖನದ ಉದ್ದೇಶ.
ಆಕರ ವೈಜ್ಞಾನಿಕ ಲೇಖನಗಳು
1. BENT, S. 2008. Herbal medicine in the United States: Review of efficacy, safety, and regulation: Grand rounds at University of California, San Francisco Medical Center. Journal of General Internal Medicine, 23(6):854-859.
2. JUNHUA ZHANG, IGHO J. ONAKPOYA, PAUL POSADZKI and MOHAMED EDDOUKS.2015. The Safety of Herbal Medicine: From Prejudice to Evidence. Evidence-Based Complementary and Alternative Medicine, 15 (2): 231-234.
3. LEE, M. K. , CHENG, B. W. H. , CHE, C. T. AND HSIEH, D. P. H. 2006. Cytotoxicity assessment of Ma-Huang (Ephedra) under different conditions of preparation. Toxicological Sciences, 56(2): 424-430
4. NIHARIKA SAHOO and PADMAVATI MANCHIKANTI, 2013. Herbal Drug Regulation and Commercialization. An Indian Industry Perspective. The Journal of Alternative and Complementary Medicine, 19(12):957-963
5. Ramawat, K.G. and Goyal, S.2008. The Indian Herbal Drugs Scenario in Global Perspectives. Bioactive Molecules and Medicinal Plants. 5(1):1-25
6. The Drugs and Cosmetics Act, 1940 and Drugs and Cosmetics (Amendments) Act, 2019. Ministry of Health and Family Welfare. Department of Health. Government of India. Updated till 30th April, 2019. pp 452-545.
7. World Health Organization. 1998. Regulatory Situation of Herbal Medicines A Worldwide Review. https://apps.who.int/medicinedocs/pdf/whozip57e/whozip57e.pdf
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
ಕುಂಬಳಕಾಯಿ ಬೀಜಗಳು ಖಾದ್ಯ ಬೀಜಗಳಾಗಿವೆ, ಅವುಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಶತಮಾನಗಳಿಂದ ತಿಳಿದುಬಂದಿದೆ. ಕುಂಬಳಕಾಯಿ ಸಸ್ಯದ ಈ ಚಪ್ಪಟೆ ಮತ್ತು ಬಿಳಿ ಬೀಜಗಳನ್ನು ಸರಿಯಾಗಿ “ಶಕ್ತಿ ಕೇಂದ್ರ” ಎಂದು ಕರೆಯಲಾಗುತ್ತದೆ ಪೋಷಣೆ”. ಕುಂಬಳಕಾಯಿ ಬೀಜದಿಂದ ಹೊರಗಿನ ಬಿಳಿ ಹೊದಿಕೆಯನ್ನು ತೆಗೆದಾಗ, ತಿಳಿ ಹಸಿರು ಬೀಜಗಳನ್ನು ಪಡೆಯಲಾಗುತ್ತದೆ, ಅವು ಕಣ್ಣಿನ ಆಕಾರದಲ್ಲಿರುತ್ತವೆ, ಆದರೆ ಚಪ್ಪಟೆ ಆಕಾರದಲ್ಲಿರುತ್ತವೆ. ಸಾಂಪ್ರದಾಯಿಕವಾಗಿ, ಕುಂಬಳಕಾಯಿ ಬೀಜಗಳನ್ನು ಮೂತ್ರಪಿಂಡದಂತಹ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಮೂತ್ರನಾಳದ ತೊಂದರೆಗಳು, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ, ಮತ್ತು ಪರಾವಲಂಬಿಗಳು.
ಕುಂಬಳಕಾಯಿ ಬೀಜಗಳನ್ನು ಅವುಗಳ ಕಚ್ಚಾ, ಮೊಳಕೆಯೊಡೆದ ರೂಪದಲ್ಲಿ ಯಾವುದೇ ಕಿರಾಣಿ ಅಂಗಡಿಯಲ್ಲಿ ಕಾಣಬಹುದು, ಇದು ಕುಂಬಳಕಾಯಿ ಬೀಜಗಳನ್ನು ಸೇವಿಸಲು ಉತ್ತಮ ಮಾರ್ಗವಾಗಿದೆ. ಕುಂಬಳಕಾಯಿ ಬೀಜಗಳ ಪೌಷ್ಟಿಕಾಂಶದ ಮೌಲ್ಯವು ಅಧಿಕವಾಗಿದೆ ಮತ್ತು ಇದು ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ಗಳು ಮತ್ತು ಅಪರ್ಯಾಪ್ತ ಕೊಬ್ಬಿನಾಮ್ಲಗಳ ಸಮೃದ್ಧ ಮೂಲವಾಗಿದೆ. ಕುಂಬಳಕಾಯಿ ಬೀಜಗಳ ಪ್ರಯೋಜನಗಳು ವಿವಿಧ ಆರೋಗ್ಯ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡುತ್ತದೆ, ಉದಾಹರಣೆಗೆ ಕ್ಯಾನ್ಸರ್.
ಕುಂಬಳಕಾಯಿ ಬೀಜಗಳ ಪೌಷ್ಟಿಕಾಂಶದ ಮೌಲ್ಯ
ಕುಂಬಳಕಾಯಿ ಬೀಜಗಳು ಪೊಟ್ಯಾಸಿಯಮ್, ಸತು ಮತ್ತು ಮ್ಯಾಂಗನೀಸ್ ಮತ್ತು ವಿಟಮಿನ್ ಕೆ ನಂತಹ ಖನಿಜಗಳು ಸೇರಿದಂತೆ ಹಲವಾರು ಪೋಷಕಾಂಶಗಳ ಪ್ರಬಲ ಮೂಲವಾಗಿದೆ. ನಿರೋಧಕ ವ್ಯವಸ್ಥೆಯ ಪ್ರತಿಜನಕಗಳ ವಿರುದ್ಧ ಹೋರಾಡಲು. ಕುಂಬಳಕಾಯಿ ಬೀಜಗಳು ರಂಜಕ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ ಮತ್ತು ತಾಮ್ರದಂತಹ ಇತರ ಅಗತ್ಯ ಖನಿಜಗಳ ಅತ್ಯುತ್ತಮ ಮೂಲವಾಗಿದೆ.
ಪ್ರತಿ ಸೇವೆಗೆ ಇರುವ ಕುಂಬಳಕಾಯಿ ಬೀಜಗಳ ಬಗ್ಗೆ ಪೌಷ್ಟಿಕಾಂಶದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಕ್ಯಾಲೋರಿಗಳು: ಕುಂಬಳಕಾಯಿ ಬೀಜಗಳು ಒಣಗಿದ ಕುಂಬಳಕಾಯಿ ಬೀಜಗಳ ನಾಲ್ಕನೇ ಕಪ್ನಲ್ಲಿ 180 kCal ಅನ್ನು ಹೊಂದಿರುತ್ತವೆ.
ಪ್ರೋಟೀನ್ಗಳು: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 10 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತವೆ.
ಫ್ಯಾಟ್: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 16 ಗ್ರಾಂ ಕೊಬ್ಬನ್ನು ಒದಗಿಸುತ್ತದೆ.
ಕಾರ್ಬೋಹೈಡ್ರೇಟ್ಗಳು: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 3 ಗ್ರಾಂ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುತ್ತವೆ.
ಫೈಬರ್: ಕುಂಬಳಕಾಯಿ ಬೀಜಗಳಲ್ಲಿ ಸುಮಾರು 2 ಗ್ರಾಂ ಫೈಬರ್ ಇರುತ್ತದೆ.
ಕುಂಬಳಕಾಯಿ ಬೀಜಗಳು ಯಾವುದೇ ಸಕ್ಕರೆ ಅಥವಾ ಅನಾರೋಗ್ಯಕರ ಕೊಬ್ಬನ್ನು ಹೊಂದಿರುವುದಿಲ್ಲ, ಇದು ತೂಕ ನಷ್ಟದ ಆಡಳಿತದಲ್ಲಿರುವವರಿಗೆ ಬೆಳಗಿನ ಉಪಾಹಾರ ಧಾನ್ಯಗಳು ಮತ್ತು ಸಲಾಡ್ಗಳಿಗೆ ಉತ್ತಮ ಸೇರ್ಪಡೆಯಾಗಿದೆ. ಆದಾಗ್ಯೂ, ಕುಂಬಳಕಾಯಿ ಬೀಜಗಳು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುವ ಕಾರಣ ಮಿತವಾಗಿ ಸೇವಿಸಬೇಕು. ಹೆಚ್ಚುವರಿಯಾಗಿ, ಅವುಗಳು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಅವುಗಳನ್ನು ಸೇವಿಸಿದ ನಂತರ ಜನರು ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ ಮತ್ತು ಅತಿಯಾಗಿ ತಿನ್ನುವ ಬಯಕೆಯನ್ನು ನಿಗ್ರಹಿಸುವ ಮೂಲಕ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.
12 ಕುಂಬಳಕಾಯಿ ಬೀಜಗಳ ಆರೋಗ್ಯ ಪ್ರಯೋಜನಗಳು
ಕುಂಬಳಕಾಯಿ ಬೀಜಗಳನ್ನು ನೇರವಾಗಿ ಆಹಾರಕ್ಕೆ ಹೆಚ್ಚುವರಿಯಾಗಿ ಬಳಸಬಹುದು ಅಥವಾ ಸೇವಿಸುವ ಮೊದಲು ಹುರಿಯಬಹುದು. ಅವುಗಳನ್ನು ಸ್ವಂತವಾಗಿ ಲಘುವಾಗಿ ತಿನ್ನಬಹುದು ಅಥವಾ ಅನೇಕ ಪಾಕವಿಧಾನಗಳು ಮತ್ತು ಊಟಗಳಿಗೆ ಸೇರಿಸಬಹುದು. ಅನೇಕ ಕುಂಬಳಕಾಯಿ ಬೀಜಗಳಲ್ಲಿ ಹುರಿದ ಪ್ರಯೋಜನಗಳಿವೆ, ಇದನ್ನು ಸ್ಮೂಥಿಗಳಲ್ಲಿ ಬಳಸುವುದರ ಮೂಲಕ, ಊಟದ ಮೇಲೆ ಅಲಂಕರಿಸುವ ಮೂಲಕ ಅಥವಾ ಲಘುವಾಗಿ ಟೋಸ್ಟ್ ಮಾಡುವ ಮೂಲಕ ಆನಂದಿಸಬಹುದು. ಆದಾಗ್ಯೂ, ಕುಂಬಳಕಾಯಿ ಬೀಜಗಳನ್ನು ಹೆಚ್ಚು ತಿನ್ನಬಾರದು, ವಿಶೇಷವಾಗಿ ಆರೋಗ್ಯಕರ ತೂಕವನ್ನು ನಿರ್ವಹಿಸಲು ಅವುಗಳನ್ನು ಸೇವಿಸುವಾಗ.
ಕುಂಬಳಕಾಯಿ ಬೀಜಗಳನ್ನು ಪ್ರತಿದಿನ ಸೇವಿಸುವುದರಿಂದ ಅನೇಕ ಸಂಭಾವ್ಯ ಪ್ರಯೋಜನಗಳಿವೆ. ಬಿಳಿ ಕುಂಬಳಕಾಯಿ ಬೀಜಗಳ ಟಾಪ್ 12 ಪ್ರಯೋಜನಗಳು ಇಲ್ಲಿವೆ.
ಮಧುಮೇಹದ ಅಪಾಯವನ್ನು ಕಡಿಮೆ ಮಾಡುವುದು
ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಧಿಕವಾಗಿದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಆಹಾರದ ಅತ್ಯಗತ್ಯ ಅಂಶವಾಗಿದೆ. ಕುಂಬಳಕಾಯಿ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಮೂಲಕ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುವ ಮೂಲಕ ಮಧುಮೇಹ ರೋಗಿಗಳಿಗೆ ಒಳ್ಳೆಯದು. ಮಧುಮೇಹ ಮೆಲ್ಲಿಟಸ್ ಅನ್ನು ನಿರ್ವಹಿಸುವ ಮೂಲಕ ಕುಂಬಳಕಾಯಿ ಬೀಜಗಳು ಮಧುಮೇಹ ರೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ, ಇದರಿಂದಾಗಿ ಸ್ಥಿತಿಯನ್ನು ಸರಿಯಾಗಿ ನಿಯಂತ್ರಿಸುತ್ತದೆ.
ಉರಿಯೂತದ ಗುಣಲಕ್ಷಣಗಳು
ಕುಂಬಳಕಾಯಿ ಬೀಜಗಳು ಹಲವಾರು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ನಮ್ಮ ಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ರೋಗಗಳಿಗೆ ಕಾರಣವಾಗುವ ಉರಿಯೂತದಿಂದ ರಕ್ಷಿಸುತ್ತದೆ. ನಾರಿನ ಸಮೃದ್ಧ ಮೂಲವಾಗಿರುವುದರಿಂದ, ಕುಂಬಳಕಾಯಿ ಬೀಜಗಳು ತಮ್ಮ ಉರಿಯೂತದ ಗುಣಲಕ್ಷಣಗಳನ್ನು ವರ್ಧಿಸುತ್ತವೆ. ಈ ಗುಣವು ಯಕೃತ್ತು, ಮೂತ್ರಕೋಶ, ಕರುಳು ಮತ್ತು ಕೀಲುಗಳ ರೋಗಗಳನ್ನು ತಡೆಗಟ್ಟುವಲ್ಲಿ ಪ್ರಯೋಜನಕಾರಿಯಾಗಿದೆ.
ಹೃದಯದ ಕಾರ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕುಂಬಳಕಾಯಿ ಬೀಜದಲ್ಲಿರುವ ಆಂಟಿಆಕ್ಸಿಡೆಂಟ್ಗಳು ಹೃದಯವನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುತ್ತದೆ. ಹೆಚ್ಚುವರಿಯಾಗಿ, ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಮೆಗ್ನೀಸಿಯಮ್ ಕೊಲೆಸ್ಟ್ರಾಲ್ ಮಟ್ಟಗಳು ಮತ್ತು ಟ್ರೈಗ್ಲಿಸರೈಡ್ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದಯ ಕಾಯಿಲೆಗಳ ಅಪಾಯವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.
ಉತ್ತಮ ನಿದ್ರೆ
ಕುಂಬಳಕಾಯಿ ಬೀಜಗಳು ಟ್ರಿಪ್ಟೊಫಾನ್, ಉತ್ತಮ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲದಂತಹ ವಿವಿಧ ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ ಮತ್ತು ತಾಮ್ರ, ಸತು ಮತ್ತು ಸೆಲೆನಿಯಮ್ ಅನ್ನು ಸಹ ಒಳಗೊಂಡಿರುತ್ತದೆ, ಇದು ನಿದ್ರೆಯ ಗುಣಮಟ್ಟ ಮತ್ತು ಅವಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ, ಮೆಗ್ನೀಸಿಯಮ್ ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನಿದ್ರಾಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು
ಕುಂಬಳಕಾಯಿ ಬೀಜಗಳಲ್ಲಿರುವ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿವೆ, ವಿಶೇಷವಾಗಿ ಸ್ತನ ಮತ್ತು ಪ್ರಾಸ್ಟೇಟ್ ಗ್ರಂಥಿಗಳ ಕ್ಯಾನ್ಸರ್.
ತೂಕ ನಿರ್ವಹಣೆಯಲ್ಲಿ ಸಹಾಯಕ
ಕುಂಬಳಕಾಯಿ ಬೀಜಗಳು ಫೈಬರ್ ಮತ್ತು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿವೆ, ಇದು ಸಣ್ಣ ಪ್ರಮಾಣದ ಬೀಜಗಳನ್ನು ಸೇವಿಸುವ ಮೂಲಕವೂ ವ್ಯಕ್ತಿಯನ್ನು ಪೂರ್ಣವಾಗಿ ಅನುಭವಿಸುವಂತೆ ಮಾಡುತ್ತದೆ. ಅವರು ದೀರ್ಘಕಾಲದವರೆಗೆ ಹಸಿವನ್ನು ನೀಗಿಸಲು ಸಹಾಯ ಮಾಡುತ್ತಾರೆ, ಇದು ದಿನವಿಡೀ ಸೇವಿಸುವ ಆಹಾರದ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಸೇವಿಸುವ ಕ್ಯಾಲೊರಿಗಳ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ತೂಕ ನಷ್ಟದ ಪ್ರಯಾಣದಲ್ಲಿ ಇದು ಸಹಾಯ ಮಾಡುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ವಿಟಮಿನ್ ಇ ಮತ್ತು ಸತುವು ಇರುತ್ತದೆ, ಇದು ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಪೋಷಕಾಂಶಗಳ ಉತ್ತಮ ಮೂಲವಾಗಿದೆ. ವಿಟಮಿನ್ ಇ ಪ್ರತಿರಕ್ಷಣಾ ಪ್ರತಿಕ್ರಿಯೆಗಳನ್ನು ಹೆಚ್ಚಿಸಲು ಮತ್ತು ವಿವಿಧ ಸಾಂಕ್ರಾಮಿಕ ರೋಗಗಳಿಂದ ರಕ್ಷಿಸಲು ಹೆಸರುವಾಸಿಯಾಗಿದೆ ಮತ್ತು ದೇಹದ ಜೀವಕೋಶಗಳಲ್ಲಿ ಸ್ವತಂತ್ರ ರಾಡಿಕಲ್ ಹಾನಿಯನ್ನು ತಡೆಯುತ್ತದೆ. ಸತುವು ನಮ್ಮ ದೇಹವನ್ನು ಉರಿಯೂತ, ಅಲರ್ಜಿಗಳು ಮತ್ತು ರೋಗಕಾರಕಗಳಂತಹ ವಿವಿಧ ಸಮಸ್ಯೆಗಳಿಂದ ರಕ್ಷಿಸುತ್ತದೆ. ಆದ್ದರಿಂದ, ಸಂಚಿತವಾಗಿ, ಈ ಪೋಷಕಾಂಶಗಳು ಸೋಂಕುಗಳನ್ನು ತಡೆಗಟ್ಟಲು ಮತ್ತು ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕುಂಬಳಕಾಯಿ ಬೀಜಗಳ ಪ್ರಯೋಜನಗಳು ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಆಂಟಿವೈರಲ್ ಗುಣಲಕ್ಷಣಗಳನ್ನು ಸಹ ಒಳಗೊಂಡಿರುತ್ತವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮೂಳೆಯ ಆರೋಗ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ಬಲವಾದ ಮೂಳೆಗಳಿಗೆ ಒಳ್ಳೆಯದು ಮತ್ತು ಬೆಳವಣಿಗೆಗೆ ಪ್ರಮುಖವಾಗಿದೆ. ಕುಂಬಳಕಾಯಿ ಬೀಜಗಳು ಸಾಕಷ್ಟು ಪ್ರಮಾಣದ ಖನಿಜಗಳನ್ನು ಒದಗಿಸುತ್ತವೆ, ಇದು ಮೂಳೆಗಳ ಸಾಂದ್ರತೆ ಮತ್ತು ಬಲವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ, ಇದು ಸುಲಭವಾಗಿ ಮೂಳೆ ಮುರಿತಗಳು ಮತ್ತು ಆಸ್ಟಿಯೊಪೊರೋಸಿಸ್ನಂತಹ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮೆಗ್ನೀಸಿಯಮ್ ಕೊರತೆಯು ಕ್ಯಾಲ್ಸಿಯಂ ಕೊರತೆಗೆ ಸಂಬಂಧಿಸಿದೆ, ಇದು ದುರ್ಬಲ ಮೂಳೆಗಳಿಗೆ ಕಾರಣವಾಗುತ್ತದೆ.
ಪುರುಷ ಸಂತಾನೋತ್ಪತ್ತಿ ಆರೋಗ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ಉತ್ಕರ್ಷಣ ನಿರೋಧಕಗಳ ದೊಡ್ಡ ಸಂಗ್ರಹವಿದೆ, ಇದು ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಪುರುಷರಿಗೆ ಕುಂಬಳಕಾಯಿ ಬೀಜಗಳ ಪ್ರಯೋಜನಗಳು ಮೂತ್ರದ ಸೋಂಕುಗಳು, ರೋಗಗಳು ಮತ್ತು ಅಸ್ವಸ್ಥತೆಗಳನ್ನು ತಡೆಗಟ್ಟುವುದು ಮತ್ತು ಚಿಕಿತ್ಸೆ ನೀಡುವುದು, ಮತ್ತೊಂದೆಡೆ, ವೀರ್ಯದ ಗುಣಮಟ್ಟವನ್ನು ಸುಧಾರಿಸುವುದು. ಇದು ದೇಹದಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುವ ಮೂಲಕ ಪುರುಷರಲ್ಲಿ ಫಲವತ್ತತೆಯನ್ನು ಸುಧಾರಿಸುತ್ತದೆ ಮತ್ತು ವೀರ್ಯದ ಗುಣಮಟ್ಟ ಮತ್ತು ಪ್ರಮಾಣವನ್ನು ಸುಧಾರಿಸುತ್ತದೆ.
ಸ್ತ್ರೀ ಸಂತಾನೋತ್ಪತ್ತಿ ಆರೋಗ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳು ಉತ್ತಮ ಪ್ರಮಾಣದ ಸತುವನ್ನು ಹೊಂದಿರುತ್ತವೆ, ಇದು ಗರ್ಭಧಾರಣೆಗೆ ಒಳ್ಳೆಯದು. ಸತುವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸಹಾಯ ಮಾಡುತ್ತದೆ, ಇದು ಮಹಿಳೆಯರಿಗೆ ಕುಂಬಳಕಾಯಿ ಬೀಜಗಳ ಪ್ರಯೋಜನಗಳನ್ನು ಹೊಂದಿದೆ. ಆದ್ದರಿಂದ, ಗರ್ಭಿಣಿಯರು ಕುಂಬಳಕಾಯಿ ಬೀಜಗಳಂತಹ ಸತುವು ಭರಿತ ಆಹಾರವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯುತ್ತಾರೆ. ಕುಂಬಳಕಾಯಿ ಬೀಜಗಳು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯ ಮಾಡುತ್ತದೆ.
ಕೂದಲು ಮತ್ತು ಚರ್ಮಕ್ಕೆ ಒಳ್ಳೆಯದು
ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಕೂದಲನ್ನು ನಯವಾಗಿ ಮತ್ತು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ಚರ್ಮವನ್ನು ಮೃದುವಾಗಿಸಲು ಮತ್ತು ಸುಕ್ಕು ಮುಕ್ತವಾಗಲು ಸಹಾಯ ಮಾಡುತ್ತದೆ. ಅದರ ಉರಿಯೂತದ ಗುಣಲಕ್ಷಣಗಳಿಂದಾಗಿ, ಇದು ಮೊಡವೆ ಮತ್ತು ಮೊಡವೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಚರ್ಮದ ಸೋಂಕುಗಳು.
ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ಒತ್ತಡ ಮತ್ತು ಆತಂಕವನ್ನು ತಡೆಯಲು ಮತ್ತು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುವ ಮೂಲಕ ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು ಒಂದು ಸೂಪರ್ಫುಡ್ ಆಗಿದ್ದು ಅದು ಹಲವಾರು ಪ್ರಯೋಜನಗಳನ್ನು ಮತ್ತು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿದೆ. ಇದನ್ನು ಸ್ಮೂಥಿಗಳು, ಸಲಾಡ್ಗಳು, ಸೂಪ್ಗಳು, ಧಾನ್ಯಗಳು, ಕೇಕ್ಗಳು, ಎನರ್ಜಿ ಬಾರ್ಗಳು ಇತ್ಯಾದಿಗಳಲ್ಲಿ ಬಳಸಬಹುದು. ಆದಾಗ್ಯೂ, ಇದನ್ನು ಮಿತವಾಗಿ ಸೇವಿಸಬೇಕು ಇಲ್ಲದಿದ್ದರೆ ಇದು ಉಬ್ಬುವುದು, ಹೊಟ್ಟೆನೋವು, ವಾಯು, ಮತ್ತು ಮಲಬದ್ಧತೆಗೆ ಕಾರಣವಾಗಬಹುದು. ಇದು ಬಹಳಷ್ಟು ಕ್ಯಾಲೊರಿಗಳನ್ನು ಹೊಂದಿರುವುದರಿಂದ, ಇದನ್ನು ಹೆಚ್ಚು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಕುಂಬಳಕಾಯಿ ಬೀಜಗಳನ್ನು ಸೇವಿಸಲು ಉತ್ತಮ ಮಾರ್ಗವೆಂದರೆ ಅವುಗಳನ್ನು ಹುರಿದು ಊಟಕ್ಕೆ ಸೇರಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ4 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

