ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243