Connect with us

ಲೋಕಾರೂಢಿ

ಸಂವಿಧಾನ ಬದಲಾಯಿಸಿದರೆ ಏನಾಗುತ್ತೆ ? ಮಿಸ್ ಮಾಡ್ದೆ ಈ ಲೇಖನ ಓದಿ

Published

on

ಹಿಂದುತ್ವ, ಹಿಂದೂರಾಷ್ಟ್ರ ಎಂದು ಸಾವರ್ಕರ್, ಗೊಳ್ವಲ್ಕರ್ ಪಾದಗಳಿಗೆ ಅಡ್ಡ ಬೀಳಲು ಹೋಗುತ್ತಿರುವ ನಮ್ಮ ಕೆಲವು ಯುವಕರು ಈ ಲೇಖನವನ್ನು ಒಂದಲ್ಲದಿದ್ದರೆ ನಾಲ್ಕು ನಾಲ್ಕು ಸಾರಿ ಓದಿ. ನಿಮ್ಮ ಮನಸ್ಸು ತೃಪ್ತಿಯಾಗುವವರೆಗೂ ಓದಿ. ಆಗಲಾದರೂ ವಾಸ್ತವ ಅರ್ಥವಾದರೆ ಸಾಕು.

ಬಿಜೆಪಿಯ ಅನೇಕ ಮುಖಂಡರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಅವರ ಪ್ರಕಾರ ಸಂವಿಧಾನ ಬದಲಿಸುವುದು ಎಂದರೆ ಈಗಿರುವ ಅಂಬೇಡ್ಕರ್ ನಿರ್ಮಿತ ಸಂವಿಧಾನ ಬದಲಿಸಿ, ಮನುಧರ್ಮ ಆಧಾರತಿ ಸಂವಿಧಾನ ಜಾರಿಗೊಳಿಸುವುದು. ಆಗ ಏನಾಗುತ್ತದೆ ಎಂದು ತಿಳಿಯಲು ಈ ಲೇಖನ ಓದಿ.

1949 ರಲ್ಲಿ ಅಂದರೆ ನಮ್ಮ ದೇಶದ ಸಂವಿಧಾನ ಜಾರಿಯಾಗುವ ಒಂದು ವರ್ಷ ಮೊದಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ತನ್ನ ಮುಖವಾಣಿ ಪತ್ರಿಕೆಯಲ್ಲಿ ಹೀಗೆ ಬರೆದಿತ್ತು.“ಡಾ.ಬಿ.ಆರ್.ಅಂಬೇಡ್ಕರ್ ಕರಡು ಸಮಿತಿಯ ಅಧ್ಯಕ್ಷರಾಗಿ ರಚಿಸಿರುವ ಸಂವಿಧಾನದಲ್ಲಿ ಭಾರತೀಯತೆ ಇಲ್ಲವಾಗಿದೆ. ಈ ದೇಶದ ನೆಲದ ಕಾನೂನಾದ ಮನುಸ್ಮ್ರತಿಯಿಂದ ಏನೂ ಪಡೆದಿಲ್ಲ. ಹೀಗಾಗಿ ಈ ಸಂವಿಧಾನ ನಮಗೆ ಒಪ್ಪಿತವಲ್ಲ”

ಸಂಘಪರಿವಾರ ಗುರೂಜಿ ಎಂದು ಸಂಬೋಧಿಸುವ ಮಾ.ಸ.ಗೋಲ್ವಲ್ಕರ್ ಹೀಗೆಂದಿದ್ದ. “ಹಿಂದುಗಳಿಗೆ ಪ್ರಜಾಪ್ರಭುತ್ವ ತತ್ವಗಳು ಹೊರಗಿನವು. ಇಡೀ ಮನುಕುಲದ ಅತಿ ಶ್ರೇಷ್ಟ ಮತ್ತು ಮಹಾನ್ ಕಾನೂನು ರಚನೆಕಾರ ಮನು”. ಹಾಗೆಯೇ ಸಂಘಪರಿವಾರದ ಮತ್ತೊಬ್ಬ ಸಂಸ್ಥಾಪಕ, ಹಿಂದುತ್ವ ಪದ ಹುಟ್ಟುಹಾಕಿದವ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರಿಗೆ ತಪ್ಪೊಪ್ಪಿಗೆ ಬರೆದು ಕೊಟ್ಟಿದ್ದ ಸಾವರ್ಕರ್ ಹೀಗೆ ಹೇಳಿದ್ದ. ”ವೇದಗಳ ನಂತರ ಅತ್ಯಂತ ಪೂಜನೀಯ ಗ್ರಂಥ ಮನುಸ್ಮ್ರತಿ ಹಾಗೂ ದೇಶವನ್ನು ಅದರ ಆಧಾರದಲ್ಲಿ ನಡೆಸಬೇಕು”. ಮೊನ್ನೆ ಮೊನ್ನೆ ಕನ್ನಡದ ಸಾಹಿತಿ ಎಸ್ ಎಲ್ ಭೈರಪ್ಪ ಸಹ ಇದನ್ನೇ ಹೇಳಿದ್ದಾರೆ.

“ಭಾರತದ ಸಂವಿಧಾನದಲ್ಲಿ ಪರಂಪರೆ ಇಲ್ಲ- ಇದರಲ್ಲಿ ಇರುವ ತತ್ವಗಳು ಪಾಶ್ಚಾತ್ಯವಾದವು” ಎಂದು. 1950 ರ ಜನವರಿ 25 ರಂದು ಅಂದರೆ ಭಾರತ ಗಣರಾಜ್ಯವಾಗುವ ಒಂದು ದಿನ ಮೊದಲು RSS ಪತ್ರಿಕೆ Organizer ನಲ್ಲಿ “ಮನು ನಮ್ಮ ಹೃದಯವನ್ನಾಳುತ್ತಾನೆ” ಎಂಬ ಶೀರ್ಷಿಕೆಯಲ್ಲಿ ನಿವೃತ್ತ ನ್ಯಾಯಾಧೀಶ ಶಂಕರ ಸುಬ್ಬಾ ಐಯರ್ ಎಂಬಾತ ಆರೆಸ್ಸೆಸ್ ಪರವಾಗಿ ಲೇಖನ ಬರೆದು *ಮನುಸ್ಮ್ರತಿಯನ್ನೇ ದೇಶದ ಸಂವಿಧಾನವಾಗಿ ಜಾರಿ ಮಾಡಬೇಕು* ಎಂದು ಬರೆದಿದ್ದ. ನಿಮಗೆ ತಿಳಿದಿರಬಹುದು. ಬಾಬಾಸಾಹೇಬ್ ಅಂಬೇಡ್ಕರ್ ಮಹಾಡ್ ಸಮ್ಮೇಳನದಲ್ಲಿ ಮನುಸ್ಮ್ರತಿಯನ್ಜು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು.ಹಾಗಾದರೆ ಈ ಮನು ಸ್ಮೃತಿ ಯಲ್ಲಿ ನಿಜಕ್ಕೂ ಏನಿದೆ? ಇದರಲ್ಲಿ ತಿಳಿಸಲಾದ ಕೆಲವು ಸಂಗತಿಗಳು ಹೀಗೆವೆ. ಓದಿ ನಿಮ್ಮ ತೀರ್ಮಾನಗಳಿಗೆ ನೀವು ಬನ್ನಿ.

ಅತ್ಯಂತ ಪ್ರಾಚೀನ ವೇದವಾದ ಋಗ್ವೇದದಲ್ಲಿ ಕಾಲಾನಂತರ ಬ್ರಾಹ್ಮಣರು ಪುರುಷ ಸೂಕ್ತ ಎಂಬ ಅಧ್ಯಾಯವನ್ನು ಸೇರಿಸಿದರು. ಅದರಲ್ಲಿರುವ 16 ಶ್ಲೋಕಗಳಲ್ಲಿ ಒಂದು ಹೀಗಿದೆ. “ಬ್ರಾಹ್ಮಣೋಸ್ಯ ಮುಖಮಸಿತ್/ ಬಾಹು ರಾಜನ್ಯ ಕೃತಃ/ಉರು ತಾಡಸ್ಯ ಯಾದ್ವೈಶ್ಯಾ:/ಪಾದ್ಯೋಗಂ ಶೂದ್ರೋ ಆಜಾಯತಾ” – ಭಾರತದಲ್ಲಿ ಜಾತಿ ವಿಷಬೀಜ ಬಿತ್ತಲು ಈ ಶ್ಲೋಕವನ್ನೇ ಬ್ರಾಹ್ಮಣರು ಬಳಸಿಕೊಂಡು ಬಂದಿದ್ದಾರೆ. ಯಾವುದೇ ಸಮಾರಂಭ, ಧಾರ್ಮಿಕ ಕಾರ್ಯಕ್ರಮದಲ್ಲಿ ಪುರೋಹಿತರು ಈ ಶ್ಲೋಕವನ್ನು ತಪ್ಪದೇ ಹೇಳುತ್ತಾರೆ. ಪುರುಷ ಸೂಕ್ತದ ಇದೇ ಶ್ಲೋಕವನ್ನು ಮನುಧರ್ಮ ಶಾಸ್ತ್ರದಲ್ಲಿ ಮನು ಕೂಡಾ ಮನುಧರ್ಮ ಶಾಸ್ತ್ರದಲ್ಲಿ ಪುನರುಚ್ಛರಿಸಿದ್ದಾನೆ. ಮನು ಹೇಳಿರುವುದು ಹೀಗೆ.

  1. ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ ಬ್ರಾಹ್ಮಣನ ನ್ನೂ , ಭುಜದಿಂದ ಕ್ಷತ್ರಿಯನನ್ನೂ, ತೊಡೆಯಿಂದ ವೈಶ್ಯನನ್ನೂ, ಪಾದದಿಂದ ಶೂದ್ರ ನನ್ನೂ ಸೃಷ್ಟಿಸಿದನು ( ಅಧ್ಯಾಯ -1:31)
  2. ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳವರ್ಣಗಳ ( ಬ್ರಾಹ್ಮಣ, ಕ್ಷತ್ರಿಯ, ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ (ಅಧ್ಯಾಯ – 1:91)
  3. ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು ಹುಟ್ಟಿರುತ್ತಾನೆ. ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ ಒಡೆಯನಾಗಿರುತ್ತಾನೆ (ಅಧ್ಯಾಯ -1:99)
  4. ಈ ಭೂಮಿಯಲ್ಲಿ ಸೇರಿರುವುದೆಲ್ಲವೂ ಬ್ರಾಹ್ಮಣನಿಗೆ ಸೇರಿದ್ದಾಗಿವೆ. ಬ್ರಾಹ್ಮಣ ನು ಶ್ರೇಷ್ಡವಾದ ಜನ್ಮವನ್ನು ಪಡೆದದ್ದರಿಂದ ಇವೆಲ್ಲವನ್ನೂ ಹೊಂದಲು ಅವನೇ ಅರ್ಹನಾಗಿರುತ್ತಾನೆ (ಅಧ್ಯಾಯ -1:100)
  5. ಬ್ರಾಹ್ಮಣನಿಗೆ ಶುಭ ಸೂಚಕವಾದ, ಕ್ಷತ್ರಿಯನಿಗೆ ಶಕ್ತಿ ಸೂಚಕವಾದ, ವೈಶ್ಯನಿಗೆ ಧನ ಸೂಚಕವಾದ ಹಾಗೂ ಶೂದ್ರನಿಗೆ ಅಸಹ್ಯ ಸೂಚಕವಾದ ಹೆಸರುಗಳನ್ನು ಇಡಬೇಕು (ಅಧ್ಯಾಯ -2:31)
  6. ಬ್ರಾಹ್ಮಣರಿಗೆ ಇಷ್ಟವಾಗುವ ಎಲ್ಲ ರುಚಿಕರ ಪದಾರ್ಥಗಳನ್ನು ಅವರಿಗೆ ನೀಡಬೇಕು. ಅವರ ಜೊತೆ ಪರಬ್ರಹ್ಮ ವಿಚಾರವನ್ನು ಚರ್ಚಿಸಬೇಕು. ಇದರಿಂದ ಪಿತೃಗಳಿಗೆ ಪ್ರೀತಿಯುಂಟಾಗುತ್ತದೆ (ಅಧ್ಯಾಯ -3:231)
  7. ಹಂದಿಯು ಮೂಸುವುದರಿಂದ, ಕೋಳಿಯ ರೆಕ್ಕೆಯ ಗಾಳಿ ತಾಕುವುದರಿಂದ, ನಾಯಿ ನೋಡುವುದರಿಂದ ಹಾಗೂ ಶೂದ್ರನ ಸ್ಪರ್ಶದಿಂದ ಬ್ರಾಹ್ಮಣ ಭೋಜನವು ನಾಶವಾಗಿ ಹೋಗುತ್ತದೆ (ಅಧ್ಯಾಯ – 3:241)
  8. ಶೂದ್ರರಾಜನ ರಾಜ್ಯದಲ್ಲಿ, ಅಧರ್ಮಿಗಳಿರುವ ಪ್ರದೇಶದಲ್ಲಿ ವೇದವಿರೋಧಿಗಳಾದ ಪಾಷಂಡಿಗಳ ಪ್ರಾಂತದಲ್ಲಿ, ಅಂತ್ಯಜರ ಸನಿಹದಲ್ಲಿ ಬ್ರಾಹ್ಮಣರು ವಾಸ ಮಾಡಬಾರದು (ಅಧ್ಯಾಯ -4:61)
  9. ಶೂದ್ರನಿಗೆ ವಿದ್ಯೆ ಕಲಿಸಬಾರದು. ಯಜ್ಞದ ಹವಿಸ್ಸಿನ ಶೇಷವನ್ನು ಕೊಡಬಾರದು. ಧರ್ಮೋಪದೇಶ ಮಾಡಬಾರದು. ವ್ರತಾಚರಣೆ ಹೇಳಿಕೊಡಬಾರದು. (ಅಧ್ಯಾಯ – 4:80)
  10. ಬ್ರಾಹ್ಮಣರನ್ನು ವಧಿಸಲು ದ್ವಿಜಾತಿಯವರು ದಂಡಗಳನ್ನೆತ್ತಿದರೆ ಬರಿ ಎತ್ತಿದ ಮಾತ್ರಕ್ಕೆ ನೂರು ವರ್ಷಗಳ ತನಕ ತಾಮಿಸ್ರವೆಂಬ ನರಕದಲ್ಲಿ ಬೀಳುತ್ತಾರೆ (ಅಧ್ಯಾಯ – 4:165)
  11. ಬೇಕು ಬೇಕೆಂದೇ ಯಾರಾದರೂ ಕೋಪಕೊಂಡು ಬ್ರಾಹ್ಮಣನಿಗೆ ಹೊಡೆದರೂ ಸಾಕು ಅವರು ಇಪ್ಪತ್ತೊಂದು ಜನ್ಮ ಕಳೆಯುವ ತನಕ ಹೀನಯೋನಿಗಳಲ್ಲಿ ಹುಟ್ಟುತ್ತಾನೆ (ಅಧ್ಯಾಯ -4:166)
  12. ಪುರಾಣಕಾಲದಲ್ಲಿ ಮಾಡಿದ ಯಜ್ಞಗಳಲ್ಲಿ ಬ್ರಾಹ್ಮಣ ಹಾಗೂ ಕ್ಷತ್ರಿಯರು ಮಾಡಿದಂತ ಯಾಗಗಳಲ್ಲಿ, ಶಾಸ್ತ್ರ ಗಳಲ್ಲಿ ತಿನ್ನಬಹುದೆಂದು ಹೇಳಿದ ಮೃಗಪಕ್ಷಿಗಳನ್ನು ಬಲಿನೀಡಿ ಅವುಗಳ ಮಾಂಸದಿಂದ ಪುರೋಡಾಶನವನ್ನು ( ಹವಿಸ್ಸನ್ನು) ಮಾಡಿದ್ದರು ( ಅ-5:23)
  13. ಬ್ರಾಹ್ಮಣರಿಗೆ ಅಪೇಕ್ಷೆಯುಂಟಾದಾಗ ಯಜ್ಞವಿಧಿಗಳಲ್ಲಿ ಮಂತ್ರಜಲದಿಂದ ಪ್ರೋಕ್ಷಿತವಾದ ಮಾಂಸವನ್ನು ಹಾಗೂ ಶಾಸ್ತ್ರವಿಧಿಗಳಲ್ಲಿ ಹೇಳಲಾದ ರೀತಿಯಿಂದ ಶ್ರಾದ್ಧದೂಟದಲ್ಲಿನ ಮಾಂಸವನ್ನು ತಿನ್ನಬಹುದು. ಹಾಗೆಯೇ ಆಹಾರ ಸಿಗದೆ ಪ್ರಾಣ ಸಂಕಟ ಉಂಟಾದಾಗ ಅನಿವಾರ್ಯವಾಗಿ ಮಾಂಸವನ್ನು ತಿನ್ನಬಹುದು (ಅಧ್ಯಾಯ -5:27)
  14. ಈ ಜಗತ್ತಿನಲ್ಲಿರುವ ಸಮಸ್ತ ಸ್ಥಾವರ ಜಂಗಮ ಜೀವ ಜಂತುಗಳನ್ನು, ಚರಾಚರ ವಸ್ತುಗಳನ್ನು ತಿನ್ನಲಿಕ್ಕೆಂದೇ ಪರಮಾತ್ಮ ನು ಸೃಷ್ಟಿಸಿದ್ದಾನೆ (ಅಧ್ಯಾಯ – 5:28)
  15. ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಇತ್ಯಾದಿ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ ಬ್ರಾಹ್ಮಣ ನು ಪಶುವನ್ನು ಕೊಂದರೆ ಅವನು ತನ್ನ ಜತೆಗೆ ಆ ಪಶುವಿಗೂ ಉತ್ತಮ ಗತಿಯನ್ನು ಉಂಟು ಮಾಡುತ್ತಾನೆ (ಅಧ್ಯಾಯ – 5:42)
  16. ಪತಿಯನಡತೆಯು ಚೆನ್ನಾಗಿಲ್ಲವಾದರೂ, ಅವನು ಕಾಮಾತುರನಾಗಿ ಅನ್ಯ ಹೆಂಗಸಲ್ಲಿ ಮನಸ್ಸಿಟ್ಟರೂ, ದುರ್ಗುಣಿಯಾಗಿದ್ದರೂ ಸಾಧ್ವಿಯಾದ ಆ ಹೆಂಗಸು ಆ ತನ್ನ ಪತಿಯನ್ನು ದೇವರೆಂದೇ ಭಾವಿಸಿ ಅವನ ಸೇವೆ ಮಾಡಬೇಕು (ಅಧ್ಯಾಯ – 5:154)
  17. ವಿದ್ಯೆ ಕಲಿತು ಗುರುಕುಲದಿಂದ ಹೊರಬರುವ ಬ್ರಾಹ್ಮಣ ವಿದ್ವಾಂಸರನ್ನು ರಾಜನು ಸತ್ಕರಿಸಬೇಕು. ವಿದ್ಯಾವಂತ ಬ್ರಾಹ್ಮಣರಿಗೆ ನೀಡುವ ನಿಧಿಯು ಅಕ್ಷಯವಾದ ಫಲವನ್ನು ಉಂಟುಮಾಡುತ್ತದೆ (ಅಧ್ಯಾಯ -7:82)
  18. ಯಾವ ರಾಜನ ನ್ಯಾಯಸಭೆಯಲ್ಲಿ ಶೂದ್ರನು ಧರ್ಮವಿಚಾರ ವಿಮರ್ಶೆ ಮಾಡುತ್ತಾನೋ, ಆ ರಾಜನ ದೇಶವು ಕೆಸರಿನಲ್ಲಿ ಬಿದ್ದ ಹಸುವಿನಂತಾಗಿ ಬಿಡುತ್ತದೆ. ಅಂತಹ ರಾಜನು ನೋಡು ನೋಡುತ್ತಿದ್ದಂತೆಯೇ ಕಷ್ಟ ಪಡುತ್ತಾನೆ (ಅಧ್ಯಾಯ -8:21)
  19. ಯಾವ ರಾಜ್ಯವು ಹೆಚ್ಚಾಗಿ ಶೂದ್ರರಿಂದ ತುಂಬಿರುತ್ತದೋ, ನಾಸ್ತಿಕರಿಂದ ಆಕ್ರಮಿಸಲ್ಪಡುತ್ತದೋ, ಬ್ರಾಹ್ಮಣರಹಿತವಾಗಿರುತ್ತದೋ ಆ ರಾಜ್ಯವು ದುರ್ಭಿಕ್ಷ ರೋಗಗಳಿಂದ ಜರ್ಜರಿತವಾಗಿ ಬೇಗನೆ ನಾಶವಾಗಿ ಬಿಡುತ್ತದೆ (ಅಧ್ಯಾಯ -8:22)
  20. ಪರಸ್ಪರ ವಿರುದ್ಧ ಸಾಕ್ಷಿಗಳು ಹೇಳಲ್ಪಟ್ಟಾಗ ರಾಜನು ಬಹುಮತದ ಅಭಿಪ್ರಾಯ ಮನ್ನಿಸಬೇಕು. ಸಮಾನ ಇಬ್ಬರಲ್ಲಿ ಪರಸ್ಪರ ವಿರುದ್ಧ ಸಾಕ್ಷಿ ನುಡಿದರೆ ಗುಣವಂತನ ಸಾಕ್ಷಿ ಮನ್ನಿಸಬೇಕು. ಗುಣವಂತರಲ್ಲಿ ವಿರೋಧ ಸಾಕ್ಷಿ ಉಂಟಾದಾಗ ರಾಜನು ಬ್ರಾಹ್ಮಣ ಶ್ರೇಷ್ಟನ ಸಾಕ್ಷಿನಂಬಬೇಕು (ಅಧ್ಯಾಯ -8:73)
  21. ಬ್ರಾಹ್ಮಣನನ್ನು ಬೈದರೆ ಕ್ಷತ್ರಿಯನಿಗೆ ನೂರು ಪಣಗಳ ದಂಡ, ವೈಶ್ಯನಿಗೆ ನೂರೈವತ್ತು ಅಥವಾ ಇನ್ನೂರು ಪಣಗಳ ದಂಡ. ಬ್ರಾಹ್ಮಣನನ್ನು ಬೈದ ಶೂದ್ರನಿಗೆ ವಧೆ ಶಿಕ್ಷೆ (ಮರಣ ದಂಡನೆ) ವಿಧಿಸಬೇಕು. (ಅಧ್ಯಾಯ – 8:627)
  22. ಉಪನಯನ ಸಂಸ್ಕಾರ ಹೊಂದಲು ಅರ್ಹತೆಯಿಲ್ಲದ ಶೂದ್ರನು ದ್ವಿಜಾತಿಯವರಾದ ಬ್ರಾಹ್ಮಣ ಕ್ಷತ್ರಿಯ ವೈಶ್ಯರನ್ನು ಹೀನವಾದ ಕೆಟ್ಟ ಮಾತುಗಳಿಂದ ಬೈದರೆ ಕೆಳ ಜಾತಿಯಲ್ಲಿ ಹುಟ್ಟಿದ ಆ ಶೂದ್ರನ ನಾಲಿಗೆಯನ್ನು ಛೇಧಿಸತಕ್ಕದ್ದು. ಏಕೆಂದರೆ ಅವನುಕೆಳ ಜಾತಿಯವನು (ಅಧ್ಯಾಯ -8:270)
  23. ಬ್ರಾಹ್ಮಣ, ಕ್ಷತ್ರಿಯ ವೈಶ್ಯ ಇವರ ಜಾತಿಯ ಹೆಸರುಗಳನ್ನೆತ್ತಿ ಹೀನಾಮಾನವಾಗಿ ಬೈದಂತ ಆ ಶೂದ್ರನ ಬಾಯಲ್ಲಿ ಕಾದ ಕಬ್ಬಿಣದ ಹತ್ತಂಗುಲ ಉದ್ದದ ಸರಳನ್ನಿಡಬೇಕು (ಅಧ್ಯಾಯ – 8:271)
  24. ಬ್ರಾಹಣರಿಗೆ ಅಹಂಕಾರದಂದ ಧರ್ಮವನ್ನು ಬೋಧಿಸುವ ಶೂದ್ರನಿಗೆ ರಾಜನು ಬಾಯಲ್ಲಿಹಾಗೂ ಕಿವಿಯಲ್ಲಿ ಕಾದ ಎಣ್ಣೆಯನ್ನು ಹಾಕಿಸಬೇಕು (ಅಧ್ಯಾಯ -8:272)
  25. ಬ್ರಾಹ್ಮಣ ಮೊದಲಾದ ಶ್ರೇಷ್ಟ ಜಾತಿಯವರನ್ನು ತನ್ನ ಕೈಕಾಲು ಮುಂತಾದ ಯಾವುದಾದರೂ ಅಂಗದಿಂದ ಅಂತ್ಯಜನು ( ಶೂದ್ರನು) ಹೊಡೆದರೆ ಅವನ ಆ ಅಂಗವನ್ನು ( ಕೈ ಕಾಲು ಇತ್ಯಾದಿಯನ್ನು ) ಕತ್ತರಿಸಬೇಕು. ಇದು ಮನುವು ಹೇಳಿದ ಶಾಸನವು (ಅಧ್ಯಾಯ -8:279)
  26. ಬ್ರಾಹ್ಮಣನ ಜತೆಗೆ ಒಂದೇ ಆಸನದಲ್ಲಿ ಕುಳಿತ ಅಂತ್ಯಜನಿಗೆ ಅಥವಾ ಶೂದ್ರನಿಗೆ ಸೊಂಟದಲ್ಲಿ ಬರೆ ಎಳೆದು ಊರಿನಿಂದ ಹೊರಗೆ ಹಾಕಬೇಕು ಅಥವಾ ಅವನ ಕುಂಡೆಯನ್ನು ಕತ್ತರಿಸಬೇಕು ( ಆಗ ಅವನು ಸಾಯಬಾರದು) (ಅಧ್ಯಾಯ – 8:281)
  27. ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾಬಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ ಹೂಸು ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅಧ್ಯಾಯ -8:282)
    ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು. ತನಗಿಂತ ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ ಗೃಹಬಂಧನದಲ್ಲಿರಿಸಬೇಕು (ಅಧ್ಯಾಯ -8:365)
  28. ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ ಕಸಿದುಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅಧ್ಯಾಯ -8:375)
  29. ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅಧ್ಯಾಯ -8:377)
  30. ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ ವಿಧಿಸಬೇಕು (ಅಧ್ಯಾಯ -8:379)
  31. ಒಬ್ಬ ಬ್ರಾಹ್ಮಣನು ಎಲ್ಲ ವಿಧದ ಅಪರಾಧ, ಪಾಪ ಮಾಡಿದರೂ ಅವನನ್ನು ಕೊಲ್ಲಬಾರದು. ಅವನ ಸರ್ವಸ್ವ ಅಪಹರಿಸಿ ಅವನನ್ನು ದೇಶದಿಂದ ಹೊರಕ್ಕೆ ಹಾಕಬೇಕು (ಅಧ್ಯಾಯ -8:380)
  32. ಶಯ್ಯೆ, ಆಸನ, ಅಲಂಕಾರ, ಇವುಗಳ ಮೋಹ, ಕಾಮ, ಕ್ರೋಧ, ಅಪ್ರಾಮಾಣಿಕತೆ, ಪತಿದ್ರೋಹ ಮತ್ತು ದುರ್ನಡತೆ ಇವೆಲ್ಲಾ ಸಾಮಾನ್ಯವಾಗಿ ಸ್ತ್ರೀಯಲ್ಲಿರುವ ಸ್ವಾಭಾವಿಕ ಗುಣಗಳು (ಅಧ್ಯಾಯ -9:17)
  33. ಸ್ತ್ರೀಯರಿಗೆ ಮಂತ್ರಪೂರ್ವಕವಾದ ಧರ್ಮ ಸಂಸ್ಕಾರಗಳಿಲ್ಲ ಎಂದು ಶಾಸ್ತ್ರ ಹೇಳುತ್ತದೆ. ಇಂದ್ರಿಯಗಳನ್ನು ನಿಗ್ರಹಿಸಲು ಮಂತ್ರಸಾಧನಗಳು ಸ್ತ್ರೀಯರಿಗೆ ಹೇಳಲ್ಪಟ್ಟಿಲ್ಲವಾದ್ದರಿಂದ ಅವರು ಸದಾ ಅಶುದ್ಧರಾಗಿಯೇ ಇರುತ್ತಾರೆ ಎಂಬುದು ಧರ್ಮದ ವಿಚಾರವಾಗಿದೆ. (ಅಧ್ಯಾಯ: 9:19)
  34. ಮೂವತ್ತು ವಯಸಿನ ಪುರುಷ ಹನ್ನೆರಡು ವಯಸ್ಸಿನ ಸುಂದರ ಕನ್ಯೆಯನ್ನು ಮದುವೆಯಾಗಬೇಕು. ಇಲ್ಲವೇ ಇಪ್ಪತ್ತನಾಲ್ಕು ವರ್ಷದವನು ಎಂಟು ವರ್ಷದ ಕನ್ಯೆಯನ್ನು ಮದುವೆ ಮಾಡಿಕೊಳ್ಳಬೇಕು. ಅದಕ್ಕಿಂತ ಮೊದಲೇ ವಿವಾಹವಾದವನು ತೊಂದರೆ ಅನುಭವಿಸುತ್ತಾನೆ (ಅಧ್ಯಾಯ: 9:94)
  35. ರಾಜನು ತನ್ನ ಮೇಲೆ ಎಷ್ಟೇ ಸಂಕಷ್ಟಗಳ ಬಂದೆರಗಿದರೂ ಬ್ರಾಹ್ಮಣರ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ಬ್ರಾಹ್ಮಣನ ಶಾಪದಿಂದ ರಾಜನ ಸರ್ವಸ್ವವೂ ನಷ್ಟವಾಗಿಬಿಡುವುದು (ಅಧ್ಯಾಯ -9:313)
  36. ಬ್ರಾಹ್ಮಣರು ಕೋಪಗೊಂಡರೆ ಹೊಸ ಲೋಕಗಳನ್ನೇ ಸೃಷ್ಟಿಸಬಲ್ಲರು. ಹೊಸ ಲೋಕಪಾಲರನ್ನು ನೇಮಿಸಬಲ್ಲರು.ದೇವತೆಗಳ ದೈವತ್ವವನ್ನೇ ಅಳಿಸಿಬಿಡಬಲ್ಲರು. ಅಂಥ ಬ್ರಾಹ್ಮಣರನ್ನು ರೇಗಿಸಿ ಯಾವ ರಾಜ ತಾನೇ ಸಮೃದ್ಧಿ ಹೊಂದಬಲ್ಲನು? (ಅಧ್ಯಾಯ -9:315)
  37. ಬ್ರಾಹ್ಮಣನ ಸೇವೆಯೇ ಶೂದ್ರನ ವಿಶಿಷ್ಟ ಕರ್ತವ್ಯವಾಗಿದೆ. ಅವನು ಬೇರೆ ಕೆಲಸ ಮಾಡಿದರೆ ಅವನಿಗೆ ಯಾವ ಫಲವೂ ಸಿಗುವುದಿಲ್ಲ (ಅಧ್ಯಾಯ -10:123)
  38. ಹಣ ಸಂಪಾದನೆ ಮಾಡುವ ಸಾಮರ್ಥ್ಯವು ಇದ್ದರೂ ಶೂದ್ರನು ಹಣ ಸಂಪಾದಿಸಬಾರದು. ಹಣ ಸಂಪಾದನೆ ಮಾಡಿದರೆ ಶೂದ್ರನು ಬ್ರಾಹ್ಮಣರನ್ನು ಕಡೆಗಣಿಸುತ್ತಾನೆ (ಅಧ್ಯಾಯ -10:129)

ಇಂದು ಬಹಳಷ್ಟು ಶೂದ್ರ ಯುವಕರು ಕಂಕಣ ಬದ್ಧರಾಗಿ ಹಿಂದುತ್ವಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಅವರಿಗೆ ಮನುಧರ್ಮ ವನ್ನು ಆಧರಿಸಿದ ಹಿಂದುತ್ವ ಯಶಸ್ವಿಯಾದರೆ ಎಂತಹ ವ್ಯವಸ್ಥೆಯನ್ನುವ RSS/ BJP ತರಲಿವೆ ಎಂಬುದು ತಿಳಿಯಲಿ. ನಮ್ಮ ಭಾರತದಲ್ಲಿ ಜನಜೀವನ ಮತ್ತು ಸಂಸ್ಕೃತಿ ಹಾಗೂ ಧರ್ಮಗಳು ಶುರುವಾಗಿದ್ದು ನಲವತ್ತು ಸಾವಿರ ವರ್ಷಗಳ ಹಿಂದೆ. 9 ಸಾವಿರ ವರ್ಷಗಳ ಹಿಂದೆ ವಿಶ್ವ ಪ್ರಸಿದ್ಧ ಹರಪ್ಪಾ ನಾಗರಿಕತೆ ಆರಂಭವಾಗಿತ್ತು.
ಇಷ್ಟು ಕಾಲದವರೆಗೂ ಈ ದೇಶದಲ್ಲಿ ಬ್ರಾಹ್ಮಣರಾಗಲೀ ಅವರ ಪೂರ್ವಿಕರಾಗಲೀ ಇರಲೇ ಇಲ್ಲ.

ಕೇವಲ ಮೂರೂವರೆ ಸಾವಿರ ವರ್ಷಗಳ ಹಿಂದೆ ಇಲ್ಲಿಗೆ ದಾಳಿ ನಡೆಸಿ ಈ ದೇಶದ ಧರ್ಮ ಸಂಸ್ಕೃತಿಗಳ ಮೇಲೆ ತಮ್ಮ ವೈದಿಕ ಸಂಸ್ಕೃತಿ, ಬ್ರಾಹ್ಮಣ ಧರ್ಮವನ್ನು ಹೇರಿದರು. ಅಸ್ಪೃಶ್ಯತೆ ಜಾರಿಗೊಳಿಸಿದರು.

ಇವತ್ತು ಅದನ್ನೇ ಭಾರತೀಯತೆ, ಪರಂಪರೆ ಎಂದು ಕರೆದು ವೈದಿಕ ಪೂರ್ವದಲ್ಲಿ ಇದ್ದ ಪ್ರಜಾಪ್ರಭುತ್ವ ಪದ್ಧತಿಯನ್ನು ಪಾಶ್ವಿಮಾತ್ಯ ತತ್ವ ಎನ್ನುತ್ತಿದ್ದಾರೆ.

ನಾವೀಗ ಎಚ್ಚೆತ್ತುಕೊಳ್ಳದಿದ್ದರೆ ಭಾರತದ ಸರ್ವನಾಶ ಖಂಡಿತ.

( ಮನುಸ್ಮೃತಿ ಕುರಿತು ಹೆಚ್ಚಿನ ಆಸಕ್ತಿಯಿದ್ದವರು ಶೇಷ ನವರತ್ನ ಅವರು ಸಂಸ್ಕೃತದಿಂದ ಯಥಾವತ್ತಾಗಿ ಕನ್ನಡಕ್ಕೆ ಅನುವಾದಿಸಿರುವ (ಸಂಸ್ಕೃತ ಶ್ಲೋಕಗಳ ಸಮೇತ) 200 ಪುಟಗಳ ಮನುಸ್ಮೃತಿ ಪುಸ್ತಕವನ್ನು ತರಿಸಿಕೊಂಡು ಓದಬಹುದು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ1 day ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ3 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ4 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ5 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ1 week ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ1 week ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ2 weeks ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

Trending