Connect with us

ಬಹಿರಂಗ

ಸಂವಿಧಾನ ಸೃಷ್ಟಿಯ ಕತೆ

Published

on

  • ರಘೋತ್ತಮ ಹೊ.ಬ

Constituent Assembly ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ; 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು. ಆ ಸಮಿತಿಯ ಹೆಸರು ‘ಕ್ಯಾಬಿನೆಟ್ ಮಿಷನ್ ಆಯೋಗ’. ಸದರಿ ಆಯೋಗವು 1946 ಮಾರ್ಚ್ 16 ರಂದು ‘ಭವಿಷ್ಯದ ಭಾರತದ ಸರ್ಕಾರಕ್ಕಾಗಿ ಒಂದು ಸಂವಿಧಾನ ರಚಿಸಲು ಸಂವಿಧಾನ ಸಭೆಯೊಂದನ್ನು ರಚಿಸುವ ಅಗತ್ಯವಿದೆ’ ಎಂದು ಘೋಷಿಸಿತು. ಅಂತೆಯೇ ಆ ಸಭೆ ಪ್ರಜಾಸತ್ತಾತ್ಮಕವಾಗಿರಬೇಕೆಂಬ ನಿಟ್ಟಿನಲ್ಲಿ ವಿವಿಧ ಪ್ರಾಂತ್ಯಗಳ ಅಸೆಂಬ್ಲಿಗಳ ಮೂಲಕ ಸದಸ್ಯರನ್ನು ಆರಿಸಲಾಯಿತು. ಅಂದಹಾಗೆ ಆ ಸಭೆಗೆ ಭಾರತದ ಪಶ್ಚಿಮದ ತುದಿ ಬಾಂಬೆ ಪ್ರಾಂತ್ಯದಿಂದ ಸ್ಪರ್ಧಿಸಿದ್ದ ಅಂಬೇಡ್ಕರರು ಕಾಂಗ್ರೆಸ್ಸಿನ ಅವಿಚ್ಛಿನ್ನ ವಿರೋಧದಿಂದ ಸೋಲಬೇಕಾಯಿತು. ಆದರೂ, ಎದೆಗುಂದದೆ ಪೂರ್ವದ ದೂರದ ಬಂಗಾಳದಿಂದ ಅಲ್ಲಿಯ ಪರಿಶಿಷ್ಟ ಜಾತಿಯ ನಾಯಕ ಜೋಗೇಂದ್ರನಾಥ ಮಂಡಲ್‍ರ ಬೆಂಬಲದ ಮೂಲಕ ಅವರು ಸಂವಿಧಾನ ಸಭೆಗೆ ಆರಿಸಿಬರುವಲ್ಲಿ ಸಫಲರಾರದು. ಒಟ್ಟಾರೆ 296 ಸದಸ್ಯ ಬಲದ ಮೂಲಕ ಸಂವಿಧಾನ ಸಭೆ ತನ್ನ ಪ್ರಥಮ ಸಭೆಯನ್ನು 1946 ಡಿಸೆಂಬರ್ 6ರ ಬೆಳಿಗ್ಗೆ 11ಗಂಟೆಗೆ ನವದೆಹಲಿಯ ಕಾನ್‍ಸ್ಟಿಟ್ಯೂಶನ್ ಹಾಲ್‍ನಲ್ಲಿ ಆರಂಭಿಸಿತು.

ಸಭೆ ಆರಂಭವಾದಾಗ ಒಟ್ಟು 296 ಸದಸ್ಯರಲ್ಲಿ ಭಾಗವಹಿಸಿದ್ದು 207 ಮಂದಿಯಷ್ಟೆ. ಇನ್ನುಳಿದ ಮಂದಿ ಅಂದಿನ ಮುಸ್ಲಿಂಲೀಗ್‍ಗೆ ಸೇರಿದವರಾಗಿದ್ದು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಿ ಅವರೆಲ್ಲ ಗೈರುಹಾಜರಾಗಿದ್ದರು. ಹೀಗಿದ್ದರೂ ಪಂಡಿತ್ ಜವಹರಲಾಲ್ ನೆಹರೂ “ಭಾರತ ಸಾರ್ವಭೌಮ ಸ್ವತಂತ್ರ ಗಣರಾಜ್ಯವಾಗಲು ತನ್ನ ಭವಿಷ್ಯದ ಸರ್ಕಾರಕ್ಕಾಗಿ ಅದು ತನ್ನದೇ ಆದಂತಹ ಸಂವಿಧಾನವೊಂದನ್ನು ಹೊಂದುವುದನ್ನು ಬಯಸುತ್ತದೆ” ಎಂದು ಗೊತ್ತುವಳಿಯೊಂದನ್ನು ಮಂಡಿಸಿದರು. ಆದರೆ ಸದಸ್ಯರಾದ ಎಂ.ಆರ್.ಜಯಕರ್ “ಸಭೆಗೆ ಮುಸ್ಲಿಂ ಲೀಗ್ ಮತ್ತು ಇತರೆ ರಾಜ ಸಂಸ್ಥಾನಗಳ ಸದಸ್ಯರು ಗೈರುಹಾಜರಾಗಿರುವುದರಿಂದ ಅವರೆಲ್ಲ ಭಾಗವಹಿಸುವಂತಾಗಲು ಈ ಸಭೆಯನ್ನು ಮುಂದೂಡಬೇಕು” ಎಂದು ತಮ್ಮ ಆಕ್ಷೇಪವ್ಯಕ್ತಪಡಿಸಿದರು ಮತ್ತು ನೆಹರೂರವರು ಮಂಡಿಸಿದ್ದ ಆ ಗೊತ್ತುವಳಿಯ ಚರ್ಚೆಯನ್ನು ಮುಂದೂಡಲು ಸಭೆಯ ಕಲಾಪಕ್ಕೆ ತಿದ್ದುಪಡಿಯೊಂದನ್ನು ಮಂಡಿಸಿದರು. ಅಂದಹಾಗೆ ಗೌರವಾನ್ವಿತ ಸದಸ್ಯರ ಇಂತಹ ಆಕ್ಷೇಪ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಆಶ್ಚರ್ಯವೆಂದರೆ ಈ ಸಮಯದಲ್ಲಿ ಇಂತಹ ಅನಿರೀಕ್ಷಿತ ಕೋಲಾಹಲದ ನಡುವೆ ಮುಂದುವರಿದ ಸಭೆಯಲ್ಲಿ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದ್‍ರವರು ಡಿಸೆಂಬರ್ 17ರಂದು ಡಾ.ಅಂಬೇಡ್ಕರರನ್ನು ಸಭೆಯನ್ನುದೇಶಿಸಿ ಮಾತನಾಡಲು ಆಹ್ವಾನಿಸಿದರು.

ಸತ್ಯ ಹೇಳಬೇಕೆಂದರೆ ಯಾವ ಸಂವಿಧಾನ ಸಭೆ ನಿಂತುಹೋಗಬೇಕಿತ್ತೋ, ಅನಿರ್ದಿಷ್ಟ ಅವಧಿಗೆ ಮುಂದೂಡಬೇಕಾಗಿತ್ತೋ ಅದು ಮುಂದುವರಿಯಿತು! ಹೋಲಿಕೆ ಮಾಡುವುದಾದರೆ ಭಾರತದ ಸಂವಿಧಾನದ ಚಕ್ರ ಅಂಬೇಡ್ಕರರ ಮೂಲಕ ಉರುಳಲಾರಂಭಿಸಿತು! ಯಾಕೆಂದರೆ ತಮ್ಮ ಭಾಷಣದಲ್ಲಿ ಅಂಬೇಡ್ಕರರು ನೆಹರೂರವರು ಮಂಡಿಸಿದ್ದ ಗೊತ್ತುವಳಿಯ 8 ಅಂಶಗಳನ್ನು ಪದಪದವಾಗಿ, ಪದರು ಪದರಾಗಿ ಬಿಡಿಸಿ ಸಂವಿಧಾನ ಎತ್ತ ಸಾಗಬೇಕು, ಹೇಗಿರಬೇಕು ಎಂದು ವಿವಿಧ ರಾಷ್ಟ್ರಗಳ ಸಂವಿಧಾನಗಳನ್ನು ಉಲ್ಲೇಖಿಸುತ್ತಾ ಮಾರ್ಗ ತೋರಿಸಲಾಂಭಿಸಿ ಸಭೆಯನ್ನು ಗಂಭೀರತೆಯೆಡೆಗೆ ತಂದರು. ಮುಸ್ಲಿಂಲೀಗ್ ಸದಸ್ಯರು ಗೈರಾಗಿದ್ದಕ್ಕೆ ಮುಂದಿನ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಏಕತೆಯ ಆಶಾಭಾವ ವ್ಯಕ್ತಪಡಿಸುತ್ತಾ ಅಂಬೇಡ್ಕರರು “ವಿವಿಧ ಜಾತಿ-ಜನಾಂಗಗಳಾಗಿದ್ದಾಗ್ಯೂ ನಾವೆಲ್ಲಾ ಸದಾ ಒಂದಾಗಿರುವುದರಲ್ಲಿ ನನಗೆ ಯಾವ ಸಂಶಯವೂ ಇಲ್ಲ” ಎಂದರು.

ಹೀಗೆ ತನ್ನ ಆರಂಭಿಕ ದಿನಗಳನ್ನು ಪ್ರಾರಂಭಿಸಿದ ಸಂವಿಧಾನಸಭೆ ಸರ್ದಾರ್ ಪಟೇಲರ ನೇತೃತ್ವದಲ್ಲಿ 1947 ಜನವರಿ 24 ರಂದು ಅಂಬೇಡ್ಕರರನ್ನು ಒಳಗೊಂಡಂತೆ 50ಜನ ಸದಸ್ಯರ ಸಲಹಾ ಸಮಿತಿಯೊಂದನ್ನು ನೇಮಿಸಿತು. ಆ ಸಮಿತಿ ಇತರೆ 4 ಪ್ರಮುಖ ಉಪಸಮಿತಿಗಳನ್ನು ನಿಯುಕ್ತಿಗೊಳಿಸಿತು. ಅವುಗಳಲ್ಲಿ ಬಹುಮುಖ್ಯದ್ದೆಂದರೆ ಮೂಲಭೂತ ಹಕ್ಕುಗಳ ಉಪಸಮಿತಿ ಮತ್ತು ಅಲ್ಪಸಂಖ್ಯಾತರ ಉಪಸಮಿತಿ. ಅಂಬೇಡ್ಕರರು ಈ ಎರಡೂ ಪ್ರಮುಖ ಸಮಿತಿಗಳ ಸದಸ್ಯರಾದರು. ಮುಂದುವರಿದು ಸಭೆ ಇನ್ನೂ 3 ಕಾರ್ಯಾಚರಣಾ ಸಮಿತಿಗಳನ್ನು ರಚಿಸಿತು. ಅವುಗಳೆಂದರೆ

  1. ಕೇಂದ್ರ ಅಧಿಕಾರ ಸಮಿತಿ
  2. ಕೇಂದ್ರ ಸಂವಿಧಾನ ಸಮಿತಿ
  3. ಪ್ರಾಂತ್ಯಗಳ ಸಂವಿಧಾನ ಸಮಿತಿ

ಇಲ್ಲಿಯೂ ಅಷ್ಟೆ ಅಂಬೇಡ್ಕರ್ ಕೇಂದ್ರ ಸಂವಿಧಾನ ಸಮಿತಿಯ ಸದಸ್ಯರಾದರು. ಹೀಗೆ ಅವರು ಪ್ರಮುಖ ಸಮಿತಿಗಳ ಸದಸ್ಯರಾಗುವುದಕ್ಕೆ ಕಾರಣವೂ ಇತ್ತು. ಯಾಕೆಂದರೆ ಮುಂದೆ ಸಂವಿಧಾನ ಅರ್ಪಿಸುವ ಸಮಯದಲ್ಲಿ ಅವರೇ ಹೇಳಿಕೊಂಡಿರುವಂತೆ “ಪರಿಶಿಷ್ಟ ಜಾತಿಗಳ ಹಿತ ಕಾಯುವ ಮಹದಾಸೆ ಹೊತ್ತಷ್ಟೆ ತಾನು ಸಂವಿಧಾನ ಸಭೆಗೆ ಬಂದೆ…”. ಹೌದು, ಡಾ.ಅಂಬೇಡ್ಕರರು ಪರಿಶಿಷ್ಟರ ಹಿತ ಕಾಯುವ ನೆಪ ಮಾತ್ರಕ್ಕೆ ಬಂದರೂ ತಮಗರಿವಿಲ್ಲದಂತೆ ಅವರು ಇಡೀ ದೇಶದ ಸೇವೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು! ಯಾವ ಪರಿ ಎಂದರೆ ಇಡೀ ಸಂವಿಧಾನ ರಚನಾ ಪ್ರಕ್ರಿಯೆಯಲ್ಲಿ ಸಕ್ರಿಯರಾಗುವಮಟ್ಟಿಗೆ. ಅದೂ ಅದೆಂತಹ ಸಕ್ರಿಯತೆಯೆಂದರೆ ಶತೃಗಳೂ ಮೆಚ್ಚಿ ಅಹುದಹುದು ಎನ್ನುವ ಮಟ್ಟಿಗೆ! ಏಕೆಂದರೆ ಸಂವಿಧಾನ ರಚನೆಯ ಇಂತಹ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಂಡು ಸ್ವಾತಂತ್ರ್ಯದ ಸಮಯದಲ್ಲಿ ದೇಶ ವಿಭಜನೆಯ ಸಂದರ್ಭ ಬಂದಾಗ ಅಂಬೇಡ್ಕರರು ಗೆದ್ದಿದ್ದ ಬಂಗಾಳದ ಕ್ಷೇತ್ರ ಕಾಂಗ್ರೆಸ್ಸಿಗರ ತಂತ್ರದಿಂದಾಗಿ ಪೂರ್ವಪಾಕಿಸ್ತಾನಕ್ಕೆ ಸೇರಲ್ಪಟ್ಟು ಅವರ ಸದಸ್ಯತ್ವ ರದ್ದಾಯಿತು. ಸೋಜಿಗವೆಂದರೆ ಈ ಸಮಯದಲ್ಲಿ ಅಂಬೇಡ್ಕರರ ಸಂವಿಧಾನ ರಚನಾ ಚಾಕಚಕ್ಯತೆ ಕೆಲಸ ಮಾಡಿತು! ಹೇಗೆಂದರೆ ಸ್ವತಃ ಸಭೆಯ ಅಧ್ಯಕ್ಷರಾದ ಡಾ.ಬಾಬು ರಾಜೇಂದ್ರಪ್ರಸಾದರು 1947 ಜೂನ್ 30 ರಂದು ಬಾಂಬೆ ಪ್ರಾಂತ್ಯದ ಅಂದಿನ ಪ್ರಧಾನಿ ಡಾ.ಬಿ.ಜಿ.ಖೇರ್‍ರವರಿಗೆ ಪತ್ರ ಬರೆದು “ಬೇರೆ ವಿಷಯಗಳೇನೆ ಇರಲಿ, ಸಂವಿಧಾನ ಸಭೆ ಮತ್ತದರ ವಿವಿಧ ಉಪಸಮಿತಿಗಳಲ್ಲಿ ಅಂಬೇಡ್ಕರರ ಕಾರ್ಯ ಎಂತಹ ಮಟ್ಟದ್ದೆಂದರೆ, ಖಂಡಿತ ಅವರ ಸೇವೆಯನ್ನು ನಾವು ಕಳೆದುಕೊಳ್ಳಬಾರದು. ಅದಕ್ಕಾಗಿ ಜುಲೈ 14ರ ಮುಂದಿನ ಸಭೆಯೊಳಗೆ he should be relected”ಎಂದರು! (Dr.Ambedkar: The Principal Architect of The Constitution of India, Published by Government of India. Pp.26)

ಹೌದು, ಬಾಬಾಸಾಹೇಬರು ತಕ್ಷಣ ಮರುಆಯ್ಕೆಯಾದರು. ಹಾಗೇ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ಕೂಡ ಸಿಕ್ಕಿತು ಮತ್ತು ಅವರು ಸ್ವತಂತ್ರ ಭಾರತದಲ್ಲಿ ನೆಹರೂ ಸಂಪುಟದಲ್ಲಿ ಕಾನೂನು ಸಚಿವರಾಗಿ ಕೂಡ ನೇಮಕಗೊಂಡರು. ಆಶ್ಚರ್ಯವೆಂದರೆ ಆಗಸ್ಟ್ 29ರಂದು ಮರುಸಮಾವೇಶಗೊಂಡ ಸಂವಿಧಾನಸಭೆ ಡಾ.ಅಂಬೇಡ್ಕರರನ್ನು “ಸಂವಿಧಾನ ಪ್ರತಿ ರಚಿಸುವ ಸಮಿತಿ (drafting committee)”ಯ ಅಧ್ಯಕ್ಷರನ್ನಾಗಿಯೂ ಆರಿಸಿತು! ಜೊತೆಗೆ ಆರು ಮಂದಿ ಸದಸ್ಯರ ತಂಡ. ಒಟ್ಟಾರೆ ಸಂವಿಧಾನ ಸಭೆಯ ಇಂತಹ ನಡಾವಳಿಗಳ ಮೂಲಕ ಭಾರತದ ಭವಿಷ್ಯ ಬರೆವ ಕೆಲಸ ಬಾಬಾಸಾಹೇಬರ ಮುಡಿಗೇರಿತು.

ಸಂವಿಧಾನ ರಚನೆಯ ಜವಾಬ್ದಾರಿಯೇನೋ ಅಂಬೇಡ್ಕರರ ಮುಡಿಗೇರಿತು. ಆದರೆ ಆ ಜವಾಬ್ದಾರಿಯನ್ನು ಅವರು ನಿರ್ವಹಿಸಿದ ಪರಿ? ಖಂಡಿತ, ಅಂಬೇಡ್ಕರರು ಮತ್ತವರ ಸಂವಿಧಾನ ಕಾರ್ಯಕ್ಷಮತೆಯ ಬಗ್ಗೆ ಸ್ವತಃ ಅವರು ಮತ್ತು ಇತರರು ಸಂವಿಧಾನ ಸಭೆಗಳಲ್ಲಿ ಮಾಡಿದ ಭಾಷಣಗಳಲ್ಲಿ ನಮಗೆ ಉಲ್ಲೇಖ ಸಿಗುತ್ತದೆ. 1948 ನವೆಂಬರ್ 25 ರಂದು ಡಾ.ಅಂಬೇಡ್ಕರರು ಸಂವಿಧಾನ ಸಮರ್ಪಿಸುತ್ತಾ ಮಾಡಿದ ಅಂತಿಮ ಭಾಷಣವನ್ನು ಉಲ್ಲೇಖಿಸುವುದಾದರೆ “ಮಾನ್ಯರೆ, ಸಂವಿಧಾನ ಸಭೆಯ ಕಾರ್ಯಕಲಾಪದ ಬಗ್ಗೆ ಹಿನ್ನೋಟ ನೋಡುವುದಾದರೆ 1946 ಡಿಸೆಂಬರ್ 9ರಿಂದ ಇಲ್ಲಿಯವರೆಗೆ ಸಂವಿಧಾನ ಸಭೆ ಸಮಾವೇಶಗೊಂಡು 2 ವರ್ಷ, 11 ತಿಂಗಳು, 17ದಿನಗಳು ಕಳೆಯುತ್ತಿವೆ. ಇದುವರೆಗೆ ಸಭೆ 11 ಸಮಾವೇಶಗಳನ್ನು ನಡೆಸಿದೆ. ಈ 11 ಸಮಾವೇಶಗಳು 165 ದಿನಗಳನ್ನು ಬಳಸಿಕೊಂಡಿದೆ. ಈ 165 ದಿನಗಳಲ್ಲಿ 114 ದಿನಗಳನ್ನು ಸಭೆ ಕರಡು ಸಂವಿಧಾನವನ್ನು ಪರಿಗಣಿಸಲು ತೆಗೆದುಕೊಂಡಿದೆ. ಇನ್ನು ಕರಡು ಸಮಿತಿ ಅಥವಾ ಸಂವಿಧಾನ ರಚನಾ ಸಮಿತಿಯ ಬಗ್ಗೆ ಹೇಳುವುದಾದರೆ 1947 ಆಗಸ್ಟ್ 29 ರಂದು ಅದನ್ನು ಆಯ್ಕೆಮಾಡಲಾಯಿತು ಮತ್ತು ಅದು ತನ್ನ ಪ್ರಥಮ ಸಭೆಯನ್ನು 30ನೇ ಆಗಸ್ಟ್ ರಂದು ನಡೆಸಿತು.

ಆಗಸ್ಟ್ 30 (1947) ರಿಂದ ಇಲ್ಲಿಯವರೆಗೆ ಸಮಿತಿ 141 ದಿನಗಳು ಸಭೆ ನಡೆಸಿ ಒಟ್ಟು ಈ ಅವಧಿಯನ್ನು ಕರಡು ಸಂವಿಧಾನವನ್ನು ತಯಾರಿಸಲು ಬಳಸಿಕೊಂಡಿದೆ” ಹೀಗೆ ವಿವರಿಸುತ್ತಾ ಹೋಗುತ್ತಾರೆ. ಅಂದಹಾಗೆ ಬಾಬಾಸಾಹೇಬರ ನೇತೃತ್ವದ ಸಮಿತಿ ಸಿದ್ಧಪಡಿಸಿದ ಈ ಸಂವಿಧಾನ 1948 ಫೆಬ್ರವರಿ 26ರಂದು ಭಾರತ ಸರ್ಕಾರದ ಗೆಜೆಟ್‍ನಲ್ಲಿ ಪ್ರಕಟಗೊಂಡಿತು ಮತ್ತು ಹಾಗೆ ಗೆಜೆಟ್‍ನಲ್ಲಿ ಪ್ರಕಟಗೊಂಡ ಸಂವಿಧಾನದ ಆ ಪ್ರತಿ ತನ್ನ ಆರಂಭದ ಪುಟದಲ್ಲಿ ರಚನಾ ಸಮಿತಿಯ ಅಧ್ಯಕ್ಷರಾದ ಅಂಬೇಡ್ಕರರು ಸಭೆಯ ಅಧ್ಯಕ್ಷರಿಗೆ ಬರೆದ ಪತ್ರವೊಂದನ್ನೂ ಕೂಡ ಒಳಗೊಂಡಿತ್ತು. ಆ ಪತ್ರದ ಪ್ರಾರಂಭದ ಒಕ್ಕಣೆಯನ್ನು ಉಲ್ಲೇಖಿಸುವುದಾದರೆ “Dear Sir, On behalf of the Drafting Committee… I submit herewith the Draft of the new Constitution of India… I have been authorized to sign the Draft… Yours truly, B.R.AMBEDKAR.”

ಖಂಡಿತ, ಹೀಗೆ ಪುಟಪುಟವನ್ನೂ ಉಲ್ಲೇಖಿಸುವ ಅಗತ್ಯವಿಲ್ಲ. ಆದರೂ ಕೆಲವು ಕೋಮುವಾದಿ ಕಿತಾಪತಿಗಳಿಸ್ಕೋರ ಇದನ್ನು ಉಲ್ಲೆಖಿಸಬೇಕಿದೆ. ಅಲ್ಲದೆ ಮತ್ತೊಂದು ಅಂಶವನ್ನು ಇಲ್ಲಿ ದಾಖಲಿಸಬೇಕಿದೆ. ಅದೆಂದರೆ ಫೆಬ್ರವರಿ 26, 1948 ರಂದು ಗೆಜೆಟ್‍ನಲ್ಲಿ ಪ್ರಕಟಗೊಂಡ ಭಾರತ ಸಂವಿಧಾನದ ಕರಡು ಪ್ರತಿ ಅಂಬೇಡ್ಕರರು ವಯಕ್ತಿಕವಾಗಿ ಸಂವಿಧಾನ ಸಭೆಯ ಮೂಲಭೂತ ಹಕ್ಕುಗಳ ಸಮಿತಿಗೆ ತಮ್ಮ ಪಕ್ಷ ‘ಪರಿಶಿಷ್ಟ ಜಾತಿಗಳ ಒಕ್ಕೂಟ’ದ ಪರವಾಗಿ ಮಾರ್ಚ್ 15, 1947 ರಂದು ಸಲ್ಲಿಸಿದ ಮನವಿಯ ಡಿಟೋ ಕಾಪಿಯಂತೇ ಇದೆ ಎಂಬುದು! ಈ ನಿಟ್ಟಿನಲ್ಲಿ ಆಸಕ್ತರು ಅಂಬೇಡ್ಕರರ ಆ ಮನವಿಯನ್ನು ಅವರ ಬರಹಗಳು ಭಾಷಣಗಳ ಸಂಪುಟ 1ರಲ್ಲಿ ‘ರಾಜ್ಯಗಳು ಮತ್ತು ಅಲ್ಪಸಂಖ್ಯಾತರು’ ಎಂಬ ಶೀರ್ಷಿಕೆಯಲ್ಲಿ ಪ್ರಕಟಗೊಂಡಿರುವುದನ್ನು ಗಮನಿಸಬಹುದು. ಈ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ಹೇಳಬಹುದು ಭಾರತದ ಸಂವಿಧಾನ ಅಂಬೇಡ್ಕರರ ಮೆದುಳಿನ ಕೂಸು ಎಂದು.

ಪ್ರಶ್ನೆಯೇನೆಂದರೆ ಗೆಜೆಟ್‍ನಲ್ಲಿ ಪ್ರಕಟಗೊಂಡ ಸಂವಿಧಾನ ಫೆಬ್ರವರಿ 26, 1948 ರಂದೇ ಜಾರಿಯಾಯಿತೇ? ಖಂಡಿತ ಇಲ್ಲ. ಯಾಕೆಂದರೆ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಈ ದಿಸೆಯಲ್ಲಿ ಪ್ರಜೆಗಳ ಪ್ರತಿನಿಧಿಗಳ ನಡುವೆ ಅದು ಅಂದರೆ ಸಂವಿಧಾನ ಚರ್ಚೆಗೆ ಬರುವುದು ಬೇಡವೆ? ಹೌದು, 15 ನವೆಂಬರ್ 1948ರಲ್ಲಿ ಅನುಚ್ಛೇದ 1ರಿಂದ ಪ್ರಾರಂಭಿಸಿ 17 ಅಕ್ಟೋಬರ್ 1949ರವರೆಗೆ ಕೊನೆಯ ಅನುಚ್ಛೇದ ಅಂದರೆ ಅನುಚ್ಛೇದ 395ರವರೆಗೆ ಸಂವಿಧಾನ ಸಭೆ ಇಡೀ ಕರಡು ಸಂವಿಧಾನದ ಬಗ್ಗೆ ಭರಪೂರ ಚರ್ಚೆ ನಡೆಸಿತು. ಆಶ್ಚರ್ಯ ಬೇಡ, ಈ ಇಷ್ಟೂ ದಿನಗಳಲ್ಲಿ ಪ್ರತಿಯೊಂದೂ ಅನುಚ್ಛೇದದ ಚರ್ಚೆಯಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಅಂಬೇಡ್ಕರರು ಗೌರವಾನ್ವಿತ ಸದಸ್ಯರ ಪ್ರತಿಯೊಂದು ಸಲಹೆಗೂ ಕಿವಿಯಾದರು ಮತ್ತು ಸಂಬಂಧಪಟ್ಟ ಅನುಚ್ಛೇದದ ಪದಪದದ ವಿವರಣೆ ನೀಡಿ ಸದಸ್ಯರ ಸಲಹೆಗಳನ್ನು ಗೌರವಯುತವಾಗಿ ಸ್ವೀಕರಿಸಿ ಅಗತ್ಯ ತಿದ್ದುಪಡಿಗಳನ್ನು ಅಂಗೀಕರಿಸಿದರು. ಈ ಸಂಬಂಧ ಅಂಬೇಡ್ಕರರು ನೀಡಿರುವ ಮಾಹಿತಿಯನ್ನೇ ದಾಖಲಿಸುವುದಾದರೆ “ಕರಡು ಸಂವಿಧಾನಕ್ಕೆ ಸೂಚಿಸಲಾದ ಒಟ್ಟು ತಿದ್ದುಪಡಿಗಳು 7635. ಅವುಗಳಲ್ಲಿ ಅಂಗೀಕಾರಗೊಂಡಂತಹವು 2473”. ಒಟ್ಟಾರೆ ಇಂತೆಲ್ಲ ತಿದ್ದುಪಡಿಗಳ ನಂತರ 1949 ನವೆಂಬರ್ 17ರಂದು ಅಂತಿಮವಾಗಿ ಸಮಾವೇಶಗೊಂಡ ಸಂವಿಧಾನ ಸಭೆಯಲ್ಲಿ ಡಾ.ಅಂಬೇಡ್ಕರರು “ಅಧ್ಯಕ್ಷ ಮಹೋದಯರೇ, ಈ ಸಭೆ ಸ್ಥಿರೀಕರಿಸಿರುವ ಈ ಸಂವಿಧಾನವನ್ನು ಅಂಗೀಕರಿಸಬೇಕೆಂಬ ನಿರ್ಣಯವನ್ನು ನಾನು ಮಂಡಿಸುತ್ತೇನೆ” ಎನ್ನುತ್ತಿದ್ದಂತೆ ಇಡೀ ಸಭೆ ಹರ್ಷದ ಹೊನಲು ಹರಿಸಿ ಕರತಾಡನದೊಂದಿಗೆ ತನ್ನ ಒಪ್ಪಿಗೆ ಸೂಚಿಸಿತು. ಹಾಗೆಯೇ ಅಂಬೇಡ್ಕರರಿಗೆ ಅಭಿನಂದನೆಯ ಸುರಿಮಳೆಗಳು.

ಅವುಗಳಲ್ಲಿ ಒಂದಷ್ಟನ್ನು ದಾಖಲಿಸುವುದಾದರೆ ಮದ್ರಾಸಿನ ಮುನಿಸ್ವಾಮಿ ಪಿಳ್ಳೈ ಎಂಬುವವರು “ಪರಿಶಿಷ್ಟ ಜಾತಿಯು ನಂದನಾರ್, ತಿರುಪಳನಾಳ್ವರ್, ತಿರುವಳ್ಳುವರ್ ಹೀಗೆ ಶ್ರೇಷ್ಠ ಸಂತರನ್ನು, ಜ್ಞಾನಿಗಳನ್ನು ನೀಡಿದೆ. ನಿಸ್ಸಂಶಯವಾಗಿ ಡಾ.ಅಂಬೇಡ್ಕರರು ಅಂತಹವರ ಸಾಲಿಗೆ ಸೇರ್ಪಡೆಯಾಗುತ್ತಾರೆ. ಯಾಕೆಂದರೆ ಅವಕಾಶ ಸಿಕ್ಕರೆ ಪರಿಶಿಷ್ಟರು ಎಷ್ಟು ಎತ್ತರಕ್ಕೆ ಏರಬಲ್ಲರು ಎಂಬುದನ್ನು ಅಂಬೇಡ್ಕರರು (ತಮ್ಮ ಈ ಸಾಧನೆಯ ಮೂಲಕ) ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟಿದ್ದಾರೆ”. ಇನ್ನು ಸೇಠ್ ಗೋವಿಂದದಾಸ್ ಎನ್ನುವವರು “ಡಾ.ಅಂಬೇಡ್ಕರರನ್ನು ‘ವರ್ತಮಾನ ಕಾಲದ ಮನು’ ಎನ್ನಬಹುದು” ಎನ್ನುತ್ತಾರೆ! ಎಂ.ಅನಂತಶಯನಂ ಅಯ್ಯಂಗಾರ್ ಎನ್ನುವವರಂತೂ “ಯಾವ ವ್ಯಕ್ತಿ ನಮ್ಮನ್ನು ಟೀಕಿಸುವ ಮತ್ತು ಅನುಮಾನದಿಂದ ನೋಡುವ ಉದ್ದೇಶದಿಂದ ಸಭೆಗೆ ಬಂದರೋ, ಕಡೆಗೆ ಅವರೇ ಸಂವಿಧಾನದ ಹೊಣೆಹೊತ್ತುಕೊಂಡರು ಮತ್ತು ಅದನ್ನು ರಚಿಸಿದರು” ಎಂದರು! ಹಾಗೆ ಪಂಡಿತ್ ಠಾಕೂರ್ ದಾಸ್ ಭಾರ್ಗವ ಎಂಬುವವರು ಮಾತನಾಡುತ್ತಾ “ಡಾ.ಅಂಬೇಡ್ಕರರು ನಮ್ಮ ಹೃದಯಗಳಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿದ್ದಾರೆ” ಎನ್ನುವ ಮೂಲಕ ತಮ್ಮ ಅಭೂತಪೂರ್ವ ಪ್ರೀತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದುವರಿದು ಮತ್ತೋರ್ವ ಸದಸ್ಯರಾದ ಟಿ.ಪ್ರಕಾಶಂ‘”ತಮ್ಮ ಈ ಕಾರ್ಯದ ಮೂಲಕ ಡಾ.ಅಂಬೇಡ್ಕರರು ತಾವು ಗ್ರೇಟ್ ಬ್ರಿಟನ್ನಿನ ರಾಜನ ಸಲಹೆಗಾರನಾಗಿ ಅಲ್ಲಿಯ ಆಸ್ಥಾನ ವೂಲ್‍ಸ್ಯಾಕ್‍ನಲ್ಲಿ ಕುಳಿತುಕೊಳ್ಳುವಷ್ಟು ಸಮರ್ಥರು” ಎಂದು ತೋರಿಸಿಕೊಟ್ಟಿದ್ದಾರೆ ಎನ್ನುತ್ತಾರೆ.

ಕಡೆಯದಾಗಿ ಶ್ರೀ ಹೆಚ್.ಜೆ.ಖಾಂಡೇಕರ್ ಎಂಬುವವರ ಹೇಳಿಕೆಯನ್ನು ದಾಖಲಿಸುವುದಾದರೆ “ಮಾನ್ಯರೆ, ನಾವು ಅಂಬೇಡ್ಕರರಂತಹ ಪ್ರತಿಭಾಶಾಲಿಯಿಂದ ರೂಪಿತಗೊಂಡ ಕಾನೂನನ್ನು ಸ್ವತಂತ್ರ ಭಾರತದಲ್ಲಿ ಇಂದು ಕಾರ್ಯಾಚರಣೆಗಿಳಿಸುತ್ತಿದ್ದೇವೆ. ಹಾಗೆ ಈ ಕಾನೂನನ್ನು ನಾನು ಮಹಾರ್ ಕಾನೂನು ಎನ್ನಲಿಚ್ಚಿಸುತ್ತೇನೆ ಯಾಕೆಂದರೆ ಡಾ.ಅಂಬೇಡ್ಕರರು ಮಹಾರ್ ಸಮುದಾಯದವರು ಮತ್ತು ಮುಂದೆ 1950 ಜನವರಿ 26ರಂದು ಈ ಕಾನೂನು ಉದ್ಘಾಟನೆಗೊಂಡಾಗ ನಾವು ಮನುವಿನ ಕಾನೂನಿನ ಬದಲು ಮಹಾರರ ಕಾನೂನನ್ನು ಹೊಂದುತ್ತೇವೆ. ಮನುವಿನ ಕಾನೂನಿನ ಅಡಿಯಲ್ಲಿ ಈ ದೇಶದಲ್ಲಿ ಸುಖ ನೆಮ್ಮದಿಯೇ ಇರಲಿಲ್ಲ, ಆದರೆ ಮಹಾರರ ಕಾನೂನು, ಖಂಡಿತ ಈ ದೇಶವನ್ನು ಸ್ವರ್ಗವನ್ನಾಗಿ ಮಾಡುತ್ತದೆ… ನನಗೆ ಭರವಸೆ ಆ ಇದೆ”.

ಖಂಡಿತ, ಗಣರಾಜ್ಯದ ಈ ಶುಭ ದಿನದಂದು ಡಾ.ಖಾಂಡೇಕರರ ಭರವಸೆ ಎಲ್ಲರದ್ದಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending