Connect with us

ರಾಜಕೀಯ

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್

Published

on

  • ಅಲ್‌ಮೆಯಿಡಾ ಗ್ಲಾಡ್‌ಸನ್

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಮಾತ್ರ ಯಾಕೆಂದರೆ 395 ವಿಧಿಗಳು, 8 ಅನುಚ್ಛೇದಗಳು, 22 ಭಾಗಗಳು, ಒಂದು ಲಕ್ಷಕ್ಕಿಂತಲೂ ಹೆಚ್ಚು ಶಬ್ದಗಳು ಹಾಗೂ ಇನ್ನೂರಕ್ಕಿಂತ ಹೆಚ್ಚು ಪುಟಗಳ ಸಂವಿಧಾನವನ್ನು ರಚಿಸುವಲ್ಲಿ ಡಾ ಅಂಬೇಡ್ಕರ್ ಪಟ್ಟ ಶ್ರಮ, ವ್ಯಯಿಸಿದ ಸಮಯ ಎಲ್ಲರಿಗಿಂತಲೂ ಹೆಚ್ಚು.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿ ಕೃಷ್ಣಸ್ವಾಮಿ ಅಯ್ಯರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೆ ಎಮ್ ಮುನ್ಶಿಯಂಥ ಘಟಾನುಘಟಿಗಳು ಇದ್ದರೂ, ಸಮಿತಿಯ ಅಧ್ಯಕ್ಷರನ್ನಾಗಿ ಆರಿಸಿದ್ದು ಬಾಬಾಸಾಹೇಬರನ್ನು ಅವರ ಸಾಮರ್ಥ್ಯ ಹಾಗೂ ಅಗಾಧವಾದ ಜ್ಞಾನದಾಧರದಲ್ಲಿ. ಸಂವಿಧಾನ ಕರಡು ಸಮಿತಿಯಲ್ಲಿ ಬಾಬಾಸಾಹೇಬರ ಜೊತೆ ಇನ್ನೂ ಆರು ಜನರಿದ್ದರು. ಆದರೆ ಕಾರಾಣಾಂತರಗಳಿಂದ ಕರಡು ಸಮಿತಿಯ ಹೆಚ್ಚಿನ ಸದಸ್ಯರು ಸಂವಿಧಾನ ರಚನೆಯಲ್ಲಿ ಭಾಗವಹಿಸಲೇ ಇಲ್ಲ. ಒಬ್ಬರು ತೀರಿಹೋದರು, ಇನ್ನೊಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೋರ್ವರು ತಮ್ಮ ರಾಜ್ಯದ ವಿಷಯಗಳಲ್ಲೇ ತಲ್ಲೀನರಾದರು. ಇನ್ನಿಬ್ಬರು ಅನಾರೋಗ್ಯದ ನಿಮಿತ್ತ ದೆಹಲಿ ಕಡೆ ಬರಲೇ ಇಲ್ಲ. ಹೀಗಾಗಿ ಇಡೀ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಬಾಬಾಸಾಹೇಬರ ಹೆಗಲಿಗೇ ಬಿತ್ತು. ಸುಮಾರು ಎರಡೂವರೆ ವರುಷಗಳ ಕಾಲ ನಡೆದ ಸಂವಿಧಾನ ರಚನೆ, ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆಯುವ ಮೊದಲು ಸುಮಾರು 2500 ಬಾರಿ ತಿದ್ದುಪಡಿಗೆ ಒಳಗಾಗಿತ್ತು. ಕೊನೆಗೆ ಈ ಸಂವಿಧಾನ ಅನುಮೋದನೆಯಾದಾಗ ಅದು ಜಗತ್ತಿನ ಅತೀ ದೊಡ್ಡ ಸಂವಿಧಾನವೆಂದು ಪರಿಗಣಿಸಲ್ಪಟ್ಟಿತ್ತು. ಸದ್ಯಕ್ಕೆ ನಮ್ಮ ಸಂವಿಧಾನ ಜಗತ್ತಿನ ಎರಡನೆಯ ಅತೀ ದೊಡ್ಡ ಸಂವಿಧಾನ. ಮೊದಲನೆಯ ಸ್ಥಾನದಲ್ಲಿ ಈವಾಗ ಅಲ್ಬೇನಿಯಾದ ಸಂವಿಧಾನ ಇದೆ.

ನಮ್ಮ ದೇಶ ಯಾವುದೇ ದೇಶದ ಸಂವಿಧಾನದ ಕಾಪಿ-ಪೇಸ್ಟ್ ಅಲ್ಲ ಸಂಘಿಗಳು ಹೇಳುವಂತೆ. ಹೌದು ಬ್ರಿಟನ್, ಅಮೇರಿಕಾ, ಐರ್ಲೆಂಡ್, ಫ್ರಾನ್ಸ್, ಆಸ್ಟ್ರೇಲಿಯಾ, ಜರ್ಮನಿ, ಯುಎಸ್‍ಎಸ್‍ಆರ್ ಮುಂತಾದ ದೇಶಗಳ ಸಂವಿಧಾನಗಳ ಪ್ರಭಾವ ನಮ್ಮ ಸಂವಿಧಾನದ ಮೇಲೂ ಇದೆ. ಆದರೆ ಅಲ್ಲಿಂದ ಕಾಪಿಯಾಗಿಲ್ಲ ಬದಲಾಗಿ ಅವುಗಳ ಕೆಲ ಆಶಯಗಳನ್ನು ಮೂಲಾಧಾರವಾಗಿಟ್ಟು, ಭಾರತದ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ, ಭಾಷಿಕಾ ವಿವಿಧತೆಗಳಿಗೆ ಅನುಸಾರವಾಗಿ ಭಾರತದ ಸಂವಿಧಾನವನ್ನು ರಚಿಸಲಾಗಿದೆ.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿದ್ದವರು ಬಾಬಾಸಾಹೇಬ್ ಅಂಬೇಡ್ಕರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೃಷ್ಣಸ್ವಾಮಿ ಅಯ್ಯರ್, ಕೆ‍ಎಮ್ ಮುನ್ಶಿ, ಸಯ್ಯದ್ ಮಹಮೂದ್ ಸಾ’ದುಲ್ಲಾ, ಬಿ ಎಲ್ ಮಿಟ್ಟರ್, ಡಿ ಪಿ ಖೈತಾನ್. (ಮಿಟ್ಟರ್ ಅವರ ಅನಾರೋಗ್ಯದ ಕಾರಣದಿಂದ ಸಮಿತಿಯಿಂದ ಹೊರಗುಳಿದಾಗ ನಮ್ಮ ಮೈಸೂರಿನ ಮಾಧವ ರಾವ್ ಅವರ ಜಾಗಕ್ಕೆ ಆಯ್ಕೆಯಾಗಿದ್ದರೆ, ಡಿ ಪಿ ಖೈತಾನ್ 1948ರಲ್ಲಿ ತೀರಿಹೋದ ಕಾರಣ ಅವರ ಜಾಗಕ್ಕೆ ಟಿ ಟಿ ಕೃಷ್ಣಮಾಚಾರಿ ಆಯ್ಕೆಯಾಗಿದ್ದರು). ಭಾರತದ ಸಂವಿಧಾನ ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆದಾಗ ಸಂವಿಧಾನ ಸಭೆಯನ್ನುದ್ದೇಶಿಸಿ ಮಾತಾನಾಡಿದ ಟಿ ಟಿ ಕೃಷ್ಣಮಾಚಾರಿ ಹೀಗೆಂದಿದ್ದಾರೆ “ಕರಡು ರಚನಾ ಸಮಿತಿಗೆ ಈ ಸಂವಿಧಾನ ಸಭೆ ಏಳು ಜನರನ್ನು ನೇಮಿಸಿತ್ತು. ಅದರಲ್ಲಿ ಒಬ್ಬರು ರಾಜೀನಾಮೆ ಕೊಟ್ಟಾಗ ಅವರ ಜಾಗಕ್ಕೆ ಇನ್ನೋರ್ವರ ಆಯ್ಕೆಯಾಯಿತು. ಒಬ್ಬರು ತೀರಿಹೋದರು, ಒಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೊಬ್ಬ ಸದಸ್ಯರು ತಾವು ಪ್ರತಿನಿಧಿಸುತ್ತಿದ್ದ ರಾಜ್ಯದ ವಿಷಯಗಳಲ್ಲೇ ತಲ್ಲೀನರಾಗಿದ್ದರೆ, ಇನ್ನಿಬ್ಬರು ದೆಹಲಿಯಿಂದ ದೂರವಿದ್ದು, ಅವರ ಅನಾರೋಗ್ಯದ ಕಾರಣದಿಂದ ಸಂವಿಧಾನ ರಚನೆಯಲ್ಲಿ ಭಾಗವಹಿಸಲಿಲ್ಲ. ಹೀಗಾಗಿ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಡಾ ಅಂಬೇಡ್ಕರ್ ಅವರ ಹೆಗಲಿಗೆ ಬಿತ್ತು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಪ್ರಶಂಸನೀಯ ರೀತಿಯಲ್ಲಿ ನಿಭಾಯಿಸಿದಕ್ಕಾಗಿ ನಾವೆಲ್ಲರೂ ಅವರಿಗೆ ಋಣಿಯಾಗಿರಬೇಕೆಂದು ನನ್ನ ಅಭಿಪ್ರಾಯ.”

ಭಾರತದ ಪ್ರಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಸಂವಿಧಾನ ಸಭೆಯ ಡಿಬೇಟ್‍ನಲ್ಲಿ ಒಂದೊಮ್ಮೆ ಹೀಗೆಂದಿದ್ದರು. “ಅಧ್ಯಕ್ಷನ ಸ್ಥಾನದಲ್ಲಿದ್ದು ಕರಡು ರಚನೆ ಸಮಿತಿಯ ದೈನಂದಿನ ಕೆಲಸಗಳನ್ನು ನಾನು ಬಲು ಹತ್ತಿರದಿಂದ ನೋಡಿದ್ಡೇನೆ. ಹಾಗಾಗಿ ಬೇರೆಯರವರಿಗಿಂತ ಹೆಚ್ಚಾಗಿ ಸಂವಿಧಾನ ಕರಡು ರಚನೆ ಸಮಿತಿಯ ಸದಸ್ಯರು ಹಾಗೂ ಪ್ರತ್ಯೇಕವಾಗಿ ಸಮಿತಿ ಅಧ್ಯಕ್ಷರು ಎಷ್ಟೊಂದು ಶೃದ್ಧೆ ಹಾಗೂ ಚೈತನ್ಯದಿಂದ ಈ ಸಂವಿಧಾನವನ್ನು ರಚಿಸಿದ್ದಾರೆ ಎಂದು ನನಗೆ ತಿಳಿದಿದೆ. ಅಂಬೇಡ್ಕರ್ ಅವರನ್ನು ಕರಡು ಸಮಿತಿಗೆ ಆಯ್ಕೆ ಮಾಡಿ, ತದನಂತರ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕಿಂತ ಹೆಚ್ಚಿನ ಒಳ್ಳೆಯ ಕೆಲಸವನ್ನು ನಾವು ಮಾಡಿಲ್ಲ.”

ಹೀಗಾಗಿ ಬಾಬಾಸಾಹೇಬ್ ಕೊಟ್ಟ ಸಂವಿಧಾನದ ಕಾರಣದಿಂದಲೇ ಇವತ್ತು ಐಎ‍ಎಸ್ ಆಫೀಸರ್ ಆಗಿರುವ ಶಿಕ್ಷಣಾ ಇಲಾಖೆಯ ಅಧಿಕಾರಿ ಉಮಾಶಂಕರ್ ಸಂವಿಧಾನ ರಚನೆಯ ಬಗ್ಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಆಗಿರುವುದು ಪ್ರಮಾದವಲ್ಲ ಬಟ್ ಅಪರಾಧ. ಸಂವಿಧಾನದ ಕಾರಣದಿಂದಲೇ ಇಂಥ ಉನ್ನತ ಹುದ್ದೇಗೇರಿರುವ ವ್ಯಕ್ತಿಗಳು ಮನಸ್ಸಿನಲ್ಲಿ ಇಷ್ಟೊಂದು ಕೊಳಕನ್ನು ಹಾಗೂ ನೀಚತನವನ್ನು ತುಂಬಿಸಿಕೊಂಡಿದ್ದಾರೆಂದರೆ ಅವರು ಸಂವಿಧಾನದ ಪಾಲಕರಾಗಿರಲು ಸಾಧ್ಯವೇ ಇಲ್ಲ. ಇವರನ್ನು ಕೇವಲ ಅಮಾನತ್ತುಗೊಳಿಸಿದರೆ ಸಾಕಾಗೋಲ್ಲ ಬದಲಾಗಿ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಸಂವಿಧಾನದ ನೆರಳಿನಡಿಯಲ್ಲಿ ಕುಳಿತು ತಮ್ಮ ರಾಜಕೀಯ ಹಾಗೂ ವ್ಯಯಕ್ತಿಕ ಸಿದ್ದಾಂತಗಳನ್ನು ಪ್ರತಿಪಾದಿಸುವ ಬದಲು ನೇರವಾಗಿ ಸೇವೆಗೆ ರಾಜೀನಾಮೆ ಕೊಟ್ಟು ಹೊರಬಂದು ತಮಗೆ ಬೇಕಾದ ರಾಜಕೀಯ ಪಕ್ಷವನ್ನು ಸೇರಲಿ. ಹಾಗಾಗಿ ಉಮಾಶಂಕರ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ತನಕ ಪಟ್ಟು ಸಡಿಲಿಸದೆ ಹೋರಾಡಬೇಕು. ನಮ್ಮ ಬ್ಯೂರೋಕ್ರಸಿಯಲ್ಲಿ ತುಂಬಿರುವ ಇಂಥ ನೀಚರನ್ನು ಗುರುತಿಸಿ ಹೊರಗಟ್ಟಿಲ್ಲವೆಂದರೆ ಮುಂದೊಂದು ದಿನ ಇವರೇ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡೋಡು ಗ್ಯಾರಂಟಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ

Published

on

    • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ

ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ

ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ ಇರೋದು ಜೊತೆಗೆ ತುಂಗಭದ್ರಾ ಜಲಾಶಯದ ಹೂಳು ಎತ್ತದೆ ಇರೋದು ದೊಡ್ಡ ದುರಂತವಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಕ್ಕರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ವಿಜಯನಗರ ಜಿಲ್ಲೆಗೆ ಬಹಳ‌ ಅನಾಯ್ಯವಾಗಿದೆ ಅನುದಾನ ಬಿಡುಗಡೆಯಲ್ಲಿ ಮತ್ತು ಸ್ವಪಕ್ಷದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಗವಿಯಪ್ಪ
ಯಾವುದೇ ಅಭಿವೃದ್ಧಿ ಗಳನ್ನು ಕೈಗೊಳ್ಳದೇ, ಯೋಜನೆಗಳಿಗೆ ಶಿಲಾನ್ಯಾಸ ಮಾಡದೇ ವಿಜಯನಗರದ ಜಿಲ್ಲೆಯಲ್ಲಿ ಎರಡು ವರ್ಷದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸ್ವಪಕ್ಷದ ವಿರುದ್ಧವೇ ಮುನಿಸಿಕೊಂಡ ಶಾಸಕ ಗವಿಯಪ್ಪ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಭಾಗಿನ ಕಾರ್ಯಕ್ರಮದಲ್ಲಿ ಮುನಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಾಸು ಹೋಗಿದ್ದರು. ಅವರ ಕಛೇರಿಯವರೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕರೆಯಲು ಹೋದರೂ ಸಹ ಬರಲಿಲ್ಲ. ಇದರಿಂದ ಸಹ ಶಾಸಕರು ಸಿಎಂ ಮೇಲೆ ಮುನಿಸಿಕೊಂಡರು.

ಜಿಲ್ಲೆಯ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಪತ್ರಿಕಾಗೋಷ್ಟಿಯಲ್ಲಿ ಶಾಸಕ ಗವಿಯಪ್ಪ ವಿರುದ್ಧ ಇವರು ಕ್ಷೇತ್ರಕ್ಕೆ ‘ಶಾಪ’ ಎಂದು ಹೇಳಿ, ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಕಾರ್ಯಕರ್ತರ ನಡುವೆ ಅಸಮಾಧಾನಗಳ ನಡುವೆ ಸ್ವಪಕ್ಷಗಳಿಂದ ಶಿರಾಜ್ ಶೇಖ್ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಇವರಿಬ್ಬರ ನಡುವಿನ ಜಗಳ ಸಮಾಧಾನ ಮಾಡಲು ಕೆ.ಪಿ.ಸಿ.ಸಿ ಮಧ್ಯೆ ಪ್ರವೇಶ ಮಾಡಿ ಸಂಧಾನ ಮಾಡುವಲ್ಲಿ ವಿಫಲವಾಯಿತು.
ಸಾಧನೆ ಮತ್ತು ಸಮರ್ಪಣೆ ಇವುಗಳಲ್ಲಿ ಯಾವುದನ್ನು ಮಾಡುತ್ತಾರೋ ಅವರಲ್ಲಿಯೇ ಗೊಂದಲ ಇದೆ. ಯಾವುದು ಸಮರ್ಪಣೆ ?, ಯಾವುದು ಸಾಧನೆ‌ ? ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿ ಅವಳಿ ಜಿಲ್ಲೆಗೆ ಸಚಿವರನ್ನು ನೇಮಕ ಮಾಡದೇ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎನ್ನುವುದು ಸಾರ್ವಜನಿಕರಲ್ಲಿ, ರಾಜಕೀಯದಲ್ಲಿ ಗೊಂದಲ ನಿರ್ಮಾಣ ಮಾಡಿದೆ.

ಜಿಲ್ಲೆಯಲ್ಲಿ ಶಾಸಕಾಂಗ ಮತ್ತು ಆಡಳಿತದಲ್ಲಿ ಒಂದೇ ಸಮುದಾಯದವರು ಇರೋದರಿಂದ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎನ್ನುವ ಮಾಹಿತಿಯನ್ನು ಈ ಕ್ಷೇತ್ರದ ಜನರಿಗೆ ತಿಳಿಸಲು ಈ ಸಮರ್ಪಣೆ ಕಾರ್ಯಕ್ರಮ ಮಾಡುತ್ತಿದ್ದಾರೆ.

ದಿವಂಗತ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧೀ ಕಟ್ಟೆಯನ್ನು ನಾಲ್ಕು ದಿನಗಳಲ್ಲಿ ಅಭಿವೃದ್ಧಿ ಪಡಿಸಿರುವುದು ವಿಜಯನಗರ ಕ್ಷೇತ್ರದ ಜನರಿಗೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗವಿಯಪ್ಪ ನೀಡುತ್ತಿರುವುದು ಬಹು ದೊಡ್ಡ ಕೊಡುಗೆ ಆಗಿದೆ.
ಇನ್ನು ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಸಮರ್ಪಣೆ, ಸಾಧನ ಸಮಾವೇಶ ಮಾಡಿದರೆ ಶಾಸಕ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಹಿಂಬಾಲಕರ ನಿರೀಕ್ಷೆ ಸಹ ಇದೆ.

2025 ಮೇ 20 ರಂದು ನಡೆಯುವ ಜಿಲ್ಲೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ಸಾಧನ ಸಮಾವೇಶದಲ್ಲಿ ಎಷ್ಟೆಲ್ಲಾ ಗೊಂದಲದ ನಡುವೆ ಯಶಸ್ವಿಯಾಗುವುದೇ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆ ಆಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆ

Published

on

ಸುದ್ದಿದಿನಡೆಸ್ಕ್:ಆಪರೇಷನ್ ಸಿಂಧೂರ ಯಶಸ್ಸಿನ ನಂತರ ಬಿಜೆಪಿ ಇಂದಿನಿಂದ ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆಯನ್ನು ಆಯೋಜಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದೃಢನಿಶ್ಚಯದ ನಾಯಕತ್ವ ಮತ್ತು ಸಶಸ್ತ್ರ ಪಡೆಗಳ ಶೌರ್ಯದ ಬಗ್ಗೆ ಜನರಿಗೆ ತಿಳಿಸುವ ಭಾಗವಾಗಿ ಇದನ್ನು ಆಯೋಜಿಸಲಾಗಿದೆ. ಈ ತಿಂಗಳ 23 ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಮಾಜಿ ಸೈನಿಕರು ಮತ್ತು ಸಾಮಾಜಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಈ ಅಭಿಯಾನದ ಉದ್ದೇಶವು ರಾಜಕೀಯವಾಗಿರುವುದಿಲ್ಲ ಆದರೆ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲವನ್ನು ಪಡೆದಿರುವ ವಿಷಯದ ಬಗ್ಗೆ ಜನರನ್ನು ಹುರಿದುಂಬಿಸುವ ಸಲುವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ

Published

on

ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತ ಪರಮಾಣು ಬೆದರಿಕೆಗೆ ಅಂಜುವುದಿಲ್ಲ, ಹಾಗೆಯೇ ಅದನ್ನು ಸಹಿಸುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ

ಸುದ್ದಿದಿನಡೆಸ್ಕ್:ಅಪರೇಷನ್ ಸಿಂಧೂರ ಕಾರ್ಯಚರಣೆಯ ತಾತ್ಕಾಲಿಕ ಸ್ಥಗಿತ ಒಂದು ಸಮಾಪ್ತಿಯ ನಿರ್ಧಾರವಲ್ಲ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ ತನ್ನ ಬದ್ಧತೆಗೆ ಅನುಗುಣವಾಗಿ ಮುಂದಿನ ಕ್ರಮಗಳನ್ನು ಅನುಸರಿಸುತ್ತದೆಯೇ ಎಂಬುದನ್ನು ಭಾರತ ಪರಿಶೀಲಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನರೇಂದ್ರ ಮೋದಿಯವರು ಆಪರೇಷನ್ ಸಿಂಧೂರ ಆರಂಭದ ಮೂರನೇ ದಿನದಲ್ಲೇ ಪಾಕಿಸ್ತಾನ ತನ್ನ ನಿರೀಕ್ಷೆಗಿಂತ ಹೆಚ್ಚು ನಷ್ಟವನ್ನು ಅನುಭವಿಸಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆಗಳು ಮತ್ತು ಸ್ಥಿತಿಸ್ಥಾಪಕತ್ವದ ಪ್ರಬಲ ಸಂಕೇತವಾಗಿದೆ. ಆಪರೇಷನ್ ಸಿಂಧೂರ ನ್ಯಾಯಕ್ಕಾಗಿ ಅಚಲ ಪ್ರತಿಜ್ಞೆಯಾಗಿದೆ. ಆಪರೇಷನ್ ಸಿಂಧೂರ ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಮರು ವ್ಯಾಖ್ಯಾನಿಸಿದೆ ಮತ್ತು ಹೊಸ ಮಾನದಂಡ ಮತ್ತು ಹೊಸ ಸಾಮಾನ್ಯತೆಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.

ಭಾರತದ ಭದ್ರತಾ ನೀತಿಯ ಮೂರು ಪ್ರಮುಖ ಸ್ತಂಭಗಳನ್ನು ವಿವರಿಸಿದ ಪ್ರಧಾನಿ, ಭಯೋತ್ಪಾದನೆಗೆ ನಿರ್ಣಾಯಕ ಪ್ರತೀಕಾರವೇ ಅದರ ಮೊದಲ ಸ್ತಂಭವಾಗಿದೆ. ಭಾರತದ ಮೇಲಿನ ಯಾವುದೇ ಭಯೋತ್ಪಾದಕ ದಾಳಿಗೆ ಬಲವಾದ ಮತ್ತು ದೃಢವಾದ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು. ಭಾರತ ಪರಮಾಣು ಬೆದರಿಕೆಗಳಿಗೆ ಅಂಜುವುದಿಲ್ಲ. ಇನ್ನು ಮುಂದೆ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸದಿರುವುದು ಎರಡನೆಯ ಸ್ತಂಭವಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಪ್ರಾಯೋಜಕರು ಮತ್ತು ಭಯೋತ್ಪಾದಕರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇದುವೇ ಮೂರನೇ ಸ್ಥಂಭ ಎಂದು ಹೇಳಿದ ಅವರು, ಭಯೋತ್ಪಾದಕರಿಗೆ ಆಶ್ರಯ ನೀಡುವ ಮತ್ತು ರಕ್ಷಿಸುವವರನ್ನು ಭಯೋತ್ಪಾದಕರಿಂದ ಭಿನ್ನವಾಗಿ ನೋಡಲಾಗುವುದಿಲ್ಲ ಎಂದರು.

ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು

ಹಾಗೆಯೇ ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು ಎಂದು ಪ್ರದಾನ ಮಂತ್ರಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಭಾರತದ ಏಕತೆಯೇ ಅದರ ಶಕ್ತಿಯ ಮೂಲವಾಗಿದೆ. ಯುದ್ಧದ ಕಾಲವಲ್ಲದ ಈ ಯುಗದಲ್ಲಿ ಭಯೋತ್ಪಾದನೆಗೂ ಅವಕಾಶವಿಲ್ಲ. ಅದರ ವಿರುದ್ಧ ಶೂನ್ಯ ಸಹಿಷ್ಣುತೆಯೇ ಉತ್ತಮ ಹಾಗೂ ಸುರಕ್ಷಿತ ಭವಿಷ್ಯಕ್ಕೆ ಖಾತ್ರಿ ಎಂದರು.

ಪಾಕಿಸ್ತಾನ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಬೇಕು. ಪಾಕಿಸ್ತಾನ ಸೇನೆ ಮತ್ತು ಪಾಕಿಸ್ತಾನ ಸರ್ಕಾರ ಭಯೋತ್ಪಾದನೆಯನ್ನು ಪೋಷಿಸುವುದನ್ನು ಮುಂದುವರಿಸಿದರೆ, ಒಂದು ದಿನ ಅದು ಪಾಕಿಸ್ತಾನದ ಸ್ವಂತ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ-ಪಿಒಕೆ ಬಗ್ಗೆ ಮಾತ್ರ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು. ಇದೇ ವೇಳೆ ಭಾರತದ ಸೇನೆ, ಗುಪ್ತಚರ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಗೌರವ ಸೂಚಿಸಿದ ಪ್ರಧಾನಿ, ಈ ಕಾರ್ಯಾಚರಣೆಯಲ್ಲಿ ತೊಡಗಿದ ಸಶಸ್ತ್ರ ಪಡೆಗಳ ಧೈರ್ಯ ಹಾಗೂ ಶೌರ್ಯವನ್ನು ದೇಶದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರಿಗೆ ಅರ್ಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending