Connect with us

ರಾಜಕೀಯ

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್

Published

on

  • ಅಲ್‌ಮೆಯಿಡಾ ಗ್ಲಾಡ್‌ಸನ್

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಮಾತ್ರ ಯಾಕೆಂದರೆ 395 ವಿಧಿಗಳು, 8 ಅನುಚ್ಛೇದಗಳು, 22 ಭಾಗಗಳು, ಒಂದು ಲಕ್ಷಕ್ಕಿಂತಲೂ ಹೆಚ್ಚು ಶಬ್ದಗಳು ಹಾಗೂ ಇನ್ನೂರಕ್ಕಿಂತ ಹೆಚ್ಚು ಪುಟಗಳ ಸಂವಿಧಾನವನ್ನು ರಚಿಸುವಲ್ಲಿ ಡಾ ಅಂಬೇಡ್ಕರ್ ಪಟ್ಟ ಶ್ರಮ, ವ್ಯಯಿಸಿದ ಸಮಯ ಎಲ್ಲರಿಗಿಂತಲೂ ಹೆಚ್ಚು.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿ ಕೃಷ್ಣಸ್ವಾಮಿ ಅಯ್ಯರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೆ ಎಮ್ ಮುನ್ಶಿಯಂಥ ಘಟಾನುಘಟಿಗಳು ಇದ್ದರೂ, ಸಮಿತಿಯ ಅಧ್ಯಕ್ಷರನ್ನಾಗಿ ಆರಿಸಿದ್ದು ಬಾಬಾಸಾಹೇಬರನ್ನು ಅವರ ಸಾಮರ್ಥ್ಯ ಹಾಗೂ ಅಗಾಧವಾದ ಜ್ಞಾನದಾಧರದಲ್ಲಿ. ಸಂವಿಧಾನ ಕರಡು ಸಮಿತಿಯಲ್ಲಿ ಬಾಬಾಸಾಹೇಬರ ಜೊತೆ ಇನ್ನೂ ಆರು ಜನರಿದ್ದರು. ಆದರೆ ಕಾರಾಣಾಂತರಗಳಿಂದ ಕರಡು ಸಮಿತಿಯ ಹೆಚ್ಚಿನ ಸದಸ್ಯರು ಸಂವಿಧಾನ ರಚನೆಯಲ್ಲಿ ಭಾಗವಹಿಸಲೇ ಇಲ್ಲ. ಒಬ್ಬರು ತೀರಿಹೋದರು, ಇನ್ನೊಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೋರ್ವರು ತಮ್ಮ ರಾಜ್ಯದ ವಿಷಯಗಳಲ್ಲೇ ತಲ್ಲೀನರಾದರು. ಇನ್ನಿಬ್ಬರು ಅನಾರೋಗ್ಯದ ನಿಮಿತ್ತ ದೆಹಲಿ ಕಡೆ ಬರಲೇ ಇಲ್ಲ. ಹೀಗಾಗಿ ಇಡೀ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಬಾಬಾಸಾಹೇಬರ ಹೆಗಲಿಗೇ ಬಿತ್ತು. ಸುಮಾರು ಎರಡೂವರೆ ವರುಷಗಳ ಕಾಲ ನಡೆದ ಸಂವಿಧಾನ ರಚನೆ, ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆಯುವ ಮೊದಲು ಸುಮಾರು 2500 ಬಾರಿ ತಿದ್ದುಪಡಿಗೆ ಒಳಗಾಗಿತ್ತು. ಕೊನೆಗೆ ಈ ಸಂವಿಧಾನ ಅನುಮೋದನೆಯಾದಾಗ ಅದು ಜಗತ್ತಿನ ಅತೀ ದೊಡ್ಡ ಸಂವಿಧಾನವೆಂದು ಪರಿಗಣಿಸಲ್ಪಟ್ಟಿತ್ತು. ಸದ್ಯಕ್ಕೆ ನಮ್ಮ ಸಂವಿಧಾನ ಜಗತ್ತಿನ ಎರಡನೆಯ ಅತೀ ದೊಡ್ಡ ಸಂವಿಧಾನ. ಮೊದಲನೆಯ ಸ್ಥಾನದಲ್ಲಿ ಈವಾಗ ಅಲ್ಬೇನಿಯಾದ ಸಂವಿಧಾನ ಇದೆ.

ನಮ್ಮ ದೇಶ ಯಾವುದೇ ದೇಶದ ಸಂವಿಧಾನದ ಕಾಪಿ-ಪೇಸ್ಟ್ ಅಲ್ಲ ಸಂಘಿಗಳು ಹೇಳುವಂತೆ. ಹೌದು ಬ್ರಿಟನ್, ಅಮೇರಿಕಾ, ಐರ್ಲೆಂಡ್, ಫ್ರಾನ್ಸ್, ಆಸ್ಟ್ರೇಲಿಯಾ, ಜರ್ಮನಿ, ಯುಎಸ್‍ಎಸ್‍ಆರ್ ಮುಂತಾದ ದೇಶಗಳ ಸಂವಿಧಾನಗಳ ಪ್ರಭಾವ ನಮ್ಮ ಸಂವಿಧಾನದ ಮೇಲೂ ಇದೆ. ಆದರೆ ಅಲ್ಲಿಂದ ಕಾಪಿಯಾಗಿಲ್ಲ ಬದಲಾಗಿ ಅವುಗಳ ಕೆಲ ಆಶಯಗಳನ್ನು ಮೂಲಾಧಾರವಾಗಿಟ್ಟು, ಭಾರತದ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ, ಭಾಷಿಕಾ ವಿವಿಧತೆಗಳಿಗೆ ಅನುಸಾರವಾಗಿ ಭಾರತದ ಸಂವಿಧಾನವನ್ನು ರಚಿಸಲಾಗಿದೆ.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿದ್ದವರು ಬಾಬಾಸಾಹೇಬ್ ಅಂಬೇಡ್ಕರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೃಷ್ಣಸ್ವಾಮಿ ಅಯ್ಯರ್, ಕೆ‍ಎಮ್ ಮುನ್ಶಿ, ಸಯ್ಯದ್ ಮಹಮೂದ್ ಸಾ’ದುಲ್ಲಾ, ಬಿ ಎಲ್ ಮಿಟ್ಟರ್, ಡಿ ಪಿ ಖೈತಾನ್. (ಮಿಟ್ಟರ್ ಅವರ ಅನಾರೋಗ್ಯದ ಕಾರಣದಿಂದ ಸಮಿತಿಯಿಂದ ಹೊರಗುಳಿದಾಗ ನಮ್ಮ ಮೈಸೂರಿನ ಮಾಧವ ರಾವ್ ಅವರ ಜಾಗಕ್ಕೆ ಆಯ್ಕೆಯಾಗಿದ್ದರೆ, ಡಿ ಪಿ ಖೈತಾನ್ 1948ರಲ್ಲಿ ತೀರಿಹೋದ ಕಾರಣ ಅವರ ಜಾಗಕ್ಕೆ ಟಿ ಟಿ ಕೃಷ್ಣಮಾಚಾರಿ ಆಯ್ಕೆಯಾಗಿದ್ದರು). ಭಾರತದ ಸಂವಿಧಾನ ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆದಾಗ ಸಂವಿಧಾನ ಸಭೆಯನ್ನುದ್ದೇಶಿಸಿ ಮಾತಾನಾಡಿದ ಟಿ ಟಿ ಕೃಷ್ಣಮಾಚಾರಿ ಹೀಗೆಂದಿದ್ದಾರೆ “ಕರಡು ರಚನಾ ಸಮಿತಿಗೆ ಈ ಸಂವಿಧಾನ ಸಭೆ ಏಳು ಜನರನ್ನು ನೇಮಿಸಿತ್ತು. ಅದರಲ್ಲಿ ಒಬ್ಬರು ರಾಜೀನಾಮೆ ಕೊಟ್ಟಾಗ ಅವರ ಜಾಗಕ್ಕೆ ಇನ್ನೋರ್ವರ ಆಯ್ಕೆಯಾಯಿತು. ಒಬ್ಬರು ತೀರಿಹೋದರು, ಒಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೊಬ್ಬ ಸದಸ್ಯರು ತಾವು ಪ್ರತಿನಿಧಿಸುತ್ತಿದ್ದ ರಾಜ್ಯದ ವಿಷಯಗಳಲ್ಲೇ ತಲ್ಲೀನರಾಗಿದ್ದರೆ, ಇನ್ನಿಬ್ಬರು ದೆಹಲಿಯಿಂದ ದೂರವಿದ್ದು, ಅವರ ಅನಾರೋಗ್ಯದ ಕಾರಣದಿಂದ ಸಂವಿಧಾನ ರಚನೆಯಲ್ಲಿ ಭಾಗವಹಿಸಲಿಲ್ಲ. ಹೀಗಾಗಿ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಡಾ ಅಂಬೇಡ್ಕರ್ ಅವರ ಹೆಗಲಿಗೆ ಬಿತ್ತು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಪ್ರಶಂಸನೀಯ ರೀತಿಯಲ್ಲಿ ನಿಭಾಯಿಸಿದಕ್ಕಾಗಿ ನಾವೆಲ್ಲರೂ ಅವರಿಗೆ ಋಣಿಯಾಗಿರಬೇಕೆಂದು ನನ್ನ ಅಭಿಪ್ರಾಯ.”

ಭಾರತದ ಪ್ರಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಸಂವಿಧಾನ ಸಭೆಯ ಡಿಬೇಟ್‍ನಲ್ಲಿ ಒಂದೊಮ್ಮೆ ಹೀಗೆಂದಿದ್ದರು. “ಅಧ್ಯಕ್ಷನ ಸ್ಥಾನದಲ್ಲಿದ್ದು ಕರಡು ರಚನೆ ಸಮಿತಿಯ ದೈನಂದಿನ ಕೆಲಸಗಳನ್ನು ನಾನು ಬಲು ಹತ್ತಿರದಿಂದ ನೋಡಿದ್ಡೇನೆ. ಹಾಗಾಗಿ ಬೇರೆಯರವರಿಗಿಂತ ಹೆಚ್ಚಾಗಿ ಸಂವಿಧಾನ ಕರಡು ರಚನೆ ಸಮಿತಿಯ ಸದಸ್ಯರು ಹಾಗೂ ಪ್ರತ್ಯೇಕವಾಗಿ ಸಮಿತಿ ಅಧ್ಯಕ್ಷರು ಎಷ್ಟೊಂದು ಶೃದ್ಧೆ ಹಾಗೂ ಚೈತನ್ಯದಿಂದ ಈ ಸಂವಿಧಾನವನ್ನು ರಚಿಸಿದ್ದಾರೆ ಎಂದು ನನಗೆ ತಿಳಿದಿದೆ. ಅಂಬೇಡ್ಕರ್ ಅವರನ್ನು ಕರಡು ಸಮಿತಿಗೆ ಆಯ್ಕೆ ಮಾಡಿ, ತದನಂತರ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕಿಂತ ಹೆಚ್ಚಿನ ಒಳ್ಳೆಯ ಕೆಲಸವನ್ನು ನಾವು ಮಾಡಿಲ್ಲ.”

ಹೀಗಾಗಿ ಬಾಬಾಸಾಹೇಬ್ ಕೊಟ್ಟ ಸಂವಿಧಾನದ ಕಾರಣದಿಂದಲೇ ಇವತ್ತು ಐಎ‍ಎಸ್ ಆಫೀಸರ್ ಆಗಿರುವ ಶಿಕ್ಷಣಾ ಇಲಾಖೆಯ ಅಧಿಕಾರಿ ಉಮಾಶಂಕರ್ ಸಂವಿಧಾನ ರಚನೆಯ ಬಗ್ಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಆಗಿರುವುದು ಪ್ರಮಾದವಲ್ಲ ಬಟ್ ಅಪರಾಧ. ಸಂವಿಧಾನದ ಕಾರಣದಿಂದಲೇ ಇಂಥ ಉನ್ನತ ಹುದ್ದೇಗೇರಿರುವ ವ್ಯಕ್ತಿಗಳು ಮನಸ್ಸಿನಲ್ಲಿ ಇಷ್ಟೊಂದು ಕೊಳಕನ್ನು ಹಾಗೂ ನೀಚತನವನ್ನು ತುಂಬಿಸಿಕೊಂಡಿದ್ದಾರೆಂದರೆ ಅವರು ಸಂವಿಧಾನದ ಪಾಲಕರಾಗಿರಲು ಸಾಧ್ಯವೇ ಇಲ್ಲ. ಇವರನ್ನು ಕೇವಲ ಅಮಾನತ್ತುಗೊಳಿಸಿದರೆ ಸಾಕಾಗೋಲ್ಲ ಬದಲಾಗಿ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಸಂವಿಧಾನದ ನೆರಳಿನಡಿಯಲ್ಲಿ ಕುಳಿತು ತಮ್ಮ ರಾಜಕೀಯ ಹಾಗೂ ವ್ಯಯಕ್ತಿಕ ಸಿದ್ದಾಂತಗಳನ್ನು ಪ್ರತಿಪಾದಿಸುವ ಬದಲು ನೇರವಾಗಿ ಸೇವೆಗೆ ರಾಜೀನಾಮೆ ಕೊಟ್ಟು ಹೊರಬಂದು ತಮಗೆ ಬೇಕಾದ ರಾಜಕೀಯ ಪಕ್ಷವನ್ನು ಸೇರಲಿ. ಹಾಗಾಗಿ ಉಮಾಶಂಕರ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ತನಕ ಪಟ್ಟು ಸಡಿಲಿಸದೆ ಹೋರಾಡಬೇಕು. ನಮ್ಮ ಬ್ಯೂರೋಕ್ರಸಿಯಲ್ಲಿ ತುಂಬಿರುವ ಇಂಥ ನೀಚರನ್ನು ಗುರುತಿಸಿ ಹೊರಗಟ್ಟಿಲ್ಲವೆಂದರೆ ಮುಂದೊಂದು ದಿನ ಇವರೇ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡೋಡು ಗ್ಯಾರಂಟಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending