Connect with us

ದಿನದ ಸುದ್ದಿ

ಆರ್ಥಿಕ ಹಿಂಜರಿತದ ಬಿರು ಮೋಡಗಳು ದಟ್ಟೈಸುತ್ತಿವೆ

Published

on

  • ನವ ಉದಾರವಾದವೇ ಅವಸಾನದ ಅಂಚಿನಲ್ಲಿದೆ. ಅದರ ಹಿಡಿತಕ್ಕೆ ಒಳಪಟ್ಟಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಹಾಲಿ ಪರಿಸ್ಥಿತಿಯನ್ನು ಬದಲಿಸುವಂತಹ ಆಂತರಿಕ ಮಾರುಕಟ್ಟೆ ಆಧರಿತ ಯಾವ ಬದಲಿ ಆರ್ಥಿಕ ಆಳ್ವಿಕೆವೂ ಮುಂದೆ ಬರುತ್ತಿಲ್ಲ. ಹಾಗಾಗಿ, ಭಾರತದ ಅರ್ಥವ್ಯವಸ್ಥೆಯು ಒಂದು ತ್ರಿಶಂಕು ಸ್ಥಿತಿಯಲ್ಲಿದೆ. ಆದರೆ, ನವ ಉದಾರವಾದವು ತನ್ನ ಅಂತ್ಯವನ್ನು ತಲುಪಿದೆ ಎಂಬ ಅರಿವು ಮೋದಿ ಸರ್ಕಾರಕ್ಕೆ ಇದ್ದಂತಿಲ್ಲ. ನವ ಉದಾರವಾದಕ್ಕೆ ಮುಂದಕ್ಕೆ ಸಾಗಲು ದಾರಿ ಕಾಣದಾಗಿರುವಾಗ ಮೋದಿ ಸರ್ಕಾರಕ್ಕೆ ಅದನ್ನು ಧಿಕ್ಕರಿಸುವ ನೀತಿಗಳನ್ನು ಅನುಸರಿಸುವ ಧೈರ್ಯವಿಲ್ಲ. ಆದ್ದರಿಂದ, ಕೈಗಾರಿಕಾ ಹಿಂಜರಿತವು ಉಲ್ಬಣಗೊಳ್ಳುವ ಸಂಭವವಿದೆ.

ಜೂನ್ 2013 ರ ನಂತರ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕದಲ್ಲಿ ಮೊದಲ ಬಾರಿಗೆ 2019ರ ಮಾರ್ಚ್‌ನಲ್ಲಿ ಅದರ ಹಿಂದಿನ ಮಾರ್ಚ್‌ಗೆ ಹೋಲಿಸಿದರೆ 0.1% ಇಳಿಕೆಯಾಗಿದೆ. ಹಿಂದಿನ ನವೆಂಬರ್, ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ಕಂಡ ತುಸು ಏರಿಕೆಯ ನಂತರ ಸೂಚ್ಯಂಕದಲ್ಲಿ ಇಳಿಕೆಯಾಗಿದೆ. ಇತ್ತೀಚಿನ ಅವಧಿಯಲ್ಲಿ ಕೈಗಾರಿಕಾ ಬೆಳವಣಿಗೆ ಮಂದವಾಗುತ್ತಿದೆ ಎಂಬ ಅಂಶವನ್ನು ಈ ಅಂಕಿಗಳು ಗಟ್ಟಿಯಾಗಿಯೇ ದೃಢಪಡಿಸುತ್ತವೆ.

ಈ ಸೂಚ್ಯಂಕದಲ್ಲಿ, 77.6 ಗಣನೆ ಹೊಂದಿರುವ ತಯಾರಿಕಾ ವಲಯದ ಬೆಳವಣಿಗೆಯು 2019ರ ಮಾರ್ಚ್‌ನಲ್ಲಿ ಅದರ ಹಿಂದಿನ ಮಾರ್ಚ್‌ಗೆ ಹೋಲಿಸಿದರೆ 0.4% ಇಳಿದಿದೆ. ತಯಾರಿಕಾ ವಲಯದ ಉಪ ವಿಭಾಗಗಳಾದ ಮೂಲ ವಸ್ತುಗಳ ಉತ್ಪಾದನೆಯಲ್ಲಿ 8.7%ಗೃಹ ಬಳಕೆ ವಸ್ತುಗಳ ಉತ್ಪಾದನೆಯಲ್ಲಿ 5.1%,ಮಧ್ಯವರ್ತಿ ವಸ್ತುಗಳ ಉತ್ಪಾದನೆಯಲ್ಲಿ 2.5%ಇಳಿಕೆಯಾಗಿದೆ ಮತ್ತು ಗೃಹ ಬಳಕೆಯೇತರ ವಸ್ತುಗಳ ಉತ್ಪಾದನೆಯಲ್ಲಿ 0.3% ಏರಿಕೆಯಾಗಿದೆ. ಇಡೀ 2018-19 ವರ್ಷದಲ್ಲಿ ಒಟ್ಟಾರೆ ಆಗಿರುವ 3.6% ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಅದರ ಹಿಂದಿನ 2017-18 ವರ್ಷದಲ್ಲಿದ್ದ 4.4% ಬೆಳವಣಿಗೆಗಿಂತಲೂ ಕಡಿಮೆ ಇದೆ. ಹಾಗಾಗಿ, 2018-19 ವರ್ಷದ ಕೊನೆಯ ತಿಂಗಳುಗಳಲ್ಲಿ ಆರ್ಥಿಕ ಹಿಂಜರಿತ ಬಲಿಯಲಾರಂಭಿಸಿತು.

ಒಂದು ರೀತಿಯಲ್ಲಿ ಈ ಹಿಂಜರಿತವು ಅನಿವಾರ್ಯವೇ. ಏಕೆಂದರೆ, ಭಾರತದ ಅರ್ಥವ್ಯವಸ್ಥೆಯು, ವಿಶ್ವದ ಇತರ ಅರ್ಥವ್ಯವಸ್ಥೆಗಳಂತಲ್ಲದೆ, ತ್ರಿಶಂಕು ಸ್ಥಿತಿಗೊಳಗಾಗಿದೆ. ಇದು, ರೋಗ ತಟ್ಟಿದೆ ಎಂಬುದರ ಒಂದು ಸೂಚನೆ. ನವ ಉದಾರವಾದವೇ ಅವಸಾನದ ಅಂಚಿನಲ್ಲಿದೆ. ಅದರ ಹಿಡಿತಕ್ಕೆ ಒಳಪಟ್ಟಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಹಾಲಿ ಪರಿಸ್ಥಿತಿಯನ್ನು ಬದಲಿಸುವಂತಹ ಆಂತರಿಕ ಮಾರುಕಟ್ಟೆ ಆಧರಿತ ಯಾವ ಬದಲಿ ಆರ್ಥಿಕ ಆಳ್ವಿಕೆವೂ ಮುಂದೆ ಬರುತ್ತಿಲ್ಲ. ಹಾಗಾಗಿ, ಭಾರತದ ಅರ್ಥವ್ಯವಸ್ಥೆಯು ಒಂದು ತ್ರಿಶಂಕು ಸ್ಥಿತಿಯಲ್ಲಿದೆ.

ಜಾಗತಿಕ ಅರ್ಥವ್ಯವಸ್ಥೆಯ ಮಂದಗತಿಯ ಪರಿಣಾಮವಾಗಿ ಭಾರತ ಮತ್ತು ಚೀನಾದಂತಹ ಅರ್ಥವ್ಯವಸ್ಥೆಗಳು ಈಗ ನಲುಗುತ್ತಿವೆ. ಈ ದೇಶಗಳ ರಫ್ತು ದರಗಳು ಇಳಿಮುಖವಾಗುತ್ತಿವೆ. ರಫ್ತುಗಳ ಈ ಇಳಿಕೆಯನ್ನು ಸರಿದೂಗಿಸಿಕೊಳ್ಳಲು ಬೇಕಾಗುವ ಮಟ್ಟದಲ್ಲಿ ಆಂತರಿಕ ಮಾರುಕಟ್ಟೆಗಳನ್ನು ಬೆಳೆಸುವ ಕ್ರಮಗಳನ್ನೇ ದೇಶದಲ್ಲಿ ಕೈಗೊಂಡಿಲ್ಲ. ಹಾಗಾಗಿ, ದೇಶದ ಆಂತರಿಕ ಮಾರುಕಟ್ಟೆಯೂ ಕುಗ್ಗುತ್ತಿದೆ.

ಗ್ರಾಮೀಣ ಪರಿಸ್ಥಿತಿಯ ಯಾತನಾಮಯ ಕಾರಣದಿಂದಾಗಿ ಮತ್ತು ರಫ್ತು ದರ ಇಳಿಕೆಯ ಅಡ್ಡ ಪರಿಣಾಮಗಳ ಕಾರಣಗಳಿಂದಾಗಿ ಕೈಗಾರಿಕಾ ಬೆಳವಣಿಗೆ ಕುಂಠಿತವಾಗಿದೆ. ಜೊತೆಗೆ, ವಸೂಲಾಗದ ಸಾಲಗಳು ಹೆಚ್ಚಿದ ಕಾರಣದಿಂದಾಗಿ ಹೊಸ ಸಾಲಗಳು ದುರ್ಲಭವಾಗುತ್ತಿವೆ. ಇದರಿಂದಾಗಿ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಖರ್ಚು ಮಾಡುವುದು ಸಾಧ್ಯವಾಗುತ್ತಿಲ್ಲ. ಅಂದರೆ, ರಫ್ತುಗಳ ಇಳಿಕೆಯು, ಅದನ್ನು ಸರಿದೂಗಿಸಿಕೊಳ್ಳುವ ಮಾತು ಒತ್ತಟ್ಟಿಗಿರಲಿ, ದೇಶದ ಆಂತರಿಕ ಮಾರುಕಟ್ಟೆಯ ಕುಗ್ಗುವಿಕೆಗೂ ಕಾರಣವಾಗಿದೆ.

ಗೃಹ ಬಳಕೆ ವಸ್ತುಗಳ ತಯಾರಿಕೆ ಕುಗ್ಗುತ್ತಿರುವ ಅಂಶವು ದೇಶದ ಆಂತರಿಕ ಮಾರುಕಟ್ಟೆ ಕುಗ್ಗಿರುವ ಅಂಶವನ್ನು ಸ್ಪಷ್ಟಪಡಿಸುತ್ತದೆ. ಮತ್ತು, ಗೃಹ ಬಳಕೆಯೇತರ ವಸ್ತುಗಳ ಉತ್ಪಾದನಾ ವಲಯವು ಎಪ್ರಿಲ್‌ನಲ್ಲಿ ಅದರ ಹಿಂದಿನ ಎಪ್ರಿಲ್‌ಗೆ ಹೋಲಿಸಿದರೆ ಸ್ಥಗಿತವಾಗಿತ್ತು. ಅರ್ಥವ್ಯವಸ್ಥೆಯಲ್ಲಿ ಹೂಡಿಕೆ ಇಳಿಯುತ್ತಿದೆ ಎಂಬುದನ್ನು ಅದಾಗಲೇ ಫೆಬ್ರವರಿಯಲ್ಲಿಯೇ ಮೂಲ ಸರಕು ಉತ್ಪಾದನಾ ವಲಯವು ಸ್ಥಗಿತಗೊಂಡಿದ್ದ ಪರಿಸ್ಥಿತಿಯೇ ಸೂಚಿಸುತ್ತದೆ.

ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಎರಡು ಬಾರಿ, ಪ್ರತಿ ಸಲವೂ 25 ಮೂಲಾಂಶದಷ್ಟು (ಅಂದರೆ, ಒಟ್ಟು 0.5%) ಬಡ್ಡಿ ದರ ಇಳಿಸಿದೆ. ಈ ಕ್ರಮದಿಂದಾಗಿ ಪರಿಸ್ಥಿತಿ ಹೆಚ್ಚು ಸುಧಾರಿಸುವ ಸಂಭವವಿಲ್ಲ. ಏಕೆಂದರೆ, ಸಾಲದ ಮೇಲಿನ ಬಡ್ಡಿ ದರ ಎಷ್ಟು ಎಂಬುದಕ್ಕಿಂತಲೂ ಸಾಲ ಕೊಡಲು ಬ್ಯಾಂಕ್‌ಗಳ ಬಳಿ ಎಷ್ಟು ಹಣ ಲಭ್ಯವಿದೆ ಎಂಬುದೇ ಸಾಲ ಕೊಡುವಿಕೆಯನ್ನು ತಡೆ ಹಿಡಿದಿರುವ ಅಂಶ.

ಹಿಂದಿನ ಸಾಲಗಳು ವಸೂಲಾಗದೇ ಉಳಿದ ಕಾರಣದಿಂದಾಗಿ ಬ್ಯಾಂಕ್‌ಗಳ ಬಳಿ ಹೊಸ ಸಾಲ ಕೊಡಲು ಹಣ ಲಭ್ಯವಿಲ್ಲ. ಒಂದು ವೇಳೆ ಹೊಸ ಸಾಲಗಳು ಲಭ್ಯವಿದ್ದರೂ ಅದರಿಂದ ಪರಿಸ್ಥಿತಿ ಎಷ್ಟರಮಟ್ಟಿಗೆ ಸುಧಾರಿಸುತ್ತಿತ್ತು ಎಂಬುದು ಸ್ಪಷ್ಟವಿಲ್ಲ. ಅದೇನಿದ್ದರೂ, ಸಾಲ ಲಭ್ಯತೆಯೇ ಬಿಗಿತಗೊಂಡಿರುವ ಪರಿಸ್ಥಿತಿಯಲ್ಲಿ ಬಡ್ಡಿ ದರ ಇಳಿಸುವುದರಿಂದಾಗಿ ಸಾಲ ಲಭ್ಯತೆ ಗಣನೀಯ ಎನ್ನುವಷ್ಟು ಹೆಚ್ಚುವುದಿಲ್ಲ.

ಈ ಪರಿಸ್ಥಿತಿಯಲ್ಲಿ ಅಗತ್ಯವಿರುವುದು ಏನೆಂದರೆ, ವಿತ್ತೀಯ ವಿಸ್ತರಣೆ. ಇಡೀ ಈ ವಿಷಯದ ಸಾರಾಂಶ ಇರುವುದು ಇಲ್ಲೇ. ಚುನಾವಣೆಗಳ ಈ ಕಾಲದಲ್ಲಿ, ಗ್ರಾಮೀಣ ಬಡವರಿಗೆ ದೊಡ್ಡ ಮೊತ್ತದ ಹಣವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸುವ ಭರವಸೆಯನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಕೊಟ್ಟಿವೆ. ಈ ಕಾರ್ಯಕ್ರಮವು ಖಂಡಿತವಾಗಿಯೂ ದೇಶದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುತ್ತದೆ ಮತ್ತು ಸೊರಗುತ್ತಿರುವ ಕೈಗಾರಿಕೆಗಳ ಉತ್ಪಾದನೆಗೆ ಚೈತನ್ಯ ತುಂಬುತ್ತದೆ. ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್‌ನಲ್ಲಿ, ಬಡ ಕುಟುಂಬಗಳಿಗೆ ಸೇರಿದ 12 ಕೋಟಿ ವ್ಯಕ್ತಿಗಳಿಗೆ ತಲಾ ವಾರ್ಷಿಕ 6,000 ರೂಗಳನ್ನು ಕೊಡುವುದಾಗಿ ಭರವಸೆ ಕೊಟ್ಟಿತ್ತು. ಕಾಂಗ್ರೆಸ್ ಅದಕ್ಕಿಂತಲೂ ಮುಂದೆ ಹೋಗಿ, ತನ್ನ ನ್ಯಾಯ ಯೋಜನೆಯಡಿಯಲ್ಲಿ, ಐದು ಕೋಟಿ ಬಡ ಕುಟುಂಬಗಳಿಗೆ ತಿಂಗಳಿಗೆ 6,000 ರೂಗಳಂತೆ ವರ್ಷಕ್ಕೆ 72,000 ರೂಗಳನ್ನು ಕೊಡುವುದಾಗಿ ಭರವಸೆ ಕೊಟ್ಟಿತ್ತು.

ಇಂತಹ ಯೋಜನೆಗಳು, ಅದರಲ್ಲೂ ವಿಶೇಷವಾಗಿ ಭಾರೀ ಮಹತ್ವಾಕಾಂಕ್ಷೆಯ ನ್ಯಾಯ ಯೋಜನೆಯು ದೇಶದ ಆಂತರಿಕ ಮಾರುಕಟ್ಟೆಯನ್ನು ಹಿಗ್ಗಿಸುವಲ್ಲಿ ಸಹಾಯವಾಗುತ್ತಿತ್ತು. ಆದರೆ, ಇಂತಹ ಯೋಜನೆಗೆ ಹಣ ಎಲ್ಲಿದೆ ಎಂಬ ಪ್ರಶ್ನೆ ಏಳುತ್ತದೆ. ಶ್ರೀಮಂತರಿಗೆ ತೆರಿಗೆ ವಿಧಿಸುವ ಮೂಲಕ, ಅಂದರೆ ಅವರ ಸಂಪತ್ತಿನ ಮೇಲೆ ತೆರಿಗೆ ಹಾಕುವ ಮೂಲಕ ಈ ಯೋಜನೆಗೆ ಬೇಕಾಗುವಷ್ಟು ಹಣವನ್ನು ಹೊಂದಿಸಿಕೊಳ್ಳಬಹುದು. ಈ ದೇಶದಲ್ಲಿ ಸಂಪತ್ತಿನ ಮೇಲೆ ತೆರಿಗೆಯೇ ಇಲ್ಲ. ಹಿಂದೆ ಇದ್ದ ಇಂತಹ ಒಂದು ಕಾನೂನನ್ನು ಕಿತ್ತುಹಾಕಿ ವರ್ಷಗಳೇ ಕಳೆದಿವೆ.

ಸಂಪತ್ತು ತೆರಿಗೆಯಂತಹ ಒಂದು ಕಾನೂನನ್ನು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಶತಾಯು ಗತಾಯು ವಿರೋಧಿಸುತ್ತದೆ. ನ್ಯಾಯ ಯೋಜನೆಯ ಘೋಷಣೆ ಮಾಡುವಾಗ, ಅದಕ್ಕೆ ಬೇಕಾಗುವ ಹಣ ಹೊಂದಿಸಿಕೊಳ್ಳುವುದು ಕಷ್ಟವಾಗಲಾರದು ಎಂಬ ಬಹಳ ಚಾತುರ್ಯದ ಉತ್ತರ ಕೊಟ್ಟಿದ್ದರು ಮನಮೋಹನ ಸಿಂಗ್. ಆದರೆ, ನವ ಉದಾರ ಆರ್ಥಿಕ ಆಳ್ವಿಕೆಯಲ್ಲಿ ಇಂತಹ ಯೋಜನೆಗೆ ಹಣ ಹೊಂದಿಸಿಕೊಳ್ಳುವುದು ಅತ್ಯಂತ ಕಷ್ಟಕರವಾದ ಕೆಲಸವೇ.

ಅದೇ ರೀತಿಯಲ್ಲಿ ಇಂತಹ ಯೋಜನೆಗೆ ಸರ್ಕಾರವು ವಿತ್ತೀಯ ಕೊರತೆಯ ಮೂಲಕ ಭಾಗಶಃ ಹಣ ಒದಗಿಸಿದರೂ ಅದು ವಿತ್ತೀಯ ಕೊರತೆಯನ್ನು ಹೆಚ್ಚಿಸಿ ಜೊತೆಗೆ, ಈ ಕೊರತೆಯ ಮೇಲೆ ವಿಧಿಸಿರುವ ಮಿತಿಯನ್ನು (ಜಿಡಿಪಿಯ 3.4%) ತಪ್ಪದೇ ಮೀರುತ್ತದೆ. ಆಗ, ಭಾರತದ ಕ್ರೆಡಿಟ್ ರೇಟಿಂಗ್‌ಅನ್ನು ಕೆಳ ದರ್ಜೆಗೆ ಇಳಿಸುವ ಸಂಭವವಿದೆ. ಅಂತಹ ಸಂದರ್ಭದಲ್ಲಿ, ವಿದೇಶ ವ್ಯಾಪಾರದಿಂದ ಉಂಟಾದ ಕೊರತೆಯನ್ನು ತೀರಿಸುವ ಸಲುವಾಗಿ ಚಾಲ್ತಿ ಖಾತೆಯ(ವಿದೇಶಿ ವಿನಿಮಯ) ಕೊರತೆ ತುಂಬಿಸಿಕೊಳ್ಳುವುದು ಭಾರೀ ಕಷ್ಟದ ಕೆಲಸವಾಗುತ್ತದೆ.

ಚಾಲ್ತಿ ಖಾತೆ ಕೊರತೆ ಸಮಸ್ಯೆಯು ಅಮೇರಿಕಾದ ಒತ್ತಾಯಕ್ಕೆ ಕಟ್ಟುಬಿದ್ದು ಮಾರುಕಟ್ಟೆಯ ದೈನಿಕ ದರದಲ್ಲಿ ತೈಲ ಕೊಂಡಾಗಲೂ ಉಂಟಾಗುತ್ತದೆ. ಈಗ ದೇಶವು ಇರಾನಿನಿಂದ ಅಗ್ಗದ ದರದಲ್ಲಿ ತೈಲ ಕೊಳ್ಳುತ್ತಿದೆ, ಬೇರೊಂದು ಕಾರಣದ ಮೇಲೆ, ಇರಾನಿನಿಂದ ತೈಲ ಕೊಳ್ಳಕೂಡದು ಎಂದು ಅಮೇರಿಕಾ ಒತ್ತಾಯಿಸುತ್ತಿದೆ. ಅಮೇರಿಕಾದ ಒತ್ತಡಕ್ಕೆ ಮೋದಿ ಸರ್ಕಾರವು ಈಗಾಗಲೇ ತಲೆಬಾಗಿದೆ. ಅಧಿಕಾರಕ್ಕೆ ಮರಳಿದ ನಂತರವೂ ಇದೇ ನಿಲುವಿಗೆ ಆತುಕೊಳ್ಳುತ್ತದೆ.

ಈಗಾಗಲೇ ಖಚಿತ ಏರು ಮುಖಿಯಾಗಿರುವ ತೈಲ ಬೆಲೆಗಳಿಂದಾಗಿ ಚಾಲ್ತಿ ಖಾತೆಯಲ್ಲಿ ಕೊರತೆ ಹೆಚ್ಚಲಿದೆ. ಇರಾನಿನ ಮೇಲೆ ಅಮೇರಿಕಾ ಹೇರಿರುವ ನಿರ್ಬಂಧಗಳು ಜಾರಿಯಾದಾಗ ಚಾಲ್ತಿ ಖಾತೆಯಲ್ಲಿ ಕೊರತೆ ಮತ್ತಷ್ಟು ಹೆಚ್ಚಲಿದೆ. ಅದರ ಜೊತೆಗೆ ವಿತ್ತೀಯ ಕೊರತೆಯು ಗರಿಷ್ಠ ಮಿತಿಗಿಂತಲೂ ಹೆಚ್ಚಿಗೆ ಇದ್ದರೆ, ಕ್ರೆಡಿಟ್ ರೇಟಿಂಗ್ ಕೆಳ ದರ್ಜೆಗೆ ಇಳಿಯುತ್ತದೆ. ಅದರ ಪರಿಣಾಮವಾಗಿ ಬಂಡವಾಳದ ಒಳಹರಿವೂ ಬತ್ತುತ್ತದೆ. ಆಗ, ಚಾಲ್ತಿ ಖಾತೆ (ವಿದೇಶಿ ವಿನಿಮಯ) ಕೊರತೆ ನಿಭಾಯಿಸುವುದು ವಾಡಿಕೆಯ ಪ್ರಕಾರ ಸಾಧ್ಯವಾಗುವುದಿಲ್ಲ.

ನಾವೀಗ ಒಂದು ವಿಲಕ್ಷಣ ಪರಿಸ್ಥಿತಿಯಲ್ಲಿದ್ದೇವೆ. ಬಲಿಯುತ್ತಿರುವ ಹಿಂಜರಿತವನ್ನು ತಡೆಯಲು ಒಂದು ಕಡೆ ಪ್ರಯತ್ನಿಸಿದರೆ ಚಾಲ್ತಿ ಖಾತೆ ಕೊರತೆ ನಿಭಾಯಿಸುವುದು ಕಷ್ಟವಾಗುತ್ತದೆ. ಇನ್ನೊಂದು ಕಡೆ ಹಿಂಜರಿತವನ್ನು ತಡೆಯುವ ಯಾವ ಪ್ರಯತ್ನವನ್ನೂ ಮಾಡದಿದ್ದರೆ, ಈಗಾಗಲೇ ಭೀಕರವಾಗಿರುವ ನಿರುದ್ಯೋಗವು ಇನ್ನಷ್ಟು ಭೀಕರವಾಗಗುತ್ತದೆ.

ನಿರುದ್ಯೋಗದ ಭೀಕರತೆ ಸಾರ್ವಜನಿಕರ ಗಮನಕ್ಕೆ ಬರದಿರಲಿ ಎಂಬ ದುರುದ್ದೇಶದಿಂದ ಸರ್ಕಾರವು ನಿರುದ್ಯೋಗ ಪರಿಸ್ಥಿತಿಯ ಬಗ್ಗೆ ಯಾವ ಅಂಕಿ ಅಂಶಗಳನ್ನು ಅಧಿಕೃತವಾಗಿ ಪ್ರಕಟಿಸಲು ಎರಡು ವರ್ಷಗಳಿಂದಲೂ ನಿರಾಕರಿಸಿದೆ. ಆದರೆ, ಸರ್ಕಾರದ ಅಂಕಿ ಸಂಖ್ಯೆಗಳ ಸಂಸ್ಥೆಯು ಬಚ್ಚಿಟ್ಟಿದ್ದ ಒಂದು ವರದಿಯು ಸೋರಿಕೆಯಾಗಿದೆ. ಈ ವರದಿಯ ಪ್ರಕಾರ, 6.1%ನಿರುದ್ಯೋಗ ದರ ಏರಿಕೆ ಕಳೆದ 45ವರ್ಷಗಳಲ್ಲೇ ಅತಿ ಹೆಚ್ಚಿನದು.

ಭಾರತದ ಅರ್ಥವ್ಯವಸ್ಥೆಯ ಬೆಳವಣಿಗೆಗಳನ್ನು ಗಮನಿಸುತ್ತಿರುವ ಸಿಎಂಐಇ ಸಂಸ್ಥೆಯ ಪ್ರಕಾರ 2019ರ ಎಪ್ರಿಲ್‌ನಲ್ಲಿ ನಿರುದ್ಯೋಗ ದರ 7.6% ಇತ್ತು. ನಿರುದ್ಯೋಗ ದರವು ನಿರುದ್ಯೋಗದ ಏರಿಕೆ ಅಥವಾ ಇಳಿಕೆಯ ದಿಕ್ಕನ್ನು ಸೂಚಿಸುತ್ತದೆಯಲ್ಲದೆ ಅದರ ಅಗಾಧತೆಯನ್ನು ತೋರಿಸುವುದಿಲ್ಲ. ಏಕೆಂದರೆ, ಉದ್ಯೋಗಗಳ ಹರವು ಏಕ ರೂಪದಲ್ಲಿಲ್ಲ. ಎಲ್ಲೋ ಕೆಲವರು ಪೂರ್ಣಾವಧಿ ಉದ್ಯೋಗದಲ್ಲಿದ್ದರೆ, ಹೆಚ್ಚಿನ ಮಂದಿ ಅರೆ ಕಾಲಿಕ ಉದ್ಯೋಗದಲ್ಲಿದ್ದಾರೆ, ಉಳಿದವರು ಪೂರಾ ನಿರುದ್ಯೋಗಿಗಳು.

ಆದ್ದರಿಂದ, ಸರ್ಕಾರವು ನಿರುದ್ಯೋಗ ಪರಿಸ್ಥಿತಿಯನ್ನು ತಕ್ಕಮಟ್ಟಿಗಾದರೂ ಸುಧಾರಿಸುವ ಕೆಲಸ ಮಾಡಬೇಕು. ಆದರೆ, ಈ ನಿಟ್ಟಿನಲ್ಲಿ ಏನು ಮಾಡಲು ಹೊರಟರೂ, ನವ ಉದಾರ ಮಾದರಿಯ ಆರ್ಥಿಕ ಆಳ್ವಿಕೆಯ ಸಂದರ್ಭದಲ್ಲಿ, ಅದು ವಿದೇಶ ವ್ಯಾಪಾರದ ಬಾಕಿ ಚುಕ್ತಾ (ಪಾವತಿ ಶೇಷ) ಪರಿಸ್ಥಿತಿಯನ್ನು ಅಸ್ಥಿರಗೊಳಿಸುತ್ತದೆ. ಮಾಡಿದ್ದುಣ್ಣೋ ಮಹರಾಯ ಎಂಬಂತಾಗಿದೆ ನವ ಉದಾರ ಆರ್ಥಿಕ ಮಾದರಿಯ ಪರಿಸ್ಥಿತಿ.

ನವ ಉದಾರವಾದವೇ ತನ್ನ ಅಂತ್ಯವನ್ನು ತಲುಪಿರುವ ಪರಿಸ್ಥಿತಿಯಲ್ಲಿ ಅದರ ಹಿಡಿತದಿಂದ ಕಳಚಿಕೊಳ್ಳುವ ಒಂದು ಅವಕಾಶವಿದೆ. ವಿದೇಶ ವ್ಯಾಪಾರ ಮತ್ತು ಬಂಡವಾಳದ ಹರಿವಿನ ಮೇಲೆ ನಿಯಂತ್ರಣ ಹೇರುವ ಮೂಲಕ ನವ ಉದಾರವಾದದ ಹಿಡಿತದಿಂದ ಕಳಚಿಕೊಳ್ಳುವ ಅವಕಾಶವನ್ನು ಸದುಪಯೋಗಿಸಿ ಕೊಳ್ಳಬಹುದು. ಅಮೇರಿಕಾ ಈಗಾಗಲೇ ವಿದೇಶ ವ್ಯಾಪಾರದ ಮೇಲೆ ನಿಯಂತ್ರಣ ಹೇರಿದೆ.

ಭಾರತವೂ ಅದನ್ನು ಅನುಸರಿಸಬಹುದಿತ್ತು. ಅಂತಹ ಒಂದು ತೀರ್ಮಾನ ಕೈಗೊಂಡಾಗ, ಸಂಪತ್ತು ತೆರಿಗೆ ಮತ್ತು ಅನುವಂಶಿಕ ಆಸ್ತಿ ತೆರಿಗೆ ವಿಧಿಸುವುದು ಸಾಧ್ಯವಾಗುತ್ತಿತ್ತು. ಅಂತಹ ಪರಿಸ್ಥಿತಿಯಲ್ಲಿ, ಚುನಾವಣೆಗಳ ಸಮಯದಲ್ಲಿ ಗ್ರಾಮೀಣ ಬಡವರಿಗೆ ದೊಡ್ಡ ಮೊತ್ತದ ಹಣವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸುವುದಾಗಿ ಕೊಟ್ಟಿದ್ದ ಭರವಸೆಯನ್ನು ಈಡೇರಿಸುವುದು ಸಾಧ್ಯವಿತ್ತು. ವರ್ಗಾವಣೆಯ ಈ ಕಾರ್ಯಕ್ರಮವು ಖಂಡಿತವಾಗಿಯೂ ದೇಶದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುತ್ತಿತ್ತು. ತರುವಾಯ ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವ ಕ್ರಮ ಕೈಗೊಳ್ಳಬಹುದಿತ್ತು.

ಈ ರೀತಿಯಲ್ಲಿ ನೀತಿಗಳನ್ನು ಬದಲಾಯಿಸಿಕೊಂಡಿದ್ದರೆ, ಬಂಡವಾಳದ ಒಳ ಹರಿವು ಬತ್ತಿದರೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಏಕೆಂದರೆ, ವಿದೇಶ ವ್ಯಾಪಾರದ ಮೇಲೆ ನಿಯಂತ್ರಣ ಹೇರಿದಾಗ ಚಾಲ್ತಿ ಖಾತೆಯ ಕೊರತೆಯೂ ಹದ್ದುಬಸ್ತಿನಲ್ಲಿರುತ್ತದೆ. ಹಾಗಾಗಿ, ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೂ ಸಮಸ್ಯೆಯಾಗುವುದಿಲ್ಲ.

ಆದರೆ, ನವ ಉದಾರವಾದವು ತನ್ನ ಅಂತ್ಯವನ್ನು ತಲುಪಿದೆ ಎಂಬ ಅರಿವು ಮೋದಿ ಸರ್ಕಾರಕ್ಕೆ ಇದ್ದಂತಿಲ್ಲ. ನವ ಉದಾರವಾದೀ ಸುಧಾರಣೆಗಳ ವಿನ್ಯಾಸಕಾರನಾದ ಕಾಂಗ್ರೆಸ್ ಪಕ್ಷಕ್ಕೆ, ನ್ಯಾಯ ಯೋಜನೆಯ ಬಗ್ಗೆ ಕೊಟ್ಟ ಭರವಸೆಯ ಹೊರತಾಗಿಯೂ, ನವ ಉದಾರವಾದಕ್ಕೆ ಮುಂದಕ್ಕೆ ಸಾಗಲು ದಾರಿ ಕಾಣದಾಗಿರುವಾಗ ಅದನ್ನು ಧಿಕ್ಕರಿಸುವ ನೀತಿಗಳನ್ನು ಅನುಸರಿಸುವ ಧೈರ್ಯವಿಲ್ಲ. ಆದ್ದರಿಂದ, ಕೈಗಾರಿಕಾ ಹಿಂಜರಿತವು ಉಲ್ಬಣಗೊಳ್ಳುವ ಸಂಭವವಿದೆ.

ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ9 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ6 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ3 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending