Connect with us

ದಿನದ ಸುದ್ದಿ

ಆರ್ಥಿಕ ಹಿಂಜರಿತದ ಬಿರು ಮೋಡಗಳು ದಟ್ಟೈಸುತ್ತಿವೆ

Published

on

  • ನವ ಉದಾರವಾದವೇ ಅವಸಾನದ ಅಂಚಿನಲ್ಲಿದೆ. ಅದರ ಹಿಡಿತಕ್ಕೆ ಒಳಪಟ್ಟಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಹಾಲಿ ಪರಿಸ್ಥಿತಿಯನ್ನು ಬದಲಿಸುವಂತಹ ಆಂತರಿಕ ಮಾರುಕಟ್ಟೆ ಆಧರಿತ ಯಾವ ಬದಲಿ ಆರ್ಥಿಕ ಆಳ್ವಿಕೆವೂ ಮುಂದೆ ಬರುತ್ತಿಲ್ಲ. ಹಾಗಾಗಿ, ಭಾರತದ ಅರ್ಥವ್ಯವಸ್ಥೆಯು ಒಂದು ತ್ರಿಶಂಕು ಸ್ಥಿತಿಯಲ್ಲಿದೆ. ಆದರೆ, ನವ ಉದಾರವಾದವು ತನ್ನ ಅಂತ್ಯವನ್ನು ತಲುಪಿದೆ ಎಂಬ ಅರಿವು ಮೋದಿ ಸರ್ಕಾರಕ್ಕೆ ಇದ್ದಂತಿಲ್ಲ. ನವ ಉದಾರವಾದಕ್ಕೆ ಮುಂದಕ್ಕೆ ಸಾಗಲು ದಾರಿ ಕಾಣದಾಗಿರುವಾಗ ಮೋದಿ ಸರ್ಕಾರಕ್ಕೆ ಅದನ್ನು ಧಿಕ್ಕರಿಸುವ ನೀತಿಗಳನ್ನು ಅನುಸರಿಸುವ ಧೈರ್ಯವಿಲ್ಲ. ಆದ್ದರಿಂದ, ಕೈಗಾರಿಕಾ ಹಿಂಜರಿತವು ಉಲ್ಬಣಗೊಳ್ಳುವ ಸಂಭವವಿದೆ.

ಜೂನ್ 2013 ರ ನಂತರ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕದಲ್ಲಿ ಮೊದಲ ಬಾರಿಗೆ 2019ರ ಮಾರ್ಚ್‌ನಲ್ಲಿ ಅದರ ಹಿಂದಿನ ಮಾರ್ಚ್‌ಗೆ ಹೋಲಿಸಿದರೆ 0.1% ಇಳಿಕೆಯಾಗಿದೆ. ಹಿಂದಿನ ನವೆಂಬರ್, ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ಕಂಡ ತುಸು ಏರಿಕೆಯ ನಂತರ ಸೂಚ್ಯಂಕದಲ್ಲಿ ಇಳಿಕೆಯಾಗಿದೆ. ಇತ್ತೀಚಿನ ಅವಧಿಯಲ್ಲಿ ಕೈಗಾರಿಕಾ ಬೆಳವಣಿಗೆ ಮಂದವಾಗುತ್ತಿದೆ ಎಂಬ ಅಂಶವನ್ನು ಈ ಅಂಕಿಗಳು ಗಟ್ಟಿಯಾಗಿಯೇ ದೃಢಪಡಿಸುತ್ತವೆ.

ಈ ಸೂಚ್ಯಂಕದಲ್ಲಿ, 77.6 ಗಣನೆ ಹೊಂದಿರುವ ತಯಾರಿಕಾ ವಲಯದ ಬೆಳವಣಿಗೆಯು 2019ರ ಮಾರ್ಚ್‌ನಲ್ಲಿ ಅದರ ಹಿಂದಿನ ಮಾರ್ಚ್‌ಗೆ ಹೋಲಿಸಿದರೆ 0.4% ಇಳಿದಿದೆ. ತಯಾರಿಕಾ ವಲಯದ ಉಪ ವಿಭಾಗಗಳಾದ ಮೂಲ ವಸ್ತುಗಳ ಉತ್ಪಾದನೆಯಲ್ಲಿ 8.7%ಗೃಹ ಬಳಕೆ ವಸ್ತುಗಳ ಉತ್ಪಾದನೆಯಲ್ಲಿ 5.1%,ಮಧ್ಯವರ್ತಿ ವಸ್ತುಗಳ ಉತ್ಪಾದನೆಯಲ್ಲಿ 2.5%ಇಳಿಕೆಯಾಗಿದೆ ಮತ್ತು ಗೃಹ ಬಳಕೆಯೇತರ ವಸ್ತುಗಳ ಉತ್ಪಾದನೆಯಲ್ಲಿ 0.3% ಏರಿಕೆಯಾಗಿದೆ. ಇಡೀ 2018-19 ವರ್ಷದಲ್ಲಿ ಒಟ್ಟಾರೆ ಆಗಿರುವ 3.6% ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಅದರ ಹಿಂದಿನ 2017-18 ವರ್ಷದಲ್ಲಿದ್ದ 4.4% ಬೆಳವಣಿಗೆಗಿಂತಲೂ ಕಡಿಮೆ ಇದೆ. ಹಾಗಾಗಿ, 2018-19 ವರ್ಷದ ಕೊನೆಯ ತಿಂಗಳುಗಳಲ್ಲಿ ಆರ್ಥಿಕ ಹಿಂಜರಿತ ಬಲಿಯಲಾರಂಭಿಸಿತು.

ಒಂದು ರೀತಿಯಲ್ಲಿ ಈ ಹಿಂಜರಿತವು ಅನಿವಾರ್ಯವೇ. ಏಕೆಂದರೆ, ಭಾರತದ ಅರ್ಥವ್ಯವಸ್ಥೆಯು, ವಿಶ್ವದ ಇತರ ಅರ್ಥವ್ಯವಸ್ಥೆಗಳಂತಲ್ಲದೆ, ತ್ರಿಶಂಕು ಸ್ಥಿತಿಗೊಳಗಾಗಿದೆ. ಇದು, ರೋಗ ತಟ್ಟಿದೆ ಎಂಬುದರ ಒಂದು ಸೂಚನೆ. ನವ ಉದಾರವಾದವೇ ಅವಸಾನದ ಅಂಚಿನಲ್ಲಿದೆ. ಅದರ ಹಿಡಿತಕ್ಕೆ ಒಳಪಟ್ಟಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಹಾಲಿ ಪರಿಸ್ಥಿತಿಯನ್ನು ಬದಲಿಸುವಂತಹ ಆಂತರಿಕ ಮಾರುಕಟ್ಟೆ ಆಧರಿತ ಯಾವ ಬದಲಿ ಆರ್ಥಿಕ ಆಳ್ವಿಕೆವೂ ಮುಂದೆ ಬರುತ್ತಿಲ್ಲ. ಹಾಗಾಗಿ, ಭಾರತದ ಅರ್ಥವ್ಯವಸ್ಥೆಯು ಒಂದು ತ್ರಿಶಂಕು ಸ್ಥಿತಿಯಲ್ಲಿದೆ.

ಜಾಗತಿಕ ಅರ್ಥವ್ಯವಸ್ಥೆಯ ಮಂದಗತಿಯ ಪರಿಣಾಮವಾಗಿ ಭಾರತ ಮತ್ತು ಚೀನಾದಂತಹ ಅರ್ಥವ್ಯವಸ್ಥೆಗಳು ಈಗ ನಲುಗುತ್ತಿವೆ. ಈ ದೇಶಗಳ ರಫ್ತು ದರಗಳು ಇಳಿಮುಖವಾಗುತ್ತಿವೆ. ರಫ್ತುಗಳ ಈ ಇಳಿಕೆಯನ್ನು ಸರಿದೂಗಿಸಿಕೊಳ್ಳಲು ಬೇಕಾಗುವ ಮಟ್ಟದಲ್ಲಿ ಆಂತರಿಕ ಮಾರುಕಟ್ಟೆಗಳನ್ನು ಬೆಳೆಸುವ ಕ್ರಮಗಳನ್ನೇ ದೇಶದಲ್ಲಿ ಕೈಗೊಂಡಿಲ್ಲ. ಹಾಗಾಗಿ, ದೇಶದ ಆಂತರಿಕ ಮಾರುಕಟ್ಟೆಯೂ ಕುಗ್ಗುತ್ತಿದೆ.

ಗ್ರಾಮೀಣ ಪರಿಸ್ಥಿತಿಯ ಯಾತನಾಮಯ ಕಾರಣದಿಂದಾಗಿ ಮತ್ತು ರಫ್ತು ದರ ಇಳಿಕೆಯ ಅಡ್ಡ ಪರಿಣಾಮಗಳ ಕಾರಣಗಳಿಂದಾಗಿ ಕೈಗಾರಿಕಾ ಬೆಳವಣಿಗೆ ಕುಂಠಿತವಾಗಿದೆ. ಜೊತೆಗೆ, ವಸೂಲಾಗದ ಸಾಲಗಳು ಹೆಚ್ಚಿದ ಕಾರಣದಿಂದಾಗಿ ಹೊಸ ಸಾಲಗಳು ದುರ್ಲಭವಾಗುತ್ತಿವೆ. ಇದರಿಂದಾಗಿ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಖರ್ಚು ಮಾಡುವುದು ಸಾಧ್ಯವಾಗುತ್ತಿಲ್ಲ. ಅಂದರೆ, ರಫ್ತುಗಳ ಇಳಿಕೆಯು, ಅದನ್ನು ಸರಿದೂಗಿಸಿಕೊಳ್ಳುವ ಮಾತು ಒತ್ತಟ್ಟಿಗಿರಲಿ, ದೇಶದ ಆಂತರಿಕ ಮಾರುಕಟ್ಟೆಯ ಕುಗ್ಗುವಿಕೆಗೂ ಕಾರಣವಾಗಿದೆ.

ಗೃಹ ಬಳಕೆ ವಸ್ತುಗಳ ತಯಾರಿಕೆ ಕುಗ್ಗುತ್ತಿರುವ ಅಂಶವು ದೇಶದ ಆಂತರಿಕ ಮಾರುಕಟ್ಟೆ ಕುಗ್ಗಿರುವ ಅಂಶವನ್ನು ಸ್ಪಷ್ಟಪಡಿಸುತ್ತದೆ. ಮತ್ತು, ಗೃಹ ಬಳಕೆಯೇತರ ವಸ್ತುಗಳ ಉತ್ಪಾದನಾ ವಲಯವು ಎಪ್ರಿಲ್‌ನಲ್ಲಿ ಅದರ ಹಿಂದಿನ ಎಪ್ರಿಲ್‌ಗೆ ಹೋಲಿಸಿದರೆ ಸ್ಥಗಿತವಾಗಿತ್ತು. ಅರ್ಥವ್ಯವಸ್ಥೆಯಲ್ಲಿ ಹೂಡಿಕೆ ಇಳಿಯುತ್ತಿದೆ ಎಂಬುದನ್ನು ಅದಾಗಲೇ ಫೆಬ್ರವರಿಯಲ್ಲಿಯೇ ಮೂಲ ಸರಕು ಉತ್ಪಾದನಾ ವಲಯವು ಸ್ಥಗಿತಗೊಂಡಿದ್ದ ಪರಿಸ್ಥಿತಿಯೇ ಸೂಚಿಸುತ್ತದೆ.

ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಎರಡು ಬಾರಿ, ಪ್ರತಿ ಸಲವೂ 25 ಮೂಲಾಂಶದಷ್ಟು (ಅಂದರೆ, ಒಟ್ಟು 0.5%) ಬಡ್ಡಿ ದರ ಇಳಿಸಿದೆ. ಈ ಕ್ರಮದಿಂದಾಗಿ ಪರಿಸ್ಥಿತಿ ಹೆಚ್ಚು ಸುಧಾರಿಸುವ ಸಂಭವವಿಲ್ಲ. ಏಕೆಂದರೆ, ಸಾಲದ ಮೇಲಿನ ಬಡ್ಡಿ ದರ ಎಷ್ಟು ಎಂಬುದಕ್ಕಿಂತಲೂ ಸಾಲ ಕೊಡಲು ಬ್ಯಾಂಕ್‌ಗಳ ಬಳಿ ಎಷ್ಟು ಹಣ ಲಭ್ಯವಿದೆ ಎಂಬುದೇ ಸಾಲ ಕೊಡುವಿಕೆಯನ್ನು ತಡೆ ಹಿಡಿದಿರುವ ಅಂಶ.

ಹಿಂದಿನ ಸಾಲಗಳು ವಸೂಲಾಗದೇ ಉಳಿದ ಕಾರಣದಿಂದಾಗಿ ಬ್ಯಾಂಕ್‌ಗಳ ಬಳಿ ಹೊಸ ಸಾಲ ಕೊಡಲು ಹಣ ಲಭ್ಯವಿಲ್ಲ. ಒಂದು ವೇಳೆ ಹೊಸ ಸಾಲಗಳು ಲಭ್ಯವಿದ್ದರೂ ಅದರಿಂದ ಪರಿಸ್ಥಿತಿ ಎಷ್ಟರಮಟ್ಟಿಗೆ ಸುಧಾರಿಸುತ್ತಿತ್ತು ಎಂಬುದು ಸ್ಪಷ್ಟವಿಲ್ಲ. ಅದೇನಿದ್ದರೂ, ಸಾಲ ಲಭ್ಯತೆಯೇ ಬಿಗಿತಗೊಂಡಿರುವ ಪರಿಸ್ಥಿತಿಯಲ್ಲಿ ಬಡ್ಡಿ ದರ ಇಳಿಸುವುದರಿಂದಾಗಿ ಸಾಲ ಲಭ್ಯತೆ ಗಣನೀಯ ಎನ್ನುವಷ್ಟು ಹೆಚ್ಚುವುದಿಲ್ಲ.

ಈ ಪರಿಸ್ಥಿತಿಯಲ್ಲಿ ಅಗತ್ಯವಿರುವುದು ಏನೆಂದರೆ, ವಿತ್ತೀಯ ವಿಸ್ತರಣೆ. ಇಡೀ ಈ ವಿಷಯದ ಸಾರಾಂಶ ಇರುವುದು ಇಲ್ಲೇ. ಚುನಾವಣೆಗಳ ಈ ಕಾಲದಲ್ಲಿ, ಗ್ರಾಮೀಣ ಬಡವರಿಗೆ ದೊಡ್ಡ ಮೊತ್ತದ ಹಣವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸುವ ಭರವಸೆಯನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಕೊಟ್ಟಿವೆ. ಈ ಕಾರ್ಯಕ್ರಮವು ಖಂಡಿತವಾಗಿಯೂ ದೇಶದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುತ್ತದೆ ಮತ್ತು ಸೊರಗುತ್ತಿರುವ ಕೈಗಾರಿಕೆಗಳ ಉತ್ಪಾದನೆಗೆ ಚೈತನ್ಯ ತುಂಬುತ್ತದೆ. ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್‌ನಲ್ಲಿ, ಬಡ ಕುಟುಂಬಗಳಿಗೆ ಸೇರಿದ 12 ಕೋಟಿ ವ್ಯಕ್ತಿಗಳಿಗೆ ತಲಾ ವಾರ್ಷಿಕ 6,000 ರೂಗಳನ್ನು ಕೊಡುವುದಾಗಿ ಭರವಸೆ ಕೊಟ್ಟಿತ್ತು. ಕಾಂಗ್ರೆಸ್ ಅದಕ್ಕಿಂತಲೂ ಮುಂದೆ ಹೋಗಿ, ತನ್ನ ನ್ಯಾಯ ಯೋಜನೆಯಡಿಯಲ್ಲಿ, ಐದು ಕೋಟಿ ಬಡ ಕುಟುಂಬಗಳಿಗೆ ತಿಂಗಳಿಗೆ 6,000 ರೂಗಳಂತೆ ವರ್ಷಕ್ಕೆ 72,000 ರೂಗಳನ್ನು ಕೊಡುವುದಾಗಿ ಭರವಸೆ ಕೊಟ್ಟಿತ್ತು.

ಇಂತಹ ಯೋಜನೆಗಳು, ಅದರಲ್ಲೂ ವಿಶೇಷವಾಗಿ ಭಾರೀ ಮಹತ್ವಾಕಾಂಕ್ಷೆಯ ನ್ಯಾಯ ಯೋಜನೆಯು ದೇಶದ ಆಂತರಿಕ ಮಾರುಕಟ್ಟೆಯನ್ನು ಹಿಗ್ಗಿಸುವಲ್ಲಿ ಸಹಾಯವಾಗುತ್ತಿತ್ತು. ಆದರೆ, ಇಂತಹ ಯೋಜನೆಗೆ ಹಣ ಎಲ್ಲಿದೆ ಎಂಬ ಪ್ರಶ್ನೆ ಏಳುತ್ತದೆ. ಶ್ರೀಮಂತರಿಗೆ ತೆರಿಗೆ ವಿಧಿಸುವ ಮೂಲಕ, ಅಂದರೆ ಅವರ ಸಂಪತ್ತಿನ ಮೇಲೆ ತೆರಿಗೆ ಹಾಕುವ ಮೂಲಕ ಈ ಯೋಜನೆಗೆ ಬೇಕಾಗುವಷ್ಟು ಹಣವನ್ನು ಹೊಂದಿಸಿಕೊಳ್ಳಬಹುದು. ಈ ದೇಶದಲ್ಲಿ ಸಂಪತ್ತಿನ ಮೇಲೆ ತೆರಿಗೆಯೇ ಇಲ್ಲ. ಹಿಂದೆ ಇದ್ದ ಇಂತಹ ಒಂದು ಕಾನೂನನ್ನು ಕಿತ್ತುಹಾಕಿ ವರ್ಷಗಳೇ ಕಳೆದಿವೆ.

ಸಂಪತ್ತು ತೆರಿಗೆಯಂತಹ ಒಂದು ಕಾನೂನನ್ನು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಶತಾಯು ಗತಾಯು ವಿರೋಧಿಸುತ್ತದೆ. ನ್ಯಾಯ ಯೋಜನೆಯ ಘೋಷಣೆ ಮಾಡುವಾಗ, ಅದಕ್ಕೆ ಬೇಕಾಗುವ ಹಣ ಹೊಂದಿಸಿಕೊಳ್ಳುವುದು ಕಷ್ಟವಾಗಲಾರದು ಎಂಬ ಬಹಳ ಚಾತುರ್ಯದ ಉತ್ತರ ಕೊಟ್ಟಿದ್ದರು ಮನಮೋಹನ ಸಿಂಗ್. ಆದರೆ, ನವ ಉದಾರ ಆರ್ಥಿಕ ಆಳ್ವಿಕೆಯಲ್ಲಿ ಇಂತಹ ಯೋಜನೆಗೆ ಹಣ ಹೊಂದಿಸಿಕೊಳ್ಳುವುದು ಅತ್ಯಂತ ಕಷ್ಟಕರವಾದ ಕೆಲಸವೇ.

ಅದೇ ರೀತಿಯಲ್ಲಿ ಇಂತಹ ಯೋಜನೆಗೆ ಸರ್ಕಾರವು ವಿತ್ತೀಯ ಕೊರತೆಯ ಮೂಲಕ ಭಾಗಶಃ ಹಣ ಒದಗಿಸಿದರೂ ಅದು ವಿತ್ತೀಯ ಕೊರತೆಯನ್ನು ಹೆಚ್ಚಿಸಿ ಜೊತೆಗೆ, ಈ ಕೊರತೆಯ ಮೇಲೆ ವಿಧಿಸಿರುವ ಮಿತಿಯನ್ನು (ಜಿಡಿಪಿಯ 3.4%) ತಪ್ಪದೇ ಮೀರುತ್ತದೆ. ಆಗ, ಭಾರತದ ಕ್ರೆಡಿಟ್ ರೇಟಿಂಗ್‌ಅನ್ನು ಕೆಳ ದರ್ಜೆಗೆ ಇಳಿಸುವ ಸಂಭವವಿದೆ. ಅಂತಹ ಸಂದರ್ಭದಲ್ಲಿ, ವಿದೇಶ ವ್ಯಾಪಾರದಿಂದ ಉಂಟಾದ ಕೊರತೆಯನ್ನು ತೀರಿಸುವ ಸಲುವಾಗಿ ಚಾಲ್ತಿ ಖಾತೆಯ(ವಿದೇಶಿ ವಿನಿಮಯ) ಕೊರತೆ ತುಂಬಿಸಿಕೊಳ್ಳುವುದು ಭಾರೀ ಕಷ್ಟದ ಕೆಲಸವಾಗುತ್ತದೆ.

ಚಾಲ್ತಿ ಖಾತೆ ಕೊರತೆ ಸಮಸ್ಯೆಯು ಅಮೇರಿಕಾದ ಒತ್ತಾಯಕ್ಕೆ ಕಟ್ಟುಬಿದ್ದು ಮಾರುಕಟ್ಟೆಯ ದೈನಿಕ ದರದಲ್ಲಿ ತೈಲ ಕೊಂಡಾಗಲೂ ಉಂಟಾಗುತ್ತದೆ. ಈಗ ದೇಶವು ಇರಾನಿನಿಂದ ಅಗ್ಗದ ದರದಲ್ಲಿ ತೈಲ ಕೊಳ್ಳುತ್ತಿದೆ, ಬೇರೊಂದು ಕಾರಣದ ಮೇಲೆ, ಇರಾನಿನಿಂದ ತೈಲ ಕೊಳ್ಳಕೂಡದು ಎಂದು ಅಮೇರಿಕಾ ಒತ್ತಾಯಿಸುತ್ತಿದೆ. ಅಮೇರಿಕಾದ ಒತ್ತಡಕ್ಕೆ ಮೋದಿ ಸರ್ಕಾರವು ಈಗಾಗಲೇ ತಲೆಬಾಗಿದೆ. ಅಧಿಕಾರಕ್ಕೆ ಮರಳಿದ ನಂತರವೂ ಇದೇ ನಿಲುವಿಗೆ ಆತುಕೊಳ್ಳುತ್ತದೆ.

ಈಗಾಗಲೇ ಖಚಿತ ಏರು ಮುಖಿಯಾಗಿರುವ ತೈಲ ಬೆಲೆಗಳಿಂದಾಗಿ ಚಾಲ್ತಿ ಖಾತೆಯಲ್ಲಿ ಕೊರತೆ ಹೆಚ್ಚಲಿದೆ. ಇರಾನಿನ ಮೇಲೆ ಅಮೇರಿಕಾ ಹೇರಿರುವ ನಿರ್ಬಂಧಗಳು ಜಾರಿಯಾದಾಗ ಚಾಲ್ತಿ ಖಾತೆಯಲ್ಲಿ ಕೊರತೆ ಮತ್ತಷ್ಟು ಹೆಚ್ಚಲಿದೆ. ಅದರ ಜೊತೆಗೆ ವಿತ್ತೀಯ ಕೊರತೆಯು ಗರಿಷ್ಠ ಮಿತಿಗಿಂತಲೂ ಹೆಚ್ಚಿಗೆ ಇದ್ದರೆ, ಕ್ರೆಡಿಟ್ ರೇಟಿಂಗ್ ಕೆಳ ದರ್ಜೆಗೆ ಇಳಿಯುತ್ತದೆ. ಅದರ ಪರಿಣಾಮವಾಗಿ ಬಂಡವಾಳದ ಒಳಹರಿವೂ ಬತ್ತುತ್ತದೆ. ಆಗ, ಚಾಲ್ತಿ ಖಾತೆ (ವಿದೇಶಿ ವಿನಿಮಯ) ಕೊರತೆ ನಿಭಾಯಿಸುವುದು ವಾಡಿಕೆಯ ಪ್ರಕಾರ ಸಾಧ್ಯವಾಗುವುದಿಲ್ಲ.

ನಾವೀಗ ಒಂದು ವಿಲಕ್ಷಣ ಪರಿಸ್ಥಿತಿಯಲ್ಲಿದ್ದೇವೆ. ಬಲಿಯುತ್ತಿರುವ ಹಿಂಜರಿತವನ್ನು ತಡೆಯಲು ಒಂದು ಕಡೆ ಪ್ರಯತ್ನಿಸಿದರೆ ಚಾಲ್ತಿ ಖಾತೆ ಕೊರತೆ ನಿಭಾಯಿಸುವುದು ಕಷ್ಟವಾಗುತ್ತದೆ. ಇನ್ನೊಂದು ಕಡೆ ಹಿಂಜರಿತವನ್ನು ತಡೆಯುವ ಯಾವ ಪ್ರಯತ್ನವನ್ನೂ ಮಾಡದಿದ್ದರೆ, ಈಗಾಗಲೇ ಭೀಕರವಾಗಿರುವ ನಿರುದ್ಯೋಗವು ಇನ್ನಷ್ಟು ಭೀಕರವಾಗಗುತ್ತದೆ.

ನಿರುದ್ಯೋಗದ ಭೀಕರತೆ ಸಾರ್ವಜನಿಕರ ಗಮನಕ್ಕೆ ಬರದಿರಲಿ ಎಂಬ ದುರುದ್ದೇಶದಿಂದ ಸರ್ಕಾರವು ನಿರುದ್ಯೋಗ ಪರಿಸ್ಥಿತಿಯ ಬಗ್ಗೆ ಯಾವ ಅಂಕಿ ಅಂಶಗಳನ್ನು ಅಧಿಕೃತವಾಗಿ ಪ್ರಕಟಿಸಲು ಎರಡು ವರ್ಷಗಳಿಂದಲೂ ನಿರಾಕರಿಸಿದೆ. ಆದರೆ, ಸರ್ಕಾರದ ಅಂಕಿ ಸಂಖ್ಯೆಗಳ ಸಂಸ್ಥೆಯು ಬಚ್ಚಿಟ್ಟಿದ್ದ ಒಂದು ವರದಿಯು ಸೋರಿಕೆಯಾಗಿದೆ. ಈ ವರದಿಯ ಪ್ರಕಾರ, 6.1%ನಿರುದ್ಯೋಗ ದರ ಏರಿಕೆ ಕಳೆದ 45ವರ್ಷಗಳಲ್ಲೇ ಅತಿ ಹೆಚ್ಚಿನದು.

ಭಾರತದ ಅರ್ಥವ್ಯವಸ್ಥೆಯ ಬೆಳವಣಿಗೆಗಳನ್ನು ಗಮನಿಸುತ್ತಿರುವ ಸಿಎಂಐಇ ಸಂಸ್ಥೆಯ ಪ್ರಕಾರ 2019ರ ಎಪ್ರಿಲ್‌ನಲ್ಲಿ ನಿರುದ್ಯೋಗ ದರ 7.6% ಇತ್ತು. ನಿರುದ್ಯೋಗ ದರವು ನಿರುದ್ಯೋಗದ ಏರಿಕೆ ಅಥವಾ ಇಳಿಕೆಯ ದಿಕ್ಕನ್ನು ಸೂಚಿಸುತ್ತದೆಯಲ್ಲದೆ ಅದರ ಅಗಾಧತೆಯನ್ನು ತೋರಿಸುವುದಿಲ್ಲ. ಏಕೆಂದರೆ, ಉದ್ಯೋಗಗಳ ಹರವು ಏಕ ರೂಪದಲ್ಲಿಲ್ಲ. ಎಲ್ಲೋ ಕೆಲವರು ಪೂರ್ಣಾವಧಿ ಉದ್ಯೋಗದಲ್ಲಿದ್ದರೆ, ಹೆಚ್ಚಿನ ಮಂದಿ ಅರೆ ಕಾಲಿಕ ಉದ್ಯೋಗದಲ್ಲಿದ್ದಾರೆ, ಉಳಿದವರು ಪೂರಾ ನಿರುದ್ಯೋಗಿಗಳು.

ಆದ್ದರಿಂದ, ಸರ್ಕಾರವು ನಿರುದ್ಯೋಗ ಪರಿಸ್ಥಿತಿಯನ್ನು ತಕ್ಕಮಟ್ಟಿಗಾದರೂ ಸುಧಾರಿಸುವ ಕೆಲಸ ಮಾಡಬೇಕು. ಆದರೆ, ಈ ನಿಟ್ಟಿನಲ್ಲಿ ಏನು ಮಾಡಲು ಹೊರಟರೂ, ನವ ಉದಾರ ಮಾದರಿಯ ಆರ್ಥಿಕ ಆಳ್ವಿಕೆಯ ಸಂದರ್ಭದಲ್ಲಿ, ಅದು ವಿದೇಶ ವ್ಯಾಪಾರದ ಬಾಕಿ ಚುಕ್ತಾ (ಪಾವತಿ ಶೇಷ) ಪರಿಸ್ಥಿತಿಯನ್ನು ಅಸ್ಥಿರಗೊಳಿಸುತ್ತದೆ. ಮಾಡಿದ್ದುಣ್ಣೋ ಮಹರಾಯ ಎಂಬಂತಾಗಿದೆ ನವ ಉದಾರ ಆರ್ಥಿಕ ಮಾದರಿಯ ಪರಿಸ್ಥಿತಿ.

ನವ ಉದಾರವಾದವೇ ತನ್ನ ಅಂತ್ಯವನ್ನು ತಲುಪಿರುವ ಪರಿಸ್ಥಿತಿಯಲ್ಲಿ ಅದರ ಹಿಡಿತದಿಂದ ಕಳಚಿಕೊಳ್ಳುವ ಒಂದು ಅವಕಾಶವಿದೆ. ವಿದೇಶ ವ್ಯಾಪಾರ ಮತ್ತು ಬಂಡವಾಳದ ಹರಿವಿನ ಮೇಲೆ ನಿಯಂತ್ರಣ ಹೇರುವ ಮೂಲಕ ನವ ಉದಾರವಾದದ ಹಿಡಿತದಿಂದ ಕಳಚಿಕೊಳ್ಳುವ ಅವಕಾಶವನ್ನು ಸದುಪಯೋಗಿಸಿ ಕೊಳ್ಳಬಹುದು. ಅಮೇರಿಕಾ ಈಗಾಗಲೇ ವಿದೇಶ ವ್ಯಾಪಾರದ ಮೇಲೆ ನಿಯಂತ್ರಣ ಹೇರಿದೆ.

ಭಾರತವೂ ಅದನ್ನು ಅನುಸರಿಸಬಹುದಿತ್ತು. ಅಂತಹ ಒಂದು ತೀರ್ಮಾನ ಕೈಗೊಂಡಾಗ, ಸಂಪತ್ತು ತೆರಿಗೆ ಮತ್ತು ಅನುವಂಶಿಕ ಆಸ್ತಿ ತೆರಿಗೆ ವಿಧಿಸುವುದು ಸಾಧ್ಯವಾಗುತ್ತಿತ್ತು. ಅಂತಹ ಪರಿಸ್ಥಿತಿಯಲ್ಲಿ, ಚುನಾವಣೆಗಳ ಸಮಯದಲ್ಲಿ ಗ್ರಾಮೀಣ ಬಡವರಿಗೆ ದೊಡ್ಡ ಮೊತ್ತದ ಹಣವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸುವುದಾಗಿ ಕೊಟ್ಟಿದ್ದ ಭರವಸೆಯನ್ನು ಈಡೇರಿಸುವುದು ಸಾಧ್ಯವಿತ್ತು. ವರ್ಗಾವಣೆಯ ಈ ಕಾರ್ಯಕ್ರಮವು ಖಂಡಿತವಾಗಿಯೂ ದೇಶದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುತ್ತಿತ್ತು. ತರುವಾಯ ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವ ಕ್ರಮ ಕೈಗೊಳ್ಳಬಹುದಿತ್ತು.

ಈ ರೀತಿಯಲ್ಲಿ ನೀತಿಗಳನ್ನು ಬದಲಾಯಿಸಿಕೊಂಡಿದ್ದರೆ, ಬಂಡವಾಳದ ಒಳ ಹರಿವು ಬತ್ತಿದರೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಏಕೆಂದರೆ, ವಿದೇಶ ವ್ಯಾಪಾರದ ಮೇಲೆ ನಿಯಂತ್ರಣ ಹೇರಿದಾಗ ಚಾಲ್ತಿ ಖಾತೆಯ ಕೊರತೆಯೂ ಹದ್ದುಬಸ್ತಿನಲ್ಲಿರುತ್ತದೆ. ಹಾಗಾಗಿ, ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೂ ಸಮಸ್ಯೆಯಾಗುವುದಿಲ್ಲ.

ಆದರೆ, ನವ ಉದಾರವಾದವು ತನ್ನ ಅಂತ್ಯವನ್ನು ತಲುಪಿದೆ ಎಂಬ ಅರಿವು ಮೋದಿ ಸರ್ಕಾರಕ್ಕೆ ಇದ್ದಂತಿಲ್ಲ. ನವ ಉದಾರವಾದೀ ಸುಧಾರಣೆಗಳ ವಿನ್ಯಾಸಕಾರನಾದ ಕಾಂಗ್ರೆಸ್ ಪಕ್ಷಕ್ಕೆ, ನ್ಯಾಯ ಯೋಜನೆಯ ಬಗ್ಗೆ ಕೊಟ್ಟ ಭರವಸೆಯ ಹೊರತಾಗಿಯೂ, ನವ ಉದಾರವಾದಕ್ಕೆ ಮುಂದಕ್ಕೆ ಸಾಗಲು ದಾರಿ ಕಾಣದಾಗಿರುವಾಗ ಅದನ್ನು ಧಿಕ್ಕರಿಸುವ ನೀತಿಗಳನ್ನು ಅನುಸರಿಸುವ ಧೈರ್ಯವಿಲ್ಲ. ಆದ್ದರಿಂದ, ಕೈಗಾರಿಕಾ ಹಿಂಜರಿತವು ಉಲ್ಬಣಗೊಳ್ಳುವ ಸಂಭವವಿದೆ.

ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ7 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending