Connect with us

ದಿನದ ಸುದ್ದಿ

ಆರ್ಥಿಕ ಹಿಂಜರಿತದ ಬಿರು ಮೋಡಗಳು ದಟ್ಟೈಸುತ್ತಿವೆ

Published

on

  • ನವ ಉದಾರವಾದವೇ ಅವಸಾನದ ಅಂಚಿನಲ್ಲಿದೆ. ಅದರ ಹಿಡಿತಕ್ಕೆ ಒಳಪಟ್ಟಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಹಾಲಿ ಪರಿಸ್ಥಿತಿಯನ್ನು ಬದಲಿಸುವಂತಹ ಆಂತರಿಕ ಮಾರುಕಟ್ಟೆ ಆಧರಿತ ಯಾವ ಬದಲಿ ಆರ್ಥಿಕ ಆಳ್ವಿಕೆವೂ ಮುಂದೆ ಬರುತ್ತಿಲ್ಲ. ಹಾಗಾಗಿ, ಭಾರತದ ಅರ್ಥವ್ಯವಸ್ಥೆಯು ಒಂದು ತ್ರಿಶಂಕು ಸ್ಥಿತಿಯಲ್ಲಿದೆ. ಆದರೆ, ನವ ಉದಾರವಾದವು ತನ್ನ ಅಂತ್ಯವನ್ನು ತಲುಪಿದೆ ಎಂಬ ಅರಿವು ಮೋದಿ ಸರ್ಕಾರಕ್ಕೆ ಇದ್ದಂತಿಲ್ಲ. ನವ ಉದಾರವಾದಕ್ಕೆ ಮುಂದಕ್ಕೆ ಸಾಗಲು ದಾರಿ ಕಾಣದಾಗಿರುವಾಗ ಮೋದಿ ಸರ್ಕಾರಕ್ಕೆ ಅದನ್ನು ಧಿಕ್ಕರಿಸುವ ನೀತಿಗಳನ್ನು ಅನುಸರಿಸುವ ಧೈರ್ಯವಿಲ್ಲ. ಆದ್ದರಿಂದ, ಕೈಗಾರಿಕಾ ಹಿಂಜರಿತವು ಉಲ್ಬಣಗೊಳ್ಳುವ ಸಂಭವವಿದೆ.

ಜೂನ್ 2013 ರ ನಂತರ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕದಲ್ಲಿ ಮೊದಲ ಬಾರಿಗೆ 2019ರ ಮಾರ್ಚ್‌ನಲ್ಲಿ ಅದರ ಹಿಂದಿನ ಮಾರ್ಚ್‌ಗೆ ಹೋಲಿಸಿದರೆ 0.1% ಇಳಿಕೆಯಾಗಿದೆ. ಹಿಂದಿನ ನವೆಂಬರ್, ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ಕಂಡ ತುಸು ಏರಿಕೆಯ ನಂತರ ಸೂಚ್ಯಂಕದಲ್ಲಿ ಇಳಿಕೆಯಾಗಿದೆ. ಇತ್ತೀಚಿನ ಅವಧಿಯಲ್ಲಿ ಕೈಗಾರಿಕಾ ಬೆಳವಣಿಗೆ ಮಂದವಾಗುತ್ತಿದೆ ಎಂಬ ಅಂಶವನ್ನು ಈ ಅಂಕಿಗಳು ಗಟ್ಟಿಯಾಗಿಯೇ ದೃಢಪಡಿಸುತ್ತವೆ.

ಈ ಸೂಚ್ಯಂಕದಲ್ಲಿ, 77.6 ಗಣನೆ ಹೊಂದಿರುವ ತಯಾರಿಕಾ ವಲಯದ ಬೆಳವಣಿಗೆಯು 2019ರ ಮಾರ್ಚ್‌ನಲ್ಲಿ ಅದರ ಹಿಂದಿನ ಮಾರ್ಚ್‌ಗೆ ಹೋಲಿಸಿದರೆ 0.4% ಇಳಿದಿದೆ. ತಯಾರಿಕಾ ವಲಯದ ಉಪ ವಿಭಾಗಗಳಾದ ಮೂಲ ವಸ್ತುಗಳ ಉತ್ಪಾದನೆಯಲ್ಲಿ 8.7%ಗೃಹ ಬಳಕೆ ವಸ್ತುಗಳ ಉತ್ಪಾದನೆಯಲ್ಲಿ 5.1%,ಮಧ್ಯವರ್ತಿ ವಸ್ತುಗಳ ಉತ್ಪಾದನೆಯಲ್ಲಿ 2.5%ಇಳಿಕೆಯಾಗಿದೆ ಮತ್ತು ಗೃಹ ಬಳಕೆಯೇತರ ವಸ್ತುಗಳ ಉತ್ಪಾದನೆಯಲ್ಲಿ 0.3% ಏರಿಕೆಯಾಗಿದೆ. ಇಡೀ 2018-19 ವರ್ಷದಲ್ಲಿ ಒಟ್ಟಾರೆ ಆಗಿರುವ 3.6% ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಅದರ ಹಿಂದಿನ 2017-18 ವರ್ಷದಲ್ಲಿದ್ದ 4.4% ಬೆಳವಣಿಗೆಗಿಂತಲೂ ಕಡಿಮೆ ಇದೆ. ಹಾಗಾಗಿ, 2018-19 ವರ್ಷದ ಕೊನೆಯ ತಿಂಗಳುಗಳಲ್ಲಿ ಆರ್ಥಿಕ ಹಿಂಜರಿತ ಬಲಿಯಲಾರಂಭಿಸಿತು.

ಒಂದು ರೀತಿಯಲ್ಲಿ ಈ ಹಿಂಜರಿತವು ಅನಿವಾರ್ಯವೇ. ಏಕೆಂದರೆ, ಭಾರತದ ಅರ್ಥವ್ಯವಸ್ಥೆಯು, ವಿಶ್ವದ ಇತರ ಅರ್ಥವ್ಯವಸ್ಥೆಗಳಂತಲ್ಲದೆ, ತ್ರಿಶಂಕು ಸ್ಥಿತಿಗೊಳಗಾಗಿದೆ. ಇದು, ರೋಗ ತಟ್ಟಿದೆ ಎಂಬುದರ ಒಂದು ಸೂಚನೆ. ನವ ಉದಾರವಾದವೇ ಅವಸಾನದ ಅಂಚಿನಲ್ಲಿದೆ. ಅದರ ಹಿಡಿತಕ್ಕೆ ಒಳಪಟ್ಟಿರುವ ಭಾರತದ ಅರ್ಥವ್ಯವಸ್ಥೆಯಲ್ಲಿ ಹಾಲಿ ಪರಿಸ್ಥಿತಿಯನ್ನು ಬದಲಿಸುವಂತಹ ಆಂತರಿಕ ಮಾರುಕಟ್ಟೆ ಆಧರಿತ ಯಾವ ಬದಲಿ ಆರ್ಥಿಕ ಆಳ್ವಿಕೆವೂ ಮುಂದೆ ಬರುತ್ತಿಲ್ಲ. ಹಾಗಾಗಿ, ಭಾರತದ ಅರ್ಥವ್ಯವಸ್ಥೆಯು ಒಂದು ತ್ರಿಶಂಕು ಸ್ಥಿತಿಯಲ್ಲಿದೆ.

ಜಾಗತಿಕ ಅರ್ಥವ್ಯವಸ್ಥೆಯ ಮಂದಗತಿಯ ಪರಿಣಾಮವಾಗಿ ಭಾರತ ಮತ್ತು ಚೀನಾದಂತಹ ಅರ್ಥವ್ಯವಸ್ಥೆಗಳು ಈಗ ನಲುಗುತ್ತಿವೆ. ಈ ದೇಶಗಳ ರಫ್ತು ದರಗಳು ಇಳಿಮುಖವಾಗುತ್ತಿವೆ. ರಫ್ತುಗಳ ಈ ಇಳಿಕೆಯನ್ನು ಸರಿದೂಗಿಸಿಕೊಳ್ಳಲು ಬೇಕಾಗುವ ಮಟ್ಟದಲ್ಲಿ ಆಂತರಿಕ ಮಾರುಕಟ್ಟೆಗಳನ್ನು ಬೆಳೆಸುವ ಕ್ರಮಗಳನ್ನೇ ದೇಶದಲ್ಲಿ ಕೈಗೊಂಡಿಲ್ಲ. ಹಾಗಾಗಿ, ದೇಶದ ಆಂತರಿಕ ಮಾರುಕಟ್ಟೆಯೂ ಕುಗ್ಗುತ್ತಿದೆ.

ಗ್ರಾಮೀಣ ಪರಿಸ್ಥಿತಿಯ ಯಾತನಾಮಯ ಕಾರಣದಿಂದಾಗಿ ಮತ್ತು ರಫ್ತು ದರ ಇಳಿಕೆಯ ಅಡ್ಡ ಪರಿಣಾಮಗಳ ಕಾರಣಗಳಿಂದಾಗಿ ಕೈಗಾರಿಕಾ ಬೆಳವಣಿಗೆ ಕುಂಠಿತವಾಗಿದೆ. ಜೊತೆಗೆ, ವಸೂಲಾಗದ ಸಾಲಗಳು ಹೆಚ್ಚಿದ ಕಾರಣದಿಂದಾಗಿ ಹೊಸ ಸಾಲಗಳು ದುರ್ಲಭವಾಗುತ್ತಿವೆ. ಇದರಿಂದಾಗಿ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಖರ್ಚು ಮಾಡುವುದು ಸಾಧ್ಯವಾಗುತ್ತಿಲ್ಲ. ಅಂದರೆ, ರಫ್ತುಗಳ ಇಳಿಕೆಯು, ಅದನ್ನು ಸರಿದೂಗಿಸಿಕೊಳ್ಳುವ ಮಾತು ಒತ್ತಟ್ಟಿಗಿರಲಿ, ದೇಶದ ಆಂತರಿಕ ಮಾರುಕಟ್ಟೆಯ ಕುಗ್ಗುವಿಕೆಗೂ ಕಾರಣವಾಗಿದೆ.

ಗೃಹ ಬಳಕೆ ವಸ್ತುಗಳ ತಯಾರಿಕೆ ಕುಗ್ಗುತ್ತಿರುವ ಅಂಶವು ದೇಶದ ಆಂತರಿಕ ಮಾರುಕಟ್ಟೆ ಕುಗ್ಗಿರುವ ಅಂಶವನ್ನು ಸ್ಪಷ್ಟಪಡಿಸುತ್ತದೆ. ಮತ್ತು, ಗೃಹ ಬಳಕೆಯೇತರ ವಸ್ತುಗಳ ಉತ್ಪಾದನಾ ವಲಯವು ಎಪ್ರಿಲ್‌ನಲ್ಲಿ ಅದರ ಹಿಂದಿನ ಎಪ್ರಿಲ್‌ಗೆ ಹೋಲಿಸಿದರೆ ಸ್ಥಗಿತವಾಗಿತ್ತು. ಅರ್ಥವ್ಯವಸ್ಥೆಯಲ್ಲಿ ಹೂಡಿಕೆ ಇಳಿಯುತ್ತಿದೆ ಎಂಬುದನ್ನು ಅದಾಗಲೇ ಫೆಬ್ರವರಿಯಲ್ಲಿಯೇ ಮೂಲ ಸರಕು ಉತ್ಪಾದನಾ ವಲಯವು ಸ್ಥಗಿತಗೊಂಡಿದ್ದ ಪರಿಸ್ಥಿತಿಯೇ ಸೂಚಿಸುತ್ತದೆ.

ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಎರಡು ಬಾರಿ, ಪ್ರತಿ ಸಲವೂ 25 ಮೂಲಾಂಶದಷ್ಟು (ಅಂದರೆ, ಒಟ್ಟು 0.5%) ಬಡ್ಡಿ ದರ ಇಳಿಸಿದೆ. ಈ ಕ್ರಮದಿಂದಾಗಿ ಪರಿಸ್ಥಿತಿ ಹೆಚ್ಚು ಸುಧಾರಿಸುವ ಸಂಭವವಿಲ್ಲ. ಏಕೆಂದರೆ, ಸಾಲದ ಮೇಲಿನ ಬಡ್ಡಿ ದರ ಎಷ್ಟು ಎಂಬುದಕ್ಕಿಂತಲೂ ಸಾಲ ಕೊಡಲು ಬ್ಯಾಂಕ್‌ಗಳ ಬಳಿ ಎಷ್ಟು ಹಣ ಲಭ್ಯವಿದೆ ಎಂಬುದೇ ಸಾಲ ಕೊಡುವಿಕೆಯನ್ನು ತಡೆ ಹಿಡಿದಿರುವ ಅಂಶ.

ಹಿಂದಿನ ಸಾಲಗಳು ವಸೂಲಾಗದೇ ಉಳಿದ ಕಾರಣದಿಂದಾಗಿ ಬ್ಯಾಂಕ್‌ಗಳ ಬಳಿ ಹೊಸ ಸಾಲ ಕೊಡಲು ಹಣ ಲಭ್ಯವಿಲ್ಲ. ಒಂದು ವೇಳೆ ಹೊಸ ಸಾಲಗಳು ಲಭ್ಯವಿದ್ದರೂ ಅದರಿಂದ ಪರಿಸ್ಥಿತಿ ಎಷ್ಟರಮಟ್ಟಿಗೆ ಸುಧಾರಿಸುತ್ತಿತ್ತು ಎಂಬುದು ಸ್ಪಷ್ಟವಿಲ್ಲ. ಅದೇನಿದ್ದರೂ, ಸಾಲ ಲಭ್ಯತೆಯೇ ಬಿಗಿತಗೊಂಡಿರುವ ಪರಿಸ್ಥಿತಿಯಲ್ಲಿ ಬಡ್ಡಿ ದರ ಇಳಿಸುವುದರಿಂದಾಗಿ ಸಾಲ ಲಭ್ಯತೆ ಗಣನೀಯ ಎನ್ನುವಷ್ಟು ಹೆಚ್ಚುವುದಿಲ್ಲ.

ಈ ಪರಿಸ್ಥಿತಿಯಲ್ಲಿ ಅಗತ್ಯವಿರುವುದು ಏನೆಂದರೆ, ವಿತ್ತೀಯ ವಿಸ್ತರಣೆ. ಇಡೀ ಈ ವಿಷಯದ ಸಾರಾಂಶ ಇರುವುದು ಇಲ್ಲೇ. ಚುನಾವಣೆಗಳ ಈ ಕಾಲದಲ್ಲಿ, ಗ್ರಾಮೀಣ ಬಡವರಿಗೆ ದೊಡ್ಡ ಮೊತ್ತದ ಹಣವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸುವ ಭರವಸೆಯನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಕೊಟ್ಟಿವೆ. ಈ ಕಾರ್ಯಕ್ರಮವು ಖಂಡಿತವಾಗಿಯೂ ದೇಶದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುತ್ತದೆ ಮತ್ತು ಸೊರಗುತ್ತಿರುವ ಕೈಗಾರಿಕೆಗಳ ಉತ್ಪಾದನೆಗೆ ಚೈತನ್ಯ ತುಂಬುತ್ತದೆ. ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್‌ನಲ್ಲಿ, ಬಡ ಕುಟುಂಬಗಳಿಗೆ ಸೇರಿದ 12 ಕೋಟಿ ವ್ಯಕ್ತಿಗಳಿಗೆ ತಲಾ ವಾರ್ಷಿಕ 6,000 ರೂಗಳನ್ನು ಕೊಡುವುದಾಗಿ ಭರವಸೆ ಕೊಟ್ಟಿತ್ತು. ಕಾಂಗ್ರೆಸ್ ಅದಕ್ಕಿಂತಲೂ ಮುಂದೆ ಹೋಗಿ, ತನ್ನ ನ್ಯಾಯ ಯೋಜನೆಯಡಿಯಲ್ಲಿ, ಐದು ಕೋಟಿ ಬಡ ಕುಟುಂಬಗಳಿಗೆ ತಿಂಗಳಿಗೆ 6,000 ರೂಗಳಂತೆ ವರ್ಷಕ್ಕೆ 72,000 ರೂಗಳನ್ನು ಕೊಡುವುದಾಗಿ ಭರವಸೆ ಕೊಟ್ಟಿತ್ತು.

ಇಂತಹ ಯೋಜನೆಗಳು, ಅದರಲ್ಲೂ ವಿಶೇಷವಾಗಿ ಭಾರೀ ಮಹತ್ವಾಕಾಂಕ್ಷೆಯ ನ್ಯಾಯ ಯೋಜನೆಯು ದೇಶದ ಆಂತರಿಕ ಮಾರುಕಟ್ಟೆಯನ್ನು ಹಿಗ್ಗಿಸುವಲ್ಲಿ ಸಹಾಯವಾಗುತ್ತಿತ್ತು. ಆದರೆ, ಇಂತಹ ಯೋಜನೆಗೆ ಹಣ ಎಲ್ಲಿದೆ ಎಂಬ ಪ್ರಶ್ನೆ ಏಳುತ್ತದೆ. ಶ್ರೀಮಂತರಿಗೆ ತೆರಿಗೆ ವಿಧಿಸುವ ಮೂಲಕ, ಅಂದರೆ ಅವರ ಸಂಪತ್ತಿನ ಮೇಲೆ ತೆರಿಗೆ ಹಾಕುವ ಮೂಲಕ ಈ ಯೋಜನೆಗೆ ಬೇಕಾಗುವಷ್ಟು ಹಣವನ್ನು ಹೊಂದಿಸಿಕೊಳ್ಳಬಹುದು. ಈ ದೇಶದಲ್ಲಿ ಸಂಪತ್ತಿನ ಮೇಲೆ ತೆರಿಗೆಯೇ ಇಲ್ಲ. ಹಿಂದೆ ಇದ್ದ ಇಂತಹ ಒಂದು ಕಾನೂನನ್ನು ಕಿತ್ತುಹಾಕಿ ವರ್ಷಗಳೇ ಕಳೆದಿವೆ.

ಸಂಪತ್ತು ತೆರಿಗೆಯಂತಹ ಒಂದು ಕಾನೂನನ್ನು ಅಂತಾರಾಷ್ಟ್ರೀಯ ಹಣಕಾಸು ಬಂಡವಾಳವು ಶತಾಯು ಗತಾಯು ವಿರೋಧಿಸುತ್ತದೆ. ನ್ಯಾಯ ಯೋಜನೆಯ ಘೋಷಣೆ ಮಾಡುವಾಗ, ಅದಕ್ಕೆ ಬೇಕಾಗುವ ಹಣ ಹೊಂದಿಸಿಕೊಳ್ಳುವುದು ಕಷ್ಟವಾಗಲಾರದು ಎಂಬ ಬಹಳ ಚಾತುರ್ಯದ ಉತ್ತರ ಕೊಟ್ಟಿದ್ದರು ಮನಮೋಹನ ಸಿಂಗ್. ಆದರೆ, ನವ ಉದಾರ ಆರ್ಥಿಕ ಆಳ್ವಿಕೆಯಲ್ಲಿ ಇಂತಹ ಯೋಜನೆಗೆ ಹಣ ಹೊಂದಿಸಿಕೊಳ್ಳುವುದು ಅತ್ಯಂತ ಕಷ್ಟಕರವಾದ ಕೆಲಸವೇ.

ಅದೇ ರೀತಿಯಲ್ಲಿ ಇಂತಹ ಯೋಜನೆಗೆ ಸರ್ಕಾರವು ವಿತ್ತೀಯ ಕೊರತೆಯ ಮೂಲಕ ಭಾಗಶಃ ಹಣ ಒದಗಿಸಿದರೂ ಅದು ವಿತ್ತೀಯ ಕೊರತೆಯನ್ನು ಹೆಚ್ಚಿಸಿ ಜೊತೆಗೆ, ಈ ಕೊರತೆಯ ಮೇಲೆ ವಿಧಿಸಿರುವ ಮಿತಿಯನ್ನು (ಜಿಡಿಪಿಯ 3.4%) ತಪ್ಪದೇ ಮೀರುತ್ತದೆ. ಆಗ, ಭಾರತದ ಕ್ರೆಡಿಟ್ ರೇಟಿಂಗ್‌ಅನ್ನು ಕೆಳ ದರ್ಜೆಗೆ ಇಳಿಸುವ ಸಂಭವವಿದೆ. ಅಂತಹ ಸಂದರ್ಭದಲ್ಲಿ, ವಿದೇಶ ವ್ಯಾಪಾರದಿಂದ ಉಂಟಾದ ಕೊರತೆಯನ್ನು ತೀರಿಸುವ ಸಲುವಾಗಿ ಚಾಲ್ತಿ ಖಾತೆಯ(ವಿದೇಶಿ ವಿನಿಮಯ) ಕೊರತೆ ತುಂಬಿಸಿಕೊಳ್ಳುವುದು ಭಾರೀ ಕಷ್ಟದ ಕೆಲಸವಾಗುತ್ತದೆ.

ಚಾಲ್ತಿ ಖಾತೆ ಕೊರತೆ ಸಮಸ್ಯೆಯು ಅಮೇರಿಕಾದ ಒತ್ತಾಯಕ್ಕೆ ಕಟ್ಟುಬಿದ್ದು ಮಾರುಕಟ್ಟೆಯ ದೈನಿಕ ದರದಲ್ಲಿ ತೈಲ ಕೊಂಡಾಗಲೂ ಉಂಟಾಗುತ್ತದೆ. ಈಗ ದೇಶವು ಇರಾನಿನಿಂದ ಅಗ್ಗದ ದರದಲ್ಲಿ ತೈಲ ಕೊಳ್ಳುತ್ತಿದೆ, ಬೇರೊಂದು ಕಾರಣದ ಮೇಲೆ, ಇರಾನಿನಿಂದ ತೈಲ ಕೊಳ್ಳಕೂಡದು ಎಂದು ಅಮೇರಿಕಾ ಒತ್ತಾಯಿಸುತ್ತಿದೆ. ಅಮೇರಿಕಾದ ಒತ್ತಡಕ್ಕೆ ಮೋದಿ ಸರ್ಕಾರವು ಈಗಾಗಲೇ ತಲೆಬಾಗಿದೆ. ಅಧಿಕಾರಕ್ಕೆ ಮರಳಿದ ನಂತರವೂ ಇದೇ ನಿಲುವಿಗೆ ಆತುಕೊಳ್ಳುತ್ತದೆ.

ಈಗಾಗಲೇ ಖಚಿತ ಏರು ಮುಖಿಯಾಗಿರುವ ತೈಲ ಬೆಲೆಗಳಿಂದಾಗಿ ಚಾಲ್ತಿ ಖಾತೆಯಲ್ಲಿ ಕೊರತೆ ಹೆಚ್ಚಲಿದೆ. ಇರಾನಿನ ಮೇಲೆ ಅಮೇರಿಕಾ ಹೇರಿರುವ ನಿರ್ಬಂಧಗಳು ಜಾರಿಯಾದಾಗ ಚಾಲ್ತಿ ಖಾತೆಯಲ್ಲಿ ಕೊರತೆ ಮತ್ತಷ್ಟು ಹೆಚ್ಚಲಿದೆ. ಅದರ ಜೊತೆಗೆ ವಿತ್ತೀಯ ಕೊರತೆಯು ಗರಿಷ್ಠ ಮಿತಿಗಿಂತಲೂ ಹೆಚ್ಚಿಗೆ ಇದ್ದರೆ, ಕ್ರೆಡಿಟ್ ರೇಟಿಂಗ್ ಕೆಳ ದರ್ಜೆಗೆ ಇಳಿಯುತ್ತದೆ. ಅದರ ಪರಿಣಾಮವಾಗಿ ಬಂಡವಾಳದ ಒಳಹರಿವೂ ಬತ್ತುತ್ತದೆ. ಆಗ, ಚಾಲ್ತಿ ಖಾತೆ (ವಿದೇಶಿ ವಿನಿಮಯ) ಕೊರತೆ ನಿಭಾಯಿಸುವುದು ವಾಡಿಕೆಯ ಪ್ರಕಾರ ಸಾಧ್ಯವಾಗುವುದಿಲ್ಲ.

ನಾವೀಗ ಒಂದು ವಿಲಕ್ಷಣ ಪರಿಸ್ಥಿತಿಯಲ್ಲಿದ್ದೇವೆ. ಬಲಿಯುತ್ತಿರುವ ಹಿಂಜರಿತವನ್ನು ತಡೆಯಲು ಒಂದು ಕಡೆ ಪ್ರಯತ್ನಿಸಿದರೆ ಚಾಲ್ತಿ ಖಾತೆ ಕೊರತೆ ನಿಭಾಯಿಸುವುದು ಕಷ್ಟವಾಗುತ್ತದೆ. ಇನ್ನೊಂದು ಕಡೆ ಹಿಂಜರಿತವನ್ನು ತಡೆಯುವ ಯಾವ ಪ್ರಯತ್ನವನ್ನೂ ಮಾಡದಿದ್ದರೆ, ಈಗಾಗಲೇ ಭೀಕರವಾಗಿರುವ ನಿರುದ್ಯೋಗವು ಇನ್ನಷ್ಟು ಭೀಕರವಾಗಗುತ್ತದೆ.

ನಿರುದ್ಯೋಗದ ಭೀಕರತೆ ಸಾರ್ವಜನಿಕರ ಗಮನಕ್ಕೆ ಬರದಿರಲಿ ಎಂಬ ದುರುದ್ದೇಶದಿಂದ ಸರ್ಕಾರವು ನಿರುದ್ಯೋಗ ಪರಿಸ್ಥಿತಿಯ ಬಗ್ಗೆ ಯಾವ ಅಂಕಿ ಅಂಶಗಳನ್ನು ಅಧಿಕೃತವಾಗಿ ಪ್ರಕಟಿಸಲು ಎರಡು ವರ್ಷಗಳಿಂದಲೂ ನಿರಾಕರಿಸಿದೆ. ಆದರೆ, ಸರ್ಕಾರದ ಅಂಕಿ ಸಂಖ್ಯೆಗಳ ಸಂಸ್ಥೆಯು ಬಚ್ಚಿಟ್ಟಿದ್ದ ಒಂದು ವರದಿಯು ಸೋರಿಕೆಯಾಗಿದೆ. ಈ ವರದಿಯ ಪ್ರಕಾರ, 6.1%ನಿರುದ್ಯೋಗ ದರ ಏರಿಕೆ ಕಳೆದ 45ವರ್ಷಗಳಲ್ಲೇ ಅತಿ ಹೆಚ್ಚಿನದು.

ಭಾರತದ ಅರ್ಥವ್ಯವಸ್ಥೆಯ ಬೆಳವಣಿಗೆಗಳನ್ನು ಗಮನಿಸುತ್ತಿರುವ ಸಿಎಂಐಇ ಸಂಸ್ಥೆಯ ಪ್ರಕಾರ 2019ರ ಎಪ್ರಿಲ್‌ನಲ್ಲಿ ನಿರುದ್ಯೋಗ ದರ 7.6% ಇತ್ತು. ನಿರುದ್ಯೋಗ ದರವು ನಿರುದ್ಯೋಗದ ಏರಿಕೆ ಅಥವಾ ಇಳಿಕೆಯ ದಿಕ್ಕನ್ನು ಸೂಚಿಸುತ್ತದೆಯಲ್ಲದೆ ಅದರ ಅಗಾಧತೆಯನ್ನು ತೋರಿಸುವುದಿಲ್ಲ. ಏಕೆಂದರೆ, ಉದ್ಯೋಗಗಳ ಹರವು ಏಕ ರೂಪದಲ್ಲಿಲ್ಲ. ಎಲ್ಲೋ ಕೆಲವರು ಪೂರ್ಣಾವಧಿ ಉದ್ಯೋಗದಲ್ಲಿದ್ದರೆ, ಹೆಚ್ಚಿನ ಮಂದಿ ಅರೆ ಕಾಲಿಕ ಉದ್ಯೋಗದಲ್ಲಿದ್ದಾರೆ, ಉಳಿದವರು ಪೂರಾ ನಿರುದ್ಯೋಗಿಗಳು.

ಆದ್ದರಿಂದ, ಸರ್ಕಾರವು ನಿರುದ್ಯೋಗ ಪರಿಸ್ಥಿತಿಯನ್ನು ತಕ್ಕಮಟ್ಟಿಗಾದರೂ ಸುಧಾರಿಸುವ ಕೆಲಸ ಮಾಡಬೇಕು. ಆದರೆ, ಈ ನಿಟ್ಟಿನಲ್ಲಿ ಏನು ಮಾಡಲು ಹೊರಟರೂ, ನವ ಉದಾರ ಮಾದರಿಯ ಆರ್ಥಿಕ ಆಳ್ವಿಕೆಯ ಸಂದರ್ಭದಲ್ಲಿ, ಅದು ವಿದೇಶ ವ್ಯಾಪಾರದ ಬಾಕಿ ಚುಕ್ತಾ (ಪಾವತಿ ಶೇಷ) ಪರಿಸ್ಥಿತಿಯನ್ನು ಅಸ್ಥಿರಗೊಳಿಸುತ್ತದೆ. ಮಾಡಿದ್ದುಣ್ಣೋ ಮಹರಾಯ ಎಂಬಂತಾಗಿದೆ ನವ ಉದಾರ ಆರ್ಥಿಕ ಮಾದರಿಯ ಪರಿಸ್ಥಿತಿ.

ನವ ಉದಾರವಾದವೇ ತನ್ನ ಅಂತ್ಯವನ್ನು ತಲುಪಿರುವ ಪರಿಸ್ಥಿತಿಯಲ್ಲಿ ಅದರ ಹಿಡಿತದಿಂದ ಕಳಚಿಕೊಳ್ಳುವ ಒಂದು ಅವಕಾಶವಿದೆ. ವಿದೇಶ ವ್ಯಾಪಾರ ಮತ್ತು ಬಂಡವಾಳದ ಹರಿವಿನ ಮೇಲೆ ನಿಯಂತ್ರಣ ಹೇರುವ ಮೂಲಕ ನವ ಉದಾರವಾದದ ಹಿಡಿತದಿಂದ ಕಳಚಿಕೊಳ್ಳುವ ಅವಕಾಶವನ್ನು ಸದುಪಯೋಗಿಸಿ ಕೊಳ್ಳಬಹುದು. ಅಮೇರಿಕಾ ಈಗಾಗಲೇ ವಿದೇಶ ವ್ಯಾಪಾರದ ಮೇಲೆ ನಿಯಂತ್ರಣ ಹೇರಿದೆ.

ಭಾರತವೂ ಅದನ್ನು ಅನುಸರಿಸಬಹುದಿತ್ತು. ಅಂತಹ ಒಂದು ತೀರ್ಮಾನ ಕೈಗೊಂಡಾಗ, ಸಂಪತ್ತು ತೆರಿಗೆ ಮತ್ತು ಅನುವಂಶಿಕ ಆಸ್ತಿ ತೆರಿಗೆ ವಿಧಿಸುವುದು ಸಾಧ್ಯವಾಗುತ್ತಿತ್ತು. ಅಂತಹ ಪರಿಸ್ಥಿತಿಯಲ್ಲಿ, ಚುನಾವಣೆಗಳ ಸಮಯದಲ್ಲಿ ಗ್ರಾಮೀಣ ಬಡವರಿಗೆ ದೊಡ್ಡ ಮೊತ್ತದ ಹಣವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸುವುದಾಗಿ ಕೊಟ್ಟಿದ್ದ ಭರವಸೆಯನ್ನು ಈಡೇರಿಸುವುದು ಸಾಧ್ಯವಿತ್ತು. ವರ್ಗಾವಣೆಯ ಈ ಕಾರ್ಯಕ್ರಮವು ಖಂಡಿತವಾಗಿಯೂ ದೇಶದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುತ್ತಿತ್ತು. ತರುವಾಯ ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವ ಕ್ರಮ ಕೈಗೊಳ್ಳಬಹುದಿತ್ತು.

ಈ ರೀತಿಯಲ್ಲಿ ನೀತಿಗಳನ್ನು ಬದಲಾಯಿಸಿಕೊಂಡಿದ್ದರೆ, ಬಂಡವಾಳದ ಒಳ ಹರಿವು ಬತ್ತಿದರೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಏಕೆಂದರೆ, ವಿದೇಶ ವ್ಯಾಪಾರದ ಮೇಲೆ ನಿಯಂತ್ರಣ ಹೇರಿದಾಗ ಚಾಲ್ತಿ ಖಾತೆಯ ಕೊರತೆಯೂ ಹದ್ದುಬಸ್ತಿನಲ್ಲಿರುತ್ತದೆ. ಹಾಗಾಗಿ, ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೂ ಸಮಸ್ಯೆಯಾಗುವುದಿಲ್ಲ.

ಆದರೆ, ನವ ಉದಾರವಾದವು ತನ್ನ ಅಂತ್ಯವನ್ನು ತಲುಪಿದೆ ಎಂಬ ಅರಿವು ಮೋದಿ ಸರ್ಕಾರಕ್ಕೆ ಇದ್ದಂತಿಲ್ಲ. ನವ ಉದಾರವಾದೀ ಸುಧಾರಣೆಗಳ ವಿನ್ಯಾಸಕಾರನಾದ ಕಾಂಗ್ರೆಸ್ ಪಕ್ಷಕ್ಕೆ, ನ್ಯಾಯ ಯೋಜನೆಯ ಬಗ್ಗೆ ಕೊಟ್ಟ ಭರವಸೆಯ ಹೊರತಾಗಿಯೂ, ನವ ಉದಾರವಾದಕ್ಕೆ ಮುಂದಕ್ಕೆ ಸಾಗಲು ದಾರಿ ಕಾಣದಾಗಿರುವಾಗ ಅದನ್ನು ಧಿಕ್ಕರಿಸುವ ನೀತಿಗಳನ್ನು ಅನುಸರಿಸುವ ಧೈರ್ಯವಿಲ್ಲ. ಆದ್ದರಿಂದ, ಕೈಗಾರಿಕಾ ಹಿಂಜರಿತವು ಉಲ್ಬಣಗೊಳ್ಳುವ ಸಂಭವವಿದೆ.

ಪ್ರೊ. ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

Published

on

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ.

ಈ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು

ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್‌ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.

ವಿವಿಧ ಸೌಲಭ್ಯಗಳ ವಿತರಣೆ

ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.

ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 20 ಪ್ರಕರಣ ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ...

ದಿನದ ಸುದ್ದಿ10 hours ago

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು,...

ದಿನದ ಸುದ್ದಿ1 day ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ1 day ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ2 days ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ2 days ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ2 days ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ3 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

ದಿನದ ಸುದ್ದಿ3 days ago

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್...

ದಿನದ ಸುದ್ದಿ3 days ago

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‍ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ...

Trending