Connect with us

ರಾಜಕೀಯ

ನೀತಿ ನಿರೂಪಣೆಯ ಹೆದ್ದಾರಿ

Published

on

ರ್ಕಾರವನ್ನು ಪ್ರತಿನಿಧಿಸುವವರು ನೀತಿ ನಿರೂಪಣೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದರ ಆಧಾರದಲ್ಲಿ ಚುನಾವಣೆಯ ಸಂವಾದಗಳು ನಡೆಯಬೇಕು. ಲೋಕಸಭೆ ಅಥವಾ ವಿಧಾನಸಭೆ ಸೇರಿದಂತೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಚುನಾವಣೆ ನಡೆದಾಗ ಅಧಿಕಾರಾವಧಿಯಲ್ಲಿ ರೂಪಿತವಾದ ನೀತಿಗಳು ಎಂಥವು ಮತ್ತು ಅವುಗಳನ್ನು ಅನುಷ್ಠಾನಗೊಳಿಸಿದಾಗ ಉಂಟಾದ ಪರಿಣಾಮಗಳೇನೇನು ಎಂಬ ಆಯಾಮದಲ್ಲಿ ಚರ್ಚೆಗಳಾಗಬೇಕು. ಆ ತರಹದ ಚರ್ಚೆಗಳಾದಾಗ ಅಧಿಕಾರರೂಢರು ಮತ್ತು ಪ್ರತಿಪಕ್ಷಗಳನ್ನು ಪ್ರತಿನಿಧಿಸುವವರು ಪ್ರಜಾಪ್ರಭುತ್ವ ನಿರೀಕ್ಷಿಸುವ ಗುರಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಅಂಥ ಗುರಿಯನ್ನೇ ಕೇಂದ್ರೀಕರಿಸಿಕೊಂಡು ಮುನ್ನಡೆಯುವ ಅವರ ನಿಲುವುಗಳ ತಾತ್ವಿಕತೆಯು ಸರಿಯಾದ ಮಾರ್ಗದಲ್ಲಿಯೇ ಅವರು ಹೆಜ್ಜೆಯಿರಿಸುವಂತೆ ಪ್ರೇರಣೆ ನೀಡುತ್ತದೆ. ಈ ರೀತಿಯ ಅವಲೋಕನ ಮತ್ತು ವಿಮರ್ಶಾತ್ಮಕ ಮಾದರಿಯ ನೋಟಗಳು ಚುನಾವಣಾಪೂರ್ವ, ಚುನಾವಣಾ ನಂತರ ಮತ್ತು ಸರ್ಕಾರದ ಅಧಿಕಾರಾವಧಿಯ ಅಷ್ಟೂ ದಿನಗಳ ಕಾಲ ವ್ಯಕ್ತವಾಗುತ್ತಲೇ ಇರಬೇಕಾಗುತ್ತದೆ. ಇವುಗಳನ್ನು ನಿರಂತರವಾಗಿರಿಸುವಂಥ ಬದ್ಧತೆಯನ್ನು ಸರ್ಕಾರವನ್ನು ಪ್ರತಿನಿಧಿಸುವವರು ಮತ್ತು ಪ್ರತಿಪಕ್ಷಗಳಲ್ಲಿರುವವರು ತೋರಬೇಕಾಗುತ್ತದೆ.

ಬದ್ಧತೆಗೆ ತದ್ವಿರುದ್ಧದ ವಾತಾವರಣ

ಭಾರತದಲ್ಲಿ ಚುನಾವಣಾ ರಾಜಕಾರಣವು ಅಂಥ ಬದ್ಧತೆಗೆ ತದ್ವಿರುದ್ಧವಾದ ವಾತಾವರಣವನ್ನು ಸೃಷ್ಟಿಸಿದೆ. ಸಂವಾದವನ್ನು ಕಟ್ಟುವುದರ ಬದಲು ಅತಾರ್ಕಿಕ ವಾಗ್ವಾದಗಳನ್ನು ಹುಟ್ಟುಹಾಕುವುದರ ಕಡೆಗೇ ಅದರ ಗಮನವಿದೆ. ಅಧಿಕಾರ ಪಡೆಯಲೇಬೇಕು ಎಂಬ ಹಂಬಲ ಮತ್ತು ಹಠಗಳು ಸಂವಾದದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತವೆ. ಜನಪರ ನೀತಿ ನಿರೂಪಣೆಯ ಜವಾಬ್ದಾರಿಯುತ ಐಡೆಂಟಿಟಿಗಿಂತಲೂ ಕೀಳು ಅಭಿಪ್ರಾಯಗಳೊಂದಿಗಿನ ಮನಸ್ಥಿತಿಯನ್ನು ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತವೆ. ಹಾಗಾಗಿ ಸದ್ಯದ ಅಗತ್ಯಗಳಿಗೆ ಸ್ಪಂದಿಸುವಂಥ ಮತ್ತು ಆ ಮೂಲಕ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ನೆರವಾಗುವ ನೀತಿಗಳು ರೂಪುಗೊಳ್ಳುವುದೇ ಇಲ್ಲ. ಅಂಥ ನೀತಿಗಳು ರೂಪುಗೊಳ್ಳುವುದಕ್ಕೆ ಬೇಕಾದ ಒತ್ತಡವನ್ನು ಹಾಕಬೇಕಾದ ಜನಸಮೂಹವೂ ಅದೇ ನಿರೀಕ್ಷೆಗಳೊಂದಿಗೆ ಯೋಚಿಸುವುದೇ ಇಲ್ಲ. ಒಂದು ವೇಳೆ ಜನಸಮೂಹ ಯೋಚನೆಯ ಹಾದಿ ತುಳಿದರೂ ರಾಜಕಾರಣ ಎಚ್ಚೆತ್ತುಕೊಂಡು ಅದರ ದಿಕ್ಕನ್ನೇ ಬದಲಿಸಿ ನಿರ್ದಿಷ್ಟ ವಿದ್ಯಮಾನಕೇಂದ್ರಿತ ಅಂಶವನ್ನು ಮುನ್ನೆಲೆಗೆ ತಂದು ತನ್ನ ಸಂಕುಚಿತ ಉದ್ದೇಶವನ್ನು ಈಡೇರಿಸಿಕೊಂಡುಬಿಡುತ್ತದೆ.

ನೀತಿಯ ನಿಖರ ವ್ಯಾಖ್ಯಾನ

ಅಧಿಕಾರರೂಢ ರಾಜಕಾರಣ ಮತ್ತು ಪ್ರತಿಪಕ್ಷಗಳ ರಾಜಕಾರಣ ಇಂಥ ಸಂಕುಚಿತ ಉದ್ದೇಶಗಳನ್ನೇಮುಖ್ಯವಾಗಿಸಿಕೊಳ್ಳುವುದರಿಂದ ದೇಶದ ಅಗತ್ಯಗಳನ್ನು ದೃಷ್ಟಿಯಲ್ಲಿರಿಸಿಕೊಂಡ ನೀತಿಯ ಕುರಿತಾದ ಸ್ಪಷ್ಟತೆಯನ್ನು ಹೊಂದಿರುವುದಿಲ್ಲ. ನೀತಿಯ ನಿಖರ ವ್ಯಾಖ್ಯಾನವನ್ನು ನೆಚ್ಚಿಕೊಳ್ಳುವುದಿಲ್ಲ. ಯಾವುದೇ ಆಡಳಿತವು ವರ್ತಮಾನಕ್ಕೆ ಸ್ಪಂದಿಸಿ ಭವಿಷ್ಯವನ್ನೂ ಉಜ್ವಲಗೊಳಿಸುವುದಕ್ಕೆ ತನ್ನದೇ ಆದ ನೀತಿ ಮಾದರಿಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. ನೀತಿ ರೂಪಿಸುವ ಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸುವ ಆಡಳಿತ ಮತ್ತು ಮೌಲಿಕ ರಾಜಕಾರಣ ಅಸ್ತಿತ್ವದಲ್ಲಿರುವ ಸಮಾಜವು ಸ್ಥಗಿತಗೊಳ್ಳುವುದಿಲ್ಲ. ಅದು ಬದಲಾಗುತ್ತಲೇ ಸಕಾಲಿಕ ನೀತಿಗಳಿಗೆ ಅವಕಾಶಯವೀಯುತ್ತದೆ. ಹೊಸ ಪೀಳಿಗೆಯೂ ನೀತಿನಿರೂಪಣೆಯ ಹೆಜ್ಜೆಗಳು ಹೇಗಿರಬೇಕು ಎಂಬುದನ್ನು ಚಿಂತನೆಯ ಒರೆಗಲ್ಲಿಗೆ ಹಚ್ಚಿ ಯೋಚಿಸುತ್ತದೆ. ಅದೇ ಚಿಂತನೆಯು ಆಡಳಿತದ್ದೂ ಆಗಬೇಕು ಎಂಬ ನಿರೀಕ್ಷೆಯಲ್ಲಿ ದೇಶದ ಉಜ್ವಲ ಭವಿಷ್ಯಕ್ಕೆ ಬೇಕಾಗುವ ಸಂವಾದದ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತದೆ. ಹಾಗಾದಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳವರು ಭಿನ್ನವಾಗಿ ಯೋಚಿಸಲಾರಂಭಿಸುತ್ತಾರೆ. ಬದಲಾವಣೆಯ ಕಡೆಗಿನ ಪ್ರಯಾಣ ಅಧಿಕೃತತೆಯನ್ನು ಪಡೆಯುತ್ತದೆ.

ಹೊಸ ಹಾದಿಯ ನೀತಿಯ ಅಗತ್ಯತೆ

ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣೆ ವೇಳೆ ನಡೆಯುವ ವಿದ್ಯಮಾನಗಳು ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡು ಏರ್ಪಡುವ ಜಗಳ, ಸಂಘರ್ಷಗಳು ಪ್ರಜಾಸತ್ತಾತ್ಮಕವಾದ ನೀತಿ ರೂಪುಗೊಳ್ಳಬಹುದಾದ ಸಂಭಾವ್ಯತೆಯನ್ನೇ ಇಲ್ಲವಾಗಿಸಿಬಿಡುತ್ತವೆ. ದೇಶದ ವಿವಿಧ ವಲಯಗಳಲ್ಲಿ ಆಗಬೇಕಾದ ಬದಲಾವಣೆಗಳೇನೇನು? ಆ ಬದಲಾವಣೆಯು ಯಾವ ಸ್ವರೂಪದ್ದಾಗಿರಬೇಕು? ಮುಂದಿನ ಐವತ್ತು ವರ್ಷಗಳಲ್ಲಿ ಸಮಾಜದ ಗತಿಶೀಲತೆಯ ಸಾಧ್ಯತೆಗಳಿಗೆ ತಕ್ಕಂತೆ ಹೊಸ ಕಾಯ್ದೆಗಳು ರೂಪುಗೊಳ್ಳಬೇಕೇ? ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಕಾರ್ಯವ್ಯಾಪ್ತಿ ಮತ್ತು ಅವುಗಳ ಕಾರ್ಯವೈಖರಿ ಯಾವ ರೀತಿಯಲ್ಲಿ ವಿಮರ್ಶೆಗೊಳಪಡಬೇಕು? ಹೇಗೆ ಅವುಗಳನ್ನು ಬದಲಾವಣೆಯ ಪರಸ್ಪರ ಪೂರಕ ಸಾಂಸ್ಥಿಕ ಶಕ್ತಿಗಳನ್ನಾಗಿ ಮಾರ್ಪಡಿಸಬೇಕು ಎಂಬ ಪ್ರಶ್ನೆಗಳು ಆದ್ಯತಾನುಸಾರ ಚರ್ಚಿಸಲ್ಪಡಬೇಕು. ಹಾಗಾಗುವುದಿಲ್ಲ. ಅದರ ಬದಲು ತಾತ್ಪೂರ್ತಿಕವಾದ, ಸವಕಲು ಎನ್ನಿಸಿರುವ, ಅಪ್ರಸ್ತುತ ಅಭಿಪ್ರಾಯಗಳನ್ನು ರೂಪಿಸುವುದಕ್ಕೇ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ದೇಶದ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕ ವಾಸ್ತವಿಕತೆ, ಮಾನವ ಸಂಪನ್ಮೂಲದ ಆರೋಗ್ಯಕರ ಅಸ್ಮಿತೆ, ಭೌಗೋಳಿಕ ನೈಸರ್ಗಿಕ ವೈಶಿಷ್ಟ್ಯತೆ – ಇವೆಲ್ಲವುಗಳನ್ನು ಸಂವಿಧಾನಿಕ ಆಡಳಿತಾತ್ಮಕ ಅಂಗಗಳು ಗಣನೆಗೆ ತೆಗೆದುಕೊಂಡು ಹೊಸ ಹೆಜ್ಜೆಗಳನ್ನು ಕ್ರಮಿಸುವುದಕ್ಕೆ ಪೂರಕವಾಗುವ ನೀತಿಗಳನ್ನು ರೂಪಿಸಿಕೊಳ್ಳಬೇಕು. ಅಂಥ ವಾತಾವರಣದ ನಿರ್ಮಾಣಕ್ಕೆ ಚುನಾವಣಾಪೂರ್ವ, ಚುನಾವಣಾ ನಂತರದ ಆಡಳಿತಾತ್ಮಕ ಅಧಿಕಾರಾವಧಿಯು ವಿನಿಯೋಗಿಸಲ್ಪಡಬೇಕು.

ರಾಜಕಾರಣದ ನಿರ್ದಯಿ ದಾಹ

ನಿರ್ದಿಷ್ಟ ಆಡಳಿತ ನೀತಿಯು ಅಧಿಕಾರ ರಾಜಕಾರಣದ ನಿರ್ದಯಿ ದಾಹಗಳ ಸೋಂಕನ್ನು ಅಂಟಿಸಿಕೊಳ್ಳಬಾರದು. ಸದ್ಯದಲ್ಲಷ್ಟೇ ಅಲ್ಲದೇ ಯಾವತ್ತೂ ತಾವೇ ಅಧಿಕಾರದಲ್ಲಿರಬೇಕು ಎಂಬ ಹಸಿವು ಸಕಾರಾತ್ಮಕ ಆಲೋಚನಾಕ್ರಮಗಳೊಂದಿಗಿದ್ದರೆ ಸರಿ. ಇಲ್ಲದಿದ್ದರೆ ಆ ಹಸಿವಿಗೆ ಪ್ರಜಾಸತ್ತಾತ್ಮಕ ಅಧಿಕೃತತೆ ದೊರಕುವುದಿಲ್ಲ. ಬದಲಾಗಿ ಆ ಹಸಿವು ಕಂಡವರ ಬದುಕನ್ನು ನಲುಗಿಸುವ, ಎದುರಾಳಿಗಳನ್ನು ಸೃಷ್ಟಿಸಿಕೊಳ್ಳುವ, ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ವಿಕಾರದದ ಆಯಾಮವನ್ನು ಪಡೆದುಕೊಂಡುಬಿಡುತ್ತದೆ. ಈ ಹಂತದಲ್ಲಿಯೇ ಆಡಳಿತಾತ್ಮಕವಾದ ಸಕಾರತಾತ್ಮಕ ನೀತಿಯೊಂದು ಹುಟ್ಟಿಕೊಳ್ಳುವುದೇ ಇಲ್ಲ. ಇಂಥ ಸಂದರ್ಭದಲ್ಲಿ ಪ್ರಭುತ್ವವು ಯಾವುದನ್ನು ಆಡಳಿತ ನೀತಿ ಎಂದುಕೊಳ್ಳುತ್ತದೋ ಅದು ವಾಸ್ತವದಲ್ಲಿ ಕವಲು ಹಾದಿಯನ್ನು ಸಂಕೇತಿಸಿರುತ್ತದೆ. ಇದನ್ನು ಪ್ರಭುತ್ವಕ್ಕೆ ಅರ್ಥಮಾಡಿಸುವ ಪ್ರಯತ್ನಗಳು ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪ್ರತಿಪಕ್ಷ ನಾಯಕರು, ತಜ್ಞರು ಮತ್ತು ಮಾಧ್ಯಮ ಪರಿಣಿತರಿಂದ ಆಗಬೇಕು. ಸಕಾರಾತ್ಮಕವಾದ ನೀತಿಯ ವಿಶಾಲ ಆವರಣವನ್ನು ತೋರ್ಪಡಿಸಬೇಕು.

ಉದ್ದೇಶಪೂರ್ವಕ ತಾಟಸ್ಥ್ಯ

ಆಡಳಿತಾತ್ಮಕ ನೀತಿಯನ್ನು ನಿರ್ದೇಶಿಸುವ ಸ್ಪಷ್ಟ ಮಾನದಂಡಗಳನ್ನು ವಿನ್ಯಾಸಗೊಳಿಸಿಕೊಳ್ಳುವುದರ ಕಡೆಗೆ ಬಹುಮತ ಪಡೆದ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುವುದಿಲ್ಲ. ಹಾಗೆ ಆದ್ಯತೆ ನೀಡುವಂಥ ರಚನಾತ್ಮಕ ಸಂವಾದಿ ಆಂದೋಲನವನ್ನು ಪ್ರತಿಪಕ್ಷಗಳೂ ರೂಪಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಅವು ಈ ವಿಷಯದಲ್ಲಿ ತಟಸ್ಥಗೊಳ್ಳುತ್ತವೆ. ಈ ಕಾರಣಕ್ಕಾಗಿಯೇ ದೇಶದ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿನ ಸ್ವರೂಪವನ್ನು ಪಡೆದುಕೊಂಡು ಬಿಡಿಸಲಾರದಷ್ಟು ಸಂಕೀರ್ಣಗೊಳ್ಳುತ್ತವೆ. ಒಂದು ಪಕ್ಷ ಅಥವಾ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದ ತಕ್ಷಣ ಸಮಸ್ಯೆಯೊಂದು ಚಿಗುರೊಡೆಯುವ ಕಾಲಕ್ಕೆ ಅದರ ಮುಂದಿನ ಸ್ವರೂಪವನ್ನು ಊಹಿಸಿ ಪರಿಹಾರೋಪಾಯವನ್ನು ನೆಚ್ಚಿಕೊಂಡ ಸಾಂದರ್ಭಿಕವಾದ ಪರ್ಯಾಯ ಚಿಂತನೆ ರೂಪುಗೊಳ್ಳಬೇಕು. ಅದರ ಆಧಾರದಲ್ಲಿಯೇ ಪರಿಹಾರಸೂತ್ರಗಳನ್ನು ಕಂಡುಕೊಳ್ಳಬೇಕು. ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ಅವು ಸದ್ಯಕ್ಕಷ್ಟೇ ಅಲ್ಲದೇ ಭವಿಷ್ಯದ ದಿನಗಳಲ್ಲಿಯೂ ಅನುಕೂಲಕರ ಎನ್ನಿಸುವ ಹಾಗೆ ಫ್ಲೆಕ್ಸಿಬಲ್ ಆಗಿರಬೇಕು. ಈ ಸಾಧ್ಯತೆಗಳ ದೂರಗಾಮಿ ಪರಿಣಾಮ ಲೆಕ್ಕಿಸಿಯೇ ಆಡಳಿತ ಕೇಂದ್ರಗಳು ಸಾರ್ವಜನಿಕ ನೀತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಈಗ ಇದರ ಗೈರು ಹಾಜರಿ ಎದ್ದುಕಾಣುತ್ತಿದೆ. ಇದರಿಂದಾಗಿ ಭಾರತೀಯ ಸಾಮಾಜಿಕತೆಯು ವಿವಿಧ ಸವಾಲುಗಳನ್ನು ಎದುರಿಸುವುದಕ್ಕಾಗಿಯೇ ತನ್ನ ಶಕ್ತಿಯನ್ನು ವ್ಯಯ ಮಾಡಿಕೊಳ್ಳುತ್ತಿದೆ. ಪ್ರಜೆಗಳ ಸಾಮಾಜಿಕತೆ ಮತ್ತು ಮಾನವ ಸಂಪನ್ಮೂಲದ ಸಶಕ್ತತೆಯು ಸಾರ್ವಜನಿಕ ನೀತಿಯ ವ್ಯಾಪ್ತಿಯ ಒಳಗೆ ಅಧಿಕೃತ ಸ್ಥಾನವನ್ನು ಪಡೆಯುತ್ತಲೇ ಇಲ್ಲ. ಈ ದೃಷ್ಟಿಯಿಂದ ಭಾರತದ ಆಡಳಿತಾತ್ಮಕತೆಯು ರಚನಾತ್ಮಕ ಕಾರ್ಯಸೂಚಿಯ ಕಾಯಕಲ್ಪದಿಂದ ವಂಚಿತವಾಗಿದೆ.

ದಿವ್ಯನಿರ್ಲಕ್ಷ್ಯ ಸೃಷ್ಟಿಸುವ ಬಿಕ್ಕಟ್ಟು

ಈ ಕಾರಣಕ್ಕಾಗಿಯೇ ಕೃಷಿ, ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ, ಕಾಣಿಸಿಕೊಳ್ಳುತ್ತಲೇ ಇರುವ ಸಮಸ್ಯೆಗಳಿಗೆ ಪರಿಹಾರವೇ ಸಾಧ್ಯ ಇಲ್ಲ ಎಂಬ ತಪ್ಪು ಅಭಿಪ್ರಾಯಗಳ ವರ್ತುಲ ಸೃಷ್ಟಿಯಾಗಿದೆ. ಸಮಸ್ಯೆಯೊಂದು ಸೃಷ್ಟಿಯಾದ ತಕ್ಷಣವೇ ಆಡಳಿತವು ಅದರೆಡೆಗಿನ ದಿವ್ಯನಿರ್ಲಕ್ಷ್ಯವನ್ನೇ ತನ್ನ ಅಸ್ತಿತ್ವದ ಮಹತ್ವದ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ತತ್ಪರಿಣಾಮ ನಿರ್ಲಕ್ಷ್ಯಕ್ಕೀಡಾಗುವ ಸಮಸ್ಯೆಯು ಹಲವು ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತದೆ. ಕ್ರಮೇಣ ಜನಸಮುದಾಯವನ್ನು, ತನ್ಮೂಲಕ ಆಡಳಿತದ ವಿವಿಧ ಹಂತಗಳ ಸಹಜ ಕ್ರಿಯೆಯನ್ನು ಮತ್ತಷ್ಟು ಜಡಗೊಳಿಸಿಬಿಡುತ್ತದೆ. ಆಗ ರೈತರ ಆತ್ಮಹತ್ಯೆಯ ಪ್ರಮಾಣ ಹೆಚ್ಚಾದಾಗಲೂ ಆಡಳಿತ ನಿರ್ಲಿಪ್ತತೆಯನ್ನೇ ತನ್ನ ಬಹುದೊಡ್ಡ ಗುಣವಾಗಿಸಿಕೊಳ್ಳುತ್ತದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನ್ಯಾಯಯುತ ಬೆಲೆ ನಿಗದಿಗೊಳಿಸದೇ ಇದ್ದಾಗ ರೈತ ಸಮುದಾಯ ನಲುಗಿದರೂ ಅದು ನಿರ್ಲಕ್ಷ್ಯ ಧೋರಣೆಯೊಂದಿಗಿನ ಮೌನವನ್ನೇ ಅನುಸರಿಸುತ್ತದೆ. ಜಾತಿ-ಧರ್ಮಗಳ ಸಾಂಪ್ರದಾಯಿಕತೆಯ ಜೊತೆಗೆ ಇಡೀ ಸಮಾಜ ತಳಮಳಕ್ಕೀಡಾದಾಗ ಅದರ ಪ್ರಯೋಜನ ಪಡೆಯುವ ಹುನ್ನಾರದ ಪ್ರಬಲರಿಗೆ ದಾರಿ ಮಾಡಿಕೊಡುತ್ತದೆ. ಹೊಸದೇನನ್ನೂ ಕಲಿಸದೇ ಹಳೆಯದ್ದರ ಆಶ್ರಯದಲ್ಲಿಯೇ ಅಸ್ತಿತ್ವ ಕಂಡುಕೊಳ್ಳಲು ಶಿಕ್ಷಣ ರಂಗವು ಹೆಣಗಾಡುತ್ತಿರುವಾಗಲೂ ಅದನ್ನು ಮತ್ತಷ್ಟು ದುರ್ಬಲಗೊಳಿಸುವುದರ ಕಡೆಗೆ ಅತ್ಯುತ್ಸಾಹ ತೋರುತ್ತದೆ. ಆರೋಗ್ಯ ಕಾಯ್ದುಕೊಳ್ಳಲು ಜನಸಮೂಹಕ್ಕೆ ನೆರವಾಗುವ ಜಾಗೃತಿ ಹೆಜ್ಜೆಗಳ ಬದಲು ದೇಹಗಳನ್ನು ಮತ್ತಷ್ಟು ಜಡಗೊಳಿಸಿ ಮೆಡಿಸಿನ್‍ಗಳಿಗೆ ಒಗ್ಗಿಕೊಳ್ಳುವಂಥ ಮನಸ್ಥಿತಿ ರೂಪಿಸುವ ಔದ್ಯಮಿಕ ಒತ್ತಡಗಳಿಗೆ ಈಡಾಗುತ್ತದೆ. ಈ ಹಂತದಲ್ಲಿಯೇ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ತಮ್ಮ ಸಾಂಸ್ಥಿಕ ಶಕ್ತಿಯನ್ನು ವಿಸ್ತರಿಸಿಕೊಳ್ಳುವ ಬದಲು ಯಥಾಸ್ಥಿತಿಗಳನ್ನು ಖಾಯಂ ಆಗಿರಿಸುವ ದೌರ್ಬಲ್ಯದ ಮಿತಿಗಳನ್ನು ತಮ್ಮ ಗುಣಗಳನ್ನಾಗಿಸಿಕೊಳ್ಳುತ್ತವೆ.

ಸಮಗ್ರ ನೀತಿಯ ಅಲೆಯ ಪ್ರಾಧಾನ್ಯತೆ

ಆ ದೌರ್ಬಲ್ಯವು ದೇಶದ ಉಜ್ವಲ ಭವಿಷ್ಯದ ಸಂಭಾವ್ಯತೆಯನ್ನು ತಡೆದುಬಿಡುತ್ತದೆ. ಅಲ್ಲದೇ ಪೀಳಿಗೆಗಳನ್ನು ಶತಮಾನಗಳಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ. ಮುಂದಿನ ಹೆಜ್ಜೆಗಳ ಬದಲು ಹಿಂದಿನ ಜಡತೆಗೇ ಜೋತುಬೀಳುವ ಅವಲಂಬನೆಯ ಸ್ವಭಾವವನ್ನು ಸಾಮಾಜಿಕವಾಗಿ ನೆಲೆಗೊಳಿಸಿಬಿಡುತ್ತದೆ. ಇಂಥ ಅಪಾಯದಿಂದ ಪಾರಾಗಬೇಕಾದರೆ ರಾಜಕೀಯ ಪಕ್ಷಗಳು, ಸಾರ್ವಜನಿಕ ಸಂಸ್ಥೆಗಳು, ವಿವಿಧ ಜನವರ್ಗಗಳು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಪ್ರತಿಸ್ಪಂದಿಸುವ ಆಡಳಿತಾತ್ಮಕ ಸಮಗ್ರ ನೀತಿಗಳ ಅವಶ್ಯಕತೆಯನ್ನು ಮನಗಂಡು ಅವುಗಳ ಪರವಾದ ವ್ಯಾಪಕ ಅಲೆಯನ್ನು ನಿರ್ಮಿಸಬೇಕು. ಹಾಗಾದಾಗ ಮಾತ್ರ ಚುನಾವಣೆ ಇರಲಿ, ಇಲ್ಲದಿರಲಿ ಎಲ್ಲರೂ ರಚನಾತ್ಮಕ ನೀತಿಗಳನ್ನು ಗಮನದಲ್ಲಿರಿಸಿಕೊಂಡು ಮೌಲಿಕ ಸಂವಾದ ಏರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅನಗತ್ಯ ವಿವಾದಗಳ ವೈಭವೀಕರಣ ತಾನಾಗಿಯೇ ನಿಂತು ಸಾರ್ವಜನಿಕ ಆಡಳಿತವು ಸಂವಿಧಾನಾತ್ಮಕ ಮೌಲ್ಯವನ್ನು ತಂದುಕೊಳ್ಳುತ್ತದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ6 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ6 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending