Connect with us

ರಾಜಕೀಯ

ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳ ಅಬ್ಬರ..!

Published

on

ಬ್ಬ ಸಣ್ಣ ಹುಡುಗ. ಅವನ ಕೈಯಲ್ಲಿ ದೊಡ್ಡ ದೊಡ್ಡ ನಾಲ್ಕು ಕಲ್ಲುಗಳು. ಆ ಫೋಟೋದೊಂದಿಗೆ ರಾರಾಜಿಸುತ್ತಿರುವ ಸಾಲುಗಳು – ‘ನಾನು ರಾಹುಲ್ ಗಾಂಧಿಯನ್ನು ಭೇಟಿ ಮಾಡಬೇಕಿದೆ’. ಫೇಸ್‍ಬುಕ್‍ನಲ್ಲಿ ಈಚೆಗೆ ಕಾಣಿಸಿಕೊಂಡ ಈ ಚಿತ್ರದೊಂದಿಗಿನ ಸಾಲುಗಳು ಭವಿಷ್ಯದ ಪೀಳಿಗೆಯ ಹೆಜ್ಜೆಗಳು ಏನಾಗಬಹುದು ಎಂಬುದರ ಸ್ಪಷ್ಟ ಸುಳಿವನ್ನು ನೀಡುವಂತೆಯೇ ಇವೆ. ಅವುಗಳು ಹಿಂಸೆಯೊಂದಿಗೇ ಗುರುತಿಸಿಕೊಳ್ಳಬೇಕು ಎಂಬ ಕಾರ್ಯಸೂಚಿಯ ಯಶಸ್ಸಿನ ದ್ಯೋತಕವಾಗಿಯೇ ಕಾಣಿಸುತ್ತಿವೆ. ಅಂಬೆಗಾಲಿಟ್ಟು, ಆ ಹಂತವನ್ನು ದಾಟಿಕೊಂಡು ಇದೀಗ ತಾನೆ ನಡೆಯುವುದನ್ನು ಕಲಿತಿರುವ ಅತ್ಯಂತ ಕಿರಿಯ ವಯಸ್ಸಿನ ಸಣ್ಣ ಹುಡುಗನಿಗೆ ಹಿಂಸೆಯ ಭಾಷೆ, ಪರಿಭಾಷೆ ಮತ್ತು ಸ್ವರೂಪವನ್ನು ಪರಿಚಯಿಸುವ ವಿಚಿತ್ರವಾದ ನಡೆಯೊಂದನ್ನು ಸಂಕೇತಿಸುತ್ತಿವೆ.

Rajadharma a column by Dr.N k padmanabh

ಭ್ರಮಾತ್ಮಕ ಚೌಕಟ್ಟುಗಳು

ನಮ್ಮ ದೃಷ್ಟಿಕೋನಗಳು ಈ ಪರಿ ದುರವಸ್ಥೆ ತಲುಪಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾದದ್ದಾದರೂ ಏಕೆ? ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಯಿತೇ? ಆ ಉದ್ದೇಶದ ಹಿಂದೆ ಕಾರ್ಯೋನ್ಮುಖವಾಗಿರುವ ಶಕ್ತಿಗಳು ಯಾವುವು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಮೊದಲು ಈ ದೇಶದ ರಾಜಕಾರಣ ಮತ್ತು ಆಡಳಿತ ನೆಚ್ಚಿಕೊಂಡ ಹೊಸದನ್ನು ಬಹುಬೇಗ ಸ್ವೀಕರಿಸದ, ಸ್ವೀಕರಿಸಿದರೂ ನಿರಾಕರಣೆಯ ಭಾವವ ಸಾಂಪ್ರದಾಯಿಕತೆಯ ಚೌಕಟ್ಟುಗಳನ್ನು ಗೊತ್ತುಮಾಡಿಕೊಳ್ಳಬೇಕಾಗುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯಾನಂತರದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ ಭಾರತೀಯ ರಾಜಕಾರಣದ ವಿವಿಧ ಮಗ್ಗಲುಗಳು ಪರಿಚಯವಾಗುವುದರೊಂದಿಗೇ ಅಹಿಂಸೆಯ ಆಲೋಚನಾ ಕ್ರಮಗಳು ಹಿಂಸೆಯ ಸಂಕುಚಿತತೆಯೊಂದಿಗೆ ಮುಖಾಮುಖಿಯಾದ ವಿವಿಧ ಸಂದರ್ಭಗಳ ಚಾರಿತ್ರಿಕ ಹಿನ್ನೆಲೆ ಗಮನಕ್ಕೆ ಬರುತ್ತದೆ. ಅಹಿಂಸೆಯ ಮಾರ್ಗವು ಸ್ವಾತಂತ್ರ್ಯವನ್ನು ಕಂಡುಕೊಳ್ಳಲು ಸಹಾಯಕವಾದ ನಂತರ ಭಾರತೀಯ ಆಡಳಿತ ಅಳವಡಿಸಿಕೊಂಡ ನಿರ್ವಹಣೆಯ ಮಾದರಿಗೆ ಸಂಬಂಧಿಸಿದ ಸಂಗತಿಗಳು ತಿಳಿಯುತ್ತವೆ.

ಸಾರ್ಥಕತೆಯ ಹಾದಿಯ ನೆನಪು

ಬಾಲ್ಯದಲ್ಲಿ ನಮಗೆ ಹಲವು ಮಹನೀಯರ ತ್ಯಾಗದ ಕಾರಣಕ್ಕಾಗಿಯೇ ಸ್ವಾತಂತ್ರ್ಯ ಲಭಿಸಿರುವುದನ್ನು ಹಿರಿಯರ ಭಾಷಣಗಳು ಮನವರಿಕೆ ಮಾಡಿಕೊಡುತ್ತಿದ್ದವು. ಗಾಂಧಿ ಸೇರಿದಂತೆ ಹಲವರ ಹೋರಾಟದ ಪ್ರತಿಫಲವಾಗಿ ಸ್ವಾತಂತ್ರ್ಯ ನಮ್ಮೊಂದಿಗಿರುವುದನ್ನು ದೃಢೀಕರಿಸುತ್ತಿದ್ದವು. ಆಗ ನಮಗೆ ಹಿಂಸೆಯೇ ಶ್ರೇಷ್ಠ ಎಂಬಂಥ ದಾರಿತಪ್ಪಿಸುವ ದುರ್ಮಾರ್ಗದ ವೈಭವೀಕರಣ ಕಣ್ಣಮುಂದೆ ಬರುತ್ತಲೇ ಇರಲಿಲ್ಲ. ಬದಲಾಗಿ ಎಲ್ಲ ಭಾಷಣಗಳ ಚಿಂತನೆಗಳು ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವ ಹಾದಿ ಯಾವುದಾಗಿರಬೇಕು ಎಂಬುದನ್ನು ಹೊಳೆಸುವುದರ ಕಡೆಗೇ ಕೇಂದ್ರೀಕೃತವಾಗಿರುತ್ತಿದ್ದವು.ಬಾಲ್ಯದ ಅನುಭವವು ಹಲವು ಪಾಠಗಳನ್ನು ಕಲಿಸುತ್ತಿತ್ತು. ಮಕ್ಕಳು ಹೊಡೆದಾಡಿಕೊಂಡು ಬಂದರೆ ದೊಡ್ಡವರು ಬುದ್ಧಿವಾದ ಹೇಳುತ್ತಿದ್ದರು. ಹೊಡೆದಾಟ ಯಾಕೆ ಸರಿಯಲ್ಲ ಸ್ಪಷ್ಟಪಡಿಸುತ್ತಿದ್ದರು. ಹೊಡೆದವನು ಹೊಡೆತ ತಿಂದವನ ಮುಂದೆ ನಿಂತು ಕ್ಷಮೆ ಕೇಳಬೇಕಾಗುತ್ತಿತ್ತು. ಆ ಕ್ಷಮೆಯ ಪ್ರಸ್ತಾಪದೊಂದಿಗೇ ಇಬ್ಬರ ನಡುವೆ ಸ್ನೇಹ ಮತ್ತೆ ಚಿಗುರೊಡೆಯುತ್ತಿತ್ತು. ಸಣ್ಣ ಭಿನ್ನಾಭಿಪ್ರಾಯದ ಜಾಗವನ್ನು ಆಕ್ರಮಿಸಿಕೊಂಡು ಹೊಡೆದಾಡುವಷ್ಟರ ಮಟ್ಟಿಗೆ ಪ್ರಚೋದಿಸಿದ ದ್ವೇಷದ ದಟ್ಟ ಭಾವನೆಯನ್ನು ಆ ಕ್ಷಣವೇ ಅಳಿಸಿಹಾಕಿಬಿಡುತ್ತಿತ್ತು. ಆಮೇಲಾಮೇಲೆ ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳು, ಸಣ್ಣ ಸಣ್ಣ ಜಗಳಗಳು, ಮತ್ತೆ ಒಂದಾಗಿ ಮಾತನಾಡಿಕೊಳ್ಳುವ ಸೊಗಡಿನೊಂದಿಗೇ ಬಾಲ್ಯ ಕಳೆದುಬಿಡುತ್ತಿತ್ತು. ದೊಡ್ಡವರಾಗುತ್ತಿದ್ದಂತೆಯೇ ಸಣ್ಣವರಾಗಿದ್ದಾಗಿನ ಕೆಲವು ಸಣ್ಣತನಗಳ ಪೊರೆಗಳನ್ನು ಕಳಚಿಕೊಳ್ಳುತ್ತಾ ಸಾಗಬೇಕಾಗಿತ್ತು. ಮಕ್ಕಳಾಗಿದ್ದಾಗ ಸಾಧ್ಯವಾಗಿದ್ದ ಈ ವಿವೇಕ ದೊಡ್ಡವರ ಬದುಕಿನೊಳಗೆ ಇಲ್ಲವಾಗುತ್ತದೆ. ಅವಿವೇಕತನದ ಪರಮಾವಧಿಯನ್ನು ಮತ್ತೆ ಮತ್ತೆ ಸಾಬೀತುಪಡಿಸುವ ಹಾಗೆಯೇ ಅವರು ವಿಕೃತಿಗಳೊಂದಿಗೇ ಗುರುತಿಸಿಕೊಳ್ಳುತ್ತಾರೆ. ಈಗಿನ ರಾಜಕಾರಣ ಮತ್ತು ಅದು ಪೋಷಿಸುವ ಆಡಳಿತ ವ್ಯವಸ್ಥೆಯು ಆ ವಿಕೃತಿಗಳನ್ನು ದಟ್ಟವಾಗಿಸುವ ನಕಾರಾತ್ಮಕ ಪಾತ್ರವನ್ನು ಅತ್ಯಂತ ಚಾಣಾಕ್ಷಯುತವಾಗಿ ನಿಭಾಯಿಸುತ್ತಿದೆ.

ಧೀಮಂತಿಕೆಯ ಗೈರುಹಾಜರಿ

ರಾಜಕಾರಣ ಮತ್ತು ಆಡಳಿತ ಒಂದನ್ನೊಂದು ನೆಚ್ಚಿಕೊಂಡಿರುವ ಪರಸ್ಪರ ಪೂರಕವಾದ ಕ್ಷೇತ್ರಗಳು. ಒಂದು ಶಾಸಕಾಂಗಕ್ಕೆ ಬೇಕಾದ ನಾಯಕತ್ವದ ಸಂಪನ್ಮೂಲವನ್ನು ಒದಗಿಸಿಕೊಡುವ ವಲಯವಾದರೆ, ಮತ್ತೊಂದು ಆ ಸಂಪನ್ಮೂಲದ ಆಧಾರದಲ್ಲಿ ಬಹುಮುಖೀ ಪಾತ್ರವನ್ನು ನಿರ್ವಹಿಸುವ ಕ್ರಿಯಾತ್ಮಕ ವ್ಯವಸ್ಥೆ. ಇವೆರಡನ್ನೂ ಪ್ರತಿನಿಧಿಸುವವರು ದೊಡ್ಡವರಾಗಿರಬೇಕು. ಅವರ ದೊಡ್ಡತನವು ಕೇವಲ ವಯಸ್ಸಲ್ಲಷ್ಟೇ ಅಲ್ಲ, ಅವರ ಧೀಮಂತಿಕೆಯ ಮೂಲಕ ಸಾಬೀತಾಗುತ್ತಿರಬೇಕು.ರಾಜಕಾರಣದಲ್ಲಿ ಹಿರಿವಯಸ್ಕ ರಾಜಕಾರಣಿಗಳಿದ್ದಾರೆ. ಆಡಳಿತ ವಲಯದಲ್ಲಿ ಅನುಭವಿ ಅಧಿಕಾರಿಗಳಿದ್ದಾರೆ. ಆದರೆ ಈ ಹಿರಿತನ ಮತ್ತು ಅನುಭವ ಇಡೀ ಸಮಾಜವನ್ನು ಹೊಸ ಹಾದಿಯ ಕಡೆಗೆ ಕೊಂಡೊಯ್ಯುವ ಬದಲು ಹಿಂದಿನ ಅನಾಗರಿಕ ಜಗತ್ತಿನ ಕ್ರೌರ್ಯದ ಕಡೆಗೇ ಹಿಂತಿರುಗಿಸುತ್ತಿದೆಯೇನೋ ಎಂಬ ಆತಂಕ ಆವರಿಸಿಕೊಳ್ಳುತ್ತಿದೆ. ಒಬ್ಬ ರಾಜಕಾರಣಿ ಮತ್ತೊಬ್ಬ ರಾಜಕಾರಣಿಯ ಬಗ್ಗೆ ಕೆಟ್ಟದಾಗಿ ಮಾತನಾಡುವಿಕೆ, ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವ ಭರದಲ್ಲಿ ಹಿಂಸೆಯ ಮನಸ್ಥಿತಿಯನ್ನೇ ಕಾಡಿಸಿಕೊಂಡು ಪ್ರಚೋದಿಸುವ ಬಗೆ – ಇವೆಲ್ಲವೂ ಹಿರಿತನದ ಸಂಕೇತಗಳಾಗುವುದೂ ಇಲ್ಲ. ಅನುಭವ ಶ್ರೇಷ್ಠತೆಯನ್ನೂ ನಿರೂಪಿಸುವುದಿಲ್ಲ.

ನಂಬಿಕೆಯ ನಡಿಗೆ ಮತ್ತು ನಿಜದ ಅರಿವು

ನಂಬಿಕೆಯ ತಂತಿ ಮೇಲಿನ ನಡಿಗೆಯ ಹಾಗೆಯೇ ಸೂಕ್ಷ್ಮಾತಿಸೂಕ್ಷ್ಮ ಸ್ವರೂಪದೊಂದಿಗೆ ಈ ದೇಶದ ಜನರ ತಿಳುವಳಿಕೆಯು ನಿಕಟನಂಟು ಹೊಂದಿದೆ. ಇದು ಅರಿವಿನ ಎತ್ತರ ತಲುಪಿಕೊಳ್ಳುವ ಮುನ್ನವೇ ಇಲ್ಲಿಯ ರಾಜಕಾರಣ ಅವರ ಮನೋಲೋಕವನ್ನುಆವರಿಸಿಕೊಂಡುಬಿಡುತ್ತದೆ. ನಂಬಿಸಿ ಆ ಮೂಲಕ ಸೃಷ್ಟಿಯಾಗುವ ಪರವಾದ ಅಲೆಯ ಮೇಲೆ ಅದು ಯಾವತ್ತೂ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುತ್ತದೆ. ಇಲ್ಲಿಯ ವೈಚಾರಿಕತೆಯು ನಂಬಿಕೆಯೊಂದಿಗೆ ಆರೋಗ್ಯಕರ ಸಂವಾದವನ್ನು ಏರ್ಪಡಿಸಿಕೊಂಡು ಜನಸಮುದಾಯವನ್ನು ಒಂದು ಹೆಜ್ಜೆ ಮುಂದಕ್ಕೆ ಕರೆದೊಯ್ದರೆ, ಅದೇ ನಂಬಿಕೆಯ ಜಗತ್ತನ್ನು ಪ್ರತಿನಿಧಿಸುವ ಧಾರ್ಮಿಕ ಯಜಮಾನಿಕೆಯ ಪ್ರತಿನಿಧಿಗಳು ಮತ್ತು ಅವರೊಂದಿಗೆ ಗುರುತಿಸಿಕೊಂಡ ರಾಜಕೀಯ ಶಕ್ತಿಗಳು ಒಂದು ಹೆಜ್ಜೆ ಹಿಂದಕ್ಕೆ ಕರೆದೊಯ್ಯುತ್ತವೆ.

ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳು

ಈಗ ಏನಾಗಿದೆ ಎಂದರೆ ನಮ್ಮನ್ನು ಮುನ್ನಡೆಸುವ ಬೌದ್ಧಿಕ ಚಲನೆಯ ಜಂಗಮ ಶಕ್ತಿಗಳಿಗಿಂತ ನಮ್ಮನ್ನು ಹಿಂದೆಯೇ ಉಳಿಸಿ ತಟಸ್ಥವಾಗಿ ಉಳಿಸಿ ಸ್ಥಾವರಗೊಳಿಸುವ ಧ್ವನಿಗಳ ಅಬ್ಬರದ ಕಡೆಗಿನ ವ್ಯಾಮೋಹವೇ ಸಾಮೂಹಿಕ ಕಾಯಿಲೆಯಾಗಿ ಸಾರ್ವಜನಿಕ ವಲಯದಲ್ಲಿ ಬೇರೂರಿಬಿಟ್ಟಿದೆ. ಈ ಊನದ ಕಾರಣಕ್ಕಾಗಿಯೇ ಅರಿವಿನ ಆಂದೋಲನದ ಬದಲು ಇಲ್ಲೀಗ ಹಿಂಸೆಯ ದೃಷ್ಟಿಕೋನಗಳು ಹಿಂದೆಂದಿಗಿಂತಲೂ ಹೆಚ್ಚಾಗಿ ಪ್ರಾಮುಖ್ಯತೆ ಪಡೆಯುತ್ತಿವೆ. ಯಾರೊಳಗೂ ತಿಳಿದುಕೊಳ್ಳುವ ಸಂಯಮವಿಲ್ಲ. ಸಹನೆಯಿಂದ ಯೋಚಿಸುವ ತಾಳ್ಮೆಯಿಲ್ಲ. ತಕ್ಷಣವೇ ಪ್ರತಿಕ್ರಿಯಿಸುವ, ಹಾಗೆ ಪ್ರತಿಕ್ರಿಯಿಸುತ್ತಲೇ ಕ್ರೌರ್ಯ ಮೆರೆಯುವ ಪ್ರಚೋದಕ ಉತ್ಸಾಹ ಎಲ್ಲೆಲ್ಲೂ ಕಂಡುಬರುತ್ತಿದೆ. ಇದರ ಭಾಗವಾಗಿಯೇ ಸಣ್ಣ ಮಗುವಿನ ಕೈಯಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನಿಟ್ಟು ‘ನಾನು ರಾಹುಲ್ ಗಾಂಧಿಯನ್ನು ಭೇಟಿಯಾಗಲು ಇಚ್ಛಿಸುತ್ತಿದ್ದೇನೆ’ ಎಂಬ ಒಕ್ಕಣೆಯ ಫೋಟೋ ಫೇಸ್‍ಬುಕ್‍ನ ಆವರಣದಲ್ಲಿ ಕಾಣಿಸಿಕೊಳ್ಳುತ್ತದೆ. ದಿಢೀರನೆ ಅದು ಹಂಚಲ್ಪಡುತ್ತದೆ. ನಾಳಿನ ಪೀಳಿಗೆಯನ್ನು ಪ್ರತಿನಿಧಿಸುವ ಪೋರನ ಹಿಂಸಾಪರ ಫೋಟೋಕ್ಕೆ ಅಸಂಖ್ಯಾತ ಲೈಕ್‍ಗಳು ಹರಿದುಬರುತ್ತವೆ. ಇದು ಅರಿವನ್ನು ಎತ್ತರಿಸಿಕೊಳ್ಳುವ ಲಕ್ಷಣವಲ್ಲ. ಬದಲಾಗಿ ಜನರ ಸ್ವಯಂತಿಳುವಳಿಕೆಯ ಶಕ್ತಿಯ ಮೇಲೆ ತಣ್ಣಗೆ ಆಗುವ ಗದಾಪ್ರಹಾರ.

ರೂಢಿಗತ ಸಂಕುಚಿತ ವಿಧಾನ

ನಂಬಿಕೆಯ ಜಗತ್ತು ಆಧ್ಯಾತ್ಮಿಕ ತಾತ್ವಿಕತೆಯ ಪ್ರಖರತೆಯನ್ನು ತೀವ್ರಗೊಳಿಸುವುದು ಒಂದು ಸಾಧ್ಯತೆ. ಆದರೆ, ಇದೇ ಜಗತ್ತು ದೈವಿಕ ಮತ್ತು ಧಾರ್ಮಿಕ ಮೌಢ್ಯವನ್ನು ಪ್ರತಿಷ್ಠಾಪಿಸುವುದಕ್ಕೆ ಸಹಾಯಕವಾಗುತ್ತದೆ. ಅಷ್ಟೇ ಅಲ್ಲ, ರಾಜಕೀಯದ ಸ್ವರೂಪವನ್ನು ನಿರ್ಧರಿಸುವಷ್ಟರ ಮಟ್ಟಿಗೆ ತನ್ನ ಪ್ರಭಾವವನ್ನು ಪ್ರಬಲವಾಗಿ ಬೇರೂರಿಸಿಬಿಡುತ್ತದೆ. ಇದರ ಪರಿಣಾಮವು ಜನರ ಮನೋಧರ್ಮದ ಮೇಲಾಗುತ್ತದೆ. ಅಧಿಕಾರದಲ್ಲಿರುವ ಮತ್ತು ಅಧಿಕಾರದಲ್ಲಿ ಇಲ್ಲದೇ ಇರುವ ನಾಯಕರೆನ್ನಿಸಿಕೊಂಡವರನ್ನು ಗ್ರಹಿಸುವ ಸಂಕುಚಿತ ವಿಧಾನವನ್ನೂ ರೂಢಿಸಿಬಿಡುತ್ತದೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಬೇಕಿದೆ ಎನ್ನುವ ಪುಟ್ಟ ಪೋರನ ಕೈಯಲ್ಲಿನ ದೊಡ್ಡ ದೊಡ್ಡ ಕಲ್ಲುಗಳ ಫೋಟೋ ಈ ವಿಧಾನ ಎಂಥದ್ದು ಎಂಬುದನ್ನು ನಿರೂಪಿಸಿದೆ. ಲೋಕಸಭೆಯಲ್ಲಿ ನಿರರ್ಗಳವಾಗಿ ಮಾತನಾಡಿ ಭಾಷಿಕ ಪ್ರೌಢಿಮೆ ಮೆರೆದು ಅಧಿಕಾರದಲ್ಲಿರುವವರ ಊನಗಳ ಮೇಲೆ ಬೆಳಕು ಚೆಲ್ಲುವ ಪ್ರಬುದ್ಧ ನಡೆಯನ್ನು ಪ್ರದರ್ಶಿಸುವವರು ಉತ್ತಮ ಸಂಸದೀಯ ಪಟು ಎಂಬ ಹಿರಿಮೆ ಪಾತ್ರರಾಗುವ ಪರಂಪರೆ ಇದೆ. ಆದರೆ, ಇದಕ್ಕೆ ತದ್ವಿರುದ್ಧವಾದ ನಡೆಗಳೊಂದಿಗಿನ ಹೀನ ಸಂಪ್ರದಾಯವನ್ನು ರಾಜಕಾರಣಿಗಳು ಈಗಾಗಲೇ ಆರಂಭಿಸಿಬಿಟ್ಟಿದ್ದಾರೆ. ಅಷ್ಟಕ್ಕೇ ಅವರು ಸಮಾಧಾನಗೊಳ್ಳದೇ, ಸಾಮಾಜಿಕ ಜಾಲತಾಣಗಳ ವೇದಿಕೆಯ ತಾರ್ಕಿಕ ಸಾಧ್ಯತೆಗಳ ಆಯಾಮಕ್ಕೇ ಧಕ್ಕೆಯೊದಗಿಸುವ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸದ್ಯದ ಮತ್ತು ಭವಿಷ್ಯದ ಹಿಂಸಾಪ್ರವೃತ್ತಿಗಳ ವಾತಾವರಣ ಸೃಷ್ಟಿಗೆ ಹೊಸ ಪೀಳಿಗೆಯ ಎಳೆ ಜೀವಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಿಂಬಗಳು ನಕಾರಾತ್ಮಕ ಸಂದೇಶವನ್ನು ಸಾರುತ್ತಿವೆ.

ದ್ವೇಷದ ವಿಷ

ಒಬ್ಬರನ್ನೊಬ್ಬರು ಹಿಂಸಿಸಿಕೊಳ್ಳುವ, ದ್ವೇಷ ಸಾಧಿಸುವ, ಆ ಮೂಲಕ ನೆಮ್ಮದಿಯನ್ನು ತಂದುಕೊಳ್ಳುವ ಭ್ರಮಾತ್ಮಕತೆಯೇ ಶ್ರೇಷ್ಠ ಎಂದು ನಂಬಿಸುವ ಆಟ ಈಗೀಗ ಅಧಿಕೃತತೆಯನ್ನು ಪಡೆದುಕೊಂಡಿದೆ. ಈ ಆಟದ ಓಟವು ಹಲವು ಜೀವಗಳ ಬಲಿಬೇಡುತ್ತದೆ ಎಂಬ ಸತ್ಯದ ಕಡೆಗೆ ಯಾರ ಗಮನವೂ ಇಲ್ಲ. ಅದು ನಮ್ಮನ್ನು ಯಾವ ಕೂಪಕ್ಕೆ ತಳ್ಳುತ್ತದೆ ಎಂಬ ಪರಿಜ್ಞಾನವಿಲ್ಲದೇ ದ್ವೇಷಕ್ಕೆ ಮನಸ್ಸನ್ನು ತಿರುಗಿಸಿಕೊಳ್ಳುವ ರಣೋತ್ಸಾಹವು ಪೀಳಿಗೆಯನ್ನು ಸರ್ವನಾಶದ ಕಡೆಗೆ ಕೊಂಡೊಯ್ಯುತ್ತಿದೆ. ನಮ್ಮ ನಾಯಕರ ಕುರಿತು ಅಸಮಾಧಾನಗೊಳ್ಳುವ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ, ಆ ಮೂಲಕ ಅವರು ನಮ್ಮ ಅಗತ್ಯಗಳೇನೇನು ಎಂಬುದರ ಬಗ್ಗೆ ಆಲೋಚಿಸುವಂತೆ ಒತ್ತಡ ಹಾಕುವುದರ ಬದಲು ವಿರೋಧ ಪಕ್ಷಗಳವರ ಬಗ್ಗೆ ದ್ವೇಷ ಹುಟ್ಟುಹಾಕುವಂಥ ವಿಷದ ಬೀಜಗಳನ್ನು ಬಿತ್ತುವ ಪ್ರಯತ್ನಗಳು ಸಾಮಾಜಿಕ ಜಾಲತಾಣಗಳ ಮೂಲಕ ಮುನ್ನೆಲೆಗೆ ಬರುತ್ತಿರುವುದು ಭವಿಷ್ಯದ ಕರಾಳತೆಯ ಬಗ್ಗೆ ಮುನ್ಸೂಚನೆ ನೀಡುತ್ತಿವೆ.

ನಮಗೆ ಅಧಿಕಾರದಲ್ಲಿರುವವರೂ ಮುಖ್ಯ. ಅವರನ್ನು ಪ್ರಶ್ನಿಸುವ ವಿರೋಧ ಪಕ್ಷಗಳವರೂ ಮುಖ್ಯ. ಜೊತೆಗೆ ತಾರ್ಕಿಕವಾಗಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ವೈಚಾರಿಕ ಚಿಂತಕರೂ ಪ್ರಧಾನ ಪಾತ್ರ ನಿರ್ವಹಿಸುತ್ತಾರೆ. ಈ ಮೂರೂ ವಲಯಗಳವರನ್ನೂ ಪರಸ್ಪರ ದ್ವೇಷದ ನೆಲೆಗಳಲ್ಲಿ ನೋಡುವಂತೆ ಪ್ರಚೋದಿಸುವ ಸಣ್ಣತನದ ರಾಜಕಾರಣ ತನ್ನ ವ್ಯತಿರಿಕ್ತತೆಯನ್ನು ಈಗಾಗಲೇ ಪ್ರದರ್ಶಿಸುತ್ತಿದೆ. ಅಧಿಕಾರ, ಹಣ ಮತ್ತು ಅದಕ್ಕನುಗುಣವಾದ ಎಲ್ಲ ಸೌಲಭ್ಯಗಳನ್ನು ದಕ್ಕಿಸಿಕೊಳ್ಳುವುದರಲ್ಲಿ ಒಂದಾಗುವ ಅಧಿಕಾರರೂಢರು ಮತ್ತು ವಿರೋಧ ಪಕ್ಷಗಳವರಿಗೆ ನಾವು ಸ್ಪಷ್ಟ ಸಂದೇಶ ರವಾನಿಸಬೇಕಿದೆ. ನೀವಿಬ್ಬರೂ ಈ ದೇಶದ ನಿಜವಾದ ಬೆಳವಣಿಗೆಯ ಬಗ್ಗೆ ಆಲೋಚಿಸಿ ಎಂದು ದಿಟ್ಟವಾಗಿ ಕಿವಿಮಾತು ಹೇಳಬೇಕಿದೆ. ಒಬ್ಬರಿಗೊಬ್ಬರು ಹೇಳಿಕೆಗಳ ಮೂಲಕ ಕಚ್ಚಾಡುತ್ತಾ, ಆ ಮೂಲಕವೇ ಹಿಂಸೆಗೆ ಪ್ರಚೋದನೆ ನೀಡುತ್ತಾ, ಬೀದಿಬದಿಯಲ್ಲಿ ಅಮಾಯಕ ಜೀವಗಳ ಮಾರಣಹೋಮಕ್ಕೆ ಕಾರಣವಾಗುವ ರಾಜಕೀಯ ಪ್ರವೃತ್ತಿಗಳನ್ನು ಗಟ್ಟಿದನಿಯಲ್ಲಿ ಖಂಡಿಸಬೇಕಿದೆ. ಹಾಗಾಗದಿದ್ದರೆ ನಮ್ಮ ದೇಶ ಮಹಾನ್ ಆಗುವುದಿಲ್ಲ. ಸಮೃದ್ಧ ಭಾರತದ ಕನಸುಗಳೂ ಸಾಕಾರಗೊಳ್ಳುವುದಿಲ್ಲ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

Published

on

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha Malikarjun) ತಿಳಿಸಿದರು.

ಅವರು ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು (Dr.Prabha Malikarjun) ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಅವರು (Dr.Prabha Malikarjun) ಶ್ಲಾಘಿಸಿದರು.

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ. ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಮಾಡಿದೆ ಎಂದು ಸಂಸದರು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಅವರು ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು (Dr.Prabha Malikarjun) ಮೆಚ್ಚುಗೆ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ರಾಜಕೀಯ

ಸಚಿವ ಎನ್.ಎಸ್.ಭೋಸರಾಜು: ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ DCM ಒಲವು

Published

on

ಬೆಂಗಳೂರು : ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದರು.

 

ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ ರಾಜ್ಯದ ಯಶಸ್ಸಿನ ಮಾದರಿಯನ್ನು ವಿವರಿಸಿದರು. “ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ‘ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ’ (Industry-Research Collaboration). ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಲಯವು (Penang University) ನಿರ್ಣಾಯಕ ಪಾತ್ರ ವಹಿಸಿದೆ. ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತಹ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ವಿವಿ ನಿರ್ಮಿಸಿದೆ,” ಎಂದು ಅವರು ತಿಳಿಸಿದರು. ಇದೇ ಮಾದರಿಯನ್ನು ಕರ್ನಾಟಕ ಮತ್ತು ಪೆನಾಂಗ್ ನಡುವೆ ವಿಸ್ತರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚರ್ಚೆಯ ವೇಳೆ ಸಚಿವ ಎನ್.ಎಸ್. ಭೋಸರಾಜು ಅವರು ಸಣ್ಣ ನೀರಾವರಿ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಮೈಲಿಗಲ್ಲುಗಳನ್ನು ಪರಿಚಯಿಸಿದರು. ವಿಶೇಷವಾಗಿ ರಾಜ್ಯದ ‘ತ್ಯಾಜ್ಯದಿಂದ ಸಂಪತ್ತು’ (Waste to Wealth) ಪರಿಕಲ್ಪನೆಯಡಿ ಜಾರಿಗೆ ತಂದಿರುವ ಕೆ.ಸಿ. ವ್ಯಾಲಿ (ಕೋರಮಂಗಲ-ಚಲ್ಲಘಟ್ಟ) ಮತ್ತು ಎಚ್.ಎನ್. ವ್ಯಾಲಿ (ಹೆಬ್ಬಾಳ-ನಾಗವಾರ) ಯೋಜನೆಗಳ ಬಗ್ಗೆ ಗಮನ ಸೆಳೆದರು.

“ನಗರದ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅದನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರದಂತಹ ಬರಪೀಡಿತ ಜಿಲ್ಲೆಗಳ ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಯಶಸ್ವಿಯಾಗಿ ಹೆಚ್ಚಿಸಿದ್ದೇವೆ. ಕೃಷಿ ಚಟುವಟಿಕೆಗಳಿಗೆ ಇದು ಜೀವ ತುಂಬಿದೆ,” ಎಂದು ಸಚಿವರು ನಿಯೋಗಕ್ಕೆ ವಿವರಿಸಿದರು. ಈ ಸುಸ್ಥಿರ ಅಭಿವೃದ್ಧಿ ಮಾದರಿಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಕರ್ನಾಟಕ ಸರ್ಕಾರ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ರೂಪಿಸಿರುವ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಆಕ್ಷನ್ ಪ್ಲಾನ್’ ನಲ್ಲಿ ಭಾಗಿಯಾಗಲು ಪೆನಾಂಗ್ ನಿಯೋಗ ಉತ್ಸುಕತೆ ತೋರಿತು. “ಪೂರ್ವದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಪೆನಾಂಗ್ ಜೊತೆಗಿನ ಸಹಭಾಗಿತ್ವಕ್ಕೆ ನಮ್ಮ ಸರ್ಕಾರ ಮುಕ್ತವಾಗಿದೆ,” ಎಂದು ಸಚಿವರು ಸ್ವಾಗತಿಸಿದರು. ಬೆಂಗಳೂರು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಹಾಗೂ ಪೆನಾಂಗ್ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯ ಸಮ್ಮಿಲನದಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಉಭಯ ನಾಯಕರು ಅಭಿಪ್ರಾಯವ್ಯಕ್ತಪಡಿಸಿದರು.

ಸಭೆಯ ಅಂತ್ಯದಲ್ಲಿ, ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಅವರು ಸಚಿವ ಭೋಸರಾಜು ಅವರಿಗೆ ಮಲೇಷ್ಯಾ ಮತ್ತು ಪೆನಾಂಗ್‌ಗೆ ಭೇಟಿ ನೀಡುವಂತೆ ಅಧಿಕೃತ ಆಹ್ವಾನ ನೀಡಿದರು. ವಿಶೇಷವಾಗಿ ಪೆನಾಂಗ್‌ನ ವಿಶ್ವವಿದ್ಯಾಲಯದ ಸಂಶೋಧನಾ ಸೌಲಭ್ಯಗಳು ಮತ್ತು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ಖುದ್ದಾಗಿ ವೀಕ್ಷಿಸಿ, ಮಾನವ ಸಂಪನ್ಮೂಲ ಅಭಿವೃದ್ಧಿ ಒಪ್ಪಂದವನ್ನು (MoU) ಅಂತಿಮಗೊಳಿಸಲು ಈ ಭೇಟಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳಾ, ಕೆ-ಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಸೇರಿದಂತೆ ಪೆನಾಂಗ್ ರಾಜ್ಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ರಾಜಕೀಯ

‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

Published

on

ಮೈಸೂರು: ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಡಿ ದೇವರಾಜು ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ಮೈಸೂರಿನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಷ್ಟು ವರ್ಷದ ರಾಜಕಾರಣ ನನಗೆ ತೃಪ್ತಿ ತಂದಿದ್ದು, ಮುಖ್ಯಮಂತ್ರಿ ಆಗಿ ಪೂರ್ಣಾವಧಿಯಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ.

ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ.

https://x.com/siddaramaiah/status/2008449729609560294?s=20

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು.

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದೇವೆ. ಆದರೆ ಕಾಲಘಟ್ಟ ಬೇರೆ ಬೇರೆಯಾಗಿದೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ಟ್ವಿಟ್‌ನಲ್ಲಿ ಹಂಚಿಕೊಂಡಿದ್ದಾರೆ.

Continue Reading
Advertisement

Title

ದಿನದ ಸುದ್ದಿ3 days ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 days ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

ದಿನದ ಸುದ್ದಿ4 days ago

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ...

ದಿನದ ಸುದ್ದಿ4 days ago

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್...

ದಿನದ ಸುದ್ದಿ7 days ago

ಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುದ್ದಿದಿನಡೆಸ್ಕ್:ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್...

ದಿನದ ಸುದ್ದಿ7 days ago

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ...

ದಿನದ ಸುದ್ದಿ1 week ago

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ...

ದಿನದ ಸುದ್ದಿ1 week ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು...

ದಿನದ ಸುದ್ದಿ1 week ago

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು...

ಅಂತರಂಗ1 week ago

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ...

Trending