Connect with us

ರಾಜಕೀಯ

99% ಭಾರತೀಯರು V/S 1% ಕೋಮುವಾದಿಗಳು

Published

on

  • 8.1.2020ರಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಬೆಂಗಳೂರಿನಲ್ಲಿ ಕೇಂದ್ರದ ಜನವಿರೋಧಿ ಪೌರತ್ವ ಕಾಯ್ದೆ[CAA, NRC, NPR] ಕುರಿತು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ಬರಹ ರೂಪ ಇಲ್ಲಿದೆ.

–ದೇವನೂರ ಮಹಾದೇವ

ಭಾರತ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲ, ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ಬಂದಾಗಲೆಲ್ಲ, ಭಾರತ ತನ್ನ ಅಂತಃಸತ್ವದ ಭವ್ಯತೆಯನ್ನು ಬೆಳಗುತ್ತದೆ ಎಂದು ಕಾಣುತ್ತದೆ. ಆ ಬೆಳಗುವಿಕೆ ಇಂದು ನಿಚ್ಚಳವಾಗಿ ಕಾಣುತ್ತಿದೆ. ಹೃದಯ, ಮಿದುಳು, ಹೊಟ್ಟೆ ತುಂಬ ಗಣಿ ಲೂಟಿ ದುಡ್ಡನ್ನೆ ತುಂಬಿಕೊಂಡ ಮದದ ಸೋಮಶೇಖರರೆಡ್ಡಿ ಎಂಬ ಬಿಜೆಪಿ ಶಾಸಕ ಸಿಎಎ ಮತ್ತು ಎನ್‍ಆರ್‍ಸಿ ವಿರೋಧಿಸುವವರಿಗೆ ‘ನೀವು 20% ಇದ್ದೀರಿ, ನಾವು 80% ಇದ್ದೇವೆ.

ಜೋಕೆ’ ಎಂದು ಹೇಳಿದ್ದಕ್ಕೆ ಭವ್ಯ ಎಂಬ ತರುಣಿ ಹೇಳುವುದು ಹೀಗೆ- “ರೆಡ್ಡಿ, ನೆನಪಿರಲಿ, ಸಿಎಎ ಮತ್ತು ಎನ್‍ಆರ್‍ಸಿ ವಿರೋಧಿಸುವ ನಾವು ಭಾರತೀಯರು 99% ಇದ್ದೇವೆ. ನೀವು ಕೋಮುವಾದಿಗಳು 1% ಇದ್ದಿರಿ” ಈ ಮಾತಲ್ಲಿ ಭಾರತದ ಭವ್ಯತೆ ಪ್ರಕಾಶಗೊಳ್ಳುತ್ತದೆ. ಇಂದು ಸಂಘರ್ಷ ನಡೆಯುತ್ತಿರುವುದು 99% We the people of India V/s 1% ಕೋಮುವಾದಿ ಗ್ಯಾಂಗ್ ನಡುವೆ.

ಹೀಗೆ ಭವ್ಯ ಥರಾನೇ ಉನ್ನತ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್ ಹಾಗೂ ಕಣ್ಣನ್ ಗೋಪಿನಾಥ್ ನಡೆನುಡಿ ನೋಡಿದಾಗಲೂ ಭಾರತಕ್ಕೆ ಭವಿಷ್ಯವಿದೆ ಅನ್ನಿಸುತ್ತದೆ. ಎಲ್ಲಕ್ಕಿಂತ ಸಂವಿಧಾನದ ಮೌಲ್ಯಕ್ಕೆ ಬಿಲ ತೋಡಿ ತಿಂದು ಹಾಕುತ್ತಿದ್ದ ಇಲಿ ಹೆಗ್ಗಣಗಳ ವಿರುದ್ಧವಾಗಿ ವಿದ್ಯಾರ್ಥಿ ಯುವಜನರ ಸ್ಫೋಟ ಕಂಡಾಗ ಈ ವಿದ್ಯಾರ್ಥಿ ಯುವಜನರ ನಾಯಕತ್ವಕ್ಕೆ ಭಾರತವನ್ನು ಕಾಪಾಡುವ ಶಕ್ತಿ ಇದೆ ಎಂದು ಅನ್ನಿಸುತ್ತದೆ.

ಇಂದು ದೇಶದ ತುಂಬಾ ಸಿಎಎ, ಎನ್‍ಆರ್‍ಸಿ ಎನ್‍ಪಿಆರ್ ಬಗ್ಗೆ ಭೀತಿ ತುಂಬಿದೆ. ಎಷ್ಟೆಂದರೆ ಇತ್ತೀಚೆಗೆ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ಮಾಹಿತಿಗಳನ್ನು ಸಂಗ್ರಹಿಸಲು ಬಂದಾಗ ಅಲ್ಲಿನ ಜನರು ಆ ಗಣತಿಯು ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ಬಲೆ ಇರಬೇಕೆಂದು ಭಾವಿಸಿ ಆ ಗಣತಿ ಫಾರಂಗಳನ್ನು ಹರಿದೆಸೆದು ಹಿಂದಕ್ಕೆ ಕಳಿಸಿದ್ದಾರೆ. ಅಷ್ಟೊಂದು ಭೀತಿ ಹರಡಿದೆ.

ಈಗ, ನನ್ನ ಹುಟ್ಟಿದ ದಿನಾಂಕ ಕೇಳಿದರೆ ನನ್ನ ಅವ್ವ ಹೇಳಿದಂತೆ-ಅದು ಸೋಮವಾರ ಸಂಜೆ ರೈಲು ಕವಲಂದೆ ಸ್ಟೇಷನ್‍ನಲ್ಲಿ ನಿಂತು ಹೊರಡುವ ಸಮಯವಂತೆ. ಹೀಗಿರುವಾಗ ದಿನಾಂಕ ಹೇಗೆ ಹೇಳಲಿ? ನನ್ನ ಮೊಮ್ಮಗಳಿಗೆ ನನಗೆ ಬರ್ತ್‍ಡೇ ಇಲ್ಲ ಎಂದು ತಿಳಿದು ಅವಳು ಬೇಜಾರು ಮಾಡಿಕೊಂಡು ‘ನನ್ನ ಹುಟ್ಟಿದ ದಿನವೇ ನಿನ್ನ ಹುಟ್ಟಿದ ದಿನ’ ಎಂದು ನನಗೆ ಸಮಾಧಾನ ಮಾಡಿದ್ದಾಳೆ! ನನಗೇ ಹೀಗಿರುವಾಗ, ಇನ್ನು ನಮ್ಮ ಅಪ್ಪನ ಹುಟ್ಟಿದ ದಿನಾಂಕ ಕೇಳಿದರೆ ಏನು ಹೇಳಲಿ? ಇರುವುದನ್ನು ಹೇಳಿದರೆ ನಾನು ಅನುಮಾನಾಸ್ಪದ [Doughtful] ವ್ಯಕ್ತಿಯಾಗುತ್ತೇನೆ.

ಏನು ಹೇಳಲಿ? ಮೋದಿಯವರ ಅಪ್ಪ ಹುಟ್ಟುವ ಐದು ವರ್ಷಕ್ಕೆ ಮೊದಲು ಎನ್ನಲೆ? ಅಥವಾ ಅಮಿತ್‍ಷಾರ ಅಪ್ಪ ಹುಟ್ಟುವ 20 ವರ್ಷಕ್ಕೆ ಮೊದಲು ಎನ್ನಲೆ? ಬಹುಶಃ ನನ್ನ ಮೂಲ ಇರುವುದು ಹರಪ್ಪ-ಮಹೆಂಜೋದಾರೋದಲ್ಲಿ. ಅದು ಇಂದು ಪಾಕಿಸ್ತಾನದಲ್ಲಿದೆ ಏನು ಮಾಡಲಿ? ಈಗ ಮೊದಲು ಎನ್‍ಪಿಆರ್ ಬಲೆ ಹಾಕುತ್ತಾರೆ. ಇದರ ಆಧಾರದ ಮೇಲೆ ಎನ್‍ಆರ್‍ಸಿ ಆವರಿಸಿ ಅನುಮಾನಾಸ್ಪದ [Doughtful] ಮಾಡುತ್ತಾರೆ. ಆಮೇಲೆ ಈ ಅನುಮಾನಾಸ್ಪದ ‘ಡಿ’ ಗೆ ಸಿಎಎ[ಕಾ] ಯಮಪಾಶ ಹಾಕುತ್ತಾರೆ. ಇದನ್ನೇ ಐತಿಹಾಸಿಕ ಎನ್ನುತ್ತಿದ್ದಾರೆ.

ಇಂತಹವುಗಳನ್ನೆಲ್ಲಾ ಮಾಡಲು ಹೊರಟವರು ಹೇಗೆ ಮಣ್ಣು ಮುಕ್ಕಿದರು ಎಂದು ನಾವು ಅಕ್ಕಪಕ್ಕ ನೋಡಿಯಾದರೂ ಕಲಿಯಬೇಕಾಗಿದೆ. ಪತ್ರಕರ್ತ ಕೆ.ಎಸ್.ದಕ್ಷಿಣಾಮೂರ್ತಿಯವರು ತಮ್ಮ ಲೇಖನವೊಂದರಲ್ಲಿ ಹೇಗೆ ಕೆಲವು ದೇಶಗಳು ತಂತಮ್ಮ ದೇಶದ ರಾಜಧರ್ಮ ಹಾಗೂ ಸಂವಿಧಾನದಲ್ಲಿ ಹಸ್ತಕ್ಷೇಪ ಮಾಡಲು ಹೋಗಿ ಏನೆಲ್ಲಾ ದುರಂತಕ್ಕೆ ತುತ್ತಾದವು ಎಂಬುದನ್ನು ವಿವರಿಸುತ್ತಾರೆ.

1956ರಲ್ಲಿ ಶ್ರೀಲಂಕಾ ‘ಸಿಂಹಳದವರಿಗೆ ಮಾತ್ರ’ ಎಂದು ಮಾಡಲು ಹೋಗಿ ಎಲ್‍ಟಿಟಿಇ ಹುಟ್ಟಿಗೆ ಕಾರಣವಾಯ್ತು. ಧ್ವಂಸ, ಹಿಂಸೆ, ಸಾವು, ನೋವು ರಾಜೀವ್‍ಗಾಂಧಿಯವರನ್ನು ಬಲಿ ತೆಗೆದುಕೊಂಡಿತು. ರುವಾಂಡಾದಲ್ಲಿ ಅಲ್ಪಸಂಖ್ಯಾತ ಟುಟ್ಸಿ ಮತ್ತು ಬಹುಸಂಖ್ಯಾತ ಹುಟುಗಳ ಮಧ್ಯೆ ಸರ್ಕಾರವೇ ಬತ್ತಿ ಇಟ್ಟಿತು. ಐ.ಡಿ ಕಾರ್ಡ್ ಕಡ್ಡಾಯ ಮಾಡುತ್ತದೆ. ಕೇವಲ ನೂರು ದಿನಗಳಲ್ಲಿ 8 ಲಕ್ಷ ಜನ ಹತರಾಗುತ್ತಾರೆ.

ಸಾಯುವಾಗ ಒಂದೇ ಗುಂಪಿನವರು ಸಾಯುವುದಿಲ್ಲ. ಅಮಾಯಕರು ಹೆಚ್ಚು ಸಾಯುತ್ತಾರೆ. ಇದನ್ನೀಗ ಭಾರತ ಸರ್ಕಾರ ಮಾಡಲು ಹೊರಟಿದೆ. ಪಾಕಿಸ್ಥಾನದಲ್ಲಿ ಕೂಡ ಉರ್ದು ಭಾಷೆ ಮತ್ತು ಲಿಪಿಯನ್ನು ಬೆಂಗಾಲಿ ಮುಸ್ಲಿಮರ ಮೇಲೆ ಹೇರಲು ಹೋಗಿ ಇಡೀ ರಾಷ್ಟ್ರವೇ ಹೋಳಾಯ್ತು.

ಯುಗೊಸ್ಲಾವಿಯದಲ್ಲಿ ಎಂದೋ ಮುಚ್ಚಿಹೋಗಿದ್ದ ಜನಾಂಗೀಯ/ ಧಾರ್ಮಿಕ ಬಿರುಕನ್ನು ಮತ್ತೆ ಕೆದಕಲು ಹೋಗಿ ಕ್ರಿಶ್ಚಿಯನ್‍ರ ವಿರುದ್ಧ ಮುಸ್ಲಿಮರು, ಸರ್ಬರ ವಿರುದ್ಧ ಬೊಸ್ನಿಯನ್ನರು, ಕ್ರೊವೇಷಿಯನ್ನರ ವಿರುದ್ಧ ಸರ್ಬರು ಪರಸ್ಪರ ಶತ್ರುಗಳಾಗಿ ಈಗಲೂ ಅಲ್ಲಿ ಹಿಂಸೆ ತಾಂಡವವಾಡುತ್ತಿದೆ.

ಈ ರೀತಿಯಾಗುವುದು ಭಾರತಕ್ಕೆ ಬೇಕಾಗಿದೆಯೆ? ಸರ್ಕಾರಕ್ಕೇ ತನ್ನ ವಿಫಲತೆ ಮುಚ್ಚಿಕೊಳ್ಳಲು ಬೇಕಾಗಿರಬಹುದು. ಜನರು ಪೌರತ್ವ ರುಜುವಾತು ಪಡಿಸಲು ಅಲೆಯುತ್ತಿರಲಿ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಕುಸಿತಕ್ಕೆ ತಲೆ ಕೆಡಿಸಿಕೊಳ್ಳದಿರಲಿ ಎಂದು ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿದೆ ಎಂದು ಕಾಣುತ್ತದೆ.

ನನ್ನ ಪೌರತ್ವದ ಬಗ್ಗೆ ಅನುಮಾನವಿರಬಹುದು ಆದರೆ ಸರ್ಕಾರವೇ ಪೌರತ್ವದ ಬೆಂಕಿ ಹಚ್ಚಿರುವುದರಲ್ಲಿ ಅನುಮಾನವೇ ಇಲ್ಲ. ಇದೆಲ್ಲಾ ಜನಸಮುದಾಯಕ್ಕೆ ಬೇಕಾಗಿದೆಯೆ? ಇದನ್ನೆಲ್ಲಾ ಪ್ರಶ್ನಿಸಬೇಕಾದ ಸಂಸತ್‍ನಲ್ಲಿ ಅಪರಾಧಿಗಳು, ಕೋಟ್ಯಾಧಿಪತಿಗಳು ಹೆಚ್ಚಾಗಿದ್ದು ಸಂಸತ್‍ನಿಂದ ಏನನ್ನೂ ನಿರೀಕ್ಷಿಸಲಾಗದು ಎನ್ನುವಂತಾಗಿದೆ. ಹಾಗೂ ರಾಜಕೀಯ ಪಕ್ಷಗಳ ಸ್ಥಿತಿಗತಿಯೂ ದಯನೀಯವಾಗಿದೆ.

ಕಮ್ಯುನಿಸ್ಟರು ಸ್ಥಗಿತವಾಗಿದ್ದಾರೆ. ಆಮ್‍ಆದ್ಮಿ, ಸ್ವರಾಜ್‍ಇಂಡಿಯಾದಂತಹ ಪ್ರಯೋಗಶೀಲ ಪಕ್ಷಗಳು ವ್ಯಾಪಕವಾಗುತ್ತಿಲ್ಲ. ಮೋದಿಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿದೆ. ವಿಪರ್ಯಾಸವೆಂದರೆ ಈ ಮೋದಿಶಾ ಆಡಳಿತವು ಕಾಂಗ್ರೆಸ್ ಮತ್ತು ಇನ್ನಿತರ ಪಕ್ಷಗಳನ್ನು ತೆವಳುವಂತೆ ಮಾಡಿಬಿಟ್ಟಿವೆ.

ವಿಪರ್ಯಾಸವೆಂದರೆ ಈ ಮೊದಿಶಾ ಆಡಳಿತವು ಸ್ವತಃ ತನ್ನ ಪಕ್ಷ ಬಿಜೆಪಿಯನ್ನೇ ಧ್ವಂಸ ಮಾಡಿಬಿಟ್ಟಿದೆ. ಅತಿ ದೊಡ್ಡ ಪಕ್ಷ ಎನಿಸಿಕೊಂಡಿರುವ ಬಿಜೆಪಿಗೆ ಒಂದು ರಾಜಕೀಯ ಪಕ್ಷಕ್ಕೆ ಇರಬೇಕಾದ ಯಾವ ಚಹರೆಯೂ ಇಂದು ಉಳಿದಿಲ್ಲ. ಜೀವ ಇಲ್ಲದ ಸತ್ತ ದೇಹದಂತೆ ಇದೆ. ಬಿಜೆಪಿ ಪಕ್ಷದ ಹೆಸರಿನಲ್ಲಿ ಮೋದಿ-ಶಾ ಗ್ಯಾಂಗ್ ಆಡಳಿತ ನಡೆಸುತ್ತಿದೆ.

ಈ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಅವರು ಸಂವಿಧಾನದ ಸಭೆಯಲ್ಲಿ, ಜಾತಿ ಮತ ಭೇದದ ಕಾರಣವಾಗಿ ಭಾರತವು ಹೇಗೆ ಗುಲಾಮಗಿರಿಗೆ ತುತ್ತಾಯಿತು ಎಂಬ ಸಂಗತಿಗಳನ್ನು ವಿವರಿಸಿ ಹೇಳುತ್ತ ನೀಡುವ ಎಚ್ಚರಿಕೆಯನ್ನು ನಾವಿಂದು ಕೇಳಿಸಿಕೊಳ್ಳಬೇಕಾಗಿದೆ- “ಚರಿತ್ರೆ ಮತ್ತೆ ಮರುಕಳಿಸುತ್ತದೆಯೇ? ಈ ಯೋಚನೆ ನನ್ನಲ್ಲಿ ಆತಂಕ ಮೂಡಿಸುತ್ತದೆ.

ನಮಗೆ ಈಗಾಗಲೇ ಇದ್ದ ಹಳೆಯ ಶತ್ರುಗಳಾದ ಜಾತಿ, ಧರ್ಮಗಳ ಜೊತೆಗೆ ವಿಭಿನ್ನ ಮತ್ತು ವಿರೋಧೀ ರಾಜಕೀಯ ಸಿದ್ಧಾಂತಗಳ ಹಲವು ರಾಜಕೀಯ ಪಕ್ಷಗಳೂ ಸೇರಿಕೊಳ್ಳುತ್ತವೆ. ಈ ವಾಸ್ತವ ಅರಿವಾದ ಕೂಡಲೆ ನನ್ನ ಆತಂಕ ಇನ್ನೂ ತೀವ್ರವಾಗುತ್ತದೆ. ಭಾರತೀಯರು ದೇಶವನ್ನು ತಮ್ಮ ಮತಧರ್ಮಗಳಿಗಿಂತ ಮುಖ್ಯವೆಂದು ಭಾವಿಸುತ್ತಾರೆಯೋ ಅಥವಾ ಅವರಿಗೆ ತಮ್ಮ ದೇಶಕ್ಕಿಂತ ತಮ್ಮ ಮತಧರ್ಮಗಳೇ ಹೆಚ್ಚು ಮುಖ್ಯವಾಗುತ್ತದೋ? ನನಗೆ ಗೊತ್ತಾಗುತ್ತಿಲ್ಲ. ಆದರೆ ಇಷ್ಟಂತೂ ಖಚಿತ.

ರಾಜಕೀಯ ಪಕ್ಷಗಳು ಜಾತಿಧರ್ಮವನ್ನೇ ದೇಶಕ್ಕಿಂತ ಮುಖ್ಯ ಎಂದು ಭಾವಿಸಿದರೆ ನಮ್ಮ ಸ್ವಾತಂತ್ರ್ಯಕ್ಕೆ ಎರಡನೇ ಬಾರಿ ಗಂಡಾಂತರ ಬಂದಂತೆ. ಹಾಗೇನಾದರೂ ಆದರೆ ಬಹುಶಃ ಸ್ವಾತಂತ್ರ್ಯ ಅನ್ನುವುದು ನಮಗೆ ಮತ್ತೆ ಸಿಗುವುದಿಲ್ಲ. ಅದನ್ನು ಶಾಶ್ವತವಾಗಿ ಕಳೆದುಕೊಂಡುಬಿಡುತ್ತೇವೆ. ಇದರ ವಿರುದ್ಧ ನಾವೆಲ್ಲರೂ ಅಚಲವಾಗಿ ನಿಲ್ಲಬೇಕು. ನಮ್ಮಲ್ಲಿ ಕೊನೆಯ ಹನಿ ರಕ್ತ ಇರುವವರೆಗೆ ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ದೃಢಸಂಕಲ್ಪ ಮಾಡಬೇಕು.”

ಈ ಕಾಲ ಈಗ ಬಂದಿದೆ. ಭಾರತದ ಪೌರತ್ವ ನಿರ್ಧಾರಕ್ಕೆ ಮತಧರ್ಮಗಳನ್ನೂ ಪರಿಗಣಿಸಿ ಸಂವಿಧಾನದ ಮೌಲ್ಯಕ್ಕೆ ಬಿಲ ತೋಡಿ ತಂತಾನೇ ಸಂವಿಧಾನದ ಆಸೆಗಳು ಕುಸಿಯುವಂತೆ ಮಾಡಲಾಗುತ್ತಿದೆ. ಹೌದು, ಇಂದು ಭಾರತ ಎರಡನೆ ಸ್ವಾತಂತ್ರ್ಯ ಹೋರಾಟಕ್ಕಾಗಿ ಯಾಚಿಸುತ್ತಿದೆ.

ಕೊನೆಯದಾಗಿ, ಇಷ್ಟಿದ್ದೂ ಹೀಗಿದ್ದೂ ಆದರೂ ಮೋದಿಯವರಿಗೆ ಒಂದು ಪ್ರಾರ್ಥನೆ ಮಾಡುವೆ. ನಿಮ್ಮ ಕಣ್ಗಳ ಕೆಳಗೆ ನಡೆದ ಜೆಎನ್‍ಯು ಘಟನೆಯನ್ನು ನೋಡಿ ತತ್ತರಿಸಿ ಹೋದೆ. ಗುಂಪು ಥಳಿತ ನೋಡಿದಾಗಲು ಈ ದೇಶದಲ್ಲಿ ರಾಜನಿಲ್ಲ (ರೂಲರ್ ಇಲ್ಲ), ಅರಾಜಕತೆ ಇದೆ ಅನ್ನಿಸುತ್ತದೆ. ಪೊಲೀಸ್ ವ್ಯವಸ್ಥೆ ಕಳಂಕಿತವಾಗಿ ಬಿಟ್ಟಿತು.

ಇನ್ನು ಮಿಲ್ಟ್ರಿಕತೆ ಏನೋ ಗೊತ್ತಿಲ್ಲ. ಇದು ಪ್ರಧಾನಿಯ ಬುಡವನ್ನೆ ಬುಡಮೇಲು ಮಾಡುತ್ತದೆ. ಮಾಂತ್ರಿಕರು ಭೂತ ಪಿಶಾಚಿಗಳನ್ನು ವಶಪಡಿಸಿಕೊಂಡು ಒಂದು ಬಾಟಲ್‍ನಲ್ಲಿ ಕೂಡಿ ಭದ್ರವಾಗಿ ಮುಚ್ಚಳ ಹಾಕಿ ಇಟ್ಟುಕೊಂಡಿರುತ್ತಾರಂತೆ. ಅವರೇನಾರು ರಾಗದ್ವೇಷಕ್ಕೆ ಒಳಗಾಗಿ ಮುಚ್ಚಳ ತೆಗೆದು ಪಿಶಾಚಿಗಳನ್ನು ತನ್ನ ಹಗೆ ಮೇಲೆ ಛೂ ಬಿಟ್ಟರೆ ಅವು ಎಲ್ಲವನ್ನೂ ತಿಂದು ಹಾಕಿ ಕೊನೆಗೆ ವಶಪಡಿಸಿಕೊಂಡಿರುವ ಮಾಂತ್ರಿಕನ ಬಳಿಗೆ ಬಂದು ಮಾಂತ್ರಿಕನನ್ನೇ ತಿಂದು ಹಾಕುತ್ತವಂತೆ.

ಒಬ್ಬ ರೂಲರ್ Negative ಆದಾಗ ಇದು ಆಗುತ್ತಾ ಬಂದಿದೆ. ಇಂಥವರಿಗೆ ಅವರ ಪಕ್ಕದಲ್ಲಿ ಇರುವವರೇ ಮೃತ್ಯು ಆಗುತ್ತಾರೆ. ತಾವು ಗುಹೆಯಲ್ಲಿ ಧ್ಯಾನ ಮಾಡುತ್ತಿರುವುದನ್ನು ಟಿವಿಯಲ್ಲಿ ನೋಡಿದ್ದರಿಂದ ಇದನ್ನು ಹೇಳಬೇಕಾಯ್ತು, ಕ್ಷಮೆ ಇರಲಿ. ತಮ್ಮ ಧ್ಯಾನವು ರಾಗದ್ವೇಷ ಇಲ್ಲದ ಮನಸ್ಸನ್ನು ಪಡೆಯುವಂತಾಗುವುದಕ್ಕೆ ಕಾರಣವಾಗಿ ಅದರಿಂದ ಆರ್ಥಿಕ ಚೇತರಿಕೆ, ಬೆಲೆ ಏರಿಕೆಯ ನಿಯಂತ್ರಣ, ಉದ್ಯೋಗ ಹೆಚ್ಚಳಕ್ಕೆ ಕಾರಣವಾದರೆ ದೇಶಕ್ಕೆ ಒಳ್ಳೆಯದು, ತಮಗೂ ಕೂಡ. ನಮಸ್ಕಾರ.

ಕೃಪೆ : ನಮ್ಮ ಬನವಾಸಿ.ಕಾಂ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending