Connect with us

ಲೈಫ್ ಸ್ಟೈಲ್

ಇದು ಬೆಲ್ಲದ ತಾಕತ್ತು..!

Published

on

  • ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ

ಬೆಲ್ಲ ಬಹುತೇಕ ಜನರಿಗೆ ಗೊತ್ತು. ಇದನ್ನು ನಾವೆಲ್ಲರೂ ಸಿಹಿ ಖಾದ್ಯಗಳ ತಯಾರಿಕೆಯಲ್ಲಿ ಬಳಸುತ್ತೇವೆ ಅಂತಾ.ಹಾಗಾಗಿ ಸಕ್ಕರೆಯ ಬದಲಾಗಿ ಬೆಲ್ಲವನ್ನು ಅನೇಕ ಕಡೆಗಳಲ್ಲಿ ಬಳಸಲಾಗುತ್ತದೆ. ಹಬ್ಬದ ದಿನಗಳಂದು ವಿಶೇಷ ಸಿಹಿ ತಿಂಡಿ ತಯಾರಿಕೆಯಲ್ಲಿ ಬಹುತೇಕ ಬೆಲ್ಲವನ್ನೇ ಬಳಸುವುದು ಹಿಂದಿನಿಂದಲೂ ಬಂದಿರುವ ಸಂಪ್ರದಾಯವಾಗಿದೆ.

ಸಾಮಾನ್ಯವಾಗಿ ಜನರು ಊಟವಾದ ಮೇಲೆ ಬೆಲ್ಲ ತಿನ್ನುತ್ತಾರೆ. ಆದರೆ ಅದೇಕೆ ಎನ್ನುವುದು ಹಲವರಿಗೆ ಗೊತ್ತಿಲ್ಲ. ಚಳಿಗಾಲದಲ್ಲಿ ಬೆಲ್ಲ ತಿಂದರೆ ವಿಟಮಿನ್ ಗಳು ಮತ್ತು ಲವಣಗಳು ಹೊಟ್ಟೆ ಸೇರುತ್ತವೆ. ಜೊತೆಯಲ್ಲಿಯೇ ನಿರೋಧಕ ಶಕ್ತಿಯನ್ನು ಸೃಷ್ಟಿಸಿ ದೇಹವನ್ನು ಬೆಚ್ಚಗಿಡುತ್ತದೆ. ಶೀತ ಮತ್ತು ಕೆಮ್ಮು ಇದ್ದರೆ ನಿವಾರಿಸುವುದಲ್ಲದೆ, ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದೇ ಕಾರಣದಿಂದ ಈ ಸಹಜ ಸಿಹಿ ಭಾರತದಲ್ಲಿ ಅತೀ ಜನಪ್ರಿಯ ಹಾಗಾಗಿ ನಮ್ಮ ಹಿರಿಯರು ಊಟ ಮುಗಿಸಿ ಬೆಲ್ಲ ಬಾಯಿಗಿಡುವುದು ನಾವೆಲ್ಲರೂ ಕಂಡಿದ್ದೇವೆ.ವಿಶೇಷವೆಂದರೆ ಬೆಲ್ಲದಲ್ಲಿ ಸಕ್ಕರೆಗಿಂತ ಹೆಚ್ಚಿನ ಆರೋಗ್ಯಕಾರಿ ಉಪಯೋಗಳು ಇರುವುದರಿಂದ ಅದು ಸಕ್ಕರೆಗಿಂತ ವಿಶೇಷ ಎನಿಸಿದೆ. ಹಾಗಾದರೆ ಬೆಲ್ಲದ ತಾಕತ್ತಿನ ಪ್ರಾಮುಖ್ಯತೆ ಹಾಗೂ ಅದರಿಂದಾಗುವ ಪ್ರಯೋಜನ ಏನೆಂಬುದನ್ನು ನಾವೆಲ್ಲರೂ ತಿಳಿಯಲೇಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಬೆಲ್ಲವು ಯಾವ ರೀತಿಯಲ್ಲಿ ಮಾನವರಿಗೆ ಸಹಕಾರಿ ಮತ್ತು ಉಪಯೋಗವಾಗುತ್ತದೆ ಎಂಬುದು ಇಲ್ಲಿ ತಿಳಿಸಲು ಸಣ್ಣ ಪ್ರಯತ್ನ ಮಾಡಲಾಗಿದೆ.

ಜೀರ್ಣಕ್ರಿಯೆಗೆ ಸಹಕಾರಿ ಬೆಲ್ಲದ ತಾಕತ್ತು

ಮನುಷ್ಯನ ಜೀರ್ಣಕ್ರಿಯೆ ಚನ್ನಾಗಿಯಾಗಿ ಸಾಗಿದರೆ, ಆ ಮನುಷ್ಯನಿಗೆ ಖಂಡಿತಾವಾಗಿಯೊ ಯಾವುದೇ ರೋಗ ಬರುವುದಿಲ್ಲ ಎನ್ನುವ ಮಾತು ಸತ್ಯವಾದರೆ. ಇನ್ನೊಂದು ಕಡೆಯಲ್ಲಿ ಒಂದು ವೇಳೆ ಆ ಮಾನವನಿಗೆ ಪಚನ ಕ್ರೀಯೇ ಸರಿಯಾಗಿ ಆಗದೇ ಹೋದರೆ, ಆ ವ್ಯಕ್ತಿಗೆ ನೂರಾರು ಕಾಯಿಲೆಗಳು ಖಂಡಿತಾ ಆವರಿಸಿಕೊಳ್ಳುತ್ತವೆ – ಆವರಿಸಿಕೊಳ್ಳಬಹುದಾಗಿದೆ ಎಂಬ ಮಾತು ನಿಜ. ಆದರಿಂದ ಈ ದಿಸೆಯಲ್ಲಿ ಬೆಲ್ಲದ ತಾಕತ್ತಿನ ಅಂಶಗಳನ್ನು ನಾವು ಇಲ್ಲಿ ಗಮನಿಸಿದಾಗ ಇದರ ಶಕ್ತಿ ಸಾಮರ್ಥ್ಯ ಎಂತಹದು ಎನ್ನುವುದು ನಮಗೆ ಅರಿವಾಗುತ್ತದೆ.

ಬೆಲ್ಲದ ಬಳಕೆ ಇಂದು, ನಿನ್ನೆಯದಲ್ಲ ಪ್ರಾಚೀನ ಕಾಲದಿಂದಲೂ ಸಹಾ ಬೆಲ್ಲವನ್ನು ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.ಬೆಲ್ಲ ರುಚಿಯಲ್ಲಿ ಎಷ್ಟು ಸಿಹಿ ಇದಿಯೋ ಅಷ್ಟೇ ಇದರ ಸರಿಯಾದ ಬಳಕೆಯು ಪ್ರಾಮುಖ್ಯತೆ ಪಡೆದಿದೆ.ನಮ್ಮ ದೇಹದ ಆರೋಗ್ಯ ದೃಷ್ಟಿಯಿಂದ ಸುಮಧುರವೆಂದರೆ ತಪ್ಪಿಲ್ಲ. ಏಕೆಂದರೆ ಬೆಲ್ಲ ದೇಹದಲ್ಲಿನ ರಕ್ತವನ್ನು ಶುದ್ಧೀಕರಣ ಮಾಡಲು ನೆರವು ನೀಡುತ್ತದೆ. ಬೆಲ್ಲ ಸೇವನೆಯು ಜೀರ್ಣ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದ್ದು, ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ನೆರವು ನೀಡುತ್ತದೆ.

ಅಜೀರ್ಣ ಎನಿಸಿದಾಗ ಸ್ವತ ಬೆಲ್ಲವನ್ನು ಈರುಳ್ಳಿ ಜೊತೆ ಸೇರಿಸಿ ತಿನ್ನುವುದರಿಂದ, ಉಪಶಮನ ದೊರೆಯುತ್ತದೆ. ಬೆಲ್ಲ ನಮ್ಮ ಹೊಟ್ಟೆಯನ್ನು ಕೂಡಾ ತಂಪಾಗಿಡಲು ನೆರವಾಗಿತ್ತದೆ. ಬೆಲ್ಲದಲ್ಲಿ ಕಬ್ಬಿಣದ ಅಂಶ ಇರುವುದರಿಂದ, ರಕ್ತ ಹೀನತೆಯ ಸಮಸ್ಯೆ ಎದುರಿಸುತ್ತಿರುವ ಬಹು ಜನರಿಗೆ ಇದು ಖಂಡಿತಾ ಉಪಯೋಗಕ್ಕೆ ಬರುತ್ತದೆ.ಕೆಮ್ಮು ಅಥವಾ ಗಂಟಲಿನಲ್ಲಿ ನವೆ ಅಥವಾ ಕೆರೆತ ಉಂಟಾದಲ್ಲಿ ಆಗ ಸ್ವಲ್ಪ ಈರುಳ್ಳಿಯನ್ನು ಸುಟ್ಟು ಅದರೊಂದಿಗೆ ಬೆಲ್ಲವನ್ನು ಸೇರಿಸಿ ತಿನ್ನುವುದರಿಂದ ಕೆಮ್ಮಿನಿಂದ ಉಪಶಮನ ನೀಡುತ್ತದೆ. ಬೆಲ್ಲದ ಚೂರನ್ನು ಬಾಯಿಯಲ್ಲಿ ಹಾಕಿಕೊಳ್ಳುವುದರಿಂದ ಉಸಿರಾಟದ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಹದಿಹರೆಯದ ಹೆಣ್ಣು – ಗಂಡು ಮಕ್ಕಳಲ್ಲಿ ಉಂಟಾಗುವ ರಕ್ತ ಹೀನತೆ ಸಮಸ್ಯೆಯನ್ನು ಶಮನಗೊಳಿಸಲು ಬೆಲ್ಲವು ಸಹಾಯಕವಾಗುತ್ತದೆ ಮತ್ತೆ ಬೆಲ್ಲದ ಸೇವನೆಯು ಮುಖದ ಛಾಯೆಯನ್ನು ಹೆಚ್ಚಿಸುತ್ತದೆ ಎನ್ನುವುದು ಸತ್ಯ ಹಾಗೂ ರಾತ್ರಿ ಮಲಗುವ ಮುನ್ನ ಹಾಲಿಗೆ ಬೆಲ್ಲ ಸೇರಿಸಿ ಕುಡಿಯುವುದರಿಂದ ಸುಗಮವಾಗಿ ಜೀರ್ಣಕ್ರಿಯೆಯು ಸರಿಯಾಗಿ ನಡೆಯುತ್ತದೆ ಹೀಗೆ ಜೀರ್ಣಕ್ರಿಯೆ ಸಮಸ್ಯೆಯ ಪರಿಹಾರದ ಜೊತೆಗೆ ಇನ್ನೂ ನಮ್ಮ ನೂರಾರು ಆರೋಗ್ಯ ಸಮಸ್ಯೆಗಳಿಗೆ ಬೆಲ್ಲ ತಿನ್ನುವುದರಿಂದ ಪರಿಹಾರ ದೊರೆಯುತ್ತದೆ.

ಹಲವು ಉಪಯೋಗಗಳ ಆಗರ ಬೆಲ್ಲದ ತಾಕತ್ತು

ಅತಿಯಾದ ರಕ್ತಹೀನತೆಯಿಂದ ನಿತ್ರಾಣವಾಗುವವರಿಗೆ ಬೆಲ್ಲ ಸೇವನೆ ಅತ್ಯುತ್ತಮ ಪರಿಹಾರ ಮಾರ್ಗ, ಇದರಲ್ಲಿ ಕಬ್ಬಿಣದಂಶ ಅತ್ಯಧಿಕವಾಗಿದೆ. ಬೆಲ್ಲದಲ್ಲಿ ಪೊಟಾಶಿಯಂ ಮತ್ತು ಸೋಡಿಯಂ ಇರುವ ಕಾರಣ ದೇಹದಲ್ಲಿ ಆಮ್ಲೀಯ ತತ್ವಗಳನ್ನು ನಿಭಾಯಿಸುತ್ತದೆ. ಹೀಗಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.ಹಾಲು ಮತ್ತು ಬೆಲ್ಲ ಸೇರಿದರೆ, ಎರಡರಲ್ಲಿನ ಉತ್ತಮ ಗುಣಗಳು ದೇಹಕ್ಕೆ ಸೇರ್ಪಡೆಯಾಗುತ್ತವೆ ಇದರಿಂದ ನಮ್ಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಜೊತೆಗೆ ಪ್ರತಿದಿನ ಒಂದು ತುಂಡು ಬೆಲ್ಲವನ್ನು ಕುಟ್ಟಿ ಪುಡಿಮಾಡಿ ಹಾಲಿನ ಜತೆ ಬೆರೆಸಿ ಕುಡಿದರೆ ಆರೋಗ್ಯ ಸುಧಾರಣೆಯುತ್ತ ಸಾಗುತ್ತದೆ ಹಾಗೆ ಅತ್ಯುತ್ತಮ ಪರಿಣಾಮ ಸಹ ಬೀರಲಿದೆ.

ಬೆಲ್ಲ ಸೇರಿಸಿದ ಹಾಲನ್ನು ಕುಡಿಯುವುದರಿಂದ ರಕ್ತ ಶುದ್ಧೀಕರಣಕ್ಕೆ ನೆರವಾಗಲಿದೆ ಇದರಿಂದ ರಕ್ತದಲ್ಲಿ ಇರುವ ವಿಷ ಅಂಶವನ್ನು ನಾಶ ಮಾಡಲು ಸಾಧ್ಯವಾಗುತ್ತದೆ.( ಬೆಲ್ಲದ ಅತೀ ಲಾಭವೆಂದರೆ ರಕ್ತ ಶುದ್ಧೀಕರಣ,ನಿತ್ಯವೂ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತ ಶುದ್ಧವಾಗಿ ದೇಹವನ್ನು ಆರೋಗ್ಯವಾಗಿಡುತ್ತದೆ.)
ಇದಲ್ಲದೆ ಬೆಲ್ಲ ಬೆರೆಸಿದ ಹಾಲು ಸೇವನೆಯಿಂದ ಜೀರ್ಣಕ್ರಿಯೆಯೂ ಉತ್ತಮಗೊಳ್ಳಲಿದೆ.ಬೆಲ್ಲವನ್ನು ನೀರಿನೊಂದಿಗೆ ಸೇವಿಸುವ ಬದಲಿಗೆ ಹಾಲಿನೊಂದಿಗೆ ಸೇವಿಸಿದರೆ ಉತ್ತಮ ಎಂಬ ಅಂಶವನ್ನು ಆಯುರ್ವೇದ ವಿಜ್ಞಾನ ಪ್ರತಿಪಾದಿಸುತ್ತದೆ. ಸಕ್ಕರೆ ಸೇವನೆಯಿಂದ ದೇಹದ ತೂಕ ಹೆಚ್ಚುವುದು ಖಚಿತ.

ಆದರೆ, ಬೆಲ್ಲ ಸೇವನೆಯಿಂದ ಈ ರೀತಿಯ ಪ್ರಮಾದ ಆಗುವುದಿಲ್ಲ.ಇದಲ್ಲದೆ ಬೆಲ್ಲ ಮಿಶ್ರಿತ ಹಾಲಿನ ಜತೆಗೆ ಚಿಕ್ಕದೊಂದು ಶುಂಠಿ ತುಂಡನ್ನು ಸೇರಿಸಿ ಕುಡಿದರೆ, ಮೂಳೆಗಳ ಸಂದುಗಳಲ್ಲಿ ಆಗುವ ನೋವನ್ನು ಕ್ರಮೇಣ ನಿವಾರಿಸಲಿದೆ. ಪ್ರತಿನಿತ್ಯ ಈ ಅಭ್ಯಾಸವನ್ನು ರೂಢಿಸಿಕೊಂಡರೆ ಒಳ್ಳೆಯದು ಜೊತೆಗೆ ಬೆಲ್ಲ ಸೇರಿಸಿದ ಹಾಲು ಕುಡಿದರೆ ಚರ್ಮದ ಕಾಂತಿ ವೃದ್ಧಿಯಾಗಲಿದೆ. ತುಂಡು ಬೆಲ್ಲವನ್ನು ಪ್ರತಿದಿನ ನಾವು ತೆಗೆದುಕೊಳ್ಳುವ ಆಹಾರದೊಂದಿಗೆ ಸೇವಿಸಿದರೆ ಮುಖದಲ್ಲಿ ಮೊಡವೆಗಳಾಗುವ ಸಾಧ್ಯತೆಗಳು ಕಡಿಮೆಯಿರುತ್ತವೆ. ಜೊತೆಗೆ ಬೆಲ್ಲ ಸೇವನೆಯಿಂದ ಚಳಿಗಾಲದಲ್ಲಿ ಬ್ಯಾಕ್ಟೀರಿಯಾದ ಜೊತೆ ಹೋರಾಡಲು ವಿನಾಯಿತಿ ನೀಡುವಂತಹ ಶಕ್ತಿಯನ್ನು ನೀಡುತ್ತದೆ. ಹೆಚ್ಚಿನ ವ್ಯಕ್ತಿಗಳಿಗೆ ಜೀರ್ಣಕ್ರಿಯೆ ಸಾಮಾನ್ಯ ಸಮಸ್ಯೆಯಾಗಿದೆ.

ಜಂಕ್ ಫುಡ್ ಅನಿಯಮಿತ ಜೀವನಶೈಲಿ ಅಥವಾ ಕಡುಬಯಕೆಯ ಕಾರಣದಿಂದಾಗಿ ಅಜೀರ್ಣ ಉಂಟಾಗುವುದು. ಅಜೀರ್ಣ ಸಮಸ್ಯೆ ಯಾವುದೇ ಸಮಯದಲ್ಲಿ ಮತ್ತು ಎಲ್ಲಿಯಾದರೂ ವ್ಯಕ್ತಿಯ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ನಾವೆಲ್ಲರೂ ಅಜೀರ್ಣ, ಮಲಬದ್ಧತೆ, ಅನಿಯಮಿತ ಕರುಳಿನ ಚಲನೆ, ಇತ್ಯಾದಿಗಳಿಂದ ಬಳಲುತ್ತಿದ್ದರೆ ಅಂತಹ ಸಮಯದಲ್ಲಿ ಬೆಲ್ಲ ಸೇವಿಸುವುದು ನಮ್ಮ ಆರೋಗ್ಯಕ್ಕೆ ಅನುಕೂಲಕರವಾಗುತ್ತದೆ ಎನ್ನುವುದು ದಯವಿಟ್ಟು ಮರಿಯಬೇಡಿ. ಹಾಗೂ ನಮ್ಮ ಮೂಳೆ ಗಟ್ಟಿಮುಟ್ಟಾಗಿರಲು ಹಾಲಿನ ಜೊತೆ ಬೆಲ್ಲ ಸೇವನೆಯನ್ನು ದಿನ ನಿತ್ಯ ಮಾಡುವುದು ಒಳ್ಳೆಯದು ಇದರಿಂದ ನಮ್ಮ ಆರೋಗ್ಯ – ಮೂಳೆಗಳು ಸುಸ್ಥಿತಿಯಲ್ಲಿ ಇರುತ್ತದೆ. ಹಾಗೆ ಸುಸ್ತು ನಿವಾರಿಸುತ್ತದೆ ಎನ್ನುವುದು ಸುಳ್ಳಲ್ಲ.

ಬೆಲ್ಲದಲ್ಲಿ ಹಲವು ಆಂಟಿ ಆಕ್ಸಿಡಂಟ್‌ಗಳು ಮತ್ತು ಲವಣಗಳಾದ ಸತು ಮತ್ತು ಸೆಲೆನಿಯಂ ಇವೆ. ಇವು ಸ್ವತಂತ್ರ ಕಣಗಳಿಗೆ ಹಾನಿಯಾಗದಂತೆ ನೆರವಾಗುತ್ತದೆ. ಸೋಂಕುಗಳ ವಿರುದ್ಧವೂ ನೆರವಾಗುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಏರಿಸಲೂ ಬೆಲ್ಲ ಸಹಕಾರಿಯಾಗಿದೆ.

ಇಂತಹ ಅನೇಕ ರೋಗಗಳ ಆಗಾರಕ್ಕೆ ಬೆಲ್ಲಾ ಮಾಹಾ ಮದ್ದಾಗಿ,ನಮ್ಮಲ್ಲರ ಆರೋಗ್ಯವನ್ನು ಕಾಪಾಡುತ್ತದೆ. ಆದರಿಂದ ಬೆಲ್ಲದ ಬಗ್ಗೆ ಉದಾಸೀನ ಮಾಡದೇ, ದಿನನಿತ್ಯದ ನಮ್ಮ ಅಡಿಯಲ್ಲಿ ಬಳಕೆ ಮಾಡುವ ಮೂಲಕ ಅದರ ಸದುಪಯೋಗ ಪಡೆದುಕೊಳ್ಳೋಣ.

ವಯಸ್ಕರ/ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳಿಗೆ – ಪರಿಹಾರ ಬೆಲ್ಲ

ಹದಿಹರೆಯದ ಹೆಣ್ಣು ಮಕ್ಕಳು ಮತ್ತು ಗರ್ಭಿಣಿಯರು ಬೆಲ್ಲವನ್ನು ತಿನ್ನುವುದರಿಂದ ರಕ್ತಹೀನತೆ ಸಮಸ್ಯೆಯನ್ನು
ಪರಿಣಾಮಕಾರಿಯಾಗಿ(ಅನೀಮಿಯದಿಂದ ರಕ್ಷಣೆ ಪಡೆಯಲು ಸಾಧ್ಯ.- ಗರ್ಭಿಣಿಯರು ರಕ್ತಹೀನತೆಯಿಂದ ಬಳಲುವುದು ಸಾಮಾನ್ಯ ಸಂಗತಿ. ಇದರ ಪರಿಹಾರಕ್ಕೆ ನಿತ್ಯವೂ ಬೆಲ್ಲ ಸೇರಿಸಿದ ಹಾಲು ಕುಡಿದರೆ, ಈ ಕೊರತೆ ನಿವಾರಣೆಯಾಗಲಿದೆ.) ತಡೆಗಟ್ಟಬಹುದು.ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಮೂಲಕ ದೇಹದ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಇಡುತ್ತದೆ.

ಹಾಗೂ ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ{ಮಹಿಳೆಯರು ಮಾಸಿಕ ದಿನಗಳಲ್ಲಿ ಅನುಭವಿಸುವ ನೋವನ್ನು ತಡೆಯಲು ಬೆಲ್ಲದಷ್ಟು ಸಮರ್ಥವಾಗಿ ಕಡಿಮೆಗೊಳಿಸುವ ಔಷಧಿ ಇನ್ನೊಂದಿಲ್ಲ ಎಂಬ ಮಾತಿದೆ ಆದ್ದರಿಂದ ಬೆಲ್ಲವನ್ನು ತಿನ್ನುವುದು ಸೊಕ್ತ -ಮಾಸಿಕ ದಿನಗಳ ಹಿಂದಿನ ಮತ್ತು ನಂತರದ ದಿನಗಳಲ್ಲಿ ಎದುರಾಗುವ ಕೆಳಹೊಟ್ಟೆಯ ನೋವಿನಿಂದ ಪಾರಾಗಲು ಚಿಕ್ಕಚಮಚದಷ್ಟು ಬೆಲ್ಲದ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ, ದಿನಕ್ಕೆರೆಡು ಬಾರಿ ಕುಡಿದರೆ, ನೋವು ಕ್ರಮೇಣ ಕಡಿಮೆಯಾಗಲಿದೆ.} ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‌ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‌ಗಳು ದೇಹಕ್ಕೆ ಆರಾಮ ಕೊಡುತ್ತದೆ.

ಬೆಲ್ಲದಲ್ಲಿ ಕಬ್ಬಿಣ ಮತ್ತು ಫೊಲೇಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿ ಇಡುತ್ತದೆ. ಇವುಗಳಲ್ಲದೆ
ಸಂಧಿವಾತ, ಅಸ್ತಮಾಗಳಿಗೂ ಬೆಲ್ಲ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ.ಜೊತೆಗೆ
ಮೊಡವೆ ಇದ್ದರೆ ಬೆಲ್ಲವನ್ನು ತಿನ್ನಿ. ಇದು ಮೊಡವೆಯನ್ನು ಕಡಿಮೆಗೊಳಿಸುತ್ತದೆ. ತ್ವಚೆಯ ಹೊಳಪನ್ನೂ ಹೆಚ್ಚಿಸುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಮತ್ತು ಬೆಲ್ಲ ಒಂದು ಅತೀ ಸಹಜವಾದ ದೇಹ ಸ್ವಚ್ಛಗೊಳಿಸುವ ಸಾಧನ. ಹೀಗಾಗಿ ಬೆಲ್ಲ ಸೇವಿಸುವುದು ದೇಹದಿಂದ ಅನಗತ್ಯ ಕಣಗಳನ್ನು ನಿವಾರಿಸುತ್ತದೆ.

ಶ್ವಾಸಕೋಶ, ಶ್ವಾಸನಾಳ, ಕರುಳು, ಹೊಟ್ಟೆ ಮತ್ತು ಅನ್ನನಾಳವನ್ನು ಸ್ವಚ್ಛಗೊಳಿಸುತ್ತದೆ. ಅತೀ ಮಾಲಿನ್ಯವಿರುವ ಜಾಗದಲ್ಲಿ ಕೆಲಸ ಮಾಡುವವರು ಬೆಲ್ಲ ತಿನ್ನುವುದು ಉತ್ತಮ.ಬೆಲ್ಲ ಸಾಮಾನ್ಯ ದೇಹದ ಉಷ್ಣತೆ ಕಾಪಿಡಲು ನೆರವಾಗುತ್ತದೆ. ಬೆಲ್ಲದ ತಂಪು ನೀರು ಕುಡಿಯುವುದರಿಂದ ಬೇಸಿಗೆಗೆ ಯಲ್ಲಿ ಪ್ರಯೋಜನಕಾರಿ ಯಾಗಲಿದೆ ಜೊತೆಗೆ ಹೊಟ್ಟೆಗೆ ತಂಪು ನೀಡುತ್ತದೆ.ಹೀಗೆ ಹತ್ತು ಹಲವು ರೀತಿಯ ಆರೋಗ್ಯ ಸಮಸ್ಯಗಳಿಗೆ ಪರಿಹಾರ ಖಂಡಿತಾ ನೀಡುತ್ತದೆ ಹಾಗೂ ವಿಶೇಷವಾಗಿ ಮಹಿಳೆಯರಿಗೆ/ವಯಸ್ಕರರಿಗೆ ಮತ್ತು ಮಕ್ಕಳ ಆರೋಗ್ಯಕ್ಕೆ ಬೆಲ್ಲವು ಅತ್ಯುತ್ತಮ ಮನೆಯ ಸಂಪ್ರದಾಯಿಕ ಮದ್ದಾಗಿದೆ.

ವಿವಿಧ ಕಾಯಿಲೆಗಳ ಸಂಹಾರಕ್ಕೆ ಬೇಕೇ ಬೇಕು ಬೆಲ್ಲ

ಬೆಲ್ಲದಲ್ಲಿ ಮೆಗ್ನೇಶಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಿದೆ 10 ಗ್ರಾಂ ಬೆಲ್ಲದಲ್ಲಿ 16 ಮಿಲಿಗ್ರಾಂ ಮೆಗ್ನೇಶಿಯಂ ಇರುತ್ತದೆ ಇದರಿಂದ ಕರುಳಿನ ಕೆಲಸಕ್ಕೆ ಪ್ರಯೋಜನವಾಗುತ್ತದೆ ಮತ್ತು ಶ್ವಾಸಕೋಶದ ಸಮಸ್ಯೆಗೆ ಬೆಲ್ಲವನ್ನು ನಿತ್ಯವೂ ಸೇವಿಸುವುದರಿಂದ ಆಸ್ತಮಾ, ಬ್ರೋನ್ಷಿಟಿಸ್ ಸಮಸ್ಯೆ ನಿವಾರಣೆಯಾಗಲಿದೆ. ಎಳ್ಳು – ಬೆಲ್ಲ ಬೆರೆಸಿ ಸೇವಿಸಿದರೆ ಶ್ವಾಸಕೋಶ ಸಮಸ್ಯೆಗೆ ಉತ್ತಮ ಪರಿಹಾರವಾಗುತ್ತದೆ ಹಾಗೆ ಸಂಧಿ ನೋವಿದ್ದರೆ ಬೆಲ್ಲ ಉತ್ತಮ ನೋವು ನಿವಾರಕ ಔಷಧಿ ಶುಂಠಿ ಜೊತೆ ಬೆಲ್ಲ ಸೇವಿಸಿ
ತಿನ್ನಬಹುದು ತಿನ್ನುವುದರಿಂದ ಸಂಧಿ ನೋವು ಖಂಡಿತಾ ವಾಸಿಯಾಗುತ್ತದೆ.

ಮಂಡಿ ನೋವು, ಕೈಕಾಲು ನೋವು ಇವುಗಳನ್ನು ಕಮ್ಮಿ ಮಾಡುವಲ್ಲಿ ಬೆಲ್ಲ ಪ್ರಯೋಜನಕಾರಿಯಾಗಿದೆ ಜೊತೆಗೆ
ತಲೆನೋವು ಕಾಣಿಸಿಕೊಂಡಾಗ ಒಂದು ಚೂರು ಬೆಲ್ಲ ತಿಂದು ಆರಾಮವಾಗಿರಿ ಹಾಗೂ ತೂಕ ಇಳಿಸಲು ಬೆಲ್ಲ ಅತ್ಯುತ್ತಮ ಅಂಶ, ಪೊಟಾಶಿಯಂ ಹೆಚ್ಚಾಗಿರುವ ಕಾರಣ ಎಲೆಕ್ಟ್ರೊಲೈಟ್ ಗಳನ್ನು ಸಮತೋಲನ ಮಾಡಿ ಚಯಾಪಚಯ ಚೆನ್ನಾಗಿರಲು ಬೆಲ್ಲ ನೆರವಾಗುತ್ತದೆ.

ಹೀಗಾಗಿ ತೂಕ ಇಳಿಸುವಲ್ಲಿ ಉತ್ತಮ ಜೊತೆಗೆ
ಕಾರ್ಬೋಹೈಡ್ರೇಟ್ ದೇಹಕ್ಕೆ ಕೊಟ್ಟರೆ, ಬೆಲ್ಲ ದೇಹಕ್ಕೆ ಧೀರ್ಘ ಕಾಲದ ಶಕ್ತಿ ಕೊಡುತ್ತದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಸುವುದಿಲ್ಲ. ಸುಸ್ತು ಮತ್ತು ನಿಶ್ಶಕ್ತಿ ಇರುವವರಿಗೂ ಉತ್ತಮ – ಸಹಕಾರಿ ಎನ್ನುವುದು ನಾವ್ಯಾರು ಅಲ್ಲಗಳೆಯುವಂತಿಲ್ಲ ಹಾಗೂ ಶೀತ ಮತ್ತು ಕಫ, ಜ್ವರ ಇದ್ದಾಗ ಬೆಲ್ಲ ತಿನ್ನಬೇಕು. ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ ಅಥವಾ ಚಹಾಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯುವ ಮೂಲಕ ಈ ರೋಗಗಳಿಗೆ
ಕಡಿವಾಣ ಹಾಕಬಹುದಾಗಿದೆ. ಕೆಮ್ಮು ಕಾಣಿಸಿದರೆ ಮತ್ತು ಕೋಲೆಸ್ಟ್ರಾಲ್ ಅತಿಯಾದಾಗ ಈರುಳ್ಳಿ ಅಥವಾ ಬೆಳ್ಳುಳ್ಳಿಯನ್ನು ಸುಟ್ಟು ಅದನ್ನು ಬೆಲ್ಲದ ಜೊತೆ ತಿನ್ನುವುದು ಒಳ್ಳೆಯದು ಇದರಿಂದ ಕೆಮ್ಮು,‌ಕೋಲೆಸ್ಟ್ರಾಲ್ ತಡೆಗಟ್ಟಲು ಸಹಕಾರವಾಗುತ್ತದೆ.

ಖಂಡಿತ ಗುಣವಾಗುವುದರಲ್ಲಿ ಅನುಮಾನವೇ ಬೇಡ ಹಾಗೂ ಉಸಿರಾಟ ತೊಂದರೆ ಇದ್ದರೆ ಬೆಲ್ಲದ ಚೂರನ್ನು ಬಾಯಿಗೆ ಹಾಕಿಕೊಂಡರೆ ಉಸಿರಾಟದ ತೊಂದರೆ ಕಡಿಮೆಯಾಗುತ್ತದೆ ಮತ್ತೆ ಅಸ್ತಮಾ ಕಾಯಿಲೆ ಇರುವವರು ದಿನಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲವನ್ನು ತಿನ್ನುವುದರಿಂದ ಈ ರೋಗ ಹತೋಟಿಯಲ್ಲಿ ಇಡಬಹುದು. ಇದಲ್ಲದೆ ಬೆಲ್ಲ ದೇಹದಲ್ಲಿ ಜೀರ್ಣಕ್ರಿಯೆಗೆ ನೆರವಾಗುವ ಎನ್‌ಜೈಮ್‌ಗಳನ್ನು ಸಕ್ರಿಯಗೊಳಿಸುತ್ತದೆ. ಜಠರದ ಚಲನೆಗೆ ನೆರವಾಗಿ ಮಲಬದ್ಧತೆಯಿಂದ ರಕ್ಷಿಸುತ್ತದೆ ಹಾಗೂ ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕಗಳನ್ನು ಹೊರ ಹಾಕಲು ನೆರವಾಗುತ್ತದೆ. ದೇಹದಿಂದ ಪರಿಣಾಮಕಾರಿಯಾಗಿ ವಿಷನಿವಾರಿಸಬೇಕೆಂದಲ್ಲಿ ಖಂಡಿತಾ ಬೆಲ್ಲ ತಿನ್ನಿ.ತಿನ್ನುವ ಮೂಲಕ ವಿವಿಧ ಕಾಯಿಲೆಗಳಿಗೆ ಖಂಡಿತಾ ಬೆಲ್ಲವು ಪರಿಹಾರ ನೀಡುತ್ತದೆ. ಎನ್ನುವುದರಲ್ಲಿ ಎರಡು ಮಾತಿಲ್ಲ.

ಆಶಯ ಮಾತು

ಆಧುನಿಕ ಜೀವನ ಶೈಲಿಗೆ ಮಾರುಹೋಗಿರುವ ನಾವುಗಳು ಇದಾದರೂ ನಮ್ಮ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚು ಒಲವು – ಸಮಯ ನೀಡುವುದು ಅವಶ್ಯವಾಗಿದೆ. ಯಾಕೆಂದರೆ ನಾವೆಲ್ಲರೂ ದಿನನಿತ್ಯ ಬಳಕೆ ಮಾಡಿಕೊಳ್ಳುತ್ತಿರುವ ರಾಸಾಯನಿಕ ಪದಾರ್ಥಗಳು,ತಿಂಡಿ ತಿನಿಸುಗಳನ್ನು ನಮ್ಮ ಆರೋಗ್ಯವನ್ನು ಸಂಪೂರ್ಣವಾಗಿ ಹಾಳುಮಾಡುತ್ತಿವೆ ಹಾಗೆ ವಯಸ್ಸು ಕ್ಷೀಣಿಸುತ್ತಿದೆ ಎನ್ನುವುದು ನಮ್ಮಗೆಲ್ಲರಿಗೂ ಗೊತ್ತಿರುವ ಸಂಗತಿ ಅಲ್ಲವೇ ?

ಆದಕಾರಣ ಇಂತಹ ಭಯಂಕರ ಜೀವ ಹಾನಿ ಅಂಶಗಳ ಪದಾರ್ಥಗಳನ್ನು ಕೊಡಲೇ ನಿಲ್ಲಿಸುವ ಮೂಲಕ ನಮ್ಮ ಪೂರ್ವಜರು ಹಾಕಿ ಕೊಟ್ಟ ಸಂಪ್ರದಾಯದ ಸಾವಯವದ ಪದ್ಧತಿಯನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವ ದಿಸೆಯಲ್ಲಿ ಹೆಜ್ಜೆ ಹಾಕೋಣ.ಬೆಲ್ಲವನ್ನು ದಿನನಿತ್ಯ ತಿನ್ನಲು ಪ್ರಮಾಣಿಕವಾಗಿ ಪ್ರಯತ್ನ ಮಾಡೋಣ, ನಮ್ಮ ಆರೋಗ್ಯದ ಜೊತೆಗೆ ಇತರರ ಆರೋಗ್ಯವನ್ನು ಕಾಪಾಡಿಕೊಂಡು, ನೆಮ್ಮದಿಯಾಗಿ ಬಾಳೋಣ.

ಕೊನೆಯ ಮಾತು

ಇಂದು ಸಧ್ಯ ಬೆಲ್ಲ ತಿನ್ನುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಏಕೆಂದರೆ ಬಹುತೇಕ ಮಂದಿ ಸಕ್ಕರೆಯತ್ತ ವಾಲುತ್ತಿರುವುದೇ ಇದಕ್ಕೆ ಕಾರಣ. ಆದರೆ, ಬೆಲ್ಲದಿಂದಾಗುವ ಉಪಯೋಗಗಳ ಬಗ್ಗೆ ಬಲ್ಲವರಿಗೆ ಮಾತ್ರವೇ ತಿಳಿದಿರುತ್ತದೆ. ಉಳಿದವರೂ ಇದರ ಸದುಪಯೋಗ ಪಡೆಲೇಬೇಕು ಜೊತೆಗೆ ಬೆಲ್ಲ ದಿನಾಲೂ ತಿನ್ನಲು ಹಾಗೂ ಊಟದಲ್ಲಿ ಸೇರಿಸಿ ಊಟ ಮಾಡಲು ಯತ್ನಿಸುವುದು ನಮ್ಮ ಆರೋಗ್ಯ ಹಿತದೃಷ್ಟಿಯಿಂದ ಒಳ್ಳೆಯದು ಶರಣ ಬಂಧುಗಳೆ.ಬೆಲ್ಲ ಕೇವಲ ಸಿಹಿ ಪದಾರ್ಥವಾಗಿರದೆ, ಔಷಧಿಯುಕ್ತ ಸಿಹಿಯಾಗಿದೆ.

ನೋಡಲಿಕೆ ಕಂದು ಅಥವಾ ಕಪ್ಪಗಿರುವ ಕಾರಣ ಯುವಪೀಳಿಗೆಯವರು ಬೆಲ್ಲ ತಿನ್ನಲು ಹಿಂದೇಟು ಹಾಕುತ್ತಿರಬಹುದು. ಆದರೆ, ಬೆಳ್ಳಗೆ ಕಾಣುವ ಸಕ್ಕರೆಗಿಂತಲೂ ಬೆಲ್ಲ ಅತ್ಯುತ್ತಮ ಎಂಬುದನ್ನು ಮರೆಯಬಾರದು. ಪ್ರತಿಯೊಬ್ಬರ ಮನೆಗಳಲ್ಲೂ ಲಭ್ಯವಾಗುವ ಬೆಲ್ಲವನ್ನು ಮನೆಮದ್ದಿನ ರೂಪದಲ್ಲಿ ಉಪಯೋಗಿಸುವ ಮೂಲಕ, ಹಲವು ಬಗೆಯ ಸಮಸ್ಯೆಗಳನ್ನು ದೂರವಿಡಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending