ಸಿನಿ ಸುದ್ದಿ
ಮೀಡಿಯಾ ಸತ್ಯವನ್ನ ನಿರ್ಧಾರ ಮಾಡುತ್ತಾ..? ಇದು ಹೇಳಿದ್ದೆಲ್ಲಾ ಸತ್ಯವಾ..? : ‘ಜನಗಣಮನ’ ಸಿನೆಮಾಂತರಂಗ..!
- ಜಿ.ಟಿ.ತುಮರಿ
ಈ ಪ್ರಶ್ನೆ ಕೇಳುತ್ತಾ ಹೋದಂತೆ ಒಬ್ಬ ಪತ್ರಕರ್ತನಾಗಿ ತಣ್ಣಗೆ ಬೆವರಿಬಿಟ್ಟೆ. ನನ್ನ ಕಣ್ಣಮುಂದೆ ಹಲವು ಸುದ್ದಿ ಚಾನೆಲ್ ಮತ್ತು ವಿಷ ಕಾರುವ ಅದರ ನಿರೂಪಕರು, ಅವರ ನಿಲುವುಗಳ ಹಿಂದಿರುವ ಅಪವಿತ್ರ ಮೈತ್ರಿಗಳು, ಅದರಲ್ಲೂ ಈಚೆಯ ವರ್ಷದಲ್ಲಿ ಪೇಸ್ಭುಕ್, ಟ್ವಿಟರ್, ವ್ಯಾಟ್ಸಪ್ , ಇನ್ಸ್ಟಾಗ್ರಾಮ್ ಇತ್ಯಾದಿ ಮೂಲಕ ಸುಳ್ಳು ಸುರಿಯುವ ರಾಜಕೀಯ ಸಾಮಾಜಿಕ ಹುನ್ನಾರಗಳು ಥಟ್ಟನೆ ಮನಸಿಗೆ ಬಂದವು.
ಮಲಯಾಳಂ ನಟ ಪೃಥ್ವಿರಾಜ್ ಈಚೆಗೆ ಬಿಡುಗಡೆಯಾದ ಜನಗಣಮನ ಸಿನಿಮಾದಲ್ಲಿ ಡೈಲಾಗ್ ಮಾತ್ರ ಹೇಳುತ್ತಾ ಇರಲಿಲ್ಲ ಆ ಕಂಚಿನ ಕಂಠದಲ್ಲಿ ಸಿನಿಮಾ ನೋಡುತ್ತಾ ಇರುವ ಪ್ರತಿ ಭಾರತೀಯನ ಆತ್ಮಸಾಕ್ಷಿ ತಿವಿಯುತ್ತಾ ಹೋಗುತ್ತಾನೆ. ಆ ಮೂಲಕ ನಮ್ಮ ಸುತ್ತಲ ವರ್ತಮಾನದ ಸತ್ಯಗಳಿಗೆ ಕುರುಡಾದ ಕೆಪ್ಪಾದ ಕಣ್ಣು ಕಿವಿಯ ಜತೆ ಸತ್ತ ಹಾಗೆ ಇರುವ ನಮ್ಮೊಳಗಿನ ನಮ್ಮನ್ನು ಬಡಿದೆಬ್ಬಿಸುತ್ತಾ ಹೋಗುತ್ತದೆ ಜನಗಣಮನ ಸಿನಿಮಾ.
” ಒಂದು ನಾಯಿ ಸತ್ತರೂ ಕೇಳೋ ಈ ದೇಶದಲ್ಲಿ ಆ ನಾಲ್ಕು ಜನ ಬೀದಿನಾಯಿಗಳ ಹಾಗೆ ಸತ್ತರು. ಯಾವ ಆಧಾರನೂ ಬೇಡ, ಯಾವ ನ್ಯಾಯ ಕೋರ್ಟ್ ಬೇಡ ಅವರನ್ನ ಕೊಲ್ಲಬೇಕು. ಇದಕ್ಕೆ ಕಾರಣ ಅವರ ಗುರುತು, 2 ನೇ ಕ್ಲಾಸ್ ಮಗುವಿಗೆ ಬಣ್ಣದ ಮೇಲೆ ಚಂದ ಕುರೂಪ ಅಂತ ಚಿತ್ರ ಬರೆದು ತಾರತಮ್ಯವನ್ನ ತುಂಬುವ ಮತದ ರಾಜಕೀಯ, ಅವರನ್ನು ನೋಡಿದ್ರೆ ಗೊತ್ತಾಗಲ್ಲವಾ ಅನ್ನೋ ಜಾತಿ ರಾಜಕೀಯ ಇಲ್ಲಿ ನಡೀತಾ ಇದೆ”
ಯೂನಿವರ್ಸಿಟಿಯೊಂದರಲ್ಲಿ ಜಾತಿಯ ಕಾರಣದಿಂದ ಹತ್ಯೆಗೆ ಒಳಗಾಗುವ ವಿದ್ಯಾರ್ಥಿನಿಗೆ ನ್ಯಾಯ ನೀಡಲು ಮುಂದಾಗುವ ಮಹಿಳಾ ಪ್ರೊಫೆಸರ್ ಒಬ್ಬರನ್ನು ಅಲ್ಲಿನ ವ್ಯವಸ್ಥೆ ಕೊಂದುಹಾಕಿದ ಪ್ರಕರಣವೊಂದನ್ನು ಸತ್ಯದ ಮರೆಮಾಚಿ ನಕಲಿ ಎನ್ ಕೌಂಟರ್ ಹೇಗೆ ಸೃಷ್ಟಿಯಾಗಲು ಇರುವ ಸಾಮಾಜಿಕ ರಾಜಕೀಯ ಕಾರಣಗಳನ್ನ ಜನಗಣಮನ ಸಿನಿಮಾ ಬಿಚ್ಚಿಡುತ್ತಾ ಹೋಗುತ್ತದೆ. ಘಟನೆಯೊಂದರ ರಾಜಕೀಯ ಲಾಭವನ್ನ ಹೇಗೆ ಮಾಧ್ಯಮಗಳು, ಸಮೂಹ ಮಾಧ್ಯಮಗಳ ಮೂಲಕ ಜನರಲ್ಲಿ ಸುಳ್ಳು ಬಿತ್ತಿ ಪರಿಸ್ಥಿತಿ ಲಾಭ ಪಡೆಯಬಹುದು ಎನ್ನುವುದನ್ನು ಇಡೀ ಸಿನಿಮಾ ಎಳೆ ಎಳೆಯಾಗಿ ವಿವರಿಸುತ್ತದೆ.
ಈ ನಿರ್ದೇಶಕರಿಗೆ ಸೆಲ್ಯೂಟ್.. ಒಂದು ಸಿನಿಮಾ ಕೇವಲ ರಂಜನೆ ನೀಡಿದರೆ ಸಾಕು ಎನ್ನುವ ಸೀಮಿತ ಲೆಕ್ಕಾಚಾರದ ನಡುವೆ ಸಿನಿಮಾವೊಂದು ನಮ್ಮ ಸುತ್ತಲಿನ ಸುಡು ವರ್ತಮಾನಕ್ಕೆ ವಿಮರ್ಶೆ ಬರೆದಿದೆ. ಹೇಗೆ ದೇಶದ ಜನರು ವಿಸ್ಮೃತಿಗೆ ಒಳಗಾಗಿ ಹೌದಪ್ಪ ಆಗಿದ್ದೇವೆ ಎನ್ನುವುದನ್ನ ಪ್ರತಿ ದ್ರಶ್ಯ ಕಟ್ಟಿ ಕೊಡುತ್ತದೆ. ಸಿನಿಮಾದ ಮೊದಲು ಅರ್ಧ ಭಾವನಾತ್ಮಕ ಕಥಾಹಂದರ ಕಟ್ಟಿ ಕೊಟ್ಟರೆ. ದ್ವಿತೀಯಾರ್ಧದಲ್ಲಿ ನಾವು ಈ ಮೊದಲು ಸಿನಿಮಾ ಆರಂಭದಲ್ಲಿ ಕಟ್ಟಿಕೊಂಡ ಭಾವುಕತೆ ಎಷ್ಟು ಕೃತಕ ಮತ್ತು ಸುಳ್ಳು ಎನ್ನುವುದನ್ನ ವಕೀಲನಾದ ಸಿನಿಮಾ ನಾಯಕ ಮೂಲಕ ಪ್ರಖರವಾಗಿ ಹೇಳಿಸುವ ಮೂಲಕ ಮಿಥ್ ಗಳನ್ನು ಸೃಷ್ಟಿ ಮಾಡುವ ಹುನ್ನಾರಗಳನ್ನ ಸಿನಿಮಾ ಏಕ ಕಾಲದಲ್ಲಿ ತೆರೆಯಮೇಲೆ ಮತ್ತು ನಮ್ಮೊಳಗೆ ಅನುಭವಕ್ಕೆ ತರಿಸುತ್ತದೆ.
ಇಂತ ಸಿನಿಮಾ ಮಾಡಲು ಪ್ರತಿಭೆ ಮಾತ್ರ ಇದ್ದರೆ ಸಾಕಾಗದು ಅದಕ್ಕೆ ಒಂದು ಬದ್ಧತೆ ಮತ್ತು ದೈರ್ಯ ಬೇಕು. ಸಾಮಾಜಿಕ ಮತ್ತು ರಾಜಕೀಯ ಸತ್ಯವನ್ನ ಹೇಳುವ ಸಮಾಜಮುಖಿ ಸಿನಿಮಾಗಳು ಹಾಗೆ ನೋಡಿದರೆ ಕನ್ನಡ ಚಿತ್ರರಂಗದಲ್ಲಿ 2000 ಕ್ಕಿಂತ ಮೊದಲು ಸಿನಿಮಾಗಳ ಸರಣಿಗಳೇ ಇವೆ. ಬಹಳ ಮುಖ್ಯವಾಗಿ ರಾಜ್ ಕುಮಾರ್ ಸಿನಿಮಾಗಳನ್ನ ಉಲ್ಲೇಖ ಮಾಡಬಹುದು. ಆದರೆ ಕಳೆದ ಒಂದು ದಶಕವನ್ನ ಗಮನಿಸಿದರೆ ಮಲಯಾಳಂ ಮತ್ತು ತಮಿಳು ಚಿತ್ರರಂಗ ಈ ನಡೆಯಲ್ಲಿ ಮುಂದೆ ಇವೆ. ಹುಡುಗ ಹುಡುಗಿ ಮರ ಸುತ್ತಿಸಿ ಮಚ್ಚು ಲಾಂಗು ಹಿಡಿಸಿ ಎರಡು ಮಾಸ್ ಸಾಂಗ್ ಹಾಕಿ ನಾಯಕನನ್ನು ಮೆರೆಸಲು ಮತ್ತೆರೆಡು ಹಾಡು ಬರೆಸುವುದರಲ್ಲಿ ಕನ್ನಡ ಮತ್ತು ತೆಲುಗು ಚಿತ್ರರಂಗ ಪೈಪೋಟಿ ಇದ್ದಂತೆ ಇವೆ. ಆದರೆ ಮಲಯಾಳಿ ಮತ್ತು ತಮಿಳು ಚಿತ್ರರಂಗ ಇದಕ್ಕೆ ಭಿನ್ನ ಇವೆ. ಅಲ್ಲಿನ ಸಿನಿಮಾದಲ್ಲಿ ಭಿನ್ನ ನೆಲೆಯ ನಿರೂಪಣೆಯ ಕಥೆ, ಕಡಿಮೆ ವೈಭವೀಕರಣ, ಕೌಶಲ್ಯದ ನಟನೆಯಂತ ಹಲವು ಕಾರಣ ಇವೆ. ಕರ್ಣನ್, ಅಸುರ, ಜೈ ಭೀಮ್, ಗ್ರೇಟ್ ಇಂಡಿಯನ್ ಕಿಚನ್ ರೂಮ್, ಕೋಲ್ಡ್ ಕೇಸ್, ಬೀಸ್ಟ್, ಬಿಗಿಲ್, ಇಂದ್ರನ್ ನಟನೆ ಸಿನಿಮಾಗಳು, ಡ್ರೈವಿಂಗ್ ಲೈಸೆನ್ಸ್, ಅಯ್ಯಪ್ಪನ್, ಫಾಸಿಲ್ ಸರಣಿ ಸಿನಿಮಾಗಳು ಹೀಗೆ.
ಜನಗಣಮನ….ಈಚೆಯ ವರ್ಷಗಳಲ್ಲಿ ನಾನು ಕಂಡ ಸಿನಿಮಾಗಳಲ್ಲೇ ಶ್ರೇಷ್ಠ ಸಿನಿಮಾ. ರಾಜಕೀಯ ಪೊಲೀಸ್ ವ್ಯವಸ್ಥೆಯನ್ನ ಹೇಗೆ ದುರ್ಬಳಕೆ ಮಾಡಿಕೊಂಡು ತನ್ನ ಬೇಳೆ ಕಾಳು ಬೇಯಿಸಿ ಬಳಸಿ ಬಿಸಾಡುತ್ತದೆ ಎನ್ನುವುದನ್ನು ಕಥಾವಸ್ತು ಒಳಗೊಳ್ಳುವ ಜತೆ ರಾಜಕೀಯ ಪೊಲೀಸ್ ಮತ್ತು ಮಾಧ್ಯಮ ಮೂರು ಭ್ರಷ್ಟ ಮೈತ್ರಿಯಾದರೆ ಸತ್ಯ ಹೇಗೆ ಸುಳ್ಳಾಗಿ ಸಂವಿಧಾನದ ಆಶಯ ವಿರುದ್ಧ ಅಪವಿತ್ರ ಮೈತ್ರಿಯಾಗಿ ಜನಗಣಮನಕ್ಕೆ ವಿಷ ಉಣಿಸಿ ಸ್ವಾರ್ಥ ಸಾಧಿಸುತ್ತದೆ ಎನ್ನುವುದು ಅತ್ಯುತ್ತಮವಾಗಿ ನಿರೂಪಿಸಿ ದೃಶ್ಯವಾಗಿಸಿದೆ ಸಿನಿಮಾ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು, ಸೆಪ್ಟೆಂಬರ್ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸೆ.2ರಂದು ಮನೆ ಬಳಿ ಅಭಿಮಾನಿಗಳು ಯಾರೂ ಬರಬಾರದು ಎಂದು ಸುದೀಪ್ ಈಗಾಗಲೇ ಮನವಿ ಮಾಡಿದ್ದರು. ಹೀಗಾಗಿ ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದ ಕಿಚ್ಚನ ಬರ್ತ್ಡೇ ಈ ಬಾರಿ ವಿಭಿನ್ನವಾಗಿದೆ.
ಆದರೆ, ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸಿನಿಮಾ ವಿಚಾರದಲ್ಲಿ ಭರ್ಜರಿ ಸರ್ಪ್ರೈಸ್ ಸಿಗುವ ನಿರೀಕ್ಷೆ ಮೂಡಿದೆ. ಹುಟ್ಟುಹಬ್ಬದ ಸಂದರ್ಭದಲ್ಲೇ ಕಿಚ್ಚನ ಮುಂಬರುವ ಸಿನಿಮಾಗಳ ಕುರಿತು ಮಹತ್ವದ ಅಪ್ಡೇಟ್ಗಳು ಹೊರಬರುವ ಸಾಧ್ಯತೆ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
http://Visit : www.suddidina.com
53ನೇ ವಸಂತ, 30 ವರ್ಷದ ಸಿನಿ ಪಯಣ
ಕಿಚ್ಚ ಸುದೀಪ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು, 1997ರಲ್ಲಿ ಬಿಡುಗಡೆಯಾದ ‘ತಾಯವ್ವ’ ಚಿತ್ರದ ಮೂಲಕ ಸಿನಿಮಾ ಪಯಣ ಆರಂಭಿಸಿದ್ದರು. ಇದೀಗ ಚಿತ್ರರಂಗದಲ್ಲಿ ಮೂರು ದಶಕಗಳ ಪಯಣ ಪೂರ್ಣಗೊಳಿಸಿರುವುದು ಈ ಹುಟ್ಟುಹಬ್ಬದ ಮತ್ತೊಂದು ವಿಶೇಷ.
ನಟನೆಯ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಕಿರುತೆರೆಯಲ್ಲಿಯೂ ಸುದೀಪ್ ತಮ್ಮದೇ ಗುರುತು ಮೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕರಾಗಿ ಸತತವಾಗಿ ಮುಂದುವರಿದಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.
View this post on Instagram
‘ಬಿಲ್ಲ ರಂಗ ಭಾಷಾ’ ಮೇಲೆ ಹೆಚ್ಚಿದ ನಿರೀಕ್ಷೆ
‘ವಿಕ್ರಾಂತ್ ರೋಣ’ ಬಳಿಕ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಸುದೀಪ್ ಮತ್ತೊಮ್ಮೆ ‘ಬಿಲ್ಲ ರಂಗ ಭಾಷಾ’ ಮೂಲಕ ಒಂದಾಗಿದ್ದಾರೆ. ಈಗಾಗಲೇ ಚಿತ್ರದ ಲುಕ್ ಅಭಿಮಾನಿಗಳ ಗಮನ ಸೆಳೆದಿದ್ದು, ಮಾಸ್ ಅವತಾರದಲ್ಲಿ ಕಿಚ್ಚ ಕಾಣಿಸಿಕೊಂಡಿರುವುದು ನಿರೀಕ್ಷೆ ಹೆಚ್ಚಿಸಿದೆ.
ಚಿತ್ರದ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಕೂಡ ಉತ್ಸಾಹ ವ್ಯಕ್ತಪಡಿಸಿದ್ದು, ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾಗೆ ಸಂಬಂಧಿಸಿದ ಹೊಸ ಅಪ್ಡೇಟ್ ಸಿಗುವ ಸಾಧ್ಯತೆ ಇದೆ. ಸಿನಿಮಾ 2027ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.
4 ಸಿನಿಮಾಗಳ ಸದ್ದು?
2024ರಲ್ಲಿ ‘ಮ್ಯಾಕ್ಸ್’ ಬಿಡುಗಡೆಯಾದ ಬಳಿಕ ಸುದೀಪ್ ಅವರ ಹೊಸ ಸಿನಿಮಾ ತೆರೆಗೆ ಬಂದಿಲ್ಲ. ಇದೀಗ ಒಂದೇ ಬಾರಿ ನಾಲ್ಕು ಸಿನಿಮಾಗಳ ಕುರಿತಂತೆ ಘೋಷಣೆ ಅಥವಾ ಅಪ್ಡೇಟ್ ಸಿಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಈ ಮೂಲಕ ಬರ್ತ್ಡೇ ಸಂಭ್ರಮದಿಂದ ದೂರವಿದ್ದರೂ, ಸಿನಿಮಾ ಸುದ್ದಿಗಳ ಮೂಲಕ ಕಿಚ್ಚ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲಿದ್ದಾರೆ.
ಸೆ.6ಕ್ಕೆ ಮತ್ತೆ ಟಿವಿ ಪರದೆ ಮೇಲೆ ಕಿಚ್ಚ
ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಕಿಚ್ಚನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಪ್ರೀಮಿಯರ್ ಸೆಪ್ಟೆಂಬರ್ 6ರಂದು ನಡೆಯಲಿದ್ದು, ಮತ್ತೊಮ್ಮೆ ಸುದೀಪ್ ನಿರೂಪಕರಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೀಗಾಗಿ 53ನೇ ಹುಟ್ಟುಹಬ್ಬ, 30 ವರ್ಷದ ಸಿನಿ ಪಯಣ, ಹೊಸ ಸಿನಿಮಾಗಳ ನಿರೀಕ್ಷೆ ಹಾಗೂ ‘ಬಿಗ್ ಬಾಸ್’ ಎಂಟ್ರಿ—ಈ ಬಾರಿ ಕಿಚ್ಚನ ಬರ್ತ್ಡೇಗೆ ವಿಶೇಷ ಅರ್ಥ ಸಿಕ್ಕಿದೆ.

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್
ಸುದ್ದಿದಿನ,ಬೆಂಗಳೂರು: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ರಿಯಾಲಿಟಿ ಶೋನಲ್ಲಿ ತಮ್ಮ ಸರಳತೆ, ಮುಗ್ಧತೆ ಹಾಗೂ ಸಹಜ ವರ್ತನೆಯಿಂದ ವೀಕ್ಷಕರ ಗಮನ ಸೆಳೆದಿದ್ದ ನಂಜನಗೂಡಿನ ಕುಮಾರಿ ಇದೀಗ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಿ, ವೈದ್ಯರ ಸಲಹೆಯಂತೆ ಆಟವನ್ನು ಮುಂದುವರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೋನಿಂದ ಹೊರಬಂದಿದ್ದಾರೆ.
ಕಳೆದ ಕೆಲವು ಸಂಚಿಕೆಗಳಲ್ಲಿ ಕುಮಾರಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅವರು ಯಾಕೆ ಕಾರ್ಯಕ್ರಮದಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆಯೂ ಚರ್ಚೆಗೆ ಬಂದಿತ್ತು. ಇದೇ ಸಂದರ್ಭದಲ್ಲಿ ಮತ್ತೊಬ್ಬ ಸ್ಪರ್ಧಿ ಪೂರ್ಣಿಮಾ, ತಮ್ಮನ್ನು ಕಳುಹಿಸಿ ಕುಮಾರಿಯನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಕುಮಾರಿ ಶೋನಿಂದ ದೂರ ಉಳಿದಿರುವ ನಿಜವಾದ ಕಾರಣ ಅನಾರೋಗ್ಯ ಎಂಬುದು ಸ್ಪಷ್ಟವಾಗಿದೆ.
http://Visit : www.suddidina.com
ಆಟ ಅರ್ಧಕ್ಕೆ ನಿಂತರೂ ಸಿಕ್ಕಿತು ₹5 ಲಕ್ಷ!
ಕುಮಾರಿಯ ಬಿಗ್ ಬಾಸ್ ಪಯಣ ಅರ್ಧಕ್ಕೆ ಅಂತ್ಯಗೊಂಡಿದ್ದರೂ, ಕಾರ್ಯಕ್ರಮದ ವೇದಿಕೆ ಅವರಿಗೆ ನಿರೀಕ್ಷೆಗೂ ಮೀರಿದ ನೆರವು ನೀಡಿದೆ. ಕಾರ್ಯಕ್ರಮದ ಪ್ರಾಯೋಜಕರಾದ ಇಕೋ ಪ್ಲ್ಯಾನೆಟ್ ಎಲಿವೇಟರ್ ಸಂಸ್ಥೆ ಕುಮಾರಿಗೆ ಬರೋಬ್ಬರಿ ₹5 ಲಕ್ಷ ನಗದು ನೆರವು ನೀಡಿದೆ.
ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಕುಮಾರಿಗೆ ಈ ಹಣ ದೊಡ್ಡ ಆರ್ಥಿಕ ಆಸರೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಈ ಹಣ ನೆರವಾಗಬಹುದು ಎಂಬ ನಿರೀಕ್ಷೆಯೂ ಇದೆ.
ಶಿಕ್ಷಣದ ಬಳಿಕ ಉದ್ಯೋಗಕ್ಕೂ ಭರವಸೆ
₹5 ಲಕ್ಷ ನೆರವಿನ ಜತೆಗೆ ಕುಮಾರಿಗೆ ಮತ್ತೊಂದು ಮಹತ್ವದ ಅವಕಾಶವನ್ನು ಸಂಸ್ಥೆ ಘೋಷಿಸಿದೆ. ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡಲಾಗಿದೆ.
ಇದು ಕುಮಾರಿಯ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಘೋಷಣೆಯಾಗಿದೆ. ರಿಯಾಲಿಟಿ ಶೋನಿಂದ ಸಿಕ್ಕ ಜನಪ್ರಿಯತೆಯ ಜತೆಗೆ ಇದೀಗ ಶಿಕ್ಷಣ ಮತ್ತು ಉದ್ಯೋಗದ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡುವ ಅವಕಾಶವೂ ದೊರೆತಿದೆ.
ಭಾವುಕ ವಿದಾಯ, ಹೊಸ ಬದುಕಿನ ಭರವಸೆ
ಹಳ್ಳಿಯಿಂದ ಬಂದ ಕುಮಾರಿಗೆ ಬೆಂಗಳೂರನ್ನು ನೋಡುವ ಅವಕಾಶದಿಂದ ಹಿಡಿದು ದೊಡ್ಡ ರಿಯಾಲಿಟಿ ಶೋ ವೇದಿಕೆಯಲ್ಲಿ ಸ್ಪರ್ಧಿಸುವವರೆಗೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಹಲವು ಹೊಸ ಅನುಭವಗಳನ್ನು ನೀಡಿದೆ. ಶೋನಿಂದ ನಿರ್ಗಮಿಸುವ ಸಂದರ್ಭದಲ್ಲಿ ಕುಮಾರಿ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು.
ಸ್ಪರ್ಧೆಯಲ್ಲಿ ಮುಂದುವರಿಯಲು ಸಾಧ್ಯವಾಗದ ನೋವಿನ ನಡುವೆಯೂ, ಇಷ್ಟು ದೊಡ್ಡ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದಾಗಿ ಅವರ ಆಟ ಅಂತ್ಯಗೊಂಡಿದ್ದರೂ, ₹5 ಲಕ್ಷ ನೆರವು ಮತ್ತು ಭವಿಷ್ಯದ ಉದ್ಯೋಗದ ಭರವಸೆ ಕುಮಾರಿಯ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.
ಹೀಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಕುಮಾರಿಯ ಆಟ ಅರ್ಧಕ್ಕೆ ನಿಂತಿದ್ದರೂ, ಕಾರ್ಯಕ್ರಮದ ವೇದಿಕೆಯಿಂದ ಸಿಕ್ಕ ಬೆಂಬಲ ಅವರ ಮುಂದಿನ ಬದುಕಿಗೆ ಮಹತ್ವದ ತಿರುವು ನೀಡಿದೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ1 day agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ1 day agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ1 day agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!


