Connect with us

ಸಿನಿ ಸುದ್ದಿ

ಮೀಡಿಯಾ ಸತ್ಯವನ್ನ ನಿರ್ಧಾರ ಮಾಡುತ್ತಾ..? ಇದು ಹೇಳಿದ್ದೆಲ್ಲಾ ಸತ್ಯವಾ..? : ‘ಜನಗಣಮನ’ ಸಿನೆಮಾಂತರಂಗ..!

Published

on

  • ಜಿ.ಟಿ.ತುಮರಿ

ಪ್ರಶ್ನೆ ಕೇಳುತ್ತಾ ಹೋದಂತೆ ಒಬ್ಬ ಪತ್ರಕರ್ತನಾಗಿ ತಣ್ಣಗೆ ಬೆವರಿಬಿಟ್ಟೆ. ನನ್ನ ಕಣ್ಣಮುಂದೆ ಹಲವು ಸುದ್ದಿ ಚಾನೆಲ್ ಮತ್ತು ವಿಷ ಕಾರುವ ಅದರ ನಿರೂಪಕರು, ಅವರ ನಿಲುವುಗಳ ಹಿಂದಿರುವ ಅಪವಿತ್ರ ಮೈತ್ರಿಗಳು, ಅದರಲ್ಲೂ ಈಚೆಯ ವರ್ಷದಲ್ಲಿ ಪೇಸ್ಭುಕ್, ಟ್ವಿಟರ್, ವ್ಯಾಟ್ಸಪ್ , ಇನ್ಸ್ಟಾಗ್ರಾಮ್ ಇತ್ಯಾದಿ ಮೂಲಕ ಸುಳ್ಳು ಸುರಿಯುವ ರಾಜಕೀಯ ಸಾಮಾಜಿಕ ಹುನ್ನಾರಗಳು ಥಟ್ಟನೆ ಮನಸಿಗೆ ಬಂದವು.

ಮಲಯಾಳಂ ನಟ ಪೃಥ್ವಿರಾಜ್ ಈಚೆಗೆ ಬಿಡುಗಡೆಯಾದ ಜನಗಣಮನ ಸಿನಿಮಾದಲ್ಲಿ ಡೈಲಾಗ್ ಮಾತ್ರ ಹೇಳುತ್ತಾ ಇರಲಿಲ್ಲ ಆ ಕಂಚಿನ ಕಂಠದಲ್ಲಿ ಸಿನಿಮಾ ನೋಡುತ್ತಾ ಇರುವ ಪ್ರತಿ ಭಾರತೀಯನ ಆತ್ಮಸಾಕ್ಷಿ ತಿವಿಯುತ್ತಾ ಹೋಗುತ್ತಾನೆ. ಆ ಮೂಲಕ ನಮ್ಮ ಸುತ್ತಲ ವರ್ತಮಾನದ ಸತ್ಯಗಳಿಗೆ ಕುರುಡಾದ ಕೆಪ್ಪಾದ ಕಣ್ಣು ಕಿವಿಯ ಜತೆ ಸತ್ತ ಹಾಗೆ ಇರುವ ನಮ್ಮೊಳಗಿನ ನಮ್ಮನ್ನು ಬಡಿದೆಬ್ಬಿಸುತ್ತಾ ಹೋಗುತ್ತದೆ ಜನಗಣಮನ ಸಿನಿಮಾ.

” ಒಂದು ನಾಯಿ ಸತ್ತರೂ ಕೇಳೋ ಈ ದೇಶದಲ್ಲಿ ಆ ನಾಲ್ಕು ಜನ ಬೀದಿನಾಯಿಗಳ ಹಾಗೆ ಸತ್ತರು. ಯಾವ ಆಧಾರನೂ ಬೇಡ, ಯಾವ ನ್ಯಾಯ ಕೋರ್ಟ್ ಬೇಡ ಅವರನ್ನ ಕೊಲ್ಲಬೇಕು. ಇದಕ್ಕೆ ಕಾರಣ ಅವರ ಗುರುತು, 2 ನೇ ಕ್ಲಾಸ್ ಮಗುವಿಗೆ ಬಣ್ಣದ ಮೇಲೆ ಚಂದ ಕುರೂಪ ಅಂತ ಚಿತ್ರ ಬರೆದು ತಾರತಮ್ಯವನ್ನ ತುಂಬುವ ಮತದ ರಾಜಕೀಯ, ಅವರನ್ನು ನೋಡಿದ್ರೆ ಗೊತ್ತಾಗಲ್ಲವಾ ಅನ್ನೋ ಜಾತಿ ರಾಜಕೀಯ ಇಲ್ಲಿ ನಡೀತಾ ಇದೆ”

ಯೂನಿವರ್ಸಿಟಿಯೊಂದರಲ್ಲಿ ಜಾತಿಯ ಕಾರಣದಿಂದ ಹತ್ಯೆಗೆ ಒಳಗಾಗುವ ವಿದ್ಯಾರ್ಥಿನಿಗೆ ನ್ಯಾಯ ನೀಡಲು ಮುಂದಾಗುವ ಮಹಿಳಾ ಪ್ರೊಫೆಸರ್ ಒಬ್ಬರನ್ನು ಅಲ್ಲಿನ ವ್ಯವಸ್ಥೆ ಕೊಂದುಹಾಕಿದ ಪ್ರಕರಣವೊಂದನ್ನು ಸತ್ಯದ ಮರೆಮಾಚಿ ನಕಲಿ ಎನ್ ಕೌಂಟರ್ ಹೇಗೆ ಸೃಷ್ಟಿಯಾಗಲು ಇರುವ ಸಾಮಾಜಿಕ ರಾಜಕೀಯ ಕಾರಣಗಳನ್ನ ಜನಗಣಮನ ಸಿನಿಮಾ ಬಿಚ್ಚಿಡುತ್ತಾ ಹೋಗುತ್ತದೆ. ಘಟನೆಯೊಂದರ ರಾಜಕೀಯ ಲಾಭವನ್ನ ಹೇಗೆ ಮಾಧ್ಯಮಗಳು, ಸಮೂಹ ಮಾಧ್ಯಮಗಳ ಮೂಲಕ ಜನರಲ್ಲಿ ಸುಳ್ಳು ಬಿತ್ತಿ ಪರಿಸ್ಥಿತಿ ಲಾಭ ಪಡೆಯಬಹುದು ಎನ್ನುವುದನ್ನು ಇಡೀ ಸಿನಿಮಾ ಎಳೆ ಎಳೆಯಾಗಿ ವಿವರಿಸುತ್ತದೆ.

ಈ ನಿರ್ದೇಶಕರಿಗೆ ಸೆಲ್ಯೂಟ್.. ಒಂದು ಸಿನಿಮಾ ಕೇವಲ ರಂಜನೆ ನೀಡಿದರೆ ಸಾಕು ಎನ್ನುವ ಸೀಮಿತ ಲೆಕ್ಕಾಚಾರದ ನಡುವೆ ಸಿನಿಮಾವೊಂದು ನಮ್ಮ ಸುತ್ತಲಿನ ಸುಡು ವರ್ತಮಾನಕ್ಕೆ ವಿಮರ್ಶೆ ಬರೆದಿದೆ. ಹೇಗೆ ದೇಶದ ಜನರು ವಿಸ್ಮೃತಿಗೆ ಒಳಗಾಗಿ ಹೌದಪ್ಪ ಆಗಿದ್ದೇವೆ ಎನ್ನುವುದನ್ನ ಪ್ರತಿ ದ್ರಶ್ಯ ಕಟ್ಟಿ ಕೊಡುತ್ತದೆ. ಸಿನಿಮಾದ ಮೊದಲು ಅರ್ಧ ಭಾವನಾತ್ಮಕ ಕಥಾಹಂದರ ಕಟ್ಟಿ ಕೊಟ್ಟರೆ. ದ್ವಿತೀಯಾರ್ಧದಲ್ಲಿ ನಾವು ಈ ಮೊದಲು ಸಿನಿಮಾ ಆರಂಭದಲ್ಲಿ ಕಟ್ಟಿಕೊಂಡ ಭಾವುಕತೆ ಎಷ್ಟು ಕೃತಕ ಮತ್ತು ಸುಳ್ಳು ಎನ್ನುವುದನ್ನ ವಕೀಲನಾದ ಸಿನಿಮಾ ನಾಯಕ ಮೂಲಕ ಪ್ರಖರವಾಗಿ ಹೇಳಿಸುವ ಮೂಲಕ ಮಿಥ್ ಗಳನ್ನು ಸೃಷ್ಟಿ ಮಾಡುವ ಹುನ್ನಾರಗಳನ್ನ ಸಿನಿಮಾ ಏಕ ಕಾಲದಲ್ಲಿ ತೆರೆಯಮೇಲೆ ಮತ್ತು ನಮ್ಮೊಳಗೆ ಅನುಭವಕ್ಕೆ ತರಿಸುತ್ತದೆ.

ಇಂತ ಸಿನಿಮಾ ಮಾಡಲು ಪ್ರತಿಭೆ ಮಾತ್ರ ಇದ್ದರೆ ಸಾಕಾಗದು ಅದಕ್ಕೆ ಒಂದು ಬದ್ಧತೆ ಮತ್ತು ದೈರ್ಯ ಬೇಕು. ಸಾಮಾಜಿಕ ಮತ್ತು ರಾಜಕೀಯ ಸತ್ಯವನ್ನ ಹೇಳುವ ಸಮಾಜಮುಖಿ ಸಿನಿಮಾಗಳು ಹಾಗೆ ನೋಡಿದರೆ ಕನ್ನಡ ಚಿತ್ರರಂಗದಲ್ಲಿ 2000 ಕ್ಕಿಂತ ಮೊದಲು ಸಿನಿಮಾಗಳ ಸರಣಿಗಳೇ ಇವೆ. ಬಹಳ ಮುಖ್ಯವಾಗಿ ರಾಜ್ ಕುಮಾರ್ ಸಿನಿಮಾಗಳನ್ನ ಉಲ್ಲೇಖ ಮಾಡಬಹುದು. ಆದರೆ ಕಳೆದ ಒಂದು ದಶಕವನ್ನ ಗಮನಿಸಿದರೆ ಮಲಯಾಳಂ ಮತ್ತು ತಮಿಳು ಚಿತ್ರರಂಗ ಈ ನಡೆಯಲ್ಲಿ ಮುಂದೆ ಇವೆ. ಹುಡುಗ ಹುಡುಗಿ ಮರ ಸುತ್ತಿಸಿ ಮಚ್ಚು ಲಾಂಗು ಹಿಡಿಸಿ ಎರಡು ಮಾಸ್ ಸಾಂಗ್ ಹಾಕಿ ನಾಯಕನನ್ನು ಮೆರೆಸಲು ಮತ್ತೆರೆಡು ಹಾಡು ಬರೆಸುವುದರಲ್ಲಿ ಕನ್ನಡ ಮತ್ತು ತೆಲುಗು ಚಿತ್ರರಂಗ ಪೈಪೋಟಿ ಇದ್ದಂತೆ ಇವೆ. ಆದರೆ ಮಲಯಾಳಿ ಮತ್ತು ತಮಿಳು ಚಿತ್ರರಂಗ ಇದಕ್ಕೆ ಭಿನ್ನ ಇವೆ. ಅಲ್ಲಿನ ಸಿನಿಮಾದಲ್ಲಿ ಭಿನ್ನ ನೆಲೆಯ ನಿರೂಪಣೆಯ ಕಥೆ, ಕಡಿಮೆ ವೈಭವೀಕರಣ, ಕೌಶಲ್ಯದ ನಟನೆಯಂತ ಹಲವು ಕಾರಣ ಇವೆ. ಕರ್ಣನ್, ಅಸುರ, ಜೈ ಭೀಮ್, ಗ್ರೇಟ್ ಇಂಡಿಯನ್ ಕಿಚನ್ ರೂಮ್, ಕೋಲ್ಡ್ ಕೇಸ್, ಬೀಸ್ಟ್, ಬಿಗಿಲ್, ಇಂದ್ರನ್ ನಟನೆ ಸಿನಿಮಾಗಳು, ಡ್ರೈವಿಂಗ್ ಲೈಸೆನ್ಸ್, ಅಯ್ಯಪ್ಪನ್, ಫಾಸಿಲ್ ಸರಣಿ ಸಿನಿಮಾಗಳು ಹೀಗೆ.

ಜನಗಣಮನ….ಈಚೆಯ ವರ್ಷಗಳಲ್ಲಿ ನಾನು ಕಂಡ ಸಿನಿಮಾಗಳಲ್ಲೇ ಶ್ರೇಷ್ಠ ಸಿನಿಮಾ. ರಾಜಕೀಯ ಪೊಲೀಸ್ ವ್ಯವಸ್ಥೆಯನ್ನ ಹೇಗೆ ದುರ್ಬಳಕೆ ಮಾಡಿಕೊಂಡು ತನ್ನ ಬೇಳೆ ಕಾಳು ಬೇಯಿಸಿ ಬಳಸಿ ಬಿಸಾಡುತ್ತದೆ ಎನ್ನುವುದನ್ನು ಕಥಾವಸ್ತು ಒಳಗೊಳ್ಳುವ ಜತೆ ರಾಜಕೀಯ ಪೊಲೀಸ್ ಮತ್ತು ಮಾಧ್ಯಮ ಮೂರು ಭ್ರಷ್ಟ ಮೈತ್ರಿಯಾದರೆ ಸತ್ಯ ಹೇಗೆ ಸುಳ್ಳಾಗಿ ಸಂವಿಧಾನದ ಆಶಯ ವಿರುದ್ಧ ಅಪವಿತ್ರ ಮೈತ್ರಿಯಾಗಿ ಜನಗಣಮನಕ್ಕೆ ವಿಷ ಉಣಿಸಿ ಸ್ವಾರ್ಥ ಸಾಧಿಸುತ್ತದೆ ಎನ್ನುವುದು ಅತ್ಯುತ್ತಮವಾಗಿ ನಿರೂಪಿಸಿ ದೃಶ್ಯವಾಗಿಸಿದೆ ಸಿನಿಮಾ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending