Connect with us

ದಿನದ ಸುದ್ದಿ

ಕಾಮಾಲೆ ಸಮಸ್ಯೆಗೆ ಇಲ್ಲಿವೆ ಪರಿಹಾರ

Published

on

ಪಿತ್ತಕೋಶಕ್ಕೆ ಹೊರೆಯು ಹೆಚ್ಚಾದಾಗ ಕರುಳು, ಪಿತ್ತರಸ ಹಾಗೂ ವರ್ಣದ್ರವ್ಯವನ್ನು ಕೊಂಡೊಯ್ಯುವ ಪಿತ್ತರಸನಾಳಗಳ ಕಾರ್ಯಕ್ಕೆ ತೊಂದರೆಯುಂಟಾದಾಗ ಅದು ಪಿತ್ತರಸ ಮತ್ತು ವರ್ಣದ್ರವ್ಯವನ್ನು ರಕ್ತಕ್ಕೆ ಬಿಡುತ್ತದೆ. ಆಗ ಚರ್ಮದ ಬಣ್ಣವು ಹಳದಿಯಾಗುತ್ತದೆ. ಇದನ್ನೆ ಅರಿಶಿನ ಕಾಮಾಲೆ ಎನ್ನುತ್ತಾರೆ. ಇದರರ್ಥ ಪಿತ್ತ ಜನಕಾಂಗಕ್ಕೆ ತೊಂದರೆಯುಂಟಾಗಿದೆ ಎಂದರ್ಥ.

ಕಾಮಾಲೆ ಬರುವ ಸೂಚನೆಗಳು

ನಿದ್ದೆಬರದಿರುವುದು, ಮಲವು ಬಿಳಿ ಅಥವಾ ಬೂದುಬಣ್ಣವಾಗುವುದು, ಬಾಯಿ ಕಹಿ ಎನಿಸುವುದು, ಆಹಾರವನ್ನು ಕಂಡರೆ ವಾಕರಿಕೆ, ವಾಂತಿ ಬಂದಂತೆ ಅನಿಸುವುದು. ಸುಸ್ತಾಗುವುದು, ನಾಲಿಗೆಯ ಮೇಲೆ ಬಿಳಿಯ ಒತ್ತರ ಆಗುವುದು, ತಲೆನೋವು ಬರುವುದು. ಜ್ವರ ಬಂದಂತಾಗುವುದು. ಮಲಬದ್ಧತೆ ಉಂಟಾಗುವುದು. ಕಣ್ಣು, ಚರ್ಮ ಹಾಗೂ ಮೂತ್ರ ಹಳದಿಯ ಬಣ್ಣದಾಗುವುದು.
• ಒಂದು ವಾರದ ತನಕ ಕೇವಲ ಹಣ್ಣಿನ ರಸವನ್ನು ಮಾತ್ರ ತೆಗೆದುಕೊಳ್ಳಿ.
• ಕಿತ್ತಳೆ, ಎಳನೀರು, ಮೂಸಂಬಿ, ದಾಳಿಂಬೆ, ಇತ್ಯಾದಿ ಹುಳಿಹಣ್ಣುಗಳನ್ನು ಹಾಗೂ ಕಬ್ಬಿನಹಾಲು, ಬೆಣ್ಣೆ ತೆಗೆದ ಮಜ್ಜಿಗೆಯನ್ನು ಉಪಯೋಗಿಸಿ.
• ಒಂದು ಲೋಟ ಬಿಸಿನೀರಿಗೆ ನಿಂಬೆಹಣ್ಣಿನ ರಸವನ್ನು ಹಿಂಡಿ 2 ಚಮಚ ಜೇನುತುಪ್ಪವನ್ನು ಹಾಕಿ ಬೆಳಿಗ್ಗೆಯ ಸಮಯ ತೆಗೆದುಕೊಳ್ಳಿ.
• ಬೆಳಗ್ಗಿನ ಉಪಹಾರದ ಬದಲು 2-3 ವಿಧವಾದ ಹಣ್ಣುಗಳನ್ನು ತೆಗೆದುಕೊಳ್ಳಿ.
• ಕಿತ್ತಳೆರಸ ಇಲ್ಲ ದ್ರಾಕ್ಷಿಯ ಹಣ್ಣಿನ ರಸವನ್ನು ತೆಗೆದುಕೊಳ್ಳಿ.
• ಮಧ್ಯಾಹ್ನ ಊಟಕ್ಕೆ ಎರಡು ಚಪಾತಿ ಜೊತೆಗೆ ಬೇಯಿಸಿದ ತರಕಾರಿಗಳನ್ನು ಹಾಗೂ ಸೊಪ್ಪುಗಳನ್ನು ಸ್ವಲ್ಪ ನಿಂಬೆರಸದೊಂದಿಗೆ ತೆಗೆದುಕೊಳ್ಳಿ.
• ರಾತ್ರಿ ಊಟದ ಬದಲು ಹಸಿ ತರಕಾರಿಗಳ ಸಲಾಡ್, ಮಜ್ಜಿಗೆ, ಒಣಹಣ್ಣುಗಳು, ತಾಜಾಹಣ್ಣುಗಳನ್ನು ಸೇವಿಸಿ.
• ತೆಂಗಿನಕಾಯಿ, ಕಡ್ಲೆಕಾಯಿ, ಹಾಲು, ತುಪ್ಪ, ಬೆಣ್ಣೆ, ಎಣ್ಣೆ, ಬೇಳೆ ಇತ್ಯಾದಿಗಳನ್ನು ಒಂದೆರಡು ತಿಂಗಳುಗಳ ಕಾಲ ಸೇವಿಸಬೇಡಿ.
• ಹೆಚ್ಚು ನೀರನ್ನು ಕುಡಿಯಿರಿ. ಬಿಸಿನೀರಿನ ಹಿಪ್ ಬಾತ್, ಹಬೆಸ್ನಾನ, ಸೂರ್ಯಸ್ನಾನ ಅವಶ್ಯ. (ಬರಹ-ಡಾ ವೆಂಕಟ್ರಮಣ ಹೆಗಡೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.

ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಸೇವಾ ಪ್ರಮಾಣಪತ್ರ : ಅತಿಥಿ ಉಪನ್ಯಾಸಕ ಎಸ್. ಸಿದ್ಧನಗೌಡ ವಿರುದ್ಧ ಎಫ್.ಐ.ಆರ್ ದಾಖಲು

Published

on

ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಾಲ್ಕು ವರ್ಷಗಳ ನಕಲಿ ಸೇವಾ ಪ್ರಮಾಣಪತ್ರ ತಯಾರಿಸಿಕೊಂಡ ಕೂಡ್ಲಿಗಿ ತಾಲ್ಲೂಕಿನ ಸೂಲದಹಳ್ಳಿ ಅಗ್ರಹಾರ ಗ್ರಾಮದ ಎಸ್.ಸಿದ್ಧನಗೌಡ ಎಂಬ ಅತಿಥಿ ಉಪನ್ಯಾಸಕನ ಮೇಲೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರು ಕೂಡ್ಲಿಗಿ ನಗರದ ಪೋಲಿಸ್ ಠಾಣೆಯಲ್ಲಿ ಐ.ಪಿಸಿ ಸೆಕ್ಷನ್ 1860 ಕಲಂ 420, 465, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಎಸ್.ಸಿದ್ಧನಗೌಡ ಅವರು ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು 2023ನೇ ಸಾಲಿನಲ್ಲಿ ನಡೆದ ಅತಿಥಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕನ್ನಡ ಉಪನ್ಯಾಸಕರಾಗಿ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನ್ನು ಆಯ್ದುಕೊಂಡು ಸೇವೆಗೆ ವರದಿ‌ ಮಾಡಿಕೊಂಡಿದ್ದರು. ಇವರ ಸೇವೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಕೆ.ಎ.ಓಬಳೇಶ್ ಅವರು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಮಾಹಿತಿ ಪಡೆದು, ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನ‌ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರ ವಿರುದ್ಧ ಲೋಕಾಯುಕ್ತಾಗೆ ದೂರು ನೀಡಿದ್ದರು.

ವಿಚಾರಣೆಯನ್ನು ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಾಲಯವು ಪ್ರಾಂಶುಪಾಲರಿಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಕಲಿ ಸೀಲು, ನಕಲಿ‌ ಪ್ರಮಾಣಪತ್ರ ಸಿದ್ಧಪಡಿಸಿಕೊಂಡ ಎಸ್.ಸಿದ್ಧನಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೋಲಿಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending