ದಿನದ ಸುದ್ದಿ
ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ..!?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/11/IMG_20191112_081952.jpg&description=ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ..!?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/11/IMG_20191112_081952.jpg&description=ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ..!?', 'pinterestShare', 'width=750,height=350'); return false;" title="Pin This Post">
2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.
ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.
ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.
ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.
ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು 2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.
ಆಗಸ್ಟ್ 1ರ ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.
ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ. ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.
ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.
ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.
ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.
ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.
ಕೃಪೆ :(ದಿ ಇಂಡಿಯನ್ ಎಕ್ಸ್ಪ್ರೆಸ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ7 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ5 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ4 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ4 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ6 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

