Connect with us

ದಿನದ ಸುದ್ದಿ

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ..!?

Published

on

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು 2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ. ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.
ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ಕೃಪೆ :(ದಿ ಇಂಡಿಯನ್ ಎಕ್ಸ್ಪ್ರೆಸ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending