ದಿನದ ಸುದ್ದಿ
ಕನ್ನಡವನ್ನು ವರ್ತಮಾನದೊಂದಿಗೆ ಬೆಸೆಯಬೇಕಿದೆ : ಡಾ. ಮೆಹಮೂದ್ ಖಾನ್
ಸುದ್ದಿದಿನ, ಚನ್ನಗಿರಿ : ಆಲೂರು ವೆಂಕಟರಾಯರು ಮೊದಲಾದ ಕನ್ನಡದ ಪ್ರಾತಃಸ್ಮರಣೀಯರ ಅವಿರತ ಪ್ರಯತ್ನದಿಂದ,ಬೇರೆ ಬೇರೆ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಮೈಸೂರು ರಾಜ್ಯವು ಏಕೀಕರಣಗೊಂಡಿತು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೆಹಮೂದ್ ಖಾನ್ ಅವರು ಅಭಿಪ್ರಾಯಪಟ್ಟರು.
ಪಟ್ಟಣದ ಶ್ರೀ ಶ್ರೀ ಶಿವಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವದ 50ನೇ ವರ್ಷಾಚರಣೆಯ ‘ಕರ್ನಾಟಕ ಸಂಭ್ರಮ-50’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1973ರಲ್ಲಿ ಮೈಸೂರು ರಾಜ್ಯವು ಕರ್ನಾಟಕ ರಾಜ್ಯ ಎಂದು ಹೆಸರು ಪಡೆದು, ಅದರ 50ನೇ ವರ್ಷದ ಸಂಭ್ರಮವನ್ನು ನಾವು ಇಂದು ಆಚರಿಸುತ್ತಿದ್ದೇವೆ. ಈ ಸಂಭ್ರಮದ ಜೊತೆಗೆ ಕನ್ನಡವನ್ನು ವರ್ತಮಾನದ ಸವಾಲುಗಳೊಡನೆ ಬೆಸೆಯಬೇಕಾದ ಸಂಕ್ರಮಣ ಕಾಲದಲ್ಲಿ ನಾವಿದ್ದೇವೆ. ಅದನ್ನು ಮನಗಂಡು ನಾವು ಮುನ್ನಡೆಯಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರವಿಯವರು, ಕನ್ನಡದ ವಿವೇಕವು, ಕ್ರಿ.ಶ.850ರ ಕವಿರಾಜಮಾರ್ಗ ಕಾಲದಿಂದಲೂ, ವಿಭಿನ್ನ ಅಭಿಮತಗಳು, ವಿಚಾರಗಳನ್ನು ಇಟ್ಟುಕೊಂಡೇ, ಏಕತೆ ಹಾಗೂ ಅಖಂಡತೆಯನ್ನು, ಸಹಿಷ್ಣುತೆಯನ್ನು ಪ್ರತಿಪಾದಿಸುತ್ತಾ ಸಹಕಾರ, ಸಹಬಾಳ್ವೆಯೊಂದಿಗೆ ಸಾಗುವುದೇ ನಮ್ಮ ನಿಜವಾದ ಸಂಪತ್ತು ಎಂದು ಪ್ರತಿಪಾದಿಸಿದೆ ಎಂದರು.
ಬಹುತನ, ಒಳಗೊಳ್ಳುವಿಕೆ, ಕೈ ಹಿಡಿದು ನಡೆಸಿಕೊಂಡು ಹೋಗುವ ಗುಣವನ್ನು ಕನ್ನಡತ್ವವು ಸದಾ ಜಾಗೃತವಾಗಿರಿಸಿಕೊಂಡೇ ಇದೆ. ಇದೇ ವಿವೇಕ, ಅಸ್ಮಿತೆ, ಸರ್ವ ಜನಾಂಗದ ತೋಟದ ರೂಪಕವಾಗಿ, ಕನ್ನಡದ ಸಾಂಸ್ಕೃತಿಕ ಪ್ರಜ್ಞೆಯಾದ, ರಾಷ್ಟ್ರಕವಿ ಕುವೆಂಪು ಅವರ ಬರೆವಣಿಗೆಯಲ್ಲಿ ಮುಂದುವರೆದಿದೆ ಎಂದು ಹೇಳಿ, ಈ ವಿವೇಕವನ್ನು ಜತನದಿಂದ ಕಾಪಿಟ್ಟುಕೊಂಡು ವರ್ತಮಾನದ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಮೃತೇಶ್ವರ ಬಿ. ಜಿ. ಇವರು ಕ್ರಿ.ಶ. 320ರ ತಾಳಗುಂದದ ವಜಿನಾಗನ ಕಾಲದಿಂದಲೂ ಕನ್ನಡ ದಾಖಲೆ ದೊರೆತಿದ್ದು, ಭಾರತದ ಪುರಾತನ ಭಾಷೆಗಳಲ್ಲಿ ಇದು ಒಂದು ಎಂಬುದಕ್ಕೆ ನಿದರ್ಶನವಾಗಿದೆ ಎಂದರು.
ಶಾಸ್ತ್ರೀಯ ಭಾಷೆಯ ಸ್ಥಾನವನ್ನು ಪಡೆದಿರುವ ಕನ್ನಡ ಭಾಷೆಯು ಹಲವು ಸವಾಲುಗಳನ್ನು ಎದುರಿಸಿ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡು ನಿಂತಿದೆ. ಇದಕ್ಕೆ ಕಾರಣ, ಕನ್ನಡದ ಸಾಮಾನ್ಯ ಜನತೆ, ಕಾಯಕ ಜೀವಿಗಳು ತಮ್ಮ ದಿನನಿತ್ಯದ ಬದುಕಿನಲ್ಲಿ ಕನ್ನಡ ಭಾಷೆಯನ್ನು ಬಳಸುತ್ತಿರುವುದೇ ಹೊರತು ಅನ್ಯಥಾ ಅಲ್ಲ ಎಂದು ನುಡಿದರು.
ನಮ್ಮ ದಿನನಿತ್ಯದ ಎಲ್ಲ ಕ್ಷೇತ್ರಗಳಲ್ಲಿ ಕನ್ನಡವನ್ನು ಬಳಸಿ, ಬೆಳೆಸಿದರೆ ಮಾತ್ರ ಕನ್ನಡ ಭಾಷೆ, ಸಂಸ್ಕ್ರತಿ ಉಳಿಯುತ್ತದೆ
ಮತ್ತು ಇದನ್ನು ನಮ್ಮ ಮುಂದಿನ ಪೀಳಿಗೆಗೆ ರವಾನಿಸಲು ಸಾಧ್ಯ. ಹಾಗಾಗಿ ನಮ್ಮ ದಿನನಿತ್ಯದ ಎಲ್ಲಾ ಚಟುವಟಿಕೆಗಳಲ್ಲೂ ಕನ್ನಡವನ್ನು ಬಳಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ವಿಜಯ್ ಕುಮಾರ್ ಕೆ. ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕರಾದ ಡಾ. ಪಾರ್ವತಮ್ಮ, ಹಾಗೂ ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಷಣ್ಮುಖಪ್ಪ ಕೆ.ಹೆಚ್. ಅವರು ಹಾಗೂ ಕಾಲೇಜಿನ ಅಧ್ಯಾಪಕರು, ಕಛೇರಿ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಪಾರ್ವತಮ್ಮ ಅವರು ಪ್ರಾರ್ಥಿಸಿದರು. ರವಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ರಾಷ್ಟ್ರಗೀತೆ, ನಾಡಗೀತೆ, ಹಾಗೂ ಕನ್ನಡ ಗೀತ ಗಾಯನವನ್ನು ಸಮಾರಂಭದಲ್ಲಿ ಆಯೋಜಿಸಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ