Connect with us

ಬಹಿರಂಗ

HapPy BiRtHdAy | ಬಹುಜನ ಸಮಾಜದ ‘ಯುಗಪುರುಷ ಕಾನ್ಷಿರಾಮ್’ ಬಗ್ಗೆ ನಿಮಗೆಷ್ಟು ಗೊತ್ತು..!?

Published

on

Photo courtesy : India Today (Illustration by Raj Verma)

ದೇಶದ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗೆ ಜಾತಿವ್ಯವಸ್ಥೆಯ ಅಸ್ತಿತ್ವವೇ ಕಾರಣ.ಈ ಜಾತಿ ಅಸಮಾನತೆಗೆ ಅಧಿಕಾರ ಹೀನತೆಯೇ ಮೂಲ ಕಾರಣ. ಜಾತಿ ವ್ಯವಸ್ಥೆಯಿಂದಾಗಿ ಬಹುಜನರು ಅಪಮಾನದಿಂದ ಬದುಕುತ್ತಿದ್ದಾರೆ. ಅಧಿಕಾರ ಹೀನತೆಯಿಂದಾಗಿ ಬಡತನದಿಂದ ಬಳಲುತ್ತಿದ್ದಾರೆ. ಭಾರತೀಯರ ಬದುಕಿನಲ್ಲಿ ಭದ್ರವಾಗಿ ಬೆಸೆದುಕೊಂಡಿರುವ ಬ್ರಾಹ್ಮಣವಾದದ ಬೇರುಗಳನ್ನು ಬುಡ ಸಹಿತ ನಾಶಗೊಳಿಸಿ, ಬಹುಜನ ಸಮಾಜವನ್ನು ಆಳುವ ಸಮಾಜವನ್ನಾಗಿಸುವುದು ನನ್ನ ಗುರಿ. ಶೋಷಿತ ಸಮಾಜವು ಆಳುವ ಸಮಾಜವಾಗುವುದರಿಂದ ಮಾತ್ರ ಜಾತಿರಹಿತ ಸಮಾಜವನ್ನು ಸೃಷ್ಟಿ ಮಾಡಬಹುದು.

ಇಂತಹ ಯೋಗ್ಯವಾದ ಗುರಿಯನ್ನು ಸಾಕಾರಗೊಳಿಸುವ ಭಾಗ್ಯ ನನ್ನದಾದರೆ ನನ್ನ ಹುಟ್ಟು ಧನ್ಯ! ಇನ್ನು ಮುಂದೆ ನಾನು ಬದುಕುವುದಾದರೆ ಈ ಧ್ಯೇಯಕ್ಕಾಗಿಯೇ ಬದುಕುತ್ತೇನೆ. ಒಂದು ವೇಳೆ ಸಾಯುವುದಾದರೆ ನಾನು ಈ ಧ್ಯೇಯ ಸಾಧನೆಗಾಗಿಯೇ ಸಾಯುತ್ತೇನೆ. ಬಾಬಾಸಾಹೇಬ್ ಅಂಬೇಡ್ಕರರ ಕನಸನ್ನು ನನಸು ಮಾಡುವ ತನಕ ನಾನು ಮದುವೆ ಮಾಡಿಕೊಳ್ಳುವುದಿಲ್ಲ. ನನ್ನ ರಕ್ತ ಸಂಬಂಧಿಗಳೊಂದಿಗೆ ನಾನು ಯಾವುದೇ ಭಾವನಾತ್ಮಕ ಸಂಬಂಧಗಳನ್ನು ಇಟ್ಟುಕೊಳ್ಳುವುದಿಲ್ಲ. ನಾನು ಹುಟ್ಟಿ ಬೆಳೆದ ಊರಿಗೆ ಕಾಲಿಡುವುದಿಲ್ಲ. ವೈಯಕ್ತಿಕವಾಗಿ ನಾನು ಯಾವುದೇ ಆಸ್ತಿ-ಪಾಸ್ತಿಯನ್ನು ಹೊಂದುವುದಿಲ್ಲ. ಬಹುಜನ ಸಮಾಜವೇ ನನ್ನ ಕುಟುಂಬ. ಈ ಸಮಾಜದ ಏಳಿಗೆಗಾಗಿ ನಾನು ನನ್ನ ಜೀವನವನ್ನೇ ಮುಡಿಪಾಗಿಡುತ್ತೇನೆ. ನನ್ನ ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ಕೊಡುತ್ತೇನೆ. ಗುಲಾಮ ಸಮಾಜವನ್ನು ಆಳುವ ಸಮಾಜವನ್ನಾಗಿ ರೂಪಿಸಿಯೇ ತೀರುತ್ತೇನೆ. ಅದಕ್ಕಾಗಿ ಇಂದಿನಿಂದ ನಿಮ್ಮೆಲ್ಲರ ಪಾಲಿಗೆ ನಾನು ಸತ್ತು ಹೋಗಿದ್ದೇನೆ”.

ಅಂಬೇಡ್ಕರ್ ವಾದದ ಅನುಷ್ಠಾನಕ್ಕಾಗಿ ತನ್ನ ಬದುಕನ್ನೇ ಸಮರ್ಪಿಸಿಕೊಂಡ ಸಂತನೊಬ್ಬ ತನ್ನ ಹೆತ್ತ ತಾಯಿಗೆ ಬರೆದ ಸುದೀರ್ಘ 24 ಪುಟಗಳ ಪತ್ರದ ಆಯ್ದ ಸಾರಾಂಶವಿದು..!

ನುಡಿದಂತೆ ನಡೆದು, ಅಸಾಧ್ಯವಾದುದನ್ನು ಸಾಧಿಸಿ, ರಾಜಕೀಯ ಜಗತ್ತೇ ನಿಬ್ಬೆರಗಾಗಿ ತನ್ನತ್ತ ತಿರುಗಿ ನೋಡುವಂತೆ ಮಾಡಿದ ಆ ಅಸಾಧಾರಣ ಸಾಹಸಿಯೇ “ದಾದಾಸಾಹೇಬ್ ಕಾನ್ಷಿರಾಮ್”.

ಅಂಬೇಡ್ಕರ್ ಎಂಬ ಅದ್ವಿತೀಯ ಜ್ಞಾನಿಯ ಮಾತು, ಕೃತಿ, ಚಿಂತನೆಗಳನ್ನು ಆಳವಾಗಿ ಗ್ರಹಿಸಿ, ಮೆದುಳಿಗಿಳಿಸಿಕೊಂಡು ಅದಕ್ಕೆ ರಾಜಕೀಯ ರೂಪ ಕೊಟ್ಟ ಕಾನ್ಷಿರಾಮ್ ರವರದು ಭಾರತದ ರಾಜಕೀಯದಲ್ಲಿ ಮದ್ದಾನೆಯ ಹಾದಿ. ಏಕಾಂಗಿ ಹೋರಾಟ. “ಸಾವಿರಾರು ವರ್ಷಗಳಿಂದ ಶೋಷಿತರಾಗಿರುವ ಎಸ್.ಸಿ, ಎಸ್.ಟಿ, ಒಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ರಾಜಕೀಯ ಮುಖ್ಯವಾಹಿನಿಗೆ ತರಬೇಕು. ಅವರನ್ನು ಆಳುವ ದೊರೆಗಳನ್ನಾಗಿ ಮಾಡಬೇಕು”ಎಂದು ಪಣ ತೊಟ್ಟಿದ್ದ ಕಾನ್ಷಿರಾಮ್ ರವರು ಕಾಲಗರ್ಭದಲ್ಲಿ ಅಮೂಲ್ಯ ನಿಧಿಯಾಗಿ ಹುದುಗಿ ಹೋಗಿದ್ದ ಫುಲೆ-ಪೆರಿಯಾರ್-ಶಾಹು-ನಾಲ್ವಡಿ-ನಾರಾಯಣಗುರು ಎಂಬ ಮಾನವಕುಲ ಮರೆಯಬಾರದ ಮಹಾಗುರುಗಳನ್ನು ಇತಿಹಾಸದ ಪುಟಗಳಿಂದ ಹೆಕ್ಕಿ ಹೊರತೆಗೆದು ಬಹುಜನ ಸಮಾಜಕ್ಕೆ ಪರಿಚಯಿಸಿದರು.

ಸರಳತೆ ಮತ್ತು ಸಜ್ಜನಿಕೆಗೆ ಹೆಸರಾಗಿದ್ದ ಕಾನ್ಷಿರಾಮರು ಪಕ್ಷದ ಪ್ರಚಾರ ಸಾಮಗ್ರಿಗಳನ್ನು ಸ್ವತಃ ತಾವೇ ಸ್ವತಃ ಹೊತ್ತು ಲಾರಿಗೆ ಹಾಕುತ್ತಿದ್ದರು. ಅದನ್ನು ದೇಶದ ಮೂಲೆ-ಮೂಲೆಗೂ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದರು. ಕಾರ್ಯಕ್ರಮವಿದ್ದಾಗ ಗೋಡೆಗಳಿಗೆ ಪ್ರಚಾರ ಪತ್ರಗಳನ್ನು ಅಂಟಿಸುತ್ತಿದ್ದರು. ಹಾರೆ-ಗುದ್ದಲಿಗಳನ್ನು ಹಿಡಿದು ವೇದಿಕೆಯನ್ನು ತಯಾರಿಸುತ್ತಿದ್ದರು. ಹೆಗಲಿಗೆ ಮೈಕು ಕಟ್ಟಿಕೊಂಡು ಹೆಸರಾಂತ ನಾಯಕರೊಬ್ಬರು ಸಭೆಗೆ ಬರುತ್ತಿದ್ದಾರೆಂದು ಎಲ್ಲೆಂದರಲ್ಲಿ ಪ್ರಚಾರ ಮಾಡುತ್ತಿದ್ದರು. ಸಮಾರಂಭದ ದಿನ ತಾವೇ ಮುಖ್ಯ ಅತಿಥಿಗಳಾಗಿ ಬಂದು ಅಚ್ಚರಿ ಮೂಡಿಸುತ್ತಿದ್ದರು. ಭಾಷಣದ ಮೂಲಕ ಸಭಿಕರನ್ನು ನಗೆಯ ಅಲೆಯಲ್ಲಿ ತೇಲಿಸುತ್ತಿದ್ದರು.

” ಏ ಕಾನ್ಷಿರಾಮ್.. ನೀನೊಬ್ಬ ಹುಚ್ಚ.. ರಾಜಕಾರಣದಲ್ಲಿ ನೀನಿನ್ನೂ ಬಚ್ಛಾ.. ನಿನಗೆ ರಾಜಕಾರಣದ ಮರ್ಮ ತಿಳಿದಿಲ್ಲ. ಬದುಕಿರುವಾಗಲೇ ಅಂಬೇಡ್ಕರ್ ಗೆದ್ದಿಲ್ಲ… ಇನ್ನೂ ಅಂಬೇಡ್ಕರ್ ಹೆಸರೇಳಿಕೊಂಡು, ಈ ಗುಲಾಮರನ್ನು ಕಟ್ಟಿಕೊಂಡು ನೀನು ಏನನ್ನು ಸಾಧಿಸಲು ಸಾಧ್ಯವಿಲ್ಲ.. ಹೋಗಿ ಏನಾದರೂ ಬೇರೆ ಕೆಲಸ ನೋಡಿಕೋ..” ಎನ್ನುವ ಅವಕಾಶವಾದಿ ಅಂಬೇಡ್ಕರ್ ವಾದಿಗಳ ಟೀಕೆ-ಮೂದಲಿಕೆಗಳನ್ನು ಕ್ರೀಡಾಸ್ಫೂರ್ತಿಯಿಂದ ಸವಾಲಾಗಿ ಸ್ವೀಕರಿಸಿ, ಬಾಡಿಗೆ ಸೈಕಲ್ ಗಳಲ್ಲಿ ದಿನವಿಡೀ ಸುತ್ತಾಡುತ್ತಾ, ದ್ವಿತೀಯ ದರ್ಜೆಯ ರೈಲು ಭೋಗಿಗಳಲ್ಲಿ ಗಂಟೆಗಟ್ಟಲೆ ನಿಂತು ಪ್ರಯಾಣ ಮಾಡುತ್ತಾ, ಹಸಿವು, ನಿದ್ರೆ, ನೀರಾಡಿಕೆಗಳನ್ನು ಲೆಕ್ಕಿಸದೆ, ಭಾರತದ ಮೂಲೆ-ಮೂಲೆಗಳಿಗೆ ಸಂಚರಿಸಿ, ಶೋಷಿತ ಸಮುದಾಯಗಳನ್ನು ರಾಜಕೀಯವಾಗಿ ಸಂಘಟಿಸಿ, ಸಮಾಜದ ಕಟ್ಟ ಕಡೆಯ ವ್ಯಕ್ತಿ ಕೂಡ ಅತ್ಯಂತ ಸಮರ್ಥವಾಗಿ ಅಧಿಕಾರ ಚಲಾಯಿಸಬಲ್ಲ ಎಂಬ ಸತ್ಯವನ್ನು ಮಾನವ ಜಗತ್ತಿಗೆ ಮನವರಿಕೆ ಮಾಡಿಕೊಟ್ಟ ಮಾನ್ಯಾವಾರ್ ಕಾನ್ಷಿರಾಮ್ ಆಧುನಿಕ ಭಾರತ ಕಂಡ ಪ್ರಜಾಪ್ರಭುತ್ವದ ಪವಾಡ ಪುರುಷ!

“ಭಾರತದಲ್ಲಿ ಒಂದು ಗ್ರಾಮಪಂಚಾಯ್ತಿಯನ್ನೂ ಗೆಲ್ಲದಷ್ಟು ಅಲ್ಪಮತವುಳ್ಳವರಾಗಿರುವ ಬ್ರಾಹ್ಮಣರು, ತಮ್ಮ ಪರಂಪರಾನುಗತ ಹಿತಾಸಕ್ತಿಗಳನ್ನೂ ಕಾಯ್ದುಕೊಳ್ಳುವ ಸಲುವಾಗಿ ನೂರಾರು ತಂತ್ರ-ಕುತಂತ್ರಗಳ ಮೂಲಕ ತಮ್ಮ ರಾಜಕೀಯ ನಡಿಗೆಗಳನ್ನು ಸರಾಗಗೊಳಿಸಿಕೊಂಡಿದ್ದಾರೆ. ಬ್ರಾಹ್ಮನೇತರರಲ್ಲಿ ಸ್ವತಂತ್ರ ರಾಜಕೀಯ ಚಿಂತನೆಗಳು ಮೊಳಕೆಯೊಡೆಯದಂತೆ ಅವರಿಗೆ ಹಣ-ಅಧಿಕಾರದ ಆಮಿಷ ತೋರಿಸಿ ತಮ್ಮ ನಾಯಕತ್ವದ ರಾಜಕೀಯ ಪಕ್ಷಗಳಲ್ಲೇ ಕಾಲಾಳುಗಳಾಗಿಸಿಕೊಂಡಿದ್ದಾರೆ. ದೇಶದ ಜನಸಂಖ್ಯೆಯಲ್ಲಿ ಶೇ.15 ಭಾಗವಿರುವ ಬ್ರಾಹ್ಮಣ, ಬನಿಯಾಗಳು ಶೇ. 85 ರಷ್ಟು ದೇಶದ ಆಸ್ತಿ, ಸಂಪತ್ತು ಮತ್ತು ಅಧಿಕಾರವನ್ನು ಹಿಡಿದುಕೊಂಡಿದ್ದಾರೆ. ಬ್ರಾಹ್ಮಣ, ಬನಿಯಾಗಳ ಹಿತಾಸಕ್ತಿಗೆ ಬಲಿಯಾಗಿ ಆರು ಸಾವಿರಕ್ಕಿಂತಲೂ ಅಧಿಕ ಜಾತಿ-ಉಪಜಾತಿಗಳಲ್ಲಿ ಹರಿದು ಹಂಚಿ ಹೋಗಿರುವ ಶೇ. 85 ರಷ್ಟು ಜನಸಂಖ್ಯೆಯನ್ನು ಹೊಂದಿರುವ ಬಹುಜನರು ಕೇವಲ ಶೇ.15 ರಷ್ಟು ಆಸ್ತಿ, ಸಂಪತ್ತು, ಅಧಿಕಾರವನ್ನು ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಅವರು ಬಡವರಾಗಿ, ಕಡುಬಡವರಾಗಿ ಬಾಳಿ ಬದುಕುತ್ತಿದ್ದಾರೆ. ಬಹುಜನ ಸಮಾಜವನ್ನು ಒಡೆಯುವ ಮೂಲಕ ಬ್ರಾಹ್ಮಣ, ಬನಿಯಾಗಳು ಭಾರತದಲ್ಲಿ ಆಳುವ ಜನರಾಗಿದ್ದಾರೆ. ಒಡೆಯುವುದು ಅವರ ಕೆಲಸ.. ಕೂಡಿಸುವುದು ನನ್ನ ಕೆಲಸ. ಒಡೆದು-ಹಂಚಿ ಹೋಗಿರುವ ಬಹುಜನ ಸಮಾಜವನ್ನು ಕೂಡಿಸಿ, ಪ್ರೀತಿ, ವಿಶ್ವಾಸ ನಂಬಿಕೆಗಳಲ್ಲಿ ಬಂಧಿಸಿ ಬಹುಜನ ಸಮಾಜವನ್ನು ಆಳುವ ಸಮಾಜವನ್ನಾಗಿ ಮಾಡುತ್ತೇನೆ”! ಎಂದು ಪ್ರತಿಜ್ಞೆಗೈದ ದಾದಾಸಾಹೇಬ್ ಕಾನ್ಷಿರಾಮ್ ರವರು ಉತ್ತರಪ್ರದೇಶವನ್ನು ತಮ್ಮ ರಾಜಕೀಯ ಪ್ರಯೋಗ ಭೂಮಿಯನ್ನಾಗಿ ಆರಿಸಿಕೊಂಡರು.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅನುಕೂಲಕರ ವಾತಾವರಣವೇನೂ ಇರಲಿಲ್ಲ. ಯಾಕೆಂದರೆ ಉತ್ತರಪ್ರದೇಶಕ್ಕೆ ಬಹುಜನ ಸಮಾಜ ಪಕ್ಪ ಕಾಲಿರಿಸಿದಾಗ ಕಾಂಗ್ರೆಸ್ ಪಕ್ಷ ದೈತ್ಯಾಕಾರವಾಗಿ ಬೆಳೆದು ನಿಂತಿತ್ತು. ಶೇ.24 ರಷ್ಟು ಪರಿಶಿಷ್ಟ ಮತಗಳಿಂದ, ಶೇ. 15 ರಷ್ಟು ಮುಸ್ಲಿಮರ ಮತಗಳಿಂದ ಹಾಗೂ ಶೇ.10 ರಷ್ಟು ಒಬಿಸಿ ಮತಗಳಿಂದ ಕಾಂಗ್ರೆಸ್ ಉಕ್ಕಿನ ಕೋಟೆಯನ್ನು ಕಟ್ಟಿಕೊಂಡಿತ್ತು. ಇದು ಒಂದು ಕಡೆಗಾದರೆ, ಇನ್ನೊಂದು ಕಡೆಗೆ “ರಾಷ್ಟ್ರೀಯ ಸ್ವಯಂ ಸೇವಕ ಸಂಘ” (RSS) ತನ್ನ ರಾಜಕೀಯ ಕದಂಬ ಬಾಹುವನ್ನು ಅದಾಗಲೇ ವಿಸ್ತರಿಸುತ್ತಿತ್ತು. ಇಂತಹ ಅನಾನುಕೂಲಕರ ಕ್ಲಿಷ್ಟ ರಾಜಕೀಯ ಪರಿಸ್ಥಿತಿಗಳನ್ನು ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಪಾರ ಪರಿಶ್ರಮದ ಮೂಲಕ ಜನಾಂದೋಲನ ರೂಪಿಸಿ ಅನುಕೂಲಕರ ವಾತಾವರಣನ್ನಾಗಿಸಿಕೊಂಡು ಉತ್ತರಪ್ರದೇಶದಂತಹ ಬ್ರಾಹ್ಮಣರ ರಾಮಭೂಮಿಯಲ್ಲಿ ಭೀಮರಾಜ್ಯವನ್ನು ಸ್ಥಾಪಿಸಿದ ಹೆಗ್ಗಳಿಕೆ ಯುಗಪುರುಷ ದಾದಾಸಾಹೇಬ್ ಕಾನ್ಷಿರಾಮ್ ರವರಿಗೆ ಸಲ್ಲುತ್ತದೆ.

ಬಹುಜನ ಸಮಾಜ ಪಕ್ಷದ ತೀವ್ರಗತಿಯ ಬೆಳವಣಿಗೆಯಿಂದ 1985 ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಾಗ ಅಂದು ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರು ಕಾನ್ಷಿರಾಮ್ ರನ್ನು ಹುಡುಕಿಕೊಂಡು ಬಂದು “ನೀವು ಬಿಎಸ್ಪಿಯನ್ನು ಕಾಂಗ್ರೆಸ್ ನಲ್ಲಿ ವಿಲೀನಗೊಳಿಸಿ.. ನಾವು ನಿಮ್ಮನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡುತ್ತೇವೆ” ಎಂದು ಹೇಳಿದಾಗ “ನನ್ನ ಗುರು ಬಾಬಾಸಾಹೇಬರಿಗೆ ಮೋಸ ಮಾಡಿದ ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ನಾಶ ಮಾಡುವುದೇ ನನ್ನ ಗುರಿ” ಎಂದು ದಿಟ್ಟತನದಿಂದ ಹೇಳಿದರು.

“ಬಿಎಸ್ಪಿ ಎಂದೂ ಗೆಲ್ಲುವ ಪಕ್ಷವಾಗುವುದಿಲ್ಲ. ಮತ ವಿಭಜನೆ ಮಾಡಿ ಕೋಮುವಾದಿಗಳಿಗೆ ಸಹಕರಿಸುತ್ತದೆ. ಬಿಎಸ್ಪಿಯಿಂದ ಯಾವ ಕಾಲಕ್ಕೂ ಎಂ.ಎಲ್.ಎ ಗಳಾಗಲೀ, ಎಂ.ಪಿ. ಗಳಾಗಲೀ ಆರಿಸಿ ಬರುವುದಿಲ್ಲ. ಬರೀ ಸೋಲಿಸುವುದಷ್ಟೇ ಅದರ ಪಾತ್ರ” ಎಂದು ಕಂಡ-ಕಂಡಲ್ಲಿ ಅಪಪ್ರಚಾರ ಮಾಡಿಕೊಂಡು ತಿರುಗುತ್ತಿದ್ದ ಕಾಂಗ್ರೆಸ್ ನಾಯಕರೇ ತಲೆ ತಿರುಗಿ ಬೀಳುವಂತೆ ಪಕ್ಷವನ್ನು ಬೆಳೆಸಿ ತೋರಿಸಿದ ಕಾನ್ಷಿರಾಮ್ ರವರು ತಮ್ಮ ಬದುಕಿನವಧಿಯಲ್ಲಿ ಮೂರು ಬಾರಿ ಬಿಎಸ್ಪಿಯನ್ನು ಅಧಿಕಾರಕ್ಕೆ ತಂದರು. ಯಾವ ಕಾಂಗ್ರೆಸ್ಸಿಗರು ತಮ್ಮ ಕುತಂತ್ರಗಳ ಮೂಲಕ ಅಂಬೇಡ್ಕರರನ್ನು ರಾಜಕೀಯವಾಗಿ ಸೋಲಿಸಿ ಮೋಸದ ನಗೆ ಬೀರಿದ್ದರೋ ಅದೇ ಕಾಂಗ್ರೆಸ್ಸನ್ನು ಉತ್ತರ ಪ್ರದೇಶದಲ್ಲಿ ಹೇಳ-ಹೆಸರಿಲ್ಲದೆ ಅಳಿಸಿಹಾಕಿ ಸ್ವಾಭಿಮಾನದ ಮುಗುಳ್ನಗೆ ನಕ್ಕಿದರು.

ಇಂತಹ ಅಸಾಧಾರಣ ಕಾರ್ಯಗಳ ಮೂಲಕ ಕಾನ್ಷಿರಾಮ್ ರವರು ಬಿಎಸ್ಪಿಯನ್ನು ಮೂರನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾಗಿಸಿದರು. ತಮಗೆ ಒಲಿದುಬಂದ ರಾಷ್ಟ್ರಪತಿ ಹುದ್ದೆಯನ್ನು, ಉಪಪ್ರಧಾನಿ ಹುದ್ದೆಯನ್ನು ಮತ್ತು ತಾವೇ ಮುಖ್ಯಮಂತ್ರಿಯಾಗಬಹುದಾದ ಸಾವಕಾಶವನ್ನು ತಳ್ಳಿಹಾಕಿ, ಮಾಯಾವತಿಯಂತಹ ಮಹಾನ್ ನಾಯಕಿಯನ್ನು ಸೃಷ್ಟಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮೊಟ್ಟ ಮೊದಲ ವ್ಯಕ್ತಿಯನ್ನಾಗಿಸಿದರು. ಕೋಟ್ಯಂತರ ಮಾರಾಟವಾಗದ ಮತದಾರರನ್ನು ಸೃಷ್ಟಿಸಿದರು. ಲಕ್ಷಾಂತರ ಸ್ವಾಭಿಮಾನಿ ಅಂಬೇಡ್ಕರ್ ವಾದಿಗಳನ್ನು ಹುಟ್ಟು ಹಾಕಿದರು. ಇದು ನಾಯಕನೊಬ್ಬನ ನಿಜವಾದ ಲಕ್ಷಣ. ಮಾರ್ಗದಾತನೊಬ್ಬನ ಗುಣ ಲಕ್ಷಣ. ಇಂದು ಈ ಮಹಾನಾಯಕನ ಜನ್ಮದಿನ. ಈ ಅದ್ಬುತ ವಿಮೋಚಕನ ಬದುಕು-ಬರಹ ಮತ್ತು ಹೋರಾಟದ ಹೆಜ್ಜೆ ಗುರುತುಗಳು ದೇಶವಾಳಲು ಸನ್ನದ್ದವಾಗುತ್ತಿರುವ ಬಹುಜನ ಸಮಾಜಕ್ಕೆ ದಾರಿ ದೀಪವಾಗಲಿ. ಇದುವೇ ನಾವು ಆ ಮಹಾಚೇತನಕ್ಕೆ ಸಲ್ಲಿಸಬೇಕಾದ ನಿಜವಾದ ಗೌರವ.

ಮಹೇಶ್ ಕುಮಾರ್ ಸರಗೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ4 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ4 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ5 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending