Connect with us

ರಾಜಕೀಯ

ಹರೀಶ್ ಗೌಡ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

Published

on

ಸುದ್ದಿದಿನ ಡೆಸ್ಕ್ : ಚಾಮರಾಜ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿದ್ದ ಹರೀಶ್ ಗೌಡ, ನಗರಪಾಲಿಕೆ ಸದಸ್ಯರಾದ ಶಿವಕುಮಾರ್, ಶ್ರೀನಿವಾಸ್ ಹಾಗೂ ಇನ್ನಿತರ ನಾಯಕರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಳ್ಳಲಾಯಿತು.

ಕಾಂಗ್ರೆಸ್ ಗೆ ಸೇರ್ಪಡೆಯಾದ ಹರೀಶ್ ಗೌಡ ಅವರು, “ನಾನು ಕಾಂಗ್ರೆಸ್ ಸೇರ್ಪಡೆಯಾಗಲು ಕಾರಣವಾದ ಎಲ್ಲರನ್ನೂ ಮನದುಂಬಿ ನೆನೆಯುತ್ತಾ ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಬದ್ಧವಾಗಿ ಕಾರ್ಯ ನಿರ್ವಹಿಸುತ್ತೇನೆ.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗಳನ್ನು ಕೊಡಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಜಾಗಿ ಹೆಚ್ಚಿನ ಕೆಲಸ ಮಾಡುತ್ತೇನೆ.” ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.

ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.

ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.

ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.

ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ1 day ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ3 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ4 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ5 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ5 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending