Connect with us

ಸಿನಿ ಸುದ್ದಿ

ಬಾಲಿವುಡ್‍ನಲ್ಲಿ ಬದಲಾವಣೆ ಗಾಳಿ ಬೀಸಲಿದೆಯೇ ‘ಕರ್ವಾನ್’..?

Published

on

ಸುದ್ದಿದಿನ ಡೆಸ್ಕ್ |ಸಿನಿಮ್ಯಾಟಿಕ್, ಸೈನ್ಸ್ ಫಿಕ್ಷನ್, ಫ್ಯಾಂಟಸಿ ವಿಷಯಾಧಾರಿತ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮೆಚ್ಚಿದ ಬಾಲಿವುಡ್ ಸಿನಿ ಪ್ರಿಯರು ಕಲಾತ್ಮಕ ಎಲಿಮೆಂಟ್‍ಗಳುಳ್ಳ ಸಿನಿಮಾವನ್ನು ಮೆಚ್ಚುತ್ತಾರೆಯೇ ಎಂಬ ಪ್ರಶ್ನೆಯನ್ನು ಕರ್ವಾನ್ ಸಿನಿಮಾ ಹುಟ್ಟುಹಾಕಿದೆ.

ಮಲೆಯಾಳಂನ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಅವರು ಈ ಸಿನಿಮಾ ಮೂಲಕ ಎಂಟ್ರಿ ಪಡೆದಿದ್ದಾರೆ. ಈಗಾಗಲೇ ತಮಿಳು ಹಾಗೂ ತೆಲಗು ಸಿನಿಮಾಗಳಲ್ಲಿ ನಟಿಸಿದ್ದ ದುಲ್ಕರ್ ಅವರು ಈ ಮೂಲಕ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ. ಮಾಲಿವುಡ್ ಸೂಪರ್ ಸ್ಟಾರ್ ಮಮ್ಮೂಟಿ ಅವರ ಪುತ್ರ ದುಲ್ಕರ್ ನಟನಾ ಚಾತುರ್ಯವು ಬಾಲಿವುಡ್‍ನಲ್ಲಿ ಫಲಿಸಲಿದೆಯೇ ಎಂಬುದಕ್ಕೂ ಈ ಸಿನಿಮಾ ಉತ್ತರ ಕೊಡಲಿದೆ. ಈಗಾಗಲೇ ಲಕ್ಷಾಂತರ ಜನ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಬುಕ್ ಮೈ ಶೋ, ಜಸ್ಟ್ ಟಿಕೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಭವಿಷ್ಯದಲ್ಲಿ ಕರ್ವಾನ್ ತರದ ಸಿಂಪಲ್ ಕತೆಗಳುಳ್ಳ ಸಿನಿಮಾವನ್ನು ಉತ್ತರ ಭಾರತೀಯರು ಒಪ್ಪುತ್ತಾರೋ ಇಲ್ಲವೋ ಎಂಬುದು ಈಗ ಉದ್ಭವಿಸಿರುವ ಪ್ರಶ್ನೆ.

ಕರ್ವಾನ್ ಸಿನಿಮಾ ಬಗ್ಗೆ ಹೇಳುವುದಾದರೆ ಇದೊಂದು ದಕ್ಷಿಣ ಭಾರತದ ಅಭಿರುಚಿ ಹೊಂದಿರುವ ಬಾಲಿವುಡ್ ಸಿನಿಮಾ, ಅವಿನಾಶ್ ಚಿತ್ರದ ನಾಯಕ ಸಾಫ್ಟ್‍ವೇರ್ ಉದ್ಯೋಗಿ. ಖ್ಯಾತ ಫೋಟೊಗ್ರಾಫರ್ ಆಗಬೇಕೆಂದು ಕನಸು ಹೊತ್ತಿರುವ ಹುಡುಗ ಅಪ್ಪನ ಬಲವಂತಕ್ಕಾಗಿ ಸಾಫ್ಟ್‍ವೇರ್ ಕೆಲಸಕ್ಕೆ ಸೆರುತ್ತಾನೆ. ಕೆಲಸದಲ್ಲಿ ನಿರಾಸಕ್ತಿ, ರೋಟೀನ್ ಲೈಫ್‍ನಿಂದ ಬೇಸತ್ತಿರುವ ನಾಯಕ ಹೇಗಾದರೂ ಮಾಡಿ ತನ್ನ ಕನಸಿನಂತೆ ಫೋಟೊಗ್ರಾಫರ್ ಆಗುವಂತೆ ಹಂಬಲಿಸುತ್ತಾನೆ.
ಈ ನಡುವೆ ಗಂಗೋತ್ರಿಗೆ ಪ್ರವಾಸ ಹೋಗುವ ಅವಿನಾಶ್‍ನ ತಂದೆ ಸಾವಿಗೀಡಾಗುತ್ತಾರೆ. ಅಪ್ಪನ ಸಾವನ್ನು ಹಗುರವಾಗಿ ಸ್ವೀಕರಿಸುವ ಅವಿನಾಶ್‍ಗೆ ಈಗಲಾದರೂ ತಾನು ಫೋಟೊಗ್ರಾಫರ್ ಆಗಬಹುದೆಲ್ಲ ಎಂದು ಸಮಾಧಾನ ಪಟ್ಟಿಕೊಳ್ಳುತ್ತಾನೆ.

ಏರ್‍ಪೋರ್ಟ್‍ಗೆ ತನ್ನ ತಂದೆಯ ದೇಹದ ಬದಲು ಮಹಿಳೆಯೊಬ್ಬರ ಮೃತ ದೇಹ ಬರುತ್ತದೆ. ಅಕಸ್ಮಾತಾಗಿ ಅದು ಕೊಚ್ಚಿನ್‍ನವರದ್ದಾಗಿರುತ್ತದೆ. ತನ್ನ ತಂದೆ ದೇಹ ಅಲ್ಲಿಗೆ ಸೇರಿರುತ್ತದೆ. ಶವಪೆಟ್ಟಿಗೆಗಳನ್ನು ಬದಲಾಯಿಸುವ ಸಲುವಾಗಿ ಸ್ನೇಹಿತ ಶೌಕತ್ (ಇರ್ಫಾನ್ ಖಾನ್) ಜತೆ ಬೆಂಗಳೂರಿನಿಂದ ಕೊಚ್ಚಿನ್‍ಗೆ ಪ್ರಯಾಣ ಬೆಳೆಸುವ ಅವಿನಾಶ್‍ಗೆ, ದಾರಿ ಮಧ್ಯೆ ನಾಯಕಿ ಪರಿಚಯವಾಗುತ್ತದೆ. ಆಕೆಯ ಚೆಲ್ಲಾಟ, ಅವಳಿಷ್ಟದಂತೆ ಬದುಕುವ ರೀತಿ ನೋಡಿ ತಾನು ಬದಲಾಗಬೇಕೆನಿಸುತ್ತದೆ. ಮಾರ್ಗ ಮಧ್ಯೆ ಎದುರಾಗುವ ಸವಾಲುಗಳು ಹಾಗೂ ಸಿನಿಮೀಯ ಸನ್ನವೇಶಗಳೇ ಸಿನಿಮಾದ ಜೀವಾಳ.

ಸಿನಿಮಾ ಒಂದು ಸರಳ ಕತಾವಸ್ತು, ನಿರೂಪಣೆ ಹೊಂದಿದೆ ಈ ವಿಷಯದಲ್ಲಿ ನಿರ್ದೇಶಕರು ಗೆಲ್ಲುತ್ತಾರೆ. ಇರ್ಫಾನ್ ಖಾನ್ ಅವರ ಮಾತಿನ ಶೈಲಿಯೇ ನಗೆಯ ಬುಗ್ಗೆ ಹೊಮ್ಮಿಸುತ್ತದೆ. ಬೆಂಗಳೂರು, ಮೈಸೂರು, ನಂಜನಗೂಡಿನಲ್ಲೂ ಚಿತ್ರ ಶೂಟ್ ಆಗಿರುವುದು ವಿಷೇಶದ ಜತೆ ಕನ್ನಡಿಗರಿಗೂ ಹತ್ತರಿವಾಗುತ್ತದೆ. ಒಟ್ಟಾರೆ ಹೇಳುವುದಾದರೆ ಆಫ್ ಬೀಟ್ ಸಿನಿಮಾ ಪ್ರಿಯರು ತಪ್ಪದೇ ನೋಡಬೇಕಿರುವ ಸಿನಿಮಾ ಇದು. ಬಾಲಿವುಡ್‍ನಲ್ಲಿ ಒಂದು ಬದಲಾವಣೆ ಗಾಳಿ ಬೀಸಿ ಕರ್ವಾನ್ ರೀತಿಯ ಸಿನಿಮಾಗಳು ಮೂಡಿಬಂದರೆ ಸಿನಿಮಾ ಪ್ರಿಯರಿಗೆ ಹಬ್ಬದೂಟವೇ ಸರಿ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending