ದಿನದ ಸುದ್ದಿ
‘ಕಾಶ್ಮೀರ ಸಮಸ್ಯೆ’ ಇತ್ಯರ್ಥಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಿದವರು ‘ಇಂದಿರಾಗಾಂಧಿ ಮತ್ತು ವಾಜಪೇಯಿ’..!
![](https://suddidina.com/wp-content/uploads/2019/02/Indira-Gandhi-suddidina76.jpg)
ನಿರಂತರವಾಗಿ ರಕ್ತ ಹರಿಯಲು ಕಾರಣವಾಗಿರುವ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದವರು ಇಬ್ಬರು ಪ್ರಧಾನಿಗಳು. ಮೊದಲನೆಯವರು ಇಂದಿರಾಗಾಂಧಿ, ಎರಡನೆಯವರು ಅಟಲಬಿಹಾರಿ ವಾಜಪೇಯಿ.
ಇಂದಿರಾಗಾಂಧಿ ಮತ್ತು ಝುಲ್ಪಿಕರ್ ಅಲಿ ಭುಟ್ಟೋ ನಡುವೆ ನಡೆದಿದ್ದ ಶಿಮ್ಲಾ ಮಾತುಕತೆ ಬಹುತೇಕ ಯಶಸ್ವಿಯಾಗಿತ್ತು. ಬಾಂಗ್ಲಾದೇಶಕ್ಕೆ ಮಾನ್ಯತೆ, ಮೂರನೆಯವರ (ಯುಎನ್) ಮಧ್ಯಪ್ರವೇಶಕ್ಕೆ ನಿರಾಕರಣೆ ಮತ್ತು ಯುದ್ಧ ವಿರಾಮದ ಗಡಿರೇಖೆಯನ್ನು ಎಲ್ ಓ ಸಿಯಾಗಿ ಪರಿವರ್ತಿಸಲು ಒಪ್ಪಿಗೆ.. ಹೀಗೆ ಬಹುತೇಕ ವಿಷಯಗಳನ್ನು ಭುಟ್ಟೋ ಒಪ್ಪಿಕೊಂಡಿದ್ದರು. ಆ ಸಂಬಂಧ ಮತ್ತೆ ಹದಗೆಟ್ಟಿದ್ದು ಕಾರ್ಗಿಲ್ ಯುದ್ಧದಿಂದಾಗಿ.
ಅದೇ ರೀತಿ ವಾಜಪೇಯಿ ಮತ್ತು ಪರ್ವೇಜ್ ಮುಷರಪ್ ಅವರ ನಡುವೆ ಆಗ್ರಾ ಶೃಂಗ ಸಭೆಯ ಕೊನೆಯಲ್ಲಿ ಇನ್ನೇನು ಪರಸ್ಪರ ಸಮ್ಮತಿಯ ಒಪ್ಪಂದಕ್ಕೆ ಸಹಿ ಬೀಳುತ್ತದೆ ಎನ್ನುವಾಗ ಮುರಿದು ಬಿತ್ತು. ಅದಕ್ಕೆ ಕಾರಣವಾಗಿದ್ದು ಆಗಿನ ಉಕ್ಕಿನ ಮನುಷ್ಯ ಅಡ್ವಾಣಿ -ಸುಷ್ಮಾ ಜೋಡಿ. ಈ ಎರಡನೇ ಘಟನೆಗೆ ಪತ್ರಕರ್ತನಾಗಿ ನಾನು ಕೂಡಾ ಸಾಕ್ಷಿ. ಆಗ್ರಾ ಶೃಂಗ ಸಭೆಯ ಪ್ರತ್ಯಕ್ಷ ವರದಿ ಮಾಡಲು ಅಲ್ಲಿಗೆ ಹೋಗಿದ್ದೆ.
ಅಟಲಬಿಹಾರಿ ವಾಜಪೇಯಿ ಅವರಿಗೆ ತನ್ನ ಸಂಪುಟದ ಸದಸ್ಯರ ಹೆಸರುಗಳೇ ಒಮ್ಮೊಮ್ಮೆ ನೆನಪಾಗದೆ ಇದ್ದರೂ ವಿದೇಶಾಂಗ ವ್ಯವಹಾರದ ಬಗ್ಗೆ ಅಗಾಧವಾದ ತಿಳುವಳಿಕೆ ಇತ್ತು. ಅವರ ಸಮೀಪವರ್ತಿಗಳ ಪ್ರಕಾರ ಏನಾದರೂ ಮಾಡಿ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯಬೇಕೆಂಬ ಆಸೆ ಇತ್ತಂತೆ ಅವರಿಗೆ. ಅಂತಹ 2001ರ ಜುಲೈ ನಲ್ಲಿ ನಡೆದ ಆಗ್ರಾ ಶೃಂಗ ಸಭೆಯ ಬಗ್ಗೆ ವಾಜಪೇಯಿ ಅವರಲ್ಲಿ ಅಂತಹದ್ದೊಂದು ನಿರೀಕ್ಷೆಯೂ ಇತ್ತು.
ಕಾರ್ಗಿಲ್ ಯುದ್ದದ ವೈರತ್ವವನ್ನು ಮನಸ್ಸಲ್ಲಿಟ್ಟುಕೊಳ್ಳದೆ ಅದೇ ಯುದ್ಧದ ಖಳನಾಯಕ ಪರ್ವೇಜ್ ಮುಷರಫ್ ಕಡೆ ಸ್ನೇಹದ ಹಸ್ತ ಚಾಚಿದ್ದ ವಾಜಪೇಯಿ ಆಗ್ರಾಕ್ಕೆ ಬಂದಿದ್ದರು. ಜುಲೈ 15ರ ಸಂಜೆ ಪತ್ನಿ ಜತೆ ತಾಜಮಹಲ್ ವೀಕ್ಷಿಸಿ ಬಂದಿದ್ದ ಸೈನಿಕ ಮುಷರಫ್ ಹರ್ಷಚಿತ್ತರಾಗಿದ್ದರು.
ಅದೇ ರಾತ್ರಿ ವಾಜಪೇಯಿ ಜತೆ ಮಾತುಕತೆಗೆ ಕೂತಿದ್ದಾಗ ಬಾಗಿಲಿನೆಡೆಯಿಂದ ‘’ಗುಪ್ತ ಹಸ್ತ’’ವೊಂದು ಒಳಚಾಚಿತ್ತು. ಆ ಕೈಯಲ್ಲಿ ಒಂದು ಚೀಟಿ ಇತ್ತು. ಅದನ್ನು ಕಳಿಸಿದವರು ಐಎಸ್ ಐ ಮಾಜಿ ಮುಖ್ಯಸ್ಥ ಹಮೀದ್ ಗುಲ್ ಅನುಯಾಯಿಯಾಗಿದ್ದ ವಿದೇಶಾಂಗ ವ್ಯವಹಾರ ಖಾತೆ ಸಚಿವ ಅಬ್ದುಲ್ ಸತ್ತಾರ್. ಆ ಚೀಟಿ ನೋಡಿದೊಡನೆ ಮುಷರಫ್ ಮುಖಗಂಟಿಕ್ಕಿದ್ದರಂತೆ.
ಆಗ್ರಾ ಶೃಂಗ ಸಭೆಯಲ್ಲಿ ‘’ಕಾಶ್ಮೀರ ವಿಷಯವೇ ಪ್ರಧಾನ’’ ಎಂದು ಪಾಕಿಸ್ತಾನ ಹಠ ಮಾಡಿ ಕೂತಿದ್ದರೆ ‘’ಉಳಿದೆಲ್ಲವುಗಳ ಜತೆ ಕಾಶ್ಮೀರ ವಿಷಯವೂ ಇರಲಿ’’ ಎನ್ನುವುದು ಭಾರತದ ವಾದವಾಗಿತ್ತು. ಮುಷರಫ್ ಇದನ್ನು ಒಪ್ಪಿಕೊಂಡಿದ್ದರಂತೆ. ಆದರೆ ಅಷ್ಟರಲ್ಲಿ ಆಗ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅನಿರೀಕ್ಷಿತವಾಗಿ ಪತ್ರಕರ್ತರ ಕೊಠಡಿಗೆ ಬಂದು ಆಫ್ ದಿ ರೆಕಾರ್ಡ್ ಮಾತನಾಡುತ್ತಾ ‘’ ಭಾರತ ಅಂದುಕೊಂಡಂತೆಯೇ ಎಲ್ಲ ನಡೆಯುತ್ತಿದೆ’’ ಎಂಬ ಸುದ್ದಿಯನ್ನು ತೂರಿಬಿಟ್ಟು ಹೊರಟುಹೋದರು. ಟಿವಿ ಚಾನೆಲ್ ಗಳಲ್ಲಿ ಸುದ್ದಿ ಬ್ರೇಕ್ ಆಯಿತು.
ಇದನ್ನು ನೋಡಿದೊಡನೆಯೆ ಪಾಕಿಸ್ತಾನದ ಐಎಸ್ ಐ ಪಡೆ ಕೆರಳಿ ಹೋಗಿತ್ತು. ಆಗಲೇ ಚೀಟಿ ರವಾನೆಯಾಗಿದ್ದು. ಅದರ ನಂತರ ಮುಷರಫ್ ಇನ್ನಷ್ಟು ಬಿಗಿಯಾಗಿ ಹೋದರು. ಕೊನೆಗೆ ತೇಪೆ ಹಚ್ಚುವ ರೀತಿಯಲ್ಲಿ ಆಗ್ರಾ ಘೋಷಣೆಗೆ ಸಹಿ ಹಾಕಿ ಸಂಪಾದಕರ ಸಭೆಯಲ್ಲಿ ಭಾರತದ ವಿರುದ್ಧ ಗುಡುಗಿ ಪಾಕಿಸ್ತಾನಕ್ಕೆ ಹಾರಿಹೋದರು.
ಸುಷ್ಮಾ ಸ್ವರಾಜ್ ಸ್ವಯಂ ಪ್ರೇರಣೆಯಿಂದ ಪತ್ರಕರ್ತರ ಕೊಠಡಿಗೆ ಖಂಡಿತ ಬಂದಿರಲಿಲ್ಲ, ಅವರಿಗೆ ಕೀ ಕೊಟ್ಟು ಕಲಿಸಿದವರು ಲಾಲ್ ಕೃಷ್ಣ ಅಡ್ವಾಣಿಯವರಂತೆ. ಅವರಿಗೆ ನಾಗಪುರದ ಕಡೆಯಿಂದ ಸಂದೇಶ ಬಂದಿರಬಹುದು. ಪರಿವಾರದಲ್ಲಿರುವ ಯಾರಿಗೂ ಪಾಕಿಸ್ತಾನದ ಜತೆ ಅಟಲಬಿಹಾರಿ ವಾಜಪೇಯಿ ಅವರು ಮಾತುಕತೆ ನಡೆಸುವುದು ಬೇಡವಾಗಿತ್ತು. ನಂತರದ ದಿನಗಳಲ್ಲಿ ವಾಜಪೇಯಿಯವರ ರಾಜಧರ್ಮ ಪಾಲನೆಯ ಆದೇಶ ಕೂಡಾ ಜಾರಿಯಾಗದಂತೆ ನೋಡಿಕೊಂಡವರು ಕೂಡಾ ಈಗಿನ ಮೂಕ ನಾಯಕ ಲಾಲ್ ಕೃಷ್ಣ ಅಡ್ವಾಣಿ.
-ದಿನೇಶ್ ಅಮಿನ್ ಮಟ್ಟು
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!