Connect with us

ದಿನದ ಸುದ್ದಿ

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಜಗಳೂರು ಕಾಟಮ್ಮ ; ಸಾಧನೆಯ ಹೆಗ್ಗುರುತುಗಳು

Published

on

ಶ್ರೀಮತಿ ಕಾಟಮ್ಮ
  • ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು

ದಾವಣಗೆರೆ ಜಿಲ್ಲೆಯ ಜಗಳೂರು ಸೀಮೆ ಬುಡಕಟ್ಟು ಸಮುದಾಯಗಳ ನೆಲೆವೀಡು, ತಾಜಾ ಜಾನಪದ ಸಂಸ್ಕೃತಿಯು ಹಾಸು ಹೊಕ್ಕಾದ ಸಮೃದ್ಧ ಹೊನ್ನ ಕಣಜ.

ಜಗಳೂರು ತಾಲೂಕಿನ ಹೆಗ್ಗುರುತಿನ ಊರಾದ ತೋರಣಗಟ್ಟೆಯ ಗೌಡ್ರ ಚಿಕ್ಕಪ್ಪ ಮತ್ತು ಗೌರಮ್ಮ ಇವರ ಪುತ್ರಿಯಾದ ಕಾಟಮ್ಮ ತನ್ನ ಬಾಲ್ಯದಲ್ಲೇ ಊರಿನ ಪರಿಸರಕ್ಕನುಗುಣವಾಗಿ ಹೊಲಗದ್ದೆಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ, ಊರ ದೇವರುಗಳ ಪರುವು ಉತ್ಸವಗಳನ್ನು ಕಣ್ಣುತುಂಬಿಸಿಕೊಳ್ಳುವಾಗ ವಾರಗಟ್ಟಲೆ ಜರುಗುತಿದ್ದ ಮದುವೆ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿರುವಾಗ ಊರಿನ ಹಿರಿಯರು ಹಾಡುತಿದ್ದ ಸೋಬಾನೆ ಪದಗಳು ದೇವರ ಪದಗಳು ಕುಣಿತ ಮಣಿತಗಳ ಪದಗಳನ್ನು ಚಿತ್ತವಿಟ್ಟು ಆಲಿಸುತ್ತಲೇ ತಾನೂ ಅವುಗಳನ್ನು ಅಸ್ವಾದಿಸಿಕೊಂಡು ಸಹವರ್ತಿಯಾಗಿ ದನಿ ಸೇರಿಸಲು ಆರಂಭಿಸಿದರು.

ಹುಟ್ಟಿದ ಊರಿನಲ್ಲಿಯೇ ಬಾಲಪ್ಪನವರನ್ನು ವಿವಾಹವಾದ ಕಾಟಮ್ಮ ನಾಲ್ಕು ಮಕ್ಕಳ ತಾಯಿಯಾಗಿ ತುಂಬು ಸಂಸಾರವನ್ನು ನಿರ್ವಹಿಸುತ್ತಲೇ ತನ್ನ ಎದೆಯೊಳಗಿನ ಪದಗಳಿಗೆ ದನಿಯಾಗುತ್ತಾ ಬಂದರು. ತನ್ನ ಸೋದರಿ ಶಾಂತ ವೀರಮ್ಮ ಹಾಗೂ ಸಮೀಪದ ಬಂದುಗಳಾದ ಬಾಲಮ್ಮ, ಬಡಮ್ಮ ಮುಂತಾದವರ ತಂಡ ಕಟ್ಟಿಕೊಂಡು ಮದ್ಯ ಕರ್ನಾಟಕದ ಪ್ರಸಿದ್ಧ ಜಾನಪದ ಸಾಂಸ್ಕೃತಿಕ ವೀರರಾದ ಕಾಟಣ್ಣ, ದೊಡ್ಡಣ್ಣ, ಬಡಣ್ಣ, ಚಿಕ್ಕಣ್ಣ ಇವರ ಬಗ್ಗೆ ಸುದೀರ್ಘ ಕಥನ ಕಾವ್ಯಗಳನ್ನು ಕಟ್ಟಿ ನಿರರ್ಗಳವಾಗಿ ಹಾಡಬಲ್ಲವರಾಗಿದ್ದಾರೆ. ವಿಶೇಷವಾಗಿ ದಾವಣಗೆರೆ ಸೀಮೆಯಲ್ಲಿ ‘ಮಳೆ ಮಲ್ಲಪ್ಪ’ ನೆಂದೇ ಖ್ಯಾತನಾಮರಾಗಿ ಆರಾಧನೆಗೆ ಒಳಗಾಗಿರುವ ಅವಧೂತ ಪರಂಪರೆಯ ‘ಮೆಲ್ಲಜ್ಜಿ’ ನ ಬಗ್ಗೆ ಈ ತಾಯಿ ಕಟ್ಟಿಕೊಡುವ ಪದಗಳು ಬಹು ಪ್ರಸಿದ್ದಿ ಪಡೆದಿವೆ.

ಮೆಲ್ಲಜ್ಜ ಸುಮಾರು ನೂರಾ ಐವತ್ತು ವರ್ಷಗಳ ಹಿಂದೆ ತೋರಣಗಟ್ಟೆಯಲ್ಲಿ ಎಲ್ಲರಂತೆ ಬದುಕಿ ಬಾಳಿದ ವ್ಯಕ್ತಿ. ಆದರೆ ತನ್ನ ವಿಶಿಷ್ಟ ಆಧ್ಯಾತ್ಮಿಕ ಮನೋಪ್ರವೃತ್ತಿಯ ಅವಧೂತನಾಗಿ, ಹವಮಾನ ತಜ್ಞನಾಗಿ ‘ ಮಳೆ ಮೆಲ್ಲಜ್ಜ ‘ ಎಂದು ಪ್ರಸಿದ್ದಿ ಪಡೆದು ಮರಣೋತ್ತರದಲ್ಲಿ ಜನ ಸಮುದಾಯದಿಂದ ಸಂಗತಿಯಾಗಿದೆ.ಗಾಗುತ್ತಾನೆ. ಇಂತಹ ಅಸಾಮಾನ್ಯ ವ್ಯಕ್ತಿತ್ವದ ಮೆಲ್ಲಜ್ಜನ ಕುರಿತಂತೆ ಪದಗಾತಿ ಕಾಟಮ್ಮ ಸುಧೀರ್ಘವಾಗಿ ಕಥನ ಕಟ್ಟಿ ಹಾಡುವ ಸೋಪಜ್ಞ ಕಲೆಗಾರಿಕೆಯನ್ನು ಹೊಂದಿದವರಾಗಿದ್ದಾರೆ. ಜಗಳೂರು ಸೀಮೆಯಲ್ಲಿ ಈ ಕಥನ ಮನೆಮಾತಾಗಿದೆ.

ಜಗಳೂರು ಸೀಮೆಯಲ್ಲಿ ಯಾರದೇ ಮದುವೆ ಸಂಬಂದಿತ ಕಾರ್ಯಗಳಲ್ಲಿ ಶ್ರೀಮತಿ ಕಾಟಮ್ಮ ನವರ ಉಪಸ್ಥಿತಿ, ಸೋಬಾನೆ ಪದಗಾರಿಕೆ ಇರಲೇಬೇಕು. ಅಷ್ಟರಮಟ್ಟಿಗೆ ಇವರು ಸುಪ್ರಸಿದ್ಧರಾಗಿದ್ದಾರೆ.

ಮದುವೆಯ ಹಸೆ ಚಿತ್ತಾರ ಬಿಡಿಸುವಲ್ಲಿ ಸಿದ್ಧ ಹಸ್ತರು. ಬುಡಕಟ್ಟು ಸಮುದಾಯಗಳ ಮದುವೆಗಳಲ್ಲಿ ಹಾಕಲಾಗುವ ಹಾಲಸ್ತ್ರ ಹಸೆ, ಒಳ್ಳಕ್ಕಿ ಹಸೆ, ದೇವರ ಹಸೆ, ಬೂವದ ಹಸೆ . ಅರಿಣಿ ಹಸೆ . ಅಂದ್ರದ ಹಸೆ ಮುಂತಾದ ಹಸೆಗಳನ್ನು ಕರಿಕಂಬಳಿಹಾಸು ಮೇಲೆ ತಾನೇ ಬಿಡಿಸಿ ಆಯಾ ಸಂದರ್ಭಗಳನ್ನು ಮಧುರವಾಗಿ ಹಾಡುವ ನಿಪುಣೆಯಾಗಿದ್ದಾರೆ.

ಸಾಮಾನ್ಯವಾಗಿ ಹಸೆ ಬಿಡಿಸುವವರಿಗೆ ಹಾಡಲು ಬರುವುದಿಲ್ಲ. ಹಾಡುವವರು ಹಸೆ ಬಿಡಿಸುವುದಿಲ್ಲ. ಆದರೆ ಕಾಟಮ್ಮ ಇದಕ್ಕೆ ಭಿನ್ನ. ಎರಡನ್ನೂ ಅಚ್ಚುಕಟ್ಟಾಗಿ ನಿರ್ವಹಿಸುವ ಕಲಾಚತುರೆ. ಸುದೀರ್ಘ ನಲವತ್ತು ವರ್ಷಗಳಿಂದ ನಿರಂತರವಾಗಿ ಪದಗಂಗೆಯನ್ನು ಹರಿಸುತ್ತಿರುವ ಎಲೆಮರೆಯ ಪ್ರತಿಭೆ ಕಾಟಮ್ಮನವರನ್ನು ಯಾವ ಸಂಘ ಸಂಸ್ಥೆಗಳು ಗುರುತಿಸದೆಹೋದ ಈ ಹೊತ್ತಿನಲ್ಲಿ ಮೊದಲ ಬಾರಿಗೆ ಕರ್ನಾಟಕ ಜಾನಪದ ಅಕಾಡೆಮಿ ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ(ಬರಹ: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending