Connect with us

ಕ್ರೀಡೆ

ಕೆಜಿಎಫ್ ಟ್ರೇಲರ್ ನೋಡಿ ಪಂಜಾಬ್ ಸಿಂಗ್ ಏನಂದ್ರು ಗೊತ್ತಾ..?

Published

on

ಸುದ್ದಿದಿನ ಡೆಸ್ಕ್ : ಭಾರತೀಯ ಸಿನೆಮಾರಂಗದ ಬಹುನಿರೀಕ್ಷಿತ ಕೆಜಿಎಫ್ ಸಿನೆಮಾ ಇದೇ ತಿಂಗಳ 21 ರಂದು ಬಿಡುಗಡೆಯಾಗಲಿದೆ. ಈ ಸಿನೆಮಾ ನಾಲ್ಕು ಭಾಷೆಯಲ್ಲಿ ತಯಾರಾಗಿದ್ದು ಟ್ರೇಲರ್ ಮತ್ತು ಹಾಡುಗಳ ಮೂಲಕ ಭಾರೀ ಸದ್ದು ಮಾಡಿದೆ.

ಬಾಹುಬಲಿ ಸಿನೆಮಾ ನಿರ್ದೇಶಕ ರಾಜಮೌಳಿ ಸಿನೆಮಾ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಹಾಗೆ ನಟ ಪ್ರಭಾಸ್ ಕೂಡ ಟ್ರೇಲರ್ ನೋಡಿ ದಂಗಾಗಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಅವರ ಮೇಕಿಂಗ್ ಬಗ್ಗೆ ಇಡೀ ಸಿನೆಮಾ ರಂಗವೇ ಬಹುಪರಾಕ್ ಹೇಳುತ್ತಿದೆ.

https://twitter.com/YashFC/status/1072106307711193089?s=19

ಅಂದಹಾಗೆ ಈ ಸಿನೆಮಾ ಯಶ್ ಗೆ ಜಾಗತಿಕಮಟ್ಟದಲ್ಲಿ ಹೆಸರು ತಂದು ಕೊಡುವುದರಲ್ಲಿ ಆಶ್ಚರ್ಯವೇನಿಲ್ಲ. ರವಿ ಬಸ್ರೂರ್ ನೀಡಿರುವ ಸಂಗೀತಕ್ಕೆ ಅಭಿಮಾನಿಗಳು ಫಿಧಾ ಆಗಿ ಹೋಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

Published

on

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್‌ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.

ನಿನ್ನೆ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.

ಅಸಾಧಾರಣ ಬೌಲಿಂಗ್‌ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್‌ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.

ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ

17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್‌ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.

ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ18 hours ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ1 day ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ1 day ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ1 day ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ2 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

ದಿನದ ಸುದ್ದಿ2 days ago

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 12 ರಂದು ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್...

ದಿನದ ಸುದ್ದಿ2 days ago

ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ

ಸುದ್ದಿದಿನ,ದಾವಣಗೆರೆ:ಇದೇ 12 ರಂದು ಮಧ್ಯಾಹ್ನ 3 ಗಂಟೆಗೆ ನಗರದ ದೊಡ್ಡಬೂದಿಹಾಳ್ ರಸ್ತೆಯಲ್ಲಿರುವ ತಾಜ್ ಪ್ಯಾಲೇಸ್‍ನಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ...

ದಿನದ ಸುದ್ದಿ5 days ago

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ...

ದಿನದ ಸುದ್ದಿ1 week ago

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್...

Trending