ಬಹಿರಂಗ
KGF ನ ನಿಜ ರಕ್ತಪಾತ : ಎಲ್ಲರೂ ಓದಲೇ ಬೇಕಾದ ಲೇಖನ..!

KGF ಎಂಬ ಸಿನೆಮಾ ಇನ್ನೇನು ತೆರೆಯ ಮೇಲೆ ಬರಲಿದೆ.ಸಿನೆಮಾದ ನಾಯಕ ಯಶ್ ಎಂಬ ಕಾರಣದಿಂದ ಅದಕ್ಕೆ ಭಾರೀ ಪ್ರಚಾರ ಮತ್ತು ನಿರೀಕ್ಷೆ ಎರಡೂ ನಡೆದಿದೆ.ಆದರೆ ಈ ಹೆಸರಿನ ಹಿಂದೆ ದಲಿತರ ರಕ್ತಸಿಕ್ತ ಅಧ್ಯಾಯ ಮತ್ತು ಚಳುವಳಿಯನ್ನು ದಿಟ್ಟವಾಗಿ ಮುನ್ನಡೆಸಿದ ಇತಿಹಾಸ ಇರುವ ವಿಚಾರ ಎಷ್ಟು ಜನರಿಗೆ ಗೊತ್ತಿದೆ?
ಸುಮಾರು ಹದಿಮೂರು ಸಾವಿರ ಅಡಿಗಳಷ್ಟು ಆಳವಿರುವ ಜಗತ್ತಿನ ಏಕೈಕ ಆಳದ ಗಣಿತೋಡಿದ ಅವರು ಎಷ್ಟು ನರಕ ಹಿಂಸೆ ಅನುಭವಿಸಿದರೋ ಯಾರಿಗೆ ಗೊತ್ತು? 1881 ರಿಂದ1930 ರ ಅವಧಿಯಲ್ಲಿ ಜಗತ್ತಿಗೆ ಮೂರುಲಕ್ಷಕ್ಕೂ ಹೆಚ್ಚು ಕಿಲೋಗ್ರಾಂ ತೂಕದ ಚಿನ್ನವನ್ನು ಸಂಪಾದಿಸಿಕೊಟ್ಟ ಅವರ ಶ್ರಮ ಬೆವರಿಗೆ ಸಿಕ್ಕ ಬೆಲೆಯೇನು ಗೊತ್ತಾ 12000 ಕಾರ್ಮಿಕರ ಬಲಿ, ಇದು ಯಾರಿಗೆ ಗೊತ್ತು?
ಹೌದು 1881 ರಲ್ಲಿ ಚಿನ್ನದ ಗಣಿಗಾರಿಕೆ ಕೆಲಸಕ್ಕೆ ಬ್ರಿಟೀಷ್ ಸರ್ಕಾರ ದಲಿತರನ್ನ ಆಯ್ಕೆ ಮಾಡಿತು, ಅದು ಮುಂದಾಲೋಚನೆ ಮಾಡಿ, ಕೇವಲ ಕೂಲಿಗಾಗಿ ಹಗಲು-ರಾತ್ರಿಯನ್ನದೆ ದುಡಿಯುತ್ತಿದ್ದ ಶ್ರಮಿಕವರ್ಗವಾಗಿತ್ತು, ಬೇರೆ ಪ್ರಭಾವಿ ಜನಾಂಗದವರಂತೆ ಯಾವ ಪಾಲನ್ನು ಅಪೇಕ್ಷಿಸದೆ ಇದ್ದ ಕಾರಣ ಅವರಿಗೆ ಇಂತಿಷ್ಟು ಕೂಲಿ ನಿಗದಿಪಡಿಸಿ, ಗಣಿಯ ಸುತ್ತ ವಸತಿ ವ್ಯೆವಸ್ತೆ ಕಲ್ಪಿಸಿ ದುಡಿಸಿಕೊಳ್ಳಲಾಗಿತ್ತು, ಅದು ಯಾವ ಮಟ್ಟದಲ್ಲಿ ಅಂದರೆ ಗಣಿ ಸುತ್ತಲಿನ ಸುಮಾರು 10-15 ಕಿ ಮೀ ಪ್ರದೇಶದಲ್ಲಿ ಬೇರೆ ಜನಾಂಗಗಳ ಪ್ರವೇಶಕ್ಕೆ ಅವಕಾಶವೇ ಇಲ್ಲದ ಮಟ್ಟಿಗೆ ನಿರ್ಭಂಧಿಸಿದ್ದರೂ, ( ಅದನ್ನು ಈಗಲೂ ಸಹ ಕೆಜಿಎಫ್ ಸುತ್ತಲೂ ನೋಡಬಹುದು ಕೋಲಾರದಲ್ಲಿ ಶೇ 85%ರಷ್ಟು ದಲಿತರೆ ವಾಸವಾಗಿರುವುದೂ ಸಹ,)
ಮೊದಮೊದಲು ಎಲ್ಲಾ ಚನ್ನಾಗಿಯೇ ಇತ್ತು, ಮೇಲ್ಪದರದ ಚಿನ್ನವನ್ನೆಲ್ಲ ತೆಗೆದಾಯಿತು, ಆದರೆ ಎರಡನೆ ಹಂತದ ಗಣಿಗಾರಿಕೆಯು ಬಹಳ ಕ್ಲಿಷ್ಟಕರವಾಗಿತ್ತು ಹೆಚ್ಚು ಹಾಳ ತೋಡಿದಂತೆಲ್ಲ ಮಣ್ಣು ಕುಸಿದು ಅಲ್ಲಿನ ಸುಮಾರು ಕಾರ್ಮಿಕರು ಅಸುನೀಗಿದರು, ಈ ಬಗ್ಗೆ ಬ್ರಿಟೀಷ್ ಅಧಿಕಾರಿಗಳು ಮುತುವರ್ಜಿವಹಿಸಿದರೂ ಸಹ ಹೆಚ್ಚು ಏನು ಮಾಡಲಾಗಲಿಲ್ಲ, 13000ಅಡಿ ಆಳದಲ್ಲಿ ಉಸಿರಾಡಲೂ ಗಾಳಿಯೂ ಇಲ್ಲದ ಪರಿಸ್ಥಿತಿಯಲ್ಲೂ ಸಹ ಸೀಮೆಎಣ್ಣೆಯ ಬತ್ತಿಗಳನ್ನು ಬಳಸಿ ಗಣಿತೋಡುತ್ತಿದ್ದರು, ಎಷ್ಟೋಭಾರಿ ಬತ್ತಿ ಕೆಟ್ಟೋದಂತಃ ಸಂಧರ್ಭದಲ್ಲಿ ಆ ಗುಹೆಗಳಿಂದ ಹೊರಬರಲು ಗೊತ್ತಾಗದೆ ಹಲವರು ಹಸುನೀಗಿದ ಉದಾಹರಣೆಗಳೆ ಹೆಚ್ಚು, ಆಗ ಜೀತದಾರರಾಗಿ ದುಡಿಯುತ್ತಿದ್ದ ಪಂಡೀತ್ ಅಯೋಧಿದಾಸರ ತಂದೆಯೂ ಸಹ ಮಣ್ಣುಕುಸಿದು ಮೃತಪಟ್ಟರು ನಂತರ ಈ ಬಗ್ಗೆ ಚಳುವಳಿಗಳು ಹುಟ್ಟಿಕೊಂಡವು ಅಯೋಧಿದಾಸರು ಇದರ ಮುಂಚೂಣಿ ನಾಯಕರಾಗಿ ನಿಂತರು.
ಆದರೆ ಕೂಲಿಯನ್ನೆ ನಂಬಿ ಬದುಕ್ಕಿದ ಶ್ರಮಿಕರನ್ನ ಎದುರಿಸಿ ದುಡಿಸಿಕೊಳ್ಳುತ್ತಿದ್ದರು, ಆಗಲೇ ಅಲ್ಲಿ ಗಣಿಯ ಮಣ್ಣು ಕುಸಿದು 1800 ಜನ ಕಾರ್ಮಿಕರು ಒಟ್ಟಿಗೆ ಮೃತಪಟ್ಟರು, ಇದು ಚಳುವಳಿಗೆ ತೀವ್ರವಾದ ವೇಗವನ್ನು ನೀಡಿದ್ದು ಎಷ್ಟರಮಟ್ಟಿಗೆಂದರೆ ಸ್ವತಃ ಬಾಬಾಸಾಹೇಬ್ ಅಂಬೇಡ್ಕರರೆ ಕೆಜಿಎಫ್ಗೆ ಭೇಟಿನೀಡಿ ಚಳುವಳಿಯಲ್ಲಿ ಭಾಗವಹಿಸಿ ಆಗಿನ ಸರ್ಕಾರಕ್ಕೆ ಹಾಗೂ ಅಲ್ಲಿನ ಆಡಳಿತ ವರ್ಗಕ್ಕೆ ತಾಕಿತು ಮಾಡಿದ್ದರು, ಕಾರ್ಮಿಕರ ಬೇಡಿಕೆಯನ್ನೆಲ್ಲ ಪೂರೈಸಿದ್ದರೂ, ( ನಿಮಗೊಂದು ವಿಚಾರ ತಿಳಿದಿರಲಿ ಭಾರತದಲ್ಲಿ 12 ಗಂಟೆ ಇದ್ದ ದುಡಿಮೆಯ ಅವಧಿಯನ್ನು ರದ್ದುಗೊಳಿಸಿ ಪ್ರಪ್ರಥಮ ಭಾರಿಗೆ ಎಂಟು ಗಂಟೆಗಳ ಅವಧಿ ಮಾತ್ರ ದುಡಿಯಬೇಕೆಂದು, ಹೆಚ್ಚಿನ ಅವಧಿ ಕೆಲಸಕ್ಕೆ ಹೆಚ್ಚು ಕೂಲಿ ಹಾಗೂ ವರ್ಷದ ಆದಾಯದ ಇಂತಿಷ್ಟು ಪ್ರಮಾಣ ಕಾರ್ಮಿಕರಿಗೆ ಬೋನಸ್ ರೂಪದಲ್ಲಿ ಕೊಡಬೇಕೆಂದು ಅಂಬೇಡ್ಕರ್ ಪ್ರತಿಪಾದಿಸಿದರು, ಮೊದಲ ಕಾನೂನು ಮಂತ್ರಿಯಾದಾಗ ಸ್ವತಃ ಮುತುವರ್ಜಿವಹಿಸಿ ಇದನ್ನು ಜಾರಿಗೊಳಿಸಿದರು )
ಸ್ವತಂತ್ರ ನಂತರ ಈ ಪ್ರದೇಶ ರಾಜಕೀಯ ರೂಪ ಪಡೆದು ಚಿನ್ನದ ಅದಿರು ಮಿಶ್ರಿತ ಕಚ್ಚಾ ಮಣ್ಣಿಗಾಗೆ ಇಲ್ಲಿ ಸಾವಿರಾರು ಜೀವಗಳು ಬಲಿಯಾಗಿದ್ದಾರೆ, ತಮ್ಮ ಪ್ರಭಾವಕ್ಕಾಗಿ ಅಂಡರ್ವಲ್ಡ್ರ್ ಮಾಫಿಯಾಗಳು ಬೆಳೆದು ನಿಂತಿವೆ, ಅದು ಎಷ್ಟರ ಮಟ್ಟಿಗೆಂದರೆ ಅಲ್ಲಿನ ಯಾವುದೇ ಪೊಲೀಸ್ ಠಾಣೆಯಲ್ಲೂ ಸಹ ಒಬ್ಬ ಅಧಿಕಾರಿ ಆರು ತಿಂಗಳು ಪೂರೈಸಿದರೆ ದೊಡ್ಡ ಸಾಧನೆ ಎನ್ನುವಷ್ಟರ ಮಟ್ಟಿಗೆ, ಇವರ ಪ್ರಭಾವವಿದೆ, ಕತ್ತಲಾದ ನಂತರ ಇಲ್ಲಿ ನಡೆಯುತ್ತಿದ್ದ ಚಟುವಟಿಕೆಗಳನ್ನು ಊಹಿಸಲು ಅಸಾಧ್ಯವಾಗಿತ್ತು, ಅದನ್ನು ಕಣ್ಣಾರೆ ಕಂಡು ಬದುಕುಳಿದವರು ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರಾ, ಅದು ಸಾರ್ವಜನಿಕವಾಗಿ ಹೇಳಿಕೊಳ್ಳಲಾಗದಂತಃ ಉಸಿರು ಕಟ್ಟುವ ವಾತಾವರಣದಲ್ಲಿ ಬದುಕಿದ ಉದಾಹರಣೆಗಳೆಷ್ಟೊ, ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದವರೆಷ್ಟೊ ಹಾಗೆ ತಮ್ಮ ಕಣ್ಣಮುಂದೆಯೆ ಬೆಳೆದು ನಿಂತ ಮಕ್ಕಳ ಸಾವುಕಂಡವರೆಷ್ಟೊ, ಈ ಥರಃ ಅಲ್ಲಿನ ರಕ್ತಸಿಕ್ತ ಚರಿತ್ರೆ ಈಗಲೂ ಸಹ ನಡೆಯುತ್ತಿದೆ,
ಈಗೆ ಅವರು ದುಡಿದ ಚಿನ್ನ ಇಂದು ಯಾವ ದೇವರ ಅಥವಾ ದೇವತೆಯ ಅಥವಾ ಹೆಣ್ಣು/ಗಂಡುಗಳ ಮೂರ್ತಿ ಅಥವಾ ದೇಹದ ಮೇಲಿದೆಯೋ ಯಾರಿಗೆ ಗೊತ್ತು?
ಒಟ್ಟಾರೆ ಭದ್ರಾವತಿ ಮತ್ತು ಕೆಜಿಎಫ್ ಗಳಲ್ಲಿನ ಕಾರ್ಖಾನೆಗಳಲ್ಲಿ ದುಡಿಯುತ್ತಿದ್ದವರು ದಲಿತರು ಎಂಬ ಕಾರಣಕ್ಕಾಗಿ ಮಾಧ್ಯಮಗಳು ಆಸಕ್ತಿ ತೋರಲಿಲ್ಲ, ಅದರಲ್ಲೂ ಶೇ 40% ರಿಂದ 50% ತಮಿಳು ದಲಿತರೂ ಇದ್ದಕಾರಣ ಕನ್ನಡ ಸಂಘಟನೆಗಳಿಂದಲೂ ನಿರ್ಲಕ್ಷ್ಯಕ್ಕೆ ಒಳಗಾದ ನೋವಿನ ಮತ್ತು ವಂಚನೆಯ ಇತಿಹಾಸ ಎಷ್ಟು ಜನಕ್ಕೆ ಗೊತ್ತು.
ಜೀತಗಾರರಾಗಿ ಬದುಕಿದ್ದರೂ ಪಂಡಿತ್ ಅಯೋಧಿದಾಸ್ ರವರ ಶ್ರಮ ಮತ್ತು ಬದ್ಧತೆಯ ಕಾರಣದಿಂದ ಬಾಬಾಸಾಹೇಬರ ಪೂರ್ವದಲ್ಲೇ ಕ್ರಾಂತಿ ಹುಟ್ಟುಹಾಕಿ ಅದನ್ನು ಬೆಳೆಸಲು ಮನುವಾದಿಗಳಿಗೆ ಹೆದರದೆ ಎದೆಯೊಡ್ಡಿದ ಇತಿಹಾಸ ದಾಖಲಾಗದೇ ಇರುವುದೇಕೆ? ಸ್ವತಃ ಬಾಬಾಸಾಹೇಬರ ಭೇಟಿ ಬಳಿಕ ಅವರು ನಡೆಸಿದ ಚಳುವಳಿಯನ್ನು ನಡೆಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಲ್ಲಿ ಹುಲಿಯಂತೆಯೇ ಬದುಕಿದ್ದ ಶ್ರೀ ಸಿ.ಎಮ್.ಆರ್ಮುಗಂ,ಅವರ ಬಳಿಕ RPIಯನ್ನು ಪ್ರತಿನಿಧಿಸಿದ ಕನ್ನಡಿಗರಾದ ಭಕ್ತವತ್ಸಲ,ರಾಜೇಂದ್ರ ರವರಂತಹವರನ್ನು ಕೊಟ್ಟ ಸ್ವಾಭಿಮಾನಿ ದಲಿತರ ಇತಿಹಾಸವೇಕೆ ನಮ್ಮವರಿಗೆ ತಿಳಿದಿಲ್ಲ.
ಇಂದು ಕೆಜಿಎಫ್ ಸಿನಿಮಾ ಬಿಡುಗಡೆಯಾಗಲು ಸಿದ್ದವಾಗಿರುವುದರಿಂದ ಈ ಬಗ್ಗೆ ಬರೆಯಬೇಕಾಯಿತು.ಕನ್ನಡಪ್ರಭ ದಲ್ಲಿ ಬಂದಿರುವ ಕೇಶವಮೂರ್ತಿ ಯವರ ಲೇಖನ ಇದಕ್ಕೆ ಕಾರಣವಾಯಿತು. ಸಿನೆಮಾ ಇಂಥಹ ಭೀಕರ ಚರಿತ್ರೆಯನ್ನು ಹೇಳುತ್ತದೋ ಇಲ್ಲವೋ ಗೊತ್ತಿಲ್ಲ. ಆದರೆ ಕೆಜಿಎಫ್ ನ ನಿಜವಾದ ಇತಿಹಾಸವನ್ನು ನಮ್ಮವರು ದಾಖಲೆ ಮಾಡಲೇಬೇಕಿದೆ.
ಕನ್ನಡವೆಂದರೆ ಮೂಗು ಮುರಿಯುತ್ತಿದ್ದ ದ್ರಾವಿಡ ಪರಂಪರೆಯ ತಮಿಳುನಾಡು ಇಂದು ಈ ಚಿತ್ರಕ್ಕೆ ಕೆಂಪುಹಾಸಿನ ಸ್ವಾಗತ ನೀಡುತ್ತಿದ್ದಾರೆಂದರೆ ಅದಕ್ಕೆ ಮುಖ್ಯಕಾರಣವೇ ಈ ಮೂಲನಿವಾಸಿಗಳ ರಕ್ತಸಿಕ್ತ ಚರಿತ್ರೆ, ನನ್ನ ದೃಷ್ಟಿಯಲ್ಲಿ ಇದೊಂದೇ ಆ ಚಿನ್ನದ ಶ್ರಮಿಕ ಪೂರ್ವಜರಿಗೆ ಸಲ್ಲಿಸಬಹುದಾದ ಸಣ್ಣಗೌರವ ಅಷ್ಟೆ,
ಇದರ ಮೇಲೂ ಯಾರಾದರು ಇದಕ್ಕೆ ಮಸಿಬಳಿಯುವ ಕೆಲಸ ಮಾಡಿದರೆ ಅದು ಕೇವಲ ಕಟ್ಟುಕಥೆ, ತಮ್ಮ ಜನಾಂಗದ ಮೇಲಿನ ಕುರುಡು ಪ್ರೀತಿ, ಹಾಗೂ ಇತಿಹಾಸಕ್ಕೆ ಮಾಡಿದ ದ್ರೋಹ, ಸಾಧ್ಯವಾದಷ್ಟು ತಲುಪಿಸಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಬಹಿರಂಗ
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು..!

- ಆದಿತ್ಯ ಭಾರದ್ವಾಜ್
ಹುಟ್ಟಿನಿಂದ ನಾನು ಬ್ರಾಹ್ಮಣ. ನಾನು ಜಾತಿಯನ್ನು ನಿರಾಕರಿಸುವುದು ಸುಲಭ. ಆದರೆ ದಲಿತನಿಗೆ ಅದು ಸಾಧ್ಯವಿಲ್ಲ. ಹಾಗಾಗಿ ನಾನು ನನ್ನ ಜಾತಿಯನ್ನು ನಿರಾಕರಿಸದೆ ಅದರೊಂದಿಗೆ ಬರುವ previlege ಬಗ್ಗೆ ಸದಾಕಾಲ ಅರಿವು ಇಟ್ಟುಕೋಬೇಕು ಎಂಬುದು ನನ್ನ ನಿಲುವು.
ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅವಮಾನಿಸಲಾಗಿದೆ ಅಂತ ಬ್ರಾಹ್ಮಣ ಅಭಿವೃದ್ಧಿ ನಿಗಮ, ಹಿಂದುತ್ವದ ಮುಖವಾಡ ತೊರೆದ ಸಂವಾದ ಅಂತಹ ಸಂಘ ಪರಿವಾರದ ಮಾಧ್ಯಮಗಳೂ ಸೇರಿದಂತೆ ಎಲ್ಲರೂ ಮುಗಿಬಿದ್ದು ನಿರ್ದೇಶಕರ ಕೈಲಿ ಕ್ಷಮೆ ಕೇಳಿಸಿದ್ದಾರೆ. ದೃಶ್ಯಗಳಿಗೆ ಕತ್ತರಿ ಹಾಕಲು ಧಮಕಿ ಹಾಕಿ ಒಪ್ಪಿಸಿದ್ದಾರೆ.
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು. ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನೇ ಬುಡಮೇಲು ಮಾಡುವ ನಡೆ ಇದು. ಈ ನಿಗಮ ಸ್ಥಾಪನೆಯ ಬಗ್ಗೆ ಅಂದೇ ಬಹಿರಂಗವಾಗಿ ಖಂಡಿಸದಿರುವುದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ಮರಾಠರು, ಲಿಂಗಾಯತರಿಗೆ ನಿಗಮ ಸ್ಥಾಪಿಸಿದಾಗ ವಿರೋಧ ವ್ಯಕ್ತವಾಗಿದೆ. ಆದರೆ ಬ್ರಾಹ್ಮಣರಿಗೇ ನಿಗಮ ಸ್ಥಾಪಿಸಿದ ಮೇಲೆ ಯಾವ ಜಾತಿಗೆ ಬೇಕಾದರೂ ಸ್ಥಾಪಿಸಬಹುದಾಗಿದೆ. ಇದು ಸಾಮಾಜಿಕ ನ್ಯಾಯದ ಅಣಕ. ಎಲ್ಲ ಮೇಲ್ಜಾತಿಗಳ ನಿಗಮಗಳನ್ನು ರದ್ದು ಮಾಡಬೇಕಿದೆ.
ಇವತ್ತು ಇದೇ ಬ್ರಾಹ್ಮಣ ಅಭಿವೃದ್ಧಿ ನಿಗಮ ಒಂದು ಶಕ್ತಿಕೇಂದ್ರವಾಗಿ ತಲೆ ಎತ್ತಿದೆ. ಬ್ರಾಹ್ಮಣ್ಯವನ್ನು ಯಾಕ್ರೀ ಲೇವಡಿ ಮಾಡ್ತೀರಿ ಅಂತ ಅದರ ಅಧ್ಯಕ್ಷರು ಕೇಳ್ತಾರೆ ಇವತ್ತು! ಬ್ರಾಹ್ಮಣರು ಮತ್ತು ಫ್ಯೂಡಲ್ ಮೇಲ್ಜಾತಿಗಳು ಜಾತಿ ನಿಂದನೆ ಅಂತ ಅರಚಾಡುವುದೇ ಅಪಹಾಸ್ಯ. ಈ ಜಾತಿಗಳು ನಡೆಸಿರುವ ಅಟ್ರಾಸಿಟಿಗಳ ಹಿನ್ನೆಲೆಯಲ್ಲಿ ಇವತ್ತಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತುಳಿತಕ್ಕೊಳಗಾದವರು ಟೀಕಿಸಿದರೆ, ಬೈದರೆ ಅದನ್ನು ಕೇಳಿಸಿಕೊಳ್ಳುವ ಸಹನೆಯನ್ನು ಈ ಸಮುದಾಯಗಳು ಬೆಳೆಸಿಕೊಳ್ಳಬೇಕಿದೆ.
ಇದನ್ನೂ ಓದಿ | ಗ್ಯಾಸ್ ಸಿಲಿಂಡರ್ ಮತ್ತೆ 25 ರೂ ಹೆಚ್ಚಳ ; ಇತಿಹಾಸದಲ್ಲೇ ಮೊದಲ ಸಲ ಒಂದೇ ತಿಂಗಳಲ್ಲಿ ಮೂರನೇ ಬಾರ ಗ್ಯಾಸ್ ಬೆಲೆ ಏರಿಕೆಯಾಗಿದ್ದು..!
ದನಿ ಇದ್ದವನದೇ ನ್ಯಾಯ ಎಂಬಂತಾಗಿದೆ. ಬಲಹೀನ ವರ್ಗಗಳನ್ನು ಕಾಪಾಡಲು ಇರುವ ಕಾನೂನು, ಮೀಸಲಾತಿಯಂತಹ ಸವಲತ್ತುಗಳನ್ನು, ಈ ಕೋಮುಗಳು ಹೊಡೆದುಕೊಳ್ಳುತ್ತಿವೆ, ತಮ್ಮ ಹಕ್ಕು ಎಂಬಂತೆ ಆಗ್ರಹಿಸುತ್ತಿವೆ. ಆರ್ಥಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಮೀಸಲಾತಿಯ ತಾತ್ವಿಕ ತಳಹದಿಯನ್ನೇ ಬುಡಮೇಲು ಮಾಡಿ ಬ್ರಾಹ್ಮಣರು, ವೈಶ್ಯರು ಒಂದು ಬೆರಳು ಕೂಡಾ ಎತ್ತದೇ ಹೊಡೆದುಕೊಂಡರು. ಬ್ರಾಹ್ಮಣರು ಇವತ್ತು ತಾವೇ ವಿಕ್ಟಿಂಗಳು ಎಂಬಂತೆ ಇತರ ಬಲಹೀನ ವರ್ಗಗಳೊಂದಿಗೆ ತಮ್ಮನ್ನೂ ಕಾಣಬೇಕು ಎಂಬಂತೆ ಆಡುತ್ತಿದ್ದು ಅದಕ್ಕೆ ಮನ್ನಣೆ ಸಿಗುತ್ತಿರುವುದು ದುರಂತ. ಇವತ್ತು ಹಿಂದುತ್ವದ ಮುಖವಾಡ ಹೊತ್ತು ಅಧಿಕಾರ ಹಿಡಿದಿರುವುದು ಬ್ರಾಹ್ಮಣಿಕೆಯೇ ಆಗಿರುವುದರಿಂದ ಇದು ಆಶ್ಚರ್ಯವೇನೂ ಅಲ್ಲ.
ಇನ್ನು ಪೊಗರು ಸಿನಿಮಾದಲ್ಲಿ ಹೆಣ್ಣನ್ನು ಬಿಂಬಿಸಿರುವ ಕುರಿತು ಪ್ರತಿಭಟನೆಗಳಾಗಬೇಕಿತ್ತು. “ಖರಾಬು” ಹಾಡಿಗೆ ಯೂಟ್ಯೂಬ್ ಅಲ್ಲಿ ಸುಮಾರು 21 ಕೋಟಿ views ಇವೆ! ಬದಲಿಗೆ ಬ್ರಾಹ್ಮಣರು ಪ್ರತಿಭಟನೆ ಮಾಡುತ್ತಿರುವುದು, ಅದನ್ನು ದಕ್ಕಿಸಿಕೊಂಡಿರುವುದು ಇವತ್ತಿನ ಕಾಲಮಾಪದ ರೂಪಕ.
(ಕೃಪೆ : ಫೇಸ್ಬುಕ್ ಬರಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ಕ್ರಾಂತಿಕಾರಿ ರೈತ ಹೋರಾಟದ ಸ್ಫೂರ್ತಿಯ ಚಿಲುಮೆ `ಅಜಿತ್ ಸಿಂಗ್’

ಪಂಜಾಬ್ನ ರೈತರು ಹೊಸ ವಸಾಹತುಶಾಹಿ ಕಾನೂನುಗಳಾದ ಹೊಸ ವಸಾಹತು ಕಾಯ್ದೆ ಮತ್ತು ‘ದೋಆಬ್ ಬಾರಿ’ ಕಾಯ್ದೆಯ ವಿರುದ್ಧ ಕುದಿಯುತ್ತಿದ್ದರು. ಈ ಕಾಯ್ದೆಗಳ ಹಿನ್ನೆಲೆ ಏನೆಂದರೆ, ಬ್ರಿಟಿಷ್ ಸರ್ಕಾರವು ಚಿನಾಬ್ ನದಿಯಿಂದ ನೀರನ್ನು ಸೆಳೆಯಲು ಕಾಲುವೆಗಳನ್ನು ನಿರ್ಮಿಸಿ, ಅದನ್ನು ಜನವಸತಿ ಇಲ್ಲದ ಪ್ರದೇಶಗಳಲ್ಲಿ ವಸಾಹತುಗಳನ್ನು ಸ್ಥಾಪಿಸಲು ಲಿಯಾಲ್ಪುರಕ್ಕೆ (ಈಗ ಪಾಕಿಸ್ತಾನದಲ್ಲಿದೆ) ಹರಿಸತೊಡಗಿತು.
ಹಲವಾರು ಸೌಕರ್ಯಗಳೊಂದಿಗೆ ಉಚಿತ ಭೂಮಿಯನ್ನು ನೀಡುವುದಾಗಿ ಭರವಸೆ ನೀಡಿದ ಬ್ರಿಟಿಷ್ ಸರ್ಕಾರ, ಜಲಂಧರ್, ಅಮೃತಸರ, ಮತ್ತು ಹೋಶಿಯಾರ್ಪುರದ ರೈತರು ಮತ್ತು ಮಾಜಿ ಸೈನಿಕರನ್ನು ಅಲ್ಲಿ ನೆಲೆಸಲು ಮನವೊಲಿಸಿತ್ತು.
ಈ ಜಿಲ್ಲೆಗಳ ರೈತರು ತಮ್ಮ ಮೂಲ ಭೂಮಿ ಮತ್ತು ಆಸ್ತಿಯನ್ನು ಬಿಟ್ಟು, ಹೊಸ ಪ್ರದೇಶಗಳಲ್ಲಿ ನೆಲೆಸಿದರು ಮತ್ತು ಬಂಜರು ಭೂಮಿಯನ್ನು ಕೃಷಿಗೆ ಯೋಗ್ಯವಾಗಿಸಲು ಶ್ರಮಿಸಿದರು. ಆದರೆ ಅವರು ಹಾಗೆ ಮಾಡಿದ ಕೂಡಲೇ, ಸರ್ಕಾರವು ಈ ಫಲವತ್ತಾದ ಭೂಮಿಯ ಒಡೆಯ ತಾನೇ ಎಂದು ಘೋಷಿಸಲು, ರೈತರಿಗೆ ಮಾಲೀಕತ್ವದ ಹಕ್ಕನ್ನು ನಿರಾಕರಿಸಲು ಹೊಸ ಕಾನೂನುಗಳನ್ನು ಜಾರಿಗೆ ತಂದಿತು.
ರೈತರು ಈ ಜಮೀನುಗಳಲ್ಲಿ ಮರಗಳನ್ನು ಕಡಿಯಲು ಸಾಧ್ಯವಿರಲಿಲ್ಲ, ಮನೆಗಳು ಅಥವಾ ಗುಡಿಸಲುಗಳನ್ನು ನಿರ್ಮಿಸಲು ಅಥವಾ ಅಂತಹ ಭೂಮಿಯನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಅವಕಾಶವಿರಲಿಲ್ಲ್ಲ ಮತ್ತು ಹಿರಿಯ ಮಗನಿಗೆ ಮಾತ್ರ ತನ್ನ ತಂದೆಯಿಂದ ಬೇಸಾಯ ಮಾಡಿದ ಭೂಮಿಗೆ ಪ್ರವೇಶಿಸಲು ಅವಕಾಶವಿತ್ತು.
ಇದರಲ್ಲಿ ಏನನ್ನಾದರೂ ಉಲ್ಲಂಘಿಸಿದರೆ, ಜಮೀನು ಸರ್ಕಾರದ ಆಸ್ತಿಯಾಗಿ ಬಿಡುತ್ತಿತ್ತು. 20 ಲಕ್ಷ ಎಕರೆ ಭೂಮಿಗೆ ನೀರಾವರಿ ಮಾಡಲು ಕಾಲುವೆಗಳ ಮೇಲೆ ವಿಧಿಸಲಾಗಿದ್ದ ತೆರಿಗೆಗಳಲ್ಲಿ, ಸರ್ಕಾರವು ತನ್ನ ಆರಂಭಿಕ ಹೂಡಿಕೆಯನ್ನು ಮರಳಿ ಪಡೆಯಿತಲ್ಲದೇ, ಅಬ್ಬಾಶಿ ತೆರಿಗೆಯ ಆಧಾರದಲ್ಲಿ ವಾರ್ಷಿಕ 7 ಲಕ್ಷ ರೂಪಾಯಿಗಳನ್ನು ಅಕ್ರಮವಾಗಿ ಗಳಿಸತೊಡಗಿತು.
ಅಜಿತ್ ಸಿಂಗ್ ಮತ್ತು ಅವರ ಒಡನಾಡಿಗಳು ಈ ವಿಷಯಗಳ ಬಗ್ಗೆ ಜನಪ್ರಿಯ ಸಾಮೂಹಿಕ ಪ್ರತಿರೋಧವನ್ನು ಬೆಳೆಸಿದರು. ಈ ಆಂದೋಲನವನ್ನು ಮುನ್ನಡೆಸಲು ಕಾಂಗ್ರೆಸ್ ವಿಫಲವಾಗಿದೆ, ಮಸೂದೆಯನ್ನು ಈಗಾಗಲೇ ಕಾನೂನಾಗಿ ಅಂಗೀಕರಿಸಲಾಗಿದೆ ಎಂದು ವಾದಿಸಿದರು. ರೈತ ವಿರೋಧಿ ಕಾನೂನುಗಳಿಗೆ ನಿರ್ಭೀತ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದ ಅಜಿತ್ ಸಿಂಗ್ ಮತ್ತು ಅವರ ಭಾರತ್ ಮಾತಾ ಸಮಾಜದ ನಾಯಕತ್ವವನ್ನು ರೈತರು ಒಪ್ಪಿಕೊಂಡರು.
ಆಗ, ಲಾಹೋರ್ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಸಾವಿರಾರು ಜನರು ಭಾಗವಹಿಸಿದ ರ್ಯಾಲಿಗಳು, ಪ್ರದರ್ಶನಗಳು ಮತ್ತು ಸಾಮೂಹಿಕ ಸಮಾವೇಶಗಳ ನಿಜವಾದ ಅಲೆ ಕಾಣಿಸಿಕೊಂಡಿತು. ಈ ಸಭೆಗಳು ಈ ದಮನಕಾರಿ ಕಾನೂನುಗಳ ಬಗ್ಗೆ ಮತ್ತು ಬ್ರಿಟಿಷ್ ವಸಾಹತುಶಾಹಿಯಿಂದ ಧ್ವಂಸಗೊಂಡ ರಾಷ್ಟ್ರದ ನಿಜವಾದ ಚಿತ್ರಣದ ಬಗ್ಗೆ ಚರ್ಚಿಸಿದವು.
ಅಂತಿಮವಾಗಿ ವಿದೇಶಿ ಆಡಳಿತದ ವಿರುದ್ಧ ಸಂಪೂರ್ಣ ದಂಗೆಗಾಗಿ ಪ್ರಚೋದಿಸುವ ಕರೆಯೊಂದಿಗೆ ಕೊನೆಗೊಂಡವು. ಅಜಿತ್ ಸಿಂಗ್ ಅವರ ಭಾಷಣಗಳನ್ನು ಕೇಳದಂತೆ ನಿಷೇಧ ಹೊರಡಿಸಲಾಗಿತ್ತು!
(1907 ರ ಮಾರ್ಚ್ 3 ರಂದು ಲಿಯಾಲ್ಪುರದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ, ‘ಜಂಗ್ ಸ್ಯಾಲ್’ ಪತ್ರಿಕೆಯ ಸಂಪಾದಕ ಬಂಕೆ ದಯಾಲ್ ಅವರು, “ಪಗ್ಡಿ ಸಂಭಲ್ ಜಟ್ಟಾ, ಪಗ್ಡಿ ಸಂಭಾಲ್ ಓಯೆ” ಹಾಡನ್ನು ಪರಿಚಯಿಸಿದರು. ಅದು ಚಳವಳಿಯ ಸಂಕೇತ ಮತ್ತು ಆತ್ಮವಾಯಿತು.)
(ಕೃಪೆ : Mass Media Foundation, Delhi)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ಪಾಂಡವರಿಗೂ ಭಾವ, ಕೌರವರಿಗೂ ಭಾವ..!

- ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು,ಮುಂಬೈ
ಮೇಲಿನದು ಕುಂದಾಪ್ರಕನ್ನಡದ ಒಂದು ನುಡಿಗಟ್ಟು.
ಯಾರಿಂದಲಾದರೂ ‘ಫ್ರೆಂಡ್ಸ್ ರಿಕ್ವೆಸ್ಟ್’ ಬಂದಾಗ ಅದನ್ನು ಒಪ್ಪಿಕೊಳ್ಳಲು ‘ಮ್ಯುಚುಅಲ್ ಫ್ರೆಂಡ್ಸ್’ ಪಟ್ಟಿ ನೋಡುವುದು ಮೊದಲ ಕ್ರಮ. ಈಗೀಗ ಅದೂ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಮೊನ್ನೆ ಒಬ್ಬರಿಂದ ‘ಫ್ರೆಂಡ್ಸ್ ರಿಕ್ವೆಸ್ಟ್’ ಬಂತು.
ನಾನು ಯಾವುಯಾವುದನ್ನು ಜೀವವಿರೋಧಿ, ಮನುಷ್ಯ ವಿರೋಧಿ, ಕ್ರೌರ್ಯ, ಹಿಂಸೆ ಎಂದು ಪರಿಗಣಿಸಿ ಪಾಲಿಸುವುದಿಲ್ಲವೋ ಅದೆಲ್ಲವನ್ನು ಅವರು ಶಿರಸಾವಹಿಸಿ ಪಾಲಿಸುವವರು. ಆ ‘ಫ್ರೆಂಡ್ಸ್ ರಿಕ್ವೆಸ್ಟ’ನ್ನು ‘ಅಸೆಪ್ಟ್’ ಮಾಡುವ ಪ್ರಶ್ನೆಯೇ ಇರಲಿಲ್ಲ.
ಆದರೂ ಕುತೂಹಲಕ್ಕೆ ‘ಮ್ಯುಚುಅಲ್ ಫ್ರೆಂಡ್ಸ್’ ಪಟ್ಟಿ ನೋಡಿದರೆ ಅಲ್ಲಿ ನೂರಾರು ಹೆಸರುಗಳಿದ್ದವು! ಹಾಗಾಗಿ, ಇತ್ತೀಚೆಗೆ ಇಂತಹ ‘ಫ್ರೆಂಡ್ಸ್ ರಿಕ್ವೆಸ್ಟ್’ ಗಳನ್ನು ಡಿಲೀಟ್ ಮಾಡುವ ಜೊತೆ ಇಂತಹ ‘ಫ್ರೆಂಡ್ಸ್’ ಗಳನ್ನು ‘ಅನ್ಫ್ರೆಂಡ್’ ಮಾಡುವುದೂ ಅನೀವಾರ್ಯವಾಗುತ್ತಿದೆ. ಈ ಕಾರಣಕ್ಕಾಗಿಯೇ ನನ್ನ ‘ಫ್ರೆಂಡ್ಸ್ ಲಿಸ್ಟ್’ ದಿನೇ ದಿನೇ ಚಿಕ್ಕದಾಗುತ್ತ ಹೋಗುತ್ತಿದೆ!
ಇದರಿಂದ ಅವರಿಗೇನೂ ನಷ್ಟವಿಲ್ಲ, ನಿಜ. ಆದರೆ, ನನಗೆ ಲಾಭವಿದೆ. ಹೇಗೆಂದರೆ, ಉದಾಹಣೆಗೆ, ಜಾತಿ ವಿಚಾರ ತೆಗೆದುಕೊಳ್ಳಿ. ನನಗಿದು ಜೀವವಿರೋಧಿ ಕ್ರಮ ಮಾತ್ರವಲ್ಲ, ಇದೊಂದು ಹೇಯ ಕ್ರೌರ್ಯವೂ ಹೌದು. ಇದನ್ನು ಯಾವುದೇ ಕಾರಣ ಕೊಟ್ಟು ಸಮರ್ಥಿಸುವವರ ಜೊತೆ ಸ್ನೇಹ ಸಾಧ್ಯವೇ ಇಲ್ಲ.
ಅವರೊಂದಿಗೆ ಕೇವಲ ಮನುಷ್ಯ ಸಂಬಂಧ ಇಟ್ಟುಕೂಳ್ಳಬಹುದೇ ವಿನಃ ಸ್ನೇಹ ಸಂಬಂಧ ಸಾಧ್ಯವೇ ಇಲ್ಲ. ನನ್ನ ಪ್ರಕಾರ ಈ ಫೇಸ್ ಬುಕ್ ಎಂಬುವುದು ಸ್ನೇಹ ಸಂಬಂಧಕ್ಕಿರುವ ಒಂದು ಸೋಶಿಯಲ್ ಪ್ಲಾಟ್ ಫಾರ್ಮ್.
ಇಲ್ಲಿ ‘ಫ್ರೆಂಡ್ಸ್’ ಅಲ್ಲದವರು ‘ಸ್ಟೇಟಸ್’ಗಳನ್ನು ನೋಡಲು, ಅವುಗಳಿಗೆ ‘ಕಮೆಂಟ್ಸ್’ ಮಾಡಲು ಅವಕಾಶವಿದೆ ನಿಜ. ಆದರೆ, ಹಾಗೆ ಮಾಡುವ ‘ಕಮೆಂಟ್ಸ್’ ಗಳು ಕನಿಷ್ಟ ನಾಗರಿಕ ಸೌಜನ್ಯದ ಮಿತಿಯೊಳಗಿದ್ದರೆ ಅದು ಅವರಿಗೇ ಶೋಭೆ. ಇಲ್ಲವಾದರೆ, ಅವರಿನ್ನೂ ಮನುಷ್ಯರಾಗಿಲ್ಲ ಎಂದು ಕನಿಕರ ಪಡುತ್ತೇನೆ, ಅಷ್ಟೇ.
ಅಂದಹಾಗೇ, ನನಗೆ ಅತೀ ಹೆಚ್ಚಿನ ಸಂಖ್ಯೆಯ ‘ಮ್ಯುಚುಅಲ್ ಫ್ರೆಂಡ್ಸ್’ ಗಳಿರುವುದು ಕ್ರಮವಾಗಿ, ಮತ್ತು ರಾಜಾರಾಮ್ ತಲ್ಲೂರು ಜೊತೆ ಎಂಬುವುದು ತುಂಬಾ ಖುಷಿ ಕೊಡುವ ಸಂಗತಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ಲೈಫ್ ಸ್ಟೈಲ್6 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ಕ್ರೀಡೆ6 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್6 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಲೈಫ್ ಸ್ಟೈಲ್5 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಭಾವ ಭೈರಾಗಿ6 days ago
ಕವಿತೆ | ಅವಳು
-
ಅಂತರಂಗ5 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ5 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ