ದಿನದ ಸುದ್ದಿ
ಕಿಡ್ನಿ ಕಾಯಿಲೆಗೆ ಪರಿಣಾಮಕಾರಿ ಚಿಕಿತ್ಸೆ
ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಕಿಡ್ನಿ ಕಾಯಿಲೆ ಬರುತ್ತದೆ. ಬಿಪಿ ಮತ್ತು ಶುಗರ್ ಕಾಯಿಲೆ ನಿಯಂತ್ರಿಸದಿದ್ದರೆ ಇತರೆ ಅನೇಕ ಕಾಯಿಲೆಗಳು ಬರುತ್ತವೆ. ಈ ಹೈಬಿಪಿ ಮತ್ತು ಶುಗರ್ ಕಾಯಿಲೆ ಕಾರಣದಿಂದ ಮೊದಲು ಬರುವುದೇ ಕಿಡ್ನಿ ಕಾಯಿಲೆ.
ಕಿಡ್ನಿ ವೈಫಲ್ಯ ಆದಾಗ ವ್ಯಕ್ತಿ ನರಕ ಯಾತನೆಯನ್ನೇ ಅನುಭವಿಸುತ್ತಾನೆ. ಅದರಲ್ಲೂ ಕಿಡ್ನಿ ಕಲ್ಲುಗಳಿಂದ ಬರುವ ನೋವು ಹೆರಿಗೆ ನೋವಿಗಿಂತಲೂ ಅಧಿಕವಾಗಿರುತ್ತದೆ. ಡಯಾಲಿಸಿಸ್ ಸ್ಟೇಜಲ್ಲಿ ವಾರಕ್ಕೆ ಎರಡು ಅಥವಾ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ದಿನಗಳಂತೆ ಖರ್ಚು ಹೆಚ್ಚಾಗುತ್ತದೆ. ವ್ಯಕ್ತಿ ಸರ್ಕಾರಿ ಅಥವಾ ಕಂಪನಿಗಳಲ್ಲಿ ಉದ್ಯೋಗಿಯಾಗಿದ್ದಲ್ಲಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ. ಅಲ್ಲದೆ ಡಯಾಲಿಸಿಸ್ಗೆ ಅತಿ ಹೆಚ್ಚು ಹಣ ಬೇಕಾಗುತ್ತದೆ. ಡಯಾಲಿಸಿಸ್ ನಿಲ್ಲಿಸಿದಲ್ಲಿ ಅಪಾಯ ಮತ್ತಷ್ಟು ಹೆಚ್ಚು. ಆದ್ದರಿಂದ, ಕಿಡ್ನಿ ಕಾಯಿಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಬಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇಂದು ನಮ್ಮ ದೇಶದಲ್ಲಿ ಬಿಪಿ ಶುಗರ್ ಕಾಯಿಲೆಗಳ ಹೆಚ್ಚಳದಿಂದ ಕಿಡ್ನಿ ಕಾಯಿಲೆಯು ಅನೇಕರಲ್ಲಿ ಕಂಡುಬರುತ್ತಿದೆ.
ಕಿಡ್ನಿಯ ಕೆಲಸ ಕಾರ್ಯಗಳು : ಕಿಡ್ನಿಗಳು ನಮ್ಮ ದೇಹದ ಸೂಕ್ಷ್ಮ ಫಿಲ್ಟರ್ ಯಂತ್ರವಿದ್ದಂತೆ. ಬೇಡವಾದ ವಸ್ತುಗಳನ್ನು ಫಿಲ್ಟರ್ ಮಾಡಿ ದೇಹದಿಂದ ಹೊರಹಾಕುವ ಕೆಲಸವನ್ನು ಕಿಡ್ನಿಗಳು ನಿರಂತರವಾಗಿ ಮಾಡುತ್ತಿರುತ್ತದೆ. 150 ರಿಂದ 170 ಗ್ರಾಂ ತೂಕ ಹೊಂದಿರುವ ಈ ಚಿಕ್ಕ ಕಿಡ್ನಿಯಲ್ಲಿ ನೆಪ್ರೊನ್ ಎಂಬ ಕಣ್ಣಿಗೆ ಕಾಣದಷ್ಟು ಸೂಕ್ಷ್ಮ ಮಿಲಿಯಾಂತರ ಫಿಲ್ಟರ್ ಕೋಶಗಳು ಇರುತ್ತವೆ. ಈ ಫಿಲ್ಟರ್ ಕೋಶಗಳ ಮೂಲಕ ರಕ್ತದಲ್ಲಿನ ಕಲ್ಮಷ ಮತ್ತು ವಿಷಯುಕ್ತ ಅಂಶವನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಠಿಣ ಕೆಲಸವನ್ನು ಕಿಡ್ನಿಗಳು ಮಾಡುತ್ತವೆ. ಈ ರೀತಿ ರಕ್ತವನ್ನು ಶುದ್ಧಗೊಳಿಸುವ ಪ್ರಮುಖ ಕೆಲಸದ ಜೊತೆಗೆ ಇನ್ನೂ ಅನೇಕ ಕೆಲಸಗಳನ್ನು ಕಿಡ್ನಿಗಳು ನಿರ್ವಹಿಸುತ್ತವೆ. ಇಂತಹ ಸೂಕ್ಷ್ಮ ಅದ್ಬುತ ಅಂಗವನ್ನು ಅತಿ ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಇಂಥ ಸೂಕ್ಷ್ಮ ಕಿಡ್ನಿಗೆ ತೊಂದರೆಯಾದಲ್ಲಿ ದೇಹದಲ್ಲಿ ರಕ್ತದಲ್ಲಿ ವಿಷಕಾರಿ ಅಂಶಗಳು ಹೆಚ್ಚಳವಾಗಿ ವ್ಯಕ್ತಿ ಗಂಭೀರ ಕಾಯಿಲೆಗೆ ತುತ್ತಾಗುತ್ತಾನೆ. ನರಕ ಯಾತನೆಯನ್ನೇ ಅನುಭವಿಸುತ್ತಾನೆ.
ಕಿಡ್ನಿ ಕಾಯಿಲೆಗೆ ಕಾರಣಗಳು : ದೇಹದಲ್ಲಿನ ಕಲ್ಮಷಗಳನ್ನು ಹೊರಹಾಕಿ ರಕ್ತ ಶುದ್ಧಗೊಳಿಸುವುದರೊಂದಿಗೆ ಇತರೆ ಅನೇಕ ಕೆಲಸಗಳನ್ನು ನಿರ್ವಹಿಸುವ ಅದ್ಬುತ ಅಂಗ ನಮ್ಮ ಕಿಡ್ನಿಗಳು ಅನೇಕ ಕಾರಣಗಳಿಂದ ರಕ್ತ ಶುದ್ಧೀಕರಿಸುವಲ್ಲಿ ವಿಫಲವಾಗಿ ಮೂತ್ರಪಿಂಡ ವೈಫಲ್ಯ (Kidney failure) ಆಗುತ್ತದೆ. ಕಿಡ್ನಿ ಕಾಯಿಲೆ ಪ್ರಮುಖವಾಗಿ ಬಿಪಿ ಶುಗರ್ ಕಾಯಿಲೆ, ಕಿಡ್ನಿಯಲ್ಲಿ ಕಲ್ಲುಗಳು, ಮೂತ್ರ ಸೋಂಕು, ಮದ್ಯಪಾನ, ಅನಗತ್ಯ ಔಷಧಿಗಳ ದೀರ್ಘಕಾಲ ಸೇವನೆ, ನೀರನ್ನು ಅತೀ ಕಡಿಮೆ ಅಥವಾ ಅತೀ ಹೆಚ್ಚು ಕುಡಿಯುವುದು. ಅಧಿಕ ಪ್ರೋಟೀನ್ ಸೇವನೆ, ಮಾಂಸಹಾರ ಸೇವನೆ, ಅತಿಯಾಗಿ ಉಪ್ಪು ಸಕ್ಕರೆ ಸೇವನೆ ಹೀಗೆ ಅನೇಕ ಕಾರಣಗಳಿಂದ ಕಿಡ್ನಿ ತೊಂದರೆಗೊಳಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಕಿಡ್ನಿಗಳು ಶೇ.90 ರಷ್ಟು ಕೆಲಸ ಮಾಡುವುದನ್ನು ನಿಲ್ಲಿಸಿದಲ್ಲಿ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡುವುದು ಅನಿವಾರ್ಯವಾಗುತ್ತದೆ.
ಕಿಡ್ನಿ ಕಾಯಿಲೆಯ ಲಕ್ಷಣಗಳು : ಬಹಳಷ್ಟು ಜನರಲ್ಲಿ ಕಿಡ್ನಿ ತನ್ನ ಕೆಲಸವನ್ನು ಸಂಪೂರ್ಣ ನಿಲ್ಲಿಸುವವರೆಗೂ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ಕಂಡು ಬಂದಾಗ ಗಂಭೀರ ಸಮಸ್ಯೆ ಇರುತ್ತದೆ. ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಆದ್ದರಿಂದ, ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಪದೇಪದೇ ಮೂತ್ರ ವಿಸರ್ಜನೆ, ರಾತ್ರಿ ವೇಳೆ ಅಧಿಕ ಮೂತ್ರ ವಿಸರ್ಜನೆ, ಬಾಯಲ್ಲಿ ಕೆಟ್ಟ ವಾಸನೆ, ಚರ್ಮದಲ್ಲಿ ತುರಿಕೆ, ಕೈ ಕಾಲುಗಳಲ್ಲಿ ಊತ, ಮೂತ್ರದ ಬಣ್ಣದಲ್ಲಿ ಬದಲಾವಣೆ, ಮೂತ್ರದಲ್ಲಿ ರಕ್ತ, ಕಿಬ್ಬೊಟ್ಟೆ ಅಥವಾ ಹಿಂಭಾಗದಲ್ಲಿ ನೋವು, ಜ್ವರ, ವಾಂತಿ, ನಿಶಕ್ತಿ, ನಿದ್ರಾಹೀನತೆ, ಅನಿಯಂತ್ರಿತ ಬಿಪಿ, ಪಾದಗಳಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ ಹೀಗೆ ಅನೇಕ ಲಕ್ಷಣಗಳು ಕಂಡು ಬರಬಹುದು. ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿದ್ದರೂ ಸೂಕ್ತ ಆಹಾರ ಪದ್ಧತಿ, ಜೀವನ ಶೈಲಿ ಬದಲಾವಣೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಕಿಡ್ನಿ ಕಾಯಿಲೆಯ ತೊಂದರೆಯಿಂದ ಸಂಪೂರ್ಣ ಹೊರಬರಲು ಸಾಧ್ಯವಿದೆ.
ಕಿಡ್ನಿ ಕಾಯಿಲೆಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Kidney QR X Plus!
ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಕಿಡ್ನಿ ಕಾಯಿಲೆಗೆ Stomach Kare ಮತ್ತು Kidney QR X Plus ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಕೀಲುನೋವು, ಹೃದಯ ರೋಗ, ಚರ್ಮರೋಗ, ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ : ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


