Connect with us

ದಿನದ ಸುದ್ದಿ

ಕಿಡ್ನಿ ಕಾಯಿಲೆಗೆ ಪರಿಣಾಮಕಾರಿ ಚಿಕಿತ್ಸೆ

Published

on

ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಕಿಡ್ನಿ ಕಾಯಿಲೆ ಬರುತ್ತದೆ. ಬಿಪಿ ಮತ್ತು ಶುಗರ್ ಕಾಯಿಲೆ ನಿಯಂತ್ರಿಸದಿದ್ದರೆ ಇತರೆ ಅನೇಕ ಕಾಯಿಲೆಗಳು ಬರುತ್ತವೆ. ಈ ಹೈಬಿಪಿ ಮತ್ತು ಶುಗರ್ ಕಾಯಿಲೆ ಕಾರಣದಿಂದ ಮೊದಲು ಬರುವುದೇ ಕಿಡ್ನಿ ಕಾಯಿಲೆ.

ಕಿಡ್ನಿ ವೈಫಲ್ಯ ಆದಾಗ ವ್ಯಕ್ತಿ ನರಕ ಯಾತನೆಯನ್ನೇ ಅನುಭವಿಸುತ್ತಾನೆ. ಅದರಲ್ಲೂ ಕಿಡ್ನಿ ಕಲ್ಲುಗಳಿಂದ ಬರುವ ನೋವು ಹೆರಿಗೆ ನೋವಿಗಿಂತಲೂ ಅಧಿಕವಾಗಿರುತ್ತದೆ. ಡಯಾಲಿಸಿಸ್ ಸ್ಟೇಜಲ್ಲಿ ವಾರಕ್ಕೆ ಎರಡು ಅಥವಾ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ದಿನಗಳಂತೆ ಖರ್ಚು ಹೆಚ್ಚಾಗುತ್ತದೆ. ವ್ಯಕ್ತಿ ಸರ್ಕಾರಿ ಅಥವಾ ಕಂಪನಿಗಳಲ್ಲಿ ಉದ್ಯೋಗಿಯಾಗಿದ್ದಲ್ಲಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ. ಅಲ್ಲದೆ ಡಯಾಲಿಸಿಸ್ಗೆ ಅತಿ ಹೆಚ್ಚು ಹಣ ಬೇಕಾಗುತ್ತದೆ. ಡಯಾಲಿಸಿಸ್ ನಿಲ್ಲಿಸಿದಲ್ಲಿ ಅಪಾಯ ಮತ್ತಷ್ಟು ಹೆಚ್ಚು. ಆದ್ದರಿಂದ, ಕಿಡ್ನಿ ಕಾಯಿಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಬಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇಂದು ನಮ್ಮ ದೇಶದಲ್ಲಿ ಬಿಪಿ ಶುಗರ್ ಕಾಯಿಲೆಗಳ ಹೆಚ್ಚಳದಿಂದ ಕಿಡ್ನಿ ಕಾಯಿಲೆಯು ಅನೇಕರಲ್ಲಿ ಕಂಡುಬರುತ್ತಿದೆ.

ಕಿಡ್ನಿಯ ಕೆಲಸ ಕಾರ್ಯಗಳು : ಕಿಡ್ನಿಗಳು ನಮ್ಮ ದೇಹದ ಸೂಕ್ಷ್ಮ ಫಿಲ್ಟರ್ ಯಂತ್ರವಿದ್ದಂತೆ. ಬೇಡವಾದ ವಸ್ತುಗಳನ್ನು ಫಿಲ್ಟರ್ ಮಾಡಿ ದೇಹದಿಂದ ಹೊರಹಾಕುವ ಕೆಲಸವನ್ನು ಕಿಡ್ನಿಗಳು ನಿರಂತರವಾಗಿ ಮಾಡುತ್ತಿರುತ್ತದೆ. 150 ರಿಂದ 170 ಗ್ರಾಂ ತೂಕ ಹೊಂದಿರುವ ಈ ಚಿಕ್ಕ ಕಿಡ್ನಿಯಲ್ಲಿ ನೆಪ್ರೊನ್ ಎಂಬ ಕಣ್ಣಿಗೆ ಕಾಣದಷ್ಟು ಸೂಕ್ಷ್ಮ ಮಿಲಿಯಾಂತರ ಫಿಲ್ಟರ್ ಕೋಶಗಳು ಇರುತ್ತವೆ. ಈ ಫಿಲ್ಟರ್ ಕೋಶಗಳ ಮೂಲಕ ರಕ್ತದಲ್ಲಿನ ಕಲ್ಮಷ ಮತ್ತು ವಿಷಯುಕ್ತ ಅಂಶವನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಠಿಣ ಕೆಲಸವನ್ನು ಕಿಡ್ನಿಗಳು ಮಾಡುತ್ತವೆ. ಈ ರೀತಿ ರಕ್ತವನ್ನು ಶುದ್ಧಗೊಳಿಸುವ ಪ್ರಮುಖ ಕೆಲಸದ ಜೊತೆಗೆ ಇನ್ನೂ ಅನೇಕ ಕೆಲಸಗಳನ್ನು ಕಿಡ್ನಿಗಳು ನಿರ್ವಹಿಸುತ್ತವೆ. ಇಂತಹ ಸೂಕ್ಷ್ಮ ಅದ್ಬುತ ಅಂಗವನ್ನು ಅತಿ ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಇಂಥ ಸೂಕ್ಷ್ಮ ಕಿಡ್ನಿಗೆ ತೊಂದರೆಯಾದಲ್ಲಿ ದೇಹದಲ್ಲಿ ರಕ್ತದಲ್ಲಿ ವಿಷಕಾರಿ ಅಂಶಗಳು ಹೆಚ್ಚಳವಾಗಿ ವ್ಯಕ್ತಿ ಗಂಭೀರ ಕಾಯಿಲೆಗೆ ತುತ್ತಾಗುತ್ತಾನೆ. ನರಕ ಯಾತನೆಯನ್ನೇ ಅನುಭವಿಸುತ್ತಾನೆ.

ಕಿಡ್ನಿ ಕಾಯಿಲೆಗೆ ಕಾರಣಗಳು : ದೇಹದಲ್ಲಿನ ಕಲ್ಮಷಗಳನ್ನು ಹೊರಹಾಕಿ ರಕ್ತ ಶುದ್ಧಗೊಳಿಸುವುದರೊಂದಿಗೆ ಇತರೆ ಅನೇಕ ಕೆಲಸಗಳನ್ನು ನಿರ್ವಹಿಸುವ ಅದ್ಬುತ ಅಂಗ ನಮ್ಮ ಕಿಡ್ನಿಗಳು ಅನೇಕ ಕಾರಣಗಳಿಂದ ರಕ್ತ ಶುದ್ಧೀಕರಿಸುವಲ್ಲಿ ವಿಫಲವಾಗಿ ಮೂತ್ರಪಿಂಡ ವೈಫಲ್ಯ (Kidney failure) ಆಗುತ್ತದೆ. ಕಿಡ್ನಿ ಕಾಯಿಲೆ ಪ್ರಮುಖವಾಗಿ ಬಿಪಿ ಶುಗರ್ ಕಾಯಿಲೆ, ಕಿಡ್ನಿಯಲ್ಲಿ ಕಲ್ಲುಗಳು, ಮೂತ್ರ ಸೋಂಕು, ಮದ್ಯಪಾನ, ಅನಗತ್ಯ ಔಷಧಿಗಳ ದೀರ್ಘಕಾಲ ಸೇವನೆ, ನೀರನ್ನು ಅತೀ ಕಡಿಮೆ ಅಥವಾ ಅತೀ ಹೆಚ್ಚು ಕುಡಿಯುವುದು. ಅಧಿಕ ಪ್ರೋಟೀನ್ ಸೇವನೆ, ಮಾಂಸಹಾರ ಸೇವನೆ, ಅತಿಯಾಗಿ ಉಪ್ಪು ಸಕ್ಕರೆ ಸೇವನೆ ಹೀಗೆ ಅನೇಕ ಕಾರಣಗಳಿಂದ ಕಿಡ್ನಿ ತೊಂದರೆಗೊಳಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಕಿಡ್ನಿಗಳು ಶೇ.90 ರಷ್ಟು ಕೆಲಸ ಮಾಡುವುದನ್ನು ನಿಲ್ಲಿಸಿದಲ್ಲಿ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡುವುದು ಅನಿವಾರ್ಯವಾಗುತ್ತದೆ.

ಕಿಡ್ನಿ ಕಾಯಿಲೆಯ ಲಕ್ಷಣಗಳು : ಬಹಳಷ್ಟು ಜನರಲ್ಲಿ ಕಿಡ್ನಿ ತನ್ನ ಕೆಲಸವನ್ನು ಸಂಪೂರ್ಣ ನಿಲ್ಲಿಸುವವರೆಗೂ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ಕಂಡು ಬಂದಾಗ ಗಂಭೀರ ಸಮಸ್ಯೆ ಇರುತ್ತದೆ. ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಆದ್ದರಿಂದ, ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಪದೇಪದೇ ಮೂತ್ರ ವಿಸರ್ಜನೆ, ರಾತ್ರಿ ವೇಳೆ ಅಧಿಕ ಮೂತ್ರ ವಿಸರ್ಜನೆ, ಬಾಯಲ್ಲಿ ಕೆಟ್ಟ ವಾಸನೆ, ಚರ್ಮದಲ್ಲಿ ತುರಿಕೆ, ಕೈ ಕಾಲುಗಳಲ್ಲಿ ಊತ, ಮೂತ್ರದ ಬಣ್ಣದಲ್ಲಿ ಬದಲಾವಣೆ, ಮೂತ್ರದಲ್ಲಿ ರಕ್ತ, ಕಿಬ್ಬೊಟ್ಟೆ ಅಥವಾ ಹಿಂಭಾಗದಲ್ಲಿ ನೋವು, ಜ್ವರ, ವಾಂತಿ, ನಿಶಕ್ತಿ, ನಿದ್ರಾಹೀನತೆ, ಅನಿಯಂತ್ರಿತ ಬಿಪಿ, ಪಾದಗಳಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ ಹೀಗೆ ಅನೇಕ ಲಕ್ಷಣಗಳು ಕಂಡು ಬರಬಹುದು. ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿದ್ದರೂ ಸೂಕ್ತ ಆಹಾರ ಪದ್ಧತಿ, ಜೀವನ ಶೈಲಿ ಬದಲಾವಣೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಕಿಡ್ನಿ ಕಾಯಿಲೆಯ ತೊಂದರೆಯಿಂದ ಸಂಪೂರ್ಣ ಹೊರಬರಲು ಸಾಧ್ಯವಿದೆ.

ಕಿಡ್ನಿ ಕಾಯಿಲೆಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Kidney QR X Plus!

ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಕಿಡ್ನಿ ಕಾಯಿಲೆಗೆ Stomach Kare ಮತ್ತು Kidney QR X Plus ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಕೀಲುನೋವು, ಹೃದಯ ರೋಗ, ಚರ್ಮರೋಗ, ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ : ಸೂರ್ಯಕಾಂತ ಸಜ್ಜನ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending