ದಿನದ ಸುದ್ದಿ
ಕಿಡ್ನಿ ಕಾಯಿಲೆಗೆ ಪರಿಣಾಮಕಾರಿ ಚಿಕಿತ್ಸೆ
ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಕಿಡ್ನಿ ಕಾಯಿಲೆ ಬರುತ್ತದೆ. ಬಿಪಿ ಮತ್ತು ಶುಗರ್ ಕಾಯಿಲೆ ನಿಯಂತ್ರಿಸದಿದ್ದರೆ ಇತರೆ ಅನೇಕ ಕಾಯಿಲೆಗಳು ಬರುತ್ತವೆ. ಈ ಹೈಬಿಪಿ ಮತ್ತು ಶುಗರ್ ಕಾಯಿಲೆ ಕಾರಣದಿಂದ ಮೊದಲು ಬರುವುದೇ ಕಿಡ್ನಿ ಕಾಯಿಲೆ.
ಕಿಡ್ನಿ ವೈಫಲ್ಯ ಆದಾಗ ವ್ಯಕ್ತಿ ನರಕ ಯಾತನೆಯನ್ನೇ ಅನುಭವಿಸುತ್ತಾನೆ. ಅದರಲ್ಲೂ ಕಿಡ್ನಿ ಕಲ್ಲುಗಳಿಂದ ಬರುವ ನೋವು ಹೆರಿಗೆ ನೋವಿಗಿಂತಲೂ ಅಧಿಕವಾಗಿರುತ್ತದೆ. ಡಯಾಲಿಸಿಸ್ ಸ್ಟೇಜಲ್ಲಿ ವಾರಕ್ಕೆ ಎರಡು ಅಥವಾ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ದಿನಗಳಂತೆ ಖರ್ಚು ಹೆಚ್ಚಾಗುತ್ತದೆ. ವ್ಯಕ್ತಿ ಸರ್ಕಾರಿ ಅಥವಾ ಕಂಪನಿಗಳಲ್ಲಿ ಉದ್ಯೋಗಿಯಾಗಿದ್ದಲ್ಲಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ. ಅಲ್ಲದೆ ಡಯಾಲಿಸಿಸ್ಗೆ ಅತಿ ಹೆಚ್ಚು ಹಣ ಬೇಕಾಗುತ್ತದೆ. ಡಯಾಲಿಸಿಸ್ ನಿಲ್ಲಿಸಿದಲ್ಲಿ ಅಪಾಯ ಮತ್ತಷ್ಟು ಹೆಚ್ಚು. ಆದ್ದರಿಂದ, ಕಿಡ್ನಿ ಕಾಯಿಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಬಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇಂದು ನಮ್ಮ ದೇಶದಲ್ಲಿ ಬಿಪಿ ಶುಗರ್ ಕಾಯಿಲೆಗಳ ಹೆಚ್ಚಳದಿಂದ ಕಿಡ್ನಿ ಕಾಯಿಲೆಯು ಅನೇಕರಲ್ಲಿ ಕಂಡುಬರುತ್ತಿದೆ.
ಕಿಡ್ನಿಯ ಕೆಲಸ ಕಾರ್ಯಗಳು : ಕಿಡ್ನಿಗಳು ನಮ್ಮ ದೇಹದ ಸೂಕ್ಷ್ಮ ಫಿಲ್ಟರ್ ಯಂತ್ರವಿದ್ದಂತೆ. ಬೇಡವಾದ ವಸ್ತುಗಳನ್ನು ಫಿಲ್ಟರ್ ಮಾಡಿ ದೇಹದಿಂದ ಹೊರಹಾಕುವ ಕೆಲಸವನ್ನು ಕಿಡ್ನಿಗಳು ನಿರಂತರವಾಗಿ ಮಾಡುತ್ತಿರುತ್ತದೆ. 150 ರಿಂದ 170 ಗ್ರಾಂ ತೂಕ ಹೊಂದಿರುವ ಈ ಚಿಕ್ಕ ಕಿಡ್ನಿಯಲ್ಲಿ ನೆಪ್ರೊನ್ ಎಂಬ ಕಣ್ಣಿಗೆ ಕಾಣದಷ್ಟು ಸೂಕ್ಷ್ಮ ಮಿಲಿಯಾಂತರ ಫಿಲ್ಟರ್ ಕೋಶಗಳು ಇರುತ್ತವೆ. ಈ ಫಿಲ್ಟರ್ ಕೋಶಗಳ ಮೂಲಕ ರಕ್ತದಲ್ಲಿನ ಕಲ್ಮಷ ಮತ್ತು ವಿಷಯುಕ್ತ ಅಂಶವನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಠಿಣ ಕೆಲಸವನ್ನು ಕಿಡ್ನಿಗಳು ಮಾಡುತ್ತವೆ. ಈ ರೀತಿ ರಕ್ತವನ್ನು ಶುದ್ಧಗೊಳಿಸುವ ಪ್ರಮುಖ ಕೆಲಸದ ಜೊತೆಗೆ ಇನ್ನೂ ಅನೇಕ ಕೆಲಸಗಳನ್ನು ಕಿಡ್ನಿಗಳು ನಿರ್ವಹಿಸುತ್ತವೆ. ಇಂತಹ ಸೂಕ್ಷ್ಮ ಅದ್ಬುತ ಅಂಗವನ್ನು ಅತಿ ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಇಂಥ ಸೂಕ್ಷ್ಮ ಕಿಡ್ನಿಗೆ ತೊಂದರೆಯಾದಲ್ಲಿ ದೇಹದಲ್ಲಿ ರಕ್ತದಲ್ಲಿ ವಿಷಕಾರಿ ಅಂಶಗಳು ಹೆಚ್ಚಳವಾಗಿ ವ್ಯಕ್ತಿ ಗಂಭೀರ ಕಾಯಿಲೆಗೆ ತುತ್ತಾಗುತ್ತಾನೆ. ನರಕ ಯಾತನೆಯನ್ನೇ ಅನುಭವಿಸುತ್ತಾನೆ.
ಕಿಡ್ನಿ ಕಾಯಿಲೆಗೆ ಕಾರಣಗಳು : ದೇಹದಲ್ಲಿನ ಕಲ್ಮಷಗಳನ್ನು ಹೊರಹಾಕಿ ರಕ್ತ ಶುದ್ಧಗೊಳಿಸುವುದರೊಂದಿಗೆ ಇತರೆ ಅನೇಕ ಕೆಲಸಗಳನ್ನು ನಿರ್ವಹಿಸುವ ಅದ್ಬುತ ಅಂಗ ನಮ್ಮ ಕಿಡ್ನಿಗಳು ಅನೇಕ ಕಾರಣಗಳಿಂದ ರಕ್ತ ಶುದ್ಧೀಕರಿಸುವಲ್ಲಿ ವಿಫಲವಾಗಿ ಮೂತ್ರಪಿಂಡ ವೈಫಲ್ಯ (Kidney failure) ಆಗುತ್ತದೆ. ಕಿಡ್ನಿ ಕಾಯಿಲೆ ಪ್ರಮುಖವಾಗಿ ಬಿಪಿ ಶುಗರ್ ಕಾಯಿಲೆ, ಕಿಡ್ನಿಯಲ್ಲಿ ಕಲ್ಲುಗಳು, ಮೂತ್ರ ಸೋಂಕು, ಮದ್ಯಪಾನ, ಅನಗತ್ಯ ಔಷಧಿಗಳ ದೀರ್ಘಕಾಲ ಸೇವನೆ, ನೀರನ್ನು ಅತೀ ಕಡಿಮೆ ಅಥವಾ ಅತೀ ಹೆಚ್ಚು ಕುಡಿಯುವುದು. ಅಧಿಕ ಪ್ರೋಟೀನ್ ಸೇವನೆ, ಮಾಂಸಹಾರ ಸೇವನೆ, ಅತಿಯಾಗಿ ಉಪ್ಪು ಸಕ್ಕರೆ ಸೇವನೆ ಹೀಗೆ ಅನೇಕ ಕಾರಣಗಳಿಂದ ಕಿಡ್ನಿ ತೊಂದರೆಗೊಳಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಕಿಡ್ನಿಗಳು ಶೇ.90 ರಷ್ಟು ಕೆಲಸ ಮಾಡುವುದನ್ನು ನಿಲ್ಲಿಸಿದಲ್ಲಿ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡುವುದು ಅನಿವಾರ್ಯವಾಗುತ್ತದೆ.
ಕಿಡ್ನಿ ಕಾಯಿಲೆಯ ಲಕ್ಷಣಗಳು : ಬಹಳಷ್ಟು ಜನರಲ್ಲಿ ಕಿಡ್ನಿ ತನ್ನ ಕೆಲಸವನ್ನು ಸಂಪೂರ್ಣ ನಿಲ್ಲಿಸುವವರೆಗೂ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ಕಂಡು ಬಂದಾಗ ಗಂಭೀರ ಸಮಸ್ಯೆ ಇರುತ್ತದೆ. ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಆದ್ದರಿಂದ, ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಪದೇಪದೇ ಮೂತ್ರ ವಿಸರ್ಜನೆ, ರಾತ್ರಿ ವೇಳೆ ಅಧಿಕ ಮೂತ್ರ ವಿಸರ್ಜನೆ, ಬಾಯಲ್ಲಿ ಕೆಟ್ಟ ವಾಸನೆ, ಚರ್ಮದಲ್ಲಿ ತುರಿಕೆ, ಕೈ ಕಾಲುಗಳಲ್ಲಿ ಊತ, ಮೂತ್ರದ ಬಣ್ಣದಲ್ಲಿ ಬದಲಾವಣೆ, ಮೂತ್ರದಲ್ಲಿ ರಕ್ತ, ಕಿಬ್ಬೊಟ್ಟೆ ಅಥವಾ ಹಿಂಭಾಗದಲ್ಲಿ ನೋವು, ಜ್ವರ, ವಾಂತಿ, ನಿಶಕ್ತಿ, ನಿದ್ರಾಹೀನತೆ, ಅನಿಯಂತ್ರಿತ ಬಿಪಿ, ಪಾದಗಳಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ ಹೀಗೆ ಅನೇಕ ಲಕ್ಷಣಗಳು ಕಂಡು ಬರಬಹುದು. ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿದ್ದರೂ ಸೂಕ್ತ ಆಹಾರ ಪದ್ಧತಿ, ಜೀವನ ಶೈಲಿ ಬದಲಾವಣೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಕಿಡ್ನಿ ಕಾಯಿಲೆಯ ತೊಂದರೆಯಿಂದ ಸಂಪೂರ್ಣ ಹೊರಬರಲು ಸಾಧ್ಯವಿದೆ.
ಕಿಡ್ನಿ ಕಾಯಿಲೆಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Kidney QR X Plus!
ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಕಿಡ್ನಿ ಕಾಯಿಲೆಗೆ Stomach Kare ಮತ್ತು Kidney QR X Plus ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಕೀಲುನೋವು, ಹೃದಯ ರೋಗ, ಚರ್ಮರೋಗ, ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ : ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

