ದಿನದ ಸುದ್ದಿ
ಕಿಡ್ನಿ ಕಾಯಿಲೆಗೆ ಪರಿಣಾಮಕಾರಿ ಚಿಕಿತ್ಸೆ
ಹೈಬಿಪಿ ನಿಯಂತ್ರಿಸದಿದ್ದರೆ ಶುಗರ್ ಕಾಯಿಲೆ ಸಹಜವಾಗಿ ಕಿಡ್ನಿ ಕಾಯಿಲೆ ಬರುತ್ತದೆ. ಬಿಪಿ ಮತ್ತು ಶುಗರ್ ಕಾಯಿಲೆ ನಿಯಂತ್ರಿಸದಿದ್ದರೆ ಇತರೆ ಅನೇಕ ಕಾಯಿಲೆಗಳು ಬರುತ್ತವೆ. ಈ ಹೈಬಿಪಿ ಮತ್ತು ಶುಗರ್ ಕಾಯಿಲೆ ಕಾರಣದಿಂದ ಮೊದಲು ಬರುವುದೇ ಕಿಡ್ನಿ ಕಾಯಿಲೆ.
ಕಿಡ್ನಿ ವೈಫಲ್ಯ ಆದಾಗ ವ್ಯಕ್ತಿ ನರಕ ಯಾತನೆಯನ್ನೇ ಅನುಭವಿಸುತ್ತಾನೆ. ಅದರಲ್ಲೂ ಕಿಡ್ನಿ ಕಲ್ಲುಗಳಿಂದ ಬರುವ ನೋವು ಹೆರಿಗೆ ನೋವಿಗಿಂತಲೂ ಅಧಿಕವಾಗಿರುತ್ತದೆ. ಡಯಾಲಿಸಿಸ್ ಸ್ಟೇಜಲ್ಲಿ ವಾರಕ್ಕೆ ಎರಡು ಅಥವಾ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾಗುತ್ತದೆ. ದಿನಗಳಂತೆ ಖರ್ಚು ಹೆಚ್ಚಾಗುತ್ತದೆ. ವ್ಯಕ್ತಿ ಸರ್ಕಾರಿ ಅಥವಾ ಕಂಪನಿಗಳಲ್ಲಿ ಉದ್ಯೋಗಿಯಾಗಿದ್ದಲ್ಲಿ ಕೆಲಸ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತದೆ. ಅಲ್ಲದೆ ಡಯಾಲಿಸಿಸ್ಗೆ ಅತಿ ಹೆಚ್ಚು ಹಣ ಬೇಕಾಗುತ್ತದೆ. ಡಯಾಲಿಸಿಸ್ ನಿಲ್ಲಿಸಿದಲ್ಲಿ ಅಪಾಯ ಮತ್ತಷ್ಟು ಹೆಚ್ಚು. ಆದ್ದರಿಂದ, ಕಿಡ್ನಿ ಕಾಯಿಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಬಂದಿದ್ದಲ್ಲಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇಂದು ನಮ್ಮ ದೇಶದಲ್ಲಿ ಬಿಪಿ ಶುಗರ್ ಕಾಯಿಲೆಗಳ ಹೆಚ್ಚಳದಿಂದ ಕಿಡ್ನಿ ಕಾಯಿಲೆಯು ಅನೇಕರಲ್ಲಿ ಕಂಡುಬರುತ್ತಿದೆ.
ಕಿಡ್ನಿಯ ಕೆಲಸ ಕಾರ್ಯಗಳು : ಕಿಡ್ನಿಗಳು ನಮ್ಮ ದೇಹದ ಸೂಕ್ಷ್ಮ ಫಿಲ್ಟರ್ ಯಂತ್ರವಿದ್ದಂತೆ. ಬೇಡವಾದ ವಸ್ತುಗಳನ್ನು ಫಿಲ್ಟರ್ ಮಾಡಿ ದೇಹದಿಂದ ಹೊರಹಾಕುವ ಕೆಲಸವನ್ನು ಕಿಡ್ನಿಗಳು ನಿರಂತರವಾಗಿ ಮಾಡುತ್ತಿರುತ್ತದೆ. 150 ರಿಂದ 170 ಗ್ರಾಂ ತೂಕ ಹೊಂದಿರುವ ಈ ಚಿಕ್ಕ ಕಿಡ್ನಿಯಲ್ಲಿ ನೆಪ್ರೊನ್ ಎಂಬ ಕಣ್ಣಿಗೆ ಕಾಣದಷ್ಟು ಸೂಕ್ಷ್ಮ ಮಿಲಿಯಾಂತರ ಫಿಲ್ಟರ್ ಕೋಶಗಳು ಇರುತ್ತವೆ. ಈ ಫಿಲ್ಟರ್ ಕೋಶಗಳ ಮೂಲಕ ರಕ್ತದಲ್ಲಿನ ಕಲ್ಮಷ ಮತ್ತು ವಿಷಯುಕ್ತ ಅಂಶವನ್ನು ಫಿಲ್ಟರ್ ಮಾಡಿ ಮೂತ್ರದ ಮೂಲಕ ಹೊರ ಹಾಕುವ ಕಠಿಣ ಕೆಲಸವನ್ನು ಕಿಡ್ನಿಗಳು ಮಾಡುತ್ತವೆ. ಈ ರೀತಿ ರಕ್ತವನ್ನು ಶುದ್ಧಗೊಳಿಸುವ ಪ್ರಮುಖ ಕೆಲಸದ ಜೊತೆಗೆ ಇನ್ನೂ ಅನೇಕ ಕೆಲಸಗಳನ್ನು ಕಿಡ್ನಿಗಳು ನಿರ್ವಹಿಸುತ್ತವೆ. ಇಂತಹ ಸೂಕ್ಷ್ಮ ಅದ್ಬುತ ಅಂಗವನ್ನು ಅತಿ ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕಾಗಿದೆ. ಇಂಥ ಸೂಕ್ಷ್ಮ ಕಿಡ್ನಿಗೆ ತೊಂದರೆಯಾದಲ್ಲಿ ದೇಹದಲ್ಲಿ ರಕ್ತದಲ್ಲಿ ವಿಷಕಾರಿ ಅಂಶಗಳು ಹೆಚ್ಚಳವಾಗಿ ವ್ಯಕ್ತಿ ಗಂಭೀರ ಕಾಯಿಲೆಗೆ ತುತ್ತಾಗುತ್ತಾನೆ. ನರಕ ಯಾತನೆಯನ್ನೇ ಅನುಭವಿಸುತ್ತಾನೆ.
ಕಿಡ್ನಿ ಕಾಯಿಲೆಗೆ ಕಾರಣಗಳು : ದೇಹದಲ್ಲಿನ ಕಲ್ಮಷಗಳನ್ನು ಹೊರಹಾಕಿ ರಕ್ತ ಶುದ್ಧಗೊಳಿಸುವುದರೊಂದಿಗೆ ಇತರೆ ಅನೇಕ ಕೆಲಸಗಳನ್ನು ನಿರ್ವಹಿಸುವ ಅದ್ಬುತ ಅಂಗ ನಮ್ಮ ಕಿಡ್ನಿಗಳು ಅನೇಕ ಕಾರಣಗಳಿಂದ ರಕ್ತ ಶುದ್ಧೀಕರಿಸುವಲ್ಲಿ ವಿಫಲವಾಗಿ ಮೂತ್ರಪಿಂಡ ವೈಫಲ್ಯ (Kidney failure) ಆಗುತ್ತದೆ. ಕಿಡ್ನಿ ಕಾಯಿಲೆ ಪ್ರಮುಖವಾಗಿ ಬಿಪಿ ಶುಗರ್ ಕಾಯಿಲೆ, ಕಿಡ್ನಿಯಲ್ಲಿ ಕಲ್ಲುಗಳು, ಮೂತ್ರ ಸೋಂಕು, ಮದ್ಯಪಾನ, ಅನಗತ್ಯ ಔಷಧಿಗಳ ದೀರ್ಘಕಾಲ ಸೇವನೆ, ನೀರನ್ನು ಅತೀ ಕಡಿಮೆ ಅಥವಾ ಅತೀ ಹೆಚ್ಚು ಕುಡಿಯುವುದು. ಅಧಿಕ ಪ್ರೋಟೀನ್ ಸೇವನೆ, ಮಾಂಸಹಾರ ಸೇವನೆ, ಅತಿಯಾಗಿ ಉಪ್ಪು ಸಕ್ಕರೆ ಸೇವನೆ ಹೀಗೆ ಅನೇಕ ಕಾರಣಗಳಿಂದ ಕಿಡ್ನಿ ತೊಂದರೆಗೊಳಗಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಕಿಡ್ನಿಗಳು ಶೇ.90 ರಷ್ಟು ಕೆಲಸ ಮಾಡುವುದನ್ನು ನಿಲ್ಲಿಸಿದಲ್ಲಿ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡುವುದು ಅನಿವಾರ್ಯವಾಗುತ್ತದೆ.
ಕಿಡ್ನಿ ಕಾಯಿಲೆಯ ಲಕ್ಷಣಗಳು : ಬಹಳಷ್ಟು ಜನರಲ್ಲಿ ಕಿಡ್ನಿ ತನ್ನ ಕೆಲಸವನ್ನು ಸಂಪೂರ್ಣ ನಿಲ್ಲಿಸುವವರೆಗೂ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ಕಂಡು ಬಂದಾಗ ಗಂಭೀರ ಸಮಸ್ಯೆ ಇರುತ್ತದೆ. ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಆದ್ದರಿಂದ, ಇದನ್ನು ಸೈಲೆಂಟ್ ಕಿಲ್ಲರ್ ಎಂದೂ ಕರೆಯುತ್ತಾರೆ. ಪ್ರಮುಖವಾಗಿ ಪದೇಪದೇ ಮೂತ್ರ ವಿಸರ್ಜನೆ, ರಾತ್ರಿ ವೇಳೆ ಅಧಿಕ ಮೂತ್ರ ವಿಸರ್ಜನೆ, ಬಾಯಲ್ಲಿ ಕೆಟ್ಟ ವಾಸನೆ, ಚರ್ಮದಲ್ಲಿ ತುರಿಕೆ, ಕೈ ಕಾಲುಗಳಲ್ಲಿ ಊತ, ಮೂತ್ರದ ಬಣ್ಣದಲ್ಲಿ ಬದಲಾವಣೆ, ಮೂತ್ರದಲ್ಲಿ ರಕ್ತ, ಕಿಬ್ಬೊಟ್ಟೆ ಅಥವಾ ಹಿಂಭಾಗದಲ್ಲಿ ನೋವು, ಜ್ವರ, ವಾಂತಿ, ನಿಶಕ್ತಿ, ನಿದ್ರಾಹೀನತೆ, ಅನಿಯಂತ್ರಿತ ಬಿಪಿ, ಪಾದಗಳಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ ಹೀಗೆ ಅನೇಕ ಲಕ್ಷಣಗಳು ಕಂಡು ಬರಬಹುದು. ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿದ್ದರೂ ಸೂಕ್ತ ಆಹಾರ ಪದ್ಧತಿ, ಜೀವನ ಶೈಲಿ ಬದಲಾವಣೆ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಕಿಡ್ನಿ ಕಾಯಿಲೆಯ ತೊಂದರೆಯಿಂದ ಸಂಪೂರ್ಣ ಹೊರಬರಲು ಸಾಧ್ಯವಿದೆ.
ಕಿಡ್ನಿ ಕಾಯಿಲೆಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Kidney QR X Plus!
ನಿಮ್ಮ ಕಿಡ್ನಿ ಕಾಯಿಲೆ ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಕಿಡ್ನಿ ಕಾಯಿಲೆಗೆ Stomach Kare ಮತ್ತು Kidney QR X Plus ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಕಿಡ್ನಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಕೀಲುನೋವು, ಹೃದಯ ರೋಗ, ಚರ್ಮರೋಗ, ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ : ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


