Connect with us

ಬಹಿರಂಗ

ಕೆ.ಆರ್.ಎಸ್.ನಿರ್ಮಾಣ : ಮತ್ತಷ್ಟು ಇತಿಹಾಸ

Published

on

  • ರಘೋತ್ತಮ ಹೊ.ಬ

ದು 1902 ನೇ ಇಸವಿ. ಏಷ್ಯಾದಲ್ಲೆ ಪ್ರಪ್ರಥಮ ಜಲವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪನೆಯಾದ ವರ್ಷ. ಅಂದಹಾಗೆ ಅದನ್ನು ಸ್ಥಾಪಿಸಿದವರು ಮೈಸೂರಿನ ಅಂದಿನ ಮಹಾರಾಜ ನಾಲ್ವಡಿ ಕೃಷ್ಣರಾಜಒಡೆಯರ್‍ರವರು.

ಬ್ರಿಟಿಷರೊಂದಿಗೆ ಕೋಲಾರ ಚಿನ್ನದ ಗಣಿಗೆ ವಿದ್ಯುತ್ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡಿದ್ದ ಅವರು ಆ ನಿಟ್ಟಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಶಿವನಸಮುದ್ರ ಎಂಬಲ್ಲಿ ಪ್ರಪ್ರಥಮ ಜಲವಿದ್ಯುತ್ ಕೇಂದ್ರ ಸ್ಥಾಪಿಸಿದರು ಮತ್ತು ಆ ಕಾಲದಲ್ಲೆ 30,000 ವೋಲ್ಟ್ ವಿದ್ಯುತ್‍ಅನ್ನು ಕೋಲಾರದ ಚಿನ್ನದÀ ಗಣಿಗೆ ವರ್ಗಾಯಿಸಿದರು. ಈ ಸಂದರ್ಭದಲ್ಲಿ ಒಂದು ಮಾತು ಅದೇನೆಂದರೆ ಆಗಿನ್ನು ಸರ್.ಎಂ.ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದೇ ಇರಲಿಲ್ಲ!

ಇರಲಿ, ಜಲವಿದ್ಯುತ್ ಕೇಂದ್ರವನ್ನೇನೋ ಒಡೆಯರ್‍ರವರು ಸ್ಥಾಪಿಸಿದರು. ಆದರೆ ವಿದ್ಯುತ್ ಉತ್ಪಾದನೆಗೆ ನೀರು ವರ್ಷಾಕಾಲ ದೊರೆಯುತ್ತದೆಯೇ? ಖಂಡಿತ ಇಲ್ಲ. ಮಳೆ ಬಂದಾಗ ವಿದ್ಯುತ್. ಇಲ್ಲದಿದ್ರೆ ನೋ ವಿದ್ಯುತ್! ಬೇಸಿಗೆ ಕಾಲದಲ್ಲಂತೂ ಒಂದು ವೋಲ್ಟ್ ಉತ್ಪತ್ತಿ ಕೂಡ ಕಷ್ಟವಾಗಿತ್ತು. ಇದರಿಂದ ಚಿನ್ನದ ಗಣಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವುದಾಗಿ ಒಪ್ಪಂದ ಮಾಡಿಕೊಂಡಿದ್ದ ಒಡೆಯರ್‍ರಿಗೆ ಅದರ ಪೂರೈಕೆ ಸವಾಲಿನ ಕೆಲಸವಾಗಿತ್ತು.

ಈ ಕಾರಣಕ್ಕಾಗಿ ಅಂದರೆ ವಿದ್ಯುತ್ ಉತ್ಪಾದನ ಕೇಂದ್ರಕ್ಕೆ ನಿರಂತರ ನೀರು ಸರಬರಾಜು ಮಾಡಲು ಶಿವನಸಮುದ್ರದ ಹತ್ತಿರ ತೋರೆಕಾಡನಹಳ್ಳಿ ಎಂಬಲ್ಲಿ ಚೆಕ್‍ಡ್ಯಾಂ ನಿರ್ಮಿಸಲು ಕೂಡ ಒಡೆಯರ್‍ರವರು ಆಲೋಚಿಸಿದರು. ಹಾಗೆಯೇ ಅದರ ನಿರ್ಮಾಣ ಕೂಡ ಆಯಿತು ಆದರೆ ಕೆಲವೇ ಅಡಿಗಳಷ್ಟಿದ್ದ ಚೆಕ್‍ಡ್ಯಾಂ ನೀರು ಏನೇನಕ್ಕು ಸಾಲುತ್ತಿರಲಿಲ್ಲ. ಕಡೆಗೆ ಚಿನ್ನದ ಗಣಿಗೆ ವಿದ್ಯುತ್ ಪೂರೈಕೆ ಮಾಡಲೇಬೇಕಾದ ಒತ್ತಡಕ್ಕೆ ಸಿಲುಕಿದ ಅವರು 1904 ರಲ್ಲಿ ಜೋಗ್ ಬಳಿ ವಿದ್ಯುತ್ ಉತ್ಪಾದನೆ ಮಾಡಲು ಅನುಮತಿ ಕೋರಿ ಅಂದಿನ ಬ್ರೀಟಿಷ್ ವೈಸ್ ರಾಯ್ ಲಾರ್ಡ ಕರ್ಜನ್‍ರವರಿಗೆ ಪತ್ರ ಕೂಡ ಬರೆದರು.

ಆದರೆ ಪರಿಸರದ ನೆಪ ಒಡ್ಡಿ ಕರ್ಜನ್ ಅದಕ್ಕೆ ಅನುಮತಿ ನೀಡಲಿಲ್ಲ. ಕಡೆಗೆ ಬೇರಾವ ದಾರಿ ಕಾಣದೆ ಒಡೆಯರ್‍ರವರು ಜೋಗ್‍ನಲ್ಲಿ ವಿದ್ಯುತ್ ಉತ್ಪತ್ತಿ ಮಾಡುವ ಆಲೋಚನೆ ಕೈಬಿಟ್ಟು ಶಿವನಸಮುದ್ರಕ್ಕೆ ನಿರಂತರ ನೀರು ಒದಗಿಸುವ ದಿಕ್ಕಿನಲಿ ಮತ್ತೆ ಆಲೋಚನೆಗಿಳಿದರು. ಈ ಸಂಧರ್ಭದಲ್ಲಿ ಅವರ ಆ ಆಲೋಚನೆಗೆ ಆಗ ಕೈ ಜೋಡಿಸಿದ್ದು ಆಗಿನ ಮೈಸೂರು ಪ್ರಾಂತ್ಯದ ಮುಖ್ಯ ಇಂಜಿನಿಯರ್ ಆಗಿದ್ದ ಮ್ಯಾಕ್ ಹಚ್‍ರವರು.

ಅಂದಹಾಗೆ ಮಹಾರಾಜರ ಆ ಆಲೋಚನೆಗೆ ಇಂಬು ಕೊಡಲೆಂಬಂತೆ 120 ವರ್ಷಗಳ ಹಿಂದೆ ಟಿಪ್ಪು ಸುಲ್ತಾನ್ ಕಾವೇರಿ ನದಿಗೆ ಅಡ್ಡಲಾಗಿ ಕನ್ನಂಬಾಡಿ ಎಂಬಲ್ಲಿ ಅಣೆಕಟ್ಟೆ ನಿರ್ಮಿಸಲು ಯೋಜನೆ ರೂಪಿಸಿ ಶಂಕು ಸ್ಥಾಪನೆಗೈದಿರುವ ಹಳೆ ಕಡತವೊಂದು ಅವರ ಕಣ್ಣಿಗೆ ಬಿತ್ತು.

ಈ ನಿಟ್ಟಿನಲ್ಲಿ ಶಿವನಸಮುದ್ರದ ವಿದ್ಯುತ್ ಕೇಂದ್ರಕ್ಕೆ ತಕ್ಷಣ ಮತ್ತು ಶಾಶ್ವತ ಪರಿಹಾರವಾಗಿ, ನಿರಂತರ ನೀರು ಒದಗಿಸಲು ಇದೇ ತಕ್ಕ ಯೋಜನೆ ಎಂದು ಪರಿಗಣಿಸಿದ ಅವರು ಟಿಪ್ಪು ಸುಲ್ತಾನನ ಕನಸಿನ ಯೋಜನೆಗೆ ಮರು ಜೀವ ನೀಡಲು ತಮ್ಮ ಇಂಜಿನಿಯರ್ಗಳ ತಂಡಕ್ಕೆ ಸೂಚಿಸಿದರು. ಅಂದಹಾಗೆ ಅಣೆಕಟ್ಟು ಕಟ್ಟಲು ಒಡೆಯರ್‍ರವರು ಸೂಚನೆ ನೀಡಿದ(1906) ಇಂಜಿನಿಯರ್‍ಗಳ ಆ ತಂಡದಲ್ಲಿ ವಿಶ್ವೇಶ್ವರಯ್ಯನವರಿರಲಿಲ್ಲ! ಅಥವಾ ಮೈಸೂರು ಸಂಸ್ಥಾನಕ್ಕೆ ವಿಶ್ವೇಶ್ವರಯ್ಯನವರ ಆಗಮನ ಇನ್ನು ಆಗೇ ಇರಲಿಲ್ಲ!

ಇರಲಿ, ಕನ್ನಂಬಾಡಿಯಲ್ಲಿ ಅಣೆಕಟ್ಟೆಯನ್ನೇನೊ ಕಟ್ಟಲು ಮಹಾರಾಜರು ನಿರ್ಧರಿಸಿದರು. ಆದರೆ ಬ್ರಿಟಿಷ್ ರೆಸಿಡೆಂಟರಿಂದ ಅವರಿಗೆ ಸಿಕ್ಕಿದ್ದು ಕೇವಲ 70 ಅಡಿ ಎತ್ತರ ಕಟ್ಟಲು ಹಾಗೂ 60ಅಡಿ ನೀರು ಸಂಗ್ರಹಿಸಲು ಮಾತ್ರ. ಈ ನಿಟ್ಟಿನಲಿ ಬ್ರೀಟಿಷರ ನಿಲುವನ್ನು ಮಹಾರಾಜರು ಸುತಾರಾಂ ತಿರಸ್ಕರಿಸಿದರು.

ಈ ನಡುವೆ ಬ್ರೀಟಿಷರು ಮತ್ತೊಂದು ಕಂಡೀಷನ್ ಹಾಕಿದರು. ಅದೇನೆಂದರೆ ಕೆ.ಆರ್.ಎಸ್ ನೀರನ್ನು ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಸಬೇಕು, ಹಾಗೆಯೇ ಹಾಗೆ ಉತ್ಪತ್ತಿಯಾದ ವಿದ್ಯುತ್ತಿನಲ್ಲಿ ಚಿನ್ನದಗಣಿಗೆ ಸಾಗಿಸಿ ಉಳಿದ ವಿದ್ಯುತ್ತನ್ನು ತಮ್ಮ ನೇರ ಆಳ್ವಿಕೆಗೆ ಒಳಪಟ್ಟಿದ್ದ ಮದ್ರಾಸ್ ಮತ್ತು ಕೊಯಮತ್ತೂರಿಗೆ ಒದಗಿಸಬೇಕು ಎಂಬುದೇ ಆ ಕಂಡೀಷನ್. ಆದರೆ ಈ ಕಂಡೀಷನ್‍ಗೆ ಸಹ ಒಡೆಯರ್ ಜಗ್ಗಲಿಲ್ಲ. ಬದಲಿಗೆ ಕೃಷಿಗೆ ವಿದ್ಯುತ್ ಮತ್ತು ನೀರು ಒದಗಿಸುವ ತಮ್ಮ ನಿಲುವಿಗೆ ಅವರು ಕಟಿಬದ್ಧರಾದರು.

ಅಂತಿಮವಾಗಿ ಮಹಾರಾಜರ ಈ ನಿಲುವಿಗೆ ಬ್ರಿಟೀಷರು ತಲೆಬಾಗಿ ಅಣೆಕಟ್ಟೆಯ ಎತ್ತರ ಹೆಚ್ಚಿಸಲು ಸಮ್ಮತಿಸಿದರು. 90ಅಡಿ ಎತ್ತರ ಮತ್ತು 80ಅಡಿ ನೀರು ಸಂಗ್ರಹಿಸಲು ಮತ್ತು ಮುಂದೆ ವಿಸ್ತರಿಸಬಹುದಾದ ಅವಕಾಶ ನೀಡಿ ಒಪ್ಪಿಗೆ ನೀಡಿದರು. ಈ ಸಂಧರ್ಭದಲ್ಲಿ ಬ್ರಿಟಿಷ್ ರೆಸಿಡೆಂಟರಿಂದ ಒಪ್ಪಿಗೆ ಸಿಕ್ಕಿದ್ದೆ ತಡ ಮುಖ್ಯ ಇಂಜಿನಿಯರ್ ಮ್ಯಾಕ್ ಹಚ್ ಮತ್ತವರ ತಂಡ ಜಲಾಶಯದ ನಿರ್ಮಾಣಕ್ಕೆ ಕಾರ್ಯೋನ್ಮುಖವಾಯಿತು. ಅಂದಹಾಗೆ ಜಲಾಶಯ ನಿರ್ಮಾಣದ ಪ್ರಾಥಮಿಕ ತಯಾರಿ ನಡೆದ ಈ ಸಂಧರ್ಭದಲ್ಲಿಯೂ ಕೂಡ ವಿಶ್ವೇಶ್ವರಯ್ಯನವರಿರಲಿಲ್ಲ!

ಇನ್ನು ಅದು 1908ರ ಅಂತ್ಯದ ಸಮಯ. ಮುಖ್ಯ ಇಂಜಿನಿಯರ್ ಮ್ಯಾಕ್ ಹಚ್ ಸೇವೆಯಿಂದ ನಿವೃತ್ತರಾದರು. ಸ್ವಾಭಾವಿಕವಾಗಿ ತೆರವುಗೊಂಡ ಆ ಸ್ಥಾನಕ್ಕೆ ಕ್ಯಾಪ್ಟನ್ ಡೇವಿಸ್‍ರವರು ಮುಖ್ಯ ಇಂಜಿನಿಯರಾಗಿ ನೇಮಕಗೊಂಡರು ಹಾಗೆಯೆ ಕನ್ನಂಬಾಡಿ ಬಳಿ ನದಿಗೆ ಅಡ್ಡಲಾಗಿ ಮರಳು ಮೂಟೆಗಳನ್ನಿಟ್ಟು ಅದರ ಪಾತ್ರವನ್ನು ಬದಲಿಸುª ಹಚ್‍ರವರ ಕಾಮಗಾರಿಯನ್ನು ಡೇವಿಸ್‍ರವರು ಮುಂದುವರೆಸಿದರು.

ದುರಂತವೆದಂರೆ 1909ರ ಮೇ-ಜೂನ್ ಮುಂಗಾರಿನ ತಿಂಗಳು. ನದಿಯ ಪ್ರವಾಹ ಉಕ್ಕಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಮರಳು ಮೂಟೆಗಳೆಲ್ಲವು ಪ್ರವಾಹಕ್ಕೆ ಕೊಚ್ಚಿ ಹೋದವು. ಇದನ್ನು ತಡೆಯುವ ನಿಟ್ಟಿನಲ್ಲಿ ರಾತ್ರೋರಾತ್ರಿ ತೆಪ್ಪಗಳೊಂದಿಗೆ ಕಾರ್ಮಿಕರ ಜೊತೆ ಕಾರ್ಯಾಚರಣೆಗೆ ಇಳಿದ ಕ್ಯಾ.ಡೇವಿಸ್ ತನ್ನ ಸಹಪಾಠಿ ಕಾರ್ಮಿಕನೋರ್ವನನ್ನು ಉಳಿಸಲು ಹೋಗಿ ನದಿಯ ಪ್ರವಾಹದಲ್ಲಿ ಕೋಚ್ಚಿಹೋದ. ಘಟನೆಯಲ್ಲಿ ಕ್ಯಾ.ಡೇವಿಸ್ ಹಠಾತ್ ಸಾವಿಗೀಡಾದ. ಈ ಕಾರಣದಿಂದಾಗಿ ಮೈಸೂರು ಸಂಸ್ಥಾನದ ಮುಖ್ಯ ಇಂಜಿನಿಯರ್ ಹುದ್ದೆ ಖಾಲಿಬಿದ್ದಿತು.

ಇದೇ ಸಂಧರ್ಭದಲ್ಲಿ ಮೈಸೂರು ಸಂಸ್ಥಾನದಲ್ಲಿ ಒಳಗೊಳಗೆ ಮತ್ತೊಂದು ಹೋರಾಟ ಪ್ರಾರಂಭವಾಗಿತ್ತು. ಅದು ಮೈಸೂರು ಮೈಸೂರಿಗರಿಗೆ ಎಂಬ ಹೋರಾಟ. ಅಂದರೆ ಮೈಸೂರು ಪ್ರಾಂತ್ಯದಲ್ಲಿದ್ದ ಮದ್ರಾಸಿ ಅಧಿಕಾರಿಗಳನ್ನು ಓಡಿಸುವ ಹೋರಾಟವದು. ಈ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದಂತೆ ಇದನ್ನು ಶಮನಮಾಡುವ ನಿಟ್ಟಿನಲಿ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರು ಚಿಂತನೆಗಿಳಿದರು ಹಾಗೆಯೇ ಅದೇ ಸಮಯದಲ್ಲಿ ಖಾಲಿಯಾದ ಮುಖ್ಯ ಇಂಜಿನಿಯರ್ ಹುದ್ದೆಗೆ ಬೇರೋಬ್ಬರನ್ನು ನೇಮಿಸಬೇಕಾದ ಅನಿವಾರ್ಯತೆ ಕೂಡ ಅವರಿಗೆ ಎದುರಾಯಿತು.

ಇಂಜಿನಿಯರ್ ನೇಮಕ ಮತ್ತು ಮೈಸೂರು ಮೈಸೂರಿಗರಿಗೆ ಎಂಬ ಎರಡೂ ಬೇಡಿಕೆಯ ಹಿನ್ನೆಲೆಯಲ್ಲಿ ಮಹಾರಾಜರು ದೂರದ ಮುಂಬಯಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರು ಸಂಸ್ಥಾನದವರೆ ಆದ ವಿಶ್ವೇಶ್ವರಯ್ಯರವರನ್ನು ಮುಖ್ಯ ಇಂಜಿನಿಯರ ಹುದ್ದೆಗೆ ನೇಮಿಸಿಕೊಂಡರು. ಈ ನಿಟ್ಟಿನಲಿ ಮಹಾರಾಜರ ಆದೇಶದ ಮೇರೆಗೆ 1909ರ ಅಂತ್ಯದಲ್ಲಿ ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಪ್ರವೇಶ ಪಡೆದುಕೊಂಡರು!

ಅಂದಹಾಗೆ ಅವರು ಹಾಗೆ ಸಂಸ್ಥಾನಕ್ಕೆ ಸೇವೆಗೆ ಪ್ರವೇಶಪಡೆಯುತ್ತಿದ್ದಂತೆ ಇಂಜಿನಿಯರರಾದ ಅವರ ಹೆಗಲ ಮೇಲೆ ಸಂಸ್ಥಾನದ ಎಲ್ಲ ನಿರ್ಮಾಣದ ಕಾಮಗಾರಿಗಳ ಹೊರೆಯು ಬಿತ್ತು. ಹಾಗೆಯೆ ಕೆ.ಆರ್.ಎಸ್ ನಿರ್ಮಾಣ ಕಾಮಗಾರಿ ಕೂಡ. ಯಾಕೆಂದರೆ ಮೊದಲೇ ತಿಳಿಸಿದ ಹಾಗೆ ಅದಾಗಲೆ ಜಲಾಶಯ ನಿರ್ಮಾಣದ ಪ್ರಾಥಮಿಕ ಕಾರ್ಯಗಳು ಜಾರಿಯಲ್ಲಿತ್ತು. ಈ ನಿಟ್ಟಿನಲಿ ಇದಕ್ಕೆ ಸಾಕ್ಷಿ ಬೇಕೆನ್ನುವವರು ಸ್ವತಃ ವಿಶ್ವೇಶ್ವರಯ್ಯನವರೆ ತಮ್ಮ ಆತ್ಮಕಥೆ “ನನ್ನ ವೃತ್ತಿ ಜೀವನದ ನೆನಪುಗಳು “ ಕೃತಿಯಲ್ಲಿ ನಾನು ಬರುವುದಕ್ಕೆ ಮೊದಲೆ ಶ್ರೀರಂಗಪಟ್ಟಣದಿಂದ 10 ಮೈಲು ದೂರದಲ್ಲಿ ಕಾವೇರಿ ನದಿಯ ಪಶ್ಚಿಮ ದಂಡೆ ಮೇಲೆ ಕನ್ನಂಬಾಡಿ ಎಂಬಲ್ಲಿ ಅಣೆಕಟ್ಟೆ ನಿರ್ಮಾಣದ ಕಾಮಗಾರಿ ನೆಡೆದಿತ್ತು. ಎಂದು ಬರೆದಿರುವುದನ್ನು ಗಮನಿಸಬಹುದು.

ಆ ಮೂಲಕ ಪ್ರಾಮಾಣಿಕವಾಗಿ ಸ್ವತಃ ಸರ್.ಎಂ.ವಿ.ರವರೆ ಜಲಾಶಯದ ನಿರ್ಮಾಣದ ಕಾಮಗಾರಿ ತನ್ನ ಆಗಮನಕ್ಕೂ ಮೊದಲೇ ಪ್ರಾರಂಭಗೊಂಡಿತ್ತೆಂಬುದನ್ನು ಸೂಚಿಸಿದ್ದಾರೆ. ಒಟ್ಟಾರೆ ಈ ನಿಟ್ಟಿನಲಿ ಹೇಳುವುದಾದರೆ ಕೆ.ಆರ್.ಎಸ್ ವಿಶ್ವೇಶ್ವರಯ್ಯನವರ ಕನಸಿನ ಕೂಸಂತು ಅಲ್ಲ. ಟಿಪ್ಪು ಕನಸಿದ್ದನ್ನು ನಾಲ್ವಡಿರವರು ಕಾರ್ಯರೂಪಕ್ಕೆ ತಂದ ಸಂದರ್ಭದಲ್ಲಿ ಮಧ್ಯ ಇಂಜಿನಿಯರರಾಗಿ ನೇಮಕಗೊಂಡು ಅವರು ಕೆಲಸ ಮುಂದುವರೆಸಿದ್ದಾರೆ ಅಷ್ಟೆ!

ಈ ನಿಟ್ಟಿನಲ್ಲಿ ಇಂಜಿನಿಯರ್ ಕ್ಯಾ.ಡೇವಿಸ್ ಏನಾದರು ಸಾಯದಿದ್ದರೆ ವಿಶ್ವೇಶ್ವರಯ್ಯನವರು ಮೈಸೂರು ಸಂಸ್ಥಾನಕ್ಕೆ ಬರುತ್ತಿರಲೇ ಇರಲಿಲ್ಲ. ಹಾಗೆಯೇ ಕೆ.ಆರ್.ಎಸ್ ನಿರ್ಮಾಣದ ಶ್ರೇಯಸ್ಸು ಅವರ ಹೆಸರಿಗೆ ಹೈಜಾಕ್ ಆಗುವುದು ಕೂಡ ನೆಡೆಯುತ್ತಿರಲಿಲ್ಲ. ಕ್ಯಾ.ಡೇವಿಸ್ ಸದ್ದಿಲ್ಲದೆ ಸಂಬಳಪಡೆದು ಕಾಮಗಾರಿ ಮುಗಿಸುತ್ತಿದ್ದ!

ಇರಲಿ, ಈ ನಡುವೆ ಮಹಾರಾಜರ ವಿಶ್ವಾಸ ಸಂಪಾದಿಸಿದ ವಿಶ್ವೇಶ್ವರಯ್ಯನವರು ಮೈಸೂರು ಮೈಸೂರಿಗರಿಗೆ ಎಂಬ ತತ್ವದ ಅಡಿಯಲ್ಲಿ ದಿವಾನ ಹುದ್ದೆಗೂ ಕೂಡ ನೇಮಿಸಲ್ಪಟ್ಟರು. ಅಂದಹಾಗೆ ಆಗ ತೆರವಾದÀ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಿಸಲ್ಪಟ್ಟವರು ಯಾರು? ಯಾರು ಯಾಕೆ ಅವರ ಹೆಸರು ಹೇಳುವುದಿಲ್ಲ? ಕೆ.ಆರ್.ಎಸ್ ಇತಿಹಾಸದ ದ್ವಂದ್ವವೆಂದರೆ ಇದೇ!

ಇರಲಿ, 1911ರಲ್ಲಿ ನದಿ ಪ್ರವಾಹ ಬದಲಿಸುವ ಕಾರ್ಯ ಮುಗಿದು ಜಲಾಶಯದ ಕಟ್ಟಡ ಕಾಮಗಾರಿ ಪ್ರಾರಂಭ ವಾಯಿತು. ಈನಿಟ್ಟಿನಲ್ಲಿ 2ಕೋಟಿ 70ಲಕ್ಷ ಬಜೆಟ್ಟಿನ ಈ ಯೋಜನೆ ಹಣದ ಕೊರತೆಯನ್ನೆದುರಿಸಿತು. ಯಾಕೆಂದರೆ ಮೈಸೂರು ರಾಜ್ಯದ ಅಂದಿನ ಒಟ್ಟು ಬಜೆಟ್ಟೆ 2ಕೋಟಿ 30ಲಕ್ಷ. ಹೀಗಿರುವಾಗ ಜಲಾಶಯಕ್ಕಾಗಿ 2ಕೋಟಿ 70ಲಕ್ಷ ತರುವುದು?

ಅಂದಹಾಗೆ ಈ ಸಂಧರ್ಭದಲ್ಲಿ ಧೃತಿಗೆಡದ ಮಹಾರಾಜ ನಾಲ್ವಡಿಯವರು ತಮ್ಮ ತಾಯಿ ಮತ್ತು ತಮ್ಮ ಧರ್ಮಪತ್ನಿಯವರಿಗೆ ಸೇರಿದ 4 ಮೂಟೆ ವಜ್ರಾಭರಣಗಳನ್ನು ಮುಂಬೈ ಚಿನಿವಾರ ಪೇಟೆಯಲ್ಲಿ ಮಾರಾಟ ಮಾಡಿ ಹಣ ಒದಗಿಸಿದರು. ಅಂದಹಾಗೆ ಅಣೆಕಟ್ಟು ನಿರ್ಮಾಣಕ್ಕೆ ಮಹಾರಾಜರು ಒದಗಿಸಿದ ಆ 2ಕೋಟಿ 70ಲಕ್ಷ ರೂಗಳಲ್ಲಿ ಮುಖ್ಯ ಇಂಜಿನಿಯರ್ ವಿಶ್ವೇಶ್ವರಯ್ಯನವರ ಸಂಬಳವೂ ಕೂಡ ಸೇರಿತ್ತು!

ಇರಲಿ, ಮೊದಲೆ ಹೇಳಿದಹಾಗೆ ವಿಶ್ವೇಶ್ವರಯ್ಯನವರು ದಿವಾನರಾದ ನಂತರ ಬೇರೊಬ್ಬರು ಮುಖ್ಯ ಇಂಜಿನಿಯರರಾಗಿ ನೇಮಕಗೊಂಡರು. ಬಳಿಕ ಆ ಹೊಸ ಇಂಜಿನಿಯರ್ ಕೆ.ಆರ್. ಎಸ್ ನಿರ್ಮಾಣದ ಕಾಮಗಾರಿ ಮುಂದುವರೆಸಿದರು. ಅಂದಹಾಗೆ ಜಲಾಶಯದಲ್ಲಿ ಈಗಲೂ ಕೆ.ಆರ್.ಎಸ್. ನಿರ್ಮಾಣದಲ್ಲಿ ಕಾರ್ಯನಿರ್ವಹಿಸಿದ 50ಕ್ಕೂ ಹೆಚ್ಚು ಇಂಜಿನಿಯರ್‍ಗಳ ಹೆಸರನ್ನೊಳಗೊಂಡ ನಾಮಫಲಕವಿದೆ. ಅದರಲ್ಲಿ ವಿಶ್ವೇಶ್ವರಯ್ಯ ಒಬ್ಬರಷ್ಟೆ. ಬರೀ ವಿಶ್ವೇರಯ್ಯರವರೊಬ್ಬರೇ ಅಲ್ಲ!

ಅಂದಹಾಗೆ ಕೆಆರ್‍ಎಸ್‍ನ ಕಾಮಗಾರಿ ಹೀಗೆ ಮುಂದುವರಿದಿರಬೇಕಾದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವುದನ್ನು ವಿರೋಧಿಸುವ ನಿಟ್ಟಿನಲ್ಲಿ ವಿಶ್ವೇಶ್ವರಯ್ಯನವರು ಮಹಾರಾಜರ ಜೊತೆ ವಿಶ್ವಾಸಕೆಡಿಸಿಕೊಂಡರು. ಯಾಕೆಂದರೆ ಮೀಸಲಾತಿ ನೀಡುವುದರಿಂದ ಪ್ರತಿಭೆಗಳಿಗೆ ಮೊಸವಾಗುತ್ತದೆ ಎಂಬ ತಮ್ಮನಿಲುವಿಗೆ ಅಂಟಿಕೊಂಡ ವಿಶ್ವೇಶ್ವರಯ್ಯನವರು ಒಬಿಸಿ ಮೀಸಲಾತಿಗೆ ಕಟಿಬದ್ಧರಾದ ಮಹಾರಾಜರ ಕೆಂಗಣ್ಣಿಗೆ ಗುರಿಯಾದರು. ತತ್ಪರಿಣಾಮವಾಗಿ ಅವರು ದಿವಾನ ಹುದ್ದೆಗೆ ರಾಜೀನಾಮೆ ಕೊಡಬೇಕಾಗಿ ಬಂತು ಮತ್ತು ಆಗ ಇಸವಿ 1918!

ಹೌದು, ಕೆ.ಆರ್.ಎಸ್. ಕಟ್ಟಡ ಕಾಮಗಾರಿ ಪ್ರಾರಂಭ ವಾದದ್ದು 1911ರಲ್ಲಿ, ಮತ್ತೆ ಅದು ಹಾಗೆಯೇ ಮುಂದುವರೆದಿತ್ತು. ಪ್ರಶ್ನೆಯೇನೆಂದರೆ 1918ರಲ್ಲಿ ಸರ್.ಎಂ.ವಿ.ರವರು ರಾಜೀನಾಮೆ ಇತ್ತಾಕ್ಷಣ ಕಾಮಗಾರಿ ನಿಂತು ಹೋಯಿತೆ ಎಂಬುದು? ಖಂಡಿತ ಇಲ್ಲ! ಯಾಕೆಂದರೆ ಅದರ ನಿಜವಾದ ನಿರ್ಮಾತೃ ನಾಲ್ವಡಿಕೃಷ್ಣರಾಜ ಒಡೆಯರ್‍ರವರು ಅದಕ್ಕಾಗಿ ಉಸಿರು ಹಿಡಿದುಕೊಂಡು ಇದ್ದರಲ್ಲ!

ಈ ಸಂಧರ್ಭದಲಿ ಮತ್ತೊಂದು ಆಕ್ಷೇಪಣೆ ಅದೇನೆಂದರೆ ಕೆ.ಆರ್.ಎಸ್ ನಿರ್ಮಾಣವೇ ವಿಶ್ವೇಶ್ವರಯ್ಯನ್ನವರ ಧ್ಯೇಯವಾಗಿದ್ದರೆ ಅವರು ರಾಜೀನಾಮೆ ನೀಡಬಾರದಿತ್ತು! ಕೆ.ಆರ್.ಎಸ್ ಕಟ್ಟಿಯೇ ನಾನು ಹೋಗುವುದು ಎಂದು ಅವರು ಹೇಳಬೇಕಿತ್ತು! ಊಹ್ಞೂಂ, ಅದ್ಯಾವುದೂ ನಡೆದಿಲ್ಲ! ವಿಶ್ವೇಶ್ವರಯ್ಯನವರು ರಾಜೀನಾಮೆ ಇತ್ತು ಹೋದರು ಜಲಾಶಯದ ಕಾಮಗಾರಿ ಅದರ ಪಾಡಿಗೆ ಅದು ನಡೆದಿತ್ತು!

ಈ ನಿಟ್ಟಿನಲಿ ವಿಶ್ವೇಶ್ವರಯ್ಯನವರ ರಾಜೀನಾಮೆಯ ನಂತರ ಅವರು ನಂತರದ ದಿವಾನರುಗಳಿಗೆ ಸಹಾಯಕರಾದದ್ದಾಗಲಿ ಸಲಹೆಗಾರರಾದದ್ದಾಗಲಿ ಎಂಥದ್ದು ಇಲ್ಲ! ಕಡೆ ಪಕ್ಷ ಅಲ್ಲಿ ಗಾರೆ ಕೆಲಸ ಮಾಡುತ್ತಿದ್ದವರಿಗೆ ಮೇಸ್ತ್ರಿಯಾಗಿಯಾದರೂ ಅವರಿದ್ದರೆ? ಉಹ್ಞೂಂ, ಅದೂ ಇಲ್ಲ! ಹಾಗಿದ್ದರೆ ಅದರ ನಿರ್ಮಾಣದ ಶ್ರೇಯಸ್ಸು ಅವರಿಗ್ಹೇಗೆ ಸಂದಿತು ಎಂಬುದು? ಯಾಕೆಂದರೆ ಅವರು ರಾಜೀನಾಮೆ ನೀಡಿದ 14 ವರ್ಷಗಳ ನಂತರ ಅಂದರೆ 1932 ರಲ್ಲಿ ಕಾಮಗಾರಿ ಮುಗಿದದ್ದು. ಅಂದಹಾಗೆ ಅಗಲೂ ಕೂಡ ನಾಲ್ವಡಿಯವರು ರಾಜರಾಗಿ ಮುಂದುವರಿದಿದ್ದರು ಮತ್ತು ತಾವು ಪ್ರಾರಂಭಿಸಿದ ಯೋಜನೆಯನ್ನು ತಾವೇ ತಮ್ಮ ಕೈಯಾರ ಉದ್ಘಾಟಿಸಿದರು.

ದುರಂತವೆಂದರೆ ಅದರ ಶ್ರೇಯಸ್ಸು ಅವರಿಗೆ ಸಲ್ಲಲಿಲ್ಲ! ಅವರ ಕೈ ಕೆಳಗೆ ವೇತನಕ್ಕಾಗಿ ದುಡಿದವರೊಬ್ಬರಿಗೆ ಅದು ಸಂದಿತು! ಸತ್ಯ ಹೀಗಿರುವಾಗ, ಇತಿಹಾಸದಲ್ಲಿ ನಾಲ್ವಡಿಯವರಿಗೆ ಘಟಿಸಿರುವ ಇಂತಹ ಘೋರತೆಗೆ ಯಾರು ಹೊಣೆ? ನಮ್ಮ ಕಣ್ಣೆದುರೇ ಒಬ್ಬ ಶ್ರೇಷ್ಠ ರಾಜನಿಗೆ ಅವನ ಸಾಧನೆಯ ಶ್ರೇಷ್ಠತೆ ಧಕ್ಕಲಿಲ್ಲವೆಂದರೆ? ಹಾಗಿದ್ದರೆ ತನ್ನ ತನು ಮನ ಧನವನ್ನೆಲ್ಲ ಧಾರೆ ಎರೆದು ಆತ ಮಾಡಿದ ತ್ಯಾಗಕ್ಕೆ ಬೆಲೆಯಾದರೂ ಎಲ್ಲಿದೆ? ನಾಲ್ವಡಿಯವರಿಗೆ ಯಾರು ಇಂಥ ದ್ರೋಹ ಎಸಗಿದ್ದು? ವಿಶ್ವೇಶ್ವರಯ್ಯನವರಂತು ಖಂಡಿತ ಅಲ್ಲ. ಕಪೋಲಕಲ್ಪಿತ ಕಥೆ ಕಟ್ಟಿದ ಅವರ ಅನುಯಾಯಿಗಳು. ಹಾಗೆ ಬಂಗಾರ ಮನುಷ್ಯ ಚಿತ್ರದಲ್ಲಿ “ಕಾವೇರಿಯನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮಪಡದಿದ್ದರೆ..” ಎಂಬ ಅಂತಹದ್ದೊಂದು ಆಘಾತಕಾರಿ ಸಾಹಿತ್ಯ ಬರೆಸಿದ ಆ ನಿರ್ಮಾಪಕ ಹಾಗು ಬರೆದ ಆ ಕವಿ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending