Connect with us

ದಿನದ ಸುದ್ದಿ

ಕೆಲವು ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ‘ವಿದ್ಯಾರ್ಥಿ ಪಾಸ್’ ಗಳಿಗೆ ಮಾನ್ಯತೆ ಇಲ್ಲವೆ..?

Published

on

ಸುದ್ದಿದಿನ, ವಿಜಯಪುರ: ಇಂಡಿ ತಾ‌ಲ್ಲೂಕಿನ ಹೀರೆರೂಗಿ, ಬೊಳೆಗಾವಂ, ತಡವ್ಲಗಾ, ಗುಂಡುತಾಂಡಾ, ಅಥರ್ಗಾ, ನಾಗಠಾಣ, ಹಾಗೂ ಅಲೀಯಾಬಾದದ ವಿದ್ಯಾರ್ಥಿಗಳು, ಜೀಲ್ಲಾ ಮಟ್ಟದಲ್ಲಿ ಉನ್ನತ ಗುಣಮಟ್ಟದ ವಿದ್ಯಾಭ್ಯಾಸ ಮಾಡಬೇಕೆಂದು ಬಯಸುವವರು ಪ್ರತಿದಿನದ ರೊದನೆ ಅನುಭವಿಸುವಂತಾಗಿದೆ.

ನಮ್ಮ ಘನ ಸರ್ಕಾರ ವಿದ್ಯಾರ್ಥಿಗಳಿಗಾಗಿಯೆ ವಿಶೇಷ ಕ್ರಮಗಳನ್ನು ಜಾರಿಗೆಗೊಳ್ಳಿಸುತ್ತಿದೆ. ವಿದ್ಯಾರ್ಥಿಗಳು ದೂರದ ಶಾಲಾ-ಕಾಲೇಜಿಗೆ ಹೋಗಿ ತಮ್ಮ ಶಿಕ್ಷಣವನ್ನು ಮುಂದುವರಿಬೇಕೆಂದು ಕಡಿಮೆ ದರದಲ್ಲಿ ವಿದ್ಯಾರ್ಥಿಪಾಸ್ ಗಳನ್ನು ಕಲ್ಪಿಸ ಬೇಕೆಂದು ಆದೇಶ ನೀಡಿದೆ, ವಿದ್ಯಾರ್ಥಿ ಪಾಸ್ ಎಲ್ಲ ಬಸ್ ಗಳಲ್ಲಿ ಅನುಮತಿ ಇದೆ ಎಂದು ಹೇಳಿದೆ. ಆದರೆ ಇಂಡಿ ವಿಜಯಪುರ ಮಾರ್ಗವಾಗಿ ಸಂಚರಿಸುವ ಏಷ್ಟೊ ಬಸ್ಗಳಲ್ಲಿ ವಿದ್ಯಾರ್ಥಿ ಪಾಸ್ ಗಳಿಗೆ ಅನುಮತಿ ಇಲ್ಲ.

ಯಾಕೆಂದರೆ ಬಸ್ ಗಳಲ್ಲಿ ಭೀಮಾ ಸಾರಿಗೆ (ವಿದ್ಯಾರ್ಥಿಗಳ ಪಾಸಿಗೆ ಅನುಮತಿ ಇಲ್ಲ) ಎನ್ನುವ ನಾಮಫಲಕಗಳೆ ರಾರಾಜಿಸುತ್ತಿವೆ. ಇದರ ವಿಷಯವಾಗಿ ಬಸ್ ನಿರ್ವಾಹರನ್ನು ವಿಚಾರಿಸಿದರೆ ಕೇಲವರು ಎಲ್ಲಾ ಬಸ್ ಗಳಲ್ಲಿವು ವಿದ್ಯಾರ್ಥಿಪಾಸ್ ಗ‍ಳಿಗೆ ಅನುಮತಿ ಇವೆ ಅಂದರೆ, ಇನ್ನೂ ಕೇಲವರು ವ್ಯಂಗ್ಯವಾಗಿ ಮಾತನಾಡಿ, ಅಸಭ್ಯವಾಗಿ ವರ್ತಿಸುತ್ತಾರೆ, ಸ್ವತಃ ಚಕರ್ ಹೇಳಿರುವ ಹೇಳಿಕೆ ಇದು. ತೆರಿಗೆ ಕಟ್ಟಬೇಕು ಆದ ಕಾರಣ ಭೀಮಾ ಸಾರಿಗೆ ನಾಮ‍ಫಲಕಗಳನ್ನು ಹಾಕಿದ್ದೇವೆ ಅಂದರು.

ಅದಕ್ಕೆ ವಿದ್ಯಾರ್ಥಿಗಳು 103,ಮತ್ತು105 ಎರಡೆ ಬಸ್ ಗಳಿಗೆ ಮಾತ್ರ ಪಾಸ್ ಅನುಮತಿ ಇಲ್ಲ ಅಂತ ಗೋತ್ತು, ಆದರು ಬೇರೆ ಬಸ್ ಗಳಿಗೆ ಭೀಮಾ ಸಾರಿಗೆ ಎಂಬ ನಾಮಫಲಕಗಳು ಯಾಕೆ ಅಂತ ವಿದ್ಯಾರ್ಥಿಗಳು ಪ್ರಶ್ನೇ ಮಾಡಿದರೆ, ಅದಕ್ಕೆ ನೀವು ವಿದ್ಯಾರ್ಥಿಗಳು ಓದುವದನ್ನು ಮೋದಲು ಮಾಡಿ ಅದನ್ನು ಬಿಟ್ಟು ಬೇರೆ ಕೆಲಸ ಮಾಡ ಬೇಡಿ, ನಮ್ಮ ಕೆಲಸ ನಮಗೆ ತಿಳಿದಿದೆ ನೀವು ಹೇಳುವ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯವಾಗಿ ಚಕರ್ ಮಾತನಾಡಿದರು.

ಚಕರ್ ಹೀಗೆ ಮಾತನಾಡಿದರು ಅಂತ ಕೇಂದ್ರ ಬಸ್ ನಿಲ್ದಾಣದ ಅಧೀಕಾರಿಯಾದ ಬಿಸ್ನಾಳರಿಗೆ ತಿಳಿಸಿದರೆ, ವಿದ್ಯಾರ್ಥಿ ಪಾಸ್ ಗಳು ಎಲ್ಲ ಬಸ್ ಗ‍ಳಿಗು ಅನುಮತಿ ಇದೆ, ಯಾರು ಅನುಮತಿ ಇಲ್ಲ ಅನ್ನುವರೋ ಅವರನ್ನು ಬಸ್ ನ ಜೋತೆಗೆ ಕರೆದುಕೊಂಡು ಹೋಗಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿರಿ ಎಂದು ಅವರು ಹೇಳುತ್ತಾರೆ. ದೂರು ದಾಖಲಿಸುವುದು ದೊಡ್ಡಸ್ಥೀಕೆ ಅಲ್ಲ. ಅದರಲ್ಲು ಹಳ್ಳಿಯ ಜನರು ಕೇಸು, ಕೋರ್ಟುಗಳಿಗೆಲ್ಲ ಭಯಪಡುತ್ತಾರೆ. ಆದ ಕಾರಣ ಯಾರು ಏನು ಹೇಳುತ್ತಿಲ್ಲ. ವಿದ್ಯಾರ್ಥಿಗಳು ಕೇಳಿದರೆ ವ್ಯಂಗ್ಯವಾಗಿ, ಅಸಬ್ಯವಾಗಿ ವರ್ತಿಸುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳು ಬೇಸತ್ತಿದ್ದಾರೆ.

ಪ್ರತಿ ದಿನವು 9ಗಂಟೆಗೆಲ್ಲ ಶಾಲಾ-ಕಾಲೇಜಿನಲ್ಲಿ ಇ‍ರಬೇಕು, ಇಲ್ಲವಾದರೆ ಶಾಲೆ-ಕಾಲೇಜುಗಳಲ್ಲಿ ಗುರುಗಳ ಕಡೆಯಿಂದ ಬೈಯಿಸಿಕೊಳ್ಳ ಬೇಕು, ಅವರು ಕೋಡುವ ಶಿಕ್ಷೆನಾ ಅನುಭವಿಸ ಬೇಕು.ಕೇಲವೊಂದು ದಿನ ಪರೀಕ್ಷೆಗಳು, ಶಾಲಾ-ಕಾಲೇಜುಗಳಲ್ಲಿ ಪ್ರಮುಖವಾದ ಕಾರ್ಯಕ್ರಮಗಳು, ಹಾಗೂ ವಿಶೇಷವಾದ ತರಗತಿಗಳು ಇರುತ್ತವೆ. ತಡವಾಗಿ ಹೋಗಬೇಕಾಗುತ್ತದೆ. ಹೀಗೆ ಮಾಡಿದರೆ ಅವುಗಳಿಂದ ಹಿಂದೆ ಉಳಿಯ ಬೇಕಾಗುತ್ತದೆ.

ಆದ ಕಾರಣ ನಮ್ಮ ವಿಜಯಪುರ ಜಿಲ್ಲೆಯ ಮಾನ್ಯ ಜೀಲ್ಲಾಧೀಕಾರಿಗಳು ವಿದ್ಯಾರ್ಥಿಗಳ ಮೇಲೆ ಪ್ರೀತಿ, ಕಾಳಜಿ, ಧಯೆ, ಕರುಣೆ ಇಟ್ಟು, ವಿದ್ಯಾರ್ಥಿಗಳಿಗೆ ತೋಂದರೆ, ಮೋಸ ಆಗದಂತೆ ಸರಿಯಾದ ರೀತಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳ ಬೇಕಾಗಿ ಕಳಕಳಿಯಿಂದ ಇಂಡಿ ತಾಲ್ಲೂಕು ಹಾಗೂ ಇಂಡಿ ತಾಲ್ಲೂಕಿನ ಹೀರೆರೂಗಿ, ಬೊಳೆಗಾವಂ, ತಡವ್ಲಗಾ, ಗುಂಡುತಾಂಡಾ, ಅಥರ್ಗಾ, ನಾಗಠಾಣ, ಹಾಗೂ ಅಲೀಯಾಬಾದ ಗ್ರಾಮದ ಮಾರ್ವಗವಾಗಿ ಸಂಚರಿಸುವ ಎಲ್ಲಾ ವಿದ್ಯಾರ್ಥಿಗಳು ಕೇಳಿಕೊಳ್ಳುತ್ತಿದ್ದಾರೆ.

ಹೇಳಿಕೆಗಳು

“ನಾನು ಅಥರ್ಗಾ ಗ್ರಾಮದ ವಿದ್ಯಾರ್ಥಿನಿ ನಾನು ಪಿ.ಯು.ಸಿಯಿಂದನು ಅಂದರೆ ಸತತವಾಗಿ 4ವರ್ಷಗಳಿಂದಾನು ಅಥರ್ಗಾ ವಿಜಯಪುರದ ಮಾರ್ಗವಾಗಿ ಸಂಚರಿಸುತ್ತಿದ್ದೆನೆ ಪ್ರತಿ ದಿನವು ಇದೆ ರೀತಿಯ ಗೋಳ್ಳಾಟ ನಡೆದಿದೆ. ಪ್ರತಿ ದಿನ ಬೆಳ್ಳಗೆ 6ರಿಂದ 7:30 ರ ವರೆಗೆ ಮಾತ್ರ ಬಿಡುವಿಲ್ಲದ ಹಾಗೆ ಭೀಮಾಸಾರಿಗೆ ನಾಮಫಲಕಗಳು ರಹಿತ ಬಸ್ ಗಳು ಸಂಚರಿಸುತ್ತವೆ. ಕೇಲವು ಬಾರಿ ಸ್ವಲ್ಪ ತಡಮಾಡಿದರೆ 7:30ರ ಬಸ್ ಹೋರಟು ಹೋಗಿರುತ್ತದೆ. ನಂತರ 7:30 ರಿಂ‍ದ 8:15 ವರೆಗೆ ಬಸ್ ಗಳಿಲ್ಲ. ಇದ್ದರು ಸತತವಾಗಿ 3 ಬಸ್ ಗಳು ಭೀಮಾ ಸಾರಿಗೆ ನಾಮಫಲಕಗಳೊಂದಿಗೆ ಬರುತ್ತವೆ. ಆದ್ದ ಕಾರಣ ಇದಕ್ಕೆ ಸಂಭಂದ ಪಟ್ಟ ಅಧೀಕಾರಿಗಳು ಅಥವಾ ಮಾನ್ಯ ಜೀಲ್ಲಾಧೀಕಾರಿಗಳು ಈ ಸಮಸ್ಯೆಯನ್ನು ಬಗೆ ಹರಿಸುತ್ತಾರೆ ಎಂದು ನಂಬಿದ್ದೇವೆ.

|ಅಥರ್ಗಾ ಗ್ರಾಮದ ನೊಂದ ವಿದ್ಯಾರ್ಥಿನಿ

“ನಮ್ಮ ಮಗಳು ಶಿಕ್ಷಣಕ್ಕಾಗಿ ಇಂಡಿಗೆ ಹೋಗುತ್ತಾಳೆ. ಕೇಲವು ದಿನಗಳ ಹಿಂದೆ ಶಾಲೆಯಿಂದ ಮರಳಿ ಬರುವಾಗ ಗೋತ್ತಿಲ್ಲದೆ ಭೀಮಾ ಸಾರಿಗೆ ಎರಿದ್ದಳು, ಎರುವಾಗ ಸುಮ್ಮನಿದ್ದ ನಿರ್ವಾಹಕ ರಸ್ತೆಯ ಮಧ್ಯದಲ್ಲಿ ಇಳಿಸಿದರು. ಆ ದಿನ ರಸ್ತೆ ಮಧ್ಯದಲ್ಲಿ ಇಳಿಸಿದಕ್ಕಾಗಿ ಮತ್ತೆ ನಡೆದು ಕೊಂ‍ಡು ಇಂಡಿಗೆ ಹೋಗಿ ಬೇರೆ ಬಸ್ ಹಿಡಿದು ಬರಬೇಕಾದರೆ ರಾತ್ರೆ 8:30 –ಕ್ಕೂ ಅಧಿಕ ಸಮಸವಾಗಿತ್ತು. ನಂತರ ಮರುದಿನ ಇಂಡಿ ಡೀಪುಗೆ ಹೋಗಿ ವಿಚಾರಣೆ ಮಾಡಿದೆವು. ಅಂದಿನಿಂದ ನಮ್ಮ ಮಗಳು ವಿದ್ಯಾರ್ಥಿಗಳ ನಿಲಯದಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

  |ಅಥರ್ಗಾ ಗ್ರಾಮದ ಪೋಷಕರು

ಕಾಂಚನಾ. ಬಸವರಾಜ. ಪೂಜಾರಿ
ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿ
ಪತ್ರಿಕೊಧ್ಯಮ ಮತ್ತು ಸಮೂಹ ಸಂವಹನ ವಿಭಾಗ
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ತೊರವಿ, ವಿಜಯಪುರ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ7 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ1 day ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ2 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ2 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ3 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ6 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ6 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ7 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending