Connect with us

ರಾಜಕೀಯ

ಕುಂದಗೋಳ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೋಟ

Published

on

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರ ಉತ್ತಮವಾದ ಕೃಷಿಭೂಮಿ ಹಾಗೂ ಒಕ್ಕಲುತನಕ್ಕೆಹೆಸರುವಾಸಿಯಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ರಂಗಭೂಮಿಗೆ ಈ ತಾಲೂಕು ಅನೇಕ ಹೆಮ್ಮೆಯ ಪ್ರತಿಭೆಗಳನ್ನು ನೀಡಿದೆ. ಇಲ್ಲಿ ಬೆಳೆಯುವ ಕೆಂಪು ಮೆಣಸಿನಕಾಯಿಯು ಮಾರುಕಟ್ಟೆಯಲ್ಲಿ ಪ್ರಸಿದ್ಧಿಗಳಿಸಿದೆ. ಈ ತಾಲೂಕಿನ ಕಮಡೊಳ್ಳಿ ಗ್ರಾಮದ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.

ವಿಧಾನಸಭಾ ಕ್ಷೇತ್ರ

1957 ರಿಂದಲೂ ಕುಂದಗೋಳ ವಿಧಾನಸಭಾ ಕ್ಷೇತ್ರ ಅಸ್ತಿತ್ವದಲ್ಲಿದೆ. ಈ ಮೊದಲು 179-ಕುಂದಗೋಳ ವಿಧಾನಸಭಾ ಕ್ಷೇತ್ರವೆಂದು ಗುರುತಿಸಲ್ಪಡುತ್ತಿದ್ದ ಈ ಕ್ಷೇತ್ರ ,2008 ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ಬಳಿಕ 70-ಕುಂದಗೋಳ ವಿಧಾನಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದೆ. ಕುಂದಗೋಳ ತಾಲೂಕು ಹಾಗೂ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಮತ್ತು ಛಬ್ಬಿ ಕಂದಾಯ ವೃತ್ತಗಳನ್ನು ಈ ಕ್ಷೇತ್ರ ಒಳಗೊಂಡಿದೆ. ಇದುವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆ.

1,89,281 ಮತದಾರರು: ಕಳೆದ ಏಪ್ರಿಲ್‌ 16,2019 ರಂದು ಪ್ರಕಟಿಸಿರುವಂತೆ ಈ ಕ್ಷೇತ್ರದಲ್ಲಿ 97,457 ಪುರುಷ , 91,820 ಮಹಿಳೆಯರು ಹಾಗೂ 04 ತೃತೀಯ ಲಿಂಗಿಗಳು ಸೇರಿ ಒಟ್ಟು 1,89,281 ಮತದಾರರಿದ್ದಾರೆ. 214 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.

ಚುನಾವಣಾ ಹಿನ್ನೋಟ

1957ರ ಮೊದಲ ಚುನಾವಣೆಯಲ್ಲಿ ಒಟ್ಟು 46,912 ಮತದಾರರಿದ್ದರು. 29,277 ಮತದಾರರು ತಮ್ಮ ಹಕ್ಕು ಚಳಾಯಿಸಿದ್ದರು.ಶೇ.62.38 ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಟಿ.ಕೆ. ಕಾಂಬಳಿ 15,819 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿ ಕೆ.ಆರ್. ನಾಡಗೇರ 13,458 ಮತಗಳನ್ನು ಪಡೆದುಕೊಂಡಿದ್ದರು.

1962ರ ಚುನಾವಣೆಯಲ್ಲಿ ಒಟ್ಟು 51,904 ಮತದಾರರಿದ್ದರು. 32,530 ಮತದಾನವಾಗಿ,ಶೇ.62.67 ದಾಖಲಾಗಿತ್ತು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ನ ಟಿ.ಕೆ. ಕಾಂಬಳಿ 13,265 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು. ಎಸ್.ಆರ್. ಬೊಮ್ಮಾಯಿ 11,465 ಮತಗಳು ಹಾಗೂ ಸಿ.ಎಸ್. ಶಿಗ್ಗಾಂವಿ 5,315 ಮತಗಳನ್ನು ಪಡೆದುಕೊಂಡಿದ್ದರು.

1967ರ ಚುನಾವಣೆಯಲ್ಲಿ ಒಟ್ಟು 49,906 ಮತದಾರರಿದ್ದರು. 34,252 ಮತದಾರರು ಮತದಾನ ಮಾಡಿದ್ದರು. ಶೇ. 68.63 ಮತದಾನ ಪ್ರಮಾಣವಾಗಿತ್ತು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷೇತರ ಅಭ್ಯರ್ಥಿ ಎಸ್.ಆರ್. ಬೊಮ್ಮಾಯಿ 20,291 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕಾಂಗ್ರೆಸ್ ಪಕ್ಷದ ಟಿ.ಕೆ. ಕಾಂಬಳಿ 9,371 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ ಸಿ.ಎಚ್. ಪಾಟೀಲ 2,439 ಮತಗಳನ್ನು ಪಡೆದುಕೊಂಡಿದ್ದರು.

1972ರ ಚುನಾವಣೆಯಲ್ಲಿ ಒಟ್ಟು 55,798 ಮತದಾರರಿದ್ದರು, 43,994 ಮತದಾನವಾಗಿ ಶೇ.79.10 ದಾಖಲಾಗಿತ್ತು. ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ನ ಆರ್.ವಿ. ರಂಗನಗೌಡ 25,694 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಎನ್.ಸಿ.ಓ ಪಕ್ಷದ ಎಸ್.ಆರ್. ಬೊಮ್ಮಾಯಿ 16,659 ಮತಗಳನ್ನು ಪಡೆದುಕೊಂಡಿದ್ದರು.

1978ರ ಚುನಾವಣೆಯಲ್ಲಿ ಒಟ್ಟು 76,427 ಮತದಾರರಿದ್ದರು.59,186 ಮತದಾನವಾಗಿತ್ತು ಅಂದರೆ ಶೇ.77.44 ರಷ್ಟು ಪ್ರಮಾಣದಲ್ಲಿ ಮತಚಲಾವಣೆಯಾಗಿತ್ತು. ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ನ ಎಮ್.ಎಸ್. ಕಟಗಿ 34,761 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿಯಾದ ಡಿ.ಎಚ್ ಮುನೀರ 16,884 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಯಾದ ಎಲ್.ಬಿ. ಉಮಚಗಿ 2,385 ಮತಗಳನ್ನು ಪಡೆದುಕೊಂಡಿದ್ದರು.

1983ರ ಚುನಾವಣೆಯಲ್ಲಿ ಒಟ್ಟು 81,454 ಮತದಾರರಿದ್ದರು. ಶೇ.67.19 ರಷ್ಟು ಅಂದರೆ 54,727 ಮತದಾನವಾಗಿತ್ತು. 5 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಕುಬಿಹಾಳ 28,848 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಜೆಎನ್‌ಪಿಯ ಎಸ್.ಆರ್. ಮುಲ್ಕಿಪಾಟೀಲ 22,489 ಮತಗಳು ಹಾಗು ಪಕ್ಷೇತರ ಅಭ್ಯರ್ಥಿ ಪಿ.ವಿ. ಪಾಟೀಲ 830 ಮತಗಳನ್ನು ಪಡೆದುಕೊಂಡಿದ್ದರು.

1985ರ ಚುನಾವಣೆಯಲ್ಲಿ ಒಟ್ಟು 87,286 ಮತದಾರರಿದ್ದರು. ಪ್ರತಿಶತ 74.91 ರಷ್ಟು ಅಂದರೆ 65,386 ಮತದಾನವಾಗಿತ್ತು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಜನತಾಪಕ್ಷದ ಅಭ್ಯರ್ಥಿ ಬಿ.ಎ. ಉಪ್ಪಿನ 28,038 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ವಿ.ಎಸ್.ಕುಬಿಹಾಳ 21.578 ಮತಗಳನ್ನು ,ಪಕ್ಷೇತರ ಅಭ್ಯರ್ಥಿ ಗುಡಗೇರಿ ಎನ್.ಬಸವರಾಜ 12,754 ಮತಗಳನ್ನು ಪಡೆದುಕೊಂಡಿದ್ದರು.

1989ರ ಚುನಾವಣೆಯಲ್ಲಿ ಒಟ್ಟು 1,07,633 ಮತದಾರರಿದ್ದರು.ಶೇ.70.82 ರಷ್ಟು ಅಂದರೆ 76,229 ಜನ ಮತ ಚಲಾಯಿಸಿದ್ದರು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಗೋವಿಂದಪ್ಪ.ಎಚ್.ಜುಟ್ಟಲ 36,925 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಜನತಾದಳದ ಆರ್.ವಿ. ದೇಸಾಯಿ 31,404 ಮತಗಳು ಹಾಗೂ ಜನತಾಪಕ್ಷದ ಡಿ.ತಿಪ್ಪಣ್ಣವರ 1,652 ಮತಗಳನ್ನು ಪಡೆದುಕೊಂಡಿದ್ದರು.

1994ರ ಚುನಾವಣೆಯಲ್ಲಿ ಒಟ್ಟು 1,13,022 ಮತದಾರರಿದ್ದರು.ಶೇ.71.85 ಅಂದರೆ 80,410 ಜನ ಮತ ಚಲಾಯಿಸಿದ್ದರು. 12 ಅಭ್ಯರ್ಥಿಗಳು ಕಣದಲ್ಲಿದ್ದರು. ಜನತಾದಳದ ಎಂ.ಎಸ್. ಅಕ್ಕಿ 32,707 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕೆಸಿಪಿಯ ಸಿ.ಎಸ್. ಶಿವಳ್ಳಿ 19,320 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಜಿ.ಎಚ್. ಜುಟ್ಟಲ 17,034 ಮತಗಳನ್ನು ಪಡೆದುಕೊಂಡಿದ್ದರು.

1999 ರ ಚುನಾವಣೆಯಲ್ಲಿ ಒಟ್ಟು 1,25,817 ಮತದಾರರಿದ್ದರು.ಶೇ.74 ರಷ್ಟು ಅಂದರೆ 93,716 ಮತದಾನವಾಗಿತ್ತು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷೇತರ ಅಭ್ಯರ್ಥಿ ಸಿ.ಎಸ್. ಶಿವಳ್ಳಿ 30,692 ಮತಗಳನ್ನು ಪಡೆದು ಮೊದಲಬಾರಿಗೆ ಜಯಶೀಲರಾಗಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಅಕ್ಕಿ ಮಲ್ಲಿಕಾರ್ಜುನ ಸಹದೇವಪ್ಪ 20,184 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಜುಟ್ಟಲ ಗೋವಿಂದಪ್ಪ ಹನುಮಂತಪ್ಪ 18,278 ಮತಗಳನ್ನು ಪಡೆದುಕೊಂಡಿದ್ದರು.

2004 ರ ಚುನಾವಣೆಯಲ್ಲಿ ಒಟ್ಟು 1,38,605 ಮತದಾರರಿದ್ದರು. ಶೇ.69.01 ರಷ್ಟು ಅಂದರೆ 95,653 ಮತದಾನವಾಗಿತ್ತು. ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಎಮ್.ಎಸ್.ಅಕ್ಕಿ 28,184 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 23,942 ಮತಗಳು ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅರವಿಂದ.ಎಮ್.ಕಟಗಿ 12,110 ಮತಗಳನ್ನು ಪಡೆದುಕೊಂಡಿದ್ದರು.

2008ರ ವಿಧಾನ ಸಭಾ ಚುನಾವಣೆಯಲ್ಲಿ ಒಟ್ಟು 1,55,099 ಮತದಾರರಿದ್ದರು. ಶೇ. 71.54 ರಷ್ಟು ಅಂದರೆ 1,10,868 ಮತದಾನವಾಗಿತ್ತು. ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 43,307 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 36,931 ಮತಗಳು ಹಾಗೂ ಜೆ.ಡಿ.ಎಸ್.ಅಭ್ಯರ್ಥಿ ಪಿ.ಸಿ.ಸಿದ್ದನಗೌಡರ್ 19,077 ಮತಗಳನ್ನು ಪಡೆದುಕೊಂಡಿದ್ದರು.

2013ರ ಚುನಾವಣೆಯಲ್ಲಿ ಒಟ್ಟು 1,68,831 ಮತದಾರರಿದ್ದರು. ಶೇ.76.71 ರಷ್ಟು ಅಂದರೆ 1,29,088 ಮತದಾನವಾಗಿತ್ತು. ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 52,690 ಮತಗಳನ್ನು ಪಡೆದುಕೊಂಡು ಎರಡನೇ ಬಾರಿ ಚುನಾಯಿತರಾಗಿದ್ದರು. ಕೆಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 31,618 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಆರ್.ಫಾಟೀಲ 23,641 ಮತಗಳನ್ನು ಪಡೆದುಕೊಂಡಿದ್ದರು.

2018ರ ಚುನಾವಣೆಯಲ್ಲಿ ಒಟ್ಟು 1,87,513 ಮತದಾರರಿದ್ದರು. ಶೇ.78.67 ರಷ್ಟು ಅಂದರೆ 1,47,524 ಮತದಾನವಾಗಿತ್ತು. ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 64,871 ಮತಗಳನ್ನು ಪಡೆದುಕೊಂಡು ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಬಿಜೆಪಿಯ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 64,237 ಮತಗಳು, ಜೆಡಿಯುನ ಹಜರತ ಅಲಿ ಶೇಖ್ ಜೋಡಮನಿ 7,318 ಮತಗಳು ಹಾಗೂ ಜೆಡಿಎಸ್‌ನ ಅಕ್ಕಿ ಮಲ್ಲಿಕಾರ್ಜುನ ಸಹದೇವಪ್ಪ 6,280 ಮತಗಳನ್ನು ಪಡೆದುಕೊಂಡಿದ್ದರು.

2018 ರಲ್ಲಿ ಈ ಕ್ಷೇತ್ರದಿಂದ ಚುನಾಯಿತರಾಗಿದ್ದ ರಾಜ್ಯದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಕಳೆದ ಮಾರ್ಚ 22 ರಂದು ಅಕಾಲಿಕವಾಗಿ ನಿಧನರಾದ ಪರಿಣಾಮ, ಬರುವ ಮೇ.19,2019 ರಂದು ಉಪಚುನಾವಣೆ ನಡೆಯುತ್ತಿದೆ.

ಮಂಜುನಾಥ ಡಿ.ಡೊಳ್ಳಿನ
ಹಿರಿಯ ಸಹಾಯಕ ನಿರ್ದೇಶಕರು
ರಾಜ್ಯ ಸಮಾಚಾರ ಕೇಂದ್ರ, ಹುಬ್ಬಳ್ಳಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ3 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ4 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ4 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ1 week ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ2 weeks ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending