Connect with us

ರಾಜಕೀಯ

ಕುಂದಗೋಳ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೋಟ

Published

on

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರ ಉತ್ತಮವಾದ ಕೃಷಿಭೂಮಿ ಹಾಗೂ ಒಕ್ಕಲುತನಕ್ಕೆಹೆಸರುವಾಸಿಯಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ರಂಗಭೂಮಿಗೆ ಈ ತಾಲೂಕು ಅನೇಕ ಹೆಮ್ಮೆಯ ಪ್ರತಿಭೆಗಳನ್ನು ನೀಡಿದೆ. ಇಲ್ಲಿ ಬೆಳೆಯುವ ಕೆಂಪು ಮೆಣಸಿನಕಾಯಿಯು ಮಾರುಕಟ್ಟೆಯಲ್ಲಿ ಪ್ರಸಿದ್ಧಿಗಳಿಸಿದೆ. ಈ ತಾಲೂಕಿನ ಕಮಡೊಳ್ಳಿ ಗ್ರಾಮದ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.

ವಿಧಾನಸಭಾ ಕ್ಷೇತ್ರ

1957 ರಿಂದಲೂ ಕುಂದಗೋಳ ವಿಧಾನಸಭಾ ಕ್ಷೇತ್ರ ಅಸ್ತಿತ್ವದಲ್ಲಿದೆ. ಈ ಮೊದಲು 179-ಕುಂದಗೋಳ ವಿಧಾನಸಭಾ ಕ್ಷೇತ್ರವೆಂದು ಗುರುತಿಸಲ್ಪಡುತ್ತಿದ್ದ ಈ ಕ್ಷೇತ್ರ ,2008 ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ಬಳಿಕ 70-ಕುಂದಗೋಳ ವಿಧಾನಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದೆ. ಕುಂದಗೋಳ ತಾಲೂಕು ಹಾಗೂ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಮತ್ತು ಛಬ್ಬಿ ಕಂದಾಯ ವೃತ್ತಗಳನ್ನು ಈ ಕ್ಷೇತ್ರ ಒಳಗೊಂಡಿದೆ. ಇದುವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆ.

1,89,281 ಮತದಾರರು: ಕಳೆದ ಏಪ್ರಿಲ್‌ 16,2019 ರಂದು ಪ್ರಕಟಿಸಿರುವಂತೆ ಈ ಕ್ಷೇತ್ರದಲ್ಲಿ 97,457 ಪುರುಷ , 91,820 ಮಹಿಳೆಯರು ಹಾಗೂ 04 ತೃತೀಯ ಲಿಂಗಿಗಳು ಸೇರಿ ಒಟ್ಟು 1,89,281 ಮತದಾರರಿದ್ದಾರೆ. 214 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.

ಚುನಾವಣಾ ಹಿನ್ನೋಟ

1957ರ ಮೊದಲ ಚುನಾವಣೆಯಲ್ಲಿ ಒಟ್ಟು 46,912 ಮತದಾರರಿದ್ದರು. 29,277 ಮತದಾರರು ತಮ್ಮ ಹಕ್ಕು ಚಳಾಯಿಸಿದ್ದರು.ಶೇ.62.38 ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಟಿ.ಕೆ. ಕಾಂಬಳಿ 15,819 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿ ಕೆ.ಆರ್. ನಾಡಗೇರ 13,458 ಮತಗಳನ್ನು ಪಡೆದುಕೊಂಡಿದ್ದರು.

1962ರ ಚುನಾವಣೆಯಲ್ಲಿ ಒಟ್ಟು 51,904 ಮತದಾರರಿದ್ದರು. 32,530 ಮತದಾನವಾಗಿ,ಶೇ.62.67 ದಾಖಲಾಗಿತ್ತು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ನ ಟಿ.ಕೆ. ಕಾಂಬಳಿ 13,265 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು. ಎಸ್.ಆರ್. ಬೊಮ್ಮಾಯಿ 11,465 ಮತಗಳು ಹಾಗೂ ಸಿ.ಎಸ್. ಶಿಗ್ಗಾಂವಿ 5,315 ಮತಗಳನ್ನು ಪಡೆದುಕೊಂಡಿದ್ದರು.

1967ರ ಚುನಾವಣೆಯಲ್ಲಿ ಒಟ್ಟು 49,906 ಮತದಾರರಿದ್ದರು. 34,252 ಮತದಾರರು ಮತದಾನ ಮಾಡಿದ್ದರು. ಶೇ. 68.63 ಮತದಾನ ಪ್ರಮಾಣವಾಗಿತ್ತು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷೇತರ ಅಭ್ಯರ್ಥಿ ಎಸ್.ಆರ್. ಬೊಮ್ಮಾಯಿ 20,291 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕಾಂಗ್ರೆಸ್ ಪಕ್ಷದ ಟಿ.ಕೆ. ಕಾಂಬಳಿ 9,371 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ ಸಿ.ಎಚ್. ಪಾಟೀಲ 2,439 ಮತಗಳನ್ನು ಪಡೆದುಕೊಂಡಿದ್ದರು.

1972ರ ಚುನಾವಣೆಯಲ್ಲಿ ಒಟ್ಟು 55,798 ಮತದಾರರಿದ್ದರು, 43,994 ಮತದಾನವಾಗಿ ಶೇ.79.10 ದಾಖಲಾಗಿತ್ತು. ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ನ ಆರ್.ವಿ. ರಂಗನಗೌಡ 25,694 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಎನ್.ಸಿ.ಓ ಪಕ್ಷದ ಎಸ್.ಆರ್. ಬೊಮ್ಮಾಯಿ 16,659 ಮತಗಳನ್ನು ಪಡೆದುಕೊಂಡಿದ್ದರು.

1978ರ ಚುನಾವಣೆಯಲ್ಲಿ ಒಟ್ಟು 76,427 ಮತದಾರರಿದ್ದರು.59,186 ಮತದಾನವಾಗಿತ್ತು ಅಂದರೆ ಶೇ.77.44 ರಷ್ಟು ಪ್ರಮಾಣದಲ್ಲಿ ಮತಚಲಾವಣೆಯಾಗಿತ್ತು. ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ನ ಎಮ್.ಎಸ್. ಕಟಗಿ 34,761 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿಯಾದ ಡಿ.ಎಚ್ ಮುನೀರ 16,884 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಯಾದ ಎಲ್.ಬಿ. ಉಮಚಗಿ 2,385 ಮತಗಳನ್ನು ಪಡೆದುಕೊಂಡಿದ್ದರು.

1983ರ ಚುನಾವಣೆಯಲ್ಲಿ ಒಟ್ಟು 81,454 ಮತದಾರರಿದ್ದರು. ಶೇ.67.19 ರಷ್ಟು ಅಂದರೆ 54,727 ಮತದಾನವಾಗಿತ್ತು. 5 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಕುಬಿಹಾಳ 28,848 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಜೆಎನ್‌ಪಿಯ ಎಸ್.ಆರ್. ಮುಲ್ಕಿಪಾಟೀಲ 22,489 ಮತಗಳು ಹಾಗು ಪಕ್ಷೇತರ ಅಭ್ಯರ್ಥಿ ಪಿ.ವಿ. ಪಾಟೀಲ 830 ಮತಗಳನ್ನು ಪಡೆದುಕೊಂಡಿದ್ದರು.

1985ರ ಚುನಾವಣೆಯಲ್ಲಿ ಒಟ್ಟು 87,286 ಮತದಾರರಿದ್ದರು. ಪ್ರತಿಶತ 74.91 ರಷ್ಟು ಅಂದರೆ 65,386 ಮತದಾನವಾಗಿತ್ತು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಜನತಾಪಕ್ಷದ ಅಭ್ಯರ್ಥಿ ಬಿ.ಎ. ಉಪ್ಪಿನ 28,038 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ವಿ.ಎಸ್.ಕುಬಿಹಾಳ 21.578 ಮತಗಳನ್ನು ,ಪಕ್ಷೇತರ ಅಭ್ಯರ್ಥಿ ಗುಡಗೇರಿ ಎನ್.ಬಸವರಾಜ 12,754 ಮತಗಳನ್ನು ಪಡೆದುಕೊಂಡಿದ್ದರು.

1989ರ ಚುನಾವಣೆಯಲ್ಲಿ ಒಟ್ಟು 1,07,633 ಮತದಾರರಿದ್ದರು.ಶೇ.70.82 ರಷ್ಟು ಅಂದರೆ 76,229 ಜನ ಮತ ಚಲಾಯಿಸಿದ್ದರು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಗೋವಿಂದಪ್ಪ.ಎಚ್.ಜುಟ್ಟಲ 36,925 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಜನತಾದಳದ ಆರ್.ವಿ. ದೇಸಾಯಿ 31,404 ಮತಗಳು ಹಾಗೂ ಜನತಾಪಕ್ಷದ ಡಿ.ತಿಪ್ಪಣ್ಣವರ 1,652 ಮತಗಳನ್ನು ಪಡೆದುಕೊಂಡಿದ್ದರು.

1994ರ ಚುನಾವಣೆಯಲ್ಲಿ ಒಟ್ಟು 1,13,022 ಮತದಾರರಿದ್ದರು.ಶೇ.71.85 ಅಂದರೆ 80,410 ಜನ ಮತ ಚಲಾಯಿಸಿದ್ದರು. 12 ಅಭ್ಯರ್ಥಿಗಳು ಕಣದಲ್ಲಿದ್ದರು. ಜನತಾದಳದ ಎಂ.ಎಸ್. ಅಕ್ಕಿ 32,707 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕೆಸಿಪಿಯ ಸಿ.ಎಸ್. ಶಿವಳ್ಳಿ 19,320 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಜಿ.ಎಚ್. ಜುಟ್ಟಲ 17,034 ಮತಗಳನ್ನು ಪಡೆದುಕೊಂಡಿದ್ದರು.

1999 ರ ಚುನಾವಣೆಯಲ್ಲಿ ಒಟ್ಟು 1,25,817 ಮತದಾರರಿದ್ದರು.ಶೇ.74 ರಷ್ಟು ಅಂದರೆ 93,716 ಮತದಾನವಾಗಿತ್ತು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷೇತರ ಅಭ್ಯರ್ಥಿ ಸಿ.ಎಸ್. ಶಿವಳ್ಳಿ 30,692 ಮತಗಳನ್ನು ಪಡೆದು ಮೊದಲಬಾರಿಗೆ ಜಯಶೀಲರಾಗಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಅಕ್ಕಿ ಮಲ್ಲಿಕಾರ್ಜುನ ಸಹದೇವಪ್ಪ 20,184 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಜುಟ್ಟಲ ಗೋವಿಂದಪ್ಪ ಹನುಮಂತಪ್ಪ 18,278 ಮತಗಳನ್ನು ಪಡೆದುಕೊಂಡಿದ್ದರು.

2004 ರ ಚುನಾವಣೆಯಲ್ಲಿ ಒಟ್ಟು 1,38,605 ಮತದಾರರಿದ್ದರು. ಶೇ.69.01 ರಷ್ಟು ಅಂದರೆ 95,653 ಮತದಾನವಾಗಿತ್ತು. ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಎಮ್.ಎಸ್.ಅಕ್ಕಿ 28,184 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 23,942 ಮತಗಳು ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅರವಿಂದ.ಎಮ್.ಕಟಗಿ 12,110 ಮತಗಳನ್ನು ಪಡೆದುಕೊಂಡಿದ್ದರು.

2008ರ ವಿಧಾನ ಸಭಾ ಚುನಾವಣೆಯಲ್ಲಿ ಒಟ್ಟು 1,55,099 ಮತದಾರರಿದ್ದರು. ಶೇ. 71.54 ರಷ್ಟು ಅಂದರೆ 1,10,868 ಮತದಾನವಾಗಿತ್ತು. ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 43,307 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 36,931 ಮತಗಳು ಹಾಗೂ ಜೆ.ಡಿ.ಎಸ್.ಅಭ್ಯರ್ಥಿ ಪಿ.ಸಿ.ಸಿದ್ದನಗೌಡರ್ 19,077 ಮತಗಳನ್ನು ಪಡೆದುಕೊಂಡಿದ್ದರು.

2013ರ ಚುನಾವಣೆಯಲ್ಲಿ ಒಟ್ಟು 1,68,831 ಮತದಾರರಿದ್ದರು. ಶೇ.76.71 ರಷ್ಟು ಅಂದರೆ 1,29,088 ಮತದಾನವಾಗಿತ್ತು. ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 52,690 ಮತಗಳನ್ನು ಪಡೆದುಕೊಂಡು ಎರಡನೇ ಬಾರಿ ಚುನಾಯಿತರಾಗಿದ್ದರು. ಕೆಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 31,618 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಆರ್.ಫಾಟೀಲ 23,641 ಮತಗಳನ್ನು ಪಡೆದುಕೊಂಡಿದ್ದರು.

2018ರ ಚುನಾವಣೆಯಲ್ಲಿ ಒಟ್ಟು 1,87,513 ಮತದಾರರಿದ್ದರು. ಶೇ.78.67 ರಷ್ಟು ಅಂದರೆ 1,47,524 ಮತದಾನವಾಗಿತ್ತು. ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 64,871 ಮತಗಳನ್ನು ಪಡೆದುಕೊಂಡು ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಬಿಜೆಪಿಯ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 64,237 ಮತಗಳು, ಜೆಡಿಯುನ ಹಜರತ ಅಲಿ ಶೇಖ್ ಜೋಡಮನಿ 7,318 ಮತಗಳು ಹಾಗೂ ಜೆಡಿಎಸ್‌ನ ಅಕ್ಕಿ ಮಲ್ಲಿಕಾರ್ಜುನ ಸಹದೇವಪ್ಪ 6,280 ಮತಗಳನ್ನು ಪಡೆದುಕೊಂಡಿದ್ದರು.

2018 ರಲ್ಲಿ ಈ ಕ್ಷೇತ್ರದಿಂದ ಚುನಾಯಿತರಾಗಿದ್ದ ರಾಜ್ಯದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಕಳೆದ ಮಾರ್ಚ 22 ರಂದು ಅಕಾಲಿಕವಾಗಿ ನಿಧನರಾದ ಪರಿಣಾಮ, ಬರುವ ಮೇ.19,2019 ರಂದು ಉಪಚುನಾವಣೆ ನಡೆಯುತ್ತಿದೆ.

ಮಂಜುನಾಥ ಡಿ.ಡೊಳ್ಳಿನ
ಹಿರಿಯ ಸಹಾಯಕ ನಿರ್ದೇಶಕರು
ರಾಜ್ಯ ಸಮಾಚಾರ ಕೇಂದ್ರ, ಹುಬ್ಬಳ್ಳಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ4 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ5 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ5 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ5 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ5 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ1 week ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ1 week ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 week ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ1 week ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

Trending