ದಿನದ ಸುದ್ದಿ

ದಾವಣಗೆರೆ | ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಬಿತ ಕುಂಟುಬದ ಸದಸ್ಯರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ದಿ, ಉನ್ನತಿ, ಪ್ರೇರಣಾ, ಐರಾವತ, ಸ್ಪೂರ್ತಿ, ಪ್ರಬುದ್ದ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು 2019-20ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹಿಂದೆ ಅರ್ಜಿ ಸಲ್ಲಿಸಲು ಮೇ 30 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಕೋವಿಡ್-19 ಸಾಂಕ್ರ್ರಾಮಿಕ ರೋಗ ನಿಯಂತ್ರಿಸುವ ಸಲುವಾಗಿ ಸರ್ಕಾರವು ಕೈಗೊಂಡಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ಜೂನ್ 30 ರವರೆಗೆ ವಿಸ್ತರಿಸಲು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದವರು ಸೂಚಿಸಿರುವ ಮೇರೆಗೆ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಜೂ.30 ರ ಒಳಗೆ www.kssds.kar.nic.in ಆನ್‍ಲೈನ್‍ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ, ಪಿ.ಬಿ ರೋಡ್, #337/16-16, ಗಣೇಶ ಲೇ ಔಟ್ 1ನೇ ಕ್ರಾಸ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version