ದಿನದ ಸುದ್ದಿ
ಮೇ 31 ರವರೆಗಿನ ಲಾಕ್ಡೌನ್ ಮಾರ್ಗಸೂಚಿಗಳು : ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಕುರಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.
ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು, ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ ಆದೇಶಿಸಲಾಗಿದೆ. ಈ ಮಾರ್ಗಸೂಚಿಗಳು ಮೇ.31 ರವರೆಗೆ ಜಾರಿಯಲ್ಲಿರುತ್ತದೆ.
1. ಚಟುವಟಿಕೆಗಳು ನಿಷೇಧ
ವೈದ್ಯಕೀಯ ಸೇವೆಗಳು, ಏರ್ ಆಂಬುಲೆನ್ಸ್, ಭದ್ರತಾ ಉದ್ದೇಶಗಳು ಹಾಗೂ ಕೇಂದ್ರಿಯ ಗೃಹ ಮಂತ್ರಾಲಯದಿಂದ ಅನುಮತಿಸಲಾದ ಉದ್ದೇಶಗಳನ್ನು ಹೊರತುಪಡಿಸಿ, ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರಯಾಣ ವಿಮಾನಯಾನ.
ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ/ತರಬೇತಿ/ಕೋಚಿಂಗ್ ಸಂಸ್ಥೆಗಳು ಇತ್ಯಾದಿಗಳು ಮುಚ್ಚಲ್ಪಡುತ್ತವೆ. ಆನ್ಲೈನ್/ದೂರ ಶಿಕ್ಷಣ ಕಲಿಕೆಗೆ ಅನುಮತಿಸಲಾಗಿದೆ ಮತ್ತು ಪ್ರೋತ್ಸಾಹಿಸುವುದು.
ಆರೋಗ್ಯ/ಪೊಲೀಸ್/ಸರ್ಕಾರಿ ಅಧಿಕಾರಿಗಳು/ಆರೋಗ್ಯ ಪಾಲನೆ ಕಾರ್ಯಕರ್ತರು, ಪ್ರವಾಸಿಗರನ್ನು ಒಳಗೊಂಡಂತೆ, ಸಿಲುಕಿಕೊಂಡಿರುವ ವ್ಯಕ್ತಿಗಳು ತಂಗಿದ್ದ ಮನೆಗಳನ್ನು ಹೊರತುಪಡಿಸಿ ಕ್ವಾರಂಟೈನ್ ಸೌಲಭ್ಯಕ್ಕಾಗಿ, ಬಸ್ ಡಿಪೋ, ರೈಲ್ವೆ ಸ್ಟೇಷನ್ ಮತ್ತು ವಿಮಾನ ನಿಲ್ದಾಣಗಳಲ್ಲಿ ನಡೆಸುವ ಕ್ಯಾಂಟೀನ್ಗಳನ್ನು ಹೊರತುಪಡಿಸಿ, ಹೋಟೆಲ್ಗಳು/ರೆಸ್ಟೋರೆಂಟ್ಗಳು ಹಾಗೂ ಇತರೆ ಅತಿಥ್ಯ ಸೇವೆಗಳನ್ನು ನಿಷೇಧಿಸಿದೆ.
ಆಹಾರ ಪದಾರ್ಥಗಳು/ಪಾರ್ಸೆಲ್ಗಳನ್ನು ಮನೆ ವಿತರಣೆಗಾಗಿ ರೆಸ್ಟೋರೆಂಟ್ಗಳ ಅಡಿಗೆ ಮನೆಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.
ಎಲ್ಲಾ ಸಿನಿಮಾ ಮಂದಿರಗಳು, ಶಾಪಿಂಗ್ ಮಾಲ್ಗಳು, ಜಿಮ್ಗಳು, ಈಜುಕೊಳಗಳು, ಮನರಂಜನಾ ಪಾರ್ಕ್ಗಳು, ಬಾರ್ಗಳು ಮತ್ತು ಆಡಿಟೋರಿಯಂಗಳು, ಸಮಾವೇಶ ಮಂದಿರಗಳು ಮತ್ತು ಇಂತಹ ಇತರೆ ಸ್ಥಳಗಳು, ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.
ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳು, ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜನೀಯ ಸ್ಥಳಗಳನ್ನು ಸಾರ್ವಜನಕರಿಗೆ ಮುಚ್ಚತಕ್ಕದ್ದು, ಧಾರ್ಮಿಕ ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
2. ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ, ಅನುಮತಿ
ಪ್ರಯಾಣಿಕರ ವಾಹನಗಳು ಮತ್ತು ಬಸ್ಸುಗಳ ಅಂತರ-ರಾಜ್ಯ, ಚಲನೆ, ರಾಜ್ಯಗಳ ಪರಸ್ಪರ ಒಪ್ಪಿಗೆಯೊಂದಿಗೆ ಅನುಮತಿಸಿದೆ. ಕೆಎಸ್ಆರ್ಟಿಸಿ/ಎನ್ಇಕೆಆರ್ಟಿಸಿ/ಎನ್ಡಬ್ಲ್ಯೂಕೆಆರ್ಟಿಸಿ ಬಸ್ಗಳ ಅಂತರ ರಾಜ್ಯ ಸಂಚಾರಕ್ಕೆ ಮುಂಚಿತವಾಗಿ ಸಂಬಂಧಿಸಿದ ರಾಜ್ಯಗಳ ಒಪ್ಪಿಗೆಯನ್ನು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಪಡೆಯತಕ್ಕದ್ದು.
ರಾಜ್ಯಾದ್ಯಂತ ಪ್ರವಾಸಿ ವಾಹನಗಳು, ರೈಲುಗಳು ಮತ್ತು ಬಸ್ಗಳು ಒಳಗೊಂಡಂತೆ ಸಾರಿಗೆ ಬಸ್ ಸೇವೆ, ಮಫೋಸಿಲ್ ಬಸ್ ಸರ್ವೀಸ್ ಮತ್ತು ಖಾಸಗಿ ಬಸ್ಗಳ ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಜನರ ಮತ್ತು ವಾಹನದ ಅಂತರ ಜಿಲ್ಲಾ ಸಂಚಾರಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ.
ವ್ಯಕ್ತಿಗಳ ಚಲನೆಗಾಗಿ ಪ್ರಾಮಾಣಿತ ಕಾರ್ಯಾಚರಣಾ ವಿಧಾನದ (ಎಸ್ಒಪಿ) ಅನುಬಂಧ-1 ರಲ್ಲಿ ಉಲ್ಲೇಖಿಸಿರುವಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಲಾಗಿದೆ.
ಟ್ಯಾಕ್ಸಿಗಳ (ಚಾಲಕ ಮತ್ತು ಗರಿಷ್ಠ ಇಬ್ಬರು ಪ್ರಯಾಣಿಕರು) ಆಟೊ ರಿಕ್ಷಾಗಳು (ಚಾಲಕ ಮತ್ತು ಇಬ್ಬರು ಪ್ರಯಾಣಿಕರು) ಮತ್ತು ಮ್ಯಾಕ್ಸಿ ಕ್ಯಾಬ್ಗಳು, ಸಂಗ್ರಹಕಾರ ಸೇವೆಗಳನ್ನು ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಕ್ಷೌರ ಅಂಗಡಿಗಳು, ಸ್ಪಾ ಮತ್ತು ಸಲೂನ್ಗಳು ಸೇರಿದಂತೆ ಎಲ್ಲಾ ಅಂಗಡಿಗಳು ಕಾರ್ಯ ನಿರ್ವಹಿಸಿ ಅನುಮತಿಸಿದೆ.
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಇಲಾಖೆಯಿಂದ ಹೊರಡಿಸಲಾಗುವ ಪ್ರಾಮಾಣಿತ ಕಾರ್ಯಾಚರಣ ವಿಧಾನದ ಪ್ರಕಾರ ಕ್ಷೌರ ಅಂಗಡಿಗಳು, ಸ್ಪಾಗಳು ಮತ್ತು ಸಲೂನ್ಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ. ಈ ಮಾರ್ಗಸೂಚಿಗಳು ಮತ್ತು ರಾಷ್ಟ್ರೀಯ ನಿರ್ದೇಶನಗಳಿಗೆ (ಅನುಬಂಧ-2) ಒಳಪಟ್ಟ ನಿರ್ದಿಷ್ಟ ಸಮಯಗಳ ನಡುವೆ ಸರ್ಕಾರಿ, ಪುರಸಭೆಯ ಉದ್ಯಾನಗಳು ಸಾರ್ವಜನಿಕರಿಗಾಗಿ ತೆರೆದಿರುತ್ತದೆ.
3. ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು
ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು, ಅನುಬಂಧ-2ರಲ್ಲಿ ನಿರ್ದಿಷ್ಟಪಡಿಸಿದಂತೆ ಜಿಲ್ಲೆಯಾದ್ಯಂತ ಅನುಸರಿಸುವುದು.
4. ಕಂಟೈನ್ಮೆಂಟ್, ಬಫರ್, ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳು
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಮಾರ್ಗಸೂಚಿಗಳನ್ನು ಗಣೆನೆಗೆ ತೆಗೆದುಕೊಂಡು ಕಂಟೈನ್ಮೆಂಟ್ ವಲಯಗಳು ಮತ್ತು ಬಫರ್ ವಲಯಗಳನ್ನು ಜಿಲ್ಲೆಯ ಪ್ರಾಧಿಕಾರಿಗಳು ಗುರುತಿಸುತ್ತವೆ.
ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ. ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ ಮತ್ತು ಅಗತ್ಯ ಸರಕು ಮತ್ತು ಸೇವೆಗಳ ಪೂರೈಕೆಯನ್ನು ಕಾಪಾಡಿಕೊಳ್ಳಲು ಈ ವಲಯಗಳಲ್ಲಿ ಅಥವಾ ಹೊರಗೆ ಜನರ ಚಲನೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಪರಿಧಿಯ ನಿಯಂತ್ರಣ ಇರುತ್ತದೆ. ಮೇಲಿನ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಳ್ಳುವುದು.
ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯವಿರುವಂತೆ ತೀವ್ರವಾದ ಸಂಪರ್ಕ ಪತ್ತೆ ಹಚ್ಚುವಿಕೆ, ಮನೆ-ಮನೆಗೆ ಕಣ್ಗಾವಲು ಮತ್ತು ಇತರೆ ವೈದ್ಯಕೀಯ ಸೇವೆಗಳು ಇರುತ್ತವೆ.
ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಉತ್ತಮ ಮೇಲ್ವಿಚಾರಣೆಗಾಗಿ ಮಾತ್ರ ತಾಲ್ಲೂಕು/ವಾರ್ಡ್ಗಳನ್ನು ಕೆಂಪು, ಕಿತ್ತಳೆ, ಮತ್ತು ಹಸಿರು ಬಣ್ಣಗಳಾಗಿ ವರ್ಗೀಕರಿಸುತ್ತದೆ. ಈ ಮಾರ್ಗಸೂಚಿಗಳ ಅಡಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಯಾವುದೇ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಉದ್ದೇಶದಿಂದ ಈ ವಲಯಗಳ ವರ್ಗೀಕರಣವನ್ನು ಉಲ್ಲೇಖಿಸುವಂತಿಲ್ಲ.
5. ಕಫ್ರ್ಯೂ
ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ಎಲ್ಲಾ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸತಕ್ಕದ್ದು. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿದೆ (ಭಾನುವಾರದಂದು ಪೂರ್ಣ ದಿನದ ಲಾಡ್ಡೌನ್ ಇರುತ್ತದೆ) ಈ ಉದ್ದೇಶಕ್ಕಾಗಿ ಜಾರಿ ಮಾಡಲಾಗಿರುವ ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ನಿಷೇಧಾಜ್ಞೆ ಆದೇಶ (ಕಫ್ರ್ಯೂ)ವನ್ನು ಕಟ್ಟುನಿಟ್ಟಿನ ಅನುಪಾಲನೆಯನ್ನು ಖಾತರಿಪಡಿಸತಕ್ಕದ್ದು.
6. ದುರ್ಬಲ ವ್ಯಕ್ತಿಗಳ ರಕ್ಷಣೆ
ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಸಹ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತುತ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು
7. ಅನುಮತಿ
ನಿರ್ದಿಷ್ಟವಾಗ ನಿಷೇಧಿಸಲಾಗಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ಅನುಮತಿಸಲಾಗಿದೆ. ಆದಾಗ್ಯೂ ಕಂಟೈನ್ಮೆಂಟ್ ವಲಯಗಳಲ್ಲಿ ಮೇಲಿನ ಪ್ಯಾರಾ 5(2) ರಲ್ಲಿ ಉಲ್ಲೇಖಿಸಿರುವಂತೆ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ.
ಇದಲ್ಲದೇ ಸರ್ಕಾರ ಆದೇಶಧ ಮೇರೆಗೆ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ವಿವಿಧ ವಲಯಗಳಲ್ಲಿ ಕೆಲವು ಇತರೆ ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವೆಂದು ಪರಿಗಣಿಸುವಂತಹ ನಿರ್ಬಂಧಗಳನ್ನು ವಿಧಿಸಬಹುದು.
8. ಆರೋಗ್ಯ ಸೇತು ಬಳಕೆ
ಆರೋಗ್ಯ ಸೇತು ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಅನುವು ಮಾಡಿಕೊಡುತ್ತದೆ ಮತ್ತು ಇದರಿಂದ ವ್ಯಕ್ತಿಗಳು ಮತ್ತು ಸಮುದಾಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ.
ಕಚೇರಿಯ ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಉದ್ಯೋಗದಾತರು ಮತ್ತಮ ಪ್ರಯತ್ನದ ಆಧಾರದ ಮೇಲೆ ಆರೋಗ್ಯ ಸೇತು ಆಪ್ನ್ನು ಎಲ್ಲಾ ಉದ್ಯೋಗಿಗಳು ಮೊಬೈಲ್ ಪೋನ್ಗಳ ಹೊಂದಾಣಿಕೆಯನ್ನು ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು.
ಹೊಂದಾಣಿಕೆಯ ಮೊಬೈಲ್ ಫೋನ್ಗಳಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್ನ್ನು ಸ್ಥಾಪಿಸಲು ಮತ್ತು ಅಪ್ಲಿಕೇಶನ್ನಲ್ಲಿ ನಿಯಮಿತವಾಗಿ ಅವರ ಆರೋಗ್ಯ ಸ್ಥಿತಿಯನ್ನು ನವೀಕರಿಸಲು ಜಿಲ್ಲಾ ಮತ್ತು ಮಹಾನಗರಪಾಲಿಕೆ/ಪುರಸಭೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡುವುದು. ಅಪಾಯದಲ್ಲಿರುವ ವ್ಯಕ್ತಿಗಳಿಗೆ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಚಿಕಿತ್ಸೆ ನೀಡಲು ಇದು ಅನುಕೂಲವಾಗಲಿದೆ.
09. ನಿರ್ದೇಶನಗಳು
ಕೆಲವು ಸಂದರ್ಭಗಳಲ್ಲಿ ವ್ಯಕ್ತಿಗಳು ಮತ್ತು ಸರಕುಗಳ ಚಲನೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ನಿರ್ದೇಶನಗಳು.
ಯಾವುದೇ ನಿರ್ಬಂಧವಿಲ್ಲದೆ ವೈದ್ಯಕೀಯ ವೃತ್ತಿಪರರು, ದಾದಿಯರು ಮತ್ತು ಪ್ಯಾರಾ ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಅಂತರ-ರಾಜ್ಯ ಮತ್ತು ರಾಜ್ಯದೊಳಗಿನ ಚಲನೆಯನ್ನು ಅನುಮತಿಸಲಾಗಿರುತ್ತದೆ.
ಖಾಲಿ ಟ್ರಕ್ಗಳನ್ನು ಒಳಗೊಂಡಂತೆ ಅಂತರ್-ರಾಜ್ಯ ಸರಕು ಸಾಗಾಣಿಕೆಗೆ ಎಲ್ಲಾ ತಾಲ್ಲೂಕುಗಳು ಅನುಮತಿಸತಕ್ಕದ್ದು.
ನೆರೆಯ ರಾಷ್ಟ್ರಗಳೊಂದಿಗೆ ಒಪ್ಪಂದಗಳ ಅಡಿಯಲ್ಲಿ ಭೂ-ಗಡಿ ವ್ಯಾಪಾರಕ್ಕಾಗಿ ಸರಕು ಸಾಗಣೆಯನ್ನು ಯಾವುದೇ ತಾಲ್ಲೂಕುಗಳು ತಡೆಯಬಾರದು.
10. ಮಾರ್ಗಸೂಚಿ
ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಸ್ಥಳೀಯ ಆಡಳಿತಗಳು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು.
ಎಲ್ಲಾ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
ನಿಯಂತ್ರಣ ಕ್ರಮಗಳನ್ನು ಅನುಷ್ಟಾನಗೊಳಿಸುವ ಸಲುವಾಗಿ ಈಗಾಗಲೇ ದಿನಾಂಕ: 25.03.2020 ರಂದು ನೇಮಿಸಲಾಗಿರುವ ಆಯಾ ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಮಾರ್ಗಸೂಚಿಯ ಸಮಗ್ರ ಅನುಷ್ಟಾನಕ್ಕೆ ಜವಾಬ್ದಾರರಾಗಿರುತ್ತಾರೆ.
11. ದಂಡನೀಯ ಉಪಬಂಧಗಳು
ಕೋವಿಡ್-19 ನಿರ್ವಹಣೆಯ ಲಾಕ್ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು, ಅಲ್ಲದೇ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕ್ರಮ ಜರುಗಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ6 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

