ದಿನದ ಸುದ್ದಿ
ಮೇ 31 ರವರೆಗಿನ ಲಾಕ್ಡೌನ್ ಮಾರ್ಗಸೂಚಿಗಳು : ಮಿಸ್ ಮಾಡ್ದೆ ಓದಿ
ಸುದ್ದಿದಿನ,ದಾವಣಗೆರೆ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಕುರಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.
ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು, ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ ಆದೇಶಿಸಲಾಗಿದೆ. ಈ ಮಾರ್ಗಸೂಚಿಗಳು ಮೇ.31 ರವರೆಗೆ ಜಾರಿಯಲ್ಲಿರುತ್ತದೆ.
1. ಚಟುವಟಿಕೆಗಳು ನಿಷೇಧ
ವೈದ್ಯಕೀಯ ಸೇವೆಗಳು, ಏರ್ ಆಂಬುಲೆನ್ಸ್, ಭದ್ರತಾ ಉದ್ದೇಶಗಳು ಹಾಗೂ ಕೇಂದ್ರಿಯ ಗೃಹ ಮಂತ್ರಾಲಯದಿಂದ ಅನುಮತಿಸಲಾದ ಉದ್ದೇಶಗಳನ್ನು ಹೊರತುಪಡಿಸಿ, ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರಯಾಣ ವಿಮಾನಯಾನ.
ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ/ತರಬೇತಿ/ಕೋಚಿಂಗ್ ಸಂಸ್ಥೆಗಳು ಇತ್ಯಾದಿಗಳು ಮುಚ್ಚಲ್ಪಡುತ್ತವೆ. ಆನ್ಲೈನ್/ದೂರ ಶಿಕ್ಷಣ ಕಲಿಕೆಗೆ ಅನುಮತಿಸಲಾಗಿದೆ ಮತ್ತು ಪ್ರೋತ್ಸಾಹಿಸುವುದು.
ಆರೋಗ್ಯ/ಪೊಲೀಸ್/ಸರ್ಕಾರಿ ಅಧಿಕಾರಿಗಳು/ಆರೋಗ್ಯ ಪಾಲನೆ ಕಾರ್ಯಕರ್ತರು, ಪ್ರವಾಸಿಗರನ್ನು ಒಳಗೊಂಡಂತೆ, ಸಿಲುಕಿಕೊಂಡಿರುವ ವ್ಯಕ್ತಿಗಳು ತಂಗಿದ್ದ ಮನೆಗಳನ್ನು ಹೊರತುಪಡಿಸಿ ಕ್ವಾರಂಟೈನ್ ಸೌಲಭ್ಯಕ್ಕಾಗಿ, ಬಸ್ ಡಿಪೋ, ರೈಲ್ವೆ ಸ್ಟೇಷನ್ ಮತ್ತು ವಿಮಾನ ನಿಲ್ದಾಣಗಳಲ್ಲಿ ನಡೆಸುವ ಕ್ಯಾಂಟೀನ್ಗಳನ್ನು ಹೊರತುಪಡಿಸಿ, ಹೋಟೆಲ್ಗಳು/ರೆಸ್ಟೋರೆಂಟ್ಗಳು ಹಾಗೂ ಇತರೆ ಅತಿಥ್ಯ ಸೇವೆಗಳನ್ನು ನಿಷೇಧಿಸಿದೆ.
ಆಹಾರ ಪದಾರ್ಥಗಳು/ಪಾರ್ಸೆಲ್ಗಳನ್ನು ಮನೆ ವಿತರಣೆಗಾಗಿ ರೆಸ್ಟೋರೆಂಟ್ಗಳ ಅಡಿಗೆ ಮನೆಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.
ಎಲ್ಲಾ ಸಿನಿಮಾ ಮಂದಿರಗಳು, ಶಾಪಿಂಗ್ ಮಾಲ್ಗಳು, ಜಿಮ್ಗಳು, ಈಜುಕೊಳಗಳು, ಮನರಂಜನಾ ಪಾರ್ಕ್ಗಳು, ಬಾರ್ಗಳು ಮತ್ತು ಆಡಿಟೋರಿಯಂಗಳು, ಸಮಾವೇಶ ಮಂದಿರಗಳು ಮತ್ತು ಇಂತಹ ಇತರೆ ಸ್ಥಳಗಳು, ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.
ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳು, ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜನೀಯ ಸ್ಥಳಗಳನ್ನು ಸಾರ್ವಜನಕರಿಗೆ ಮುಚ್ಚತಕ್ಕದ್ದು, ಧಾರ್ಮಿಕ ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
2. ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ, ಅನುಮತಿ
ಪ್ರಯಾಣಿಕರ ವಾಹನಗಳು ಮತ್ತು ಬಸ್ಸುಗಳ ಅಂತರ-ರಾಜ್ಯ, ಚಲನೆ, ರಾಜ್ಯಗಳ ಪರಸ್ಪರ ಒಪ್ಪಿಗೆಯೊಂದಿಗೆ ಅನುಮತಿಸಿದೆ. ಕೆಎಸ್ಆರ್ಟಿಸಿ/ಎನ್ಇಕೆಆರ್ಟಿಸಿ/ಎನ್ಡಬ್ಲ್ಯೂಕೆಆರ್ಟಿಸಿ ಬಸ್ಗಳ ಅಂತರ ರಾಜ್ಯ ಸಂಚಾರಕ್ಕೆ ಮುಂಚಿತವಾಗಿ ಸಂಬಂಧಿಸಿದ ರಾಜ್ಯಗಳ ಒಪ್ಪಿಗೆಯನ್ನು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಪಡೆಯತಕ್ಕದ್ದು.
ರಾಜ್ಯಾದ್ಯಂತ ಪ್ರವಾಸಿ ವಾಹನಗಳು, ರೈಲುಗಳು ಮತ್ತು ಬಸ್ಗಳು ಒಳಗೊಂಡಂತೆ ಸಾರಿಗೆ ಬಸ್ ಸೇವೆ, ಮಫೋಸಿಲ್ ಬಸ್ ಸರ್ವೀಸ್ ಮತ್ತು ಖಾಸಗಿ ಬಸ್ಗಳ ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಜನರ ಮತ್ತು ವಾಹನದ ಅಂತರ ಜಿಲ್ಲಾ ಸಂಚಾರಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ.
ವ್ಯಕ್ತಿಗಳ ಚಲನೆಗಾಗಿ ಪ್ರಾಮಾಣಿತ ಕಾರ್ಯಾಚರಣಾ ವಿಧಾನದ (ಎಸ್ಒಪಿ) ಅನುಬಂಧ-1 ರಲ್ಲಿ ಉಲ್ಲೇಖಿಸಿರುವಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಲಾಗಿದೆ.
ಟ್ಯಾಕ್ಸಿಗಳ (ಚಾಲಕ ಮತ್ತು ಗರಿಷ್ಠ ಇಬ್ಬರು ಪ್ರಯಾಣಿಕರು) ಆಟೊ ರಿಕ್ಷಾಗಳು (ಚಾಲಕ ಮತ್ತು ಇಬ್ಬರು ಪ್ರಯಾಣಿಕರು) ಮತ್ತು ಮ್ಯಾಕ್ಸಿ ಕ್ಯಾಬ್ಗಳು, ಸಂಗ್ರಹಕಾರ ಸೇವೆಗಳನ್ನು ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಕ್ಷೌರ ಅಂಗಡಿಗಳು, ಸ್ಪಾ ಮತ್ತು ಸಲೂನ್ಗಳು ಸೇರಿದಂತೆ ಎಲ್ಲಾ ಅಂಗಡಿಗಳು ಕಾರ್ಯ ನಿರ್ವಹಿಸಿ ಅನುಮತಿಸಿದೆ.
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಇಲಾಖೆಯಿಂದ ಹೊರಡಿಸಲಾಗುವ ಪ್ರಾಮಾಣಿತ ಕಾರ್ಯಾಚರಣ ವಿಧಾನದ ಪ್ರಕಾರ ಕ್ಷೌರ ಅಂಗಡಿಗಳು, ಸ್ಪಾಗಳು ಮತ್ತು ಸಲೂನ್ಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ. ಈ ಮಾರ್ಗಸೂಚಿಗಳು ಮತ್ತು ರಾಷ್ಟ್ರೀಯ ನಿರ್ದೇಶನಗಳಿಗೆ (ಅನುಬಂಧ-2) ಒಳಪಟ್ಟ ನಿರ್ದಿಷ್ಟ ಸಮಯಗಳ ನಡುವೆ ಸರ್ಕಾರಿ, ಪುರಸಭೆಯ ಉದ್ಯಾನಗಳು ಸಾರ್ವಜನಿಕರಿಗಾಗಿ ತೆರೆದಿರುತ್ತದೆ.
3. ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು
ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು, ಅನುಬಂಧ-2ರಲ್ಲಿ ನಿರ್ದಿಷ್ಟಪಡಿಸಿದಂತೆ ಜಿಲ್ಲೆಯಾದ್ಯಂತ ಅನುಸರಿಸುವುದು.
4. ಕಂಟೈನ್ಮೆಂಟ್, ಬಫರ್, ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳು
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಮಾರ್ಗಸೂಚಿಗಳನ್ನು ಗಣೆನೆಗೆ ತೆಗೆದುಕೊಂಡು ಕಂಟೈನ್ಮೆಂಟ್ ವಲಯಗಳು ಮತ್ತು ಬಫರ್ ವಲಯಗಳನ್ನು ಜಿಲ್ಲೆಯ ಪ್ರಾಧಿಕಾರಿಗಳು ಗುರುತಿಸುತ್ತವೆ.
ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ. ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ ಮತ್ತು ಅಗತ್ಯ ಸರಕು ಮತ್ತು ಸೇವೆಗಳ ಪೂರೈಕೆಯನ್ನು ಕಾಪಾಡಿಕೊಳ್ಳಲು ಈ ವಲಯಗಳಲ್ಲಿ ಅಥವಾ ಹೊರಗೆ ಜನರ ಚಲನೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಪರಿಧಿಯ ನಿಯಂತ್ರಣ ಇರುತ್ತದೆ. ಮೇಲಿನ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಳ್ಳುವುದು.
ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯವಿರುವಂತೆ ತೀವ್ರವಾದ ಸಂಪರ್ಕ ಪತ್ತೆ ಹಚ್ಚುವಿಕೆ, ಮನೆ-ಮನೆಗೆ ಕಣ್ಗಾವಲು ಮತ್ತು ಇತರೆ ವೈದ್ಯಕೀಯ ಸೇವೆಗಳು ಇರುತ್ತವೆ.
ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಉತ್ತಮ ಮೇಲ್ವಿಚಾರಣೆಗಾಗಿ ಮಾತ್ರ ತಾಲ್ಲೂಕು/ವಾರ್ಡ್ಗಳನ್ನು ಕೆಂಪು, ಕಿತ್ತಳೆ, ಮತ್ತು ಹಸಿರು ಬಣ್ಣಗಳಾಗಿ ವರ್ಗೀಕರಿಸುತ್ತದೆ. ಈ ಮಾರ್ಗಸೂಚಿಗಳ ಅಡಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಯಾವುದೇ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಉದ್ದೇಶದಿಂದ ಈ ವಲಯಗಳ ವರ್ಗೀಕರಣವನ್ನು ಉಲ್ಲೇಖಿಸುವಂತಿಲ್ಲ.
5. ಕಫ್ರ್ಯೂ
ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ಎಲ್ಲಾ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸತಕ್ಕದ್ದು. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿದೆ (ಭಾನುವಾರದಂದು ಪೂರ್ಣ ದಿನದ ಲಾಡ್ಡೌನ್ ಇರುತ್ತದೆ) ಈ ಉದ್ದೇಶಕ್ಕಾಗಿ ಜಾರಿ ಮಾಡಲಾಗಿರುವ ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ನಿಷೇಧಾಜ್ಞೆ ಆದೇಶ (ಕಫ್ರ್ಯೂ)ವನ್ನು ಕಟ್ಟುನಿಟ್ಟಿನ ಅನುಪಾಲನೆಯನ್ನು ಖಾತರಿಪಡಿಸತಕ್ಕದ್ದು.
6. ದುರ್ಬಲ ವ್ಯಕ್ತಿಗಳ ರಕ್ಷಣೆ
ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಸಹ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತುತ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು
7. ಅನುಮತಿ
ನಿರ್ದಿಷ್ಟವಾಗ ನಿಷೇಧಿಸಲಾಗಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ಅನುಮತಿಸಲಾಗಿದೆ. ಆದಾಗ್ಯೂ ಕಂಟೈನ್ಮೆಂಟ್ ವಲಯಗಳಲ್ಲಿ ಮೇಲಿನ ಪ್ಯಾರಾ 5(2) ರಲ್ಲಿ ಉಲ್ಲೇಖಿಸಿರುವಂತೆ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ.
ಇದಲ್ಲದೇ ಸರ್ಕಾರ ಆದೇಶಧ ಮೇರೆಗೆ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ವಿವಿಧ ವಲಯಗಳಲ್ಲಿ ಕೆಲವು ಇತರೆ ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವೆಂದು ಪರಿಗಣಿಸುವಂತಹ ನಿರ್ಬಂಧಗಳನ್ನು ವಿಧಿಸಬಹುದು.
8. ಆರೋಗ್ಯ ಸೇತು ಬಳಕೆ
ಆರೋಗ್ಯ ಸೇತು ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಅನುವು ಮಾಡಿಕೊಡುತ್ತದೆ ಮತ್ತು ಇದರಿಂದ ವ್ಯಕ್ತಿಗಳು ಮತ್ತು ಸಮುದಾಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ.
ಕಚೇರಿಯ ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಉದ್ಯೋಗದಾತರು ಮತ್ತಮ ಪ್ರಯತ್ನದ ಆಧಾರದ ಮೇಲೆ ಆರೋಗ್ಯ ಸೇತು ಆಪ್ನ್ನು ಎಲ್ಲಾ ಉದ್ಯೋಗಿಗಳು ಮೊಬೈಲ್ ಪೋನ್ಗಳ ಹೊಂದಾಣಿಕೆಯನ್ನು ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು.
ಹೊಂದಾಣಿಕೆಯ ಮೊಬೈಲ್ ಫೋನ್ಗಳಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್ನ್ನು ಸ್ಥಾಪಿಸಲು ಮತ್ತು ಅಪ್ಲಿಕೇಶನ್ನಲ್ಲಿ ನಿಯಮಿತವಾಗಿ ಅವರ ಆರೋಗ್ಯ ಸ್ಥಿತಿಯನ್ನು ನವೀಕರಿಸಲು ಜಿಲ್ಲಾ ಮತ್ತು ಮಹಾನಗರಪಾಲಿಕೆ/ಪುರಸಭೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡುವುದು. ಅಪಾಯದಲ್ಲಿರುವ ವ್ಯಕ್ತಿಗಳಿಗೆ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಚಿಕಿತ್ಸೆ ನೀಡಲು ಇದು ಅನುಕೂಲವಾಗಲಿದೆ.
09. ನಿರ್ದೇಶನಗಳು
ಕೆಲವು ಸಂದರ್ಭಗಳಲ್ಲಿ ವ್ಯಕ್ತಿಗಳು ಮತ್ತು ಸರಕುಗಳ ಚಲನೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ನಿರ್ದೇಶನಗಳು.
ಯಾವುದೇ ನಿರ್ಬಂಧವಿಲ್ಲದೆ ವೈದ್ಯಕೀಯ ವೃತ್ತಿಪರರು, ದಾದಿಯರು ಮತ್ತು ಪ್ಯಾರಾ ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಅಂತರ-ರಾಜ್ಯ ಮತ್ತು ರಾಜ್ಯದೊಳಗಿನ ಚಲನೆಯನ್ನು ಅನುಮತಿಸಲಾಗಿರುತ್ತದೆ.
ಖಾಲಿ ಟ್ರಕ್ಗಳನ್ನು ಒಳಗೊಂಡಂತೆ ಅಂತರ್-ರಾಜ್ಯ ಸರಕು ಸಾಗಾಣಿಕೆಗೆ ಎಲ್ಲಾ ತಾಲ್ಲೂಕುಗಳು ಅನುಮತಿಸತಕ್ಕದ್ದು.
ನೆರೆಯ ರಾಷ್ಟ್ರಗಳೊಂದಿಗೆ ಒಪ್ಪಂದಗಳ ಅಡಿಯಲ್ಲಿ ಭೂ-ಗಡಿ ವ್ಯಾಪಾರಕ್ಕಾಗಿ ಸರಕು ಸಾಗಣೆಯನ್ನು ಯಾವುದೇ ತಾಲ್ಲೂಕುಗಳು ತಡೆಯಬಾರದು.
10. ಮಾರ್ಗಸೂಚಿ
ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಸ್ಥಳೀಯ ಆಡಳಿತಗಳು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು.
ಎಲ್ಲಾ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
ನಿಯಂತ್ರಣ ಕ್ರಮಗಳನ್ನು ಅನುಷ್ಟಾನಗೊಳಿಸುವ ಸಲುವಾಗಿ ಈಗಾಗಲೇ ದಿನಾಂಕ: 25.03.2020 ರಂದು ನೇಮಿಸಲಾಗಿರುವ ಆಯಾ ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಮಾರ್ಗಸೂಚಿಯ ಸಮಗ್ರ ಅನುಷ್ಟಾನಕ್ಕೆ ಜವಾಬ್ದಾರರಾಗಿರುತ್ತಾರೆ.
11. ದಂಡನೀಯ ಉಪಬಂಧಗಳು
ಕೋವಿಡ್-19 ನಿರ್ವಹಣೆಯ ಲಾಕ್ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು, ಅಲ್ಲದೇ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕ್ರಮ ಜರುಗಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ4 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ6 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

