Connect with us

ದಿನದ ಸುದ್ದಿ

ಮೇ 31 ರವರೆಗಿನ ಲಾಕ್‍ಡೌನ್ ಮಾರ್ಗಸೂಚಿಗಳು : ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಕುರಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.

ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು, ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ ಆದೇಶಿಸಲಾಗಿದೆ. ಈ ಮಾರ್ಗಸೂಚಿಗಳು ಮೇ.31 ರವರೆಗೆ ಜಾರಿಯಲ್ಲಿರುತ್ತದೆ.

1. ಚಟುವಟಿಕೆಗಳು ನಿಷೇಧ

ವೈದ್ಯಕೀಯ ಸೇವೆಗಳು, ಏರ್ ಆಂಬುಲೆನ್ಸ್, ಭದ್ರತಾ ಉದ್ದೇಶಗಳು ಹಾಗೂ ಕೇಂದ್ರಿಯ ಗೃಹ ಮಂತ್ರಾಲಯದಿಂದ ಅನುಮತಿಸಲಾದ ಉದ್ದೇಶಗಳನ್ನು ಹೊರತುಪಡಿಸಿ, ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರಯಾಣ ವಿಮಾನಯಾನ.

ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ/ತರಬೇತಿ/ಕೋಚಿಂಗ್ ಸಂಸ್ಥೆಗಳು ಇತ್ಯಾದಿಗಳು ಮುಚ್ಚಲ್ಪಡುತ್ತವೆ. ಆನ್‍ಲೈನ್/ದೂರ ಶಿಕ್ಷಣ ಕಲಿಕೆಗೆ ಅನುಮತಿಸಲಾಗಿದೆ ಮತ್ತು ಪ್ರೋತ್ಸಾಹಿಸುವುದು.

ಆರೋಗ್ಯ/ಪೊಲೀಸ್/ಸರ್ಕಾರಿ ಅಧಿಕಾರಿಗಳು/ಆರೋಗ್ಯ ಪಾಲನೆ ಕಾರ್ಯಕರ್ತರು, ಪ್ರವಾಸಿಗರನ್ನು ಒಳಗೊಂಡಂತೆ, ಸಿಲುಕಿಕೊಂಡಿರುವ ವ್ಯಕ್ತಿಗಳು ತಂಗಿದ್ದ ಮನೆಗಳನ್ನು ಹೊರತುಪಡಿಸಿ ಕ್ವಾರಂಟೈನ್ ಸೌಲಭ್ಯಕ್ಕಾಗಿ, ಬಸ್ ಡಿಪೋ, ರೈಲ್ವೆ ಸ್ಟೇಷನ್ ಮತ್ತು ವಿಮಾನ ನಿಲ್ದಾಣಗಳಲ್ಲಿ ನಡೆಸುವ ಕ್ಯಾಂಟೀನ್‍ಗಳನ್ನು ಹೊರತುಪಡಿಸಿ, ಹೋಟೆಲ್‍ಗಳು/ರೆಸ್ಟೋರೆಂಟ್‍ಗಳು ಹಾಗೂ ಇತರೆ ಅತಿಥ್ಯ ಸೇವೆಗಳನ್ನು ನಿಷೇಧಿಸಿದೆ.

ಆಹಾರ ಪದಾರ್ಥಗಳು/ಪಾರ್ಸೆಲ್‍ಗಳನ್ನು ಮನೆ ವಿತರಣೆಗಾಗಿ ರೆಸ್ಟೋರೆಂಟ್‍ಗಳ ಅಡಿಗೆ ಮನೆಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.

ಎಲ್ಲಾ ಸಿನಿಮಾ ಮಂದಿರಗಳು, ಶಾಪಿಂಗ್ ಮಾಲ್‍ಗಳು, ಜಿಮ್‍ಗಳು, ಈಜುಕೊಳಗಳು, ಮನರಂಜನಾ ಪಾರ್ಕ್‍ಗಳು, ಬಾರ್‍ಗಳು ಮತ್ತು ಆಡಿಟೋರಿಯಂಗಳು, ಸಮಾವೇಶ ಮಂದಿರಗಳು ಮತ್ತು ಇಂತಹ ಇತರೆ ಸ್ಥಳಗಳು, ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಲಾಗಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.

ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳು, ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜನೀಯ ಸ್ಥಳಗಳನ್ನು ಸಾರ್ವಜನಕರಿಗೆ ಮುಚ್ಚತಕ್ಕದ್ದು, ಧಾರ್ಮಿಕ ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.

2. ಕಂಟೈನ್‍ಮೆಂಟ್ ವಲಯಗಳನ್ನು ಹೊರತುಪಡಿಸಿ, ಅನುಮತಿ

ಪ್ರಯಾಣಿಕರ ವಾಹನಗಳು ಮತ್ತು ಬಸ್ಸುಗಳ ಅಂತರ-ರಾಜ್ಯ, ಚಲನೆ, ರಾಜ್ಯಗಳ ಪರಸ್ಪರ ಒಪ್ಪಿಗೆಯೊಂದಿಗೆ ಅನುಮತಿಸಿದೆ. ಕೆಎಸ್‍ಆರ್‍ಟಿಸಿ/ಎನ್‍ಇಕೆಆರ್‍ಟಿಸಿ/ಎನ್‍ಡಬ್ಲ್ಯೂಕೆಆರ್‍ಟಿಸಿ ಬಸ್‍ಗಳ ಅಂತರ ರಾಜ್ಯ ಸಂಚಾರಕ್ಕೆ ಮುಂಚಿತವಾಗಿ ಸಂಬಂಧಿಸಿದ ರಾಜ್ಯಗಳ ಒಪ್ಪಿಗೆಯನ್ನು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಪಡೆಯತಕ್ಕದ್ದು.

ರಾಜ್ಯಾದ್ಯಂತ ಪ್ರವಾಸಿ ವಾಹನಗಳು, ರೈಲುಗಳು ಮತ್ತು ಬಸ್‍ಗಳು ಒಳಗೊಂಡಂತೆ ಸಾರಿಗೆ ಬಸ್ ಸೇವೆ, ಮಫೋಸಿಲ್ ಬಸ್ ಸರ್ವೀಸ್ ಮತ್ತು ಖಾಸಗಿ ಬಸ್‍ಗಳ ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಜನರ ಮತ್ತು ವಾಹನದ ಅಂತರ ಜಿಲ್ಲಾ ಸಂಚಾರಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ.

ವ್ಯಕ್ತಿಗಳ ಚಲನೆಗಾಗಿ ಪ್ರಾಮಾಣಿತ ಕಾರ್ಯಾಚರಣಾ ವಿಧಾನದ (ಎಸ್‍ಒಪಿ) ಅನುಬಂಧ-1 ರಲ್ಲಿ ಉಲ್ಲೇಖಿಸಿರುವಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಲಾಗಿದೆ.

ಟ್ಯಾಕ್ಸಿಗಳ (ಚಾಲಕ ಮತ್ತು ಗರಿಷ್ಠ ಇಬ್ಬರು ಪ್ರಯಾಣಿಕರು) ಆಟೊ ರಿಕ್ಷಾಗಳು (ಚಾಲಕ ಮತ್ತು ಇಬ್ಬರು ಪ್ರಯಾಣಿಕರು) ಮತ್ತು ಮ್ಯಾಕ್ಸಿ ಕ್ಯಾಬ್‍ಗಳು, ಸಂಗ್ರಹಕಾರ ಸೇವೆಗಳನ್ನು ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಂಡು ಸಂಚರಿಸಲು ಅನುಮತಿಸಿದೆ. ಕ್ಷೌರ ಅಂಗಡಿಗಳು, ಸ್ಪಾ ಮತ್ತು ಸಲೂನ್‍ಗಳು ಸೇರಿದಂತೆ ಎಲ್ಲಾ ಅಂಗಡಿಗಳು ಕಾರ್ಯ ನಿರ್ವಹಿಸಿ ಅನುಮತಿಸಿದೆ.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಇಲಾಖೆಯಿಂದ ಹೊರಡಿಸಲಾಗುವ ಪ್ರಾಮಾಣಿತ ಕಾರ್ಯಾಚರಣ ವಿಧಾನದ ಪ್ರಕಾರ ಕ್ಷೌರ ಅಂಗಡಿಗಳು, ಸ್ಪಾಗಳು ಮತ್ತು ಸಲೂನ್‍ಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ. ಈ ಮಾರ್ಗಸೂಚಿಗಳು ಮತ್ತು ರಾಷ್ಟ್ರೀಯ ನಿರ್ದೇಶನಗಳಿಗೆ (ಅನುಬಂಧ-2) ಒಳಪಟ್ಟ ನಿರ್ದಿಷ್ಟ ಸಮಯಗಳ ನಡುವೆ ಸರ್ಕಾರಿ, ಪುರಸಭೆಯ ಉದ್ಯಾನಗಳು ಸಾರ್ವಜನಿಕರಿಗಾಗಿ ತೆರೆದಿರುತ್ತದೆ.

3. ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು

ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು, ಅನುಬಂಧ-2ರಲ್ಲಿ ನಿರ್ದಿಷ್ಟಪಡಿಸಿದಂತೆ ಜಿಲ್ಲೆಯಾದ್ಯಂತ ಅನುಸರಿಸುವುದು.

4. ಕಂಟೈನ್‍ಮೆಂಟ್, ಬಫರ್, ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳು

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಮಾರ್ಗಸೂಚಿಗಳನ್ನು ಗಣೆನೆಗೆ ತೆಗೆದುಕೊಂಡು ಕಂಟೈನ್ಮೆಂಟ್ ವಲಯಗಳು ಮತ್ತು ಬಫರ್ ವಲಯಗಳನ್ನು ಜಿಲ್ಲೆಯ ಪ್ರಾಧಿಕಾರಿಗಳು ಗುರುತಿಸುತ್ತವೆ.

ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ. ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ ಮತ್ತು ಅಗತ್ಯ ಸರಕು ಮತ್ತು ಸೇವೆಗಳ ಪೂರೈಕೆಯನ್ನು ಕಾಪಾಡಿಕೊಳ್ಳಲು ಈ ವಲಯಗಳಲ್ಲಿ ಅಥವಾ ಹೊರಗೆ ಜನರ ಚಲನೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಕಟ್ಟುನಿಟ್ಟಾದ ಪರಿಧಿಯ ನಿಯಂತ್ರಣ ಇರುತ್ತದೆ. ಮೇಲಿನ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಳ್ಳುವುದು.

ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯವಿರುವಂತೆ ತೀವ್ರವಾದ ಸಂಪರ್ಕ ಪತ್ತೆ ಹಚ್ಚುವಿಕೆ, ಮನೆ-ಮನೆಗೆ ಕಣ್ಗಾವಲು ಮತ್ತು ಇತರೆ ವೈದ್ಯಕೀಯ ಸೇವೆಗಳು ಇರುತ್ತವೆ.

ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಉತ್ತಮ ಮೇಲ್ವಿಚಾರಣೆಗಾಗಿ ಮಾತ್ರ ತಾಲ್ಲೂಕು/ವಾರ್ಡ್‍ಗಳನ್ನು ಕೆಂಪು, ಕಿತ್ತಳೆ, ಮತ್ತು ಹಸಿರು ಬಣ್ಣಗಳಾಗಿ ವರ್ಗೀಕರಿಸುತ್ತದೆ. ಈ ಮಾರ್ಗಸೂಚಿಗಳ ಅಡಿಯಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಯಾವುದೇ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಉದ್ದೇಶದಿಂದ ಈ ವಲಯಗಳ ವರ್ಗೀಕರಣವನ್ನು ಉಲ್ಲೇಖಿಸುವಂತಿಲ್ಲ.

5. ಕಫ್ರ್ಯೂ

ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ಎಲ್ಲಾ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸತಕ್ಕದ್ದು. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿದೆ (ಭಾನುವಾರದಂದು ಪೂರ್ಣ ದಿನದ ಲಾಡ್‍ಡೌನ್ ಇರುತ್ತದೆ) ಈ ಉದ್ದೇಶಕ್ಕಾಗಿ ಜಾರಿ ಮಾಡಲಾಗಿರುವ ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ನಿಷೇಧಾಜ್ಞೆ ಆದೇಶ (ಕಫ್ರ್ಯೂ)ವನ್ನು ಕಟ್ಟುನಿಟ್ಟಿನ ಅನುಪಾಲನೆಯನ್ನು ಖಾತರಿಪಡಿಸತಕ್ಕದ್ದು.

6. ದುರ್ಬಲ ವ್ಯಕ್ತಿಗಳ ರಕ್ಷಣೆ

ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತುಪಡಿಸಿ, 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು, ಸಹ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತುತ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು

7. ಅನುಮತಿ

ನಿರ್ದಿಷ್ಟವಾಗ ನಿಷೇಧಿಸಲಾಗಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ಅನುಮತಿಸಲಾಗಿದೆ. ಆದಾಗ್ಯೂ ಕಂಟೈನ್‍ಮೆಂಟ್ ವಲಯಗಳಲ್ಲಿ ಮೇಲಿನ ಪ್ಯಾರಾ 5(2) ರಲ್ಲಿ ಉಲ್ಲೇಖಿಸಿರುವಂತೆ ಅಗತ್ಯ ಚಟುವಟಿಕೆಗಳನ್ನು ಮಾತ್ರ ಅನುಮತಿಸಲಾಗಿದೆ.

ಇದಲ್ಲದೇ ಸರ್ಕಾರ ಆದೇಶಧ ಮೇರೆಗೆ ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ವಿವಿಧ ವಲಯಗಳಲ್ಲಿ ಕೆಲವು ಇತರೆ ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವೆಂದು ಪರಿಗಣಿಸುವಂತಹ ನಿರ್ಬಂಧಗಳನ್ನು ವಿಧಿಸಬಹುದು.

8. ಆರೋಗ್ಯ ಸೇತು ಬಳಕೆ

ಆರೋಗ್ಯ ಸೇತು ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಅನುವು ಮಾಡಿಕೊಡುತ್ತದೆ ಮತ್ತು ಇದರಿಂದ ವ್ಯಕ್ತಿಗಳು ಮತ್ತು ಸಮುದಾಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಕಚೇರಿಯ ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಉದ್ಯೋಗದಾತರು ಮತ್ತಮ ಪ್ರಯತ್ನದ ಆಧಾರದ ಮೇಲೆ ಆರೋಗ್ಯ ಸೇತು ಆಪ್‍ನ್ನು ಎಲ್ಲಾ ಉದ್ಯೋಗಿಗಳು ಮೊಬೈಲ್ ಪೋನ್‍ಗಳ ಹೊಂದಾಣಿಕೆಯನ್ನು ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಹೊಂದಾಣಿಕೆಯ ಮೊಬೈಲ್ ಫೋನ್‍ಗಳಲ್ಲಿ ಆರೋಗ್ಯ ಸೇತು ಅಪ್ಲಿಕೇಷನ್‍ನ್ನು ಸ್ಥಾಪಿಸಲು ಮತ್ತು ಅಪ್ಲಿಕೇಶನ್‍ನಲ್ಲಿ ನಿಯಮಿತವಾಗಿ ಅವರ ಆರೋಗ್ಯ ಸ್ಥಿತಿಯನ್ನು ನವೀಕರಿಸಲು ಜಿಲ್ಲಾ ಮತ್ತು ಮಹಾನಗರಪಾಲಿಕೆ/ಪುರಸಭೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡುವುದು. ಅಪಾಯದಲ್ಲಿರುವ ವ್ಯಕ್ತಿಗಳಿಗೆ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಚಿಕಿತ್ಸೆ ನೀಡಲು ಇದು ಅನುಕೂಲವಾಗಲಿದೆ.

09. ನಿರ್ದೇಶನಗಳು

ಕೆಲವು ಸಂದರ್ಭಗಳಲ್ಲಿ ವ್ಯಕ್ತಿಗಳು ಮತ್ತು ಸರಕುಗಳ ಚಲನೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ನಿರ್ದೇಶನಗಳು.

ಯಾವುದೇ ನಿರ್ಬಂಧವಿಲ್ಲದೆ ವೈದ್ಯಕೀಯ ವೃತ್ತಿಪರರು, ದಾದಿಯರು ಮತ್ತು ಪ್ಯಾರಾ ವೈದ್ಯಕೀಯ ಸಿಬ್ಬಂದಿ, ನೈರ್ಮಲ್ಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಅಂತರ-ರಾಜ್ಯ ಮತ್ತು ರಾಜ್ಯದೊಳಗಿನ ಚಲನೆಯನ್ನು ಅನುಮತಿಸಲಾಗಿರುತ್ತದೆ.

ಖಾಲಿ ಟ್ರಕ್‍ಗಳನ್ನು ಒಳಗೊಂಡಂತೆ ಅಂತರ್-ರಾಜ್ಯ ಸರಕು ಸಾಗಾಣಿಕೆಗೆ ಎಲ್ಲಾ ತಾಲ್ಲೂಕುಗಳು ಅನುಮತಿಸತಕ್ಕದ್ದು.

ನೆರೆಯ ರಾಷ್ಟ್ರಗಳೊಂದಿಗೆ ಒಪ್ಪಂದಗಳ ಅಡಿಯಲ್ಲಿ ಭೂ-ಗಡಿ ವ್ಯಾಪಾರಕ್ಕಾಗಿ ಸರಕು ಸಾಗಣೆಯನ್ನು ಯಾವುದೇ ತಾಲ್ಲೂಕುಗಳು ತಡೆಯಬಾರದು.

10. ಮಾರ್ಗಸೂಚಿ

ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಸ್ಥಳೀಯ ಆಡಳಿತಗಳು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು.

ಎಲ್ಲಾ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.

ನಿಯಂತ್ರಣ ಕ್ರಮಗಳನ್ನು ಅನುಷ್ಟಾನಗೊಳಿಸುವ ಸಲುವಾಗಿ ಈಗಾಗಲೇ ದಿನಾಂಕ: 25.03.2020 ರಂದು ನೇಮಿಸಲಾಗಿರುವ ಆಯಾ ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಮಾರ್ಗಸೂಚಿಯ ಸಮಗ್ರ ಅನುಷ್ಟಾನಕ್ಕೆ ಜವಾಬ್ದಾರರಾಗಿರುತ್ತಾರೆ.

11. ದಂಡನೀಯ ಉಪಬಂಧಗಳು

ಕೋವಿಡ್-19 ನಿರ್ವಹಣೆಯ ಲಾಕ್‍ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು, ಅಲ್ಲದೇ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕ್ರಮ ಜರುಗಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending