ರಾಜಕೀಯ
ದಾವಣಗೆರೆ ಮತದಾರ ಹೊಸ ಮುಖ ಬಯಸಿದ್ರೆ ‘ಹೊನ್ನಾಳಿ ಹೊಡೆತ’ ಗ್ಯಾರೆಂಟಿ.. !
ಸುದ್ದಿದಿನ,ದಾವಣಗೆರೆ: ನಿರಂತರ ಮೂರು ಸೋಲು, ಮೂರು ಗೆಲುವಿಗೆ ವೇದಿಕೆಯಾದ ದಾವಣಗೆರೆ ಲೋಕಸಭಾ ಕ್ಷೇತ್ರ, ಇದೀಗ ಹೊಸ ಮುಖ ಬಯಸಿದರೆ ರಾಜ್ಯದ ಜನತೆಗೆ ‘ಹೊನ್ನಾಳಿ ಹೊಡೆತ’ ಇನ್ನಷ್ಟು ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಆಯ್ಕೆ ಬಯಸಿರುವ ಜಿಎಂ ಸಿದ್ದೇಶ್ವರ್ ಅವರಿಗೆ ಸಾಂಪ್ರದಾಯಿಕ ಎದುರಾಳಿ ಎಸ್ ಎಸ್ ಮಲ್ಲಿಕಾರ್ಜನ್ ಕಣದಲ್ಲಿ ಇಲ್ಲ. ಕಳೆದ ಮೂರು ಭಾರಿ ಆಯ್ಕೆಯಲ್ಲೂ ಅಲೆಗಳ ಮೇಲೆ ಗೆದ್ದವರು ಎನ್ನುವುದು ಜನಜನಿತ. ಒಮ್ಮೆ ತಂದೆಯ ಸಾವಿನ ಅನುಕಂಪದ ಅಲೆ, ಇನ್ನೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಯಡ್ಡಿಯೂಪ್ಪ ಅವರ ಅಲೆ ಹಾಗೂ ಮೂರನೇ ಬಾರಿ ಪ್ರಧಾನಿ ಮೋದಿಯವರ ಅಬ್ಬರದ ಅಲೆಯಲ್ಲಿ ಹ್ಯಾಟ್ರಿಕ್ ಮಾಡಿದರು. ಅಲ್ಲದೆ ಕೇಂದ್ರ ಸಚಿವರು ಆಗಿದ್ದರು. ಅಷ್ಟೇ ಬೇಗ ಸ್ಥಾನವನ್ನೂ ಕಳೆದುಕೊಂಡರು ಎನ್ನುವುದು ಈಗ ಇತಿಹಾಸ. ಆದರೆ, ಇದೀಗ ನಾಲ್ಕನೇ ಬಾರಿಯೂ ಜನ ಕೈ ಹಿಡಿಯುವ ಸಾಧ್ಯತೆ ಕಡಿಮೆ ಎನ್ನುವ ಉದ್ದೇಶದಿಂದ ಹಳ್ಳಿ ಸುತ್ತಿದ್ದಾರೆ. ಅಬ್ಬರದ ಪ್ರಚಾರವೂ ಕೈಗೊಂಡಿದ್ದಾರೆ.
ಎಸ್. ಎಸ್. ಮಲ್ಲಿಕಾರ್ಜುನ್ ಕಣದಿಂದ ಹಿಂದಕ್ಕೆ
ಮೂರು ಬಾರಿ ಹ್ಯಾಟ್ರಿಕ್ ಸೋಲಿಂದ ಧೃತಿಗೆಡದೆ ಕೊನೆ ಪ್ರಯತ್ನಕ್ಕೆ ಮುಂದಾದ ಎಸ್ ಎಸ್ ಎಂ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ, ಅವರ ಆಪ್ತ ಎಚ್ ಬಿ ಮಂಜಪ್ಪ ಅವರನ್ನು ಕಣಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಇತ್ತ ಸಿದ್ದೇಶ್ವರ್ ನನಗೆ ಪೈಪೋಟಿ ನೀಡುವ ಎದುರಾಳಿ ಇಲ್ಲ, ಎಸ್ ಎಸ್ ಎಂ ಎದುರಾಳಿಯಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಊರು ಸುತ್ತಿದ್ದು ನಷ್ಟವಾಯಿತು ಎನ್ನುವಂತ ಸ್ಥಿತಿಗೆ ಬಂದಿದ್ದು ಸುಳ್ಳಲ್ಲ.
ಹೊನ್ನಾಳಿ ಹೊಡೆತ ?
ಅತಿಯಾದ ಆತ್ಮವಿಶ್ವಾಸದಿಂದ ಒಂದು ಹಂತದಲ್ಲಿ ಸುತ್ತಾಟ ಕಡಿಮೆ ಮಾಡಿದ ಬಿಜೆಪಿ ಅಭ್ಯರ್ಥಿಗೆ ಎಚ್ ಬಿ ಮಂಜಪ್ಪ ಸುತ್ತಾಟ, ಅವರ ತಂತ್ರ, ಮೈತ್ರಿ ಧರ್ಮ, ಅಹಿಂದ ಸಂಘಟನೆ ರಾಜಕೀಯ ವಿಶ್ಲೇಷಕರು, ಇಂಟಲಿಜೆನ್ಸ್ ವರದಿಗಳು ಹೊನ್ನಾಳಿ ಹೊಡೆತದ ಸೂಚನೆ ನೀಡಿದ್ದು ಮತ್ತೆ ಪ್ರಚಾರ ಚುರುಕುಗೊಳಿಸುವಂತೆ ಮಾಡಿದೆ.
ಮಂಜಪ್ಪ ಕಡಿಮೆ ಅವಧಿಯಲ್ಲಿ ಜಿಲ್ಲಾದ್ಯಂತ ಪ್ರವಾಸ ಮಾಡುವುದನ್ನೆ ಸವಾಲಾಗಿ ಸ್ವೀಕರಿದ್ದಾರೆ. ಇನ್ನು ಟಿಕೆಟ್ ಘೋಷಣೆ ಆರಂಭದಿಂದಲೇ ಹಣ ಬಲದ ವಿರುದ್ಧ ಬಡವನ ಹೋರಾಟ, ಅಹಿಂದ, ಮೈತ್ರಿ ತಂತ್ರದಡಿ ಅಲ್ಪಸಂಖ್ಯಾತ, ಹಿಂದುಳಿದ ದಲಿತ ಸಮುದಾಯಗಳ ವಿಶ್ವಾಸಕ್ಕೆ ಪಡೆಯುವ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಹರಿಹರದಲ್ಲಿ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್, ಹಾಲಿ ಶಾಸಕ ರಾಮಪ್ಪ ಒಂದೇ ವೇದಿಕೆಯಲ್ಲಿ ಸುತ್ತಾಡುತ್ತಿದ್ದಾರೆ. ಹರಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಕೊಟ್ರೇಶ್, ದಿ. ಎಂಪಿ ರವೀಂದ್ರ ಅಭಿಮಾನಿಗಳು, ಜಗಳೂರಲ್ಲಿ ಎಚ್ ಪಿ ರಾಜೇಶ್, ಮೈತ್ರಿ ಟೀಮ್, ಚನ್ನಗಿರಿಯಲ್ಲಿ ವದ್ದಿಗೆರೆ ರಮೇಶ್, ವಡ್ನಾಳ್ ರಾಜಣ್ಣ, ಮಯಕೊಂಡದಲ್ಲಿ ಬಸವಂತಪ್ಪ, ಹೊನ್ನಾಳಿಯಲ್ಲಿ ಶಾಂತನಗೌಡ್ರು ಹಾಗೂ ಮೈತ್ರಿ ಟೀಮ್ ಹಾಗೂ ಸ್ಥಳೀಯ ಎನ್ನುವ ತಂತ್ರ ಪ್ರಯೋಗ ಮಾಡಲಾಗುತ್ತಿದೆ. ಸಿದ್ದೇಶ್ವರ್ ಹೊರಗಿನವರು, ಮಂಜಪ್ಪ ಸ್ಥಳೀಯ ಎನ್ನುವ ವಿಷಯ ಮುನ್ನೆಲೆಗೆ ಬಂದಿದೆ. ಸಿದ್ದೇಶ್ವರ್ ಗೆ ೧೫ ವರ್ಷ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ಸ್ಥಳೀಯ ಮಂಜಪ್ಪನಿಗೆ ಅವಕಾಶ ಮಾಡಿಕೊಡುವಂತೆ ಒತ್ತಿ ಒತ್ತಿ ಪ್ರಚಾರ ಮಾಡಲಾಗುತ್ತಿದೆ.
ಮಂಜಪ್ಪ ಸಹಿತ ಮೈತ್ರಿ ತಂಡ ತಾಲೂಕುವಾರು ಸುತ್ತಾಟ ಮಾಡುತ್ತಿದ್ದರೆ, ಇತ್ತ ಎಸ್ ಎಸ್ ಎಂ, ಎಸ್ಎಸ್ ದಾವಣಗೆರೆ ನಗರದಲ್ಲಿ ಆಯ್ದ ಗ್ರಾಮಗಳಲ್ಲೂ ರೋಡ್ ಶೋ ಮಾಡುತ್ತಿದ್ದಾರೆ. ಕಾರ್ಮಿಕ ಮುಖಂಡ ಎಚ್ ಕೆ ರಾಮಚಂದ್ರಪ್ಪ, ಜೆಡಿಎಸ್ ಗುಡ್ಡಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಅಹಿಂದ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನು ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರು ವಾರ್ಡವಾರು, ತಮ್ಮ ಭೂತ್ ಮಟ್ಟದಲ್ಲಿ ಸಕ್ರಿಯವಾಗಿರುವುದು ಎದುರಾಳಿ ನಿದ್ದೆ ಕೆಡಿಸುವಂತಾಗಿದೆ.
ಮತದಾರರೇ ಹಣ ಕೊಟ್ರು…!
ಮಂಜಪ್ಪ ಊರು ಸುತ್ತಲು ವಾಹನ ವ್ಯವಸ್ಥೆ, ಚುನಾವಣಾ ಖರ್ಚಿಗೆ ಮತದಾರರೇ ಹಣ ನೀಡುತ್ತಿರುವುದು ಇನ್ನೊಂದು ವಿಶೇಷವಾಗಿದ್ದು, ಬಿಜೆಪಿಯಲ್ಲಿ ಹಣದ ಕೊರತೆ ಇಲ್ಲ, ಆದರೆ, ದೂರವಿದ್ದ ನಾಯಕರು ಮುನ್ನೆಲೆಗೆ ಬಂದಿದ್ದಾರೆ. ಮಂಜಪ್ಪ ಅಭ್ಯರ್ಥಿ ಆದ ಕೂಡಲೇ ಅದೇ ಸಮಾಜ ಹಾಗೂ ಅಹಿಂದ ಮುಖಂಡರಾದ ಬಿ ಎಂ ಸತೀಶ್, ಜಯಪ್ರಕಾಶ್, ಲಿಂಗರಾಜ್, ಶಿವಕುಮಾರ್ ರಂಥ ಆನೇಕರು ಮುನ್ನೆಲೆಗೆ ಬರುತ್ತಿದ್ದಾರೆ. ಒಟ್ಟಾರೆ ಏಕಮುಖವಾದ ಕಣ ಇದೀಗ ನೇರ ಹಣಾಹಣಿಯಾಗಿದೆ. ಬಿಜೆಪಿ, ಕಾಂಗ್ರೆಸ್ ಯಾರೇ ಗೆದ್ದರೂ ಅಲ್ಪ ಅಂತರವಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
ಸುದ್ದಿದಿನ ಡೆಸ್ಕ್ : ಲೋಕಸಭೆಯ ಅಂತಿಮ ಚರಣದ ಮತದಾನ ದಿನ ಹಾಗೂ ನಂತರ ಚುನಾವಣಾ ಫಲಿತಾಂಶವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸಂಸದರನ್ನು ಬರ ಮಾಡಿಕೊಳ್ಳಲು ಲೋಕಸಭಾ ಕಾರ್ಯಾಲಯ ವ್ಯಾಪಕ ವ್ಯವಸ್ಥೆಯಿಂದ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ಅಧಿಕಾರಿಗಳ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಚುನಾಯಿತ ಅಭ್ಯರ್ಥಿಗಳ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದಂತೆಯೇ ನೂತನ ಅಭ್ಯರ್ಥಿಗಳ ಆಗಮನ ಪ್ರಕ್ರಿಯೆ ಆರಂಭವಾಗುತ್ತದೆ. ಅವರ ಪ್ರಯಾಣಕ್ಕೆ ಮುನ್ನವೇ ಲೋಕಸಭೆ ಕಾರ್ಯಾಲಯದ ನೋಡಲ್ ಅಧಿಕಾರಿಗಳು ಅವರನ್ನು ಸಂಪರ್ಕಿಸುತ್ತಾರೆ. ಐಜಿಐ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ವಿವಿಧ ಟರ್ಮಿನಲ್ಗಳಲ್ಲಿ ವಿಶೇಷ ಸ್ವಾಗತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸಂಸದರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ನಿಗದಿತ ಕೇಂದ್ರಗಳಲ್ಲಿ ಬರ ಮಾಡಿಕೊಳ್ಳಲಾಗುತ್ತದೆ.
ಸಂಸತ್ತಿನ ಅನೆಕ್ಸೆ ವಿಸ್ತೃತ ಕಟ್ಟಡದ ಸ್ವಾಗತ ಕೇಂದ್ರಕ್ಕೆ ಆಗಮಿಸಿದ ನಂತರ ಅವರಿಗೆ ದೂರವಾಣಿ ಸಂಪರ್ಕ, ಹೊಸಬ್ಯಾಂಕ್ ಖಾತೆ, ಸಂಸತ್ ಕಟ್ಟಡಕ್ಕೆ ಪ್ರವೇಶ ಪಡೆಯಲು ಸ್ಮಾರ್ಟ್ ಆಕ್ಸೆಸ್ ಕಾರ್ಡ್, ಅವರ ವಾಹನಗಳಿಗಾಗಿ ಫಾಸ್ಟ್ ಟ್ಯಾಗ್ ಸ್ಟಿಕರ್ ಮತ್ತು ರಾಜತಾಂತ್ರಿಕ ಪಾಸ್ಪೋರ್ಟ್ ನೀಡಿಕೆಗೆ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಿ ಅತಿಥಿ ಭವನ ಹಾಗೂ ಪಶ್ಚಿಮ ನ್ಯಾಯಾಲಯ ಹಾಸ್ಟೇಲ್ ಸಂಕೀರ್ಣದಲ್ಲಿ ಅವರಿಗೆ ತಂಗಲು ಅವಕಾಶ ಕಲ್ಪಿಸಲಾಗುತ್ತದೆ. ಹೊಸ ಸದಸ್ಯರಿಗೆ ಸಂವಿಧಾನದ ಪ್ರತಿ ನೀತಿ ಮತ್ತು ಕಲಾಪ, ಪ್ರಕ್ರಿಯೆ, ನಿಯಮಾವಳಿ ಕೈಪಿಡಿಗಳನ್ನು ಅನುಸರಿಸಲು ನೀಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ ಭವನದಲ್ಲಿಂದು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಆರ್. ಅಶೋಕ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಸಿ.ಪಿ.ಯೋಗೇಶ್ವರ್ ಮಾತನಾಡಿದರು.
ಇನ್ನೊಂದೆಡೆ, ಚಿತ್ರದುರ್ಗದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ವಿಧಾನಪರಿಷತ್ ಸದಸ್ಯ ಪುಟಣ್ಣಯ್ಯ ಮತಯಾಚಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆ ಬದಲಾವಣೆಗೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ.
ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು. 5 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ, 6ನೇ ಹಂತದ 58 ಕ್ಷೇತ್ರಗಳಲ್ಲಿ ಒಟ್ಟಾರೆ ಶೇಕಡ 57.70 ರಷ್ಟು ಮತದಾನವಾಗಿದೆ.
ಬಿಹಾರದಲ್ಲಿ ಶೇಕಡ 52.24, ಜಾರ್ಖಂಡ್ನಲ್ಲಿ ಶೇಕಡ 61.41, ಹರ್ಯಾಣzಲ್ಲಿ ಶೇಕಡ 55.93, ಒಡಿಶಾದಲ್ಲಿ ಶೇಕಡ 59.60, ಉತ್ತರಪ್ರದೇಶದಲ್ಲಿ 52.02 ಮತ್ತು ಪಶ್ಚಿಮಬಂಗಾಳದಲ್ಲಿ 77.99, ದೆಹಲಿಯಲ್ಲಿ 53.73 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 51.35ರಷ್ಟು ಮತದಾನವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ
-
ಕ್ರೀಡೆ7 days ago
ಬೆಳಗಿನ ಸುದ್ದಿ ಮುಖ್ಯಾಂಶಗಳು
-
ದಿನದ ಸುದ್ದಿ6 days ago
ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ
-
ದಿನದ ಸುದ್ದಿ6 days ago
ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ | ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಆರು ಮತ್ತು ಏಳನೇ ಹಂತದ ಲೋಕಸಭಾ ಚುನಾವಣೆಗೆ ರಾಜಕೀಯ ನಾಯಕರಿಂದ ಬಿರುಸಿನ ಪ್ರಚಾರ
-
ದಿನದ ಸುದ್ದಿ5 days ago
5ನೇ ಹಂತದ ಲೋಕಸಭೆ ಚುನಾವಣೆ; ಶೇಕಡ 60.09ರಷ್ಟು ಮತದಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೋಲಿಸರಿಗೆ ಶರಣಾಗಿ ವಿಚಾರಣೆ ಎದುರಿಸಬೇಕು : ಮೊಮ್ಮಗನಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆ
-
ದಿನದ ಸುದ್ದಿ6 days ago
ದಾವಣಗೆರೆ | ಒಂದೇ ಕುಟುಂಬದ ಮೂವರು ನಾಪತ್ತೆ