ರಾಜಕೀಯ
ದಾವಣಗೆರೆ ಮತದಾರ ಹೊಸ ಮುಖ ಬಯಸಿದ್ರೆ ‘ಹೊನ್ನಾಳಿ ಹೊಡೆತ’ ಗ್ಯಾರೆಂಟಿ.. !

ಸುದ್ದಿದಿನ,ದಾವಣಗೆರೆ: ನಿರಂತರ ಮೂರು ಸೋಲು, ಮೂರು ಗೆಲುವಿಗೆ ವೇದಿಕೆಯಾದ ದಾವಣಗೆರೆ ಲೋಕಸಭಾ ಕ್ಷೇತ್ರ, ಇದೀಗ ಹೊಸ ಮುಖ ಬಯಸಿದರೆ ರಾಜ್ಯದ ಜನತೆಗೆ ‘ಹೊನ್ನಾಳಿ ಹೊಡೆತ’ ಇನ್ನಷ್ಟು ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಆಯ್ಕೆ ಬಯಸಿರುವ ಜಿಎಂ ಸಿದ್ದೇಶ್ವರ್ ಅವರಿಗೆ ಸಾಂಪ್ರದಾಯಿಕ ಎದುರಾಳಿ ಎಸ್ ಎಸ್ ಮಲ್ಲಿಕಾರ್ಜನ್ ಕಣದಲ್ಲಿ ಇಲ್ಲ. ಕಳೆದ ಮೂರು ಭಾರಿ ಆಯ್ಕೆಯಲ್ಲೂ ಅಲೆಗಳ ಮೇಲೆ ಗೆದ್ದವರು ಎನ್ನುವುದು ಜನಜನಿತ. ಒಮ್ಮೆ ತಂದೆಯ ಸಾವಿನ ಅನುಕಂಪದ ಅಲೆ, ಇನ್ನೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಯಡ್ಡಿಯೂಪ್ಪ ಅವರ ಅಲೆ ಹಾಗೂ ಮೂರನೇ ಬಾರಿ ಪ್ರಧಾನಿ ಮೋದಿಯವರ ಅಬ್ಬರದ ಅಲೆಯಲ್ಲಿ ಹ್ಯಾಟ್ರಿಕ್ ಮಾಡಿದರು. ಅಲ್ಲದೆ ಕೇಂದ್ರ ಸಚಿವರು ಆಗಿದ್ದರು. ಅಷ್ಟೇ ಬೇಗ ಸ್ಥಾನವನ್ನೂ ಕಳೆದುಕೊಂಡರು ಎನ್ನುವುದು ಈಗ ಇತಿಹಾಸ. ಆದರೆ, ಇದೀಗ ನಾಲ್ಕನೇ ಬಾರಿಯೂ ಜನ ಕೈ ಹಿಡಿಯುವ ಸಾಧ್ಯತೆ ಕಡಿಮೆ ಎನ್ನುವ ಉದ್ದೇಶದಿಂದ ಹಳ್ಳಿ ಸುತ್ತಿದ್ದಾರೆ. ಅಬ್ಬರದ ಪ್ರಚಾರವೂ ಕೈಗೊಂಡಿದ್ದಾರೆ.
ಎಸ್. ಎಸ್. ಮಲ್ಲಿಕಾರ್ಜುನ್ ಕಣದಿಂದ ಹಿಂದಕ್ಕೆ
ಮೂರು ಬಾರಿ ಹ್ಯಾಟ್ರಿಕ್ ಸೋಲಿಂದ ಧೃತಿಗೆಡದೆ ಕೊನೆ ಪ್ರಯತ್ನಕ್ಕೆ ಮುಂದಾದ ಎಸ್ ಎಸ್ ಎಂ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ, ಅವರ ಆಪ್ತ ಎಚ್ ಬಿ ಮಂಜಪ್ಪ ಅವರನ್ನು ಕಣಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಇತ್ತ ಸಿದ್ದೇಶ್ವರ್ ನನಗೆ ಪೈಪೋಟಿ ನೀಡುವ ಎದುರಾಳಿ ಇಲ್ಲ, ಎಸ್ ಎಸ್ ಎಂ ಎದುರಾಳಿಯಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಊರು ಸುತ್ತಿದ್ದು ನಷ್ಟವಾಯಿತು ಎನ್ನುವಂತ ಸ್ಥಿತಿಗೆ ಬಂದಿದ್ದು ಸುಳ್ಳಲ್ಲ.
ಹೊನ್ನಾಳಿ ಹೊಡೆತ ?
ಅತಿಯಾದ ಆತ್ಮವಿಶ್ವಾಸದಿಂದ ಒಂದು ಹಂತದಲ್ಲಿ ಸುತ್ತಾಟ ಕಡಿಮೆ ಮಾಡಿದ ಬಿಜೆಪಿ ಅಭ್ಯರ್ಥಿಗೆ ಎಚ್ ಬಿ ಮಂಜಪ್ಪ ಸುತ್ತಾಟ, ಅವರ ತಂತ್ರ, ಮೈತ್ರಿ ಧರ್ಮ, ಅಹಿಂದ ಸಂಘಟನೆ ರಾಜಕೀಯ ವಿಶ್ಲೇಷಕರು, ಇಂಟಲಿಜೆನ್ಸ್ ವರದಿಗಳು ಹೊನ್ನಾಳಿ ಹೊಡೆತದ ಸೂಚನೆ ನೀಡಿದ್ದು ಮತ್ತೆ ಪ್ರಚಾರ ಚುರುಕುಗೊಳಿಸುವಂತೆ ಮಾಡಿದೆ.
ಮಂಜಪ್ಪ ಕಡಿಮೆ ಅವಧಿಯಲ್ಲಿ ಜಿಲ್ಲಾದ್ಯಂತ ಪ್ರವಾಸ ಮಾಡುವುದನ್ನೆ ಸವಾಲಾಗಿ ಸ್ವೀಕರಿದ್ದಾರೆ. ಇನ್ನು ಟಿಕೆಟ್ ಘೋಷಣೆ ಆರಂಭದಿಂದಲೇ ಹಣ ಬಲದ ವಿರುದ್ಧ ಬಡವನ ಹೋರಾಟ, ಅಹಿಂದ, ಮೈತ್ರಿ ತಂತ್ರದಡಿ ಅಲ್ಪಸಂಖ್ಯಾತ, ಹಿಂದುಳಿದ ದಲಿತ ಸಮುದಾಯಗಳ ವಿಶ್ವಾಸಕ್ಕೆ ಪಡೆಯುವ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಹರಿಹರದಲ್ಲಿ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್, ಹಾಲಿ ಶಾಸಕ ರಾಮಪ್ಪ ಒಂದೇ ವೇದಿಕೆಯಲ್ಲಿ ಸುತ್ತಾಡುತ್ತಿದ್ದಾರೆ. ಹರಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಕೊಟ್ರೇಶ್, ದಿ. ಎಂಪಿ ರವೀಂದ್ರ ಅಭಿಮಾನಿಗಳು, ಜಗಳೂರಲ್ಲಿ ಎಚ್ ಪಿ ರಾಜೇಶ್, ಮೈತ್ರಿ ಟೀಮ್, ಚನ್ನಗಿರಿಯಲ್ಲಿ ವದ್ದಿಗೆರೆ ರಮೇಶ್, ವಡ್ನಾಳ್ ರಾಜಣ್ಣ, ಮಯಕೊಂಡದಲ್ಲಿ ಬಸವಂತಪ್ಪ, ಹೊನ್ನಾಳಿಯಲ್ಲಿ ಶಾಂತನಗೌಡ್ರು ಹಾಗೂ ಮೈತ್ರಿ ಟೀಮ್ ಹಾಗೂ ಸ್ಥಳೀಯ ಎನ್ನುವ ತಂತ್ರ ಪ್ರಯೋಗ ಮಾಡಲಾಗುತ್ತಿದೆ. ಸಿದ್ದೇಶ್ವರ್ ಹೊರಗಿನವರು, ಮಂಜಪ್ಪ ಸ್ಥಳೀಯ ಎನ್ನುವ ವಿಷಯ ಮುನ್ನೆಲೆಗೆ ಬಂದಿದೆ. ಸಿದ್ದೇಶ್ವರ್ ಗೆ ೧೫ ವರ್ಷ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ಸ್ಥಳೀಯ ಮಂಜಪ್ಪನಿಗೆ ಅವಕಾಶ ಮಾಡಿಕೊಡುವಂತೆ ಒತ್ತಿ ಒತ್ತಿ ಪ್ರಚಾರ ಮಾಡಲಾಗುತ್ತಿದೆ.
ಮಂಜಪ್ಪ ಸಹಿತ ಮೈತ್ರಿ ತಂಡ ತಾಲೂಕುವಾರು ಸುತ್ತಾಟ ಮಾಡುತ್ತಿದ್ದರೆ, ಇತ್ತ ಎಸ್ ಎಸ್ ಎಂ, ಎಸ್ಎಸ್ ದಾವಣಗೆರೆ ನಗರದಲ್ಲಿ ಆಯ್ದ ಗ್ರಾಮಗಳಲ್ಲೂ ರೋಡ್ ಶೋ ಮಾಡುತ್ತಿದ್ದಾರೆ. ಕಾರ್ಮಿಕ ಮುಖಂಡ ಎಚ್ ಕೆ ರಾಮಚಂದ್ರಪ್ಪ, ಜೆಡಿಎಸ್ ಗುಡ್ಡಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಅಹಿಂದ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನು ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರು ವಾರ್ಡವಾರು, ತಮ್ಮ ಭೂತ್ ಮಟ್ಟದಲ್ಲಿ ಸಕ್ರಿಯವಾಗಿರುವುದು ಎದುರಾಳಿ ನಿದ್ದೆ ಕೆಡಿಸುವಂತಾಗಿದೆ.
ಮತದಾರರೇ ಹಣ ಕೊಟ್ರು…!
ಮಂಜಪ್ಪ ಊರು ಸುತ್ತಲು ವಾಹನ ವ್ಯವಸ್ಥೆ, ಚುನಾವಣಾ ಖರ್ಚಿಗೆ ಮತದಾರರೇ ಹಣ ನೀಡುತ್ತಿರುವುದು ಇನ್ನೊಂದು ವಿಶೇಷವಾಗಿದ್ದು, ಬಿಜೆಪಿಯಲ್ಲಿ ಹಣದ ಕೊರತೆ ಇಲ್ಲ, ಆದರೆ, ದೂರವಿದ್ದ ನಾಯಕರು ಮುನ್ನೆಲೆಗೆ ಬಂದಿದ್ದಾರೆ. ಮಂಜಪ್ಪ ಅಭ್ಯರ್ಥಿ ಆದ ಕೂಡಲೇ ಅದೇ ಸಮಾಜ ಹಾಗೂ ಅಹಿಂದ ಮುಖಂಡರಾದ ಬಿ ಎಂ ಸತೀಶ್, ಜಯಪ್ರಕಾಶ್, ಲಿಂಗರಾಜ್, ಶಿವಕುಮಾರ್ ರಂಥ ಆನೇಕರು ಮುನ್ನೆಲೆಗೆ ಬರುತ್ತಿದ್ದಾರೆ. ಒಟ್ಟಾರೆ ಏಕಮುಖವಾದ ಕಣ ಇದೀಗ ನೇರ ಹಣಾಹಣಿಯಾಗಿದೆ. ಬಿಜೆಪಿ, ಕಾಂಗ್ರೆಸ್ ಯಾರೇ ಗೆದ್ದರೂ ಅಲ್ಪ ಅಂತರವಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ