Connect with us

ದಿನದ ಸುದ್ದಿ

ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರ ಪ್ರದರ್ಶನಕ್ಕೆ ದೂರದರ್ಶನದಲ್ಲಿ ಮಾತ್ರ ನಿರ್ಬಂಧ

Published

on

ಸುದ್ದಿದಿನ,ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಸಂಬಂಧ ಚುನಾವಣೆಯಲ್ಲಿ ನಟರು ಸ್ಪರ್ಧಿಸುತ್ತಿರುವುದರಿಂದ ಅವರು ನಟಿಸಿರುವ ಚಲನಚಿತ್ರಗಳು ಪ್ರದರ್ಶನವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕೆಳಕಂಡಂತೆ ಸ್ಪಷ್ಟಿಕರಣ ನೀಡಿರುತ್ತಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪತ್ರ ಸಂ 437/6ಜಿಜೆ-ಹೆಚ್‍ಪಿ/2014 ಅನ್ವಯ ಖಾಸಗಿ ಚಾನೆಲ್‍ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ವಾಣಿಜ್ಯ ಜಾಹಿರಾತು, ಚಲನಚಿತ್ರಗಳ ಪ್ರದರ್ಶನ ಹಾಗೂ ಸಿನಿಮಾ ಮಂದಿರಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ಆದರೆ ಲೋಕಸಭೆ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್‍ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರಗಳನ್ನು (ವಾಣಿಜ್ಯ ಜಾಹಿರಾತು ಹೊರತುಪಡಿಸಿ) ಪ್ರದರ್ಶಿಸಲು ನಿರ್ಬಂಧವಿರುತ್ತದೆ ಎಂದು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

Published

on

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.

ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.

ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್‌ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

Published

on

ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.

ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.

ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ3 hours ago

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು...

ದಿನದ ಸುದ್ದಿ18 hours ago

ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು....

ದಿನದ ಸುದ್ದಿ22 hours ago

ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು...

ದಿನದ ಸುದ್ದಿ5 days ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

ಅಂತರಂಗ1 week ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ1 week ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ2 weeks ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ2 weeks ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ2 weeks ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ3 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

Trending